ಹಾಸನ:ಅ 3 : ಶಾಸಕರ ಕಾರು ಬೈಕೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ 58 ವರ್ಷದ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಹಾಸನ ಜಿಲ್ಲೆಯ ಬೇಲೂರಿನಿಂದ ವರದಿಯಾಗಿದೆ. ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಸೇರಿದ ಕಾರು ಬೇಲೂರಿನ ಹನುಮಂತನಗರದಲ್ಲಿ ಕಾರಿಗೆ ಡಿಕ್ಕಿ ಹೊಡೆದಿದೆ.
ಹನುಮಂತನಗರದ ನಿವಾಸಿ ಹೂವಮ್ಮ (58) ಮೃತಪಟ್ಟವರು.ಈಕೆಯ ಮೊಮ್ಮಗ ಪ್ರೀತಂ ಗಾಯಗೊಂಡಿದ್ದಾರೆ. ಭಯಕ್ ಹಿಂಬದಿಯಲ್ಲಿ ಕೂತಿದ್ದ ಹೂವಮ್ಮ ಕೆಳಕ್ಕೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ರಿಪೇರಿಗಾಗಿ ಬೆಂಗಳೂರಿಗೆ ಹೋಗುತ್ತಿರುವಾಗ ಬೈಕ್ ಏಕಾಏಕಿ ಬಲಕ್ಕೆ ಬಂದಿದ್ದರಿಂದ ಡಿಕ್ಕಿ ಹೊಡೆಯಿತು ಎಂದು ಕಾರು ಚಾಲಕ ಪ್ರವೀಣ್ ಹೇಳಿದ್ದಾನೆ.

ಕಾರು ಚಾಲಕ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಪಘಾತದ ಸಂದರ್ಭ ಕಾರಿನಲ್ಲಿ ಶಾಸಕರು ಇರಲಿಲ್ಲ. ಪ್ರಕರಣ ಸಂಭವಿಸಿದ ಸ್ಥಳಕ್ಕೆ ಬೇಲೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
