Connect with us

ಬಿಗ್ ನ್ಯೂಸ್

ʼದೇಶದಲ್ಲಿ ನೀಚ ಅಡಳಿತವಿದೆ – ರಾಮರಾಜ್ಯ ಮಾಡುತ್ತೇವೆ ಅಂದವರು ರಾವಣ ರಾಜ್ಯ ಮಾಡುತ್ತಿದ್ದಾರೆʼ : ಉತ್ತರ ಪ್ರದೇಶ ಹಿಂಸಾಚಾರದ ಬಗ್ಗೆ ಕಾಂಗ್ರೇಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್

Ad Widget

ಬೆಂಗಳೂರು: ಅ 4: ‌ದೇಶದಲ್ಲಿ ನೀಚ ಆಡಳಿತವಿದೆ. ರಾಮರಾಜ್ಯ ಮಾಡ್ತೇವೆ ಅಂತ ಹೇಳಿದವರು ರಾವಣ ರಾಜ್ಯ ಮಾಡಲು ಹೊರಟಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿ ವಿರುದ್ದ ವಾಗ್ದಾಳಿ ಮಾಡಿದ್ದಾರೆ. ಉತ್ತರ ಪ್ರದೇಶದಲ್ಲಿ ಲಖೀಂಪುರದಲ್ಲಿ ನಡೆದಿರುವ ಹಿಂಸಾಚಾರವನ್ನು ಅವರು ಕಟುವಾಗಿ ಖಂಡಿಸಿದ್ದಾರೆ.

Ad Widget

Ad Widget

Ad Widget

Ad Widget

ಉತ್ತರ ಪ್ರದೇಶದ ಹಿಂಸಾಚಾರದಲ್ಲಿ ಮೃತಪಟ್ಟ ಕುಟುಂಬದ ಬೇಟಿ ಮಾಡಲು ಹೊರಟು ನಿಂತಿದ್ದ  ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಮಾರ್ಗ ಮಧ್ಯೆ  ಬಂಧಿಸಿರುವುದನ್ನು ಟೀಕಿಸಿದ ಅವರು   ಖಂಡಿಸಿದ್ದು, ಪ್ರಿಯಾಂಕಾ ಮಾಡಿದ ತಪ್ಪು ಏನು ಅನ್ನೋದನ್ನ ಯುಪಿ ಸರ್ಕಾರ ಹೇಳಬೇಕು ಎಂದು  ಅಗ್ರಹಿಸಿದ್ದಾರೆ.

Ad Widget

Ad Widget

ಇಂದು ಬೆಂಗಳೂರಿನಲ್ಲಿ ಡಿಕೆಶಿ ಸುದ್ದಿಗೋಷ್ಠಿ ನಡೆಸಿದ್ದು , ದೇಶದ ಅನ್ನದಾತನಿಗೆ ರಕ್ಷಣೆ ಇಲ್ಲ. ತನ್ನ ರಕ್ಷಣೆಗಾಗಿ ನಿರಂತರವಾಗಿ ಹೋರಾಟ ಮಾಡ್ತಿದ್ದಾನೆ. ಆ ರೈತರನ್ನು ಬಿಜೆಪಿ ಮಂತ್ರಿ ಮತ್ತು ಅವರ ಕುಟುಂಬದವರು ಕೊಲೆ ಮಾಡಿದ್ದಾರೆ. ಒಟ್ಟು ಎಂಟು ಜನ ಸತ್ತಿದ್ದಾರೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಸಚಿವ ರಾಜೀನಾಮೆ ಕೊಟ್ಟು ಕ್ಷಮೆ ಕೇಳಬೇಕು ಎಂದರು.

Ad Widget

Ad Widget

ಇದು ಇಡೀ ದೇಶದ ರೈತ ಸಮುದಾಯದ ಕೊಲೆ. ಪ್ರಜಾಪ್ರಭುತ್ವದ ಕೊಲೆ. ರೈತರ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳೂಕೆ ಹೋದ  ಪ್ರಿಯಾಂಕ ಗಾಂಧಿ  ಅವರನ್ನ ತಡೆಯುತ್ತಾರೆ. ಮಧ್ಯರಾತ್ರಿಯಲ್ಲಿ ಯುಪಿ ಪೊಲೀಸರು ಅವರ ಮೈಮೇಲೆ ಕೈಹಾಕಿ ಎಳೆದಾಡಿದ್ದಾರೆ. ಇದು ಭಾರತದ ಪ್ರತಿಯೊಂದು ಹೆಣ್ಣು ಮಗಳಿಗೂ ಆದ ಅವಮಾನ ಎಂದು ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

Ad Widget

Ad Widget

ಪ್ರಿಯಾಂಕಾರನ್ನು ಬಂಧಿಸಿರುವುದು ಖಂಡನೀಯ. ಕಾಂಗ್ರೆಸ್ ಅವರ ಬೆನ್ನೆಲುಬಾಗಿ ನಿಲ್ಲುತ್ತೆ ಎಂದು ಡಿಕೆಶಿ, ‘ಆ ಹೆಣ್ಣು ಮಗಳ ಮೇಲೆ ಕೈ ಹಾಕೋ ಅಧಿಕಾರ ಕೊಟ್ಟವರು ಯಾರು? ಮನೆಯಿಂದ ಅರೆಸ್ಟ್ ಮಾಡಕ್ಕೆ ಅಧಿಕಾರ ಕೊಟ್ಟವರು ಯಾರು? ದೇಶದಲ್ಲಿ ಇರುವುದು ನೀಚ ರಾವಣ ರಾಜ್ಯ. ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡ್ತೀವಿ’ ಎಂದರು. ಇಡೀ ದೇಶದ ಜನ ನಿಮ್ಮ ಜತೆ ಇದ್ದಾರೆ. ಹೆದರಬೇಡಿ ಮುನ್ನುಗ್ಗಿ ಎಂದು ರಾಹುಲ್, ಸೋನಿಯಾ, ಪ್ರಿಯಾಂಕಾಗೆ ಮನವಿ ಮಾಡುತ್ತೇನೆ ಎಂದರು.

ಪ್ರಿಯಾಂಕ ಗಾಂಧಿಯವರನ್ನು ನಿನ್ನೆ ತಡ ರಾತ್ರಿ ಪೊಲೀಸರು ಬಂಧಿಸಲು ಯತ್ನಿಸಿದಾಗ

ರೈತ ಇಡೀ ದೇಶದಲ್ಲಿ ಸಿಡಿದೆದ್ದಿದ್ದಾನೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಸತ್ತು ಹೋಗಿದೆ, ಹಿಟ್ಲರ್ ಮನಸ್ಥಿತಿಯ ಸರ್ಕಾರ ಇದೆ ಅನ್ನೋದಕ್ಕೆ ಇದೇ ಸಾಕ್ಷಿ ಎಂದ ಡಿಕೆಶಿ, ಬ್ರಿಟಿಷರ ವಿರುದ್ಧ ಕಾಂಗ್ರೆಸಿಗರು ಹೋರಾಟ ಮಾಡಿದ್ರು. ರೈತರು ಕಳೆದ ಹತ್ತು ತಿಂಗಳಿಂದ ಪ್ರತಿಭಟನೆ ಮಾಡಿದ್ರು. ಒಬ್ಬನೇ ಒಬ್ಬ ಸಚಿವ ರೈತರನ್ನ ಭೇಟಿ ಮಾಡಲಿಲ್ಲ. ಬ್ರಿಟಿಷರಿಗಿಂತಲೂ ಬಿಜೆಪಿ ಸರ್ಕಾರ ಒಂದು ಕೈ ಮೇಲು. ದೇಶದ ಮತದಾರ ಇಂದು ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಭಾನುವಾರ ರೈತರ ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರದಲ್ಲಿ ಬಲಿಯಾದ ಎಂಟು ಮಂದಿಯ ಕುಟುಂಬಗಳನ್ನು ಭೇಟಿಯಾಗಲು ಅನುಮತಿ ನೀಡದ ಪೊಲೀಸರು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರೆ ನಾಯಕರನ್ನು ಸೀತಾಪುರದಲ್ಲಿ ಬಂಧನಕ್ಕೊಳಪಡಿಸಿದ್ದಾರೆಂದು ಸೋಮವಾರ ತಿಳಿದುಬಂದಿದೆ.

Click to comment

Leave a Reply

ಬಿಗ್ ನ್ಯೂಸ್

Big Breaking : ವಿಟ್ಲ : ನಿರ್ಮಾಣ ಹಂತದ ಸೇತುವೆ ಕುಸಿದು 7ಮಂದಿಗೆ ಗಾಯ

Ad Widget

ವಿಟ್ಲ: ಪುಣಚ ಗ್ರಾಮದ ಬರೆಂಜ – ಕುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 7ಮಂದಿಗೆ ಗಾಯವಾಗಿದೆ.

Ad Widget

Ad Widget

Ad Widget

Ad Widget

ಸೇತುವೆಯ ಕೊನೆಯ ಹಂತದ ಕಾರ್ಯವಾಗಿ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದ ಸಮಯ ತಳಭಾಗದಿಂದ ನೀಡಿದ ರಾಡ್ ಜಾರಿದ ಹಿನ್ನಲೆಯಲ್ಲಿ ಮೇಲ್ಭಾಗದ ಸಂಪೂರ್ಣ ಕಾಂಕ್ರೀಟ್ ಕುಸಿದು ಬಿದ್ದಿದೆ.

Ad Widget

Ad Widget

ಸೇತುವೆ ಸಾಮಾಗ್ರಿಯ ನಡುವಿನಲ್ಲಿ ಓರ್ವ ವ್ಯಕ್ತಿ ಸಿಕ್ಕಿ ಹಾಕಿಕೊಂಡಿದ್ದು, ಆರು ಮಂದಿಯನ್ನು ತಕ್ಷಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. . ಸ್ಥಳದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಕಾರ್ಯಾಚರಣೆಯ ಮೂಲಕ ರಕ್ಷಣೆ ಮಾಡಲಾಗಿದೆ.

Ad Widget

Ad Widget
Continue Reading

ಬಿಗ್ ನ್ಯೂಸ್

Big Breaking: ಬಂಟ್ವಾಳ: ಹಿಂದೂ ಮುಖಂಡನ ಕುತ್ತಿಗೆಗೆ ಚೂರಿ ಇರಿತ – ಜೀವನ್ಮರಣ ಹೋರಾಟ : ಒಟ್ಟಿಗೆ ರಿಕ್ಷಾದಲ್ಲಿ ತೆರಳುತ್ತಿದ್ದಾಗಲೇ ಆಪ್ತ ಸ್ನೇಹಿತನಿಂದ ಕೃತ್ಯ

Ad Widget

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಹಿಂದೂ ಯುವಸೇನೆಯ ಮುಖಂಡ, ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಚೂರಿ ಇರಿತವಾಗಿದೆ. ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ಘಟನೆ ನಡೆದಿದ್ದು,ಚೂರಿ ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ.

Ad Widget

Ad Widget

ರಿಕ್ಷಾದಲ್ಲಿ ಜೊತೆಯಾಗಿ ತೆರಳುತ್ತಿದ್ದಾಗಲೇ ಚೂರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಸ್ನೇಹಿತ ರವಿ ಎಂಬಾತ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ.

Ad Widget

Ad Widget

ಆರೋಪಿ ರವಿ ಚೂರಿಯಿಂದ ಇರಿದು ಮತ್ತೆ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.

Ad Widget

Ad Widget

ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ಬೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

ಬಿಗ್ ನ್ಯೂಸ್

Narendra Modi Mangalore | ಮಂಗಳೂರಿಗೆ ಆಗಮಿಸುವ ಮೋದಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ : ದಕ್ಷಿಣ ಕನ್ನಡಕ್ಕೆ ಕೊಟ್ಟದೆಷ್ಟು..? ಕಿತ್ತುಕೊಂಡದ್ದೆಷ್ಟು..? ಸರಣಿ ಪ್ರಶ್ನೆ ಕೇಳಿದ ಸಿಎಂ

Ad Widget

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರ (Narendra Modi Mangalore) ಪರ ಪ್ರಚಾರಕ್ಕೆ ಮಂಗಳೂರಿಗೆ ಇಂದು ರಾತ್ರಿ ಆಗಮಿಸಲಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯ ಪ್ರತಿಮೆಗೆ ಹಾರಾರ್ಪಣೆ ಮಾಡಿ ರಾತ್ರಿ 7.30 ರಿಂದ ರೋಡ್ ಶೋ ನಡೆಸಲಿದ್ದಾರೆ.

Ad Widget

Ad Widget

ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ನೀವು ದಕ್ಷಿಣ ಕನ್ನಡಕ್ಕೆ ಕೊಟ್ಟದೆಷ್ಟು? ಕಿತ್ತುಕೊಂಡದ್ದೆಷ್ಟು? ಎಂದು ಸರಣಿ ಪ್ರಶ್ನೆ ಕೇಳಿದ್ದಾರೆ.

Ad Widget

Ad Widget

ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರೇ, ದಕ್ಷಿಣ ಕನ್ನಡಕ್ಕೆ ನಿಮಗೆ ಸ್ವಾಗತ. ಕಳೆದ 33 ವರ್ಷಗಳಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತದಾರರು ಭಾರತೀಯ ಜನತಾ ಪಕ್ಷವನ್ನು ಗೆಲ್ಲಿಸುತ್ತಾ ಬಂದಿದ್ದಾರೆ. ಅದಕ್ಕಿಂತ ಹಿಂದಿನ 39 ವರ್ಷ ಈ ಕ್ಷೇತ್ರವನ್ನು ನಮ್ಮ ಕಾಂಗ್ರೆಸ್ ಪಕ್ಷದ ಸದಸ್ಯರು ಲೋಕಸಭೆಯಲ್ಲಿ ಪ್ರತಿನಿಧಿಸಿದ್ದರು. ಕಳೆದ 33 ವರ್ಷಗಳ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ನೀವು ಕೊಟ್ಟದ್ದೆಷ್ಟು? ಎನ್ನುವ ಲೆಕ್ಕ ಕೊಡಿ, ಈ ಜಿಲ್ಲೆಯಿಂದ ಏನು ಕಿತ್ತುಕೊಂಡಿದ್ದೀರಿ ಎನ್ನುವ ಲೆಕ್ಕವನ್ನು ನಾನು ಕೊಡುತ್ತೇನೆ.

Ad Widget

Ad Widget

ಬಜ್ಪೆಯ ವಿಮಾನ ನಿಲ್ದಾಣದ ಕನಸು ಕಂಡವರು ಉಳ್ಳಾಲ ಶ್ರೀನಿವಾಸ ಮಲ್ಯ. ಮಲ್ಯರ ಕನಸನ್ನು ನನಸು ಮಾಡಿದವರು ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ. ಶ್ರೀನಿವಾಸ ಮಲ್ಯರ ಪ್ರಯತ್ನದ ಫಲವಾದ ಈ ವಿಮಾನ ನಿಲ್ದಾಣವನ್ನು ನೀವು ನಿಮ್ಮ ಉದ್ಯಮಿ ಮಿತ್ರ ಗೌತಮ ಅದಾನಿ ಅವರಿಗೆ ನೀಡಿದಿರಿ. ಈಗ ಹೇಳಿ, ನೀವು ದಕ್ಷಿಣ ಕನ್ನಡಕ್ಕೆ ಕೊಟ್ಟದೆಷ್ಟು? ಕಿತ್ತುಕೊಂಡದ್ದೆಷ್ಟು?

ನವಮಂಗಳೂರು ಬಂದರು ಕೂಡಾ ಸಂಸದ ಯು.ಶ್ರೀನಿವಾಸ ಮಲ್ಯ ಅವರ ಕನಸಾಗಿತ್ತು. ಮಲ್ಯರ ಮಾತಿಗೆ ಮನ್ನಣೆ ಕೊಟ್ಟು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು 1975ರಲ್ಲಿ ಪಣಂಬೂರಿನಲ್ಲಿ ಬಂದರಿಗೆ ಚಾಲನೆ ನೀಡಿದರು. ಈ ಬಂದರನ್ನು ಕೂಡಾ ಉದ್ಯಮಿ ಮಿತ್ರ ಅದಾನಿಯವರಿಗೆ ಹಂತಹಂತವಾಗಿ ಮಾರಲು ಹೊರಟಿದ್ದೀರಿ. ಈಗ ಹೇಳಿ ನೀವು ದಕ್ಷಿಣ ಕನ್ನಡಕ್ಕೆ ಕೊಟ್ಟದ್ದೆಷ್ಟು? ಕಿತ್ತುಕೊಂಡದೆಷ್ಟು?

ಬಜ್ಪೆ ವಿಮಾನ ನಿಲ್ದಾಣ ಮತ್ತು ಎನ್‌ಎಂಪಿಟಿ ಮಾತ್ರವಲ್ಲ ಇಲ್ಲಿನ ರೀಜನಲ್ ಎಂಜನಿಯರಿಂಗ್ ಕಾಲೇಜ್, ಎಂಸಿಎಫ್, ಎಂಆರ್‌ಪಿಎಲ್, ಬೈಕಂಪಾಡಿ ಕೈಗಾರಿಕ ಪ್ರದೇಶ, ರಾಷ್ಟ್ರೀಯ ಹೆದ್ದಾರಿ 66 ಮಾತ್ರವಲ್ಲ ಕರಾವಳಿಯಲ್ಲಿ ರಕ್ತರಹಿತ ಕ್ರಾಂತಿಯನ್ನೇ ಉಂಟು ಮಾಡಿರುವ ಭೂ ಸುಧಾರಣೆ ಕಾಯ್ದೆ ಕೂಡಾ ಜಾರಿಗೆ ಬಂದದ್ದು ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ಕಾಲದಲ್ಲಿ. ಪ್ರಧಾನಿಯಾಗಿ ನಿಮ್ಮ ಹತ್ತು ವರ್ಷದ ಕಾಲದಲ್ಲಿ ಇಲ್ಲವೇ ನಿಮ್ಮ ಸಂಸದರು ಈ ಜಿಲ್ಲೆಯನ್ನು ಪ್ರತಿನಿಧಿಸುತ್ತಿದ್ದ 33 ವರ್ಷಗಳ ಅವಧಿಯಲ್ಲಿ ಈ ಜಿಲ್ಲೆಗೆ ನೀಡಿರುವ ಕೊಡುಗೆ ಏನು? ಈಗ ಹೇಳಿ ನೀವು ದಕ್ಷಿಣ ಕನ್ನಡಕ್ಕೆ ಕೊಟ್ಟದೆಷ್ಟು? ಕಿತ್ತುಕೊಂಡದ್ದೆಷ್ಟು?

ಖ್ಯಾತ ಉದ್ಯಮಿ ಹಾಜಿ ಅಬ್ದುಲ್ಲಾ ಅವರು 1906ರಲ್ಲಿ ಕಾರ್ಪೋರೇಷನ್ ಬ್ಯಾಂಕ್ ಸ್ಥಾಪಿಸಿದರು. ನೀವು ಇದನ್ನು ಯೂನಿಯನ್ ಬ್ಯಾಂಕ್ ಜೊತೆ ವಿಲೀನಗೊಳಿಸಿದಿರಿ.
ಸಿಂಡಿಕೇಟ್ ಬ್ಯಾಂಕ್ ಸ್ಥಾಪಕರು ಟಿಎಂಎ ಪೈ, ಉಪೇಂದ್ರ ಪೈ.
ವಾಮನ್ ಕುಡ್ವಾ ಅವರು 1925ರಲ್ಲಿ ಸ್ಥಾಪಿಸಿದ್ದು ಸಿಂಡಿಕೇಟ್ ಬ್ಯಾಂಕ್. ಲಾಭದಲ್ಲಿದ್ದ ಈ ಬ್ಯಾಂಕನ್ನು ಕೆನರಾ ಬ್ಯಾಂಕ್ ಜೊತೆ ವಿಲೀನಗೊಳಿಸಿದಿರಿ. ದಕ್ಷಿಣ ಕನ್ನಡದ ಉದ್ಯಮಿ ಮತ್ತು ಸಮಾಜ ಸೇವಕ ರೈತರಿಗಾಗಿಯೇ ವಿಜಯ ದಶಮಿಯ ದಿನವೇ 1931ರಲ್ಲಿ ಸ್ಥಾಪಿಸಿದ್ದು ವಿಜಯಾ ಬ್ಯಾಂಕ್. ಇದನ್ನು ನಿಮ್ಮ ರಾಜ್ಯದ ನಷ್ಟದಲ್ಲಿದ್ದ ಬರೋಡಾ ಬ್ಯಾಂಕ್ ಜೊತೆ ವಿಲೀನಗೊಳಿಸಿದಿರಿ. ಈಗ ಹೇಳಿ ನೀವು ದಕ್ಷಿಣ ಕನ್ನಡಕ್ಕೆ ಕೊಟ್ಟದ್ದೆಷ್ಟು? ಕಿತ್ತುಕೊಂಡದ್ದೆಷ್ಟು?

ಮೂರು ದಶಕಗಳಿಂದ ನಿಮ್ಮ ಪಕ್ಷವನ್ನು ಗೆಲ್ಲಿಸುತ್ತಾ ಬಂದಿರುವ ದಕ್ಷಿಣ ಕನ್ನಡದ ಜನತೆಯ ಬಗ್ಗೆ ಯಾಕೆ ನಿಮಗೆ ಈ ಪರಿಯ ದ್ವೇಷ? ಈ ಜಿಲ್ಲೆಯಲ್ಲಿ ಬಹುಸಂಖ್ಯಾತ ಸಮುದಾಯವಾದ ಬಿಲ್ಲವರ ಆರಾಧ್ಯಗುರು ಬ್ರಹ್ಮಶ್ರೀ ನಾರಾಯಣ ಗುರುಗಳು. ಗಣರಾಜ್ಯೋತ್ಸವದ ಪರೇಡ್ ನಲ್ಲಿ ರಾಜ್ಯ ಸರ್ಕಾರ ನಾರಾಯಣ ಗುರುಗಳ ಟ್ಯಾಬ್ಲೋ ಪ್ರದರ್ಶನ ಮಾಡಲು ಹೊರಟರೆ ಅದಕ್ಕೆ ನೀವು ಅಡ್ಡಗಾಲು ಹಾಕಿದಿರಿ. ನಾರಾಯಣ ಗುರುಗಳಿಗೆ ಹಿಂದೂ ಧರ್ಮದ ಗುರುಗಳ ಪಕ್ಕದಲ್ಲಿ ಜಾಗ ಇಲ್ಲವೇ?

ನಾರಾಯಣ ಗುರುಗಳಿಗೆ ನಿಮ್ಮ ನೇತೃತ್ವದ ಕೇಂದ್ರ ಸರ್ಕಾರ ಅನ್ಯಾಯ ಮಾಡಿದ್ದು ಸಾಕಾಗಲಿಲ್ಲ ಎಂದೋ ಏನೋ? ಯಾರೋ ತಲೆತಿರುಕನ ನೇತೃತ್ವದಲ್ಲಿ ರಾಜ್ಯದ ಬಿಜೆಪಿ ಸರ್ಕಾರ ನೇಮಿಸಿದ್ದ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಶಾಲಾ ಪಠ್ಯದಲ್ಲಿದ್ದ ನಾರಾಯಣ ಗುರುಗಳ ಪಾಠವನ್ನೂ ಕಿತ್ತು ಹಾಕಿತು. ನಾರಾಯಣ ಗುರುಗಳಿಗೆ ಮಾಡಿರುವ ಅಪಮಾನದ ವಿರುದ್ಧ ಜನ ಸಿಡಿದೆದ್ದು ಪ್ರತಿಭಟನೆ ನಡೆಸಿದರೂ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅದಕ್ಕೆ ಲಕ್ಷ್ಯವನ್ನೇ ಕೊಡಲಿಲ್ಲ. ಈಗ ಹೇಳಿ ನೀವು ದಕ್ಷಿಣ ಕನ್ನಡಕ್ಕೆ ಕೊಟ್ಟದ್ದೆಷ್ಟು? ಕಿತ್ತುಕೊಂಡದ್ದೆಷ್ಟು?

ಅಂತಿಮವಾಗಿ ನಿಮ್ಮ 33 ವರ್ಷಗಳ ಅತ್ಯಂತ ಮಹತ್ವದ ಕೊಡುಗೆ- ಜಾತಿ-ಧರ್ಮಗಳ ಅಂತರವನ್ನು ಮೀರಿ ಒಂದು ಕುಟುಂಬದಂತೆ ಸೌಹಾರ್ದತೆಯಿಂದ ಬದುಕುತ್ತಿದ್ದ ಜಿಲ್ಲೆಯನ್ನು ‘ಕೋಮುವಾದದ ಪ್ರಯೋಗಶಾಲೆ’’ಯನ್ನಾಗಿ ಪರಿವರ್ತಿಸಿದ್ದು. ಇದರ ಫಲವಾಗಿ ಅತ್ಯಂತ ಹೆಚ್ಚು ಸಾಕ್ಷರತೆ ಇರುವ ಮತ್ತು ಬುದ್ದಿವಂತರ ಜಿಲ್ಲೆ ಎಂದೇ ಖ್ಯಾತಿ ಪಡೆದಿದ್ದ ಜಿಲ್ಲೆ ಇಂದು ಕೋಮುವಾದದ ಕಳಂಕ ಹಚ್ಚಿಕೊಂಡು ದೇಶದ ಮುಂದೆ ತಲೆತಗ್ಗಿಸುವಂತಾಗಿದೆ. ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರೇ, ಈಗ ಹೇಳಿ ನೀವು ದಕ್ಷಿಣ ಕನ್ನಡಕ್ಕೆ ಕೊಟ್ಟದ್ದೆಷ್ಟು? ಕಿತ್ತುಕೊಂಡದ್ದೆಷ್ಟು?

AnswerMadiModi

Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading