ಮೇಲಾಧಿಕಾರಿಗಳ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸೂಸೈಡ್ ನೋಟ್ ಬರೆದಿಟ್ಟು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಿಂದ ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಧರ್ಮಸ್ಥಳದಲ್ಲಿ ಸೆ.7 ರಂದು ಪತ್ತೆಯಾಗಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಗಿರಿರಾಜ್ ನಾಪತ್ತೆಯಾಗಿ ಈಗ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿರುವ ವ್ಯಕ್ತಿ. ಸೆ. 28ರಂದು ಇವರು ಸೂಸೈಡ್ ನೋಟ್ ಬರೆದಿಟ್ಟು ನಿಗೂಢವಾಗಿ ಪತ್ತೆಯಾಗಿದ್ದರು. ಇದಾದ ಬಳಿಕ ಗಿರಿರಾಜ್ ಪತ್ನಿ ಜ್ಯೋತಿ, ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಗಿರಿರಾಜ್ ಅವರನ್ನು ಪತ್ತೆ ಮಾಡಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಾಕಷ್ಟು ಶೋಧ ಕಾರ್ಯ ನಡೆಸಿತ್ತು. ಆದಾಗ್ಯೂ ಗಿರಿರಾಜ್ ಪತ್ತೆಯಾಗಿರಲಿಲ್ಲ. ಇದೀಗ ನಾಪತ್ತೆಯಾದ 10 ದಿನಗಳ ಬಳಿಕ ಗಿರಿರಾಜ್ ಅಸ್ವಸ್ಥ ಸ್ಥಿತಿಯಲ್ಲಿ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾರೆ.
ಗಿರಿರಾಜ್ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದಿಟ್ಟಿರುವ ಡೆತ್ನೋಟ್ನಲ್ಲಿ ಮೇಲಧಿಕಾರಿಗಳ ಕಿರುಕುಳದ ಕುರಿತು ಉಲ್ಲೇಖವಿದೆ. ಇವರ ನಾಪತ್ತೆ ಪ್ರಕರಣ ಶಿವಮೊಗ್ಗ ಡಿಸಿ ಕಚೇರಿ ಸಿಬ್ಬಂದಿವರ್ಗದಲ್ಲಿ ಆತಂಕಕ್ಕೆ ಕಾರಣವಾಗಿತ್ತು.