ಕಾರ್ಯಕ್ರಮಗಳು
ಮಂಗಳೂರು: ವಿವಾಹಿತ ಮಹಿಳೆ ನಾಪತ್ತೆ – ಪತಿಯಿಂದ ಠಾಣೆಗೆ ದೂರು

ಮಂಗಳೂರು, ಅ.10: ಎರಡು ಮಕ್ಕಳ ತಾಯಿ ಮಕ್ಕಳನ್ನು ತಾವು ವಾಸವಾಗಿದ್ದ ಬಾಡಿಗೆ ಮನೆಯಲ್ಲಿ ಬಿಟ್ಟು ನಾಪತ್ತೆಯಾಗಿರುವ ಬಗ್ಗೆ ಆಕೆಯ ಪತಿ ನಾಗೇಶ್ ಶೆರಿಗುಪ್ಪೆ ಎಂಬವರು ನೀಡಿದ ದೂರಿನಂತೆ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೆಲೆನ್ಸಿಯ ನಿವಾಸಿ ನಾಗೇಶ್ ಶೆರಿಗುಪ್ಪೆರವರ ಪತ್ನಿ ವಿಜಯಲಕ್ಷ್ಮಿ (26) ನಾಪತ್ತೆಯಾದ ವಿವಾಹಿತ ಮಹಿಳೆ .ದಂಪತಿಗಳು ವೆಲೆನ್ಸಿಯಾದ ಸುವರ್ಣ ರಸ್ತೆಯ ಅಪಾರ್ಟ್ಮೆಂಟ್ವೊಂದರಲ್ಲಿ ಎಂಟು ವರ್ಷದಿಂದ ವಾಸಿಸುತ್ತಿದ್ದರು. ವಿಜಯಲಕ್ಷ್ಮಿಯವರು ಅದೇ ಅಪಾರ್ಟ್ಮೆಂಟ್ ನಲ್ಲಿ ವಾಚ್ ಮ್ಯಾನ್ ಆಗಿಯೂ ಕೆಲಸ ನಿರ್ವಹಿಸುತ್ತಿದ್ದರು. ನಾಗೇಶ್ ರವರು ರವಿ ಎಂಬವರ ಕಾರು ಚಾಲಕರಾಗಿ ದುಡಿಯುತ್ತಿದ್ದಾರೆ.
ಅ. 10 ರಂದು ಬೆಳಿಗ್ಗೆ ಎಂದಿನಂತೆ ನಾಗೇಶ್ ತನ್ನ ಕೆಲಸಕ್ಕೆ ತೆರಳಿದ್ದರು . ಮಧ್ಯಾಹ್ನ ನಾಗೇಶ್ʼರವರಿಗೆ ಪೋನ್ ಕರೆ ಮಾಡಿದ ಅವರು ವಾಸವಿದ್ದ ಅಪಾರ್ಟ್ ಮೆಂಟ್ನವರು, ವಿಜಯಲಕ್ಷ್ಮಿಯವರಲ್ಲಿ ಜನರೇಟರ್ ಆನ್ ಮಾಡಲೆಂದು ತಿಳಿಸಲು ಸಂಪರ್ಕಿಸಲು ಯತ್ನಿಸುತ್ತಿದ್ದು, ಅದರೇ ಕಾಣಿಸದಿರುವ ಮಾಹಿತಿಯನ್ನು ನೀಡಿದ್ದಾರೆ
ಹೀಗಾಗಿ ಅಪಾರ್ಟ್ಮೆಂಟ್ಗೆ ಬಂದ ನಾಗೇಶ್ ಮನೆಯಲ್ಲಿ ಪತ್ನಿಗೆ ಹುಡುಕಾಡಿದರೂ ಪತ್ತೆಯಾಗಿಲ್ಲ. . ಮಕ್ಕಳು ಇಬ್ಬರನ್ನೂ ಬಿಟ್ಟು ಕಾಣೆಯಾಗಿರುವುದು ಕಂಡುಬಂದಿದೆ.ನಂತರ ಪತ್ನಿಯ ಫೋನ್ಗೆ ಕರೆ ಮಾಡಿದಾಗ ಮೊಬೈಲ್ ಫೋನ್ ಸ್ವಿಚ್ಆಫ್ ಎಂದು ಬಂದಿದೆ. ಸಂಬಂಧಿಕರು, ನೆರೆಹೊರೆಯ ವರಲ್ಲಿ ವಿಚಾರಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಪತ್ನಿಯನ್ನು ಹುಡುಕಿ ಕೊಡಿ ಎಂದು ಗಂಡ ನಾಗೇಶ್ ಪೊಲೀಸರಿಗೆ ದೂರು ನೀಡಿದ್ದಾರೆ.

ಚಹರೆ: 5.1 ಅಡಿ ಎತ್ತರ, ಗೋಧಿ ಮೈ ಬಣ್ಣ, ಸಾಧಾರಣ ಶರೀರ, ಕಪ್ಪು ಬಣ್ಣದ ಚೂಡಿದಾರದ ಪ್ಯಾಂಟ್, ನೀಲಿ ಹಾಗೂ ಹಳದಿ ಬಣ್ಣದ ಹೂಗಳಿರುವ ಚೂಡಿದಾರದ ಟಾಪ್ ಧರಿಸಿದ್ದರು. ನಾಪತ್ತೆಯಾದ ವಿವಾಹಿತ ಯುವತಿಯ ಚಹರೆ ಹೊಂದಿರುವವರು ಕಂಡು ಬಂದಲ್ಲಿ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಗೆ (0824- 2220518, 9448221401) ಮಾಹಿತಿ ನೀಡಲು ಪ್ರಕಟನೆ ತಿಳಿಸಿದೆ.
ಸಾಮಾಜಿಕ ಮಾಧ್ಯಮ
ಹವ್ಯಕ ವಿಶೇಷ ಪ್ರಶಸ್ತಿಗಳ ಪಟ್ಟಿ ಪ್ರಕಟ : ಯಕ್ಷಗಾನ ಹಿರಿಯ ಕಲಾವಿದ ಪೆರುವೋಡಿ ನಾರಾಯಣ್ ಭಟ್ ಗೆ ಹವ್ಯಕ ವಿಭೂಷಣ ಪ್ರಶಸ್ತಿ

ಬೆಂಗಳೂರು, ಮಾ 28 : ಅಖಿಲ ಹವ್ಯಕ ಮಹಾಸಭೆಯು ನೀಡುವ ವಾರ್ಷಿಕ ಹವ್ಯಕ ವಿಶೇಷ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದೆ.
ಏಪ್ರಿಲ್ 2 ಭಾನುವಾರ ನಡೆಯುವ 80 ನೇಯ ವರ್ಷದ ಹವ್ಯಕ ಸಂಸ್ಥಾಪನೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಮಲ್ಲೇಶ್ವರದಲ್ಲಿರುವ ಹವ್ಯಕ ಭವನದಲ್ಲಿ ಭಾನುವಾರ ಸಂಜೆ 04 ಗಂಟೆಗೆ ನಡೆಯುವ ಸಂಸ್ಥಾಪನೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ತೆಂಕುತಿಟ್ಟು ಯಕ್ಷಗಾನ ಕ್ಷೇತ್ರದ ಸಾಧಕ ಪೆರುವೋಡಿ ನಾರಾಯಣ ಭಟ್ (ಹಾಸ್ಯ ಕಲಾವಿದ) ರನ್ನು ಹವ್ಯಕ ವಿಭೂಷಣ ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ.
ಖ್ಯಾತ ಇತಿಹಾಸಕಾರರು ಮತ್ತು ಶಿಕ್ಷಣ ತಜ್ಞರಾದ ಡಾ| ಲಕ್ಷ್ಮೀಶ್ ಸೋಂದಾ, ಹಾಗೂ ಸಂಗೀತ ಕ್ಷೇತ್ರದ ಜಿ. ಎಸ್. ಹೆಗಡೆ ಸಪ್ತಕ ಹವ್ಯಕ ಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ವೈದ್ಯಕೀಯ & ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ಕಿಶನ್ ಭಾಗವತ್, ಭೂ ಸೇನೆಯ ಲೆ.ಕ.ವಿವೇಕ್ ಸಾಯ, ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಕು. ಅರ್ಪಿತಾ. ವಿ. ಎಂ, ರನ್ನು ಹವ್ಯಕ ಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಹವ್ಯಕ ಅಧ್ಯಯನ ಕೇಂದ್ರದ ವಿಶ್ರಾಂತ ನಿರ್ದೇಶಕರು
ನಾರಾಯಣ ಶಾನುಭೋಗ್ ರನ್ನು ಹವ್ಯಕ ಸೇವಾಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಆರೋಗ್ಯ
ಮೋದಿ ಸರ್ಕಾರದಿಂದ ಮತ್ತೊಂದು ದೊಡ್ಡ ಆರೋಗ್ಯ ಕ್ರಾಂತಿ !!! 1.5 ಲಕ್ಷ ಆರೋಗ್ಯ ಕೇಂದ್ರದ ಮಾದರಿ ಸಿದ್ದಪಡಿಸಿದ ಕೇಂದ್ರ ಸರ್ಕಾರ

ನವದೆಹಲಿ, ಮಾ 8 : ರಕ್ತದೊತ್ತಡ, ಸಕ್ಕರೆ ಮತ್ತು ಹೃದ್ರೋಗದಂತಹ ಗಂಭೀರ ಕಾಯಿಲೆಗಳನ್ನು ತಕ್ಷಣವೇ ಗುರುತಿಸಲು ದೇಶದಲ್ಲಿ ವಿಶಿಷ್ಟ ಆರೋಗ್ಯ ಮಾದರಿಯನ್ನ ಸಿದ್ಧಪಡಿಸಲಾಗುತ್ತಿದೆ. ಇದಕ್ಕಾಗಿ ದೇಶಾದ್ಯಂತ 1.5 ಲಕ್ಷ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಇದಕ್ಕಾಗಿ ಮೋದಿ ನೇತೃತ್ವದ ಮೋದಿ ಸರ್ಕಾರದಿಂದ ವಿವಿಧ ರಾಜ್ಯಗಳ ಜಿಲ್ಲೆಗಳು, ಪಟ್ಟಣಗಳು ಮತ್ತು ಹಳ್ಳಿಗಳಲ್ಲಿ ಮನೆಗಳಿಂದ ಕೆಲವು ಹೆಜ್ಜೆ ದೂರದಲ್ಲಿರುವ 1.5 ಲಕ್ಷ ಆರೋಗ್ಯ ಕೇಂದ್ರಗಳ ರಚಿಸುವ ಮೂಲಕ ಈ ಮಾದರಿಯನ್ನು ಸಿದ್ಧಪಡಿಸಲಾಗುತ್ತಿದೆ.
ಈ ಮೂಲಕ ದೇಶದಲ್ಲಿ ಆರೋಗ್ಯ ಕ್ರಾಂತಿಯನ್ನೇ ಮಾಡಲು ಹೊರಟಿದೆ. ದೇಶದ ಜನರಿಗೆ ಉತ್ತಮ ರೀತಿಯ ಅರೋಗ್ಯಕ್ಕಾಗಿ ಚಿಕಿತ್ಸೆಗಾಗಿ ಭಾರೀ ಬದಲಾವಣೆಯನ್ನೇ ತರಲು ಬಹು ದೊಡ್ಡ ಮಾದರಿಯನ್ನು ಸಿದ್ದಪಡಿಸಿದೆ.
ಪ್ರಧಾನಿ ನರೇಂದ್ರ ಮೋದಿಯವರ ಈ ದೊಡ್ಡ ದೃಷ್ಟಿಕೋನವನ್ನ ಈಡೇರಿಸಲು ಕೇಂದ್ರ ಆರೋಗ್ಯ ಸಚಿವಾಲಯವು ತನ್ನ ಸಂಪೂರ್ಣ ಸಿದ್ಧತೆಗಳನ್ನು ಪ್ರಾರಂಭಿಸಿದೆ. ಇದಲ್ಲದೆ, ದೇಶದಲ್ಲಿ ಡ್ರೋನ್ ಗಳಿಂದ ಔಷಧಿ ಸರಬರಾಜು ಮತ್ತು ಪರೀಕ್ಷಾ ಸೇವೆಗಳಿಗೆ ಪ್ರಮುಖ ಸಿದ್ಧತೆಗಳು ಪ್ರಾರಂಭವಾಗಿವೆ.
ಯೋಜನೆಯ ಮೊದಲ ಹಂತದಲ್ಲಿ, ದೇಶದಲ್ಲಿ ಸುಮಾರು 1.5 ಲಕ್ಷಕ್ಕೂ ಹೆಚ್ಚು ಆರೋಗ್ಯ ಕೇಂದ್ರಗಳನ್ನ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಕೇಂದ್ರ ಸಚಿವಾಲಯಕ್ಕೆ ಸಂಬಂಧಿಸಿದ ಅಧಿಕಾರಿಗಳು ಹೇಳಿದ್ದಾರೆ. ಇದು ಜನರ ಮನೆಗಳಿಗೆ ಬಹಳ ಹತ್ತಿರದಲ್ಲಿರಲಿದೆ. ಈ ಆರೋಗ್ಯ ಕೇಂದ್ರಗಳನ್ನು ರಕ್ತದೊತ್ತಡ, ಮಧುಮೇಹ ಮತ್ತು ಹೃದ್ರೋಗದಂತಹ ರೋಗಗಳನ್ನ ತಕ್ಷಣವೇ ತನಿಖೆ ಮಾಡಬಹುದು ಮತ್ತು ಕ್ಲಪ್ತ ಸಮಯಕ್ಕೆ ತ್ವರಿತಗತಿಯಲ್ಲಿ ಚಿಕಿತ್ಸೆ ನೀಡಬಹುದಾಗಿದೆ.
ಮೋದಿ ಸರ್ಕಾರ ಈ ಮೊದಲು ಆಯುಷ್ಮಾನ್ ಯೋಜನೆಯನ್ನು ಜಾರಿಗೆ ತಂದಿತ್ತು. ಬಳಿಕ ಜನೌಷಧಿ ಎನ್ನುವ ಮೆಡಿಕಲ್ ನ್ನು ಸ್ಥಾಪಿಸಿ ಜನರಿಗೆ ಅತ್ಯಂತ ಅಗ್ಗದಲ್ಲಿ ಔಷಧಗಳು ಸಿಗುವಂತೆ ಮಾಡಿದ್ದರು. ಇದಾದ ಬಳಿಕ ದೇಶದಲ್ಲಿ ಮತ್ತೊಂದು ಆರೋಗ್ಯ ಕ್ರಾಂತಿ ನಡೆಸಲು ಸಜ್ಜಾಗಿದೆ. ಈ ಯೋಜನೆಯು ದೇಶದ ಜನತೆಯ ಪಾಲಿಗೆ ಹೆಚ್ಚಿನ ವರದಾನವಾಗಲಿದೆ.
ಕಾರ್ಯಕ್ರಮಗಳು
ಗಣ ರಾಜ್ಯೋತ್ಸವದ ಪ್ರಯುಕ್ತ ́ಮುಳಿಯ ರಾಷ್ಟ್ರ ಸಿಂಚನ’ Online ನೃತ್ಯ ಸ್ಪರ್ಧೆ

ಪುತ್ತೂರು: ಗಣರಾಜ್ಯೋತ್ಸವದ ಪ್ರಯುಕ್ತ ಪುತ್ತೂರಿನ ಮುಳಿಯ ಜ್ಯುವೆಲ್ಸ್ ವಿನೂತನ ಕಾರ್ಯಕ್ರಮವೊಂದನ್ನು ಪ್ರಸ್ತುತಪಡಿಸುತ್ತಿದೆ. “ಮುಳಿಯ ರಾಷ್ಟ್ರ ಸಿಂಚನ’ ಆನ್ಲೈನ್ ನೃತ್ಯ ಸ್ಪರ್ಧೆಯನ್ನು ಜನವರಿ 28ರಂದು ಮಧ್ಯಾಹ್ನ 2:00 ಗಂಟೆಗೆ ಮತ್ತು 29ರಂದು ಬೆಳಗ್ಗೆ 10:30ಕ್ಕೆ ಆಯೋಜಿಸಿದೆ.
ಸೋಲೋ ಮತ್ತು ಗ್ರೂಪ್ ಎಂಬ ಎರಡು ವಿಭಾಗಗಳಲ್ಲಿ ಸ್ಪರ್ಧೆ ನಡೆಸಲಾಗುತ್ತಿದ್ದು, ಸೋಲೋ ವಿಭಾಗದಲ್ಲಿ ಮೊದಲ 100 ಸ್ಪರ್ಧಿಗಳಿಗೆ ಅವಕಾಶವಿದೆ. ಈ ವಿಭಾಗದಲ್ಲಿ ಸ್ಪರ್ಧಿಸುವ ವಿದ್ಯಾರ್ಥಿಗಳು 12ರಿಂದ 21 ವರ್ಷ ವಯೋಮಿತಿಯೊಳಗಿನವರಾಗಿರಬೇಕು. 21 ವರ್ಷಕ್ಕೆ ಮೇಲ್ಪಟ್ಟವರು ಸಾರ್ವಜನಿಕ ವಿಭಾಗದಲ್ಲಿ ಸ್ಪರ್ಧಿಸಬಹುದಾಗಿದೆ.
ಹೆಸರು ನೋಂದಾಯಿಸಿಕೊಳ್ಳಲು ಜನವರಿ 25 ಕೊನೆಯ ದಿನಾಂಕವಾಗಿರುತ್ತದೆ. ಗ್ರೂಪ್ ವಿಭಾಗದಲ್ಲಿ ಸ್ಪರ್ಧಿಸುವವರು ಗಮನಿಸಬೇಕಾದ ಅಂಶವೆಂದರೆ, ಮೊದಲ 35 ಗುಂಪುಗಳಿಗೆ ಮಾತ್ರ ಅವಕಾಶವಿರುತ್ತದೆ.
ನಿಯಮಗಳು ಇಂತಿವೆ:
ದೇಶಭಕ್ತಿ ಗೀತೆಗೆ ಅಥವಾ ಚಲನಚಿತ್ರದ ದೇಶಭಕ್ತಿ ಗೀತೆಗೆ ನೃತ್ಯ ಮಾಡಬಹುದು.
- ಒಬ್ಬ ಸ್ಪರ್ಧಿಗೆ 2-3 ನಿಮಿಷ ಮಾತ್ರ ಅವಕಾಶವಿರುತ್ತದೆ. ಗುಂಪಿಗೆ 4-5 ನಿಮಿಷದ ಕಾಲಾವಕಾಶ ನೀಡಲಾಗುವುದು.
- ಸ್ಪರ್ಧೆಯು ಝೂಮ್ ವೇದಿಕೆಯ ಮೂಲಕ ನಡೆಯುತ್ತದೆ.
- ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ.
ಹೆಸರು ನೋಂದಾಯಿಸಿಕೊಳ್ಳಲು ಮತ್ತು ಹೆಚ್ಚಿನ ಮಾಹಿತಿಗಾಗಿ 9353030916 ಸಂಪರ್ಕಿಸಲು ಕೋರಲಾಗಿದೆ.
ಸ್ಪರ್ಧೆಯ ಮೊದಲನೆಯ ದಿನ ಸಾಕಷ್ಟು ಮುಂಚಿತವಾಗಿಯೇ, ಕರೆಯ ಮೂಲಕ ಸ್ಪರ್ಧಿಗಳು ತಮ್ಮ ಮಾಹಿತಿಯನ್ನು ಮತ್ತು ನಿಯಮಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.

-
ಸಿನೆಮಾ2 days ago
ಬಿ – ಟೌನ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ವಿಚ್ಛೇದನ ಸುದ್ದಿ – ನಿಜಕ್ಕೂ ಅವರಿಬ್ಬರ ಮಧ್ಯೆ ಆಗಿರುವುದೇನು ?
-
ದಕ್ಷಿಣ ಕನ್ನಡ2 days ago
ಪುತ್ತೂರು : ಕುಡಿದು ಟೈಟಾಗಿದ್ದ ಚಾಲಕ ವಿವೇಕಾನಂದ ವಿದ್ಯಾ ಸಂಸ್ಥೆಯ ಬಸ್ಸನ್ನು ಯದ್ವಾತದ್ವಾ ಚಲಾಯಿಸಿ ಸರಣಿ ಅಪಘಾತ – ಮಾಜಿ ಶಾಸಕಿಯ ಪುತ್ರನ ಕಾರು ಸೇರಿ 3 ವಾಹನಕ್ಕೆ ಢಿಕ್ಕಿ – ಪಾನಮತ್ತ ಚಲಾಯಿಸುತ್ತಿದ್ದ ಬಸ್ಸಿನಲ್ಲಿದ್ದರು ವಿದ್ಯಾರ್ಥಿಗಳು..̆
-
ದಕ್ಷಿಣ ಕನ್ನಡ2 days ago
ವಿಟ್ಲ : ಅಡಿಕೆ ಮರ ಮುರಿದು ಬಿದ್ದು ಮಹಿಳೆ ಸಾವು
-
ರಾಜಕೀಯ2 days ago
CM Siddaramaiah: ಐಸಿಸ್ ಉಗ್ರ ಸಂಘಟನೆಯ ಬೆಂಬಲಿಗನ ಜತೆ ಹುಬ್ಬಳಿಯಲ್ಲಿ ವೇದಿಕೆ ಹಂಚಿಕೊಂಡ ಸಿ. ಎಂ.ಸಿದ್ದರಾಮಯ್ಯ : ಚಿತ್ರ ಸಹಿತ ಯತ್ನಾಳ್ ಗಂಭೀರ ಆರೋಪ – ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
-
ಸುಳ್ಯ1 day ago
College student rape case ಪುತ್ತೂರು : ಕಾಲೇಜ್ ವಿದ್ಯಾರ್ಥಿನಿಯ ಅಪಹರಿಸಿ ಅತ್ಯಾಚಾರ ಪ್ರಕರಣ – ಬಂಧಿತ ಆರೊಪಿಗೆ 2 ತಿಂಗಳ ಬಳಿಕ ಜಾಮೀನು
-
Uncategorized2 days ago
loan write off ದೇಶದ ಎಲ್ಲಾ ವಾಣಿಜ್ಯ ಬ್ಯಾಂಕುಗಳು ಕಳೆದ 5 ವರ್ಷಗಳಲ್ಲಿ 10.57 ಲಕ್ಷ ಕೋಟಿ ರೂ. ರೈಟ್-ಆಫ್….
-
ಉದ್ಯೋಗ1 day ago
Job Alert: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ – ಸದ್ಯದಲ್ಲೆ ಸಾರಿಗೆ ಇಲಾಖೆಗೆ 9 ಸಾವಿರ ಸಿಬ್ಬಂದಿಗಳ ನೇಮಕ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
-
ಪುತ್ತೂರು1 day ago
Puthila Parivara | ಪುತ್ತೂರು ನಗರಸಭೆ 2 ವಾರ್ಡ್ ಮರುಮತದಾನ – ಬಿಜೆಪಿ ಕಾಂಗ್ರೇಸ್ ನಡುವೆ ಕಾರ್ಯಕರ್ತರ ಒತ್ತಾಯದಂತೆ ಪುತ್ತಿಲ ಪರಿವಾರ ಮತ್ತೊಂದು ಚುನಾವಣೆ ಎದುರಿಸುವುದು ಬಹುತೇಕ ಫಿಕ್ಸ್ : ವಿಧಾನಸಭಾ ಚುನಾವಣೆಯಲ್ಲಿ ಈ ವಾರ್ಡ್ ಗಳಲ್ಲಿ ಯಾರಿಗೆ ಎಷ್ಟು ಮತದಾನವಾಗಿತ್ತು ಗೊತ್ತೇ.?