ಜಿಪಂ ಮಾಜಿ ಸದಸ್ಯೆ ಮಾನಭಂಗ ಯತ್ನ ಹಾಗೂ ಹಲ್ಲೆ ಪ್ರಕರಣ: ಸುಳ್ಯ ಬಿಜೆಪಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಹಾಗೂ ಇತರ 13 ಮಂದಿ ವಿರುದ್ದ ಸುಳ್ಯ ನ್ಯಾಯಾಲಯ ವಿಧಿಸಿದ ಜೈಲು ಶಿಕ್ಷೆ ಅಮಾನತು

WhatsApp-Image-2021-10-11-at-20.07.24
Ad Widget

Ad Widget

Ad Widget

ಸುಳ್ಯ: ಚುನಾವಣಾ ಪ್ರಚಾರ ಸಂದರ್ಭ ಜಿಪಂ ಮಾಜಿ ಸದಸ್ಯರೊಬ್ಬರ ಮಾನಭಂಗ ಯತ್ನ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡ ಹರೀಶ್ ಕಂಜಿಪಿಲಿ ಹಾಗೂ ಇತರ 13 ಮಂದಿಗೆ ಸುಳ್ಯ ನ್ಯಾಯಾಲಯ ನೀಡಿದ್ದ ಜೈಲು ಶಿಕ್ಷೆಯನ್ನು ಪುತ್ತೂರು ಸೆಷನ್ಸ್ ಕೋರ್ಟ್ ಅಮಾನತು ಮಾಡಿದೆ.

Ad Widget

2013 ರ ವಿಧಾನಸಭಾ ಚುನಾವಣೆ ಸಂದರ್ಭ ಹರೀಶ್ ಕಂಜಿಪಿಲಿ ಹಾಗೂ ಇತರರು ಆಗಿನ ಜಿಪಂ ಸದಸ್ಯೆ ಸರಸ್ವತಿ ಕಾಮತ್ ಹಾಗೂ ಇತರ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಹಾಗೂ ಮಾನಭಂಗಕ್ಕೆ ಯತ್ನಿಸಿದ್ದರು ಎಂದು ಆರೋಪಿಸಲಾಗಿತ್ತು.

Ad Widget

Ad Widget

Ad Widget

ಈ ಪ್ರಕರಣ ಸುಳ್ಯದ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಸೆ.9ರಂದು ಹರೀಶ್ ಕಂಜಿಪಿಲಿ, ಈಶ್ವರಪ್ಪ ಗೌಡ ಹರ್ಲಡ್ಕ, ರವಿಚಂದ್ರ ಕೊಡಪಾಲ, ಸವಿನ್ ಕೊಡಪಾಲ, ದಿವಾಕರ ನಾಯಕ್ ಎರ್ಮೆಟ್ಟಿ, ದಿನೇಶ ಚೆನ್ನೂರು, ರಾಮಚಂದ್ರ ಹಲ್ಲಡ್ಕ, ಷಣ್ಮುಖ ಸೂಟೆಗದ್ದೆ, ಧನಂಜಯ ಬೈಕಾಡಿ, ಬಾಲಕೃಷ್ಣ ಕಂಜಿಪಿಲಿ, ಮನೋಹರ, ದೀಪಕ್ ಎಲಿಮಲೆ, ಮನೋಜ್ ಎಂ.ಕೆ. ಮತ್ತು ವಿಶ್ವನಾಥ ಸಿ.ಎಲ್.ಯಾನೆ ವಿಕಾಸ್ ಎಂಬುವರನ್ನು ಅಪರಾಧಿಗಳೆಂದು ತೀರ್ಪು ನೀಡಿದ್ದ ಸುಳ್ಯ ಕೋರ್ಟ್, ಎಲ್ಲ ಅಪರಾಧಿಗಳಿಗೆ ತಲಾ 2 ವರ್ಷ ಜೈಲು ಶಿಕ್ಷೆ ಹಾಗೂ ದಂಡ ತೆರುವಂತೆ ಆದೇಶಿಸಿತ್ತು.

Ad Widget

ತೀರ್ಪಿನ ವಿರುದ್ಧ ಮೇಲ್ಮನವಿಗೆ ಒಂದು ತಿಂಗಳ ಅವಕಾಶ ಹಾಗೂ ಅಪರಾಧಿಗಳಿಗೆ ಕೋರ್ಟ್ ತಕ್ಷಣವೇ ಜಾಮೀನು ನೀಡಿತ್ತು. ಸುಳ್ಯ ಕೋರ್ಟ್ ತೀರ್ಪಿನ ವಿರುದ್ಧ ಹರೀಶ್ ಕಂಜಿಪಿಲಿ ಮತ್ತಿತರರು ಪುತ್ತೂರಿನ ಜಿಲ್ಲಾ ಹೆಚ್ಚುವರಿ ಸೆಷನ್ಸ್ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಅಪರಾಧಿಗಳ ಜೈಲು ಶಿಕ್ಷೆಯನ್ನು ಅಮಾನತು ಮಾಡಿದ್ದಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದ ಕಡತಗಳನ್ನು ವಿಚಾರಣಾ ಕೋರ್ಟ್‌ಗೆ ಹಸ್ತಾಂತರಿಸುವಂತೆ ಸೂಚಿಸಿದೆ.

Ad Widget

Ad Widget

ಸುಳ್ಯ ಕೋರ್ಟ್ ವಿಧಿಸಿದ ದಂಡದ ಮೊತ್ತವನ್ನು ಮುಂದಿನ 15 ದಿನಗಳ ಒಳಗಾಗಿ ವಿಚಾರಣಾ ಕೋರ್ಟ್‌ನಲ್ಲಿ ಠೇವಣಿ ಇರಿಸಬೇಕು. ಎಲ್ಲ ಅಪರಾಧಿಗಳು ತಲಾ 50 ಸಾವಿರ ರೂ ವೈಯಕ್ತಿಕ ಬಾಂಡ್ ಹಾಗೂ ತಲಾ ಒಬ್ಬರು ಜಾಮೀನುದಾರರನ್ನು ಒದಗಿಸಬೇಕು ಎಂದು ಆದೇಶದಲ್ಲಿ ಸೂಚಿಸಿದೆ. ಹರೀಶ್ ಕಂಜಿಪಿಲಿ ಮತ್ತವರ ತಂಡದ ಪರ ವಕೀಲ ಮಹೇಶ್ ಕಜೆ ವಾದಿಸಿದ್ದರು.

Leave a Reply

Recent Posts

ದೇಶದಲ್ಲಿ ಹಿಂದೂಗಳ ಶಕ್ತಿ ಹೇಗಿರಬೇಕೆಂದರೆ ಸರ್ಕಾರ ಹಿಂದೂಗಳ ಹೇಳಿಕೆಯಂತೆ ನಡೆಯಬೇಕು..! : ದೇವಸ್ಥಾನಗಳನ್ನು ಸರಕಾರಿಕರಣಗೊಳಿಸಿದಂತೆ ಮಸೀದಿಗಳನ್ನು ಏಕೆ ಮಾಡುವುದಿಲ್ಲ..? ಮಂದಿರ ಸಂಸ್ಕೃತಿ ರಕ್ಷಣೆ ಸಭೆಯಲ್ಲಿ ಚರ್ಚೆ – ಮುಂಬೈಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿನ ಭ್ರಷ್ಟಾಚಾರ ಬೆಳಕಿಗೆ ತಂದಿರುವ ಸುಪ್ರಸಿದ್ಧ ಸರ್ಜನ್ ರ ಪುಸ್ತಕ ಬಿಡುಗಡೆ

error: Content is protected !!
%d bloggers like this: