Connect with us

ಬಿಗ್ ನ್ಯೂಸ್

ಗಾನ ಗಂಧರ್ವ, ಪದ್ಯಾಣ ಶೈಲಿಯ ಸೃಷ್ಟಿಕರ್ತ, ತೆಂಕುತಿಟ್ಟಿನ ಶ್ರೇಷ್ಠ ಭಾಗವತ ಶ್ರೀ ಪದ್ಯಾಣ ಗಣಪತಿ ಭಟ್ ಇನ್ನಿಲ್ಲ – ಪದಯಾನಕ್ಕೆ ವಿರಾಮ

Ad Widget

Ad Widget

Ad Widget

Ad Widget

ಗಾನ ಗಂಧರ್ವ, ಪದ್ಯಾಣ ಶೈಲಿಯ ಸೃಷ್ಟಿಕರ್ತ, ತೆಂಕುತಿಟ್ಟಿನ ಶ್ರೇಷ್ಠ ಭಾಗವತ  ಶ್ರೀ ಪದ್ಯಾಣ ಗಣಪತಿ ಭಟ್‌ (66) ವಯೋ ಸಹಜ ಖಾಯಿಲೆಯಿಂದ ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದರು. ಪದ್ಯಾಣರು ಪತ್ನಿ ಶೀಲಾಶಂಕರಿ, ಮಕ್ಕಳಾದ ಸ್ವಸ್ತಿಕ್‌, ಕಾರ್ತಿಕ್‌ ,ನೂರಾರು ಶಿಷ್ಯಂದಿರು ಹಾಗೂ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.

Ad Widget

Ad Widget

Ad Widget

 ಎರಡು ವರ್ಷಗಳ ಹಿಂದೆ ಇವರು ಪ್ರಯಾಣಿಸುತ್ತಿದ್ದ ಕಾರು ಪುತ್ತೂರು ತಾಲೂಕಿನ ತಿಂಗಳಾಡಿ ಸಮೀಪದ ಎಂಡೆಸಾಗು ಎಂಬಲ್ಲಿ ಅಪಘಾತಕ್ಕಿಡಾಗಿತ್ತು. ಆ ಆಪಘಾತದ ವೇಳೆ ಗಾಯಾಳುವಾಗಿದ್ದ ಅವರು ಬಳಿಕ ಒಂದಷ್ಟು ಚೇತರಿಸಿಕೊಂಡಿದ್ದರಾದರೂ ನಂತರ ಅವರನ್ನು ವಯೋಸಹಜ ಅನಾರೋಗ್ಯಗಳು ನಿರಂತರವಾಗಿ ಕಾಡಿದ್ದವು.

Ad Widget

  ಶ್ರೀ ಪದ್ಯಾಣ ಗಣಪತಿ ಭಟ್ಟರು ತೆಂಕುತಿಟ್ಟಿನ ಶ್ರೇಷ್ಠ ಭಾಗವತರಲ್ಲೊಬ್ಬರು. ಪ್ರಸ್ತುತ ಶ್ರೀ ಹನುಮಗಿರಿ ಮೇಳದ ಪ್ರಧಾನ ಭಾಗವತರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈಟಿವಿಯ “ಎದೆ ತುಂಬಿ ಹಾಡುವೆನು’ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ ಮೊದಲ ಯಕ್ಷಗಾನ ಭಾಗವತ ಎಂಬ  ಹೆಗ್ಗಳಿಕೆ ಇವರದು. ಇವರ ಗಾಯನವನ್ನು ನೋಡಿ  ಕಾರ್ಯಕ್ರಮದ ನಿರ್ವಾಹಕ ಡಾ| ಎಸ್‌.ಪಿ. ಬಾಲಸುಬ್ರಹ್ಮಣ್ಯ ಅವರು  ಪ್ರಶಂಸಿದ್ದರು. ಅಷ್ಟು ಸುಲಭವಾಗಿ ಯಾರನ್ನೂ ಮೆಚ್ಚದ ಯಕ್ಷಗಾನ ಲೋಕದ ದಂತ ಕಥೆ ಶೇಣಿ ಡಾ| ಗೋಪಾಲ ಕೃಷ್ಣ ಭಟ್‌ ರವರಿಂದಲೂ ಸೈ ಅನ್ನಿಸಿಕೊಂಡ ಭಾಗವತ ಪದ್ಯಾಣ.  ಹಿರಿಯ ಭಾಗವತ ದಾಮೋದರ ಮಂಡೆಚ್ಚರ ನಿಧನದ ಬಳಿಕ ತಮ್ಮ ಬಹುತೇಕ ಕೂಟ , ತಾಳಮದ್ದಲೆ ಕಾರ್ಯಕ್ರಮಗಳಿಗೆ ಪದ್ಯಾಣ ಗಣಪತಿ ಅವರನ್ನೇ ಶೇಣಿಯವರು ಭಾಗವತರನ್ನಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದರು ಅಥಾವ ಕೂಟದ ಆಯೋಜಕರಿಗೆ ಶಿಫಾರಸ್ಸು ಮಾಡುತ್ತಿದ್ದರು.

Ad Widget

Ad Widget

ಯಕ್ಷಗಾನದಲ್ಲಿ ಅಷ್ಟೇನೂ ಬಳಕೆಯಲ್ಲಿಲ್ಲದ ಕೆಲವು ರಾಗಗಳನ್ನು ಬಳಸಿದ ಕೀರ್ತಿ ಪದ್ಯಾಣರದ್ದು. ಸಿಂಹೇಂದ್ರ ಮಧ್ಯಮ, ವೃಂದಾವನ ಸಾರಂಗ್‌, ಯಮನ್‌ ಕಲ್ಯಾಣಿ, ರೇವತಿ ಮೊದಲಾದ ರಾಗ ಪ್ರಕಾರಗಳನ್ನು ಅವರು ಭಾಗವತಿಕೆಯಲ್ಲಿ ದುಡಿಸಿಕೊಂಡವರು. ವಾಸಂತಿ ರಾಗವನ್ನು ಯಕ್ಷಗಾನದಲ್ಲಿ ಪ್ರಪ್ರಥಮ ವಾಗಿ ಅಳವಡಿಸಿದ ಕೀರ್ತಿ ಪದ್ಯಾಣರದ್ದು ಎಂದು ಹಿರಿಯ ಅಂಕಣಕಾರ ಶಾಂತರಾಮ ಕುಡ್ವರವರು ತಮ್ಮ ಅಂಕಣವೊಂದರಲ್ಲಿ ಬರೆದುಕೊಂಡಿದ್ದಾರೆ. ಹೀಗೆ ಯಕ್ಷಗಾನ ಲೋಕದಲ್ಲಿ ತಮ್ಮದೇ ಆದ ಪದ್ಯಾಣ ಶೈಲಿಯನ್ನು ಅವರು ಸೃಷ್ಟಿಸಿದ್ದರು.

Ad Widget

Ad Widget

Ad Widget

  ಸುಳ್ಯ ತಾಲೂಕಿನ ಕಲ್ಮಡ್ಕದ ಸಮೀಪ ಗೋಳ್ತಜೆ ಎಂಬಲ್ಲಿ ಪದ್ಯಾಣ ತಿರುಮಲೇಶ್ವರ ಭಟ್, ಸಾವಿತ್ರಿ ಅಮ್ಮ ದಂಪತಿಗಳ ಪುತ್ರನಾಗಿ 1955 ಜನವರಿ 21ರಂದು ಪದ್ಯಾಣ ಗಣಪತಿ ಭಟ್ಟರು ಜನಿಸಿದರು. ಪದ್ಯಾಣ ಕುಟುಂಬಕ್ಕೆ ಯಕ್ಷಗಾನ ರಕ್ತಗತವಾಗಿ ಒಲಿದಿತ್ತು. ಗಣಪತಿ ಭಟ್ಟರ ಅಜ್ಜ ಪುಟ್ಟುನಾರಾಯಣ ಭಟ್ಟರು ಶ್ರೇಷ್ಠ ಭಾಗವತರಾಗಿದ್ದರು. ಹಿಮ್ಮೇಳದ ಮಹಾನ್ ಗುರು ಮಾಂಬಾಡಿ ನಾರಾಯಣ ಭಾಗವತರಿಗೂ ಗುರುಸದೃಶರಾಗಿದ್ದವರು. ಗಣಪತಿ ಭಟ್ಟರ ತಂದೆ ತಿರುಮಲೇಶ್ವರ ಭಟ್ಟರೂ ಉತ್ತಮ ಮದ್ದಳೆಗಾರ

 ಪದ್ಯಾಣ ಗಣಪತಿ ಭಟ್ಟರು ಸಣ್ಣ ಮಗು ವಾಗಿದ್ದಾಗ ಬಾಲಪೀಡೆ ಎಂಬ ರೋಗಕ್ಕೆ ತುತ್ತಾಗಿ  ಸಾವಿನ ದವಡೆಯವರೆಗೂ ಸಾಗಿ  ಪುನರ್ಜನ್ಮ ಪಡೆದಿದ್ದರು. ಇವರು ಕಲ್ಮಡ್ಕ ಸರಕಾರೀ ಶಾಲೆಯಲ್ಲಿ 7ನೇ ತರಗತಿ ಓದಿದ್ದು ಬಳಿಕ ಬೆಳ್ಳಾರೆಯ  ಬಾಳಿಲ ವಿದ್ಯಾಬೋಧಿನೀ ಶಾಲೆಗೆ ಸೇರಿದ್ದರು. ಶಾಲೆಯಲ್ಲಿ ಯಕ್ಷಗಾನ ತಂಡ ಕ್ರಿಯಾಶೀಲವಾಗಿತ್ತು. ಆಗ ಶ್ರೀನಿವಾಸ ಉಡುಪರು ಅಲ್ಲಿ ಮಖ್ಯೋಪಾಧ್ಯಾಯರಾಗಿದ್ದರು. ಅವರ ಇಷಾರೆಯಂತೆ ಶಾಲಾ ವಾರ್ಷಿಕೋತ್ಸವದ ಪ್ರದರ್ಶನ ಬಭ್ರುವಾಹನ ಕಾಳಗ ಪ್ರಸಂಗದಲ್ಲಿ ವೃಷಕೇತು ಪಾತ್ರವನ್ನು ಮಾಡಿದ್ದರು. 

ಗಣಪತಿ ಭಟ್‌ ಅವರಿಗೆ  ಕಲಿಕೆಯಲ್ಲಿ ಅಷ್ಟು ಆಸಕ್ತಿಯಿರಲಿಲ್ಲ. ಹಿರಿಯರ ಒತ್ತಡಕ್ಕೆ ಮಣಿದು ಶಾಲೆಗೆ ಹೋಗುತ್ತಿದ್ದರು. ಹೀಗಾಗಿ ಆತ ಯಕ್ಷಗಾನವನ್ನಾದರೂ ಕಲಿಯಲಿ ಎಂದು ಅವರಮ್ಮ ಹೇಳಿದರಂತೆ. ಹೀಗಾಗಿ ಅವರು ಶ್ರೀ ಧರ್ಮಸ್ಥಳ ಯಕ್ಷಗಾನ ಲಲಿತ ಕಲಾ ತರಬೇತಿ ಕೇಂದ್ರ ಸೇರಿ ಅಲ್ಲಿ ಯಕ್ಷಗಾನದ ಪಟ್ಟುಗಳನ್ನು ಕಲಿತರು. ಅಲ್ಲಿ ಮಾಂಬಾಡಿ ನಾರಾಯಣ ಭಟ್ಟರ ಶಿಷ್ಯನಾಗಿ ಕಲಿಕೆಯಲ್ಲಿ ತೊಡಗಿಸಿಕೊಂಡರು. ಪದ್ಯಾಣ ಗಣಪತಿ ಭಟ್ಟರು ಶೇಣಿ ಗೋಪಾಲಕೃಷ್ಣ ಭಟ್ಟರು ನನ್ನ ಎರಡನೇಯ ಗುರು ಹಾಗೂ  ಅಗರಿ ಶ್ರೀ ರಘುರಾಮ ಭಾಗವತರು  ನನ್ನ ಮೂರನೆಯ ಗುರುಗಳು ಎಂದು ಹೇಳಿಕೊಂಡಿದ್ದರು

ಗಣಪತಿ ಭಟ್ಟರು ತಮ್ಮ 16ರ ಹರೆಯದಲ್ಲೇ (1971ರಲ್ಲಿ) ಚೌಡೇಶ್ವರೀ ಮೇಳದಲ್ಲಿ ಸಂಗೀತಗಾರರಾಗಿ ತಮ್ಮ ಯಕ್ಷಲೋಕದ ಬದುಕು ಅರಂಭಿಸಿದರು . ಬಳಿಕ ಭಾಗವತರಾಗಿ ಕುಂಡಾವು, ಚೌಡೇಶ್ವರೀ, ಸುರತ್ಕಲ್‌, ಮಂಗಳಾದೇವಿ, ಕರ್ನಾಟಕ, ಎಡನೀರು, ಹೊಸನಗರ ಮೇಳದಲ್ಲಿ ದುಡಿದಿದ್ದಾರೆ. ಸುಮಾರು 5 ದಶಕಗಳ ಕಾಲ ಯಕ್ಷರಂಗವನ್ನು ತಮ್ಮ ಕರ್ಣಾನಂದಕರ ಗಾಯನದಿಂದ ಆಳಿದರು. ಅವರ ಇಂಪಾದ ಗಾಯನಕ್ಕೆ ಯಕ್ಷಪ್ರಿಯರು ಮನಸೋತರು. ಯಕ್ಷಗಾನದ ಸ್ಟಾರ್‌ ಭಾಗವತರೆನ್ನಿಸಿಕೊಂಡರು. ಜಿಲ್ಲೆಯ ವಿವಿಧ ಯಕ್ಷಗಾನ ಮೇಳಗಳಲ್ಲಿ ಕಾರ್ಯ ನಿರ್ವಹಿಸಿ ಯಕ್ಷಲೋಕವನ್ನು ಶ್ರೀಮಂತಗೊಳಿಸಿದರು.  

ದ. ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪದ್ಯಾಣರು ಒಲಿದಿತ್ತು.   ದುಬೈ, ಮಸ್ಕತ್‌, ಕುವೈಟ್‌  ಹೀಗೆ  ವಿದೇಶಗಳಲ್ಲಿ ಪ್ರದರ್ಶನ ನೀಡಿ  ಸನ್ಮಾನಗಳನ್ನು ಪಡೆದಿದ್ದಾರೆ. ಮುಂಬೈ, ದಿಲ್ಲಿ, ಕಾಸರಗೋಡು, ಶಿವಮೊಗ್ಗ, ಮಂಗಳೂರು ಸೇರಿದಂತೆ  ದೇಶಾದ್ಯಂತ  ಹಲವೆಡೆ ಅಭಿಮಾನಿಗಳ ಗೌರವ ಸಮ್ಮಾನಗಳನ್ನು ಅವರು ಸ್ವೀಕರಿಸಿದ್ದಾರೆ.


ಮಾಹಿತಿ : ಹಿರಿಯ ಯಕ್ಷಗಾನ ಕಲಾವಿದ ರವಿಶಂಕರ ವಳಕ್ಕುಂಜರವರು ಬರೆದ ಅಂತರಂಗದ ಧ್ವನಿ ಲೇಖನದಿಂದ ಹಾಗೂ ಹಿರಿಯ ಲೇಖಕ ಶಾಂತರಾಮ ಕುಡ್ವರವರ ಬಯಲಾಟ ಅಂಕಣದಿಂದ

Click to comment

Leave a Reply

ಬಿಗ್ ನ್ಯೂಸ್

Anantkumar Hegde | ಚುನಾವಣೆಗೆ ಕೆಲವೇ ಗಂಟೆಗಳಿರುವಾಗ ಮಹತ್ವದ ಬೆಳವಣಿಗೆ : ಬಿಜೆಪಿಗೆ ಓಟ್ ಹಾಕಿ ಎಂದು ತನ್ನ ಫೋಟೋ ಬಳಸಿ ಫೋಸ್ಟ್ ಮಾಡಿದ್ದರ ವಿರುದ್ದ ಫೈರ್ ಬ್ರ್ಯಾಂಡ್ ನಾಯಕ , ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಹೆಗ್ಗಡೆಯಿಂದ ದೂರು ದಾಖಲು

Ad Widget

Ad Widget

Ad Widget

Ad Widget

ಕಾರವಾರ, ಮೇ 06: ತಮ್ಮ ಫೋಟೋ ಬಳಸಿ ಬಿಜೆಪಿಗೆ ವೋಟ್​ ಹಾಕುವಂತೆ ಪೋಸ್ಟ್​​ ಮಾಡಿದವರ ವಿರುದ್ಧ ಸಂಸದ ಅನಂತಕುಮಾರ್ ಹೆಗಡೆ ಅವರು ತಮ್ಮ ಆಪ್ತನ ಮೂಲಕ ದೂರು ದಾಖಲಿಸಿದ್ದಾರೆ. ಅನಂತಕುಮಾರ್ (Anantkumar Hegde) ಆಪ್ತ ಸಹಾಯಕ ಸುರೇಶ್ ಶೆಟ್ಟಿಯಿಂದ ಸಿದ್ದಾಪುರದ ಬಿಜೆಪಿ ಕಾರ್ಯಕರ್ತ ಎ.ಜಿ.ನಾಯ್ಕ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ದೂರು (complaint) ದಾಖಲಿಸಲಾಗಿದೆ.

Ad Widget

Ad Widget

Ad Widget

ಸಂಸದರ ಭಾವಚಿತ್ರ ಬಳಸಿ ಸಂಸದರೇ ಹೇಳಿದ್ದಾರೆ ಎನ್ನುವ ರೀತಿಯಲ್ಲಿ ಪೋಸ್ಟ್ ಹಾಕಿದ ಹಿನ್ನಲೆ ದೂರು ನೀಡಲಾಗಿದೆ.

Ad Widget

ದೂರಿನಲ್ಲೇನಿದೆ?
ಎ.ಜಿ ನಾಯ್ಕ, ಸಿದ್ದಾಪುರ ಇವರು ಮೇ 6ರಂದು ಮಧ್ಯಾಹ್ನ 2-20 ಗಂಟೆಗೆ ಬಿಜೆಪಿ ಉತ್ತರ ಕನ್ನಡ ಲೋಕಸಭಾ 2024 ಎಂಬ ವಾಟ್ಸ್ ಆಫ್ ಗ್ರೂಪ್ನಲ್ಲಿ ಉತ್ತರ ಕನ್ನಡ ಜಿಲ್ಲೆಯ ನನ್ನ ಬಂದು ಬಾಂಧವರೇ, ಮುನ್ನುಗ್ಗಿ ಮುನ್ನುಗ್ಗಿ, ಯಾವುದಕ್ಕೂ ಹೆದರಬೇಡಿ, ಎಲ್ಲಿಯೂ ನಿಲ್ಲಬೇಡಿ. ದೇಶವನ್ನು ಉಳಿಸುವ ಹಾಗೂ ದೇಶದೊಂದಿಗೆ ನಿಲ್ಲುವ ಸದಾವಕಾಶ ನಮ್ಮೆಲ್ಲರಿಗೂ ಮತ್ತೊಮ್ಮೆ ಒದಗಿ ಬಂದಿದೆ.

Ad Widget

Ad Widget

2014 ಹಾಗೂ 2019 ರಲ್ಲಿ, ಹೇಗೆ ನಾವುಗಳೆಲ್ಲ ದೇಶ ವಿರೋಧಿ ಶಕ್ತಿಯ ವಿರುದ್ಧ ಸೆಟೆದು ನಿಂತೆವೋ ಅದೇ ರೀತಿಯಾಗಿ ಮತ್ತೊಮ್ಮೆ ದೇಶ ವಿರೋಧಿ ಶಕ್ತಿಗಳ ವಿರುದ್ಧ ನಿಲ್ಲುವ ಕಾಲ ಬಂದಿದೆ.

Ad Widget

Ad Widget

Ad Widget

ನಾವೆಲ್ಲರೂ ಪ್ರಧಾನ ಸೇವಕ ನರೇಂದ್ರ ಮೋದಿಯವರ ಬೆನ್ನಿಗೆ ನಿಂತು ಮತ್ತೊಮ್ಮೆ ಅವರನ್ನು ಆಯ್ಕೆ ಮಾಡಲೇ ಬೇಕಾಗಿದೆ. ಇದು ನಮಗೋಸ್ಕರ ಅಲ್ಪವಾದರೂ ನಮ್ಮ ಭವಿಷ್ಯದ ನಾಳೆಗಾಗಿ ಭವಿಷ್ಯದ ಭಾರತಕ್ಕಾಗಿ ಇದೇ ಮೇ 07ರಂದು ನಡೆಯುವ ಚುನಾವಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೊಮ್ಮೆ ಬಿಜೆಪಿ ಧ್ವಜವನ್ನು ಹಾರಿಸಬೇಕಿದೆ

ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಬಾಹುಗಳಿಗೆ ಶಕ್ತಿ ನೀಡುವ ಕೆಲಸವಾಗಬೇಕಿದೆ ಎಂದು ಬರೆದು ಅದಕ್ಕೆ ಸಂಸದ ಅನಂತಕುಮಾರ ಹೆಗಡೆಯವರ ಭಾವಚಿತ್ರವನ್ನು ಅಳವಡಿಸಿ ಅನಂತಕುಮಾರ ಹೆಗಡೆಯವರೇ ಹೇಳಿಕೆ ನೀಡಿದ ರೀತಿಯಲ್ಲಿ ಸುಳ್ಳು ಸುದ್ದಿಯನ್ನು ಹಾಕಿ, ಅವರ ಹೆಸರನ್ನು ಉದ್ದೇಶಪೂರ್ವಕವಾಗಿ ದುರುಪಯೋಗ ಪಡಿಸಿಕೊಂಡು ಗೌರವ ಘನತೆಗೆ ಚ್ಯುತಿ ಬರುವ ಹಾಗೇ ಮಾಡಿದ್ದಾರೆ. ಹೀಗಾಗಿ ಅನಂತಕುಮಾರ್ ಹೆಗಡೆ ಸೂಚನೆ ಮೇರೆಗೆ ಅವರ ಬೆಂಬಲಿಗರು ದೂರು ನೀಡಿದ್ದಾರೆ.

Continue Reading

ಅಂತರ ರಾಜ್ಯ

India ranked poorer-ಪತ್ರಿಕಾ ಸ್ವಾತಂತ್ರ್ಯ ಸಮೀಕ್ಷೆ : ಪಾಕ್ ಗಿಂತಲೂ ಕಳಪೆಯಾಗಿ ಸ್ಥಾನದಲ್ಲಿ ಭಾರತ

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತವು ವಿಶ್ವದ 180 ದೇಶಗಳ ಪೈಕಿ 159ನೇ ಸ್ಥಾನ ಪಡೆದಿದ್ದು, ಪಾಕಿಸ್ತಾನಕ್ಕಿಂತಲೂ ಕಳಪೆಯಾಗಿ ಹೊರಹೊಮ್ಮಿದೆ.

Ad Widget

Ad Widget

Ad Widget

ಪ್ಯಾರಿಸ್ ಮೂಲದ ‘ರಿಪೋರ್ಟರ್ಸ್ ವಿಥವ್ಟ್ ಬಾರ್ಡರ್ಸ್‌ (ಆರ್‌ಎಸ್ ಎಫ್) ಸಂಸ್ಥೆ ಬಿಡುಗಡೆ ಮಾಡಿರುವ 2024ನೇ ಸಾಲಿನ ‘ಜಾಗತಿಕ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ’ದಲ್ಲಿಪಾಕಿಸ್ತಾನವು 152ನೇ ಸ್ಥಾನ ಪಡೆಯುವ ಮೂಲಕ ಭಾರತಕ್ಕಿಂತಲೂ ಉತ್ತಮ ಸ್ಥಾನ ಗಳಿಸಿದೆ.

Ad Widget

ಇದೇ ವರದಿಯಲ್ಲಿ ಭಾರತಕ್ಕೆ ಕಳೆದ ವರ್ಷ 161ನೇ ಸ್ಥಾನ ಸಿಕ್ಕಿತ್ತು. ಉತ್ತಮ ಪತ್ರಿಕಾ ಸ್ವಾತಂತ್ರ್ಯ ಹೊಂದಿರುವ ದೇಶವಾಗಿ ನಾರ್ವೆ ಮೊದಲ ಸ್ಥಾನ ಪಡೆದಿದೆ. ಡೆನ್ಮಾರ್ಕ್ ಹಾಗೂ ಸ್ವಿಡನ್ ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನ ಪಡೆದಿವೆ.

Ad Widget

Ad Widget

ಪೂರ್ವ ಆಫ್ರಿಕಾದ ಎರಿಟ್ರಿಯಾ ದೇಶ 180ನೇ ಸ್ಥಾನ ಪಡೆಯುವ ಮೂಲಕ ಪತ್ರಿಕಾ ಸ್ವಾತಂತ್ರ್ಯಕ್ಕೆ ಅತ್ಯಂತ ಕೆಟ್ಟ ವಾತಾವರಣ ಇರುವ ದೇಶ ಎಂಬ ಕುಖ್ಯಾತಿಗೆ ಗುರಿಯಾಗಿದೆ.

Ad Widget

Ad Widget

Ad Widget

145ರಿಂದ 180ರವರೆಗಿನ ಸ್ಥಾನಗಳನ್ನು ಪಡೆದ ದೇಶಗಳನ್ನು ಪತ್ರಿಕಾ ಸ್ವಾತಂತ್ಯಕ್ಕೆ ‘ರೆಡ್ ಜೋನ್’ (ಅಪಾಯದ ವಲಯ) ಎಂದು ಸಂಸ್ಥೆಯು ಗುರುತಿಸಿದೆ. 1ರಿಂದ 8 ಸ್ಥಾನಗಳನ್ನು ಪಡೆದ ದೇಶಗಳನ್ನು ‘ಗ್ರೀನ್ ಜೋನ್’ (ಮುಕ್ತ/ಉತ್ತಮ ವಲಯ) ಎಂದು ವಿಂಗಡಿಸಲಾಗಿದೆ.

ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಮಾಧ್ಯಮಗಳು ರಾಜಕೀಯ ನಾಯಕರ, ರಾಜಕೀಯ ಪಕ್ಷಗಳ ನಿಯಂತ್ರಣದಲ್ಲಿವೆ. ಪತ್ರಿಕಾ ಸ್ವಾತಂತ್ರ್ಯ ತೀವ್ರ ಬಿಕ್ಕಟ್ಟಿನಲ್ಲಿದೆ ಎಂದು ವರದಿ ಹೇಳಿದೆ.

ಪತ್ರಿಕಾ ಸ್ವಾತಂತ್ರ್ಯಕ್ಕೆ ಅತಿಹೆಚ್ಚು ಗೌರವ ನೀಡುತ್ತಿರುವ ರಾಷ್ಟ್ರಗಳು(ಟಾಪ್ 5)
Ranking ದೇಶ
1 ನಾರ್ವೆ
2 ಡೆನ್ಮಾರ್ಕ್
3 ಸ್ವಿಡನ್
4 ನೆದ‌ರ್ ಲೆಂಡ್
5 ಫಿನ್‌ಲೆಂಡ್

ಪತ್ರಿಕಾ ಸ್ವಾತಂತ್ರ್ಯ ಅಪಾಯದಲ್ಲಿರುವ ರಾಷ್ಟ್ರಗಳು ( 10)

Ranking ದೇಶ
171 ಮ್ಯಾನಾರ್
172 ಚೀನಾ
173 ಬಹರೇನ್
174 ವಿಯೆಟ್ನಾಂ
175 ತುರ್ಕ್‌ ಮೆನಿಸ್ತಾನ
176 ಇರಾನ್
177 ಉತ್ತರಕೊರಿಯಾ
178 ಅಫಘಾನಿಸ್ತಾನ
179 ಸಿರಿಯಾ
180 ಎರಿಟ್ರಿಯಾ(ಪೂರ್ವ ಆಫ್ರಿಕಾ)

Continue Reading

ಉಡುಪಿ

Kapu: Pili Kola-ಕಾಪು : ಪಿಲಿ ಕೋಲ – ನಗರ ಪ್ರದಕ್ಷಿಣೆ ವೇಳೆ ಓರ್ವನ ಸ್ಪರ್ಶಿಸಿ ದೈವಸ್ಥಾನಕ್ಕೆ ಓಡಿ ಬಂದ ದೈವ..!

Ad Widget

Ad Widget

Ad Widget

Ad Widget

ಕಾಪು, ಮೇ 14: ತುಳುನಾಡಿನ ಸಪ್ತ ಜಾತ್ರೆಗಳಲ್ಲಿ ಒಂದಾಗಿರುವ ಕಾಪು ಶ್ರೀ ಬ್ರಹ್ಮಮುಗ್ಗೆರ್ಕಳ-ಪಿಲಿಚಂಡಿ ದೈವಸ್ಥಾನದಲ್ಲಿ ದೈ ವಾರ್ಷಿಕವಾಗಿ ನಡೆಯುವ ಪಿಲಿ ಕೋಲವು ವಿಶೇಷ ಜನಾಕರ್ಷಣೆಯೊಂದಿಗೆ ಮೇ 4ರಂದು ಸಂಪನ್ನಗೊಂಡಿತು.

Ad Widget

Ad Widget

Ad Widget

2 ಗಂಟೆಯ ಬಣ್ಣಗಾರಿಕೆಯ ಬಳಿಕ ಅಬ್ಬರದೊಂದಿಗೆ ಪಂಜರದೊಳಗಿಂದ ಹೊರಗೆ ಬಂದ ಹುಲಿಚಂಡಿ ದೈವವು ಬ್ರಹ್ಮರ ಗುಂಡಕ್ಕೆ ಮೂರು ಸುತ್ತು ಬಂದು, ಮಾರಿಯಮ್ಮ ಗುಡಿಯ ಮುಂಭಾಗದಲ್ಲಿನೆಡಲಾಗಿದ್ದ ಬಂಟ ಕಂಬವನ್ನೇರಿ ಜೀವಂತ ಕೋಳಿಯನ್ನು ಬಲಿಯಾಗಿ ಸ್ವೀಕರಿಸಿ ಮುಂದೆ ಗ್ರಾಮ ಭೇಟಿಗೆ ತೆರಳುವುದು ಸಂಪ್ರದಾಯವಾಗಿದೆ.

Ad Widget

ಈ ಬಾರಿಯ ನಗರ ಪ್ರದಕ್ಷಿಣೆ ಮತ್ತು ಗ್ರಾಮ ಸಂಚಾರದ ವೇಳೆ ಪಿಲಿ ಭೂತವು ಓರ್ವನನ್ನು ಸ್ಪರ್ಶಿಸಿದ್ದು ಸ್ಪರ್ಶದ ಬಳಿಕ ದೈವಸ್ಥಾನಕ್ಕೆ ಓಡಿ ಬಂದು ಪೂರ್ವ ಸಂಪ್ರದಾಯದ ಪದ್ಧತಿಗಳನ್ನು ನೆರವೇರಿಸಲಾಯಿತು. ”

Ad Widget

Ad Widget

ಸಹಸ್ರಾರು ಮಂದಿ ಭಾಗಿ
ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಮತ್ತು ಮುಂಬಯಿ ಸೇರಿದಂತೆ ದೇಶ-ವಿದೇಶಗಳಿಂದ ಬಂದಿರುವ ಸಹಸ್ರಾರು ಸಂಖ್ಯೆಯ ಭಕ್ತರು ಮತ್ತು ಜಾನಪದಾಸಕ್ತರು ಪಿಲಿ ಕೋಲಕ್ಕೆ ಸಾಕ್ಷಿಯಾದರು.

Ad Widget

Ad Widget

Ad Widget
Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading