ಸಿಪಿಸಿಆರ್ʼಐ ವಿಜ್ಞಾನಿಗಳಿಂದ ಹಳದಿಎಲೆ ರೋಗ ವಿಸ್ತರಣೆ ತಡೆಗೆ ಪ್ಲಾಸ್ಟಿಕ್ ಹೊದಿಕೆ ಅಳವಡಿಸಿದ ಕಲ್ಮಕಾರು, ಮರ್ಕಂಜದ ಅಡಿಕೆ ತೋಟಗಳಿಗೆ ಭೇಟಿ -ಅಧ್ಯಯನ | ರೋಗನಿರೋಧಕ ತಳಿ ಅಭಿವೃದ್ಧಿಯತ್ತ ಚಿತ್ತ

Areca_3
Ad Widget

Ad Widget

Ad Widget

ಅಡಿಕೆ ಹಳದಿ ಎಲೆರೋಗ ವಿಸ್ತರಣೆ ತಡೆಗೆ ಹಾಗೂ ಹಳದಿ ಎಲೆ ರೋಗ ಬಾಧಿತ ಅಡಿಕೆ ಮರಗಳಿಗೆ ಪೋಷಕಾಂಶಗಳ ನಿರ್ವಹಣೆಯ ದೃಷ್ಟಿಯಿಂದ ಪ್ಲಾಸ್ಟಿಕ್‌ ಹೊದಿಕೆಗಳನ್ನು ಅಳವಡಿಕೆ ಮಾಡಿದ್ದ ತೋಟಗಳನ್ನು ಸಿಪಿಸಿಆರ್‌ಐ ವಿಜ್ಞಾನಿಗಳು ಅ 11 ರಂದು ವೀಕ್ಷಣೆ ಮಾಡಿದರು ಹಾಗೂ ಅಧ್ಯಯನ ವರದಿಯ ಬಗ್ಗೆ ಬೆಳೆಗಾರರಿಗೆ ಮಾಹಿತಿ ನೀಡಿದರು. ಸದ್ಯದ ಅಧ್ಯಯನ ವರದಿಯ ಪ್ರಕಾರ ಫಲಿತಾಂಶವೂ ಸಕಾರತ್ಮಕವಾಗಿ ಬಂದಿದೆ

Ad Widget

ಅಡಿಕೆ ಹಳದಿ ಎಲೆರೋಗ ಬಾಧಿತ ಪ್ರದೇಶಗಳಲ್ಲಿ ಅಧ್ಯಯನ ಹಾಗೂ ಸಂಶೋಧನೆಯ ದೃಷ್ಟಿಯಿಂದ ಸಿಪಿಸಿಆರ್‌ಐ ವಿಜ್ಞಾನಿಗಳ ತಂಡ ಅಡಿಕೆ ತೋಟದಲ್ಲಿ ಹಲವಾರು ವರ್ಷಗಳಿಂದ  ಪ್ಲಾಸ್ಟಿಕ್‌ ಹೊದಿಕೆ ಅಳವಡಿಕೆ ಮಾಡಿ ಪ್ರಯೋಗ ಮಾಡುತ್ತಿದೆ. ಇದರಭಾಗವಾಘಿ  ಐದು ವರ್ಷಗಳ ಹಿಂದೆ ಸುಳ್ಯ ತಾಲೂಕಿನ ಕಲ್ಮಕಾರಿನ ಒಂದು ತೋಟದಲ್ಲಿ ಹಾಗೂ ಮರ್ಕಂಜದ ಎರಡು ತೋಟ ಹಾಗೂ ಶೃಂಗೇರಿಯ ತೋಟದಲ್ಲಿ ಪ್ಲಾಸ್ಟಿಕ್‌ ಹೊದಿಕೆ ಹೊದಿಸಿ ಪೋಷಕಾಂಶಗಳ ನಿರ್ವಹಣೆ ಹಾಗೂ ಇತರ ಅಧ್ಯಯನ ನಡೆಸಿದ್ದರು.

Ad Widget

Ad Widget

Ad Widget

ಅಧ್ಯಯನ ವರದಿ

Ad Widget

 ಇದೀಗ ಐದು ವರ್ಷಗಳ ನಂತರ ಈ ಅಧ್ಯಯನ ವರದಿ ಪ್ರಕಾರ ಪ್ಲಾಸ್ಟಿಕ್‌ ಹೊದಿಕೆ ಅಳವಡಿಸಿದ ತೋಟಗಳಲ್ಲಿ ಅಡಿಕೆ ಹಳದಿ ಎಲೆರೋಗ ವಿಸ್ತರಣೆ ಕಡಿಮೆಯಾಗಿದೆ ಹಾಗೂ ಪೋಷಕಾಂಶಗಳು ಮರಗಳಿಗೆ ಸರಿಯಾಗಿ ಲಭ್ಯವಾಗುವುದರಿಂದ ಮರಗಳ ಬೇರು ಆರೋಗ್ಯಯುತವಾಗಿರುವುದು ಕಂಡುಬಂದಿದೆ ಎಂದು ವಿಜ್ಞಾನಿಗಳ ತಂಡ ಕಂಡುಕೊಂಡಿದೆ.

Ad Widget

Ad Widget

ರೋಗ ನಿರೋಧಕ ತಳಿ ಅಭಿವೃದ್ಧಿಯತ್ತ ಚಿತ್ತ:


ಇದೀಗ ಈ ಅಧ್ಯಯನದ ಜೊತೆಗೆ ಅಡಿಕೆ ಹಳದಿ ಎಲೆರೋಗ ಪೀಡಿತ ಪ್ರದೇಶದಲ್ಲಿ ರೋಗ ನಿರೋಧಕ ತಳಿ ಅಭಿವೃದ್ಧಿ ಹಾಗೂ ಟಿಶ್ಯೂ ಕಲ್ಚರ್‌ ಗಿಡಗಳನ್ನೂ ಅಭಿವೃದ್ಧಿ ಮಾಡಲು ಸಿಪಿಸಿಆರ್‌ಐ ವಿಜ್ಞಾನಿಗಳು ಮುಂದೆ ಬಂದಿದ್ದಾರೆ ಎಂದು ಸಿಪಿಸಿಆರ್‌ಐ ನಿರ್ದೇಶಕಿ ಡಾ.ಅನಿತಾ ಕರುಣ್‌ ತಿಳಿಸಿದ್ದಾರೆ.


ಸೋಮವಾರ ಕಲ್ಮಕಾರಿನ ನವೀನ್‌ ದಂಬೆಕೋಡಿ ಅವರ ತೋಟ ಹಾಗೂ ಮರ್ಕಂಜದ ಪವಿತ್ರ ಗುಂಡಿ ಅವರ ಅಡಿಕೆ ತೋಟಗಳಿಗೆ ಅಳವಡಿಸಿದ್ದ ಪ್ಲಾಸ್ಟಿಕ್‌ ಹೊದಿಕೆಗಳನ್ನು ವಿಜ್ಞಾನಿಗಳ ತಂಡ ವೀಕ್ಷಿಸಿದರು. ಸಿಪಿಸಿಆರ್‌ಐ ವಿಜ್ಞಾನಿಗಳ ತಂಡದಲ್ಲಿ ಸಿಪಿಸಿಆರ್‌ಐ ಕಾಸರಗೋಡು ನಿರ್ದೇಶಕಿ ಡಾ.ಅನಿತಾ ಕರುಣ್‌ , ಸಮಾಜವಿಜ್ಞಾನ ವಿಭಾಗ ಮುಖ್ಯಸ್ಥ ಡಾ.ಮುರಳೀಧರನ್, ಬೆಳೆಉತ್ಪಾದನಾ ವಿಭಾಗದ ಮುಖ್ಯಸ್ಥ ಡಾ.ರವಿ ಭಟ್, ಬೆಳೆಸಂರಕ್ಷಣಾ ವಿಭಾಗದ ಮುಖ್ಯಸ್ಥ ಡಾ. ರವಿ ಭಟ್‌, ಬೆಳೆ ಉತ್ಪಾದನಾ ವಿಭಾಗದ ವಿಜ್ಞಾನಿ ಡಾ.ಭವಿಷ್ಯ ಇದ್ದರು.


ಈ ಸಂದರ್ಭ ಬೆಳೆಗಾರರೊಂದಿಗೆ ಮಾತುಕತೆ ನಡೆಸಿದ ವಿಜ್ಞಾನಿಗಳ ತಂಡ ಅಡಿಕೆ ಬೆಳೆಗಾರರ ಅಭಿಪ್ರಾಯ ಪಡೆದರು. ಈ ಸಂದರ್ಭ ಕಲ್ಮಕಾರು ಗ್ರಾಪಂ ಅಧ್ಯಕ್ಷ ಉದಯಕುಮಾರ್‌ ಕೊಪ್ಪಡ್ಕ, ಸಹಕಾರಿ ಯೂನಿಯನ್‌ ಅಧ್ಯಕ್ಷ ರಮೇಶ್‌ ದೇಲಂಪಾಡಿ, ಸ್ಥಳೀಯರಾದ ಕೆ ಸಿ ಸುಬ್ರಹ್ಮಣ್ಯ ಕೊಪ್ಪಡ್ಕ, , ಕೆಪಿ ಚಂದ್ರಶೇಖರ್‌ ಕೊಪ್ಪಡ್ಕ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ , ಬಾಲಕೃಷ್ಣ ಕೊಪ್ಪಡ್ಕ , ಮೋಹನ ಉಳುವಾಲು, ಡ್ಯಾನಿ ಆಲದಾಳು, ನರೇಂದ್ರ ಬಿಳಿಮಲೆ, ಗಂಗಾಧರ ಇಡ್ಯಡ್ಕ, ಮೊದಲಾದವರು ಇದ್ದರು.

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: