ಮಂಗಳೂರಿನಲ್ಲಿ ಮತ್ತೆ ದೈವಸ್ಥಾನಕ್ಕೆ ಅಪಚಾರ: ಬೈಕಂಪಾಡಿ ಕರ್ಕೇರ ಮೂಲಸ್ಥಾನದ ನಾಗಬ್ರಹ್ಮ, ನಂದಿ ವಿಗ್ರಹಗಳಿಗೆ ಹಾನಿ

Ad Widget

Ad Widget

Ad Widget

ಮಂಗಳೂರು, ಅ.17 : ಮಂಗಳೂರಿನಲ್ಲಿ ಮತ್ತೆ ಹಿಂದೂಗಳ ಶ್ರದ್ದಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ. ಬೈಕಂಪಾಡಿ ಕರ್ಕೇರ ಮೂಲ ಸ್ಥಾನ ಜರಂದಾಯ ದೈವಸ್ಥಾನ ಮತ್ತು ನಾಗನ ಬ್ರಹ್ಮ ಪೀಠವನ್ನು ದುಷ್ಕರ್ಮಿಗಳು ಹಾನಿಮಾಡಿದ್ದು ಭಾನುವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

Ad Widget

ಮುಂಜಾನೆ ದೈವಸ್ಥಾನಕ್ಕೆ ಭೇಟಿ ನೀಡಿದವರು ಹಾನಿಯಾದದ್ದು ಗಮನಿಸಿ ಸಂಬಂಧಪಟ್ಟವರಿಗೆ ತಿಳಿಸಿದ್ದಾರೆ.

Ad Widget

Ad Widget

Ad Widget

ಶಿಲಾಮಯ ನಾಗನ ಮೂರ್ತಿಯನ್ನು ಭಗ್ನ ಮಾಡಿದ್ದು, ಶಿಲೆಯಿಂದ ಮಾಡಲಾದ ನಂದಿಯ ವಿಗ್ರಹಕ್ಕೂ ಹಾನಿ‌ಮಾಡಿದ್ದಾರೆ. ಅದಲ್ಲದೆ ಕಪಾಟು ಒಡೆದು ಚೆಲ್ಲಾ ಪಿಲ್ಲಿ ಮಾದಿರುವುದರ ಜತೆಗೆ ದೈವಸ್ಥಾನದ ಹೊರಾಂಗಣದ ಗೇಟುಗಳನ್ನು ಮುರಿದು ಹಾಕಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳ ಮಹಜರು ಮಾಡಿದ್ದಾರೆ.
ಈ ಹಿಂದೆಯೂ ಮಂಗಳೂರು ಸುತ್ತಮುತ್ತಲ ದೈವ ಕ್ಷೇತ್ರಗಳಿಗೆ ಅಪಚಾರವೆಸಗಿ ದುಷ್ಕೃತ್ಯ ಮೆರೆಯಲಾಗಿತ್ತು. ಶಾಂತಿ ಭಂಗ ಮಾಡುವ ಇಂತಹಾ ಸಮಾಜ ಘಾತುಕರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಜರುಗಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Ad Widget

Leave a Reply

Recent Posts

ದೇಶದಲ್ಲಿ ಹಿಂದೂಗಳ ಶಕ್ತಿ ಹೇಗಿರಬೇಕೆಂದರೆ ಸರ್ಕಾರ ಹಿಂದೂಗಳ ಹೇಳಿಕೆಯಂತೆ ನಡೆಯಬೇಕು..! : ದೇವಸ್ಥಾನಗಳನ್ನು ಸರಕಾರಿಕರಣಗೊಳಿಸಿದಂತೆ ಮಸೀದಿಗಳನ್ನು ಏಕೆ ಮಾಡುವುದಿಲ್ಲ..? ಮಂದಿರ ಸಂಸ್ಕೃತಿ ರಕ್ಷಣೆ ಸಭೆಯಲ್ಲಿ ಚರ್ಚೆ – ಮುಂಬೈಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿನ ಭ್ರಷ್ಟಾಚಾರ ಬೆಳಕಿಗೆ ತಂದಿರುವ ಸುಪ್ರಸಿದ್ಧ ಸರ್ಜನ್ ರ ಪುಸ್ತಕ ಬಿಡುಗಡೆ

error: Content is protected !!
%d bloggers like this: