Uncategorized
ಮಂಗಳೂರು: ಹಾಡುಹಗಲು ನಡು ರಸ್ತೆಯಲ್ಲಿ ವ್ಯಕ್ತಿಗೆ ಚೂರಿ ಇರಿತ
ಉಳ್ಳಾಲ, ಅ.19: ಹಾಡುಹಗಲು ನಡು ರಸ್ತೆಯಲ್ಲಿ ವ್ಯಕ್ತಿಯೊಬ್ಬನಿಗೆ ಚೂರಿ ಇರಿದ ಘಟನೆ ಮಂಗಳೂರು ನಗರ ಹೊರವಲಯ ಉಳ್ಳಾಲದಲ್ಲಿ ನಡೆದಿದೆ. ಉಳ್ಳಾಲದ ಛೋಟಾ ಮಂಗಳೂರು ರಸ್ತೆಯಲ್ಲಿ ಇಂದು ಸಂಜೆ ವ್ಯಕ್ತಿಯೊಬ್ಬರಿಗೆ ಚೂರಿ ಇರಿಯಲಾಗಿದೆ.
ಉಳ್ಳಾಲದಲ್ಲಿ ಗ್ಯಾಸ್ ರಿಪೇರಿ ಅಂಗಡಿ ಇಟ್ಟುಕೊಂಡಿರುವ ಹರೀಶ್ ಎಂಬವರ ಮೇಲೆ ದುಷ್ಕರ್ಮಿಯೊಬ್ಬ ಚೂರಿ ಇರಿದು ಪರಾರಿಯಾಗಿದ್ದಾನೆ.
ಮೊಗವೀರಪಟ್ನ ನಿವಾಸಿ ವಿಶಾಲ್ ಎಂಬಾತ ಈ ಕೃತ್ಯ ನಡೆಸಿದ್ದಾನೆಂದು ತಿಳಿದುಬಂದಿದ್ದು ಗಾಯಾಳುವನ್ನು ತೊಕ್ಕೊಟ್ಟು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ವಯ್ಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೃತ್ಯ ನಡೆಸಲಾಗಿದೆ ಎಂದು ಶಂಕೆ ವ್ಯಕ್ತವಾಗಿದೆ. ಶಂಕಿತ ಆರೋಪಿ ವಿಶಾಲ್ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Uncategorized
ಮಠಂತಬೆಟ್ಟು ಗುಲಾಬಿ ಅನಂತ ರೈ ನಿಧನ
ಕೋಡಿಂಬಾಡಿ ಮಠಂತಬೆಟ್ಟು ಗುಲಾಬಿ ಅನಂತ ರೈ(88) ಯವರು ವಯೋಸಹಜ,ಅಲ್ಪಕಾಲದ ಅಸೌಖ್ಯದಿಂದಾಗಿ ಇಂದು (ಏ 23 ರಂದು ) ನಿಧನರಾದರು. ಇವರು ಮಠಂತಬೆಟ್ಟು ದೀ. ಪಟೇಲ್ ಅನಂತ ರೈಯವರ ಧರ್ಮಪತ್ನಿ.
ಮೃತರು ಹಲವು ದಶಕಗಳ ಹಿಂದೆ ಕೋಡಿಂಬಾಡಿ ಪಂಚಾಯತ್ ಪ್ರತಿನಿಧಿಯಾಗಿದ್ದರು,ಕೋಡಿಂಬಾಡಿ ವನಿತಾ ಸಮಾಜದ ಸ್ಥಾಪಕ ಸದಸ್ಯರಾಗಿದ್ದು,ಧಾರ್ಮಿಕ, ಶೈಕ್ಷಣಿಕ, ಸಾರ್ವಜನಿಕ ಕ್ಷೇತ್ರದಲ್ಲಿ ಜನಾನುರಾಗಿಯಾಗಿದ್ದರು.
ದಕ್ಷಿಣ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾದ ಮುರಳೀಧರ ರೈ ಮಠಂತಬೆಟ್ಟು, ಪುತ್ತೂರು ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯರಾದ ನಿರಂಜನ ರೈ ಮಠಂತಬೆಟ್ಟು,ಮತ್ತು ಕೃಷಿಕರಾದ ರಾಜಮಣಿ ರೈ ಯೆಂಬ ಮೂರು ಗಂಡು ಮಕ್ಕಳು, ಎರಡು ಹೆಣ್ಣು ಮಕ್ಕಳು ಹಾಗೂ ಅಳಿಯ, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿರುವರು.
ನಾಳೆ (ಏ 24 ರಂದು) ಸ್ವಗೃಹ ಮಠಂತಬೆಟ್ಟು ಮನೆಯಲ್ಲಿ ಅಂತ್ಯ ಸಂಸ್ಕಾರ ವಿಧಿವಿಧಾನ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
Uncategorized
ಸಂತೋ಼ಷ ವೈವಿಧ್ಯಮಯ ಮಿನುಗುವ ಚಿನ್ನದ ಹಬ್ಬ- ಮುಳಿಯ ಚಿನ್ನೋತ್ಸವಕ್ಕೆ ಚಾಲನೆ – ಹೊಸ ವಿನ್ಯಾಸಗಳನ್ನು ಅನಾವರಣ
ಪುತ್ತೂರು: 24 ವರ್ಷಗಳ ಹಿಂದೆ ವಜ್ರರತ್ನಗಳ ಪ್ರದರ್ಶನ ಹಬ್ಬದ ಮೂಲಕ ಗ್ರಾಹಕರಿಗೆ ಹತ್ತಿರವಾದ ಪ್ರಸಿದ್ದ ಚಿನ್ನಾಭರಣ ಮಳಿಗೆ ಪುತ್ತೂರಿನ ಮುಳಿಯ ಜ್ಯುವೆಲ್ಸ್ ನಲ್ಲಿ ಪ್ರತಿ ವರ್ಷ ಮುಳಿಯ ಚಿನ್ನೋತ್ಸವ ಆಯೋಜಿಸಲಾಗಿದ್ದು, ಈ ಬಾರಿಯ ಚಿನ್ನದ ಹಬ್ಬ ” ಮುಳಿಯ ಚಿನ್ನೋತ್ಸವ” ಕ್ಕೆ ಎ.22 ರಂದು ಚಾಲನೆ ನೀಡಲಾಯಿತು.
ಮೇ 20ರ ತನಕ ನಡೆಯುವ ಈ ಚಿನ್ನೋತ್ಸವವನ್ನು ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ ನ ಪ್ರೊ. ಡಾ. ಸೌಮ್ಯ ಅವರು ಉದ್ಘಾಟಿಸಿ ಚಾಲನೆ ನೀಡಿದರು. ಬಳಿಕ ಚಿನ್ನಾಭರಣದ ಹೊಸ ವಿನ್ಯಾಸಗಳನ್ನು ಅನಾವರಣಗೊಳಿಸಿದರು.
ಆಭರಣದಲ್ಲಿ ಹೊಸ ವಿನ್ಯಾಸದ ಆಕಾಂಕ್ಷೆಯನ್ನು ಮುಳಿಯ ಪೂರೈಸುತ್ತಿದೆ:
ಮುಳಿಯ ಚಿನ್ನೋತ್ಸವವನ್ನು ಉದ್ಘಾಟಿಸಿದ ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ ಇದರ ಪ್ರೊ. ಡಾ. ಸೌಮ್ಯ ಅವರು ಮಾತನಾಡಿ ನನ್ನ ಸುಮಾರು 30 ವರ್ಷದ ಅನುಭವದಲ್ಲಿ ಮುಳಿಯ ಜ್ಯುವೆಲ್ಸ್ನೊಂದಿಗೆ ಉತ್ತಮ ಸಂಬಂಧವಿದೆ. ಯಾಕೆಂದರೆ ನಮ್ಮ ಕುಟುಂಬ ಸಮೇತ ಇಲ್ಲಿನ ಗ್ರಾಹಕರಾಗಿದ್ದೇವೆ. ಇದಕ್ಕೆ ಕಾರಣ ಮುಳಿಯ ನಂಬಿಕೆಯನ್ನು ಉಳಿಸಿಕೊಂಡಿದೆ. ಇದರೊಂದಿಗೆ ಪ್ರತಿಯೊಬ್ಬರಿಗೂ ನನ್ನ ಆಭರಣ ಇತರರಿಗಿಂತ ಭಿನ್ನ ಹೊಸತನ ಹೊಸ ಶೈಲಿಯಲ್ಲಿರಬೇಕೆಂಬ ಆಸೆ ಇರುತ್ತದೆ. ಅದಕ್ಕೆ ತಕ್ಕಂತೆ ಮುಳಿಯ ಜ್ಯುವೆಲ್ಸ್ ಆ ಹೊಸತನದ ಆಕಾಂಕ್ಷೆಯನ್ನು ಪೂರೈಸುತ್ತಿದೆ ಎಂದ ಅವರು ಇದರ ಜೊತೆಗೆ ಸಿಬ್ಬಂದಿಗಳ ನಗುಮೊಗದ ಸೇವೆ ನಾವು ಚಿನ್ನಾಭರಣ ನೋಡಲು ಬಂದವರು ಖರೀದಿಸುವಷ್ಟರ ಮಟ್ಟಿಗೆ ಹೋಗುತ್ತೇವೆ ಎಂದರು.
ಚಿನ್ನೋತ್ಸವದಿಂದ ಗ್ರಾಹಕರಿಗೆ ಹೆಚ್ಚಿನ ಆಯ್ಕೆ ಲಭ್ಯ:
ಮುಳಿಯ ಜ್ಯುವೆಲ್ಸ್ʼನ ಆಡಳಿತ ನಿರ್ದೇಶಕ ಕೃಷ್ಣನಾರಾಯಣ ಮುಳಿಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ “ ಉತ್ಸವಗಳನ್ನು ಪುತ್ತೂರಿಗೆ ಪರಿಚಯಿಸಿದ್ದು ಮುಳಿಯದ ವಿಶೇಷತೆ. ಹಿಂದೆ ಗ್ರಾಹಕರು ಹೊಸ ಶೈಲಿಯ ಚಿನ್ನಾಭರಣ ನೋಡುವ ಆಸೆ ಇದ್ದರೂ ಅದನ್ನು ನೋಡಲು ಬರುತ್ತಿರಲಿಲ್ಲ. ಯಾಕೆಂದರೆ ಅಲ್ಲಿಗೆ ಹೋದರೆ ಏನಾದರೂ ಒಂದು ತೆಗೆದು ಕೊಳ್ಳಬೇಕಾದಿತು ಎಂಬ ಮನೋಭಾವನೆ ಇತ್ತು. ಈ ಕುರಿತು ಅರಿತ ಮುಳಿಯ ಸಂಸ್ಥೆ 2000 ಇಸವಿಯಲ್ಲಿ ಪ್ರಥಮವಾಗಿ ವಜ್ರೋತ್ಸವ ಎಂಬ ಪ್ರದರ್ಶನವನ್ನು ಮುಳಿಯದಲ್ಲಿ ಆರಂಭಿಸಲಾಯಿತು. ಈ ಪ್ರದರ್ಶನ ಚಿನ್ನದಾಭರಣ ನೋಡುವ ಗ್ರಾಹಕರಿಗೆ ಅನುಕೂಲವಾಯಿತು” ಎಂದರು.
ಇದೀಗ ಅದನ್ನು ಪ್ರತಿ ವರ್ಷ ಎರಡು ಬಾರಿ ಆಚರಿಸುತ್ತಾ ಬಂದಿದ್ದೇವೆ. ಈ ಚಿನ್ನೋತ್ಸವದಲ್ಲಿ ಗ್ರಾಹಕರಿಗೆ ಹೆಚ್ಚಿನ ಆಯ್ಕೆ ಸಿಗುತ್ತಿದೆ. ಸೇವೆಗಳು ಉತ್ತಮವಾಗಿರುತ್ತದೆ. ಪ್ರತಿಭಾರಿ ಹೊಸತನವನ್ನು ಪರಿಚಯಿಸುವುದು ನಮ್ಮ ವಿಶೇಷ. ಅದನ್ನು ಈ ಭಾರಿಯೂ ಮಾಡಿದ್ದೇವೆ. ಈ ಭಾರಿಯೂ 4 ವಿಶೇಷ ಹೊಸ ಶೈಲಿ ಆಭರಣವನ್ನು ಗ್ರಾಹಕರಿಗೆ ಪರಿಚಯ ಮಾಡಲಿದ್ದೇವೆ. ಹಾಗಾಗಿ ಗ್ರಾಹಕರು ಈ ಚಿನ್ನೋತ್ಸವದ ಪ್ರಯೋಜವನ್ನು ಪಡೆಯುವಂತೆ ವಿನಂತಿಸಿದರು.
ಮುಳಿಯ ಸಂಸ್ಥೆಯ ನಿರ್ದೇಶಕಿ ಅಶ್ವಿನಿ ಕೃಷ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸೌಮ್ಯ ಅತಿಥಿಯನ್ನು ಗೌರವಿಸಿದರು. ಕು.ಪೂಜಿತಾ ಪ್ರಾರ್ಥಿಸಿದರು. ಸಹಪ್ರಭಂದಕ ಯತೀಶ್ ಸ್ವಾಗತಿಸಿದರು. ಪ್ಲೋರ್ ಮೆನೆಜರ್ ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು. ಆನಂದ ಕುಲಾಲ್ ವಂದಿಸಿದರು. ಪ್ರಬಂಧಕ ರಾಘವೇಂದ್ರ ಪಾಟೀಲ್, ಪ್ರೊಡಕ್ಟ್ ಮೆನೇಜರ್ ಪ್ರಶಾಂತ್, ಮಾರುಕಟ್ಟೆ ಪ್ರಬಂಧಕ ಸಂಜೀವ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಸಿಬ್ಬಂದಿ ಮಹೇಂದ್ರ ಸಹಕರಿಸಿದರು.
Uncategorized
‘ಬಿಂದು’ ಸೇರಿದಂತೆ ಹಲವು ಪ್ಯಾಕ್ಟರಿಗಳಲ್ಲಿ ಮತಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್
ಪುತ್ತೂರು: ಪುತ್ತೂರಿನ ಪುರುಷರಕಟ್ಟೆ ಬಿಂದು ಫ್ಯಾಕ್ಟರಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ, ಸಿಬ್ಬಂಧಿಗಳ ಜೊತೆ ಮಾತುಕತೆ ನಡೆಸಿದರು. ಸಂಸ್ಥೆಯ ಎಂಡಿ ಸತ್ಯಶಂಕರ್ ಕೆ ಸ್ವಾಗತಿಸಿದರು.
ಚಂದಳಿಕೆ ವೆಂಕಟೇಶ್ವರ ಕ್ಯಾಶ್ಯೂ ಪ್ರಾಸೆಸಿಂಗ್, ಉಕ್ಕುಡ ಶ್ರೀ ಶಾರದಾ ಪ್ರಾಸೆಸರ್ಸ್ ಗೇರುಬೀಜ ಸಂಸ್ಕರಣಾ ಘಟಕ ಹಾಗೂ ನೆಹರುನಗರ ಮಾಸ್ಟರ್ ಪ್ಲಾನರಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಅವರು ಸಿಬ್ಬಂದಿಗಳ ಜೊತೆ ಮಾತುಕತೆ ನಡೆಸಿದರು.
ಮಾಸ್ಟರ್ ಪ್ಲಾನರಿಯ ಆನಂದ್ ಎಸ್.ಕೆ., ಅಕ್ಷಯ್ ಎಸ್.ಕೆ., ಅರ್ಜುನ್ ಎಸ್.ಕೆ., ಆಕಾಶ್ ಎಸ್.ಕೆ., ಪ್ರಭಾಕರ್ ಎಂಎನ್., ಚಂದ್ರಶೇಖರ್ ಭಟ್, ಕ್ಯಾಶ್ಯೂ ಫ್ಯಾಕ್ಟರಿ ಮ್ಯಾನೇಜರ್ ಅಮರನಾಥ್ ಪೈ, ದೀಕ್ಷಿತ್ ರಾಜ್, ಮಾಜಿ ಶಾಸಕಿ ಶಕುಂತಲ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೇಸ್ನ ಅಧ್ಯಕ್ಷರಾದ ಎಂಬಿ ವಿಶ್ವನಾಥ ರೈ, ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್, ಕೆಪಿಸಿಸಿ ಪ್ರ. ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ಸೇವಾದಳ ಜಿಲ್ಲಾಧ್ಯಕ್ಷ ಜೋಕಿಂ ಡಿಸೋಜಾ, ಮುರಳೀಧರ ರೈ ಮಠಂತಬೆಟ್ಟು, ಕೌಶಲ್ ಪ್ರಸಾದ್, ರಮಾನಾಥ ವಿಟ್ಲ, ವಿ.ಕೆ.ಎಂ. ಅಶ್ರಫ್, ಅಬ್ದುಲ್ ರಹಿಮಾನ್, ರಾಮಣ್ಣ ಪಿಲಿಂಜ, ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಶೆಟ್ಟಿ ಅಧ್ಯಕ್ಷ, ವಿಟ್ಲ ನಗರ ಉಸ್ತುವಾರಿ ಉಲ್ಲಾಸ್ ಕೋಟ್ಯಾನ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ, ವಿ.ಎ. ರಶೀದ್ ವಿಟ್ಲ, ಮೊದಲಾದವರು ಉಪಸ್ಥಿತರಿದ್ದರು.
ಬಿಂದು ಪ್ಯಾಕ್ಟರಿಗೆ ಹೋಗುವ ಸಂದರ್ಭ ಚುನಾವಣಾ ಉಸ್ತುವಾರಿ ಕಾವು ಹೇಮನಾಥ ಶೆಟ್ಟಿ, ಕೆಪಿಸಿಸಿ ಪ್ರ. ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ಅನಿತಾ ಹೇಮನಾಥ ಶೆಟ್ಟಿ, ಅಮಲ ರಾಮಚಂದ್ರ, ಮಹೇಶ್ ಅಂಕೊತ್ತಿಮಾರ್, ಪ್ರಸಾದ್ ಕೌಶಲ್ ಶೆಟ್ಟಿ, ಹೊನ್ನಪ್ಪ ಪೂಜಾರಿ, ವೇದನಾಥ ಸುವರ್ಣ, ಪ್ರಕಾಶ ಪುರುಷರಕಟ್ಟೆ, ರವಿಪ್ರಸಾದ್ ಶೆಟ್ಟಿ ಬನ್ನೂರು, ವಿಜಯ್ ಕುಮಾರ್ ಸೊರಕೆ, ಕೃಷ್ಣಪ್ರಸಾದ್ ಆಳ್ವ, ಮೊದಲಾದವರು ಉಪಸ್ಥಿತರಿದ್ದರು
-
ದಕ್ಷಿಣ ಕನ್ನಡ2 days ago
ವಿಟ್ಲ : ದುರಸ್ತಿಗೆ ಬಾವಿಗಿಳಿದ ಇಬ್ಬರು ಅಮ್ಲಜನಕ ಕೊರತೆಯಿಂದ ಮೃತ್ಯು
-
ಬಿಗ್ ನ್ಯೂಸ್1 day ago
NOTAForSoujanyaCase : ಸೌಜನ್ಯ ಪ್ರಕರಣ : ಟ್ವಿಟರ್ ಟ್ರೆಂಡಿಂಗಲ್ಲಿ 3ನೇ ಸ್ಥಾನ ಪಡೆದ ನೋಟಾ ಅಭಿಯಾನ
-
ಸಾಮಾಜಿಕ ಮಾಧ್ಯಮ9 hours ago
Hasana sex tape : ಚುನಾವಣೆ ಹೊಸ್ತಿಲಲ್ಲಿ ಹಾಸನ ಅಭ್ಯರ್ಥಿಯ ರಾಸಲೀಲೆಯ ಪೆನ್ ಡ್ರೈವ್ ಸೌಂಡ್ ! ಅಸಲಿಯ / ನಕಲಿಯ ತೀವ್ರ ಚರ್ಚೆ
-
ದಕ್ಷಿಣ ಕನ್ನಡ10 hours ago
Student harrased in bus ಉಪ್ಪಿನಂಗಡಿ: ಸ್ಲೀಪರ್ ಕೋಚ್ ಬಸ್ನಲ್ಲಿ ವಿದ್ಯಾರ್ಥಿನಿಗೆ ಜತೆ ಸಹ ಪ್ರಯಾಣಿಕನಿಂದ ಕಿರುಕುಳ – ಯುವತಿ ವ್ಯಗ್ರಗೊಳ್ಳುತ್ತಾಳೆ ಕಿಟಕಿಯಿಂದ ಹಾರಿ ಆರೋಪಿ ಪರಾರಿ – ಮುಂದೇನಾಯಿತು ?
-
ನಿಧನ ವಾರ್ತೆ1 day ago
Run over-ತಂದೆಯಿಂದಲೇ ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣ
-
ಅಪರಾಧ1 day ago
Online acquaintance-ಆನ್ ಲೈನ್ ಪರಿಚಿತ ಗೆಳೆಯ ಮಹಿಳೆಯ ಜೀವಾಂತ್ಯಗೊಳಿಸಿದ
-
ದಕ್ಷಿಣ ಕನ್ನಡ2 days ago
ಬೆಲೆಯೆರಿಕೆ ಗಗನಕ್ಕೆರಿದ ಸಂದರ್ಭ ಸಿದ್ದರಾಮಯ್ಯ ಸರಕಾರ ಗ್ಯಾರಂಟಿ ಮೂಲಕ ಮಹಿಳೆಯರ ನೆರವಿಗೆ ನಿಂತಿದೆ : ಅನಿತಾ ಹೇಮನಾಥ ಶೆಟ್ಟಿ
-
Uncategorized2 days ago
ಮಠಂತಬೆಟ್ಟು ಗುಲಾಬಿ ಅನಂತ ರೈ ನಿಧನ