Ad Widget

ತಂಡವೊಂದರಿಂದ ಮಹಿಳೆಯರು ಸಹಿತ ಮೂವರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ , ಮಾನಭಂಗಕ್ಕೆ ಯತ್ನ -ಪ್ರಕರಣದ ತನಿಖೆ ನಡೆಸುವಂತೆ ಪುತ್ತೂರು ನಗರ ಪೊಲೀಸರಿಗೆ ನ್ಯಾಯಾಲಯದ ಆದೇಶ

team-Fight
Ad Widget

Ad Widget

Ad Widget

ಎರಡು ತಿಂಗಳ ಹಿಂದೆ ಪುತ್ತೂರು ತಾಲೂಕಿನ ಬನ್ನೂರು  ಎಂಬಲ್ಲಿ ಕುಟುಂಬವೊಂದಕ್ಕೆ ತಂಡವೊಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ ಮಾನಭಂಗಕ್ಕೆ ಯತ್ನಿಸಿದ ಬಗ್ಗೆ ವ್ಯಕ್ತಿಯೊಬ್ಬರು ಪುತ್ತೂರು ನ್ಯಾಯಾಲಯಕ್ಕೆ ಸಲ್ಲಿಸಿದ ಖಾಸಗಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣದ ತನಿಖೆ ನಡೆಸುವಂತೆ ಪುತ್ತೂರು ನಗರ ಪೊಲೀಸರಿಗೆ ಸೂಚಿಸಿದೆ.

Ad Widget

Ad Widget

Ad Widget

Ad Widget

Ad Widget

ಬನ್ನೂರಿನ ನೀಪಾಣಿ ನಿವಾಸಿ ಕೃಷ್ಣಪ್ಪ ನ್ಯಾಯಾಲಯಕ್ಕೆ  ಖಾಸಗಿ ದೂರು ಸಲ್ಲಿಸಿದವರು. ಕೃತ್ಯವೂ ಅ 23 ರಂದು ರಾತ್ರಿ 8 ಗಂಟೆಗೆ ನಡೆದಿದೆ ಎಂದು ಆರೋಪಿಸಲಾಗಿದೆ. ಪ್ರಶಾಂತ್, ಮಹೇಶ, ಜಗದೀಶ ಮತ್ತು  ಸಂತೋಷ್  ಎಂಬ ನಾಲ್ವರು ಆರೋಪಿಗಳ ತಂಡ ಈ ಕುಕ್ರತ್ಯ ಎಸಗಿರುವುದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ  

Ad Widget

Ad Widget

Ad Widget

Ad Widget

Ad Widget

ಏನಿದು ದೂರು

  ಕೃಷ್ಣಪ್ಪರವರು ಪತ್ನಿ ಹಾಗೂ  ತಾಯಿಯ ಜತೆ ನೀಪಾಣಿಯ ಮನೆಯಲ್ಲಿದ್ದ ವೇಳೆ  ಆರೋಪಿಗಳು ಅಲ್ಲಿಗೆ ಆಗಮಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮರದ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಇದನ್ನು ತಡೆಯಲು   ಪತ್ನಿ ಮತ್ತು ತಾಯಿಗೆ  ಕೈಯಿಂದ ಹಲ್ಲೆ ನಡೆಸಿ, ಪತ್ನಿಯ  ಮೈಗೆ ಕೈ ಹಾಕಿ  ಮಾನಭಂಗಕ್ಕೆ ಯತ್ನಿಸಿದ್ದಾರೆ ಮತ್ತು ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲ ಎಂಬುದಾಗಿ ಬೆದರಿಕೆ ಒಡ್ಡಿದ್ದಾರೆ ಎಂದು ಖಾಸಗಿ ದೂರಿನಲ್ಲಿ ವಿವರಿಸಲಾಗಿದೆ̤

Ad Widget

Ad Widget

Ad Widget

Ad Widget

 ಕೃತ್ಯ ಎಸಗಿದ ಆರೋಪಿಗಳ ವಿರುದ್ದ  ಭಾರತೀಯ ದಂಡ ಸಂಹಿತೆಯ ಕಲಂ 323, 324, 352, 354, 503, 504, 506 ಸಹವಾಚ್ಯ ಕಲಂ 34 ರಡಿಯಲ್ಲಿ  ಪ್ರಕರಣ ದಾಖಲಿಸಿ  ಆರೋಪಿಗಳ  ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರುದಾರರು ತಮ್ಮ ವಕೀಲರ ಮೂಲಕ   ಪುತ್ತೂರಿನ  ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ  ದೂರು ಸಲ್ಲಿಸಿದಾರೆ.

 ದೂರುದಾರರ ಪರ ವಾದ ಆಲಿಸಿದ ಮಾನ್ಯ ನ್ಯಾಯಾಲಯ ಈ ಕುರಿತಂತೆ ತನಿಖೆ ನಡೆಸಲು ಪುತ್ತೂರು ನಗರ ಠಾಣಾಧಿಕಾರಿಗಳಿಗೆ ಆದೇಶಿಸಿದೆ.  ದೂರುದಾರರ ಪರ ಚಾಣಕ್ಯ ಲಾ ಚೇಂಬರ್ಸ್ ನ ನ್ಯಾಯವಾದಿಗಳಾದ ಶ್ಯಾಮ್ ಪ್ರಸಾದ್ ಕೈಲಾರ್, ಚೇತನಾ ವಿ.ಎನ್, ವಿಮಲೇಶ್ ಸಿಂಗಾರಕೋಡಿ ಮತ್ತು ಅಂಕಿತ ಶರ್ಮ ವಾದಿಸಿದ್ದರು.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: