ಅಪರಾಧ
ತಂಡವೊಂದರಿಂದ ಮಹಿಳೆಯರು ಸಹಿತ ಮೂವರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ , ಮಾನಭಂಗಕ್ಕೆ ಯತ್ನ -ಪ್ರಕರಣದ ತನಿಖೆ ನಡೆಸುವಂತೆ ಪುತ್ತೂರು ನಗರ ಪೊಲೀಸರಿಗೆ ನ್ಯಾಯಾಲಯದ ಆದೇಶ
ಎರಡು ತಿಂಗಳ ಹಿಂದೆ ಪುತ್ತೂರು ತಾಲೂಕಿನ ಬನ್ನೂರು ಎಂಬಲ್ಲಿ ಕುಟುಂಬವೊಂದಕ್ಕೆ ತಂಡವೊಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ ಮಾನಭಂಗಕ್ಕೆ ಯತ್ನಿಸಿದ ಬಗ್ಗೆ ವ್ಯಕ್ತಿಯೊಬ್ಬರು ಪುತ್ತೂರು ನ್ಯಾಯಾಲಯಕ್ಕೆ ಸಲ್ಲಿಸಿದ ಖಾಸಗಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣದ ತನಿಖೆ ನಡೆಸುವಂತೆ ಪುತ್ತೂರು ನಗರ ಪೊಲೀಸರಿಗೆ ಸೂಚಿಸಿದೆ.
ಬನ್ನೂರಿನ ನೀಪಾಣಿ ನಿವಾಸಿ ಕೃಷ್ಣಪ್ಪ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದವರು. ಕೃತ್ಯವೂ ಅ 23 ರಂದು ರಾತ್ರಿ 8 ಗಂಟೆಗೆ ನಡೆದಿದೆ ಎಂದು ಆರೋಪಿಸಲಾಗಿದೆ. ಪ್ರಶಾಂತ್, ಮಹೇಶ, ಜಗದೀಶ ಮತ್ತು ಸಂತೋಷ್ ಎಂಬ ನಾಲ್ವರು ಆರೋಪಿಗಳ ತಂಡ ಈ ಕುಕ್ರತ್ಯ ಎಸಗಿರುವುದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ
ಏನಿದು ದೂರು
ಕೃಷ್ಣಪ್ಪರವರು ಪತ್ನಿ ಹಾಗೂ ತಾಯಿಯ ಜತೆ ನೀಪಾಣಿಯ ಮನೆಯಲ್ಲಿದ್ದ ವೇಳೆ ಆರೋಪಿಗಳು ಅಲ್ಲಿಗೆ ಆಗಮಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮರದ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಇದನ್ನು ತಡೆಯಲು ಪತ್ನಿ ಮತ್ತು ತಾಯಿಗೆ ಕೈಯಿಂದ ಹಲ್ಲೆ ನಡೆಸಿ, ಪತ್ನಿಯ ಮೈಗೆ ಕೈ ಹಾಕಿ ಮಾನಭಂಗಕ್ಕೆ ಯತ್ನಿಸಿದ್ದಾರೆ ಮತ್ತು ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲ ಎಂಬುದಾಗಿ ಬೆದರಿಕೆ ಒಡ್ಡಿದ್ದಾರೆ ಎಂದು ಖಾಸಗಿ ದೂರಿನಲ್ಲಿ ವಿವರಿಸಲಾಗಿದೆ̤
ಕೃತ್ಯ ಎಸಗಿದ ಆರೋಪಿಗಳ ವಿರುದ್ದ ಭಾರತೀಯ ದಂಡ ಸಂಹಿತೆಯ ಕಲಂ 323, 324, 352, 354, 503, 504, 506 ಸಹವಾಚ್ಯ ಕಲಂ 34 ರಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರುದಾರರು ತಮ್ಮ ವಕೀಲರ ಮೂಲಕ ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ದೂರು ಸಲ್ಲಿಸಿದಾರೆ.
ದೂರುದಾರರ ಪರ ವಾದ ಆಲಿಸಿದ ಮಾನ್ಯ ನ್ಯಾಯಾಲಯ ಈ ಕುರಿತಂತೆ ತನಿಖೆ ನಡೆಸಲು ಪುತ್ತೂರು ನಗರ ಠಾಣಾಧಿಕಾರಿಗಳಿಗೆ ಆದೇಶಿಸಿದೆ. ದೂರುದಾರರ ಪರ ಚಾಣಕ್ಯ ಲಾ ಚೇಂಬರ್ಸ್ ನ ನ್ಯಾಯವಾದಿಗಳಾದ ಶ್ಯಾಮ್ ಪ್ರಸಾದ್ ಕೈಲಾರ್, ಚೇತನಾ ವಿ.ಎನ್, ವಿಮಲೇಶ್ ಸಿಂಗಾರಕೋಡಿ ಮತ್ತು ಅಂಕಿತ ಶರ್ಮ ವಾದಿಸಿದ್ದರು.
ಅಪರಾಧ
Bantwal-ಬಂಟ್ವಾಳ : ಬಾಲಕಿಯೊಂದಿಗೆ ಅನುಚಿತ ವರ್ತನೆ – ಯುವಕನ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ: ಪೊಳಲಿಯಲ್ಲಿ ಬಾಲಕಿಯನ್ನು ಅಪ್ಪಿ ಹಿಡಿದು ಅನುಚಿತವಾಗಿ ವರ್ತಿಸಿದ ಘಟನೆಯು ಎ. 24ರಂದು ನಡೆದಿದ್ದು, ಆರೋಪಿಯ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಡಕಬೈಲು ನಿವಾಸಿ ಅಮೀನ್ ಯಾನೆ ಮೊಹಮ್ಮದ್ ಅಮೀನ್ ಪ್ರಕರಣ ಆರೋಪಿಯಾಗಿದ್ದು, ಆತ ಬಾಲಕಿಯ ಹಿಂದಿನಿಂದ ಬಂದು ಜೋರಾಗಿ ಎದೆ ಭಾಗವನ್ನು ಅಪ್ಪಿ, ಕೈಯನ್ನು ಬಲವಾಗಿ ಹಿಡಿದು ತಿರುಗಿ ನೋಡಲು ಕೂಡ ಅವಕಾಶ ನೀಡದೆ ನಿನ್ನ ಮೊಬೈಲ್ ನಂಬರ್ ಕೊಡಬೇಕು, ಇಲ್ಲದಿದ್ದರೇ ನಿನ್ನನ್ನು ರೇಪ್ ಮಾಡದೇ ಬಿಡುವುದಿಲ್ಲ, ನೀನು ನನಗೆ ಬೇಕು ಎಂದು ಹೇಳಿದಾಗ ನೊಂದ ಬಾಲಕಿಯು ಬೊಬ್ಬೆ ಹಾಕಿದ್ದಾಳೆ.
ಈ ವೇಳೆ ಸಂಬಂಧಿಕನೋರ್ವ ಬರುವುದನ್ನು ನೋಡಿ ಆರೋಪಿಯು ಸ್ಕೂಟರ್ನಲ್ಲಿ ಪರಾರಿಯಾಗಿದ್ದಾನೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ತನಿಖೆ ನಡೆಸುತ್ತಿದ್ದಾರೆ.
ಅಪರಾಧ
Online acquaintance-ಆನ್ ಲೈನ್ ಪರಿಚಿತ ಗೆಳೆಯ ಮಹಿಳೆಯ ಜೀವಾಂತ್ಯಗೊಳಿಸಿದ
ಬೆಂಗಳೂರು: ಕೊಡಿಗೇಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಎಂ. ಶೋಭಾ (48) ಕೊಲೆ ಪ್ರಕರಣದ ಆರೋಪಿ ನವೀನ್ ಗೌಡ (28) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ನವೀನ್ ಗೌಡ, ನಗರದ ಸಾಫ್ಟ್ವೇರ್ ಕಂಪನಿಯೊಂದರ ಉದ್ಯೋಗಿ. ಕೊಡಿಗೇಹಳ್ಳಿ ಬಳಿಯ ಗಣೇಶ ನಗರದ ಶೋಭಾ ಅವರನ್ನು ಏ. 18ರಂದು ಕೊಲೆ ಮಾಡಿ ಪರಾರಿಯಾಗಿದ್ದ.
ಶೋಭಾ ಮಗಳು ನೀಡಿದ್ದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಸೆರೆ ಹಿಡಿಯಲಾಗಿದೆ’ ಎಂದು ಪೊಲೀಸರು ಹೇಳಿದರು. ಶೋಭಾ ಅವರು ವಾಹನ ಚಾಲನಾ ತರಬೇತಿ ಶಾಲೆ ನಡೆಸುತ್ತಿದ್ದರು. ಎರಡನೇ ಮಗಳ ಜೊತೆ ನೆಲೆಸಿದ್ದರು. ಅವರ ಪತಿ ಹಾಗೂ ಮೊದಲ ಮಗಳು ಪ್ರತ್ಯೇಕವಾಗಿ ವಾಸವಿದ್ದರು. ಏ. 18ರಂದು ಬೆಳಿಗ್ಗೆ ಎರಡನೇ ಮಗಳು ತಮ್ಮ ಪತಿ ಮನೆಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಮನೆಗೆ ಬಂದಿದ್ದ ನವೀನ್ ಗೌಡ, ಶೋಭಾ ಅವರನ್ನು ಕತ್ತು ಹಿಸುಕಿ ಕೊಂದಿದ್ದನೆಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದರು.
ಸಾಮಾಜಿಕ ಮಾಧ್ಯಮದಿಂದ ಪರಿಚಯ: ‘ಶೋಭಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಖಾತೆ ಹೊಂದಿದ್ದರು. ಅದೇ ಖಾತೆಗೆ ಆರೋಪಿ ನವೀನ್ ರಿಕ್ವೆಸ್ಟ್ ಕಳುಹಿಸಿದ್ದ. ಅದನ್ನು ಶೋಭಾ ಸ್ವೀಕರಿಸಿದ್ದರು. ನಂತರ, ಇಬ್ಬರೂ ಪರಸ್ಪರ ಚಾಟಿಂಗ್ ಮಾಡಲಾರಂಭಿಸಿದ್ದರು ಎಂದು ಪೊಲೀಸರು ಹೇಳಿದರು.
ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡಿದ್ದ ಇಬ್ಬರೂ ಮಾತುಕತೆ ಆರಂಭಿಸಿದ್ದರು. ಇಬ್ಬರ ನಡುವೆ ಸಲುಗೆಯೂ ಬೆಳೆದಿತ್ತು ಎಂಬ ಮಾಹಿತಿ ಇದೆ. ಭೇಟಿಯಾಗುವುದಾಗಿ ಹೇಳಿದ್ದ ನವೀನ್, ಕೆಲ ದಿನಗಳ ಹಿಂದೆಯಷ್ಟೇ ಶೋಭಾ ಅವರ ಮನೆಗೆ ಬಂದು ಹೋಗಿದ್ದ. ಏ. 18ರಂದು ಎರಡನೇ ಬಾರಿ ಮನೆಗೆ ಬಂದಿದ್ದ ನವೀನ್ ಹಾಗೂ ಶೋಭಾ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ’ ಎಂದು ತಿಳಿಸಿದರು.
ಕೊಲೆ ನಂತರ ಆರೋಪಿ ನವೀನ್, ಶೋಭಾ ಅವರ ಕಾರಿನಲ್ಲಿಯೇ ಸ್ಥಳದಿಂದ ಪರಾರಿಯಾಗಿದ್ದ. ಸಲುಗೆ ಕಾರಣಕ್ಕೆ ಈ ಕೊಲೆ ನಡೆದಿರುವ ಮಾಹಿತಿ ಇದೆ’ ಎಂದು ಪೊಲೀಸರು ಹೇಳಿದರು.
ಅಪರಾಧ
Everest fish curry-ಎವರೆಸ್ಟ್ ಫಿಶ್ಕರಿ ಮಸಾಲಾದಲ್ಲಿ ಎಥಿಲಿನ್ ಆಕ್ಸೆಡ್ ಪತ್ತೆ
ಸಿಂಗಾಪುರ: ಭಾರತದ ಜನಪ್ರಿಯ ಉತ್ಪನ್ನ `ಎವರೆಸ್ಟ್ ಫಿಶ್ಕರಿ ಮಸಾಲಾ’ದಲ್ಲಿ ಅನುಮತಿಸಿರುವುದಕ್ಕಿಂತ ಅಧಿಕ ಮಟ್ಟದ ಎಥಿಲಿನ್ ಆಕ್ಸೆಡ್ ರಾಸಾಯನಿಕವಿದೆ ಎಂಬ ಕಾರಣಕ್ಕೆ ಈ ಮಸಾಲಾ ಉತ್ಪನ್ನವನ್ನು ಮಾರುಕಟ್ಟೆಯಿಂದ ಹಿಂಪಡೆಯುವಂತೆ ಸಿಂಗಾಪುರ ಆದೇಶಿಸಿದೆ.
ಎಥಿಲೀನ್ ಆಕ್ಸೆಡ್ ಅನ್ನು ಆಹಾರದಲ್ಲಿ ಬಳಸಲು ಅನುಮತಿಸಲಾಗಿಲ್ಲ ಮತ್ತು ಬ್ಯಾಕ್ಟಿರಿಯಾಗಳ ಮಾಲಿನ್ಯವನ್ನು ತಡೆಗಟ್ಟಲು ಕೃಷಿ ಉತ್ಪನ್ನಗಳ ಧೂಮೀಕರಣ(ಕೀಟನಿಯಂತ್ರಣದ ಒಂದು ವಿಧಾನ)ಕ್ಕೆ ಮಾತ್ರ ಬಳಸಲಾಗುತ್ತದೆ ಎಂದು ಸಿಂಗಾಪುರ ಫುಡ್ ಏಜೆನ್ಸಿಯ ಹೇಳಿಕೆ ತಿಳಿಸಿದ್ದು ಎವರೆಸ್ಟ್ ಫಿಶ್ಕರಿ ಮಸಾಲಾವನ್ನು ಆಮದು ಮಾಡಿಕೊಳ್ಳುವ ಎಸ್ಪಿ ಮುತ್ತಯ್ಯ ಆ್ಯಂಡ್ ಸನ್ಸ್ ಪ್ರೈ.ಲಿ. ಸಂಸ್ಥೆಗೆ ಸಿಂಗಾಪುರ ಮಾರುಕಟ್ಟೆಯಿಂದ ಉತ್ಪನ್ನವನ್ನು ತಕ್ಷಣ ವಾಪಾಸು ಪಡೆಯುವಂತೆ ಸೂಚಿಸಿದೆ.
-
ಸಾಮಾಜಿಕ ಮಾಧ್ಯಮ13 hours ago
Hasana sex tape : ಚುನಾವಣೆ ಹೊಸ್ತಿಲಲ್ಲಿ ಹಾಸನ ಅಭ್ಯರ್ಥಿಯ ರಾಸಲೀಲೆಯ ಪೆನ್ ಡ್ರೈವ್ ಸೌಂಡ್ ! ಅಸಲಿಯ / ನಕಲಿಯ ತೀವ್ರ ಚರ್ಚೆ
-
ದಕ್ಷಿಣ ಕನ್ನಡ14 hours ago
Student harrased in bus ಉಪ್ಪಿನಂಗಡಿ: ಸ್ಲೀಪರ್ ಕೋಚ್ ಬಸ್ನಲ್ಲಿ ವಿದ್ಯಾರ್ಥಿನಿಗೆ ಜತೆ ಸಹ ಪ್ರಯಾಣಿಕನಿಂದ ಕಿರುಕುಳ – ಯುವತಿ ವ್ಯಗ್ರಗೊಳ್ಳುತ್ತಾಳೆ ಕಿಟಕಿಯಿಂದ ಹಾರಿ ಆರೋಪಿ ಪರಾರಿ – ಮುಂದೇನಾಯಿತು ?
-
ಬಿಗ್ ನ್ಯೂಸ್1 day ago
NOTAForSoujanyaCase : ಸೌಜನ್ಯ ಪ್ರಕರಣ : ಟ್ವಿಟರ್ ಟ್ರೆಂಡಿಂಗಲ್ಲಿ 3ನೇ ಸ್ಥಾನ ಪಡೆದ ನೋಟಾ ಅಭಿಯಾನ
-
ಅಪರಾಧ1 day ago
Online acquaintance-ಆನ್ ಲೈನ್ ಪರಿಚಿತ ಗೆಳೆಯ ಮಹಿಳೆಯ ಜೀವಾಂತ್ಯಗೊಳಿಸಿದ
-
ನಿಧನ ವಾರ್ತೆ1 day ago
Run over-ತಂದೆಯಿಂದಲೇ ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣ
-
ನಿಧನ ವಾರ್ತೆ12 hours ago
Bhagavata Subramanya Dhareshwara-ಹಾಡು ನಿಲ್ಲಿಸಿದ ಬಡಗುತಿಟ್ಟಿನ ಗಾನ ಕೋಗಿಲೆ – ಯಕ್ಷಗಾನದ ಹಿರಿಯ ಭಾಗವತ ಸುಬ್ರಮಣ್ಯ ಧಾರೇಶ್ವರ ಇನ್ನಿಲ್ಲ
-
ಮಂಗಳೂರು12 hours ago
Janardhana Poojary-ಹಿಂದುತ್ವದ ಅಮಲಿನಲ್ಲಿ ಹಿಂದುಳಿದ ವರ್ಗದ ಯುವಕರು ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಮೇಲ್ವರ್ಗದವರು ಅಧಿಕಾರ ನಡೆಸುತ್ತಿದ್ದಾರೆ- ಇದಕ್ಕೆಲ್ಲ ತಿಲಾಂಜಲಿ ನೀಡುವ ಕೆಲಸ ಪದ್ಮರಾಜ್ ಆರ್ ಪೂಜಾರಿಯನ್ನು ಗೆಲ್ಲಿಸುವ ಮೂಲಕ ಆಗಬೇಕಿದೆ :ಜನಾರ್ದನ ಪೂಜಾರಿ
-
ದಕ್ಷಿಣ ಕನ್ನಡ2 days ago
ಬೆಲೆಯೆರಿಕೆ ಗಗನಕ್ಕೆರಿದ ಸಂದರ್ಭ ಸಿದ್ದರಾಮಯ್ಯ ಸರಕಾರ ಗ್ಯಾರಂಟಿ ಮೂಲಕ ಮಹಿಳೆಯರ ನೆರವಿಗೆ ನಿಂತಿದೆ : ಅನಿತಾ ಹೇಮನಾಥ ಶೆಟ್ಟಿ