Ad Widget

ಮಂಗಳೂರಿನಲ್ಲಿ ಕಾನೂನು ವಿದ್ಯಾರ್ಥಿನಿಗೆ ವಕೀಲ ರಾಜೇಶ ಭಟ್ ರಿಂದ ಲೈಂಗಿಕ ಕಿರುಕುಳ ಪ್ರಕರಣ – ಆರೋಪಿಗೆ ತಲೆಮರೆಸಿಕೊಳ್ಳಲು ನೆರವಾದ ಆರೋಪದಲ್ಲಿ ಮಂಗಳೂರಿನ ವ್ಯಕ್ತಿಯ ಬಂಧನ

WhatsApp Image 2021-10-28 at 09.23.01
Ad Widget

Ad Widget

Ad Widget

ಮಂಗಳೂರು :  ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಮುಖ ಆರೋಪಿ ರಾಜೇಶ್ ಭಟ್ ಎಂಬವರು ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಡಿ ಮಂಗಳೂರಿನ ನಿವಾಸಿಯೊಬ್ಬರನ್ನು ಪೊಲೀಸರು ಅ 27 ರಂದು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

 ಆರೋಪಿ ರಾಜೇಶ್ ಭಟ್ ಅವರ ಸಹಾಯಕರಾಗಿದ್ದ ಮಂಗಳೂರಿನ ಬೊಂದೇಲ್ ನಿವಾಸಿ ಅನಂತ ಭಟ್ (48) ಬಂಧಿತ ಆರೋಪಿ. ಅ 18 ರಂದು ಸಂತ್ರಸ್ತ ವಿದ್ಯಾರ್ಥಿನಿಯೂ ರಾಜೇಶ್‌ ಭಟ್‌ ವಿರುದ್ದ ಮಹಿಳಾ ಠಾಣೆಗೆ ದೂರು ನೀಡಿದ್ದರು. ಆ ಬಳಿಕ ಆರೋಪಿಯೂ ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

Ad Widget

ಸದ್ಯ ಪೊಲೀಸರು ಬಂಧಿಸಿರುವ ಆರೋಪಿ ಅನಂತಭಟ್‌ ಆರೋಪಿ ರಾಜೇಶ್ ಭಟ್ ರವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ, ಪ್ರಕರಣ ದಾಖಲಾಗುತ್ತಲೇ, ಆತನನ್ನು ವಾಹನದಲ್ಲಿ ದೂರದ ಸ್ಥಳಕ್ಕೆ ಬಿಟ್ಟು ತಲೆಮರೆಸಿಕೊಳ್ಳಲು ಸಹಕರಿಸಿದ್ದಾರೆ. ಅಲ್ಲದೇ, ರಾಜೇಶ್‌ ಭಟ್‌ ಬಳಸುತ್ತಿದ್ದ ಕಾರು ಮತ್ತು ಮೊಬೈಲ್ ಫೋನ್ ಬಚ್ಚಿಟ್ಟಿದ್ದಾರೆ  ಎಂದು ಪೊಲೀಸರು ಆರೋಪಿಸಿದ್ದಾರೆ.

ರಾಜೇಶ್‌ ಭಟ್‌

ಅನಂತ್‌ ಭಟ್‌ ಬಂಧನದ ಬಳಿಕ ಆತನ ಮೂಲಕ ರಾಜೇಶ್ ಭಟ್ ರವರ Toyota Etios ಕಾರು ಮತ್ತು ಮೊಬೈಲ್ ಫೋನ್ ನ್ನು ವಶಪಡಿಸಿಕೊಳ್ಳಲಾಗಿದೆ  ಎಂದು ತಿಳಿದು ಬಂದಿದೆ.  ಇಡೀ ಪ್ರಕರಣದಲ್ಲಿ ಅನಂತ್ ಭಟ್ ರವರ ಪಾತ್ರವನ್ನು ತಿಳಿದುಕೊಳ್ಳಲು ಹಾಗೂ ಪ್ರಮುಖ ಆರೋಪಿ ರಾಜೇಶ್ ಭಟ್ ರವರನ್ನು ಪತ್ತೆ ಹಚ್ಚುವ ಸಲುವಾಗಿ ದಸ್ತಗಿರಿ ಮಾಡಲಾಗಿರುತ್ತದೆ ಎಂದು ಹೇಳಲಾಗಿದೆ.

Ad Widget

Ad Widget

Ad Widget

Ad Widget
ಅನಂತ್‌ ಭಟ್‌

ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಅಚಾರ್ಯ ಎಂಬ ಮಹಿಳೆಯ ಸಹಿತ  ಮೂವರನ್ನು  ಬಂಧಿಸಿದು , ಅನಂತ್‌ ಭಟ್‌ ದಸ್ತಗಿರಿ ನಾಲ್ಕನೇಯದಾಗಿರುತ್ತಾದೆ. ಜೊತೆಗೆ ಇಬ್ಬರು ಪೊಲೀಸ್‌ ಅಧಿಕಾರಿಗಳನ್ನು ತನಿಖೆಯಲ್ಲಿ ನಿರ್ಲಕ್ಷ್ಯ ವಹಿಸಿದ ಆರೋಪದಡಿ ಅಮಾನತುಗೊಳಿಸಲಾಗಿದೆ

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: