ವರದಿಗಳು
ಪುತ್ತೂರು : ರೂ. 5 ಲಕ್ಷ ಮೌಲ್ಯದ ಚಿನ್ನಾಭರಣ ದಾರಿ ಮಧ್ಯೆ ಮಿಸ್ಸಿಂಗ್- ಠಾಣೆಗೆ ದೂರು
ಪುತ್ತೂರು: ಅಕ್ಕಸಾಲಿಗರೊಬ್ಬರು ಮನೆಯಿಂದ ತಾನು ಕೆಲಸ ಮಾಡುವ ಸ್ಥಳಕ್ಕೆ ತೆಗೆದುಕೊಂಡು ಹೋಗುತಿದ್ದ ಅಂದಾಜು ಐದು ಲಕ್ಷ ಮೌಲ್ಯದ ಚಿನ್ನ ಹಾಗೂ ಅಭರಣಗಳನ್ನು ದಾರಿ ಮಧ್ಯೆ ಕಳಕೊಂಡಿರುವ ಬಗ್ಗೆ ಅ 28 ರಂದು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.
ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಪುತ್ತಿಲ ನಿವಾಸಿ ವಾದಿರಾಜ ದೂರು ನೀಡಿದವರು.
ವಾದಿರಾಜ ರವರು ಅ.28 ರಂದು ತನ್ನ ಮೊಟ್ಟೆತ್ತಡ್ಕ ಆಗಿ ಪುತ್ತೂರಿಗೆ ಬರುತ್ತಿರುವ ವೇಳೆ ಚಿನ್ನದ
ಒಡವೆಗಳನ್ನು ಒಳಗೊಂಡ ಪ್ಲಾಸ್ಟಿಕ್ ತೊಟ್ಟೆ ಕಳೆದ ಹೋಗಿದೆ.
ಆ ಪ್ಲಾಸ್ಟಿಕ್ ಬ್ಯಾಗ್ ನಲ್ಲಿ ಕರಿಮಣಿ ಸರ, ಗುಂಡುಗಳು, ಚೌಕ ಪೀಸು, ಚೈನು, ಕರಿಮಣಿ ನೇಯಿಗೆ, ಚಿನ್ನದ ಚೂರುಗಳು, ದೊಡ್ಡ ಗುಂಡು, ಸರಿಗೆ, ಕೊತ್ತಂಬರಿ ಗುಂಡುಗಳು ಸೇರಿದಂತೆ ಒಟ್ಟು ಐದು ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳಿದ್ದವು ಎಂದು ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ವಾದಿರಾಜರವರು ಪುತ್ತೂರಿನ ಕೋರ್ಟು ರಸ್ತೆಯ ಬಳಿರುವ ಅಕ್ಷಯ ಕಾಂಪ್ಲೆಕ್ಸ್ ನಲ್ಲಿ ಚಿನ್ನದ ಕೆಲಸ ಮಾಡುವ ವರ್ಕ್ ಶಾಪ್ ಹೊಂದಿದ್ದು ಚಿನ್ನ ಸಿಕ್ಕಿದವರು ಅವರನ್ನು ಅಲ್ಲಿ ಸಂಪರ್ಕಿಸಬಹುದು ಅಥಾವ ಪುತ್ತೂರು ಪೊಲೀಸ್ ಠಾಣೆಗೆ ನೀಡಬಹುದಾಗಿದೆ
ಅಂತರ ರಾಜ್ಯ
Mungekar-ಮುಸ್ಲಿಮರಿಗೆ ದೇಶದ ಸಂಪತ್ತಿನಲ್ಲಿ ಮೊದಲ ಹಕ್ಕಿದೆ ಎಂದು ಸಿಂಗ್ ಹೇಳಿಲ್ಲ; ಮೋದಿಯವರ ಹೇಳಿಕೆ ಸುಳ್ಳು ಎಂದು ಕುಟುಕಿದ ಮುಂಗೇಕರ್
ಮುಂಬೈ: ಕಾಂಗ್ರೆಸ್ ನಾಯಕ, ಆರ್ಥಿಕ ತಜ್ಞ ಮತ್ತು ನೀತಿ ಆಯೋಗದ ಸದಸ್ಯರೂ ಆಗಿದ್ದ ಡಾ. ಬಾಲಚಂದ್ರ ಮುಂಗೇಕರ್ರವರು ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿಕೆ ನೀಡಿಲ್ಲ. ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಸುಳ್ಳು ಎಂದು ಹೇಳಿದ್ದಾರೆ.
ಡಾ. ಸಿಂಗ್ ಅವರ ಹೇಳಿಕೆಯ ಒಂದು ವಾಕ್ಯವನ್ನು ಪ್ರಸ್ತುತಪಡಿಸುವ ಮೂಲಕ ಮೋದಿ ಅವರು ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ತಮ್ಮ ರಾಜಕೀಯ ಹಿತಾಸಕ್ತಿಗಳನ್ನು ಈಡೇರಿಸಿಕೊಳ್ಳಲು ಮುಸ್ಲಿಂ ಸಮುದಾಯದಲ್ಲಿ ಅಸಮಾಧಾನವನ್ನು ಸೃಷ್ಟಿಸುವುದು ಬಿಜೆಪಿಯ ತಂತ್ರವಾಗಿದೆ. ಆದರೆ, ಜನರು ಮೋದಿ ಅವರ ಹೇಳಿಕೆಗಳನ್ನು ನಂಬುವುದಿಲ್ಲ ಎಂದು ಮುಂಬೈ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಮತ್ತು ರಾಜ್ಯಸಭೆಯ ಮಾಜಿ ಸದಸ್ಯ ಡಾ.ಮುಂಗೇಕರ್ ಹೇಳಿದ್ದಾರೆ.
ಯುಪಿಎ ಸರ್ಕಾರದ ಭಾಗವಾಗಿದ್ದ ಡಾ. ಮುಂಗೇಕರ್, ನರೇಂದ್ರ ಮೋದಿ ನೀಡಿರುವ ಹೇಳಿಕೆಯನ್ನು ತಳ್ಳಿ ಹಾಕಿದ್ದು, ಸತ್ಯವನ್ನು ಮುಂದಿಟ್ಟಿದ್ದಾರೆ.
2006ರ ಡಿಸೆಂಬರ್ 9ರಂದು ನಡೆದಿದ್ದ ರಾಷ್ಟ್ರೀಯ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ, ‘ದೇಶದ ದಲಿತರು, ಆದಿವಾಸಿಗಳು, ಒಬಿಸಿ, ಮಹಿಳೆಯರು, ಮಕ್ಕಳು ಅಭಿವೃದ್ಧಿಯ ಫಲವನ್ನು ಸವಿಯಬೇಕು ಮತ್ತು ಅಲ್ಪಸಂಖ್ಯಾತ ಸಮುದಾಯವೂ ಪ್ರಯೋಜನ ಪಡೆಯಬೇಕು’ ಎಂದು ಡಾ ಮನಮೋಹನ್ ಸಿಂಗ್ ಹೇಳಿದ್ದರು. ಅವರ ಹೇಳಿಕೆಯ ಅರ್ಥವೇನೆಂದರೆ, ಎಸ್ಸಿ ಎಸ್ಟಿ, ಒಬಿಸಿ, ಅಲ್ಪಸಂಖ್ಯಾತರು ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಹೊಂದಿದ್ದಾರೆ ಎಂಬುದಾಗಿತ್ತು. ಸಭೆಯ ನಂತರ ಡಾ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ಮತ್ತು ನಾನು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದೆವು. ಅಲ್ಪಸಂಖ್ಯಾತರು ಎಂದರೆ ಧಾರ್ಮಿಕ ಅಲ್ಪಸಂಖ್ಯಾತರು ಮಾತ್ರವಲ್ಲದೆ ಭಾಷಾ ಅಲ್ಪಸಂಖ್ಯಾತರು ಸಹ ಹೌದು. ಸಭೆಯಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಸೇರಿದಂತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು ಎಂದು ಡಾ. ಮುಂಗೇಕರ್ ಹೇಳಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ದೇಶದ ಸಂಪತ್ತಿನ ಮೇಲೆ ಮುಸ್ಲಿಮರಿಗೆ ಮೊದಲ ಹಕ್ಕಿರುತ್ತದೆ ಮತ್ತು ಅವರು ಹೆಚ್ಚು ಮಕ್ಕಳನ್ನು ಹೊಂದಿರುವುದರಿಂದ ಅದನ್ನು ಸಮುದಾಯದೊಳಗೆ ಹಂಚಿಕೆ ಮಾಡಲಾಗುತ್ತದೆ ಎಂದು ಸಿಂಗ್ ಹೇಳಿರುವುದಾಗಿ ಮೋದಿ ಈಗ ಹೇಳುತ್ತಿರುವುದು ಸರಿಯೇ? ಚುನಾವಣೆಯಲ್ಲಿ ಧಾರ್ಮಿಕ ತಿರುವು ನೀಡಲು ಅವರು ಹೀಗೆ ಹೇಳಿಕೆ ನೀಡಿದ್ದಾರೆ. ಪ್ರಧಾನಿ ಸ್ಥಾನದಲ್ಲಿರುವ ವ್ಯಕ್ತಿ ಈ ರೀತಿ ಹೇಳಿಕೆ ನೀಡುವುದು ಸೂಕ್ತವಲ್ಲ. 102 ಲೋಕಸಭಾ ಸ್ಥಾನಗಳಿಗೆ ಮೊದಲ ಹಂತದ ಮತದಾನ ನಡೆದಿದ್ದು, ಬಿಜೆಪಿ ಸೋಲುವ ಚಿತ್ರಣ ಸ್ಪಷ್ಟವಾಗಿದೆ. 40ರ ಗಡಿ ತಲುಪಲಾಗದೆ ಮೋದಿ ನಿರಾಸೆಗೊಂಡಿದ್ದಾರೆ’ಎಂದು ಮುಂಗೇಕರ್ ಕುಟುಕಿದ್ದಾರೆ.
ಅಂತರ ರಾಜ್ಯ
PM Modi-ಕಾಂಗ್ರೆಸ್ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತೆ- ಮಹಿಳೆಯರ ಚಿನ್ನ ಹಾಗೂ ಸಂಪತ್ತನ್ನು ಜಪ್ತಿ ಮಾಡ್ತಾರೆ : ಚುನಾವಣಾ ಸಭೆಯಲ್ಲಿ ಮೋದಿ ವಿವಾದತ್ಮಾಕ ಭಾಷಣ
‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂಪತ್ತಿನ ಸಮಾನ ಹಂಚಿಕೆ ಮಾಡಲಿದೆ’ ಎಂಬ ಕಾಂಗ್ರೆಸ್ ಪಕ್ಷದ ಭರವಸೆ ಹಾಗೂ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಏ.7ರಂದು ನೀಡಿದ್ದ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
“ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯು ಸಂಪತ್ತಿನ ಮರು ಹಂಚಿಕೆಯ ಪ್ರಸ್ತಾಪ ಮಾಡಿದೆ. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಸಹ ಕೆಲವು ವರ್ಷಗಳ ಹಿಂದೆ ದೇಶದ ಸಂಪತ್ತಿನ ಮೇಲೆ ಮುಸ್ಲಿಮರಿಗೆ ಮೊದಲ ಅಧಿಕಾರ ಎಂದಿದ್ದರು. ಇದರ ಅರ್ಥವೇನು,” ಎಂದು ಪ್ರಶ್ನಿಸಿದರು.
‘ಶ್ರಮದಿಂದ ಗಳಿಸಿದ ಸಂಪತ್ತನ್ನು ಕಿತ್ತುಕೊಳ್ಳುವ ಅಧಿಕಾರ ಯಾರಿಗಾದರೂ ಇದೆಯೇ? ಆದರೂ ಇದನ್ನು ಕಾಂಗ್ರೆಸ್ ಮಾಡಲಿದೆ. “ನಗರ ನಕ್ಸಲ್ ಮನಸ್ಥಿತಿಯನ್ನು ಹೊಂದಿರುವವರು ನಮ್ಮ ತಾಯಿ ಹಾಗೂ ಸಹೋದರಿಯರ ಮಂಗಲಸೂತ್ರವನ್ನೂ ಬಿಡುವುದಿಲ್ಲ. ಆ ಮಟ್ಟಕ ಇಳಿಯಲೂ ಅವರು ಹೇಸಿಗೆ ಪಡುವುದಿಲ್ಲ. ಬಡವರ ಅಭಿವೃದ್ಧಿ ಬಿಜೆಪಿಯ ಗುರಿಯಾಗಿದೆ. ಆದರೆ ಕಾಂಗ್ರೆಸ್ ನವರು ಭಯ, ಹಸಿವು ಮತ್ತು ಭ್ರಷ್ಟಾಚಾರವನ್ನು ಅಂಗಡಿಗಳಲ್ಲಿ ಮಾರಾಟ ಮಾಡುತ್ತಾರೆ.” ಎಂದು ಆರೋಪಿಸಿದರು.
ತಾಯಂದಿರು ಶ್ರಮದಿಂದ ಗಳಿಸಿ ಮಾಡಿಸಿಕೊಂಡಿರುವ ಚಿನ್ನದ ತಾಳಿ ಕಿತ್ತುಕೊಳ್ಳಲಾಗುತ್ತದೆ ಹಾಗೂ ಅದನ್ನು ‘ದೇಶದ ಸಂಪತ್ತಿನ ಮೇಲೆ ಮೊದಲ ಹಕ್ಕುದಾರರು ಮುಸ್ಲಿಮರು’ ಎಂದಿದ್ದ ಹಿಂದಿನ ಪ್ರಧಾನಿ ಮನಮೋಹನ ಸಿಂಗ್ ಅವರ ನೀತಿ ಯಂತೆ ಮುಸಲ್ಮಾನರು, ಒಳನುಸುಳುಕೋರರು ಹಾಗೂ ‘ಹೆಚ್ಚು ಮಕ್ಕಳಿದ್ದವರಿಗೆ’ ಹಂಚಲಾಗುತ್ತದೆ’ಎಂದು ಕಿಡಿಕಾರಿದ್ದಾರೆ. ರಾಜಸ್ಥಾನದಲ್ಲಿ ಭಾನುವಾರ ಬಿಜೆಪಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದರೆ ಎಲ್ಲರ ಆಸ್ತಿ ಸಮೀಕ್ಷೆ ಮಾಡುತ್ತೇವೆ ಎಂದು ಕಾಂಗ್ರೆಸ್ ಹೇಳುತ್ತದೆ.
‘ಹೆಚ್ಚು ಮಕ್ಕಳಿದ್ದವರಿಗೆ’ ನಿಮ್ಮ ಆಸ್ತಿ ಹೋಗುತ್ತೆ
ಕಾಂಗ್ರೆಸ್ ಗೆದ್ದರೆ ನಮ್ಮ ಮಾತೆಯರು ಹಾಗೂ ಸೋದರಿಯರ ಚಿನ್ನವನ್ನು ಜಪ್ತಿ ಮಾಡಲಾಗುತ್ತದೆ. ಹರಿದು ಹಂಚಲಾಗುತ್ತದೆ. ಯಾರಿಗೆ ಹಂಚಲಾಗುತ್ತದೆ? ಯಾರಿಗೆ ಹೆಚ್ಚು ಮಕ್ಕಳಿವೆಯೋ ಅವರಿಗೆ, ಅಂದರೆ ಒಳನುಸುಳುಕೋರರಿಗೆ ನಿಮ್ಮ ಸಂಪತ್ತು ಹೋಗುತ್ತದೆ. ಇದನ್ನು ನೀವು ಒಪ್ಪುತ್ತೀರಾ? – ನರೇಂದ್ರ ಮೋದಿ ಪ್ರಧಾನಿ
ಅಂತರ ರಾಜ್ಯ
Television-ದೂರದರ್ಶನವನ್ನು ಜಾಗತಿಕ ಬ್ರ್ಯಾಂಡ್ ಮಾಡಲು ಕೇಂದ್ರದ ಸಿದ್ದತೆ – ಚಿಹ್ನೆ ಬಣ್ಣ ಕಿತ್ತಳೆ ವರ್ಣಕ್ಕೆ ಬದಲಾವಣೆ -ಹೊಸ ಸುದ್ದಿ ಸಂಸ್ಥೆ ಆರಂಭಕ್ಕೆ ಪ್ಲಾನ್
ನವದೆಹಲಿ (ಏ.22): ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಮರಳಿ 3ನೇ ಸಲ ಅಧಿಕಾರಕ್ಕೆ ಬಂದಿದ್ದೇ ಆದಲ್ಲಿ ದೂರದರ್ಶನ ಮತ್ತು ಅದರ ಮಾತೃಸಂಸ್ಥೆ ಪ್ರಸಾರ ಭಾರತಿಗೆ ಹೊಸ ರೂಪ ನೀಡಲು ನಿರ್ಧರಿಸಲಾಗಿದೆ. ಚಿಹ್ನೆ ಬಣ್ಣ ಕಿತ್ತಳೆ ವರ್ಣಕ್ಕೆ ಬದಲಾವಣೆಯಾಗುವ ಮೂಲಕ ಸುದ್ದಿಯಲ್ಲಿರುವ ಕೇಂದ್ರ ಸರ್ಕಾರದ ಅಧೀನದ ದೂರದರ್ಶನ, ಮುಂದಿನ ದಿನಗಳಲ್ಲಿ ಬೃಹತ್ ಬದಲಾವಣೆಗೆ ಸಜ್ಜಾಗಿದೆ.
ಹಾಲಿ ಭಾರತೀಯ ಗ್ರಾಹಕರಿಗೆ ಸೀಮಿತವಾಗಿರುವ ದೂರದರ್ಶನವನ್ನು ಜಾಗತಿಕ ಬ್ರ್ಯಾಂಡ್ ಆಗಿ ರೂಪಿಸುವ ಮತ್ತು ಈ ಸಂಬಂಧ 15 ದೇಶಗಳಲ್ಲಿ ಪ್ರಾದೇಶಿಕ ಕಚೇರಿಗಳನ್ನು ಆರಂಭಿಸುವ ಗುರಿಯನ್ನೂ ಸರ್ಕಾರ ಹಾಕಿಕೊಂಡಿದೆ ಎಂದು ಇಂಗ್ಲಿಷ್ ಸುದ್ದಿವಾಹಿನಿಯೊಂದು ವರದಿ ಮಾಡಿದೆ. ಜೊತೆಗೆ ಪ್ರಸಾರ ಭಾರತಿಯ ಶಬ್ದ್ ಪೋರ್ಟಲ್ ಅನ್ನು ಜಾಗತಿಕ ಸುದ್ದಿಸಂಸ್ಥೆಯಾಗಿ ಅಭಿವೃದ್ಧಿಪಡಿಸಲಾಗುವುದು. ಇದರ ಮೂಲಕ ನಿತ್ಯ ಆಡಿಯೋ, ವಿಡಿಯೋ, ಫೋಟೋ ಮತ್ತು ಇತರೆ ಸೇವೆ ನೀಡಲಾಗುವುದು.
ಇದರ ವ್ಯಾಪ್ತಿಗೆ ದೇಶ-ವಿದೇಶಗಳ ಸಾವಿರಕ್ಕೂ ಹೆಚ್ಚು ಮಾಧ್ಯಮಗಳನ್ನು ಸೇರಿಸಿಕೊಳ್ಳಲಾಗುವುದು. ಜೊತೆಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಹಬ್ ಆರಂಭಿಸುವ ಮತ್ತು ಭಾರತ್ ನಮನ್ ಎಂಬ ಪೋರ್ಟಲ್ ಆರಂಭಿಸುವ ಇರಾದೆಯೂ ಇದೆ. ಇದರಲ್ಲಿ ದೂರದರ್ಶನದ ಎಲ್ಲಾ ಹಳೆಯ ಮಾಹಿತಿಗಳು, ಪುಸ್ತಕಗಳು, ಫೋಟೋ ಜನರಿಗೆ ಸುಲಭವಾಗಿ ಸಿಗುವಂತೆ ನೋಡಿಕೊಳ್ಳಲಾಗುವುದು. ಇನ್ನು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತತ್ಕ್ಷಣದ ಭಾಷಾಂತರ, ಉಪಶೀರ್ಷಿಕೆ ಮತ್ತು ಕೃತಕ ಬುದ್ಧಿಮತ್ತೆ ಆಧರಿತ ವಿಷಯ ಸಂಗ್ರಹ ಸೇವೆ ನೀಡಲಿದೆ.
ಅಲ್ಲದೆ ಜಾಗತಿಕ ಮಾಧ್ಯಮ ಮತ್ತು ಮನರಂಜನಾ ಸಮ್ಮೇಳನ ಆಯೋಜಿಸುವ ಮತ್ತು ಸುಳ್ಳು ಸುದ್ದಿ ಪತ್ತೆಗೆ ಇರುವ ಪಿಐಬಿ ಫ್ಯಾಕ್ಟ್ ಚೆಕ್ ಅನ್ನು ಇನ್ನಷ್ಟು ವಿಸ್ತರಿಸುವ ಗುರಿ ರೂಪಿಸಲಾಗಿದೆ. ಇನ್ನು ದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮಾಸ್ ಕಮ್ಯುನಿಕೇಷನ್ನಲ್ಲಿ ಸ್ನಾತಕೋತ್ತರ ಕೋರ್ಸ್ ಆರಂಭಿಸುವ ಉದ್ದೇಶವೂ ಇದೆ. ಅಲ್ಲದೆ ಡಿಡಿ ಫ್ರಿ ಡಿಶ್ ಸೇವೆಯನ್ನು ನೆರೆಹೊರೆಯ ದೇಶಗಳಿಗೂ ವಿಸ್ತರಿಸುವ, ಅದರ ವ್ಯಾಪ್ತಿಗೆ ಇನ್ನಷ್ಟು ಚಾನೆಲ್ ಸೇರಿಸಿಕೊಳ್ಳುವ ಇರಾದೆಯೂ ಇದೆ. ಸತತ 3ನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸ ಹೊಂದಿರುವ ಮೋದಿ ಸರ್ಕಾರ, ಹೊಸ ಸರ್ಕಾರದಲ್ಲಿನ ತನ್ನ ಮೊದಲ 100 ದಿನದ ಕಾರ್ಯಕ್ರಮ ಮತ್ತು ಮುಂದಿನ 5 ವರ್ಷಗಳ ಯೋಜನೆಯ ಭಾಗವಾಗಿ ಈ ಕಾರ್ಯಕ್ರಮ ರೂಪಿಸಿದೆ.
-
ದಕ್ಷಿಣ ಕನ್ನಡ2 days ago
ವಿಟ್ಲ : ದುರಸ್ತಿಗೆ ಬಾವಿಗಿಳಿದ ಇಬ್ಬರು ಅಮ್ಲಜನಕ ಕೊರತೆಯಿಂದ ಮೃತ್ಯು
-
ಬಿಗ್ ನ್ಯೂಸ್20 hours ago
NOTAForSoujanyaCase : ಸೌಜನ್ಯ ಪ್ರಕರಣ : ಟ್ವಿಟರ್ ಟ್ರೆಂಡಿಂಗಲ್ಲಿ 3ನೇ ಸ್ಥಾನ ಪಡೆದ ನೋಟಾ ಅಭಿಯಾನ
-
ನಿಧನ ವಾರ್ತೆ1 day ago
Run over-ತಂದೆಯಿಂದಲೇ ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣ
-
ಅಪರಾಧ1 day ago
Online acquaintance-ಆನ್ ಲೈನ್ ಪರಿಚಿತ ಗೆಳೆಯ ಮಹಿಳೆಯ ಜೀವಾಂತ್ಯಗೊಳಿಸಿದ
-
Uncategorized2 days ago
ಮಠಂತಬೆಟ್ಟು ಗುಲಾಬಿ ಅನಂತ ರೈ ನಿಧನ
-
ದಕ್ಷಿಣ ಕನ್ನಡ1 day ago
ಬೆಲೆಯೆರಿಕೆ ಗಗನಕ್ಕೆರಿದ ಸಂದರ್ಭ ಸಿದ್ದರಾಮಯ್ಯ ಸರಕಾರ ಗ್ಯಾರಂಟಿ ಮೂಲಕ ಮಹಿಳೆಯರ ನೆರವಿಗೆ ನಿಂತಿದೆ : ಅನಿತಾ ಹೇಮನಾಥ ಶೆಟ್ಟಿ
-
ದಕ್ಷಿಣ ಕನ್ನಡ6 hours ago
Student harrased in bus ಉಪ್ಪಿನಂಗಡಿ: ಸ್ಲೀಪರ್ ಕೋಚ್ ಬಸ್ನಲ್ಲಿ ವಿದ್ಯಾರ್ಥಿನಿಗೆ ಜತೆ ಸಹ ಪ್ರಯಾಣಿಕನಿಂದ ಕಿರುಕುಳ – ಯುವತಿ ವ್ಯಗ್ರಗೊಳ್ಳುತ್ತಾಳೆ ಕಿಟಕಿಯಿಂದ ಹಾರಿ ಆರೋಪಿ ಪರಾರಿ – ಮುಂದೇನಾಯಿತು ?
-
ಸಾಮಾಜಿಕ ಮಾಧ್ಯಮ5 hours ago
Hasana sex tape : ಚುನಾವಣೆ ಹೊಸ್ತಿಲಲ್ಲಿ ಹಾಸನ ಅಭ್ಯರ್ಥಿಯ ರಾಸಲೀಲೆಯ ಪೆನ್ ಡ್ರೈವ್ ಸೌಂಡ್ ! ಅಸಲಿಯ / ನಕಲಿಯ ತೀವ್ರ ಚರ್ಚೆ