ಮಂಗಳೂರು : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಖ್ಯಾತ ವಕೀಲ ರಾಜೇಶ್ ಭಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ | ಇತರ ಮೂವರು ಬಂಧಿತರಿಗೆ ಜಾಮೀನು

WhatsApp-Image-2021-10-19-at-12.49.00-2-2
Ad Widget

Ad Widget

Ad Widget

ಮಂಗಳೂರು, ಅ.29: ಉತ್ತರ ಭಾರತ ಮೂಲದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಖ್ಯಾತ ವಕೀಲರಾದ ಕೆ.ಎಸ್.ಎನ್.ರಾಜೇಶ್‌ನ ನಿರೀಕ್ಷಣಾ ಜಾಮೀನು ಅರ್ಜಿ ಶುಕ್ರವಾರ ತಿರಸ್ಕೃತಗೊಂಡಿದೆ. ಆದರೆ, ಅದೇ ಪ್ರಕರಣದ ಇತರ ಮೂವರು ಬಂಧಿತ ಆರೋಪಿಗಳಿಗೆ ಜಾಮೀನು ದೊರೆತಿದೆ.

Ad Widget

ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ರಾಜೇಶ್ ಭಟ್ ತನ್ನ ವಕೀಲರ ಮೂಲಕ ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಜಿಲ್ಲಾ 6ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಆ ಅರ್ಜಿಯನ್ನು ವಜಾಗೊಳಿಸಿದೆ.

Ad Widget

Ad Widget

Ad Widget

ಇದೇ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಮುಖ ಆರೋಪಿಗೆ ಪ್ರಕರಣ ಮುಚ್ಚಿ ಹಾಕಲು ನೆರವಾದ ಆರೋಪ ಎದುರಿಸುತ್ತಿರುವ ಸಂತ್ರಸ್ತೆಯ ಸ್ನೇಹಿತ ಧ್ರುವ ಹೆಗ್ಡೆ, ಆತನ ತಾಯಿ ಮಹಾಲಕ್ಷ್ಮೀ ಹೆಗ್ಡೆ ಹಾಗೂ ಶಿವಾನಂದ ಅವರಿಗೆ ನ್ಯಾಯಾಲಯ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.

Ad Widget

ರಾಜೇಶ್ ಭಟ್‌ಗೆ ತಲೆಮರೆಸಿಕೊಳ್ಳಲು ಸಹಕಾರ ನೀಡಿದ ಹಾಗೂ ಅವರ ಮೊಬೈಲ್ ಹಾಗೂ ಪೋನನ್ನು ಬಚ್ಚಿಡಲು ನೆರವಾದ ಆರೋಪದಡಿ ಬಂಧಿತರಾಗಿದ್ದ ಬೊಂದೇಲ್‌ನ ಅನಂತ ಭಟ್ ಗುರುವಾರವೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

Ad Widget

Ad Widget

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: