Big Breaking: ಕಾರಿಂಜೇಶ್ವರ ಕ್ಷೇತ್ರಕ್ಕೆ ಚಪ್ಪಲಿ ಹಾಕಿ ಪ್ರವೇಶಿಸಿದ ನಾಲ್ವರ ವಶಕ್ಕೆ ಪಡೆದ ಪುಂಜಾಲಕಟ್ಟೆ ಎಸ್ಐ ಸೌಮ್ಯ

InShot_20211103_142051424
Ad Widget

Ad Widget

Ad Widget

ಬಂಟ್ವಾಳ: ಕಾರಿಂಜ ಮಹಾತೊಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಒಳಗೆ ಚಪ್ಪಲಿ ಹಾಕಿಕೊಂಡು ಪ್ರವೇಶಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಪುಂಜಾಲಕಟ್ಟೆ ಎಸ್.ಐ.ಸೌಮ್ಯ ನೇತೃತ್ವದ ಪೋಲೀಸ್ ತಂಡ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ.

Ad Widget

ಕಾಸರಗೋಡು ಹಾಗೂ ಉಳ್ಳಾಲ ಮೂಲದ ನಾಲ್ವರು ಆರೋಪಿ ಗಳನ್ನು ವಶಕ್ಕೆ ಪಡೆದುಕೊಂಡು ಈ ಘಟನೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Ad Widget

Ad Widget

Ad Widget

ಕಿಡಿಗೇಡಿಗಳು ಅಕ್ರಮವಾಗಿ ದೇವಳದ ಒಳಗೆ ಚಪ್ಪಲಿ ಹಾಕಿ ಪ್ರವೇಶ ಮಾಡಿ ಹಿಂಧೂಗಳ ಭಾವನೆಗಳಿಗೆ ದಕ್ಕೆ ತಂದಿದ್ದು. ಅಲ್ಲದೆ ಅದನ್ನು ದೇವಸ್ಥಾನದಲ್ಲಿ ಚಪ್ಪಲಿ ಹಾಕಿ ನಡೆದಾಡುವ ವಿಡಿಯೋ ವನ್ನು ಸಾಮಾಜಿಕ ಜಾಲತಾಣ ದಲ್ಲಿ ಹಾಕಿ ವಿಜ್ರಂಭಿಸಿ ಹಿಂಧುಗಳ ಧಾರ್ಮಿಕ ನಂಬಿಕೆಗೂ ಧಕ್ಕೆ ತಂದಿದ್ದು ಇದನ್ನು ದೇವಸ್ಥಾನದ ಆಡಳಿತ ಮಂಡಳಿ ತೀವ್ರವಾಗಿ ಖಂಡಿಸಿದ್ದು ಆರೊಪಿಗಳನ್ನು ಶೀಘ್ರ ಬಂಧಿಸಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿ ಪುಂಜಾಲಕಟ್ಟೆ ಠಾಣೆಗೆ ಮನವಿ ನೀಡಿತ್ತು.

Ad Widget

ಘಟನೆ ಗೆ ಸಂಬಂಧಿಸಿದಂತೆ ಕಾರ್ಯಚರಣೆ ನಡೆಸಿದ ಪುಂಜಾಲಕಟ್ಟೆ ಪೋಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.ಇನ್ನುಳಿದಂತೆ ಇಬ್ಬರು ಆರೋಪಿಗಳು ಈ ಘಟನೆಯಲ್ಲಿ ಇದ್ದ ಬಗ್ಗೆ ವಿಡಿಯೋ ದಲ್ಲಿ ಸೆರೆ ಯಾಗಿದ್ದು ಅವರ ಬಂಧನಕ್ಕಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

Ad Widget

Ad Widget

Leave a Reply

Recent Posts

ದೇಶದಲ್ಲಿ ಹಿಂದೂಗಳ ಶಕ್ತಿ ಹೇಗಿರಬೇಕೆಂದರೆ ಸರ್ಕಾರ ಹಿಂದೂಗಳ ಹೇಳಿಕೆಯಂತೆ ನಡೆಯಬೇಕು..! : ದೇವಸ್ಥಾನಗಳನ್ನು ಸರಕಾರಿಕರಣಗೊಳಿಸಿದಂತೆ ಮಸೀದಿಗಳನ್ನು ಏಕೆ ಮಾಡುವುದಿಲ್ಲ..? ಮಂದಿರ ಸಂಸ್ಕೃತಿ ರಕ್ಷಣೆ ಸಭೆಯಲ್ಲಿ ಚರ್ಚೆ – ಮುಂಬೈಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿನ ಭ್ರಷ್ಟಾಚಾರ ಬೆಳಕಿಗೆ ತಂದಿರುವ ಸುಪ್ರಸಿದ್ಧ ಸರ್ಜನ್ ರ ಪುಸ್ತಕ ಬಿಡುಗಡೆ

error: Content is protected !!
%d bloggers like this: