ಬಿಗ್ ನ್ಯೂಸ್
ಸುಳ್ಯ : ಮೀನು ಹಿಡಿಯಲು ನದಿಗೆ ತೆರಳಿದ ಯುವಕ ವಿದ್ಯುತ್ ಶಾಕ್ ಹೊಡೆದು ದುರ್ಮರಣ

ನದಿಗೆ ಮೀನು ಹಿಡಿಯಲು ಹೋದ ವೇಳೆ ವಿದ್ಯುತ್ ಶಾಕ್ ತಗುಲಿ ಯುವಕನೊಬ್ಬ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದಲ್ಲಿ ನ.5 ರಂದು ರಾತ್ರಿ ನಡೆದಿದೆ.
ದೇವಚಳ್ಳ ಗ್ರಾಮದ ಕರಂಗಲ್ಲಿನ ದಿ. ಕೇಶವ ಗೌಡರವರ ಪುತ್ರ ಪ್ರಕಾಶ್ (37) ಮೃತಪಟ್ಟ ಯುವಕ. . ಮೃತರು ತಾಯಿ ಭುವನೇಶ್ವರಿ, ಪತ್ನಿ ದಿವ್ಯ ಹಾಗೂ ಪುತ್ರಿ ಹಿತಾಶ್ರೀ ಯನ್ನು ಅಗಲಿದ್ದಾರೆ.
ಮನೆ ಸಮೀಪದ ಮಾಡಬಾಕಿಲು ಭಾಗದ ನದಿಗೆ ಸ್ನೇಹಿತರ ಜತೆ ಮೀನು ಹಿಡಿಯಲು ತೆರಳಿದಾಗ ದುರ್ಘಟನೆ ಸಂಭವಿಸಿದೆ ನದಿಯಲ್ಲಿ ಇನ್ವರ್ಟರ್ ಬ್ಯಾಟರಿ ಬ್ಯಾ ಬಳಸಿ ಮೀನು ಹಿಡಿಯುತಿದ್ದ ಸಂದರ್ಭ ಬ್ಯಾಟರಿಯ ವಿದ್ಯುತ್ ಪ್ರವಹಿಸಿ ಪ್ರಕಾಶ್ ಮೃತರಾಗಿರುವುದಾಗಿ ತಿಳಿದು ಬಂದಿದೆ.

ಘಟನೆಯೂ ಸುಬ್ರಹ್ಮಣ್ಯಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಅಲ್ಲಿನ ಎಸ್ ಐ ಜಂಬೂರಾಜ್ ಮಾಹಜನ್ ರವರು ಸ್ಥಳಕ್ಕೆ ತೆರಳಿ ತನಿಖೆ ನಡೆಸಿರುವುದಾಗಿ ತಿಳಿದು ಬಂದಿದೆ.
ಸುಳ್ಯ
Kukke subrahmnya Temple ಕುಕ್ಕೆ ಸುಬ್ರಹ್ಮಣ್ಯ ಭಕ್ತರ ಗಮನಕ್ಕೆ : ಡಿ.8ರಿಂದ 24ರ ತನಕ ಕ್ಷೇತ್ರದಲ್ಲಿ ಪ್ರಧಾನ ಸೇವೆ ಸಹಿತ ಹಲವು ಸೇವೆಗಳು ಅಲಭ್ಯ, ವ್ಯತ್ಯಯ – ಇಲ್ಲಿದೆ ಮಾಹಿತಿ

ಶ್ರೀ ಕ್ಷೇತ್ರದ ಜಾತ್ರೋತ್ಸವದ ಹಿನ್ನಲೆ ಇಲ್ಲಿನ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪ ಸಂಸ್ಕಾರವು ಡಿ.8ರಿಂದ 24ರ ತನಕ ನೆರವೇರುವುದಿಲ್ಲ. ಇತರ ಸೇವೆಗಳು ಎಂದಿನಂತೆ ನೆರವೇರುತ್ತದೆ. ಲಕ್ಷದೀಪೋತ್ಸವ, ಚೌತಿ, ಪಂಚಮಿ ಮತ್ತು ಷಷ್ಠಿ ದಿನ ಕೆಲವೊಂದು ಸೇವೆಗಳು ನೆರವೇರುವುದಿಲ್ಲ. ಭಕ್ತಾದಿಗಳು ಸಹಕರಿಸಬೇಕು ಎಂದು ದೇವಳದ ಪ್ರಕಟಣೆ ತಿಳಿಸಿದೆ.
ಪ್ರಾರ್ಥನೆ, ಆಶ್ಲೇಷ ಬಲಿ ಸೇವೆಯಲ್ಲಿ ವ್ಯತ್ಯಯ:
ಲಕ್ಷದೀಪೋತ್ಸವ (ಡಿ.12), ಚೌತಿ (ಡಿ.16), ಪಂಚಮಿ (ಡಿ.17) ದಿನದಂದು ರಾತ್ರಿ ಹೊತ್ತಿನಲ್ಲಿ ಪ್ರಾರ್ಥನೆ ಸೇವೆ ಇರುವುದಿಲ್ಲ. ಚಂಪಾಷಷ್ಠಿ (ಡಿ.18) ದಿನದಂದು ಮಧ್ಯಾಹ್ನ ಪ್ರಾರ್ಥನೆ ಸೇವೆ ನಡೆಯುವುದಿಲ್ಲ. ಚಂಪಾಷಷ್ಠಿ ದಿನ ಆಶ್ಲೇಷ ಬಲಿ ಮತ್ತು ನಾಗಪ್ರತಿಷ್ಠೆ ಸೇವೆಗಳು ನೆರವೇರುವುದಿಲ್ಲ.
ಲಕ್ಷದೀಪೋತ್ಸವ (ಡಿ.12), ಚೌತಿ (ಡಿ.16), ಪಂಚಮಿ (ಡಿ.18) ಮತ್ತು ಕೊಪ್ಪರಿಗೆ ಇಳಿಯುವ ದಿನ (ಡಿ.24) ದಂದು ಮಹಾಭಿಷೇಕ ಸೇವೆ ನಡಯುವುದಿಲ್ಲ. ಡಿ.10ರಿಂದ ಡಿ.24ರ ತನಕ ಸಾಯಂಕಾಲದ ಆಶ್ಲೇಷ ಬಲಿ ಸೇವೆ ನೆರವೇರುವುದಿಲ್ಲ.
Kukke Shri Subrahmanya Temple ದಕ್ಷಿಣ ಭಾರತದ ಪ್ರಸಿದ್ದ ನಾಗಕ್ಷೇತ್ರದಲ್ಲಿ ನಾಳೆ (ಡಿ 9) ಮೂಲ ಮೃತಿಕಾ ಪ್ರಸಾದ ವಿತರಣೆ – ಇಲ್ಲಿದೆ ವರ್ಷಕ್ಕೊಮ್ಮೆ ಮಾತ್ರ ಹುತ್ತದಿಂದ ತೆಗೆಯುವ ಈ ಪ್ರಸಾದದ ಮಹತ್ವ
ಚಂಪಾಷಷ್ಠಿ ಜಾತ್ರೋತ್ಸವವು ಡಿ.10 ರಿಂದ 24ರ ತನಕ ನಡೆಯಲಿದ್ದು, ಜಾತ್ರೋತ್ಸವದ ಪ್ರಧಾನ ದಿನಗಳಾದ ಲಕ್ಷದೀಪ, ಚೌತಿ, ಪಂಚಮಿ ಮತ್ತು ಷಷ್ಠಿಯಂದು ಮಾತ್ರ ಕೆಲವೊಂದು ಸೇವೆಗಳನ್ನು ನೆರವೇರಿಸಲು ಅವಕಾಶಗಳು ಇರುವುದಿಲ್ಲ. ಆದರೆ ಇತರ ದಿನಗಳಲ್ಲಿ ಆಶ್ಲೇಷ ಬಲಿ, ಪಂಚಾಮೃತ ಮಹಾಭಿಷೇಕ, ಶೇಷಸೇವೆ, ಕಾರ್ತಿಕಪೂಜೆ, ಮಹಾಪೂಜೆ, ತುಲಾಭಾರ, ನಾಗಪ್ರತಿಷ್ಠೆ ಮೊದಲಾದುವುಗಳು ಎಂದಿನಂತೆ ನೆರವೇರಲಿದೆ. ಸರ್ಪಸಂಸ್ಕಾರ ಮತ್ತು ಸಂಜೆಯ ಆಶ್ಲೇಷ ಬಲಿ ಸೇವೆಗಳು ಮಾತ್ರ ಡಿ.24ರ ತನಕ ನೆರವೇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ.9 ದರುಶನದಲ್ಲಿ ವ್ಯತ್ಯಯ: ಡಿ.9ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯು ಪವಿತ್ರ ಕಾರ್ಯದ ಕಾರಣ ಭಕ್ತಾದಿಗಳಿಗೆ ಬೆಳಗ್ಗಿನಿಂದ ಮಧ್ಯಾಹ್ನ 2 ಗಂಟೆಯ ತನಕ ದೇವರ ದರುಶನ ಹಾಗೂ ಸೇವಾದಿಗಳನ್ನು ನೆರವೇರಿಸಲು ಅವಕಾಶ ಇರುವುದಿಲ್ಲ, 2 ಗಂಟೆಯ ನಂತರ ದೇವರ ದರ್ಶನಕ್ಕೆ ಹಾಗೂ ಆಯ್ದ ಸೇವೆಗಳನ್ನು ನೆರವೇರಿಸಲು ಅವಕಾಶವಿದೆ
ಸುಳ್ಯ
Kukke Shri Subrahmanya Temple ದಕ್ಷಿಣ ಭಾರತದ ಪ್ರಸಿದ್ದ ನಾಗಕ್ಷೇತ್ರದಲ್ಲಿ ನಾಳೆ (ಡಿ 9) ಮೂಲ ಮೃತಿಕಾ ಪ್ರಸಾದ ವಿತರಣೆ – ಇಲ್ಲಿದೆ ವರ್ಷಕ್ಕೊಮ್ಮೆ ಮಾತ್ರ ಹುತ್ತದಿಂದ ತೆಗೆಯುವ ಈ ಪ್ರಸಾದದ ಮಹತ್ವ

Kukke Shri Subrahmanya Temple ಡಿಸೆಂಬರ್ 06; ದಕ್ಷಿಣ ಭಾರತದ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ವಾರಾಂತ್ಯದಲ್ಲಿ ದರ್ಶನ ಮತ್ತು ವಿವಿಧ ಸೇವೆಗಳು ಅರ್ಧ ದಿನದ ಕಾಲ ಲಭ್ಯವಿರುವುದಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಹೇಳಿದೆ.
ದೇವಳದಲ್ಲಿ 2023-24ನೇ ಸಾಲಿನ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಪೂರಕವಾಗಿ ಡಿ.9ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಪವಿತ್ರ ಕಾರ್ಯ ಇರಲಿದೆ. ಈ ಹಿನ್ನಲೆಯಲ್ಲಿ ಆ ದಿನ ಭಕ್ತಾದಿಗಳಿಗೆ ಬೆಳಗ್ಗಿನಿಂದ ಮಧ್ಯಾಹ್ನ 2 ಗಂಟೆಯ ತನಕ ದೇವರ ದರುಶನ ಹಾಗೂ ಸೇವಾದಿಗಳನ್ನು ನೆರವೇರಿಸಲು ಅವಕಾಶ ಇರುವುದಿಲ್ಲ. 2 ಗಂಟೆಯ ನಂತರ ದೇವರ ದರ್ಶನಕ್ಕೆ ಹಾಗೂ ಆಯ್ದ ಸೇವೆಗಳನ್ನು ನೆರವೇರಿಸಲು ಅವಕಾಶವಿದೆ
ಕುಕ್ಕೆ ಸುಬ್ರಮಣ್ಯದಲ್ಲಿ “ಮೂಲಮೃತಿಕಾ” ಪ್ರಸಾದಕ್ಕೆ ಹೆಚ್ಚಿನ ಮಹತ್ವವಿದೆ. ಮೂಲಸ್ಥಾನವಾದ ಕುಕ್ಕೆ ಸುಬ್ರಮಣ್ಯ ದೇವಳದ ಗರ್ಭಗುಡಿಯಿಂದ ತೆಗೆಯುವ ಕ್ಷೇತ್ರದ ಅತ್ಯಂತ ಪವಿತ್ರ ಪ್ರಸಾದ. ಯಾವುದೇ ದೇವಾಲಯದಲ್ಲಿ ಸಹ ಈ ಮಾದರಿ ಪ್ರಸಾದ ಸಿಗುವುದಿಲ್ಲ. ವರ್ಷಕ್ಕೆ ಒಂದು ಬಾರಿ ಮಾತ್ರ ಈ ಪ್ರಸಾದ ತೆಗೆಯಲಾಗುತ್ತದೆ.
ಕ್ಷೇತ್ರದ ಮೂಲಸ್ಥಾನವಾದ ಗರ್ಭಗುಡಿಯಿಂದ ಈ ಮೂಲಮೃತಿಕಾ ಪ್ರಸಾದವನ್ನು ತೆಗೆದು ಭಕ್ತರಿಗೆ ನೀಡಲಾಗುತ್ತದೆ. ಈ ಪ್ರಸಾದವು ರೋಗ ನಿರೋಧಕ ಶಕ್ತಿ ಹೊಂದಿದೆ ಎಂಬುದು ಭಕ್ತರ ನಂಬಿಕೆಯಾಗಿದೆ. ಈ ಮೃತ್ತಿಕೆ ಪ್ರಸಾದ ಸಂತಾನಕಾರಕ, ಚರ್ಮ ರೋಗಗಳ ಪರಿಹಾರಕ್ಕೆ ದಿವ್ಯ ಔಷಧ ಎಂಬುದು ಭಕ್ತರ ನಂಬಿಕೆ. ಮೃತ್ತಿಕಾ ಪ್ರಸಾದವನ್ನು ಶುಭ ಕಾರ್ಯಗಳ ಒಳಿತಿಗೂ, ವ್ಯಾಧಿಗಳ ನಿವಾರಣೆಗೂ ಭಕ್ತರು ಬಳಸುತ್ತಾರೆ.
ಸಾವಿರಾರು ಭಕ್ತರು ಮೂಲಮೃತಿಕಾ ಪ್ರಸಾದವನ್ನು ತೆಗೆದುಕೊಂಡು ಹೋಗಲು ಕುಕ್ಕೆ ಸುಬ್ರಮಣ್ಯ ಕ್ಷೇತ್ರಕ್ಕೆ ಆಗಮಿಸುತ್ತಾರೆ. ಶುಭ ಕಾರ್ಯಗಳ ಸಂದರ್ಭದಲ್ಲಿ, ರೋಗಗಳ ನಿವಾರಣೆಗೆ ಸಹ ಈ ಪ್ರಸಾದವನ್ನು ಬಳಕೆ ಮಾಡುತ್ತಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಕ್ಷೇತ್ರ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಕರ್ನಾಟಕ ರಾಜ್ಯದ ಸುಬ್ರಹ್ಮಣ್ಯಂ ಗ್ರಾಮದಲ್ಲಿ ಬರುತ್ತದೆ. ಪ್ರಕೃತಿಯ ಸೌಂದರ್ಯದಲ್ಲಿ ನೆಲೆಸಿರುವ ಈ ಭವ್ಯವಾದ ದೇವಾಲಯವು ಗ್ರಾಮದ ಹೃದಯಭಾಗದಲ್ಲಿದೆ. ಪ್ರಕೃತಿ ನದಿಗಳು, ಕಾಡುಗಳು ಮತ್ತು ಪರ್ವತಗಳಿಂದ ಸುತ್ತುವರೆದಿರುವ ಈ ದೇವಾಲಯವು ತನ್ನ ಅನನ್ಯ ಸೌಂದರ್ಯವನ್ನು ಬಹಿರಂಗಪಡಿಸುತ್ತದೆ .ಪ್ರತಿನಿತ್ಯ ನೂರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ವಾರಾಂತ್ಯ, ಸರ್ಕಾರಿ ರಜೆ ದಿನಗಳಲ್ಲಿ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಾರೆ.
ಬಿಗ್ ನ್ಯೂಸ್
Bride refuses Marriage in hall ತಾಳಿ ಕಟ್ಟುವ ವೇಳೆ ವರನ ಕೈಗೆ ಅಡ್ಡ ಹಿಡಿದು ಸಿನಿಮೀಯ ಶೈಲಿಯಲ್ಲಿ ಮದುವೆ ನಿರಾಕರಿಸಿದ ವಧು

Bride refuses Marriage in hall ಚಿತ್ರದುರ್ಗ: ನಿಗದಿಯಾಗಿದ ಮದುವೆಗಳು ಮುರಿದು ಬೀಳುವುದು ಸಹಜ . ಆದರೇ ಮದುವೆ ಮಟಂಪದಲ್ಲಿ ಇನ್ನೇನು ತಾಳಿ ಕಟ್ಟಬೇಕು ಅನ್ನುವಾಗ ಮದುವೆಗಳು ಮುರಿದು ಬೀಳುವುದು ಸಾಮಾನ್ಯವಾಗಿ ಸಿನಿಮಾಗಳಲ್ಲಿ ಮಾತ್ರ. ಆದರೇ ಇಂತಹದೊಮದು ಸಿನಿಮೀಯ ಘಟನೆ ಚಿತ್ರದುರ್ಗಾದಿಂದ ವರದಿಯಾಗಿದೆ. ಈ ಘಟನೆ ನೋಡಿ ಮದುವೆ ಬಂದವರು ಹೌಹಾರಿದ್ದಾರೆ.
ಇನ್ನೇನು ವರ ವಧುವಿನ ಕುತ್ತಿಗೆಗೆ ತಾಳಿ ಕಟ್ಟಬೇಕು ಎನ್ನುವಾಗ ವಧು ತೆಗೆದುಕೊಂಡ ಈ ನಿರ್ಧಾರದಿಂದ ಮದುವೆ ಮನೆಯಲ್ಲಿ ಸೇರಿದ್ದ ಜನರಿಗೆ ಎಲ್ಲರಿಗೂ ಒಂದು ರೀತಿಯ ಶಾಕ್ ನೀಡಿದಂತೆ ಆಗಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ (Hosadurga Taluku) ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ತಾಳಿ ಕಟ್ಟಿಸಿಕೊಳ್ಳಲು ವಧು ವಿವಾಹವಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಮದುವೆ ಕ್ಯಾನ್ಸಲ್ ಆಗಿದೆ. ವರ ತಾಳಿ ಕಟ್ಟುವಾಗ ವಧು ತಾಳಿಗೆ ಕೈ ಅಡ್ಡ ಹಿಡಿದು ತಡೆದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.
ವಧುವಿಗೆ ಮದುವೆಗೆ ಇಷ್ಟವಿರಲಿಲ್ಲ .ಮನೆಯವರ ಒತ್ತಾಯಕ್ಕೆ ಮಣಿದು ಆಕೆ ವಿವಾಹಕ್ಕೆ ಸಮ್ಮತಿ ಸೂಚಿಸಿದ್ದಾಳೆ ಅದರೆ ಮುಹೂರ್ತದ ವೇಳೆ ಮನ ಬದಲಾಯಿಸಿದ ವಧು ತಾಳಿ ಕಟ್ಟುವ ವೇಳೆ ಕಯ ಅಡ್ಡ ಹಿಡಿದು ತನ್ನ ಅಸಮ್ಮತಿ ಸೂಚಿಸಿದ್ದಾಳೆ ಎನ್ನಲಾಗಿದೆ. ಕೊನೆ ಕ್ಷಣದಲ್ಲಿ ಕೈ ಕೊಟ್ಟ ವಧುವಿನ ಬಗ್ಗೆ ವರನ ಮನೆಯವರಿಗೆ ಸಿಕ್ಕಾಪಟ್ಟೆ ಕೋಪ ಬಂದಿದೆ.
ಹುಡುಗಿ ಮದುವೆಗೊಪ್ಪದಿರುವದನ್ನು ಗಮನಿಸಿದ ಎರಡು ಕಡೆಯ ಸಂಬಂಧಿಗಳು ವಧುವಿನ ಮನವೊಲಿಸಲು ಯತ್ನಿಸಿದ್ದಾರೆ. ಆದರೇ ಗಟ್ಟಿ ಮನಸ್ಸು ಮಾಡಿದ ವಧು ಮದುವೆಯಾಗಲು ನಿರಾಕರಿಸಿದ್ದಾಳೆ. ಹೀಗಾಗಿ ಮದುವೆಗೆ ಆಗಮಿಸಿದ ಜನರು, ಸಂಬಂಧಿಗಳು ವಧುಗೆ ಹಿಡಿಶಾಪ ಹಾಕಿದ್ದಾರೆ. ವರನ ಕನಸು ನುಚ್ಚು ನೂರು ಮಾಡಿದಳು. ಮೊದಲೇ ತಿಳಿಸಿದ್ರೆ ಸಮಸ್ಯೆ ಎದುರಾಗ್ತಿರಲಿಲ್ಲ ಅಂತ ಹಿಡಿಶಾಪ ಹಾಕಿದ್ದಾರೆ.
ಮದುವೆ ನಿರಾಕರಣೆಗೆ ಈವರೆಗೆ ಕಾರಣ ತಿಳಿದುಬಂದಿಲ್ಲ. ಆದರೆ ಕುಟುಂಬಸ್ಥರ ಒತ್ತಾಯದ ಮೇರೆಗೆ ಮದುವೆಗೆ ಯುವತಿ ಸಮ್ಮತಿಸಿದ್ದು, ಆಕೆ ತಾಳಿಕಟ್ಟುವ ವೇಳೆ ಧೈರ್ಯ ಮಾಡಿ ವಿವಾಹ ನಿರಾಕರಿಸಿದ್ದಾಳೆಂಬ ಮಾತುಗಳು ಕೇಳಿಬಂದಿವೆ. ಸದ್ಯ ಪ್ರಕರಣ ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ
-
ದಕ್ಷಿಣ ಕನ್ನಡ2 days ago
ಪುತ್ತೂರು : ಕುಡಿದು ಟೈಟಾಗಿದ್ದ ಚಾಲಕ ವಿವೇಕಾನಂದ ವಿದ್ಯಾ ಸಂಸ್ಥೆಯ ಬಸ್ಸನ್ನು ಯದ್ವಾತದ್ವಾ ಚಲಾಯಿಸಿ ಸರಣಿ ಅಪಘಾತ – ಮಾಜಿ ಶಾಸಕಿಯ ಪುತ್ರನ ಕಾರು ಸೇರಿ 3 ವಾಹನಕ್ಕೆ ಢಿಕ್ಕಿ – ಪಾನಮತ್ತ ಚಲಾಯಿಸುತ್ತಿದ್ದ ಬಸ್ಸಿನಲ್ಲಿದ್ದರು ವಿದ್ಯಾರ್ಥಿಗಳು..̆
-
ದಕ್ಷಿಣ ಕನ್ನಡ2 days ago
ವಿಟ್ಲ : ಅಡಿಕೆ ಮರ ಮುರಿದು ಬಿದ್ದು ಮಹಿಳೆ ಸಾವು
-
ಸುಳ್ಯ1 day ago
College student rape case ಪುತ್ತೂರು : ಕಾಲೇಜ್ ವಿದ್ಯಾರ್ಥಿನಿಯ ಅಪಹರಿಸಿ ಅತ್ಯಾಚಾರ ಪ್ರಕರಣ – ಬಂಧಿತ ಆರೊಪಿಗೆ 2 ತಿಂಗಳ ಬಳಿಕ ಜಾಮೀನು
-
ರಾಜಕೀಯ2 days ago
CM Siddaramaiah: ಐಸಿಸ್ ಉಗ್ರ ಸಂಘಟನೆಯ ಬೆಂಬಲಿಗನ ಜತೆ ಹುಬ್ಬಳಿಯಲ್ಲಿ ವೇದಿಕೆ ಹಂಚಿಕೊಂಡ ಸಿ. ಎಂ.ಸಿದ್ದರಾಮಯ್ಯ : ಚಿತ್ರ ಸಹಿತ ಯತ್ನಾಳ್ ಗಂಭೀರ ಆರೋಪ – ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
-
ಉದ್ಯೋಗ1 day ago
Job Alert: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ – ಸದ್ಯದಲ್ಲೆ ಸಾರಿಗೆ ಇಲಾಖೆಗೆ 9 ಸಾವಿರ ಸಿಬ್ಬಂದಿಗಳ ನೇಮಕ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
-
Uncategorized2 days ago
loan write off ದೇಶದ ಎಲ್ಲಾ ವಾಣಿಜ್ಯ ಬ್ಯಾಂಕುಗಳು ಕಳೆದ 5 ವರ್ಷಗಳಲ್ಲಿ 10.57 ಲಕ್ಷ ಕೋಟಿ ರೂ. ರೈಟ್-ಆಫ್….
-
ಪುತ್ತೂರು1 day ago
Puthila Parivara | ಪುತ್ತೂರು ನಗರಸಭೆ 2 ವಾರ್ಡ್ ಮರುಮತದಾನ – ಬಿಜೆಪಿ ಕಾಂಗ್ರೇಸ್ ನಡುವೆ ಕಾರ್ಯಕರ್ತರ ಒತ್ತಾಯದಂತೆ ಪುತ್ತಿಲ ಪರಿವಾರ ಮತ್ತೊಂದು ಚುನಾವಣೆ ಎದುರಿಸುವುದು ಬಹುತೇಕ ಫಿಕ್ಸ್ : ವಿಧಾನಸಭಾ ಚುನಾವಣೆಯಲ್ಲಿ ಈ ವಾರ್ಡ್ ಗಳಲ್ಲಿ ಯಾರಿಗೆ ಎಷ್ಟು ಮತದಾನವಾಗಿತ್ತು ಗೊತ್ತೇ.?
-
ಅಪರಾಧ21 hours ago
Dowry Harasment: ʼಪ್ರತಿಯೊಬ್ಬರಿಗೂ ಹಣ ಬೇಕು ಮತ್ತು ಹಣ ಎಲ್ಲಕ್ಕಿಂತ ಪರಮೊಚ್ಚʼ ಡೆತ್ ನೋಟ್ ಬರೆದಿಟ್ಟು ವರದಕ್ಷಿಣೆ ಕಿರುಕುಳಕ್ಕೆ ಒಳಗಾದ ಯುವ ವೈದ್ಯೆ ಆತ್ಮಹತ್ಯೆ – ಅಷ್ಟಕ್ಕೂ ವರನ ಮನೆಯವರು ಇಟ್ಟ ಡಿಮ್ಯಾಂಡ್ ಎಷ್ಟು ಗೊತ್ತೆ ?