ರಾಜಕೀಯ
ಇಂಧನ ದರ ನಿಯಂತ್ರಣ ನಮ್ಮ ಕೈಯಲ್ಲಿಲ್ಲ ಎನ್ನುತ್ತಿದ್ದ ಬಿಜೆಪಿ ಉಪಚುನಾವಣೆಯಲ್ಲಿ ಸೋತ ಕೂಡಲೇ ಇಳಿಕೆ ಮಾಡಿದೆ- ಇದು ಬಿಜೆಪಿಯ ಸೋಲು ಜನತೆಯ ಗೆಲುವು : ಯು.ಟಿ ಖಾದರ್

ಮಂಗಳೂರು: ದೇಶದ ವಿವಿಧೆಡೆ ಮತ್ತು ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಅನುಭವಿಸಿದೆ. ಹೀಗಾಗಿ ಜನರು ಬೀಸುವ ದೊಣ್ಣೆಯಿಂದ ತಲೆ ತಪ್ಪಿಸಿಕೊಳ್ಳಲು ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಕೆ ಮಾಡಿದೆ. ಆ ಮೂಲಕ ಬಿಜೆಪಿಯ ಸೋಲು ಜನರ ಗೆಲುವಾಗಿದೆ ಎಂದು ಶಾಸಕ ಯುಟಿ ಖಾದರ್ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಸ್ವಾತಂತ್ರ್ಯದ ನಂತರ ಅಭಿವೃದ್ಧಿಯ ಸವಾಲಿನ ಮಧ್ಯೆಯೂ 70 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷ ಪೆಟ್ರೋಲ್ ಬೆಲೆ 70 ರೂ. ಮಾಡಿದ್ದರೆ, ಬಿಜೆಪಿ ಏಳು ವರ್ಷದಲ್ಲೇ 113 ರೂ. ಮಾಡಿ ಸಾಧನೆ ಮಾಡಿದೆ. ಕಾರ್ಪೊರೇಟ್ ಸಂಸ್ಥೆಗಳು, ಉತ್ಪಾದನಾ ವಲಯಕ್ಕೆ ತೆರಿಗೆ ಕಡಿತಗೊಳಿಸಿ, 1.5 ಲಕ್ಷ ಕೋಟಿ ರೂ. ನಷ್ಟ ಮಾಡಿ, ಅದನ್ನು ಜನರ ಮೇಲೆ ಹಾಕಿದೆ ಎಂದು ಆರೋಪಿಸಿದರು.
ಇಂಧನ ದರ ನಿಯಂತ್ರಣ ನಮ್ಮ ಕೈಯಲ್ಲಿಲ್ಲ ಎಂದು ಸ್ವತಃ ವಿತ್ತ ಸಚಿವರೇ ಹೇಳಿದ್ದರು. ಈಗ ಜನರ ಆಕ್ರೋಶಕ್ಕೆ ಹೆದರಿ ತೆರಿಗೆ ಕಡಿತ ಮಾಡಿ ದೊಡ್ಡ ಸಾಧನೆ ಎಂಬಂತೆ ಬಿಂಬಿಸುತ್ತಿದ್ದಾರೆ. ಏಷ್ಯಾದ ಭೂತಾನ್, ಶ್ರೀಲಂಕಾ, ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ ಅಲ್ಲದೆ ಚೀನಾಗಳಲ್ಲಿ ನಮಗಿಂತ ಕಡಿಮೆ ದರಕ್ಕೆ ಪೆಟ್ರೋಲ್, ಡೀಸೆಲ್ ಸಿಗುತ್ತಿದೆ. ನಮ್ಮಲ್ಲೂ ದರ ಇಳಿಕೆಯಾಗಲು ಬಿಜೆಪಿ ಸೋಲಬೇಕು ಎಂಬುದು ಜನಾಭಿಪ್ರಾಯ ಎಂದರು.
ಉದ್ಯೋಗ
Job Alert: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ – ಸದ್ಯದಲ್ಲೆ ಸಾರಿಗೆ ಇಲಾಖೆಗೆ 9 ಸಾವಿರ ಸಿಬ್ಬಂದಿಗಳ ನೇಮಕ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ:ನಾನು ಸಾರಿಗೆ ಸಚಿವರಾಗಿದ್ದಾಗ ಸಾರಿಗೆ ಸಿಬ್ಬಂದಿಗಳ ನೇಮಕಾತಿ ನಡೆದಿತ್ತು.ಅಲ್ಲಿಂದ ಇಲ್ಲಿಯವರೆಗೆ ನೇಮಕಾತಿ ನಡೆದಿಲ್ಲ. ಕಳೆದ 7ವರ್ಷಗಳಿಂದ 13,888 ಸಿಬ್ಬಂದಿ ನಿವೃತ್ತಿಯಾಗಿದ್ದಾರೆ. ಈಗ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವಂತ 9,000 ಸಿಬ್ಬಂದಿಗಳ ನೇಮಕ ಮತ್ತು 5500 ಹೊಸಬಸ್ ಖರೀದಿ ಮಾಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್ನಲ್ಲಿ ನಡೆದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಕ್ತಿ ಯೋಜನೆ ಜಾರಿಯಾದ ಮೇಲೆ ಮೇಲೆ ಜನರು ಹೆಚ್ಚು ಓಡಾಡುತ್ತಿದ್ದಾರೆ. ಮೊದಲು 85 ಲಕ್ಷ ಜನರು ಓಡಾಡುತ್ತಿದ್ದರು. ಈಗ 1 ಕೋಟಿ ಜನರು ಓಡಾಟ ಮಾಡುತ್ತಿದ್ದಾರೆ. ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಮಹಿಳೆಯರ ಓಡಾಟ ಕೂಡ ಹೆಚ್ಚಾಗಿದೆ ಎಂದರು.
ಇದಕ್ಕೆಲ್ಲಾ ಪ್ರಮುಖ ಕಾರಣ ಕಳೆದ ನಾಲ್ಕು ವರ್ಷದಲ್ಲಿ ಒಂದೇ ಒಂದು ಬಸ್ ಖರೀದಿ ಮಾಡಿಲ್ಲ. ಹೊಸ ಬಸ್ ತಗೊಂಡು ಹಳೆಯ ಬಸ್ಸುಗಳನ್ನು ಸ್ಕ್ರ್ಯಾಪ್ ಮಾಡಬೇಕು. ಹೀಗೆ ಆಗಿದ್ದರೆ ಏನು ಸಮಸ್ಯೆ ಆಗುತ್ತಿರಲಿಲ್ಲ ಎಂದರು.
ಬೆಳಗಾವಿ ಸಾರಿಗೆ ವಿಭಾಗಕ್ಕೆ ಬಿಎಂಟಿಸಿ ಹಳೆ ಬಸ್ ಬಿಟ್ಟಿರುವುದಕ್ಕೆ ಇಲ್ಲಿ ಬಸ್ ಇಲ್ಲ ಎಂಬ ಕಾರಣಕ್ಕೆ ತೆಗೆದುಕೊಂಡಿದ್ದಾರೆ. ಮತ್ತೆ ಆ ಬಸ್ಸುಗಳನ್ನು ವಾಪಸ್ ಕಳುಹಿಸಿದ್ದಾರೆ. ಸತತವಾಗಿ ನಾಲ್ಕು ವರ್ಷ ಬಸ್ ಖರೀದಿ ಮಾಡಿಲ್ಲ, ಏಳು ವರ್ಷಗಳಿಂದ ನೇಮಕಾತಿ ಮಾಡಿಲ್ಲ, ಹೀಗಾಗಿ ಸಮಸ್ಯೆ ಆಗುತ್ತಿದೆ. ಹಾಗಾಗಿ 5500 ಹೊಸ ಬಸ್ ಖರೀದಿ ಮಾಡುತ್ತಿದ್ದು, 9 ಸಾವಿರ ಸಿಬ್ಬಂದಿ ನೇಮಕಾತಿ ಮಾಡಲಿದ್ದೇವೆ ಎಂದು ತಿಳಿಸಿದರು.
ಬೆಳಗಾವಿ, ಬಾಗಲಕೋಟೆ, ಗದಗ, ಹುಬ್ಬಳ್ಳಿ ಧಾರವಾಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಅತಿಹೆಚ್ಚು ಬಸ್ ನಿಲ್ದಾಣವನ್ನು 2013ರಿಂದ 2017ರವರೆಗೆ ನಾನು ಸಾರಿಗೆ ಸಚಿವ ಇದ್ದಾಗ ಈ ಭಾಗಕ್ಕೆ ಹಲವು ಬಸ್ಸು ಕೊಟ್ಟಿದ್ದೇನೆ. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣಕ್ಕೆ ಎರಡು ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ಹಾಕಲು ಸೂಚನೆ ನೀಡಿದ್ದೇನೆ. ಬೆಳಗಾವಿ ನಗರಕ್ಕೆ 100 ಹೊಸ ಬಸ್ ಖರೀದಿ ಮಾಡುತ್ತೇನೆ. ಮೂರು ತಿಂಗಳಲ್ಲಿ ಅವಧಿಯಲ್ಲಿ ಈ ಹೊಸ ಬಸ್ ಗಳು ಬರುತ್ತವೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ
Baryl Vanneihsangi: ಸೋಷಿಯಲ್ ಮೀಡಿಯಾ ಸ್ಟಾರ್ ಈಗ ಮಿಜೋರಾಂ ರಾಜ್ಯದ ಕಿರಿಯ ಮಹಿಳಾ ಶಾಸಕಿ – ಬೆರಿಲ್ ವನ್ನೈಹಸಂಗಿ ಬಗ್ಗೆ ನಿಮಗೆಷ್ಟು ಗೊತ್ತು?

ಡಿಸೆಂಬರ್ 4 ರಂದು ಮಿಜೋರಾಂ ವಿಧಾನಸಭಾ ಚುನಾವಣಾ ಫಲಿತಾಂಶ ಬಿಡುಗಡೆಯಾಗಿದ್ದು ಝೋರಂ ಪೀಪಲ್ಸ್ ಮೂವ್ಮೆಂಟ್ (ZPM) MNFನ ಸೋಲಿಗೆ ಕಾರಣವಾಯಿತು. ZPM ನ ಹೊಸ ಚುನಾಯಿತ ಮಹಿಳಾ ಶಾಸಕಿ ಬೆರಿಲ್ ವನ್ನೈಹಸಂಗಿ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಐಜ್ವಾಲ್ ಸೌತ್-III ಸ್ಥಾನದಿಂದ ಚುನಾವಣೆಯಲ್ಲಿ ಗೆಲ್ಲುವ ಮೂಲಕ, ಬೆರಿಲ್ ವನ್ನೆಹಸಂಗಿ ಮಿಜೋರಾಂನ ಅತ್ಯಂತ ಕಿರಿಯ ಮಹಿಳಾ ಶಾಸಕರಾಗಿದ್ದಾರೆ.
ವನ್ನೈಹಸಂಗಿ ಅವರು ಎಂಎನ್ಎಫ್ನ ಎಫ್ ಲಾಲ್ನುನ್ಮಾವಿಯಾ ಅವರನ್ನು 1,414 ಮತಗಳಿಂದ ಸೋಲಿಸಿದರು. ಬೆರಿಲ್ ವನ್ನೆಹಸಂಗಿ 9,370 ಮತಗಳನ್ನು ಪಡೆದರೆ, ಎಫ್ ಲಾಲ್ನುನ್ಮಾವಿಯಾ 7,956 ಮತಗಳನ್ನು ಪಡೆದರು.

ಮಿಜೋರಾಂ ವಿಧಾನಸಭೆಯ ಅತ್ಯಂತ ಕಿರಿಯ ಶಾಸಕಿ ಬೆರಿಲ್ ವನ್ನೈಹಸಂಗಿಗೆ 32ರ ಹರೆಯ. ಆಕೆಯ ಚುನಾವಣಾ ಅಫಿಡವಿಟ್ ಪ್ರಕಾರ, ಅವರು ಈ ಹಿಂದೆ ಐಜ್ವಾಲ್ ಮುನ್ಸಿಪಲ್ ಕಾರ್ಪೊರೇಷನ್ (AMC) ನಲ್ಲಿ ಕೌನ್ಸಿಲರ್ ಆಗಿ ಕೆಲಸ ಮಾಡಿದ್ದಾರೆ. ಅವರು ಮೇಘಾಲಯದ ಶಿಲ್ಲಾಂಗ್ನಲ್ಲಿರುವ ನಾರ್ತ್ ಈಸ್ಟರ್ನ್ ಹಿಲ್ ವಿಶ್ವವಿದ್ಯಾಲಯದಲ್ಲಿ ಎಂಎ ಮಾಡಿದ್ದಾರೆ. ವರದಿಗಳ ಪ್ರಕಾರ, ಬೆರಿಲ್ ವನ್ನೆಹಿಸಂಗಿ ವಿರುದ್ಧ ಯಾವುದೇ ಕ್ರಿಮಿನಲ್ ದಾಖಲೆ ಇಲ್ಲ. ಅವರು ಪ್ರಸಿದ್ಧ ಟಿವಿ ನಿರೂಪಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.

ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಇನ್ಸ್ಟಾಗ್ರಾಮ್ನಲ್ಲಿ ಬೆರಿಲ್ ವನ್ನೆಹ್ಸಂಗಿ ಸಾಕಷ್ಟು ಫಾಲೋವರ್ಸ್ಗಳನ್ನು ಹೊಂದಿದ್ದಾರೆ. ತನ್ನ Instagram ಬಯೋದಲ್ಲಿ, ಅವರು ಟಿವಿ ನಿರೂಪಕಿ, ಹೊಸ್ಟೆಸ್, ಆಂಕರ್ ಮತ್ತು ರಾಜಕಾರಣಿ ಎಂದು ವಿವರಿಸಿದ್ದಾರೆ.

ಮಿಜೋರಾಂ ವಿಧಾನಸಭಾ ಚುನಾವಣೆಯಲ್ಲಿ ಮೂವರು ಮಹಿಳಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಐಜ್ವಾಲ್ ಸೌತ್-III ರಿಂದ ಬೆರಿಲ್ ವನ್ನೆಹಸಂಗಿ ಹೊರತುಪಡಿಸಿ, ಲುಂಗ್ಲೆಯಿ ಪೂರ್ವ ಸ್ಥಾನದಿಂದ ಝಡ್ಪಿಎಂ ಲಾಲ್ರಿನ್ಪುಯಿ ಮತ್ತು ಪಶ್ಚಿಮ ತುಯಿಪುಯಿ ಕ್ಷೇತ್ರದಿಂದ ಪ್ರೊವಾ ಚಕ್ಮಾ ಗೆದ್ದಿದ್ದಾರೆ.

ಬ್ಯಾರಿಲ್ ವನ್ನೈಸಂಗಿ ಮಾತು:ಹ್ “ನಾವು ಮಹಿಳೆ ಆಗಿದ್ದೇವೆ ಎಂಬ ಕಾರಣಕ್ಕೆ ನಮ್ಮನ್ನು ತಡೆಯಬೇಕು ಎನ್ನುವುದು ಅದರ ಅರ್ಥವಲ್ಲ. ಎಲ್ಲಾ ಮಹಿಳೆಯರಿಗೆ ನಾನು ಹೇಳುವ ಒಂದು ವಿಚಾರ ಎಂದರೆ ನಾನು ಎಲ್ಲಾ ಮಹಿಳೆಯನ್ನು ಪ್ರೋತ್ಸಾಹಿಸಲು ಬಯಸುತ್ತೇನೆ. ಸಮಾಜದ ಎಲ್ಲಾ ಮಹಿಳೆಯರಿಗೆ ಈ ಸಂದೇಶವನ್ನು ನೀಡಲು ನಾನು ಬಯಸುತ್ತೇನೆ. ಇದು ಜನರ ಗೆಲುವಾಗಿದೆ. ಬದಲಾವಣೆ ಬಯಸುವ ಜನರು, ಹೆಚ್ಚಿನ ಅಭಿವೃದ್ಧಿಯನ್ನು ತರಲು ಬಯಸುವ ಜನರಿಗೆ ಈ ಗೆಲುವು ಸಮರ್ಪಿತವಾಗಿದೆ. ಯಾವುದೇ ವೈಯಕ್ತಿಕ ಒಲವು, ಸ್ವಜನಪಕ್ಷಪಾತ, ಭ್ರಷ್ಟಾಚಾರವಿಲ್ಲದೇ, ಪ್ರಾಮಾಣಿಕವಾಗಿ ಮತ್ತು ಸರಿಯಾದ ರೀತಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತೇನೆ” ಎಂದು ಕಿರಿಯ ಮಹಿಳಾ ಶಾಸಕಿ ಬ್ಯಾರಿಲ್ ವನ್ನೈಹಸಂಗಿ ತಿಳಿಸಿದರು.


ರಾಜಕೀಯ
CM Siddaramaiah: ಐಸಿಸ್ ಉಗ್ರ ಸಂಘಟನೆಯ ಬೆಂಬಲಿಗನ ಜತೆ ಹುಬ್ಬಳಿಯಲ್ಲಿ ವೇದಿಕೆ ಹಂಚಿಕೊಂಡ ಸಿ. ಎಂ.ಸಿದ್ದರಾಮಯ್ಯ : ಚಿತ್ರ ಸಹಿತ ಯತ್ನಾಳ್ ಗಂಭೀರ ಆರೋಪ – ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM Siddaramaiah) ಹುಬ್ಬಳ್ಳಿಯ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ (ISIS Terrorist) ಬೆಂಬಲಿಗನಾದ ತನ್ವೀರ್ ಫೀರ್ ಎಂಬಾತನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಗಂಭೀರ ಆರೋಪ ಮಾಡಿದ್ದಾರೆ.
ಬೆಳಗಾವಿ ಸುವರ್ಣಸೌಧದಲ್ಲಿ ಬುಧವಾರ ಮಾತನಾಡಿದ ಅವರು, ಸಮಾವೇಶದ ವೇದಿಕೆಯಲ್ಲಿ ಸಿದ್ದರಾಮಯ್ಯ ಪಕ್ಕದಲ್ಲಿ ಕುಳಿತ ವ್ಯಕ್ತಿ ಐಸಿಸ್ ಸಂಘಟನೆ ಜೊತೆಗೆ ಸಂಪರ್ಕ ಇರುವವನು. ಆ ಬಗ್ಗೆ ಸಿದ್ದರಾಮಯ್ಯ ಅವರಿಗೆ ಮಾಹಿತಿ ಇರಲಿಲ್ವಾ? ಎಂದು ಪ್ರಶ್ನಿಸಿದರು.
ಎಲ್ಲ ಮಾಹಿತಿ ಪಡೆದೇ ನಾನು ಗಂಭೀರವಾಗಿಯೇ ಹೇಳುತ್ತಿದ್ದೇನೆ. ಹುಡುಗಾಟಿಕೆಗೆ ನಾನು ಹೇಳಿಕೆ ನೀಡುತ್ತಿಲ್ಲ. ಬೇಕಾದ್ರೆ ಮಾಹಿತಿ ತರಿಸಿಕೊಳ್ಳಲಿ ಎಂದು ಸವಾಲು ಹಾಕಿದರು. ಪ್ರಧಾನಿ ಕಾರ್ಯಕ್ರಮ ಇದ್ದರೆ ,ಯಾರ್ಯಾರು ವೇದಿಕೆ ಮೇಲೆ ಇರಬೇಕು ಎಂದು ಮಾಹಿತಿ ಇರುತ್ತದೆ. ಈ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಇರ್ತಾರೆ ಎಂದು ಮಾಹಿತಿ ಇರಲಿಲ್ವಾ..? ನಾನೇ ಇನ್ನೊಂದು ವಾರದಲ್ಲೇ ಎಲ್ಲ ಮಾಹಿತಿ ಹೇಳ್ತೀನಿ ಎಂದರು.

ಈ ಸಂಬಂಧ ಎಕ್ಸ್ನಲ್ಲಿ ಪೋಸ್ಟ್ ಮಾಡಿ ತನ್ವಿರ್ ಫೀರ್ ಎಂಬ ಮುಸ್ಲಿಂ ಮೌಲ್ವಿ ಯೆಮೆನ್, ಸೌದಿ ಹಾಗೂ ಮಧ್ಯ ಪ್ರಾಚ್ಯ ದೇಶಗಳ ಪ್ರವಾಸಗಳ ವೇಳೆ ಭಯೋತ್ಪಾದಕ ಸಂಘಟನೆಗಳ ಪ್ರಮುಖರನ್ನು ಭೇಟಿಯಾಗಿರುವ ಚಿತ್ರಗಳನ್ನು ಅಪ್ಲೋಡ್ ಮಾಡಿದ್ದಾರೆ.

ಯತ್ನಾಳ್ ಅವರ ಆರೋಪ ಏನು?
ಭಯೋತ್ಪಾದಕ ಬೆಂಬಲಿಗೆ ಹಿಂದೆಯೂ ಹಲವಾರು ಬಾರಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದ. ಕೆಲವೇ ದಿನಗಳಲ್ಲಿ ತನ್ವಿರ್ ಫೀರ್ ಎಂಬ ಭಯೋತ್ಪಾದಕ ಬೆಂಬಲಿಗನ ಇನ್ನಷ್ಟು ವಿವರಗಳನ್ನು ಬಹಿರಂಗಗೊಳಿಸುತ್ತೇನೆ. ಈತನು ಮಧ್ಯಪ್ರಾಚ್ಯ ದೇಶಗಳಿಂದ ಹಣವನ್ನು ಭಾರತಕ್ಕೆ ತರುವ ಹಾಗು ಭಾರತದ ಚಟುವಟಿಕಗಳ ಮಾಹಿತಿಯನ್ನು ಅರಬ್ ದೇಶಗಳಿಗೆ ರವಾನಿಸುವ ಕೆಲಸ ಮಾಡುತ್ತಿದ್ದಾನೆ ಎಂದು ಆರೋಪಿಸಿದರು.

ರಾಜ್ಯ ಪೊಲೀಸ್, ಕೇಂದ್ರೀಯ ತನಿಖಾ ಸಂಸ್ಥೆಗಳು ಈ ಕುರಿತು ವಿಚಾರಣೆ ಮಾಡಬೇಕು ಎಂದು ಆಗ್ರಹಿಸುತ್ತಿದ್ದೇನೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

-
ದಕ್ಷಿಣ ಕನ್ನಡ2 days ago
ಪುತ್ತೂರು : ಕುಡಿದು ಟೈಟಾಗಿದ್ದ ಚಾಲಕ ವಿವೇಕಾನಂದ ವಿದ್ಯಾ ಸಂಸ್ಥೆಯ ಬಸ್ಸನ್ನು ಯದ್ವಾತದ್ವಾ ಚಲಾಯಿಸಿ ಸರಣಿ ಅಪಘಾತ – ಮಾಜಿ ಶಾಸಕಿಯ ಪುತ್ರನ ಕಾರು ಸೇರಿ 3 ವಾಹನಕ್ಕೆ ಢಿಕ್ಕಿ – ಪಾನಮತ್ತ ಚಲಾಯಿಸುತ್ತಿದ್ದ ಬಸ್ಸಿನಲ್ಲಿದ್ದರು ವಿದ್ಯಾರ್ಥಿಗಳು..̆
-
ದಕ್ಷಿಣ ಕನ್ನಡ2 days ago
ವಿಟ್ಲ : ಅಡಿಕೆ ಮರ ಮುರಿದು ಬಿದ್ದು ಮಹಿಳೆ ಸಾವು
-
ಸುಳ್ಯ1 day ago
College student rape case ಪುತ್ತೂರು : ಕಾಲೇಜ್ ವಿದ್ಯಾರ್ಥಿನಿಯ ಅಪಹರಿಸಿ ಅತ್ಯಾಚಾರ ಪ್ರಕರಣ – ಬಂಧಿತ ಆರೊಪಿಗೆ 2 ತಿಂಗಳ ಬಳಿಕ ಜಾಮೀನು
-
ರಾಜಕೀಯ2 days ago
CM Siddaramaiah: ಐಸಿಸ್ ಉಗ್ರ ಸಂಘಟನೆಯ ಬೆಂಬಲಿಗನ ಜತೆ ಹುಬ್ಬಳಿಯಲ್ಲಿ ವೇದಿಕೆ ಹಂಚಿಕೊಂಡ ಸಿ. ಎಂ.ಸಿದ್ದರಾಮಯ್ಯ : ಚಿತ್ರ ಸಹಿತ ಯತ್ನಾಳ್ ಗಂಭೀರ ಆರೋಪ – ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
-
ಉದ್ಯೋಗ1 day ago
Job Alert: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ – ಸದ್ಯದಲ್ಲೆ ಸಾರಿಗೆ ಇಲಾಖೆಗೆ 9 ಸಾವಿರ ಸಿಬ್ಬಂದಿಗಳ ನೇಮಕ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
-
Uncategorized2 days ago
loan write off ದೇಶದ ಎಲ್ಲಾ ವಾಣಿಜ್ಯ ಬ್ಯಾಂಕುಗಳು ಕಳೆದ 5 ವರ್ಷಗಳಲ್ಲಿ 10.57 ಲಕ್ಷ ಕೋಟಿ ರೂ. ರೈಟ್-ಆಫ್….
-
ಪುತ್ತೂರು1 day ago
Puthila Parivara | ಪುತ್ತೂರು ನಗರಸಭೆ 2 ವಾರ್ಡ್ ಮರುಮತದಾನ – ಬಿಜೆಪಿ ಕಾಂಗ್ರೇಸ್ ನಡುವೆ ಕಾರ್ಯಕರ್ತರ ಒತ್ತಾಯದಂತೆ ಪುತ್ತಿಲ ಪರಿವಾರ ಮತ್ತೊಂದು ಚುನಾವಣೆ ಎದುರಿಸುವುದು ಬಹುತೇಕ ಫಿಕ್ಸ್ : ವಿಧಾನಸಭಾ ಚುನಾವಣೆಯಲ್ಲಿ ಈ ವಾರ್ಡ್ ಗಳಲ್ಲಿ ಯಾರಿಗೆ ಎಷ್ಟು ಮತದಾನವಾಗಿತ್ತು ಗೊತ್ತೇ.?
-
ಜೀವನಶೈಲಿ1 day ago
2024 Maruti swift Car: ಮಾರುತಿ ಸುಜುಕಿ ಕಂಪನಿಯಿಂದ ಸಿಹಿಸುದ್ದಿ: ಹೊಸ ಎಂಜಿನ್ ಮಹಿಮೆ – 40 ಕಿ. ಮೀ ಮೈಲೇಜ್ ಕೊಡುವ ಹೊಸ ಸ್ವಿಫ್ಟ್ ಬಿಡುಗಡೆ ಕ್ಷಣಗಣನೆ – ಬೆಲೆ ಎಷ್ಟಿದೆ ಗೊತ್ತೆ?