ವರದಿಗಳು
ವಿದ್ಯಾಮಾತ ಅಕಾಡೆಮಿಯಲ್ಲಿ ಉಚಿತ ಕಂಪ್ಯೂಟರ್ ತರಬೇತಿಯೊಂದಿಗೆ IAS, IPS, ಬ್ಯಾಂಕಿಂಗ್, KMF, ಕ್ಯಾಂಪ್ಕೋ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪ್ರಾರಂಭ
ಪುತ್ತೂರು : ಬ್ಯಾಂಕಿಂಗ್, ಪೊಲೀಸ್ ನೇಮಕಾತಿಯಿಂದ ಹಿಡಿದು ಅತ್ಯುನ್ನತ ಭಾರತೀಯ ನಾಗರಿಕ ಸೇವೆಗಳಾದ IAS, IPS, IFS, IRS ವರೆಗಿನ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಪುತ್ತೂರಿನ ಏಕೈಕ ತರಬೇತಿ ಅಕಾಡೆಮಿಯಾಗಿರುವ ವಿದ್ಯಾಮಾತ ಅಕಾಡೆಮಿಯಲ್ಲಿ ರಾಷ್ಟ್ರೀಕೃತ ಹಾಗೂ ಗ್ರಾಮೀಣ ಬ್ಯಾಂಕ್, ಕೆ.ಯಂ.ಎಫ್ ಸೇರಿದಂತೆ ಎಲ್ಲಾ ಸಹಕಾರಿ ಸಂಘಗಳು, ಕ್ಯಾಂಪ್ಕೋ ನೇಮಕಾತಿ ಪರೀಕ್ಷೆ , ಸ್ಟಾಫ್ ಸೆಲೆಕ್ಷನ್ ಕಮಿಷನ್ (ಸಿಬ್ಬಂದಿ ಆಯ್ಕೆ ಆಯೋಗ), ಪೊಲೀಸ್ ಸಬ್ ಇನ್ಸ್ ಪೆಕ್ಟರ್ / ಕಾನ್ಸ್ಟೇಬಲ್ , ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಕಾರ್ಯದರ್ಶಿ (ಗ್ರೇಡ್-1 & ಗ್ರೇಡ್-2) ನೇಮಕಾತಿಗಳಿಗೆ ಸಂಬಂಧಿಸಿದ ಪರೀಕ್ಷೆಗಳ ತರಬೇತಿಯು ಪ್ರಾರಂಭಗೊಂಡಿದ್ದು, ಸದ್ಯ ಓದು ಮುಗಿಸಿರುವ / ಸದ್ಯ ಓದುತ್ತಿರುವ / ಉದ್ಯೋಗದಲ್ಲಿರುವವರು ಈ ತರಬೇತಿಯನ್ನು ಪಡೆದುಕೊಳ್ಳಬಹುದು.
ವಿದ್ಯಾಮಾತದಲ್ಲಿದೆ ಉಚಿತ ಕಂಪ್ಯೂಟರ್ ತರಬೇತಿ: ಈ ತರಬೇತಿಯನ್ನು ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾಗಿ ಕಂಪ್ಯೂಟರ್ ತರಬೇತಿಯನ್ನು ಉಚಿತವಾಗಿ ವಿದ್ಯಾಮಾತ ಅಕಾಡೆಮಿಯ ಮಾತೃಸಂಸ್ಥೆಯಾದ ‘ವಿದ್ಯಾಮಾತ ಫೌಂಡೇಶನ್ ‘ನ ಸಹಯೋಗದಲ್ಲಿ ನೀಡಲಾಗುವುದು.
ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರವೇಶಾತಿಯಲ್ಲಿ ಗ್ರಾಮೀಣ, ಕನ್ನಡ ಮಾಧ್ಯಮ , ಬಿಪಿಎಲ್ , ಅಂತ್ಯೋದಯ ಕಾರ್ಡುದಾರರಿಗೆ ಕೇವಲ ತರಬೇತುದಾರರ ಗೌರವಧನವನ್ನಷ್ಟೇ ವಿಧಿಸಲಾಗುವುದು.
ಆಫ್ಲೈನ್ ತರಗತಿಗಳು ವಾರದ 4 ದಿನ ಬೆ.9 ರಿಂದ 3 ರ ವರೆಗೆ ಹಾಗೂ ಆನ್ಲೈನ್ ತರಗತಿಗಳು ರಾತ್ರಿ 7 ರಿಂದ 9 ರ ವರೆಗೆ ಲಭ್ಯವಿರುತ್ತದೆ.
ವಾರಾಂತ್ಯದಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಪರೀಕ್ಷೆಗಳು, ಉಚಿತ ಕಾರ್ಯಾಗಾರಗಳು, ದಿನನಿತ್ಯದ ಖಾಸಗಿ ಹಾಗೂ ಸರಕಾರಿ ಉದ್ಯೋಗಗಳ ಮಾಹಿತಿಗಳು ಮತ್ತು ದಿನನಿತ್ಯದ ಪ್ರಚಲಿತ ವಿದ್ಯಮಾನಗಳ PDF ಗಳನ್ನು ಉಚಿತವಾಗಿ ನೀಡಲಾಗುವುದು.
ಪ್ರವೇಶಾತಿಯನ್ನು ಪಡೆದುಕೊಂಡ ವಿದ್ಯಾರ್ಥಿಗಳಿಗೆ ಎಲ್ಲಾ ನೇಮಕಾತಿಯ ಅರ್ಜಿಗಳನ್ನು ಉಚಿತವಾಗಿ ಹಾಕಿಕೊಡಲಾಗುತ್ತದೆ ಮತ್ತು ಪರೀಕ್ಷೆಯ ಪ್ರವೇಶ ಪತ್ರ (ಹಾಲ್ ಟಿಕೆಟ್) ವರೆಗಿನ ಎಲ್ಲಾ ಮಾಹಿತಿಗಳನ್ನು ಒದಗಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ವಿದ್ಯಾಮಾತ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್,ಒಂದನೇ ಮಹಡಿ,ಎಪಿಯಂಸಿ ರಸ್ತೆ, ಸಿಟಿ ಆಸ್ಪತ್ರೆ ಹತ್ತಿರ ಪುತ್ತೂರು ದ.ಕ 574201
ಫೋನ್ : 9620468869 / 8590773486 / 9148935808 ನ್ನು ಸಂಪರ್ಕಿಸಬಹುದು.
ಅಂತರ ರಾಜ್ಯ
Mungekar-ಮುಸ್ಲಿಮರಿಗೆ ದೇಶದ ಸಂಪತ್ತಿನಲ್ಲಿ ಮೊದಲ ಹಕ್ಕಿದೆ ಎಂದು ಸಿಂಗ್ ಹೇಳಿಲ್ಲ; ಮೋದಿಯವರ ಹೇಳಿಕೆ ಸುಳ್ಳು ಎಂದು ಕುಟುಕಿದ ಮುಂಗೇಕರ್
ಮುಂಬೈ: ಕಾಂಗ್ರೆಸ್ ನಾಯಕ, ಆರ್ಥಿಕ ತಜ್ಞ ಮತ್ತು ನೀತಿ ಆಯೋಗದ ಸದಸ್ಯರೂ ಆಗಿದ್ದ ಡಾ. ಬಾಲಚಂದ್ರ ಮುಂಗೇಕರ್ರವರು ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿಕೆ ನೀಡಿಲ್ಲ. ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಸುಳ್ಳು ಎಂದು ಹೇಳಿದ್ದಾರೆ.
ಡಾ. ಸಿಂಗ್ ಅವರ ಹೇಳಿಕೆಯ ಒಂದು ವಾಕ್ಯವನ್ನು ಪ್ರಸ್ತುತಪಡಿಸುವ ಮೂಲಕ ಮೋದಿ ಅವರು ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ತಮ್ಮ ರಾಜಕೀಯ ಹಿತಾಸಕ್ತಿಗಳನ್ನು ಈಡೇರಿಸಿಕೊಳ್ಳಲು ಮುಸ್ಲಿಂ ಸಮುದಾಯದಲ್ಲಿ ಅಸಮಾಧಾನವನ್ನು ಸೃಷ್ಟಿಸುವುದು ಬಿಜೆಪಿಯ ತಂತ್ರವಾಗಿದೆ. ಆದರೆ, ಜನರು ಮೋದಿ ಅವರ ಹೇಳಿಕೆಗಳನ್ನು ನಂಬುವುದಿಲ್ಲ ಎಂದು ಮುಂಬೈ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಮತ್ತು ರಾಜ್ಯಸಭೆಯ ಮಾಜಿ ಸದಸ್ಯ ಡಾ.ಮುಂಗೇಕರ್ ಹೇಳಿದ್ದಾರೆ.
ಯುಪಿಎ ಸರ್ಕಾರದ ಭಾಗವಾಗಿದ್ದ ಡಾ. ಮುಂಗೇಕರ್, ನರೇಂದ್ರ ಮೋದಿ ನೀಡಿರುವ ಹೇಳಿಕೆಯನ್ನು ತಳ್ಳಿ ಹಾಕಿದ್ದು, ಸತ್ಯವನ್ನು ಮುಂದಿಟ್ಟಿದ್ದಾರೆ.
2006ರ ಡಿಸೆಂಬರ್ 9ರಂದು ನಡೆದಿದ್ದ ರಾಷ್ಟ್ರೀಯ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ, ‘ದೇಶದ ದಲಿತರು, ಆದಿವಾಸಿಗಳು, ಒಬಿಸಿ, ಮಹಿಳೆಯರು, ಮಕ್ಕಳು ಅಭಿವೃದ್ಧಿಯ ಫಲವನ್ನು ಸವಿಯಬೇಕು ಮತ್ತು ಅಲ್ಪಸಂಖ್ಯಾತ ಸಮುದಾಯವೂ ಪ್ರಯೋಜನ ಪಡೆಯಬೇಕು’ ಎಂದು ಡಾ ಮನಮೋಹನ್ ಸಿಂಗ್ ಹೇಳಿದ್ದರು. ಅವರ ಹೇಳಿಕೆಯ ಅರ್ಥವೇನೆಂದರೆ, ಎಸ್ಸಿ ಎಸ್ಟಿ, ಒಬಿಸಿ, ಅಲ್ಪಸಂಖ್ಯಾತರು ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಹೊಂದಿದ್ದಾರೆ ಎಂಬುದಾಗಿತ್ತು. ಸಭೆಯ ನಂತರ ಡಾ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ಮತ್ತು ನಾನು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದೆವು. ಅಲ್ಪಸಂಖ್ಯಾತರು ಎಂದರೆ ಧಾರ್ಮಿಕ ಅಲ್ಪಸಂಖ್ಯಾತರು ಮಾತ್ರವಲ್ಲದೆ ಭಾಷಾ ಅಲ್ಪಸಂಖ್ಯಾತರು ಸಹ ಹೌದು. ಸಭೆಯಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಸೇರಿದಂತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು ಎಂದು ಡಾ. ಮುಂಗೇಕರ್ ಹೇಳಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ದೇಶದ ಸಂಪತ್ತಿನ ಮೇಲೆ ಮುಸ್ಲಿಮರಿಗೆ ಮೊದಲ ಹಕ್ಕಿರುತ್ತದೆ ಮತ್ತು ಅವರು ಹೆಚ್ಚು ಮಕ್ಕಳನ್ನು ಹೊಂದಿರುವುದರಿಂದ ಅದನ್ನು ಸಮುದಾಯದೊಳಗೆ ಹಂಚಿಕೆ ಮಾಡಲಾಗುತ್ತದೆ ಎಂದು ಸಿಂಗ್ ಹೇಳಿರುವುದಾಗಿ ಮೋದಿ ಈಗ ಹೇಳುತ್ತಿರುವುದು ಸರಿಯೇ? ಚುನಾವಣೆಯಲ್ಲಿ ಧಾರ್ಮಿಕ ತಿರುವು ನೀಡಲು ಅವರು ಹೀಗೆ ಹೇಳಿಕೆ ನೀಡಿದ್ದಾರೆ. ಪ್ರಧಾನಿ ಸ್ಥಾನದಲ್ಲಿರುವ ವ್ಯಕ್ತಿ ಈ ರೀತಿ ಹೇಳಿಕೆ ನೀಡುವುದು ಸೂಕ್ತವಲ್ಲ. 102 ಲೋಕಸಭಾ ಸ್ಥಾನಗಳಿಗೆ ಮೊದಲ ಹಂತದ ಮತದಾನ ನಡೆದಿದ್ದು, ಬಿಜೆಪಿ ಸೋಲುವ ಚಿತ್ರಣ ಸ್ಪಷ್ಟವಾಗಿದೆ. 40ರ ಗಡಿ ತಲುಪಲಾಗದೆ ಮೋದಿ ನಿರಾಸೆಗೊಂಡಿದ್ದಾರೆ’ಎಂದು ಮುಂಗೇಕರ್ ಕುಟುಕಿದ್ದಾರೆ.
ಅಂತರ ರಾಜ್ಯ
PM Modi-ಕಾಂಗ್ರೆಸ್ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತೆ- ಮಹಿಳೆಯರ ಚಿನ್ನ ಹಾಗೂ ಸಂಪತ್ತನ್ನು ಜಪ್ತಿ ಮಾಡ್ತಾರೆ : ಚುನಾವಣಾ ಸಭೆಯಲ್ಲಿ ಮೋದಿ ವಿವಾದತ್ಮಾಕ ಭಾಷಣ
‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂಪತ್ತಿನ ಸಮಾನ ಹಂಚಿಕೆ ಮಾಡಲಿದೆ’ ಎಂಬ ಕಾಂಗ್ರೆಸ್ ಪಕ್ಷದ ಭರವಸೆ ಹಾಗೂ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಏ.7ರಂದು ನೀಡಿದ್ದ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
“ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯು ಸಂಪತ್ತಿನ ಮರು ಹಂಚಿಕೆಯ ಪ್ರಸ್ತಾಪ ಮಾಡಿದೆ. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಸಹ ಕೆಲವು ವರ್ಷಗಳ ಹಿಂದೆ ದೇಶದ ಸಂಪತ್ತಿನ ಮೇಲೆ ಮುಸ್ಲಿಮರಿಗೆ ಮೊದಲ ಅಧಿಕಾರ ಎಂದಿದ್ದರು. ಇದರ ಅರ್ಥವೇನು,” ಎಂದು ಪ್ರಶ್ನಿಸಿದರು.
‘ಶ್ರಮದಿಂದ ಗಳಿಸಿದ ಸಂಪತ್ತನ್ನು ಕಿತ್ತುಕೊಳ್ಳುವ ಅಧಿಕಾರ ಯಾರಿಗಾದರೂ ಇದೆಯೇ? ಆದರೂ ಇದನ್ನು ಕಾಂಗ್ರೆಸ್ ಮಾಡಲಿದೆ. “ನಗರ ನಕ್ಸಲ್ ಮನಸ್ಥಿತಿಯನ್ನು ಹೊಂದಿರುವವರು ನಮ್ಮ ತಾಯಿ ಹಾಗೂ ಸಹೋದರಿಯರ ಮಂಗಲಸೂತ್ರವನ್ನೂ ಬಿಡುವುದಿಲ್ಲ. ಆ ಮಟ್ಟಕ ಇಳಿಯಲೂ ಅವರು ಹೇಸಿಗೆ ಪಡುವುದಿಲ್ಲ. ಬಡವರ ಅಭಿವೃದ್ಧಿ ಬಿಜೆಪಿಯ ಗುರಿಯಾಗಿದೆ. ಆದರೆ ಕಾಂಗ್ರೆಸ್ ನವರು ಭಯ, ಹಸಿವು ಮತ್ತು ಭ್ರಷ್ಟಾಚಾರವನ್ನು ಅಂಗಡಿಗಳಲ್ಲಿ ಮಾರಾಟ ಮಾಡುತ್ತಾರೆ.” ಎಂದು ಆರೋಪಿಸಿದರು.
ತಾಯಂದಿರು ಶ್ರಮದಿಂದ ಗಳಿಸಿ ಮಾಡಿಸಿಕೊಂಡಿರುವ ಚಿನ್ನದ ತಾಳಿ ಕಿತ್ತುಕೊಳ್ಳಲಾಗುತ್ತದೆ ಹಾಗೂ ಅದನ್ನು ‘ದೇಶದ ಸಂಪತ್ತಿನ ಮೇಲೆ ಮೊದಲ ಹಕ್ಕುದಾರರು ಮುಸ್ಲಿಮರು’ ಎಂದಿದ್ದ ಹಿಂದಿನ ಪ್ರಧಾನಿ ಮನಮೋಹನ ಸಿಂಗ್ ಅವರ ನೀತಿ ಯಂತೆ ಮುಸಲ್ಮಾನರು, ಒಳನುಸುಳುಕೋರರು ಹಾಗೂ ‘ಹೆಚ್ಚು ಮಕ್ಕಳಿದ್ದವರಿಗೆ’ ಹಂಚಲಾಗುತ್ತದೆ’ಎಂದು ಕಿಡಿಕಾರಿದ್ದಾರೆ. ರಾಜಸ್ಥಾನದಲ್ಲಿ ಭಾನುವಾರ ಬಿಜೆಪಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದರೆ ಎಲ್ಲರ ಆಸ್ತಿ ಸಮೀಕ್ಷೆ ಮಾಡುತ್ತೇವೆ ಎಂದು ಕಾಂಗ್ರೆಸ್ ಹೇಳುತ್ತದೆ.
‘ಹೆಚ್ಚು ಮಕ್ಕಳಿದ್ದವರಿಗೆ’ ನಿಮ್ಮ ಆಸ್ತಿ ಹೋಗುತ್ತೆ
ಕಾಂಗ್ರೆಸ್ ಗೆದ್ದರೆ ನಮ್ಮ ಮಾತೆಯರು ಹಾಗೂ ಸೋದರಿಯರ ಚಿನ್ನವನ್ನು ಜಪ್ತಿ ಮಾಡಲಾಗುತ್ತದೆ. ಹರಿದು ಹಂಚಲಾಗುತ್ತದೆ. ಯಾರಿಗೆ ಹಂಚಲಾಗುತ್ತದೆ? ಯಾರಿಗೆ ಹೆಚ್ಚು ಮಕ್ಕಳಿವೆಯೋ ಅವರಿಗೆ, ಅಂದರೆ ಒಳನುಸುಳುಕೋರರಿಗೆ ನಿಮ್ಮ ಸಂಪತ್ತು ಹೋಗುತ್ತದೆ. ಇದನ್ನು ನೀವು ಒಪ್ಪುತ್ತೀರಾ? – ನರೇಂದ್ರ ಮೋದಿ ಪ್ರಧಾನಿ
ಅಂತರ ರಾಜ್ಯ
Television-ದೂರದರ್ಶನವನ್ನು ಜಾಗತಿಕ ಬ್ರ್ಯಾಂಡ್ ಮಾಡಲು ಕೇಂದ್ರದ ಸಿದ್ದತೆ – ಚಿಹ್ನೆ ಬಣ್ಣ ಕಿತ್ತಳೆ ವರ್ಣಕ್ಕೆ ಬದಲಾವಣೆ -ಹೊಸ ಸುದ್ದಿ ಸಂಸ್ಥೆ ಆರಂಭಕ್ಕೆ ಪ್ಲಾನ್
ನವದೆಹಲಿ (ಏ.22): ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಮರಳಿ 3ನೇ ಸಲ ಅಧಿಕಾರಕ್ಕೆ ಬಂದಿದ್ದೇ ಆದಲ್ಲಿ ದೂರದರ್ಶನ ಮತ್ತು ಅದರ ಮಾತೃಸಂಸ್ಥೆ ಪ್ರಸಾರ ಭಾರತಿಗೆ ಹೊಸ ರೂಪ ನೀಡಲು ನಿರ್ಧರಿಸಲಾಗಿದೆ. ಚಿಹ್ನೆ ಬಣ್ಣ ಕಿತ್ತಳೆ ವರ್ಣಕ್ಕೆ ಬದಲಾವಣೆಯಾಗುವ ಮೂಲಕ ಸುದ್ದಿಯಲ್ಲಿರುವ ಕೇಂದ್ರ ಸರ್ಕಾರದ ಅಧೀನದ ದೂರದರ್ಶನ, ಮುಂದಿನ ದಿನಗಳಲ್ಲಿ ಬೃಹತ್ ಬದಲಾವಣೆಗೆ ಸಜ್ಜಾಗಿದೆ.
ಹಾಲಿ ಭಾರತೀಯ ಗ್ರಾಹಕರಿಗೆ ಸೀಮಿತವಾಗಿರುವ ದೂರದರ್ಶನವನ್ನು ಜಾಗತಿಕ ಬ್ರ್ಯಾಂಡ್ ಆಗಿ ರೂಪಿಸುವ ಮತ್ತು ಈ ಸಂಬಂಧ 15 ದೇಶಗಳಲ್ಲಿ ಪ್ರಾದೇಶಿಕ ಕಚೇರಿಗಳನ್ನು ಆರಂಭಿಸುವ ಗುರಿಯನ್ನೂ ಸರ್ಕಾರ ಹಾಕಿಕೊಂಡಿದೆ ಎಂದು ಇಂಗ್ಲಿಷ್ ಸುದ್ದಿವಾಹಿನಿಯೊಂದು ವರದಿ ಮಾಡಿದೆ. ಜೊತೆಗೆ ಪ್ರಸಾರ ಭಾರತಿಯ ಶಬ್ದ್ ಪೋರ್ಟಲ್ ಅನ್ನು ಜಾಗತಿಕ ಸುದ್ದಿಸಂಸ್ಥೆಯಾಗಿ ಅಭಿವೃದ್ಧಿಪಡಿಸಲಾಗುವುದು. ಇದರ ಮೂಲಕ ನಿತ್ಯ ಆಡಿಯೋ, ವಿಡಿಯೋ, ಫೋಟೋ ಮತ್ತು ಇತರೆ ಸೇವೆ ನೀಡಲಾಗುವುದು.
ಇದರ ವ್ಯಾಪ್ತಿಗೆ ದೇಶ-ವಿದೇಶಗಳ ಸಾವಿರಕ್ಕೂ ಹೆಚ್ಚು ಮಾಧ್ಯಮಗಳನ್ನು ಸೇರಿಸಿಕೊಳ್ಳಲಾಗುವುದು. ಜೊತೆಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಹಬ್ ಆರಂಭಿಸುವ ಮತ್ತು ಭಾರತ್ ನಮನ್ ಎಂಬ ಪೋರ್ಟಲ್ ಆರಂಭಿಸುವ ಇರಾದೆಯೂ ಇದೆ. ಇದರಲ್ಲಿ ದೂರದರ್ಶನದ ಎಲ್ಲಾ ಹಳೆಯ ಮಾಹಿತಿಗಳು, ಪುಸ್ತಕಗಳು, ಫೋಟೋ ಜನರಿಗೆ ಸುಲಭವಾಗಿ ಸಿಗುವಂತೆ ನೋಡಿಕೊಳ್ಳಲಾಗುವುದು. ಇನ್ನು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತತ್ಕ್ಷಣದ ಭಾಷಾಂತರ, ಉಪಶೀರ್ಷಿಕೆ ಮತ್ತು ಕೃತಕ ಬುದ್ಧಿಮತ್ತೆ ಆಧರಿತ ವಿಷಯ ಸಂಗ್ರಹ ಸೇವೆ ನೀಡಲಿದೆ.
ಅಲ್ಲದೆ ಜಾಗತಿಕ ಮಾಧ್ಯಮ ಮತ್ತು ಮನರಂಜನಾ ಸಮ್ಮೇಳನ ಆಯೋಜಿಸುವ ಮತ್ತು ಸುಳ್ಳು ಸುದ್ದಿ ಪತ್ತೆಗೆ ಇರುವ ಪಿಐಬಿ ಫ್ಯಾಕ್ಟ್ ಚೆಕ್ ಅನ್ನು ಇನ್ನಷ್ಟು ವಿಸ್ತರಿಸುವ ಗುರಿ ರೂಪಿಸಲಾಗಿದೆ. ಇನ್ನು ದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮಾಸ್ ಕಮ್ಯುನಿಕೇಷನ್ನಲ್ಲಿ ಸ್ನಾತಕೋತ್ತರ ಕೋರ್ಸ್ ಆರಂಭಿಸುವ ಉದ್ದೇಶವೂ ಇದೆ. ಅಲ್ಲದೆ ಡಿಡಿ ಫ್ರಿ ಡಿಶ್ ಸೇವೆಯನ್ನು ನೆರೆಹೊರೆಯ ದೇಶಗಳಿಗೂ ವಿಸ್ತರಿಸುವ, ಅದರ ವ್ಯಾಪ್ತಿಗೆ ಇನ್ನಷ್ಟು ಚಾನೆಲ್ ಸೇರಿಸಿಕೊಳ್ಳುವ ಇರಾದೆಯೂ ಇದೆ. ಸತತ 3ನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸ ಹೊಂದಿರುವ ಮೋದಿ ಸರ್ಕಾರ, ಹೊಸ ಸರ್ಕಾರದಲ್ಲಿನ ತನ್ನ ಮೊದಲ 100 ದಿನದ ಕಾರ್ಯಕ್ರಮ ಮತ್ತು ಮುಂದಿನ 5 ವರ್ಷಗಳ ಯೋಜನೆಯ ಭಾಗವಾಗಿ ಈ ಕಾರ್ಯಕ್ರಮ ರೂಪಿಸಿದೆ.
-
ಪುತ್ತೂರು2 days ago
ಅರುಣ್ ಪುತ್ತಿಲ ಮನೆ ಬಳಿ ಅಣ್ಣಾಮಲೈಗೆ ಅದ್ದೂರಿ ಸ್ವಾಗತ
-
ದಕ್ಷಿಣ ಕನ್ನಡ2 days ago
Annamali Road Show ಅಣ್ಣಾಮಲೈ ಪುತ್ತೂರಿನ ರೋಡ್ ಶೋ ಸಮಯ ಬದಲಾವಣೆ – ಮಾಹಿತಿ ನೀಡದ ಪುತ್ತೂರು ಬಿಜೆಪಿ – ಕಾಲ್ ಎತ್ತದ ಮುಖಂಡರು ; ಗೊಂದಲದಲ್ಲಿ ಕಾರ್ಯಕರ್ತರು
-
ದಕ್ಷಿಣ ಕನ್ನಡ2 days ago
Ashok Kumar Rai | ಮಿಸ್ಟರ್ ಅಶೋಕ್ ರೈ ‘ಯೂ ಆರ್ ಲಯನ್ ಆಫ್ ಸೌತ್ ಕೆನರಾ ಯೂ ಆರ್ ಗ್ರೇಟ್ ಎಂಎಲ್ಎ’ – ಶಾಸಕ ಅಶೋಕ್ ರೈಯನ್ನು ಹೊಗಳಿದ ಕಾಂಗ್ರೇಸ್ ಹೈಕಮಾಂಡ್ ಮಟ್ಟದ ನಾಯಕ ಸುರ್ಜೆವಾಲ
-
ದಕ್ಷಿಣ ಕನ್ನಡ2 days ago
ವಿಟ್ಲ : ದುರಸ್ತಿಗೆ ಬಾವಿಗಿಳಿದ ಇಬ್ಬರು ಅಮ್ಲಜನಕ ಕೊರತೆಯಿಂದ ಮೃತ್ಯು
-
ಅಪರಾಧ2 days ago
Everest fish curry-ಎವರೆಸ್ಟ್ ಫಿಶ್ಕರಿ ಮಸಾಲಾದಲ್ಲಿ ಎಥಿಲಿನ್ ಆಕ್ಸೆಡ್ ಪತ್ತೆ
-
ರಾಜಕೀಯ2 days ago
ಪುತ್ತೂರಿನ ಇಂದಿನ ಬಿಜೆಪಿ ರೋಡ್ ಶೋ ಸಮಯ ಬದಲಾವಣೆ – ನಡುಮಧ್ಯಾಹ್ನ ನಡೆಸಲಿದ್ದಾರೆ ಅಣ್ಣಾಮಲೈ ರೋಡ್ ಶೋ
-
ನಿಧನ ವಾರ್ತೆ21 hours ago
Run over-ತಂದೆಯಿಂದಲೇ ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣ
-
ಮಂಗಳೂರು2 days ago
Heat wave-ರಾಜ್ಯದಲ್ಲಿ ಇನ್ನೂ ಐದು ದಿನ ಉಷ್ಣ ಮಾರುತ ದಾಳಿ; ಕರಾವಳಿಯಲ್ಲಿ ಮುಂದುವರಿದ ಪ್ರಖರ ಬಿಸಿಲು