ವರದಿಗಳು
ವಿದ್ಯಾಮಾತ ಅಕಾಡೆಮಿಯಲ್ಲಿ ಉಚಿತ ಕಂಪ್ಯೂಟರ್ ತರಬೇತಿಯೊಂದಿಗೆ IAS, IPS, ಬ್ಯಾಂಕಿಂಗ್, KMF, ಕ್ಯಾಂಪ್ಕೋ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪ್ರಾರಂಭ
ಪುತ್ತೂರು : ಬ್ಯಾಂಕಿಂಗ್, ಪೊಲೀಸ್ ನೇಮಕಾತಿಯಿಂದ ಹಿಡಿದು ಅತ್ಯುನ್ನತ ಭಾರತೀಯ ನಾಗರಿಕ ಸೇವೆಗಳಾದ IAS, IPS, IFS, IRS ವರೆಗಿನ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಪುತ್ತೂರಿನ ಏಕೈಕ ತರಬೇತಿ ಅಕಾಡೆಮಿಯಾಗಿರುವ ವಿದ್ಯಾಮಾತ ಅಕಾಡೆಮಿಯಲ್ಲಿ ರಾಷ್ಟ್ರೀಕೃತ ಹಾಗೂ ಗ್ರಾಮೀಣ ಬ್ಯಾಂಕ್, ಕೆ.ಯಂ.ಎಫ್ ಸೇರಿದಂತೆ ಎಲ್ಲಾ ಸಹಕಾರಿ ಸಂಘಗಳು, ಕ್ಯಾಂಪ್ಕೋ ನೇಮಕಾತಿ ಪರೀಕ್ಷೆ , ಸ್ಟಾಫ್ ಸೆಲೆಕ್ಷನ್ ಕಮಿಷನ್ (ಸಿಬ್ಬಂದಿ ಆಯ್ಕೆ ಆಯೋಗ), ಪೊಲೀಸ್ ಸಬ್ ಇನ್ಸ್ ಪೆಕ್ಟರ್ / ಕಾನ್ಸ್ಟೇಬಲ್ , ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಕಾರ್ಯದರ್ಶಿ (ಗ್ರೇಡ್-1 & ಗ್ರೇಡ್-2) ನೇಮಕಾತಿಗಳಿಗೆ ಸಂಬಂಧಿಸಿದ ಪರೀಕ್ಷೆಗಳ ತರಬೇತಿಯು ಪ್ರಾರಂಭಗೊಂಡಿದ್ದು, ಸದ್ಯ ಓದು ಮುಗಿಸಿರುವ / ಸದ್ಯ ಓದುತ್ತಿರುವ / ಉದ್ಯೋಗದಲ್ಲಿರುವವರು ಈ ತರಬೇತಿಯನ್ನು ಪಡೆದುಕೊಳ್ಳಬಹುದು.
ವಿದ್ಯಾಮಾತದಲ್ಲಿದೆ ಉಚಿತ ಕಂಪ್ಯೂಟರ್ ತರಬೇತಿ: ಈ ತರಬೇತಿಯನ್ನು ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾಗಿ ಕಂಪ್ಯೂಟರ್ ತರಬೇತಿಯನ್ನು ಉಚಿತವಾಗಿ ವಿದ್ಯಾಮಾತ ಅಕಾಡೆಮಿಯ ಮಾತೃಸಂಸ್ಥೆಯಾದ ‘ವಿದ್ಯಾಮಾತ ಫೌಂಡೇಶನ್ ‘ನ ಸಹಯೋಗದಲ್ಲಿ ನೀಡಲಾಗುವುದು.
ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರವೇಶಾತಿಯಲ್ಲಿ ಗ್ರಾಮೀಣ, ಕನ್ನಡ ಮಾಧ್ಯಮ , ಬಿಪಿಎಲ್ , ಅಂತ್ಯೋದಯ ಕಾರ್ಡುದಾರರಿಗೆ ಕೇವಲ ತರಬೇತುದಾರರ ಗೌರವಧನವನ್ನಷ್ಟೇ ವಿಧಿಸಲಾಗುವುದು.
ಆಫ್ಲೈನ್ ತರಗತಿಗಳು ವಾರದ 4 ದಿನ ಬೆ.9 ರಿಂದ 3 ರ ವರೆಗೆ ಹಾಗೂ ಆನ್ಲೈನ್ ತರಗತಿಗಳು ರಾತ್ರಿ 7 ರಿಂದ 9 ರ ವರೆಗೆ ಲಭ್ಯವಿರುತ್ತದೆ.
ವಾರಾಂತ್ಯದಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಪರೀಕ್ಷೆಗಳು, ಉಚಿತ ಕಾರ್ಯಾಗಾರಗಳು, ದಿನನಿತ್ಯದ ಖಾಸಗಿ ಹಾಗೂ ಸರಕಾರಿ ಉದ್ಯೋಗಗಳ ಮಾಹಿತಿಗಳು ಮತ್ತು ದಿನನಿತ್ಯದ ಪ್ರಚಲಿತ ವಿದ್ಯಮಾನಗಳ PDF ಗಳನ್ನು ಉಚಿತವಾಗಿ ನೀಡಲಾಗುವುದು.
ಪ್ರವೇಶಾತಿಯನ್ನು ಪಡೆದುಕೊಂಡ ವಿದ್ಯಾರ್ಥಿಗಳಿಗೆ ಎಲ್ಲಾ ನೇಮಕಾತಿಯ ಅರ್ಜಿಗಳನ್ನು ಉಚಿತವಾಗಿ ಹಾಕಿಕೊಡಲಾಗುತ್ತದೆ ಮತ್ತು ಪರೀಕ್ಷೆಯ ಪ್ರವೇಶ ಪತ್ರ (ಹಾಲ್ ಟಿಕೆಟ್) ವರೆಗಿನ ಎಲ್ಲಾ ಮಾಹಿತಿಗಳನ್ನು ಒದಗಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ವಿದ್ಯಾಮಾತ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್,ಒಂದನೇ ಮಹಡಿ,ಎಪಿಯಂಸಿ ರಸ್ತೆ, ಸಿಟಿ ಆಸ್ಪತ್ರೆ ಹತ್ತಿರ ಪುತ್ತೂರು ದ.ಕ 574201
ಫೋನ್ : 9620468869 / 8590773486 / 9148935808 ನ್ನು ಸಂಪರ್ಕಿಸಬಹುದು.
ಅಂತರ ರಾಜ್ಯ
Google Ad-ಗೂಗಲ್ ಆಡ್ ಗೆ 3 ತಿಂಗಳಿನಲ್ಲಿ 39 ಕೋಟಿ ರೂ. ಖರ್ಚು ಮಾಡಿದ ಬಿಜೆಪಿ
ಹೊಸದಿಲ್ಲಿ : ಶೋಧ ಜಾಲತಾಣ ಗೂಗಲ್ ನಲ್ಲಿ ಈ ವರ್ಷದ ಜನವರಿ 1ರಿಂದೀಚೆಗೆ ಜೆಪಿಯು ತನ್ನ 81,874 ರಾಜಕೀಯ ಜಾಹೀರಾತುಗಳಿಗಾಗಿ 39 ಕೋಟಿ ರೂ. ವೆಚ್ಚ ಮಾಡಿದೆ ಎಂದು ಗೂಗಲ್ ನ ಜಾಹೀರಾತು ಪಾರದರ್ಶಕತಾ ಕೇಂದ್ರದ ದತ್ತಾಂಶಗಳು ಪ್ರದರ್ಶಿಸಿವೆ.
ಭಾರತದಲ್ಲಿ ರಾಜಕೀಯ ಜಾಹೀರಾತುಗಳಿಗಾಗಿ ಈ ವರ್ಷ ಒಟ್ಟು ನಿಧಿಯ ಶೇ.32.8ರಷ್ಟನ್ನು ಮಿಸಲಿಟ್ಟಿದ್ದು, ಈ ವರ್ಷ ರಾಜಕೀಯ ಜಾಹೀರಾತುಗಳಿಗಾಗಿ ಕೇಂದ್ರ ಸರಕಾರದ ನೋಡಲ್ ಜಾಹೀರಾತು ಏಜೆನ್ಸಿಯಾದ ಕೇಂದ್ರೀಯ ಸಂವಹನ ಇಲಾಖೆಯು 32 ಕೋಟಿ ರೂ. ವ್ಯಯಿಸಿದೆ.
ಭಾರತೀಯ ರಾಜಕೀಯ ಕ್ರಿಯಾ ಸಮಿತಿ ಸಂಸ್ಥೆಯ ರಾಜಕೀಯ ಕಾರ್ಯತಂತ್ರ ನಿರ್ವಹಣಾ ಕಂಪೆನಿಯಾದ ಇಂಡಿಯನ್ ಪಿಎಸಿ ಕನ್ಸಲಿಂಗ್ ಪ್ರೈ. ಲಿಮಿಟೆಡ್ 7.25 ಕೋಟಿ ರೂ. ವೆಚ್ಚ ಮಾಡಿರುವುದಾಗಿ ದತ್ತಾಂಶಗಳು ಪ್ರದರ್ಶಿಸಿವೆ. ಈ ಕಂಪೆನಿಯು ಪಶ್ಚಿಮಬಂಗಾಳದಲ್ಲಿ ಟಿಎಂಸಿಗಾಗಿ ಹಾಗೂ ಆಂಧ್ರಪ್ರದೇಶದಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡುತ್ತಿರುವುದಾಗಿ ಇಕನಾಮಿಕ್ ಟೈಸ್ ವರದಿ ತಿಳಿಸಿದೆ.
ಜನವರಿ 1ರಿಂದೀಚೆಗೆ ಬಿಜು ಜನತಾದಳವು 24 ಕೋಟಿ ರೂಪಾಯಿನ್ನು 144 ಜಾಹೀರಾತುಗಳಿಗಾಗಿ ವ್ಯಯಿಸಿದೆ. ಗೂಗಲ್ನಲ್ಲಿ ಜಾಹೀರಾತುಗಳಿಗಾಗಿ ಬಿಜೆಪಿಯು ಬಹುತೇಕ ವೆಚ್ಚವನ್ನು ಫೆಬ್ರವರಿ ಹಾಗೂ ಮಾರ್ಚ್ನಲ್ಲಿ ನಡೆಸಿದೆ. ಇನ್ನೊಂದೆಡೆ ಕಾಂಗ್ರೆಸ್ ಪಕ್ಷ ತನ್ನ ಬಹುತೇಕ ಹಣವನ್ನು ಎಪ್ರಿಲ್ ನಲ್ಲಿ ಜಾಹೀರಾತುಗಳಿಗಾಗಿ ವ್ಯಯಿಸಿದೆ.
ಬಿಜೆಪಿಯು ಬಹುತೇಕ ಹಣವನ್ನು ಒಡಿಶಾ , ಉತ್ತರಪ್ರದೇಶ, ಹಾಗೂ ಬಿಹಾರದಲ್ಲಿ ಖರ್ಚು ಮಾಡಿದರೆ, ಮಹಾರಾಷ್ಟ್ರ, ಬಿಹಾರ ಹಾಗೂ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವು ಹೆಚ್ಚಿನ ವೆಚ್ಚ ಮಾಡಿದೆ ಎಂದು ಇಕನಾಮಿಕ್ ಟೈಸ್ ವರದಿ ತಿಳಿಸಿದೆ.
ಅಂತರ ರಾಜ್ಯ
Maruti Suzuki-ಭಾರತೀಯರ ಬಹು ಬೇಡಿಕೆಯ ಮಾಡೆಲ್ ಗಳಾದ ಮಾರುತಿ ಸುಜುಕಿ ಸ್ವಿಫ್ಟ್, ಗ್ರ್ಯಾಂಡ್ ವಿಟಾರಾ ಕಾರುಗಳ ಬೆಲೆ ಹೆಚ್ಚಳ
ಮುಂಬೈ: ಭಾರತದ ಅತಿದೊಡ್ಡ ಕಾರು ತಯಾರಿಕಾ ಸಂಸ್ಥೆ ಮಾರುತಿ ಸುಜುಕಿ ತನ್ನ ಜನಪ್ರಿಯ ಮಾದರಿಗಳಾದ ಸ್ವಿಫ್ಟ್ ಮತ್ತು ಗ್ರ್ಯಾಂಡ್ ವಿಟಾರಾದ ಆಯ್ದ ಮಾಡಲ್ ಗಳ ಬೆಲೆ ಏರಿಕೆ ಮಾಡಿದ್ದು, ನೂತನ ದರಗಳು ತಕ್ಷಣವೇ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ.
2024 ರ ಜನವರಿಯಲ್ಲಿ ಕಂಪನಿಯು ತನ್ನ ಮಾದರಿ ಶ್ರೇಣಿಯಾದ್ಯಂತ ಬೆಲೆಗಳನ್ನು ಹೆಚ್ಚಿಸಿತ್ತು. ಇದೀಗ ಕೆಲವೇ ತಿಂಗಳುಗಳ ಅಂತರದಲ್ಲಿ ಮತ್ತೆ ದರ ಏರಿಕೆ ಮಾಡಿದೆ. ಹೆಚ್ಚುತ್ತಿರುವ ಹಣದುಬ್ಬರದ ಒತ್ತಡಗಳು ಮತ್ತು ಹೆಚ್ಚಿದ ನಿರ್ಮಾಣ ವೆಚ್ಚಗಳನ್ನು ಉಲ್ಲೇಖಿಸಿ ಸಂಸ್ಥೆ ಈ ದರ ಏರಿಕೆ ಮಾಡಿದೆ ಎಂದು ಹೇಳಲಾಗಿದೆ.
ಸಂಸ್ಥೆಯ ಮೂಲಗಳ ಪ್ರಕಾರ ಮಾರುತಿ ಸುಜುಕಿ ಸಂಸ್ಥೆಯ ಜನಪ್ರಿಯ ಮಾದರಿಗಳಲ್ಲಿ ಪ್ರಮುಖವಾದ ಸ್ವಿಫ್ಟ್ ಕಾರುಗಳ ಬೆಲೆಗಳನ್ನು 25,000 ರೂ.ವರೆಗೆ ಹೆಚ್ಚಿಸಲಾಗಿದ್ದು, ಗ್ರಾಂಡ್ ವಿಟಾರಾ ಸಿಗ್ಮಾ ಮಾಡೆಲ್ ನ ಬೆಲೆಯಲ್ಲಿ 19,000 ರೂ ಏರಿಕೆಯಾಗಿದೆ ಎಂದು ಹೇಳಲಾಗಿದೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಂಸ್ಥೆ, ‘ನಾವು ಸ್ವಲ್ಪ ಸಮಯದವರೆಗೆ ಹೆಚ್ಚಿದ ಇನ್ಪುಟ್ ಮತ್ತು ನಿರ್ಮಾಣ ವೆಚ್ಚವನ್ನು ಸರಿದೂಗಿಸಲು ಪ್ರಯತ್ನಿಸುತ್ತಿದ್ದೇವೆ. ಆದರೆ ಪ್ರಸ್ತುತ ಮಾರುಕಟ್ಟೆ ಪರಿಸ್ಥಿತಿಗಳು ನಮ್ಮ ಗ್ರಾಹಕರಿಗೆ ಕೆಲವು ಬೆಲೆ ಏರಿಕೆ ಹೇರಲು ಒತ್ತಾಯಿಸಿದೆ. ಬೆಲೆ ಹೆಚ್ಚಳವು ಕೆಲವು ಮಾದರಿಗಳಲ್ಲಿ ಗಣನೀಯವಾಗಿರುತ್ತದೆ ಎಂದು ಹೇಳಿದೆ.
ಸ್ವಿಫ್ಟ್, ಕಾರುಗಳ ಬೆಲೆ ಏರಿಕೆಯಿಂದಾಗಿ ಅದರ ಮಾರಾಟದ ಮೇಲೆ ಗಮನಾರ್ಹ ಪರಿಣಾಮ ಬೀರುವ ಸಾಧ್ಯತೆಯಿದೆ. ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಇದು ಒಂದಾಗಿದೆ. ಕಾಂಪ್ಯಾಕ್ಟ್ SUV ವಿಭಾಗದಲ್ಲಿ ತುಲನಾತ್ಮಕವಾಗಿ ಹೊಸದಾಗಿ ಮಾರುಕಟ್ಟೆ ಪ್ರವೇಶಿಸಿದ್ದ ಗ್ರಾಂಡ್ ವಿಟಾರಾ, ಹೆಚ್ಚಿದ ಬೆಲೆಗಳೊಂದಿಗೆ ಖರೀದಿದಾರರನ್ನು ಆಕರ್ಷಿಸುವಲ್ಲಿ ಸವಾಲುಗಳನ್ನು ಎದುರಿಸಬಹುದು.
ಮುಖ್ಯವಾಗಿ ಕಚ್ಚಾ ವಸ್ತುಗಳ ಬೆಲೆ ಏರಿಕೆ, ಜಾಗತಿಕ ಪೂರೈಕೆ ಸರಪಳಿ ಅಡೆತಡೆಗಳು ಸೇರಿದಂತೆ ಒಟ್ಟಾರೆ ಆರ್ಥಿಕ ಮಂದಗತಿ ಸೇರಿದಂತೆ ವಿವಿಧ ಅಂಶಗಳ ಪರಿಣಾಮವಾಗಿ ಬೆಲೆ ಏರಿಕೆಯಾಗಬಹುದು. ಭಾರತೀಯ ಆಟೋಮೊಬೈಲ್ ಉದ್ಯಮವು ಕೆಲವು ಸಮಯದಿಂದ ಈ ಸಮಸ್ಯೆಗಳನ್ನು ಎದುರಿಸುತ್ತಿದೆ. ಮಾರುತಿ ಸುಜುಕಿಯ ಇತ್ತೀಚಿನ ಬೆಲೆ ಏರಿಕೆ ಕ್ರಮವು ಸವಾಲಿನ ಮಾರುಕಟ್ಟೆ ಪರಿಸ್ಥಿತಿಗಳ ಪ್ರತಿಬಿಂಬವಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಸಂಸ್ಥೆಯು ಈ ಮಾದರಿಯ ಕಾರುಗಳ ದರ ಏರಿಕೆಗೆ ಏಕೆ ಮುಂದಾಗಿದೆ ಎಂಬುದು ಸ್ಪಷ್ಟವಾಗಿಲ್ಲ, ಆದರೆ ಹ್ಯಾಚ್ಬ್ಯಾಕ್ ವಿಭಾಗ (ಸ್ವಿಫ್ಟ್) ಮತ್ತು ಕಾಂಪ್ಯಾಕ್ಟ್ ಎಸ್ಯುವಿ ವಿಭಾಗ (ಗ್ರ್ಯಾಂಡ್ ವಿಟಾರಾ) ವಿಶಿಷ್ಟ ಸವಾಲುಗಳನ್ನು ಎದುರಿಸುತ್ತಿದೆ, ಉದಾಹರಣೆಗೆ ಹೆಚ್ಚಿದ ಸ್ಪರ್ಧೆ ಅಥವಾ ಗ್ರಾಹಕರ ಆದ್ಯತೆಗಳನ್ನು ಬದಲಾಯಿಸುವುದು, ಈ ನಿರ್ದಿಷ್ಟ ಮಾದರಿಗಳಿಗೆ ಬೆಲೆಗಳನ್ನು ಹೆಚ್ಚಿಸುವ ನಿರ್ಧಾರದ ಮೇಲೆ ಪ್ರಭಾವ ಬೀರಬಹುದು ಎಂದು ಹೇಳಲಾಗಿದೆ.
ಅಂತರ ರಾಜ್ಯ
Rahul Gandhi-ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೇ ಪ.ಜಾ., ಪ.ಪಂ. ಹಾಗೂ ಹಿಂದುಳಿದ ವರ್ಗದ ಮಹಿಳೆಯರ ಖಾತೆಗೆ ವಾರ್ಷಿಕ 1 ಲಕ್ಷ ರೂ. ವರ್ಗಾವಣೆ : ರಾಹುಲ್ ಗಾಂಧಿ ಘೋಷಣೆ
ಸಿಯೋನಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತನ್ನ ಪಕ್ಷ ಜಯ ಗಳಿಸುವ ಆತ್ಮವಿಶ್ವಾಸವನ್ನು ಸೋಮವಾರ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ನೂತನ ಸರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಮಹಿಳೆಯರ ಖಾತೆಗಳಿಗೆ ವಾರ್ಷಿಕ 1 ಲಕ್ಷ ರೂ. ವರ್ಗಾಯಿಸಲಿದೆ ಎಂದು ಹೇಳಿದ್ದಾರೆ.
ಮಂದ್ಲಾ ಲೋಕಸಭಾ ಕ್ಷೇತ್ರದ ಭಾಗವಾಗಿರುವ ಸಿಯೋನಿ ಜಿಲ್ಲೆಯ ಧನೋರಾದಲ್ಲಿ Rallyಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನಿರುದ್ಯೋಗಿ ಯುವ ಜನರಿಗೆ ಖಾತರಿಪಡಿಸಿದ ಶಿಷ್ಯ ವೃತ್ತಿ ಒದಗಿಸುವ ಭರವಸೆ ನೀಡಿದರು.
ಮೂರರಿಂದ ನಾಲ್ಕು ಕ್ರಾಂತಿಕಾರಿ ಹೆಜ್ಜೆಗಳನ್ನು ನಮ್ಮ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದ್ದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಬಡ ಕುಟುಂಬಗಳ ಮಹಿಳೆಯರ ಬ್ಯಾಂಕ್ಖಾತೆಗಳಿಗೆ 1 ಲಕ್ಷ ರೂ. ವರ್ಗಾಯಿಸುತ್ತೇವೆ. ಈ ಮೂಲಕ ನಾವು ಪ್ರತಿ ತಿಂಗಳು ಅವರ ಖಾತೆಗಳಿಗೆ ಸಾವಿರಾರು ರೂಪಾಯಿ ವರ್ಗಾಯಿಸಲಿದ್ದೇವೆ” ಎಂದು ಅವರು ಹೇಳಿದ್ದಾರೆ.
“ಕೇಂದ್ರದಲ್ಲಿ ಸರಕಾರ ರೂಪಿಸಿದ ಬಳಿಕ ನಾವು ಉದ್ಯೋಗದಲ್ಲಿ ಗುತ್ತಿಗೆ ವ್ಯವಸ್ಥೆಯನ್ನು ರದ್ದುಗೊಳಿಸಲಿದ್ದೇವೆ. ಸಾರ್ವಜನಿಕ ವಲಯದಲ್ಲಿ 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಿದ್ದೇವೆ. ರೈತರಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಗೆ ಕಾನೂನು ರೂಪಿಸಲಿದ್ದೇವೆ” ಎಂದು ಅವರು ತಿಳಿಸಿದರು.
ಸರಕಾರಿ ಹಾಗೂ ಖಾಸಗಿ ವಲಯದಲ್ಲಿ ದೇಶದ ನಿರುದ್ಯೋಗಿ ಯುವ ಜನರಿಗೆ ಒಂದು ವರ್ಷ ಶಿಷ್ಯ ವೃತ್ತಿ ಹಾಗೂ ಈ ಅವಧಿಯಲ್ಲಿ 1 ಲಕ್ಷ ರೂ. ಭತ್ತೆಯ ಖಾತರಿ ನೀಡುವ ನೂತನ ಕಾನೂನನ್ನು ನಾವು ಜಾರಿಗೆ ತರಲಿದ್ದೇವೆ” ಎಂದು ರಾಹುಲ್ ಗಾಂಧಿ ಹೇಳಿದರು.
ಬುಡಕಟ್ಟು ಜನರನ್ನು ಆದಿವಾಸಿ ಎಂದು ಕರೆಯುವ ಬದಲು ಬಿಜೆಪಿ ಉದ್ದೇಶಪೂರ್ವಕವಾಗಿ ‘ವನವಾಸಿ’ ಎಂದು ಕರೆಯುತ್ತಿದೆ. ಅವರನ್ನು ಭೂಮಿಯಿಂದ ಪ್ರತ್ಯೇಕಿಸಲು ಹಾಗೂ ನೀರು, ಅರಣ್ಯ ಭೂಮಿಯ ಮೇಲಿನ ಅವರ ಹಕ್ಕನ್ನು ಕಿತ್ತುಕೊಳ್ಳುಲು ಬಿಜೆಪಿ ಅವರನ್ನು ವನವಾಸಿ ಎಂದು ಕರೆಯುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದರು.
-
ಪುತ್ತೂರು1 day ago
ನರಿಮೊಗರು : ಬೈಕ್ – ಜೀಪು ನಡುವೆ ಭೀಕರ ಅಪಘಾತ : ಬೈಕ್ ಸವಾರ ಮೃತ್ಯು – ಇಬ್ಬರು ಮಕ್ಕಳು ಗಂಭೀರ : ಬೈಕನ್ನು ಎಳೆದೊಯ್ದ ಜೀಪು – ಜೀಪು ತೆಗೆಯಲು ಸಾರ್ವಜನಿಕರ ತೀವ್ರ ವಿರೋಧ
-
ದಕ್ಷಿಣ ಕನ್ನಡ2 hours ago
ನಿಮ್ಮ ಕಾವಲುಗಾರನಾಗಿ ನಾನಿರುವೆ: ಪದ್ಮರಾಜ್ ಆರ್. ಪೂಜಾರಿ; ಬಂಟ್ವಾಳದಲ್ಲಿ ಬಿರುಸಿನ ಪ್ರಚಾರ
-
ಸಾಮಾಜಿಕ ಮಾಧ್ಯಮ6 hours ago
Dhruv Rathee | ಕನ್ನಡ ಸೇರಿ ಪಂಚಭಾಷೆಯಲ್ಲಿ ಯೂಟ್ಯೂಬ್ ಚಾನೆಲ್ ಪ್ರಾರಂಭಿಸಿದ ದೇಶದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ