ವರದಿಗಳು
ವಿಟ್ಲ : ದೇವಸ್ಥಾನದ ಮುಂಭಾಗದ ಕೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ | ನಾಲ್ವರ ವಿರುದ್ದ ಪ್ರಕರಣ

ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದ ಕೆರೆಯೊಂದರಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿಯ ವಿರುದ್ದ ಪ್ರಕರಣ ದಾಖಲಾಗಿದೆ.
ವಿಟ್ಲ ನಿವಾಸಿಗಳಾದ ಪ್ರಶಾಂತ್, ದಿನೇಶ್, ಯಶವಂತ, ಕೇಪು ನಿವಾಸಿ ರಕ್ಷಿತ್ ಪ್ರಕರಣ ದಾಖಲಾದ ಆರೋಪಿಗಳು. ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ ರವರ ಮಗಳು, ವಿಟ್ಲದ ಡೆಂಟಲ್ ಕ್ಲಿನಿಕ್ ವೊಂದರಲ್ಲಿ ಉದ್ಯೋಗಿಯಾಗಿದ್ದ ನಿಶ್ಮಿತಾ(22) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಅ.10 ರಂದು ನಿಶ್ಮಿತಾ ನಾಪತ್ತೆಯಾಗಿದ್ದು, ಅ.೧೧ರಂದು ದೇವಸ್ಥಾನದ ಪಕ್ಕದ ಕೆರೆಯಲ್ಲಿ ಈಕೆಯ ಮೃತ ದೇಹ ಪತ್ತೆಯಾಗಿತ್ತು. ಘಟನಾ ಸ್ಥಳದಲ್ಲಿ ಸಿಕ್ಕ ಯುವತಿಯ ಡೆತ್ ನೋಟನ್ನು ಆಧರಿಸಿ ಯುವತಿಯ ತಾಯಿಯೂ ನಾಲ್ವರ ವಿರುದ್ದ ಆತ್ಮಹತ್ಯೆಗೆ ದುಷ್ಪ್ರೇರಣೆ ನೀಡಿದ ಬಗ್ಗೆ ವಿಟ್ಲ ಠಾಣೆಗೆ ದೂರು ನೀಡಿದ್ದರು.ಆ ದೂರಿನ ಅಧಾರದಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ರಕ್ಷಿತ್ ಉದ್ದೇಶಪೂರ್ವಕವಾಗಿ ಯುವತಿಯಲ್ಲಿ ಮಾತನಾಡಿದ್ದು ಅದ್ದನ್ನು ಪ್ರಶಾಂತ್ ಸಹೋದರ ದಿನೇಶ್ ಹಾಗೂ ಯಶವಂತ ಅವರು ಮೊಬೈಲ್ ನಲ್ಲಿ ವಿಡಿಯೋ ಮಾಡಿ, ಆಕೆಯನ್ನು ಪ್ರೀತಿಸುತಿದ್ದ ಪ್ರಶಾಂತ್ ಎಂಬಾತನಿಗೆ ಕಳುಹಿಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯ
FRUITS ID ರೈತರಿಗೆ ಕಂದಾಯ ಸಚಿವರಿಂದ ಮಹತ್ವದ ಸೂಚನೆ : 15 ದಿನದೊಳಗೆ ಫ್ರೂಟ್ಸ್ ದತ್ತಾಂಶದಲ್ಲಿ ಜಮೀನಿನ ಮಾಹಿತಿಯನ್ನು ದಾಖಲಿಸುವಂತೆ ಸಚಿವ ಕೃಷ್ಣ ಬೈರೇಗೌಡ ಹೇಳಿದ್ಯಾಕೆ ?

ಸರ್ಕಾರಿ ಸೌಲಭ್ಯ ಪಡೆಯಲು ರೈತರು ಇನ್ನು ಮುಂದೆ ಪ್ರತಿ ಬಾರಿ ಜಮೀನಿನ ಪಹಣಿ, ಆಧಾರ್, ಬ್ಯಾಂಕ್ ಖಾತೆ ವಿವರಗಳನ್ನು ಒದಗಿ ಸುವ ಅಗತ್ಯವಿಲ್ಲ. ಕೃಷಿ ಇಲಾಖೆಯೇ ಈಗ ರೈತರ ವಿವರಗಳನ್ನು ಸಂಗ್ರಹಿಸಿ, ‘ಫ್ರೂಟ್ಸ್’ ತಂತ್ರಾಂಶದಲ್ಲಿ ದಾಖಲೀಕರಣ ಮಾಡಿಕೊಳ್ಳುತ್ತದೆ,
ಫ್ರೂಟ್ ಐಡಿಯಲ್ಲಿ (FRUITS ID) ದಾಖಲಾಗಿರುವ ಜಮೀನಿನ ಮಾಹಿತಿ ಆಧಾರದ ಮೇಲೆ ಪರಿಹಾರ ಪಾವತಿ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ರೈತರು ತಮ್ಮ ಜಮೀನಿನ ನಿಖರ ಮಾಹಿತಿಯನ್ನು ಮುಂದಿನ 15 ದಿನಗಳ ಒಳಗೆ ಫ್ರೂಟ್ಸ್ ದತ್ತಾಂಶದಲ್ಲಿ ಭರ್ತಿ ಮಾಡಿಸಬೇಕು. ಇದರಿಂದ ಅಕ್ರಮಗಳು ತಪ್ಪುವುದಲ್ಲದೆ, ನೈಜ ಫಲಾನುಭವಿಗಳಿಗೆ ಪರಿಹಾರದ ಹಣ ಬಿಡುಗಡೆಯಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
236 ತಾಲೂಕುಗಳ ಪೈಕಿ 223 ತಾಲೂಕುಗಳು ಸಂಪೂರ್ಣ ಬರಪೀಡಿತವಾಗಿವೆ. ಇನ್ನು ಬಾಕಿ ಕೇವಲ 13 ತಾಲೂಕುಗಳು ಮಾತ್ರವೇ ಬರಪೀಡಿತ ಪಟ್ಟಿಯಿಂದ ಹೊರಗುಳಿದಂತೆ ಆಗಿದೆ. ಈಗಾಗಲೇ ರಾಜ್ಯ ಸರ್ಕಾರ ಸಹ 324 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ. ಈಗ ರೈತರು ಬರ ಪರಿಹಾರವನ್ನು ಪಡೆಯಬೇಕೆಂದರೆ 15 ದಿನಗಳ ಒಳಗೆ ರಾಜ್ಯದ ಫ್ರೂಟ್ಸ್ ಪೋರ್ಟಲ್ನಲ್ಲಿ ಕೆಲವು ಮಾಹಿತಿಯನ್ನು ಭರ್ತಿ ಮಾಡಬೇಕಿದೆ. ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಜಮೀನಿನ ಮಾಹಿತಿಯನ್ನು ಮುಂದಿನ 15 ದಿನಗಳೊಳಗೆ ದಾಖಲಿಸುವಂತೆ ಸರ್ಕಾರ ನಿರ್ದೇಶಿಸಿದೆ.
ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಎಲ್ಲ ಇಲಾಖೆಗಳಲ್ಲಿ ರೈತರಿಗಾಗಿ ಜಾರಿಯಲ್ಲಿರುವ ಯೋಜನೆಗಳ ಸೌಲಭ್ಯ ಪಡೆಯಲು ರೈತರು ಎಫ್.ಐ.ಡಿ (FID number) ಕಡ್ಡಾಯವಾಗಿದೆ. ಇದನ್ನು ಕೃಷಿ ಇಲಾಖೆಯಿಂದ ಮಾಡಿಸಿಕೊಳ್ಳಬೇಕು. ಬರ ಪರಿಹಾರ, ಬೆಳೆ ವಿಮೆ, ವಿವಿಧ ಯೋಜನೆಯಡಿ ಯಂತ್ರೋಪಕರಣಗಳ ಸಹಾಯಧನ ಪಡೆಯಲು ಹೀಗೆ ಅನೇಕ ಯೋಜನೆಯಡಿ ರೈತರು ಸೌಲಭ್ಯ ಪಡೆಯಲು ಈ ನಂಬರ್ ಅತಿ ಅವಶ್ಯಕವಾಗಿದೆ.
ಅಂತರ ರಾಜ್ಯ
K Surendran | ಮಂಜೇಶ್ವರ ಚುನಾವಣ ಲಂಚ ಪ್ರಕರಣ – ಕೋರ್ಟ್ ಗೆ ಹಾಜರಾಗಿ ಜಾಮೀನು ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್

ಮಂಜೇಶ್ವರ ಚುನಾವಣಾ ಲಂಚ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇರಳ ಬಿಜೆಪಿ ರಾಜ್ಯ ಅಧ್ಯಕ್ಷ ಕೆ. ಸುರೇಂದ್ರನ್ (K Surendran) ಸೇರಿದಂತೆ ಎಲ್ಲಾ ಆರೋಪಿಗಳು ಬುಧವಾರ ಕಾಸರಗೋಡು ಪ್ರಿನ್ಸಿಪಲ್ ಸೆಶನ್ಸ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆರೋಪಿಗಳಿಗೆ ಜಾಮೀನು ನೀಡಲಾಗಿದ್ದು, ಮುಂದಿನ ವಿಚಾರಣೆಯನ್ನು ನ.15ಕ್ಕೆ ಮುಂದೂಡಲಾಗಿದೆ.
ಯುವ ಮೋರ್ಚಾ ರಾಜ್ಯ ಕೋಶಾಧಿಕಾರಿ ಸುನಿಲ್ ನಾಯ್ಕ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಕೆ. ಸುರೇಶ್ ನಾಯ್ಕ್ , ಮಣಿಕಂಠ ರೈ, ಲೋಕೇಶ್ ನೋಂಡಾ ಇತರರು ಈ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ.
ಈ ಹಿಂದೆ ಮೂರು ಬಾರಿ ನ್ಯಾಯಾಲಯ ಹಾಜರಾಗಲು ನೋಟಿಸ್ ನೀಡಿತ್ತು. ಆದರೆ ಆರೋಪಿಗಳು ಹಾಜರಾಗಿರಲಿಲ್ಲ.
ಬುಧವಾರ ನಡೆದ ವಿಚಾರಣೆ ವೇಳೆ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು. 2021 ರ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಕೆ. ಸುರೇಂದ್ರ ನ್ ಬಿಎಸ್ಪಿ ಅಭ್ಯರ್ಥಿಯಾಗಿದ್ದ ಕೆ. ಸುಂದರರಿಂದ ನಾಮಪತ್ರ ಹಿಂತೆಗೆಯಲು ಎರಡೂವರೆ ಲಕ್ಷ ರೂ. ಹಾಗೂ ಮೊಬೈಲ್ ಫೋನ್ ನೀಡಿ ನಾಮಪತ್ರ ಹಿಂಪಡೆಯಲಾಗಿತ್ತು. ಚುನಾವಣೆ ಬಳಿಕ ಪ್ರಕರಣ ಬಳಿಕ ಬೆಳಕಿಗೆ ಬಂದಿತ್ತು. ಈ ಬಗ್ಗೆ ನ್ಯಾಯಾಲಯದ ಆದೇಶದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ವರದಿಗಳು
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ನವರಾತ್ರಿ ಪ್ರಯುಕ್ತ ‘ಜಿ.ಎಲ್ ಸ್ವರ್ಣ ಹಬ್ಬ’ – ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆ : 9 ಚಿನ್ನದ ನಾಣ್ಯ ಗೆಲ್ಲುವ ಸುವರ್ಣವಕಾಶ

ಪುತ್ತೂರಿನ ಮುಖ್ಯರಸ್ತೆಯ ಕಾಂಪ್ಲೆಕ್ಸ್ ನಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ನವರಾತ್ರಿ ಪ್ರಯುಕ್ತ ಜಿ.ಎಲ್ ಸ್ವರ್ಣ ಹಬ್ಬ ತಾ.15.10.2023 ರಿಂದ 24.10.2023ರ ವರೆಗೆ ನಡೆಯಲಿರುವುದು.

ಈ ಸ್ವರ್ಣ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಆಕರ್ಷಕ ಕೊಡುಗೆಗಳನ್ನು ಸಂಸ್ಥೆಯು ಪ್ರಕಟಿಸಿದೆ. ಬಂಗಾರದ ಚೈನ್ ಖರೀದಿಗೆ VA 6%ನಿಂದ ಆರಂಭ, ‘ಜಂಟ್ಸ್ ಕಡ ಖರೀದಿಗೆ VA 6%ನಿಂದ ಆರಂಭ, ಆ್ಯಂಟಿಕ್ ಟ್ಯುವಲ್ಲರ್ಸ್ ಖರೀದಿಗೆ VA 15%ನಿಂದ ಆರಂಭ, ಬ್ಯಾಂಗಲ್ಸ್ ಖರೀದಿಗೆ VA 8%ನಿಂದ ಆರಂಭ, ಗ್ರಾಹಕರಿಗೆ ನವರಾತ್ರಿಯ ಈ ಹಬ್ಬದ ಋತುವಿನಲ್ಲಿ ಚಿನ್ನಾಭರಣಗಳನ್ನು ಖರೀದಿಸಿ 9 ಚಿನ್ನದ ನಾಣ್ಯಗಳನ್ನು ಗೆಲ್ಲುವ ಅಮೂಲ್ಯ ಅವಕಾಶವಿದೆ.
ಸ್ವರ್ಣ ಹಬ್ಬದ ಪ್ರತಿ ಖರೀದಿಯ ಮೇಲೆ ವಿಶೇಷ ರಿಯಾಯಿತಿ ಪಡೆಯವ ಸುವರ್ಣಾವಕಾಶವಿದೆ.
ವಿಶ್ವಾಸ, ಪರಿಶುದ್ಧತೆ, ಪರಂಪರೆ, ನವನವೀನ ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸದಾ ಸಂಸ್ಥೆ ಬದ್ದವಾಗಿದ್ದು, ಗ್ರಾಹಕರ ಮನಸೂರೆಗೊಳ್ಳುವ ವಿನೂತನ ವಿನ್ಯಾಸದ ಚಿನ್ನದ ಆಭರಣಗಳು, ವಜ್ರಾಭರಣಗಳು, ಬೆಳ್ಳಿಯ ಆಭರಣಗಳು, ಆ್ಯಂಟಿಕ್ ಆಭರಣಗಳು, ಅನ್ ಕಟ್ ಡೈಮಂಡ್ಸ್ ಹಾಗೂ ಅಮೂಲ್ಯ ಹರಳುಗಳ ವಿಪುಲ ಸಂಗ್ರಹವಿದ್ದು ಗ್ರಾಹಕರು ಆರಾಮದಾಯಕವಾಗಿ ಶಾಪಿಂಗ್ ಮಾಡಲು ಉತ್ತಮ ಪಾರ್ಕಿಂಗ್ ವ್ಯವಸ್ಥೆ ಕೂಡಾ ಲಭ್ಯವಿದೆ.
ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಸುಳ್ಯ, ಹಾಸನ ಹಾಗೂ ಕುಶಾಲನಗರದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ. ಈ ಜಿ.ಎಲ್. ಸ್ವರ್ಣ ಹಬ್ಬ ಎಲ್ಲ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
-
ಸಿನೆಮಾ2 days ago
ಬಿ – ಟೌನ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ವಿಚ್ಛೇದನ ಸುದ್ದಿ – ನಿಜಕ್ಕೂ ಅವರಿಬ್ಬರ ಮಧ್ಯೆ ಆಗಿರುವುದೇನು ?
-
ದಕ್ಷಿಣ ಕನ್ನಡ2 days ago
ಪುತ್ತೂರು : ಕುಡಿದು ಟೈಟಾಗಿದ್ದ ಚಾಲಕ ವಿವೇಕಾನಂದ ವಿದ್ಯಾ ಸಂಸ್ಥೆಯ ಬಸ್ಸನ್ನು ಯದ್ವಾತದ್ವಾ ಚಲಾಯಿಸಿ ಸರಣಿ ಅಪಘಾತ – ಮಾಜಿ ಶಾಸಕಿಯ ಪುತ್ರನ ಕಾರು ಸೇರಿ 3 ವಾಹನಕ್ಕೆ ಢಿಕ್ಕಿ – ಪಾನಮತ್ತ ಚಲಾಯಿಸುತ್ತಿದ್ದ ಬಸ್ಸಿನಲ್ಲಿದ್ದರು ವಿದ್ಯಾರ್ಥಿಗಳು..̆
-
ದಕ್ಷಿಣ ಕನ್ನಡ2 days ago
ವಿಟ್ಲ : ಅಡಿಕೆ ಮರ ಮುರಿದು ಬಿದ್ದು ಮಹಿಳೆ ಸಾವು
-
ಸುಳ್ಯ1 day ago
College student rape case ಪುತ್ತೂರು : ಕಾಲೇಜ್ ವಿದ್ಯಾರ್ಥಿನಿಯ ಅಪಹರಿಸಿ ಅತ್ಯಾಚಾರ ಪ್ರಕರಣ – ಬಂಧಿತ ಆರೊಪಿಗೆ 2 ತಿಂಗಳ ಬಳಿಕ ಜಾಮೀನು
-
ರಾಜಕೀಯ2 days ago
CM Siddaramaiah: ಐಸಿಸ್ ಉಗ್ರ ಸಂಘಟನೆಯ ಬೆಂಬಲಿಗನ ಜತೆ ಹುಬ್ಬಳಿಯಲ್ಲಿ ವೇದಿಕೆ ಹಂಚಿಕೊಂಡ ಸಿ. ಎಂ.ಸಿದ್ದರಾಮಯ್ಯ : ಚಿತ್ರ ಸಹಿತ ಯತ್ನಾಳ್ ಗಂಭೀರ ಆರೋಪ – ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
-
Uncategorized2 days ago
loan write off ದೇಶದ ಎಲ್ಲಾ ವಾಣಿಜ್ಯ ಬ್ಯಾಂಕುಗಳು ಕಳೆದ 5 ವರ್ಷಗಳಲ್ಲಿ 10.57 ಲಕ್ಷ ಕೋಟಿ ರೂ. ರೈಟ್-ಆಫ್….
-
ಉದ್ಯೋಗ1 day ago
Job Alert: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ – ಸದ್ಯದಲ್ಲೆ ಸಾರಿಗೆ ಇಲಾಖೆಗೆ 9 ಸಾವಿರ ಸಿಬ್ಬಂದಿಗಳ ನೇಮಕ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
-
ಪುತ್ತೂರು1 day ago
Puthila Parivara | ಪುತ್ತೂರು ನಗರಸಭೆ 2 ವಾರ್ಡ್ ಮರುಮತದಾನ – ಬಿಜೆಪಿ ಕಾಂಗ್ರೇಸ್ ನಡುವೆ ಕಾರ್ಯಕರ್ತರ ಒತ್ತಾಯದಂತೆ ಪುತ್ತಿಲ ಪರಿವಾರ ಮತ್ತೊಂದು ಚುನಾವಣೆ ಎದುರಿಸುವುದು ಬಹುತೇಕ ಫಿಕ್ಸ್ : ವಿಧಾನಸಭಾ ಚುನಾವಣೆಯಲ್ಲಿ ಈ ವಾರ್ಡ್ ಗಳಲ್ಲಿ ಯಾರಿಗೆ ಎಷ್ಟು ಮತದಾನವಾಗಿತ್ತು ಗೊತ್ತೇ.?