Connect with us

ವರದಿಗಳು

ಹಾಡುಹಗಲೇ ಕಾಣಿಯೂರು ಪೇಟೆಯಲ್ಲಿ ಲಕ್ಷಾಂತರ ರೂಪಾಯಿ ಕಳ್ಳತನ – ನಾಲ್ಕು ವರ್ಷದಲ್ಲಿ ನಾಲ್ಕು ಕಳ್ಳತನ : ಪತ್ತೆಯಾಗಿಲ್ಲ ಒಂದೂ ಪ್ರಕರಣ

Ad Widget

Ad Widget

Ad Widget

Ad Widget Ad Widget

ಕಾಣಿಯೂರು, ನ 12 : ಕಾಣಿಯೂರು ಪೇಟೆಯಲ್ಲಿ ಹಾಡಹಗಲೇ ಅಂಗಡಿಯಿಂದ ರೂ 1.20 ಲಕ್ಷ ನಗದು ಕಳವುಗೈದ ಘಟನೆ ನ.11ರಂದು ನಡೆದಿದೆ.

Ad Widget

Ad Widget

Ad Widget

Ad Widget

Ad Widget

ದಿವೀಶ್ ಅಂಬುಲ ಎಂಬವರ ಮಾಲೀಕತ್ವದ ತೆಂಗಿನಕಾಯಿ, ಬಾಳೆಗೊನೆ ವ್ಯಾಪಾರ ನಡೆಸುವ ಕಾಣಿಯೂರು ಅಮ್ಮನವರ ದೇವಸ್ಥಾನದ ಮುಂಭಾಗದ ಶ್ರೀದುರ್ಗಾ ಎಂಟರ್‌ಪ್ರೈಸಸ್‌ನಲ್ಲಿ ಮೇಜಿನ ಡ್ರಾವರ್‌ನಲ್ಲಿ ಹಣವನ್ನು ಇಟ್ಟಿದ್ದರು. ಮಧ್ಯಾಹ್ನ ದಿವೀಶ್ ಅವರು ಎಂದಿನಂತೆ ಅರ್ಧ ಶಟರ್ ಹಾಕಿ ಊಟಕ್ಕೆ ತೆರಳಿದ ಸಂದರ್ಭದಲ್ಲಿ ಯಾರೋ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

Ad Widget

Ad Widget

ಈ ಬಗ್ಗೆ ಅಂಗಡಿ ಮಾಲ್ಹಕ ದಿವೀಶ್‌ರವರು ಬೆಳ್ಳಾರೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಇಬ್ಬರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

ಸತತ ನಾಲ್ಕನೇ ವರ್ಷದಿಂದ ಕಳ್ಳತನ :
ಸತತ ನಾಲ್ಕನೇ ವರ್ಷದಿಂದ ಕಾಣಿಯೂರು ಪೇಟೆಯಲ್ಲಿ ಕಳ್ಳತನ ನಡೆಯುತ್ತಿದೆ.
ಅಡಿಕೆ ಖರೀದಿ ಅಂಗಡಿ, ಜನರಲ್ ಸ್ಟೋರ್ ಹೀಗೆ ಲಕ್ಷಾಂತರ ರೂಪಾಯಿ ಅಡಿಕೆ, ಹಣ ಕಳ್ಳತನ ನಡೆದಿದೆ. ನಾಲ್ಕು ವರ್ಷದಿಂದ ಸತತ ಕಳ್ಳತನವಾಗುತ್ತಿದ್ದರು ಒಬ್ಬನೇ ಒಬ್ಬ ಕಳ್ಳ ಈವರೆಗೆ ಪತ್ತೆಯಾಗಲಿಲ್ಲ.

Ad Widget

Ad Widget
Click to comment

Leave a Reply

ಅಂತರ ರಾಜ್ಯ

Ajit Pawar’s wife-25 ಸಾವಿರ ಕೋಟಿ ಅವ್ಯವಹಾರ : ಅಜಿತ್ ಪವಾರ್ ಪತ್ನಿಗೆ ಕ್ಲೀನ್ ಚಿಟ್

Ad Widget

Ad Widget

Ad Widget

Ad Widget Ad Widget

ಮುಂಬಯಿ: ಮಹಾರಾಷ್ಟ್ರ ರಾಜ್ಯ ಸಹಕಾರ ಬ್ಯಾಂಕ್‌ನಲ್ಲಿ (ಎಂಎಸಿಬಿ) ನಡೆದಿರುವ 25 ಸಾವಿರ ಕೋಟಿ ರೂ. ಮೊತ್ತದ ಅವ್ಯವಹಾರ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಅವರನ್ನು ಮುಂಬಯಿ ಪೊಲೀಸರು ದೋಷಮುಕ್ತಗೊಳಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

ಬಾರಾಮತಿ ಲೋಕಸಭೆ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾಗಿರುವ ಸುನೇತ್ರಾ ಅವರಿಗೆ ಪೊಲೀಸರಿಂದ ಕ್ಲೀನ್‌ ಚಿಟ್ ಸಿಕ್ಕಿರುವುದು ಚುನಾವಣೆ ಹೊತ್ತಲ್ಲಿ ರಿಲೀಫ್ ತಂದಿದೆ.

Ad Widget

Ad Widget

25 ಸಾವಿರ ಕೋಟಿ ರೂ. ಅವ್ಯವಹಾರದ ಪ್ರಕರಣದ ತನಿಖೆ ಕೈಗೊಂಡಿದ್ದ ಮುಂಬಯಿ ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧಗಳ ವಿಭಾಗವು ಪ್ರಕರಣವನ್ನು ಮುಕ್ತಾಯಗೊಳಿಸಿ ಕಳೆದ ಜನವರಿಯಲ್ಲಿ ವರದಿ ಸಲ್ಲಿಸಿತ್ತು.

Ad Widget

Ad Widget

‘ಅಜಿತ್ ಪವಾರ್ ಅವರ ನಂಟು ಹೊಂದಿರುವ ಜರಂಡೇಶ್ವರ ಸಕ್ಕರೆ ಕಾರ್ಖಾನೆಗೆ ಸಾಲ ಅಥವಾ ಮಾರಾಟಕ್ಕೆ ಅನುಮತಿ ನೀಡಿದ ಪ್ರಕ್ರಿಯೆಯಲ್ಲಿ ಎಂಎಸ್‌ಬಿ ಬ್ಯಾಂಕಿಗೆ ಯಾವುದೇ ರೀತಿಯ ನಷ್ಟ ಉಂಟಾಗಿಲ್ಲ. ಹಣಕಾಸು ವ್ಯವಹಾರದಲ್ಲಿ ಯಾವುದೇ ಕ್ರಿಮಿನಲ್ ಅಪರಾಧ ನಡೆದಿಲ್ಲ, ” ಎಂದು ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧಗಳ ವಿಭಾಗವು ತನ್ನ ವರದಿಯಲ್ಲಿ ತಿಳಿಸಿದೆ.

Ad Widget

Ad Widget
Continue Reading

ಅಂತರ ರಾಜ್ಯ

BJP leader-ನರೇಂದ್ರ ಮೋದಿ ಮುಸ್ಲಿಂಮರ ವಿರುದ್ಧ ನೀಡಿದ್ದ ಹೇಳಿಕೆಯನ್ನು ಖಂಡಿಸಿದ ಬಿಜೆಪಿ ಮುಖಂಡ ಪಕ್ಷದಿಂದ ವಜಾ

Ad Widget

Ad Widget

Ad Widget

Ad Widget Ad Widget

ಜೈಪುರ: ಇತ್ತೀಚೆಗೆ ರಾಜಸ್ಥಾನದ ಚುನಾವಣಾ Rallyಯಲ್ಲಿ ಪ್ರಧಾನಿ ಮೋದಿ ಅವರು ದೇಶದ ಮುಸ್ಲಿಮರನ್ನು ನುಸುಳುಕೋರರಿಗೆ ಹೋಲಿಸಿ ನೀಡಿದ್ದ ಹೇಳಿಕೆಯನ್ನು ಖಂಡಿಸಿದ್ದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ಉಸ್ಮಾನ್ ಘನಿ ಅವರನ್ನು ಬುಧವಾರ ಪಕ್ಷದಿಂದ ಉಚ್ಚಾಟಿಸಲಾಗಿದೆ.

Ad Widget

Ad Widget

Ad Widget

Ad Widget

Ad Widget

ಇತ್ತೀಚೆಗೆ ಘನಿ ಅವರು ದಿಲ್ಲಿಯಲ್ಲಿ ವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದರು. ಆಗ ಅವರು, “ರಾಜಸ್ಥಾನದಲ್ಲಿ ಬಿಜೆಪಿಯು ಮೂರಾಲ್ಕು ಸ್ಥಾನಗಳನ್ನು ಕಳೆದುಕೊಳ್ಳಲಿದೆ,” ಎಂದಿದ್ದರು. ಅಲ್ಲದೇ ಮುಸ್ಲಿಮರ ಕುರಿತು ಪ್ರಧಾನಿ ನೀಡಿದ್ದ ಹೇಳಿಕೆಯನ್ನು ಖಂಡಿಸಿದ್ದರು.

Ad Widget

Ad Widget
Continue Reading

ಅಂತರ ರಾಜ್ಯ

Mungekar-ಮುಸ್ಲಿಮರಿಗೆ ದೇಶದ ಸಂಪತ್ತಿನಲ್ಲಿ ಮೊದಲ ಹಕ್ಕಿದೆ ಎಂದು ಸಿಂಗ್ ಹೇಳಿಲ್ಲ; ಮೋದಿಯವರ ಹೇಳಿಕೆ ಸುಳ್ಳು ಎಂದು ಕುಟುಕಿದ ಮುಂಗೇಕರ್

Ad Widget

Ad Widget

Ad Widget

Ad Widget Ad Widget

ಮುಂಬೈ: ಕಾಂಗ್ರೆಸ್ ನಾಯಕ, ಆರ್ಥಿಕ ತಜ್ಞ ಮತ್ತು ನೀತಿ ಆಯೋಗದ ಸದಸ್ಯರೂ ಆಗಿದ್ದ ಡಾ. ಬಾಲಚಂದ್ರ ಮುಂಗೇಕರ್‌ರವರು ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿಕೆ ನೀಡಿಲ್ಲ. ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಸುಳ್ಳು ಎಂದು ಹೇಳಿದ್ದಾರೆ.
ಡಾ. ಸಿಂಗ್ ಅವರ ಹೇಳಿಕೆಯ ಒಂದು ವಾಕ್ಯವನ್ನು ಪ್ರಸ್ತುತಪಡಿಸುವ ಮೂಲಕ ಮೋದಿ ಅವರು ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ತಮ್ಮ ರಾಜಕೀಯ ಹಿತಾಸಕ್ತಿಗಳನ್ನು ಈಡೇರಿಸಿಕೊಳ್ಳಲು ಮುಸ್ಲಿಂ ಸಮುದಾಯದಲ್ಲಿ ಅಸಮಾಧಾನವನ್ನು ಸೃಷ್ಟಿಸುವುದು ಬಿಜೆಪಿಯ ತಂತ್ರವಾಗಿದೆ. ಆದರೆ, ಜನರು ಮೋದಿ ಅವರ ಹೇಳಿಕೆಗಳನ್ನು ನಂಬುವುದಿಲ್ಲ ಎಂದು ಮುಂಬೈ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಮತ್ತು ರಾಜ್ಯಸಭೆಯ ಮಾಜಿ ಸದಸ್ಯ ಡಾ.ಮುಂಗೇಕರ್ ಹೇಳಿದ್ದಾರೆ.

Ad Widget

Ad Widget

Ad Widget

Ad Widget

Ad Widget

ಯುಪಿಎ ಸರ್ಕಾರದ ಭಾಗವಾಗಿದ್ದ ಡಾ. ಮುಂಗೇಕರ್, ನರೇಂದ್ರ ಮೋದಿ ನೀಡಿರುವ ಹೇಳಿಕೆಯನ್ನು ತಳ್ಳಿ ಹಾಕಿದ್ದು, ಸತ್ಯವನ್ನು ಮುಂದಿಟ್ಟಿದ್ದಾರೆ.

Ad Widget

Ad Widget

2006ರ ಡಿಸೆಂಬರ್ 9ರಂದು ನಡೆದಿದ್ದ ರಾಷ್ಟ್ರೀಯ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ, ‘ದೇಶದ ದಲಿತರು, ಆದಿವಾಸಿಗಳು, ಒಬಿಸಿ, ಮಹಿಳೆಯರು, ಮಕ್ಕಳು ಅಭಿವೃದ್ಧಿಯ ಫಲವನ್ನು ಸವಿಯಬೇಕು ಮತ್ತು ಅಲ್ಪಸಂಖ್ಯಾತ ಸಮುದಾಯವೂ ಪ್ರಯೋಜನ ಪಡೆಯಬೇಕು’ ಎಂದು ಡಾ ಮನಮೋಹನ್ ಸಿಂಗ್ ಹೇಳಿದ್ದರು. ಅವರ ಹೇಳಿಕೆಯ ಅರ್ಥವೇನೆಂದರೆ, ಎಸ್‌ಸಿ ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತರು ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಹೊಂದಿದ್ದಾರೆ ಎಂಬುದಾಗಿತ್ತು. ಸಭೆಯ ನಂತರ ಡಾ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ಮತ್ತು ನಾನು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದೆವು. ಅಲ್ಪಸಂಖ್ಯಾತರು ಎಂದರೆ ಧಾರ್ಮಿಕ ಅಲ್ಪಸಂಖ್ಯಾತರು ಮಾತ್ರವಲ್ಲದೆ ಭಾಷಾ ಅಲ್ಪಸಂಖ್ಯಾತರು ಸಹ ಹೌದು. ಸಭೆಯಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಸೇರಿದಂತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು ಎಂದು ಡಾ. ಮುಂಗೇಕರ್ ಹೇಳಿದ್ದಾರೆ.

Ad Widget

Ad Widget

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ದೇಶದ ಸಂಪತ್ತಿನ ಮೇಲೆ ಮುಸ್ಲಿಮರಿಗೆ ಮೊದಲ ಹಕ್ಕಿರುತ್ತದೆ ಮತ್ತು ಅವರು ಹೆಚ್ಚು ಮಕ್ಕಳನ್ನು ಹೊಂದಿರುವುದರಿಂದ ಅದನ್ನು ಸಮುದಾಯದೊಳಗೆ ಹಂಚಿಕೆ ಮಾಡಲಾಗುತ್ತದೆ ಎಂದು ಸಿಂಗ್ ಹೇಳಿರುವುದಾಗಿ ಮೋದಿ ಈಗ ಹೇಳುತ್ತಿರುವುದು ಸರಿಯೇ? ಚುನಾವಣೆಯಲ್ಲಿ ಧಾರ್ಮಿಕ ತಿರುವು ನೀಡಲು ಅವರು ಹೀಗೆ ಹೇಳಿಕೆ ನೀಡಿದ್ದಾರೆ. ಪ್ರಧಾನಿ ಸ್ಥಾನದಲ್ಲಿರುವ ವ್ಯಕ್ತಿ ಈ ರೀತಿ ಹೇಳಿಕೆ ನೀಡುವುದು ಸೂಕ್ತವಲ್ಲ. 102 ಲೋಕಸಭಾ ಸ್ಥಾನಗಳಿಗೆ ಮೊದಲ ಹಂತದ ಮತದಾನ ನಡೆದಿದ್ದು, ಬಿಜೆಪಿ ಸೋಲುವ ಚಿತ್ರಣ ಸ್ಪಷ್ಟವಾಗಿದೆ. 40ರ ಗಡಿ ತಲುಪಲಾಗದೆ ಮೋದಿ ನಿರಾಸೆಗೊಂಡಿದ್ದಾರೆ’ಎಂದು ಮುಂಗೇಕರ್ ಕುಟುಕಿದ್ದಾರೆ.

Ad Widget

Ad Widget
Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading