ಗಡಿಯಲ್ಲಿ ಭಯೋತ್ಪಾದಕ ದಾಳಿ- ಸೇನಾ ಕರ್ನಲ್, ಪತ್ನಿ, ಪುತ್ರ ಹಾಗೂ ನಾಲ್ವರು ಯೋಧರು ಸೇರಿ 7 ಜನ ಹುತ್ಮಾತ್ಮ

InShot_20211113_221203145
Ad Widget

Ad Widget

Ad Widget

ಗುವಾಹಟಿ: ಮಣಿಪುರದ ಮ್ಯಾನ್ಮಾರ್ ಗಡಿಯಲ್ಲಿ ಭಯೋತ್ಪಾದಕರು ನಡೆಸಿದ ಹೊಂಚುದಾಳಿಯಲ್ಲಿ ಭಾರತೀಯ ಸೇನೆಯ ಕರ್ನಲ್, ಅವರ ಪತ್ನಿ, ಪುತ್ರ ಹಾಗೂ ನಾಲ್ವರು ಯೋಧರು ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಶನಿವಾರ(ನವೆಂಬರ್ 13) ನಡೆದಿದೆ.

Ad Widget

ಇತ್ತೀಚೆಗಿನ ದಿನಗಳಲ್ಲಿ ನಡೆದ ಅತ್ಯಂತ ಮಾರಣಾಂತಿಕ ದಾಳಿಗಳಲ್ಲಿ ಒಂದಾಗಿದೆ. ಇಂದು ಬೆಳಗ್ಗೆ 10ಗಂಟೆಗೆ ಮಣಿಪುರದ ಚುರಾಚಂದ್ ಪುರ್ ಜಿಲ್ಲೆಯ ಸಮೀಪ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

Ad Widget

Ad Widget

Ad Widget

46 ಅಸ್ಸಾಂ ರೈಫಲ್ಸ್ ನ ಕಮಾಂಡಿಂಗ್ ಆಫೀಸರ್ ಕರ್ನಲ್ ವಿಪ್ಲವ್ ತ್ರಿಪಾಠಿ ಅವರು ಶನಿವಾರ ಸೇನಾ ಶಿಬಿರದತ್ತ ತೆರಳಿದ್ದರು. ನಂತರ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಬೆಂಗಾವಲು ಪಡೆ ಸೇರಿದಂತೆ ಎರಡೂ ವಾಹನಗಳ ಮೇಲೆ ಹೊಂಚುಹಾಕಿ ದಾಳಿ ನಡೆಸಿರುವುದಾಗಿ ವರದಿ ಹೇಳಿದೆ.

Ad Widget

ಮಣಿಪುರ ಮೂಲದ ಪೀಪಲ್ಸ್ ಲಿಬರೇಷನ್ ಆರ್ಮಿ (ಪಿಎಲ್ ಎ) ಈ ದಾಳಿಯ ಹಿಂದಿರುವುದಾಗಿ ಶಂಕಿಸಲಾಗಿದೆ. ಈವರೆಗೂ ಯಾವುದೇ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.

Ad Widget

Ad Widget

2015ರಲ್ಲಿಯೂ ಸೇನೆ ಬಂಡುಕೋರರ ಶಿಬಿರದ ಮೇಲೆ ಸರ್ಜಿಕಲ್ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಉಗ್ರರು ನಡೆಸಿದ ದಾಳಿಯಲ್ಲಿ 20 ಯೋಧರು ಹುತಾತ್ಮರಾದ ಘಟನೆ ಮಣಿಪುರದಲ್ಲಿ ನಡೆದಿತ್ತು. ಅಸ್ಸಾಂ ರೈಫಲ್ಸ್ ಅರೆಸೇನಾ ಪಡೆಯಾಗಿದ್ದು, ಇದು ಸೇನೆಯ ನಿಯಂತ್ರಣದಲ್ಲಿದೆ. ಅಸ್ಸಾಂ ರೈಫಲ್ಸ್ ಈಶಾನ್ಯ ರಾಜ್ಯಗಳಲ್ಲಿ ಬಂಡುಕೋರರ ವಿರುದ್ಧ ಕಾರ್ಯಾಚರಣೆ ನಡೆಸಲು ಬಳಸಲಾಗುತ್ತದೆ.

Leave a Reply

Recent Posts

ದೇಶದಲ್ಲಿ ಹಿಂದೂಗಳ ಶಕ್ತಿ ಹೇಗಿರಬೇಕೆಂದರೆ ಸರ್ಕಾರ ಹಿಂದೂಗಳ ಹೇಳಿಕೆಯಂತೆ ನಡೆಯಬೇಕು..! : ದೇವಸ್ಥಾನಗಳನ್ನು ಸರಕಾರಿಕರಣಗೊಳಿಸಿದಂತೆ ಮಸೀದಿಗಳನ್ನು ಏಕೆ ಮಾಡುವುದಿಲ್ಲ..? ಮಂದಿರ ಸಂಸ್ಕೃತಿ ರಕ್ಷಣೆ ಸಭೆಯಲ್ಲಿ ಚರ್ಚೆ – ಮುಂಬೈಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿನ ಭ್ರಷ್ಟಾಚಾರ ಬೆಳಕಿಗೆ ತಂದಿರುವ ಸುಪ್ರಸಿದ್ಧ ಸರ್ಜನ್ ರ ಪುಸ್ತಕ ಬಿಡುಗಡೆ

error: Content is protected !!
%d bloggers like this: