Connect with us

ವರದಿಗಳು

ಕೊಡಿಪ್ಪಾಡಿ ಗೋಕಳ್ಳತನ ಪ್ರಕರಣ : ದೃಶ್ಯ ಸಿಸಿಟಿವಿಯಲ್ಲಿ ಸೆರೆ- ಆರೋಪಿಗಳ ಬಂಧಿಸುವಂತೆ ಹಾಗೂ ಘಟನೆ ಮರುಕಳಿಸದಂತೆ ವಿಹಿಂಪ, ಭಜರಂಗದಳ ಪೊಲೀಸರಿಗೆ ಮನವಿ

Ad Widget

Ad Widget

ಪುತ್ತೂರು: ಪುತ್ತೂರಿನ ಕೊಡಿಪ್ಪಾಡಿಯಲ್ಲಿ ನಡೆದ ಗೋಕಳ್ಳತನದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಬೇಕೆಂದು ಆಗ್ರಹಿಸಿ ಹಾಗೂ ಇನ್ನು ಮುಂದೆ ಈ ರೀತಿಯ ಘಟನೆಗಳು ನಡೆಯದಿರುವುಂತೆ ಮುನ್ನೆಚ್ಚರಿಕೆ ವಹಿಸಲು ಒತ್ತಾಯಿಸಿ ವಿಶ್ವ ಹಿಂದು ಪರಿಷದ್ ಬಜರಂಗದಳ ಪುತ್ತೂರು ಪ್ರಖಂಡದ ವತಿಯಿಂದ ಪುತ್ತೂರು ನಗರ ಠಾಣಾ ಉಪನಿರೀಕ್ಷಕರಿಗೆ ಮನವಿ ಸಲ್ಲಿಸಲಾಯಿತು

Ad Widget

Ad Widget

Ad Widget

Ad Widget

ಈ ಸಂದರ್ಭ ವಿಶ್ವ ಹಿಂದೂ ಪರಿಷದ್ ಪುತ್ತೂರು ಪ್ರಖಂಡ ಸಹ ಕಾರ್ಯದರ್ಶಿ ವಿಶಾಖ್ ಸಸಿಹಿತ್ಲು, ವಿಶ್ವ ಹಿಂದು ಪರಿಷದ್ ಪುತ್ತೂರು ಜಿಲ್ಲಾ ಪ್ರಚಾರ ಪ್ರಸಾರ ಪ್ರಮುಖ್ ಶ್ರೀಧರ್ ತೆಂಕಿಲ, ಬಜರಂಗದಳ ಪುತ್ತೂರು ಪ್ರಖಂಡ ಸಹ ಸಂಚಾಲಕ ಜಯಂತ ಕುಂಜೂರುಪಂಜ, ಸಂಜಯ್ ಉಪಸ್ಥಿತರಿದ್ದರು.

Ad Widget

Ad Widget

Ad Widget

ಘಟನೆಯ ಹಿನ್ನಲೆ: ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದ ಬಳಿಯ ಲಕ್ಷ್ಮಣ ಗೌಡರವರ ಮನೆಯ ಒಂದು ದನ ಮತ್ತು ಎರಡು ಕರುವನ್ನು‌ ಅಲ್ಲಿಯೇ ಪಕ್ಕದ ಗುಡ್ಡೆಯಲ್ಲಿ ಮೇಯಲು ಬಿಡಲಾಗಿತ್ತು. ದನ ಹಾಗೂ ಕರುಗಳು ವಾಪಸ್ ಬಾರದೇ ಇದ್ದ ಹಿನ್ನೆಲೆಯಲ್ಲಿ ಹಲವೆಡೆ ಹುಡುಕಾಟ ನಡೆಸಲಾಗಿತ್ತು. ಆದರೂ ಪತ್ತೆಯಾಗದ ನಿಟ್ಟಿನಲ್ಲಿ ಲಕ್ಷ್ಮಣ ಗೌಡರವರ ಪುತ್ರಿ ರಕ್ಷಿತಾರವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.‌

Ad Widget

ನಂತರ ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದ ಸಿ.ಸಿ.ಟಿ.ವಿ.ಯನ್ನು ಸ್ಥಳೀಯರು ಪರಿಶೀಲಿಸಿದಾಗ ದನ ಮತ್ತು ಕರುಗಳನ್ನು ಕಾರೊಂದರಲ್ಲಿ ತುಂಬಿಸಿ ಅಪಹರಿಸಿರುವ ದೃಶ್ಯ ಪತ್ತೆಯಾಗಿದೆ.

Ad Widget

Ad Widget
Continue Reading
Click to comment

Leave a Reply

ರಾಜ್ಯ

FRUITS ID ರೈತರಿಗೆ ಕಂದಾಯ ಸಚಿವರಿಂದ ಮಹತ್ವದ ಸೂಚನೆ : 15 ದಿನದೊಳಗೆ ಫ್ರೂಟ್ಸ್ ದತ್ತಾಂಶದಲ್ಲಿ ಜಮೀನಿನ ಮಾಹಿತಿಯನ್ನು ದಾಖಲಿಸುವಂತೆ ಸಚಿವ ಕೃಷ್ಣ ಬೈರೇಗೌಡ ಹೇಳಿದ್ಯಾಕೆ ?

Ad Widget

Ad Widget

ಸರ್ಕಾರಿ ಸೌಲಭ್ಯ ಪಡೆಯಲು ರೈತರು ಇನ್ನು ಮುಂದೆ ಪ್ರತಿ ಬಾರಿ ಜಮೀನಿನ ಪಹಣಿ, ಆಧಾರ್‌, ಬ್ಯಾಂಕ್‌ ಖಾತೆ ವಿವರಗಳನ್ನು ಒದಗಿ ಸುವ ಅಗತ್ಯವಿಲ್ಲ. ಕೃಷಿ ಇಲಾಖೆಯೇ ಈಗ ರೈತರ ವಿವರಗಳನ್ನು ಸಂಗ್ರಹಿಸಿ, ‘ಫ‌್ರೂಟ್ಸ್‌’ ತಂತ್ರಾಂಶದಲ್ಲಿ ದಾಖಲೀಕರಣ ಮಾಡಿಕೊಳ್ಳುತ್ತದೆ,

Ad Widget

Ad Widget

Ad Widget

Ad Widget

ಫ್ರೂಟ್ ಐಡಿಯಲ್ಲಿ (FRUITS ID) ದಾಖಲಾಗಿರುವ ಜಮೀನಿನ ಮಾಹಿತಿ ಆಧಾರದ ಮೇಲೆ ಪರಿಹಾರ ಪಾವತಿ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ರೈತರು ತಮ್ಮ ಜಮೀನಿನ ನಿಖರ ಮಾಹಿತಿಯನ್ನು ಮುಂದಿನ 15 ದಿನಗಳ ಒಳಗೆ ಫ್ರೂಟ್ಸ್ ದತ್ತಾಂಶದಲ್ಲಿ ಭರ್ತಿ ಮಾಡಿಸಬೇಕು. ಇದರಿಂದ ಅಕ್ರಮಗಳು ತಪ್ಪುವುದಲ್ಲದೆ, ನೈಜ ಫಲಾನುಭವಿಗಳಿಗೆ ಪರಿಹಾರದ ಹಣ ಬಿಡುಗಡೆಯಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

Ad Widget

Ad Widget

Ad Widget

236 ತಾಲೂಕುಗಳ ಪೈಕಿ 223 ತಾಲೂಕುಗಳು ಸಂಪೂರ್ಣ ಬರಪೀಡಿತವಾಗಿವೆ. ಇನ್ನು ಬಾಕಿ ಕೇವಲ 13 ತಾಲೂಕುಗಳು ಮಾತ್ರವೇ ಬರಪೀಡಿತ ಪಟ್ಟಿಯಿಂದ ಹೊರಗುಳಿದಂತೆ ಆಗಿದೆ. ಈಗಾಗಲೇ ರಾಜ್ಯ ಸರ್ಕಾರ ಸಹ 324 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ. ಈಗ ರೈತರು ಬರ ಪರಿಹಾರವನ್ನು ಪಡೆಯಬೇಕೆಂದರೆ 15 ದಿನಗಳ ಒಳಗೆ ರಾಜ್ಯದ ಫ್ರೂಟ್ಸ್‌ ಪೋರ್ಟಲ್‌ನಲ್ಲಿ ಕೆಲವು ಮಾಹಿತಿಯನ್ನು ಭರ್ತಿ ಮಾಡಬೇಕಿದೆ. ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಜಮೀನಿನ ಮಾಹಿತಿಯನ್ನು ಮುಂದಿನ 15 ದಿನಗಳೊಳಗೆ ದಾಖಲಿಸುವಂತೆ ಸರ್ಕಾರ ನಿರ್ದೇಶಿಸಿದೆ.

Ad Widget

ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಎಲ್ಲ ಇಲಾಖೆಗಳಲ್ಲಿ ರೈತರಿಗಾಗಿ ಜಾರಿಯಲ್ಲಿರುವ ಯೋಜನೆಗಳ ಸೌಲಭ್ಯ ಪಡೆಯಲು ರೈತರು ಎಫ್.ಐ.ಡಿ (FID number) ಕಡ್ಡಾಯವಾಗಿದೆ. ಇದನ್ನು ಕೃಷಿ ಇಲಾಖೆಯಿಂದ ಮಾಡಿಸಿಕೊಳ್ಳಬೇಕು. ಬರ ಪರಿಹಾರ, ಬೆಳೆ ವಿಮೆ, ವಿವಿಧ ಯೋಜನೆಯಡಿ ಯಂತ್ರೋಪಕರಣಗಳ ಸಹಾಯಧನ ಪಡೆಯಲು ಹೀಗೆ ಅನೇಕ ಯೋಜನೆಯಡಿ ರೈತರು ಸೌಲಭ್ಯ ಪಡೆಯಲು ಈ ನಂಬರ್ ಅತಿ ಅವಶ್ಯಕವಾಗಿದೆ.

Ad Widget

Ad Widget
Continue Reading

ಅಂತರ ರಾಜ್ಯ

K Surendran | ಮಂಜೇಶ್ವರ ಚುನಾವಣ ಲಂಚ ಪ್ರಕರಣ – ಕೋರ್ಟ್ ಗೆ ಹಾಜರಾಗಿ ಜಾಮೀನು ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್

Ad Widget

Ad Widget

ಮಂಜೇಶ್ವರ ಚುನಾವಣಾ ಲಂಚ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇರಳ ಬಿಜೆಪಿ ರಾಜ್ಯ ಅಧ್ಯಕ್ಷ ಕೆ. ಸುರೇಂದ್ರನ್ (K Surendran) ಸೇರಿದಂತೆ ಎಲ್ಲಾ ಆರೋಪಿಗಳು ಬುಧವಾರ ಕಾಸರಗೋಡು ಪ್ರಿನ್ಸಿಪಲ್ ಸೆಶನ್ಸ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆರೋಪಿಗಳಿಗೆ ಜಾಮೀನು ನೀಡಲಾಗಿದ್ದು, ಮುಂದಿನ ವಿಚಾರಣೆಯನ್ನು ನ.15ಕ್ಕೆ ಮುಂದೂಡಲಾಗಿದೆ.

Ad Widget

Ad Widget

Ad Widget

Ad Widget

ಯುವ ಮೋರ್ಚಾ ರಾಜ್ಯ ಕೋಶಾಧಿಕಾರಿ ಸುನಿಲ್ ನಾಯ್ಕ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಕೆ. ಸುರೇಶ್ ನಾಯ್ಕ್ , ಮಣಿಕಂಠ ರೈ, ಲೋಕೇಶ್ ನೋಂಡಾ ಇತರರು ಈ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ.

Ad Widget

Ad Widget

Ad Widget

ಈ ಹಿಂದೆ ಮೂರು ಬಾರಿ ನ್ಯಾಯಾಲಯ ಹಾಜರಾಗಲು ನೋಟಿಸ್ ನೀಡಿತ್ತು. ಆದರೆ ಆರೋಪಿಗಳು ಹಾಜರಾಗಿರಲಿಲ್ಲ.

Ad Widget

ಬುಧವಾರ ನಡೆದ ವಿಚಾರಣೆ ವೇಳೆ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು. 2021 ರ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಕೆ. ಸುರೇಂದ್ರ ನ್ ಬಿಎಸ್ಪಿ ಅಭ್ಯರ್ಥಿಯಾಗಿದ್ದ ಕೆ. ಸುಂದರರಿಂದ ನಾಮಪತ್ರ ಹಿಂತೆಗೆಯಲು ಎರಡೂವರೆ ಲಕ್ಷ ರೂ. ಹಾಗೂ ಮೊಬೈಲ್ ಫೋನ್ ನೀಡಿ ನಾಮಪತ್ರ ಹಿಂಪಡೆಯಲಾಗಿತ್ತು. ಚುನಾವಣೆ ಬಳಿಕ ಪ್ರಕರಣ ಬಳಿಕ ಬೆಳಕಿಗೆ ಬಂದಿತ್ತು. ಈ ಬಗ್ಗೆ ನ್ಯಾಯಾಲಯದ ಆದೇಶದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

Ad Widget

Ad Widget
Continue Reading

ವರದಿಗಳು

ಜಿ.ಎಲ್‌. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ನವರಾತ್ರಿ ಪ್ರಯುಕ್ತ ‘ಜಿ.ಎಲ್ ಸ್ವರ್ಣ ಹಬ್ಬ’ – ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆ : 9 ಚಿನ್ನದ ನಾಣ್ಯ ಗೆಲ್ಲುವ ಸುವರ್ಣವಕಾಶ

Ad Widget

Ad Widget

ಪುತ್ತೂರಿನ ಮುಖ್ಯರಸ್ತೆಯ ಕಾಂಪ್ಲೆಕ್ಸ್ ‌ನಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್‌. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ನವರಾತ್ರಿ ಪ್ರಯುಕ್ತ ಜಿ.ಎಲ್ ಸ್ವರ್ಣ ಹಬ್ಬ ತಾ.15.10.2023 ರಿಂದ 24.10.2023ರ ವರೆಗೆ ನಡೆಯಲಿರುವುದು.

Ad Widget

Ad Widget

Ad Widget

Ad Widget

ಈ ಸ್ವರ್ಣ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಆಕರ್ಷಕ ಕೊಡುಗೆಗಳನ್ನು ಸಂಸ್ಥೆಯು ಪ್ರಕಟಿಸಿದೆ. ಬಂಗಾರದ ಚೈನ್ ಖರೀದಿಗೆ VA 6%ನಿಂದ ಆರಂಭ, ‘ಜಂಟ್ಸ್ ಕಡ ಖರೀದಿಗೆ VA 6%ನಿಂದ ಆರಂಭ, ಆ್ಯಂಟಿಕ್ ಟ್ಯುವಲ್ಲರ್ಸ್ ಖರೀದಿಗೆ VA 15%ನಿಂದ ಆರಂಭ, ಬ್ಯಾಂಗಲ್ಸ್ ಖರೀದಿಗೆ VA 8%ನಿಂದ ಆರಂಭ, ಗ್ರಾಹಕರಿಗೆ ನವರಾತ್ರಿಯ ಈ ಹಬ್ಬದ ಋತುವಿನಲ್ಲಿ ಚಿನ್ನಾಭರಣಗಳನ್ನು ಖರೀದಿಸಿ 9 ಚಿನ್ನದ ನಾಣ್ಯಗಳನ್ನು ಗೆಲ್ಲುವ ಅಮೂಲ್ಯ ಅವಕಾಶವಿದೆ.

Ad Widget

Ad Widget

Ad Widget

ಸ್ವರ್ಣ ಹಬ್ಬದ ಪ್ರತಿ ಖರೀದಿಯ ಮೇಲೆ ವಿಶೇಷ ರಿಯಾಯಿತಿ ಪಡೆಯವ ಸುವರ್ಣಾವಕಾಶವಿದೆ.

Ad Widget

ವಿಶ್ವಾಸ, ಪರಿಶುದ್ಧತೆ, ಪರಂಪರೆ, ನವನವೀನ ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸದಾ ಸಂಸ್ಥೆ ಬದ್ದವಾಗಿದ್ದು, ಗ್ರಾಹಕರ ಮನಸೂರೆಗೊಳ್ಳುವ ವಿನೂತನ ವಿನ್ಯಾಸದ ಚಿನ್ನದ ಆಭರಣಗಳು, ವಜ್ರಾಭರಣಗಳು, ಬೆಳ್ಳಿಯ ಆಭರಣಗಳು, ಆ್ಯಂಟಿಕ್ ಆಭರಣಗಳು, ಅನ್ ಕಟ್ ಡೈಮಂಡ್ಸ್ ಹಾಗೂ ಅಮೂಲ್ಯ ಹರಳುಗಳ ವಿಪುಲ ಸಂಗ್ರಹವಿದ್ದು ಗ್ರಾಹಕರು ಆರಾಮದಾಯಕವಾಗಿ ಶಾಪಿಂಗ್ ಮಾಡಲು ಉತ್ತಮ ಪಾರ್ಕಿಂಗ್ ವ್ಯವಸ್ಥೆ ಕೂಡಾ ಲಭ್ಯವಿದೆ.

Ad Widget

Ad Widget

ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಸುಳ್ಯ, ಹಾಸನ ಹಾಗೂ ಕುಶಾಲನಗರದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ. ಈ ಜಿ.ಎಲ್. ಸ್ವರ್ಣ ಹಬ್ಬ ಎಲ್ಲ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Continue Reading

Trending

error: Content is protected !!