ಅಪರಾಧ
ಉಪ್ಪಿನಂಗಡಿ : ವಿದ್ಯಾರ್ಥಿನಿ ವಿಚಾರದಲ್ಲಿ ಕಿರಿಕ್ – ಕಾಲೇಜ್ ಅವರಣದಲ್ಲಿ ಪರಸ್ಪರ ಬಡಿದಾಡಿಕೊಂಡ ಕಾಲೇಜ್ ವಿದ್ಯಾರ್ಥಿಗಳು
ಉಪ್ಪಿನಂಗಡಿ: ಕಾಲೇಜ್ ಒಂದರ ಬೇರೆ ಬೇರೆ ಕೋಮಿಗೆ ಸೇರಿದ ವಿದ್ಯಾರ್ಥಿಗಳ ಎರಡು ತಂಡಗಳು ಕಾಲೇಜ್ ಅವರಣದಲ್ಲಿ ಪರಸ್ಪರ ಹೊಡೆದಾಡಿಕೊಂಡ ಘಟನೆ ನ .18 ರ ಸಂಜೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಬಳಿಕ ಇತ್ತಂಡಗಳ ಒಟ್ಟು ಐದು ಮಂದಿ ವಿದ್ಯಾರ್ಥಿಗಳು ಪುತ್ತೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಕಾಲೇಜಿನ ವಿದ್ಯಾರ್ಥಿನಿಯೊಬ್ಬಳ ವಿಚಾರವಾಗಿ ಈ ಹೊಡೆದಾಟ ನಡೆದಿದೆ ಎಂದು ಹೇಳಲಾಗುತ್ತಿದ್ದು, ಈ ಬಗೆಗಿನ ನಿಖರ ಮಾಹಿತಿ ತಿಳಿದು ಬಂದಿಲ್ಲ. ಹೊಡೆದಾಟದ ನಡೆದ ಬಗ್ಗೆ ಕಾಲೇಜಿನ ವತಿಯಿಂದಾಗಲಿ, ಇತ್ತಂಡಗಳ ವಿದ್ಯಾರ್ಥಿಗಳ ಕಡೆಯಿಂದಾಗಲಿ ದೂರು ಬಂದಿಲ್ಲ ಎಂದು ಹೇಳಲಾಗುತ್ತಿದ್ದೂ ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಒಂದು ಮೂಲದ ಪ್ರಕಾರ ವಿದ್ಯಾರ್ಥಿಯೊಬ್ಬ ಭಿನ್ನ ಕೋಮಿನ ವಿದ್ಯಾರ್ಥಿನಿಯ ಬಳಿ ಆಕೆಯ ಪೋನ್ ನಂಬರ್ ಕೇಳಿದ್ದಾನೆ ಎನ್ನಲಾಗಿದೆ. ಈ ಮಾಹಿತಿ ಪಡೆದ ವಿದ್ಯಾರ್ಥಿನಿಯ ಕೋಮಿಗೆ ಸೇರಿದ ಕೆಲ ವಿದ್ಯಾರ್ಥಿಗಳು ಪೋನ್ ನಂಬರ್ ಕೇಳಿದಾತನ ಬಳಿ ವಿಚಾರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವೇಳೆ ಪೋನ್ ನಂಬರ್ ಕೇಳಿದ ವಿದ್ಯಾರ್ಥಿಯ ಪರವಾಗಿ ಆತನ ಕೋಮಿನ ಕೆಲ ವಿದ್ಯಾರ್ಥಿಗಳು ಬೆಂಬಲಕ್ಕೆ ನಿಂತಿದ್ದು, ಈ ವೇಳೆ ವಾಗ್ವಾದ ನಡೆದು ಪರಸ್ಪರ ಹೊಡೆದಾಟ ನಡೆದಿದೆ.
ಇನ್ನೊಂದು ಮೂಲಗಳ ಪ್ರಕಾರ, ಕಾಲೇಜಿನ ಒಂದು ತರಗತಿ ಕೆಲ ವಿದ್ಯಾರ್ಥಿಗಳು ಹಾಗೂ ಕೆಲ ವಿದ್ಯಾರ್ಥಿನಿಯರು ಜತೆಯಾಗಿ ನಿಂತು ಸೆಲ್ಪಿ ತೆಗೆದುಕೊಂಡಿದ್ದಾರೆ. ಇವರ ಪೈಕಿ ಅನ್ಯ ಧರ್ಮೀಯನಾಗಿದ್ದು , ಉಳಿದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಒಂದೇ ಧರ್ಮಕ್ಕೆ ಸೇರಿದವರಾಗಿದ್ದರು ಎಂದು ಹೇಳಲಾಗುತ್ತಿದೆ.
ಇದರ ಬಗ್ಗೆ ಮಾಹಿತಿ ಪಡೆದ ಕೆಲ ವಿದ್ಯಾರ್ಥಿಗಳು, ಪೋಟೋಗೆ ನಿಂತ ಅನ್ಯ ಕೋಮಿನ ವಿದ್ಯಾರ್ಥಿ ಜತೆ ಪೋಟೊ ಗೆ ನಿಂತ ವಿಚಾರವಾಗಿ ತಗಾದೆ ತೆಗೆದಿದ್ದಾರೆ ಎನ್ನಲಾಗಿದೆ. ಈ ವೇಳೆ ಪೋಟೋಗೆ ನಿಂತ ಅನ್ಯ ಕೋಮಿನ ವಿದ್ಯಾರ್ಥಿ ಆತನ ಕೋಮಿನ ಕೆಲ ವಿದ್ಯಾರ್ಥಿಗಳು ಧಾವಿಸಿದ್ದಾರೆ.ಈ ವೇಳೆ ಎರಡು ತಂಡದ ನಡುವೆ ಹೋಯ್ ಕೈ ಆಗಿದ್ದು ಬಳಿಕ ಎರಡು ತಂಡಗಳು ಕಾಲೇಜ್ ಅವರಣದಲ್ಲಿ ಪರಸ್ಪರ ಬಡಿದಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಬಡಿದಾಟದಲ್ಲಿ ತೊಡಗಿಸಿಕೊಂಡಿದ್ದ ಒಂದು ತಂಡದ ಮೂವರು ವಿದ್ಯಾರ್ಥಿಗಳು ಮತ್ತು ಇನ್ನೊಂದು ತಂಡದ ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಅಪರಾಧ
Bantwal-ಬಂಟ್ವಾಳ : ಬಾಲಕಿಯೊಂದಿಗೆ ಅನುಚಿತ ವರ್ತನೆ – ಯುವಕನ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ: ಪೊಳಲಿಯಲ್ಲಿ ಬಾಲಕಿಯನ್ನು ಅಪ್ಪಿ ಹಿಡಿದು ಅನುಚಿತವಾಗಿ ವರ್ತಿಸಿದ ಘಟನೆಯು ಎ. 24ರಂದು ನಡೆದಿದ್ದು, ಆರೋಪಿಯ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಡಕಬೈಲು ನಿವಾಸಿ ಅಮೀನ್ ಯಾನೆ ಮೊಹಮ್ಮದ್ ಅಮೀನ್ ಪ್ರಕರಣ ಆರೋಪಿಯಾಗಿದ್ದು, ಆತ ಬಾಲಕಿಯ ಹಿಂದಿನಿಂದ ಬಂದು ಜೋರಾಗಿ ಎದೆ ಭಾಗವನ್ನು ಅಪ್ಪಿ, ಕೈಯನ್ನು ಬಲವಾಗಿ ಹಿಡಿದು ತಿರುಗಿ ನೋಡಲು ಕೂಡ ಅವಕಾಶ ನೀಡದೆ ನಿನ್ನ ಮೊಬೈಲ್ ನಂಬರ್ ಕೊಡಬೇಕು, ಇಲ್ಲದಿದ್ದರೇ ನಿನ್ನನ್ನು ರೇಪ್ ಮಾಡದೇ ಬಿಡುವುದಿಲ್ಲ, ನೀನು ನನಗೆ ಬೇಕು ಎಂದು ಹೇಳಿದಾಗ ನೊಂದ ಬಾಲಕಿಯು ಬೊಬ್ಬೆ ಹಾಕಿದ್ದಾಳೆ.
ಈ ವೇಳೆ ಸಂಬಂಧಿಕನೋರ್ವ ಬರುವುದನ್ನು ನೋಡಿ ಆರೋಪಿಯು ಸ್ಕೂಟರ್ನಲ್ಲಿ ಪರಾರಿಯಾಗಿದ್ದಾನೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ತನಿಖೆ ನಡೆಸುತ್ತಿದ್ದಾರೆ.
ಅಪರಾಧ
Online acquaintance-ಆನ್ ಲೈನ್ ಪರಿಚಿತ ಗೆಳೆಯ ಮಹಿಳೆಯ ಜೀವಾಂತ್ಯಗೊಳಿಸಿದ
ಬೆಂಗಳೂರು: ಕೊಡಿಗೇಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಎಂ. ಶೋಭಾ (48) ಕೊಲೆ ಪ್ರಕರಣದ ಆರೋಪಿ ನವೀನ್ ಗೌಡ (28) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ನವೀನ್ ಗೌಡ, ನಗರದ ಸಾಫ್ಟ್ವೇರ್ ಕಂಪನಿಯೊಂದರ ಉದ್ಯೋಗಿ. ಕೊಡಿಗೇಹಳ್ಳಿ ಬಳಿಯ ಗಣೇಶ ನಗರದ ಶೋಭಾ ಅವರನ್ನು ಏ. 18ರಂದು ಕೊಲೆ ಮಾಡಿ ಪರಾರಿಯಾಗಿದ್ದ.
ಶೋಭಾ ಮಗಳು ನೀಡಿದ್ದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಸೆರೆ ಹಿಡಿಯಲಾಗಿದೆ’ ಎಂದು ಪೊಲೀಸರು ಹೇಳಿದರು. ಶೋಭಾ ಅವರು ವಾಹನ ಚಾಲನಾ ತರಬೇತಿ ಶಾಲೆ ನಡೆಸುತ್ತಿದ್ದರು. ಎರಡನೇ ಮಗಳ ಜೊತೆ ನೆಲೆಸಿದ್ದರು. ಅವರ ಪತಿ ಹಾಗೂ ಮೊದಲ ಮಗಳು ಪ್ರತ್ಯೇಕವಾಗಿ ವಾಸವಿದ್ದರು. ಏ. 18ರಂದು ಬೆಳಿಗ್ಗೆ ಎರಡನೇ ಮಗಳು ತಮ್ಮ ಪತಿ ಮನೆಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಮನೆಗೆ ಬಂದಿದ್ದ ನವೀನ್ ಗೌಡ, ಶೋಭಾ ಅವರನ್ನು ಕತ್ತು ಹಿಸುಕಿ ಕೊಂದಿದ್ದನೆಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದರು.
ಸಾಮಾಜಿಕ ಮಾಧ್ಯಮದಿಂದ ಪರಿಚಯ: ‘ಶೋಭಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಖಾತೆ ಹೊಂದಿದ್ದರು. ಅದೇ ಖಾತೆಗೆ ಆರೋಪಿ ನವೀನ್ ರಿಕ್ವೆಸ್ಟ್ ಕಳುಹಿಸಿದ್ದ. ಅದನ್ನು ಶೋಭಾ ಸ್ವೀಕರಿಸಿದ್ದರು. ನಂತರ, ಇಬ್ಬರೂ ಪರಸ್ಪರ ಚಾಟಿಂಗ್ ಮಾಡಲಾರಂಭಿಸಿದ್ದರು ಎಂದು ಪೊಲೀಸರು ಹೇಳಿದರು.
ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡಿದ್ದ ಇಬ್ಬರೂ ಮಾತುಕತೆ ಆರಂಭಿಸಿದ್ದರು. ಇಬ್ಬರ ನಡುವೆ ಸಲುಗೆಯೂ ಬೆಳೆದಿತ್ತು ಎಂಬ ಮಾಹಿತಿ ಇದೆ. ಭೇಟಿಯಾಗುವುದಾಗಿ ಹೇಳಿದ್ದ ನವೀನ್, ಕೆಲ ದಿನಗಳ ಹಿಂದೆಯಷ್ಟೇ ಶೋಭಾ ಅವರ ಮನೆಗೆ ಬಂದು ಹೋಗಿದ್ದ. ಏ. 18ರಂದು ಎರಡನೇ ಬಾರಿ ಮನೆಗೆ ಬಂದಿದ್ದ ನವೀನ್ ಹಾಗೂ ಶೋಭಾ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ’ ಎಂದು ತಿಳಿಸಿದರು.
ಕೊಲೆ ನಂತರ ಆರೋಪಿ ನವೀನ್, ಶೋಭಾ ಅವರ ಕಾರಿನಲ್ಲಿಯೇ ಸ್ಥಳದಿಂದ ಪರಾರಿಯಾಗಿದ್ದ. ಸಲುಗೆ ಕಾರಣಕ್ಕೆ ಈ ಕೊಲೆ ನಡೆದಿರುವ ಮಾಹಿತಿ ಇದೆ’ ಎಂದು ಪೊಲೀಸರು ಹೇಳಿದರು.
ಅಪರಾಧ
Everest fish curry-ಎವರೆಸ್ಟ್ ಫಿಶ್ಕರಿ ಮಸಾಲಾದಲ್ಲಿ ಎಥಿಲಿನ್ ಆಕ್ಸೆಡ್ ಪತ್ತೆ
ಸಿಂಗಾಪುರ: ಭಾರತದ ಜನಪ್ರಿಯ ಉತ್ಪನ್ನ `ಎವರೆಸ್ಟ್ ಫಿಶ್ಕರಿ ಮಸಾಲಾ’ದಲ್ಲಿ ಅನುಮತಿಸಿರುವುದಕ್ಕಿಂತ ಅಧಿಕ ಮಟ್ಟದ ಎಥಿಲಿನ್ ಆಕ್ಸೆಡ್ ರಾಸಾಯನಿಕವಿದೆ ಎಂಬ ಕಾರಣಕ್ಕೆ ಈ ಮಸಾಲಾ ಉತ್ಪನ್ನವನ್ನು ಮಾರುಕಟ್ಟೆಯಿಂದ ಹಿಂಪಡೆಯುವಂತೆ ಸಿಂಗಾಪುರ ಆದೇಶಿಸಿದೆ.
ಎಥಿಲೀನ್ ಆಕ್ಸೆಡ್ ಅನ್ನು ಆಹಾರದಲ್ಲಿ ಬಳಸಲು ಅನುಮತಿಸಲಾಗಿಲ್ಲ ಮತ್ತು ಬ್ಯಾಕ್ಟಿರಿಯಾಗಳ ಮಾಲಿನ್ಯವನ್ನು ತಡೆಗಟ್ಟಲು ಕೃಷಿ ಉತ್ಪನ್ನಗಳ ಧೂಮೀಕರಣ(ಕೀಟನಿಯಂತ್ರಣದ ಒಂದು ವಿಧಾನ)ಕ್ಕೆ ಮಾತ್ರ ಬಳಸಲಾಗುತ್ತದೆ ಎಂದು ಸಿಂಗಾಪುರ ಫುಡ್ ಏಜೆನ್ಸಿಯ ಹೇಳಿಕೆ ತಿಳಿಸಿದ್ದು ಎವರೆಸ್ಟ್ ಫಿಶ್ಕರಿ ಮಸಾಲಾವನ್ನು ಆಮದು ಮಾಡಿಕೊಳ್ಳುವ ಎಸ್ಪಿ ಮುತ್ತಯ್ಯ ಆ್ಯಂಡ್ ಸನ್ಸ್ ಪ್ರೈ.ಲಿ. ಸಂಸ್ಥೆಗೆ ಸಿಂಗಾಪುರ ಮಾರುಕಟ್ಟೆಯಿಂದ ಉತ್ಪನ್ನವನ್ನು ತಕ್ಷಣ ವಾಪಾಸು ಪಡೆಯುವಂತೆ ಸೂಚಿಸಿದೆ.
-
ಸಾಮಾಜಿಕ ಮಾಧ್ಯಮ21 hours ago
Hasana sex tape : ಚುನಾವಣೆ ಹೊಸ್ತಿಲಲ್ಲಿ ಹಾಸನ ಅಭ್ಯರ್ಥಿಯ ರಾಸಲೀಲೆಯ ಪೆನ್ ಡ್ರೈವ್ ಸೌಂಡ್ ! ಅಸಲಿಯ / ನಕಲಿಯ ತೀವ್ರ ಚರ್ಚೆ
-
ದಕ್ಷಿಣ ಕನ್ನಡ22 hours ago
Student harrased in bus ಉಪ್ಪಿನಂಗಡಿ: ಸ್ಲೀಪರ್ ಕೋಚ್ ಬಸ್ನಲ್ಲಿ ವಿದ್ಯಾರ್ಥಿನಿಗೆ ಜತೆ ಸಹ ಪ್ರಯಾಣಿಕನಿಂದ ಕಿರುಕುಳ – ಯುವತಿ ವ್ಯಗ್ರಗೊಳ್ಳುತ್ತಾಳೆ ಕಿಟಕಿಯಿಂದ ಹಾರಿ ಆರೋಪಿ ಪರಾರಿ – ಮುಂದೇನಾಯಿತು ?
-
ಬಿಗ್ ನ್ಯೂಸ್1 day ago
NOTAForSoujanyaCase : ಸೌಜನ್ಯ ಪ್ರಕರಣ : ಟ್ವಿಟರ್ ಟ್ರೆಂಡಿಂಗಲ್ಲಿ 3ನೇ ಸ್ಥಾನ ಪಡೆದ ನೋಟಾ ಅಭಿಯಾನ
-
ನಿಧನ ವಾರ್ತೆ20 hours ago
Bhagavata Subramanya Dhareshwara-ಹಾಡು ನಿಲ್ಲಿಸಿದ ಬಡಗುತಿಟ್ಟಿನ ಗಾನ ಕೋಗಿಲೆ – ಯಕ್ಷಗಾನದ ಹಿರಿಯ ಭಾಗವತ ಸುಬ್ರಮಣ್ಯ ಧಾರೇಶ್ವರ ಇನ್ನಿಲ್ಲ
-
ಅಪರಾಧ2 days ago
Online acquaintance-ಆನ್ ಲೈನ್ ಪರಿಚಿತ ಗೆಳೆಯ ಮಹಿಳೆಯ ಜೀವಾಂತ್ಯಗೊಳಿಸಿದ
-
ನಿಧನ ವಾರ್ತೆ2 days ago
Run over-ತಂದೆಯಿಂದಲೇ ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣ
-
ಮಂಗಳೂರು20 hours ago
Janardhana Poojary-ಹಿಂದುತ್ವದ ಅಮಲಿನಲ್ಲಿ ಹಿಂದುಳಿದ ವರ್ಗದ ಯುವಕರು ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಮೇಲ್ವರ್ಗದವರು ಅಧಿಕಾರ ನಡೆಸುತ್ತಿದ್ದಾರೆ- ಇದಕ್ಕೆಲ್ಲ ತಿಲಾಂಜಲಿ ನೀಡುವ ಕೆಲಸ ಪದ್ಮರಾಜ್ ಆರ್ ಪೂಜಾರಿಯನ್ನು ಗೆಲ್ಲಿಸುವ ಮೂಲಕ ಆಗಬೇಕಿದೆ :ಜನಾರ್ದನ ಪೂಜಾರಿ
-
ದಕ್ಷಿಣ ಕನ್ನಡ2 days ago
ಬೆಲೆಯೆರಿಕೆ ಗಗನಕ್ಕೆರಿದ ಸಂದರ್ಭ ಸಿದ್ದರಾಮಯ್ಯ ಸರಕಾರ ಗ್ಯಾರಂಟಿ ಮೂಲಕ ಮಹಿಳೆಯರ ನೆರವಿಗೆ ನಿಂತಿದೆ : ಅನಿತಾ ಹೇಮನಾಥ ಶೆಟ್ಟಿ