ಡಿಸೆಂಬರ್ 1 ರಿಂದ “ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹೋತ್ಸವ” ಆರಂಭ – ಬೆತ್ತ ಸಂಗ್ರಹಿಸಲು ಸಂಪ್ರದಾಯದಂತೆ ವೀಳ್ಯ ಸ್ವೀಕರಿಸಿ ಕಾಡಿಗೆ ತೆರಳಿದ ಮಲೆಕುಡಿಯರು

FB_IMG_1637380772055
Ad Widget

Ad Widget

Ad Widget

ಸುಬ್ರಹ್ಮಣ್ಯ: ಡಿ.1ರಂದು ಬುಧವಾರದಿಂದ ಕೊಪ್ಪರಿಗೆ ಏರುವುದರ ಮೂಲಕ ಕುಕ್ಕೆ ಸುಬ್ರಹ್ಮಣ್ಯ ಜಾತ್ರೆ ಆರಂಭವಾಗಲಿದೆ.

Ad Widget

ಡಿ.3 – ಲಕ್ಷದೀಪೋತ್ಸವ
ಡಿ.7 – ಚೌತಿ ಹೂವಿನ ತೇರಿನ ಉತ್ಸವ
ಡಿ.8 – ಪಂಚಮಿ ರಥೋತ್ಸವ
ಡಿ. 9 – ಬೆಳಗ್ಗೆ ಚಂಪಾಷಷ್ಠಿ ಬ್ರಹ್ಮ ರಥೋತ್ಸವ
ಡಿ.10 – ಅವಭ್ರಥೋತ್ಸವ ಮತ್ತು ನೌಕವಿಹಾರ

Ad Widget

Ad Widget

Ad Widget

ಡಿ.15 ರಂದು ಕೊಪ್ಪರಿಗೆ ಇಳಿಯುವುದರ ಮೂಲಕ ಜಾತ್ರೆ ಸಮಾಪನಗೊಳ್ಳಲಿದೆ. ಈ ದಿನ ರಾತ್ರಿ ನೀರಿನಲ್ಲಿ ಬಂಡಿ ಉತ್ಸವ ನೆರವೇರಲಿದೆ. ಅಲ್ಲದೆ, ಪುರುಷರಾಯ, ಹೊಸಳಿಗಮ್ಮ ಹಾಗೂ ಪರಿವಾರ ದೈವಗಳ ನಡಾವಳಿ ನಡೆಯಲಿವೆ.

Ad Widget

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ರಥ ಮುಹೂರ್ತಕ್ಕೆ ಚಾಲನೆ :

Ad Widget

Ad Widget

ಮಾರ್ಗಶಿರ ಶುದ್ಧ ಪೌರ್ಣಮಿಯಂದು ಸಹಸ್ರ ನಾಮಾರ್ಚನೆ ಬಳಿಕ ದೇಗುಲದ ಪ್ರಧಾನ ಅರ್ಚಕರು ಶುಭಮುಹೂರ್ತದಲ್ಲಿ ಬ್ರಹ್ಮರಥ ನಿರ್ಮಾಣಕ್ಕೆ ಚಾಲನೆ ನೀಡುತ್ತಾರೆ.

ರಥ ಮುಹೂರ್ತದ ಬಳಿಕ ಮಲೆಕುಡಿಯ ಜನಾಂಗದವರು ವೀಳ್ಯ ಸ್ವೀಕರಿಸಿ ಕಾಡಿಗೆ ತೆರಳುತ್ತಾರೆ. ರಥ ನಿರ್ಮಾಣಕ್ಕೆ ಬೇಕಿರುವ ಬೆತ್ತ ಸಂಗ್ರಹಿಸಿ, ಬ್ರಹ್ಮರಥವನ್ನು ಕಟ್ಟಲು ಆರಂಭಿಸುತ್ತಾರೆ. ಸುಮಾರು ನಾಲ್ಕು ದಿನಗಳ ಕಾಲ ಕಾಡಿನಲ್ಲಿಯೇ ಇದ್ದು ಬೆತ್ತಗಳನ್ನು ಹುಡುಕಿಕೊಂಡು ಮಳೆ, ಬಿಸಿಲು ಚಳಿ ಎನ್ನದೆ ಸುಮಾರು ಹದಿನೈದು ಇಪ್ಪತ್ತು ಜನರ ತಂಡ ಈ ಬೆತ್ತಗಳನ್ನು ಸಂಗ್ರಹಿಸಿ ಕುಕ್ಕೆಗೆ ತಂದು ನಂತರ ರಥವನ್ನು ಕಟ್ಟಿ ತಮ್ಮ ಕೈ ಚಳಕದಲ್ಲಿ ವಿಶೇಷವಾಗಿ ರಥವನ್ನು ತಯಾರಿಸುತ್ತಾರೆ.

Leave a Reply

Recent Posts

ದೇಶದಲ್ಲಿ ಹಿಂದೂಗಳ ಶಕ್ತಿ ಹೇಗಿರಬೇಕೆಂದರೆ ಸರ್ಕಾರ ಹಿಂದೂಗಳ ಹೇಳಿಕೆಯಂತೆ ನಡೆಯಬೇಕು..! : ದೇವಸ್ಥಾನಗಳನ್ನು ಸರಕಾರಿಕರಣಗೊಳಿಸಿದಂತೆ ಮಸೀದಿಗಳನ್ನು ಏಕೆ ಮಾಡುವುದಿಲ್ಲ..? ಮಂದಿರ ಸಂಸ್ಕೃತಿ ರಕ್ಷಣೆ ಸಭೆಯಲ್ಲಿ ಚರ್ಚೆ – ಮುಂಬೈಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿನ ಭ್ರಷ್ಟಾಚಾರ ಬೆಳಕಿಗೆ ತಂದಿರುವ ಸುಪ್ರಸಿದ್ಧ ಸರ್ಜನ್ ರ ಪುಸ್ತಕ ಬಿಡುಗಡೆ

error: Content is protected !!
%d bloggers like this: