ಮಂಗಳೂರು: ಚರ್ಚ್ ನಲ್ಲಿ ಪ್ರಾರ್ಥನೆ ವೇಳೆ ಹೃದಯಾಘಾತಕ್ಕೊಳಗಾಗಿ ಪುತ್ತೂರು ಮೂಲದ ಧರ್ಮಗುರು ನಿಧನ

FB_IMG_1637518884217
Ad Widget

Ad Widget

Ad Widget

ಮಂಗಳೂರು, ನ. 21: ಕಾಟಿಪಳ್ಳ ಇನ್‌ಫೆಂಟ್ ಮೇರಿ ಚರ್ಚ್‌ನ ಧರ್ಮಗುರು ಫಾ. ವಲೇರಿಯನ್ ಲೂವಿಸ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

ಇಂದು ಪ್ರಾರ್ಥನೆ ಸಂದರ್ಭದಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥಗೊಂಡಿದ್ದ ಫಾ. ವಲೇರಿಯನ್ ಲೂವಿಸ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

Ad Widget

Ad Widget

Ad Widget

ಫಾ. ಲೂವಿಸ್ ಅವರು 1966ರಲ್ಲಿ ಪುತ್ತೂರಿನ ಆಂಟನಿ ಲೂಯಿಸ್ ಮತ್ತು ಕ್ಯಾಥರೀನ್ ಬ್ರಿಜಿಡ್ ಲೋಬೋ ಅವರ ಪುತ್ರರಾಗಿ ಜನಿಸಿದರು. ಪುತ್ತೂರಿನ ಫಿಲೋಮಿನಾ ಕಾಲೇಜಿನಲ್ಲಿ ಶಿಕ್ಷಣ ಪಡೆದಿದ್ದರು.

Ad Widget

1995 ರಲ್ಲಿ ಮಂಗಳೂರು ಧರ್ಮಪ್ರಾಂತ್ಯದಿಂದ ಧರ್ಮಗುರುಗಳಾಗಿ ನೇಮಕಗೊಂಡರು. ಇವರು ವಾಮಂಜೂರು, ಬಾರ್ಕೂರು ಚರ್ಚ್ ಗಳಲ್ಲಿ ಸಹಾಯಕ ಧರ್ಮಗುರುಗಳಾಗಿ ಅವರು ಸೇವೆ ನೀಡಿದ್ದಾರೆ. ಮತ್ತು ಜೆಪ್ಪುವಿನಲ್ಲಿ ಸಹಾಯಕ ನಿರ್ದೇಶಕರಾಗಿದ್ದರು. ಅವರು ಕೊಕ್ಕಡ, ಸುಳ್ಯ ಮತ್ತು ಮಂಜೇಶ್ವರ ಚರ್ಚ್ ನಲ್ಲಿ ಧರ್ಮಗುರುಗಳಾಗಿ ಸೇವೆ ಸಲ್ಲಿಸಿದ್ದರು. 2019ರಿಂದ ಕಾಟಿಪಳ್ಳ ಚರ್ಚ್‌ನಲ್ಲಿ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದರು.

Ad Widget

Ad Widget

ಯುವ ಜನತೆ ನೋಡಲೇಬೇಕಾದ ವೀಡಿಯೋ: ಯುವ ಜನರಲ್ಲೇ ಹೆಚ್ಚುತ್ತಿರುವ ಹೃದಯಾಘಾತಕ್ಕೆ ಕಾರಣಗಳೇನು? ಲಕ್ಷಣಗಳು ಕಂಡುಬಂದಾಗ ಕೈಗೊಳ್ಳಬೇಕಾದ ಮುಂಜಾಗರೂಕತೆಗಳು: ಪುತ್ತೂರಿನ ಖ್ಯಾತ ವೈದ್ಯ ಡಾ.ಸುರೇಶ್ ಪುತ್ತೂರಾಯ :

25 ವರ್ಷ ದಾಟಿದ ಯುವಕ/ಯುವತಿಯರು ತಮ್ಮ ಆರೋಗ್ಯಕ್ಕಾಗಿ ಅನುಸರಿಸಬೇಕಾದ ಅಗತ್ಯ ಕ್ರಮಗಳು ಹಾಗೂ ಹೃದಯಾಘಾತದ ಬಗ್ಗೆ ಪುತ್ತೂರಿನ ಖ್ಯಾತ ಹೃದ್ರೋಗ ತಜ್ಞ ಡಾ. ಶ್ರೀಪತಿ ರಾವ್ ರವರಿಂದ ಯುವಜನತೆಗೆ ಅತ್ಯುಪಯುಕ್ತ ಮಾಹಿತಿ :

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: