ವರದಿಗಳು
ಕೊಡಗು : ಪಾಕಿಸ್ತಾನ ಝಿಂದಾಬಾದ್ ಘೋಷಣೆಗೆ ತಿರುವು – ಪತ್ರಕರ್ತ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು
ಮಡಿಕೇರಿ : ಶನಿವಾರ ಸಂತೆಯಲ್ಲಿ ಮುಸ್ಲಿಂ ಮಹಿಳೆಯರು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಅಂಬೇಡ್ಕರ್ ಝಿಂದಾಬಾದ್ ಎಂದು ಘೋಷಣೆ ಕೂಗಿದ್ದ ವಿಡಿಯೋ ತಿರುಚಿ ಪಾಕಿಸ್ತಾನ್ ಝಿಂದಾಬಾದ್ ಹೇಳಿದ್ದಾರೆಂದು ವದಂತಿ ಹಬ್ಬಿಸಿದ ಆರೋಪದಲ್ಲಿ ಮೂವರ ಮೇಲೆ ಎಫ್ ಐ ಆರ್ ದಾಖಲಾಗಿದೆ. ರಘು ಎಸ್ ಎನ್ , ಹರೀಶ್ ಹಾಗು ಗಿರೀಶ್ ಆರೋಪಿಗಳು. ಈ ಪೈಕಿ ಹರೀಶ್ ಪತ್ರಿಕೆಯ ಸ್ಥಳೀಯ ವರದಿಗಾರನಾಗಿದ್ದು, ಸೋಮವಾರಪೇಟೆ ಪತ್ರಕರ್ತರ ಸಂಘದ ಅಧ್ಯಕ್ಷರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಶನಿವಾರ ಸಂತೆ ಗ್ರಾಮ ಪಂಚಾಯತ್ ಸದಸ್ಯ ರಘು, ಮಾಜಿ ಸದಸ್ಯ ಹಾಗು ಪತ್ರಕರ್ತ ಹರೀಶ್ ಹಾಗು ಕುಶಾಲ್ ನಗರದ ಗಿರೀಶ್ ಕೋಮು ಸೌಹಾರ್ದ ಕದಡುವ ದುರುದ್ದೇಶದಿಂದ ತಿರುಚಿದ ವಿಡಿಯೋ ವಾಟ್ಸ್ ಆಪ್ ನಲ್ಲಿ ಹರಡಿ ಪ್ರತಿಭಟನೆಯ ಸಂದರ್ಭ ಮುಸ್ಲಿಂ ಮಹಿಳೆಯರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ, ಹಿಂದೂ ಸಂಘಟನೆ ಮೇಲೆ ದಬ್ಬಾಳಿಕೆ ನಡೆಸುತ್ತಲೇ ಬಂದಿದ್ದಾರೆ. ಹಾಗಾಗಿ ನ.15ರಂದು ಶನಿವಾರ ಸಂತೆ ಬಂದ್ ಮಾಡುವಂತೆ ಕರೆ ನೀಡಿದ್ದರು ಎಂದು ಎಫ್ ಐ ಆರ್ ನಲ್ಲಿ ಹೇಳಲಾಗಿದೆ.
ಇಂಜಿನಿಯರಿಂಗ್ ಪದವೀಧರ ಪುತ್ತೂರಿನ ಯುವಕನಿಂದ ಗೋ ತ್ಯಾಜದಿಂದ ಸಾವಯವ ರಸಗೊಬ್ಬರ ತಯಾರಿಕೆ – ರಾಜ್ಯದಲ್ಲೇ ಮೊದಲ ಪ್ರಯತ್ನಕ್ಕೆ ಭರ್ಜರಿ ಬೇಡಿಕೆ
ಪ್ರತಿಭಟನೆಯ ವೇಳೆ ಮುಸ್ಲಿಂ ಮಹಿಳೆಯರು ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ ಎಂದೂ ಎಫ್ ಐ ಆರ್ ನಲ್ಲಿ ದಾಖಲಾಗಿದೆ.
ಇದೀಗ ಮೂವರು ಆರೋಪಿಗಳ ವಿರುದ್ಧ ಐಪಿಸಿ 34, 153 ಅಡಿಯಲ್ಲಿ ಶನಿವಾರ ಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವ ಜನತೆ ನೋಡಲೇಬೇಕಾದ ವೀಡಿಯೋ: ಯುವ ಜನರಲ್ಲೇ ಹೆಚ್ಚುತ್ತಿರುವ ಹೃದಯಾಘಾತಕ್ಕೆ ಕಾರಣಗಳೇನು? ಲಕ್ಷಣಗಳು ಕಂಡುಬಂದಾಗ ಕೈಗೊಳ್ಳಬೇಕಾದ ಮುಂಜಾಗರೂಕತೆಗಳು: ಪುತ್ತೂರಿನ ಖ್ಯಾತ ವೈದ್ಯ ಡಾ.ಸುರೇಶ್ ಪುತ್ತೂರಾಯ
ಅಂತರ ರಾಜ್ಯ
Ajit Pawar’s wife-25 ಸಾವಿರ ಕೋಟಿ ಅವ್ಯವಹಾರ : ಅಜಿತ್ ಪವಾರ್ ಪತ್ನಿಗೆ ಕ್ಲೀನ್ ಚಿಟ್
ಮುಂಬಯಿ: ಮಹಾರಾಷ್ಟ್ರ ರಾಜ್ಯ ಸಹಕಾರ ಬ್ಯಾಂಕ್ನಲ್ಲಿ (ಎಂಎಸಿಬಿ) ನಡೆದಿರುವ 25 ಸಾವಿರ ಕೋಟಿ ರೂ. ಮೊತ್ತದ ಅವ್ಯವಹಾರ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಅವರನ್ನು ಮುಂಬಯಿ ಪೊಲೀಸರು ದೋಷಮುಕ್ತಗೊಳಿಸಿದ್ದಾರೆ.
ಬಾರಾಮತಿ ಲೋಕಸಭೆ ಕ್ಷೇತ್ರದ ಎನ್ಡಿಎ ಅಭ್ಯರ್ಥಿಯಾಗಿರುವ ಸುನೇತ್ರಾ ಅವರಿಗೆ ಪೊಲೀಸರಿಂದ ಕ್ಲೀನ್ ಚಿಟ್ ಸಿಕ್ಕಿರುವುದು ಚುನಾವಣೆ ಹೊತ್ತಲ್ಲಿ ರಿಲೀಫ್ ತಂದಿದೆ.
25 ಸಾವಿರ ಕೋಟಿ ರೂ. ಅವ್ಯವಹಾರದ ಪ್ರಕರಣದ ತನಿಖೆ ಕೈಗೊಂಡಿದ್ದ ಮುಂಬಯಿ ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧಗಳ ವಿಭಾಗವು ಪ್ರಕರಣವನ್ನು ಮುಕ್ತಾಯಗೊಳಿಸಿ ಕಳೆದ ಜನವರಿಯಲ್ಲಿ ವರದಿ ಸಲ್ಲಿಸಿತ್ತು.
‘ಅಜಿತ್ ಪವಾರ್ ಅವರ ನಂಟು ಹೊಂದಿರುವ ಜರಂಡೇಶ್ವರ ಸಕ್ಕರೆ ಕಾರ್ಖಾನೆಗೆ ಸಾಲ ಅಥವಾ ಮಾರಾಟಕ್ಕೆ ಅನುಮತಿ ನೀಡಿದ ಪ್ರಕ್ರಿಯೆಯಲ್ಲಿ ಎಂಎಸ್ಬಿ ಬ್ಯಾಂಕಿಗೆ ಯಾವುದೇ ರೀತಿಯ ನಷ್ಟ ಉಂಟಾಗಿಲ್ಲ. ಹಣಕಾಸು ವ್ಯವಹಾರದಲ್ಲಿ ಯಾವುದೇ ಕ್ರಿಮಿನಲ್ ಅಪರಾಧ ನಡೆದಿಲ್ಲ, ” ಎಂದು ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧಗಳ ವಿಭಾಗವು ತನ್ನ ವರದಿಯಲ್ಲಿ ತಿಳಿಸಿದೆ.
ಅಂತರ ರಾಜ್ಯ
BJP leader-ನರೇಂದ್ರ ಮೋದಿ ಮುಸ್ಲಿಂಮರ ವಿರುದ್ಧ ನೀಡಿದ್ದ ಹೇಳಿಕೆಯನ್ನು ಖಂಡಿಸಿದ ಬಿಜೆಪಿ ಮುಖಂಡ ಪಕ್ಷದಿಂದ ವಜಾ
ಜೈಪುರ: ಇತ್ತೀಚೆಗೆ ರಾಜಸ್ಥಾನದ ಚುನಾವಣಾ Rallyಯಲ್ಲಿ ಪ್ರಧಾನಿ ಮೋದಿ ಅವರು ದೇಶದ ಮುಸ್ಲಿಮರನ್ನು ನುಸುಳುಕೋರರಿಗೆ ಹೋಲಿಸಿ ನೀಡಿದ್ದ ಹೇಳಿಕೆಯನ್ನು ಖಂಡಿಸಿದ್ದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ಉಸ್ಮಾನ್ ಘನಿ ಅವರನ್ನು ಬುಧವಾರ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಇತ್ತೀಚೆಗೆ ಘನಿ ಅವರು ದಿಲ್ಲಿಯಲ್ಲಿ ವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದರು. ಆಗ ಅವರು, “ರಾಜಸ್ಥಾನದಲ್ಲಿ ಬಿಜೆಪಿಯು ಮೂರಾಲ್ಕು ಸ್ಥಾನಗಳನ್ನು ಕಳೆದುಕೊಳ್ಳಲಿದೆ,” ಎಂದಿದ್ದರು. ಅಲ್ಲದೇ ಮುಸ್ಲಿಮರ ಕುರಿತು ಪ್ರಧಾನಿ ನೀಡಿದ್ದ ಹೇಳಿಕೆಯನ್ನು ಖಂಡಿಸಿದ್ದರು.
ಅಂತರ ರಾಜ್ಯ
Mungekar-ಮುಸ್ಲಿಮರಿಗೆ ದೇಶದ ಸಂಪತ್ತಿನಲ್ಲಿ ಮೊದಲ ಹಕ್ಕಿದೆ ಎಂದು ಸಿಂಗ್ ಹೇಳಿಲ್ಲ; ಮೋದಿಯವರ ಹೇಳಿಕೆ ಸುಳ್ಳು ಎಂದು ಕುಟುಕಿದ ಮುಂಗೇಕರ್
ಮುಂಬೈ: ಕಾಂಗ್ರೆಸ್ ನಾಯಕ, ಆರ್ಥಿಕ ತಜ್ಞ ಮತ್ತು ನೀತಿ ಆಯೋಗದ ಸದಸ್ಯರೂ ಆಗಿದ್ದ ಡಾ. ಬಾಲಚಂದ್ರ ಮುಂಗೇಕರ್ರವರು ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿಕೆ ನೀಡಿಲ್ಲ. ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಸುಳ್ಳು ಎಂದು ಹೇಳಿದ್ದಾರೆ.
ಡಾ. ಸಿಂಗ್ ಅವರ ಹೇಳಿಕೆಯ ಒಂದು ವಾಕ್ಯವನ್ನು ಪ್ರಸ್ತುತಪಡಿಸುವ ಮೂಲಕ ಮೋದಿ ಅವರು ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ತಮ್ಮ ರಾಜಕೀಯ ಹಿತಾಸಕ್ತಿಗಳನ್ನು ಈಡೇರಿಸಿಕೊಳ್ಳಲು ಮುಸ್ಲಿಂ ಸಮುದಾಯದಲ್ಲಿ ಅಸಮಾಧಾನವನ್ನು ಸೃಷ್ಟಿಸುವುದು ಬಿಜೆಪಿಯ ತಂತ್ರವಾಗಿದೆ. ಆದರೆ, ಜನರು ಮೋದಿ ಅವರ ಹೇಳಿಕೆಗಳನ್ನು ನಂಬುವುದಿಲ್ಲ ಎಂದು ಮುಂಬೈ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಮತ್ತು ರಾಜ್ಯಸಭೆಯ ಮಾಜಿ ಸದಸ್ಯ ಡಾ.ಮುಂಗೇಕರ್ ಹೇಳಿದ್ದಾರೆ.
ಯುಪಿಎ ಸರ್ಕಾರದ ಭಾಗವಾಗಿದ್ದ ಡಾ. ಮುಂಗೇಕರ್, ನರೇಂದ್ರ ಮೋದಿ ನೀಡಿರುವ ಹೇಳಿಕೆಯನ್ನು ತಳ್ಳಿ ಹಾಕಿದ್ದು, ಸತ್ಯವನ್ನು ಮುಂದಿಟ್ಟಿದ್ದಾರೆ.
2006ರ ಡಿಸೆಂಬರ್ 9ರಂದು ನಡೆದಿದ್ದ ರಾಷ್ಟ್ರೀಯ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ, ‘ದೇಶದ ದಲಿತರು, ಆದಿವಾಸಿಗಳು, ಒಬಿಸಿ, ಮಹಿಳೆಯರು, ಮಕ್ಕಳು ಅಭಿವೃದ್ಧಿಯ ಫಲವನ್ನು ಸವಿಯಬೇಕು ಮತ್ತು ಅಲ್ಪಸಂಖ್ಯಾತ ಸಮುದಾಯವೂ ಪ್ರಯೋಜನ ಪಡೆಯಬೇಕು’ ಎಂದು ಡಾ ಮನಮೋಹನ್ ಸಿಂಗ್ ಹೇಳಿದ್ದರು. ಅವರ ಹೇಳಿಕೆಯ ಅರ್ಥವೇನೆಂದರೆ, ಎಸ್ಸಿ ಎಸ್ಟಿ, ಒಬಿಸಿ, ಅಲ್ಪಸಂಖ್ಯಾತರು ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಹೊಂದಿದ್ದಾರೆ ಎಂಬುದಾಗಿತ್ತು. ಸಭೆಯ ನಂತರ ಡಾ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ಮತ್ತು ನಾನು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದೆವು. ಅಲ್ಪಸಂಖ್ಯಾತರು ಎಂದರೆ ಧಾರ್ಮಿಕ ಅಲ್ಪಸಂಖ್ಯಾತರು ಮಾತ್ರವಲ್ಲದೆ ಭಾಷಾ ಅಲ್ಪಸಂಖ್ಯಾತರು ಸಹ ಹೌದು. ಸಭೆಯಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಸೇರಿದಂತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು ಎಂದು ಡಾ. ಮುಂಗೇಕರ್ ಹೇಳಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ದೇಶದ ಸಂಪತ್ತಿನ ಮೇಲೆ ಮುಸ್ಲಿಮರಿಗೆ ಮೊದಲ ಹಕ್ಕಿರುತ್ತದೆ ಮತ್ತು ಅವರು ಹೆಚ್ಚು ಮಕ್ಕಳನ್ನು ಹೊಂದಿರುವುದರಿಂದ ಅದನ್ನು ಸಮುದಾಯದೊಳಗೆ ಹಂಚಿಕೆ ಮಾಡಲಾಗುತ್ತದೆ ಎಂದು ಸಿಂಗ್ ಹೇಳಿರುವುದಾಗಿ ಮೋದಿ ಈಗ ಹೇಳುತ್ತಿರುವುದು ಸರಿಯೇ? ಚುನಾವಣೆಯಲ್ಲಿ ಧಾರ್ಮಿಕ ತಿರುವು ನೀಡಲು ಅವರು ಹೀಗೆ ಹೇಳಿಕೆ ನೀಡಿದ್ದಾರೆ. ಪ್ರಧಾನಿ ಸ್ಥಾನದಲ್ಲಿರುವ ವ್ಯಕ್ತಿ ಈ ರೀತಿ ಹೇಳಿಕೆ ನೀಡುವುದು ಸೂಕ್ತವಲ್ಲ. 102 ಲೋಕಸಭಾ ಸ್ಥಾನಗಳಿಗೆ ಮೊದಲ ಹಂತದ ಮತದಾನ ನಡೆದಿದ್ದು, ಬಿಜೆಪಿ ಸೋಲುವ ಚಿತ್ರಣ ಸ್ಪಷ್ಟವಾಗಿದೆ. 40ರ ಗಡಿ ತಲುಪಲಾಗದೆ ಮೋದಿ ನಿರಾಸೆಗೊಂಡಿದ್ದಾರೆ’ಎಂದು ಮುಂಗೇಕರ್ ಕುಟುಕಿದ್ದಾರೆ.
-
ಬಿಗ್ ನ್ಯೂಸ್1 day ago
Hasana Sex Tape: ಹಾಸನ ಸಂಸದ ಪ್ರಜ್ವಲ್ ರೇವಣ್ಣರವರದೆಂದು ಬಿಂಬಿಸಿ ಕೊಳಕು, ಮಾರ್ಫ್ ಮಾಡಿದ ವೀಡಿಯೊಗಳು ಆನ್ಲೈನ್ನಲ್ಲಿ ವ್ಯಾಪಕವಾಗಿ ಪ್ರಸಾರ : ಚುನಾವಣಾ ಏಜೆಂಟ್ ರಿಂದ ಠಾಣೆಗೆ ದೂರು
-
ಬಿಗ್ ನ್ಯೂಸ್1 day ago
ಕುಟುಂಬ ಸಮೇತ ಮತ ಚಲಾಯಿಸಲು ಪದ್ಮರಾಜ್ ಬಂದಾಗ ಬಿಜೆಪಿ ಕಾರ್ಯಕರ್ತನಿಂದ ಗೂಂಡಾಗಿರಿ – ಪೊಲೀಸ್ ಅಧಿಕಾರಿಯನ್ನು ತಳ್ಳಾಡಿ ಪುಂಡಾಟ : ಮಾಧ್ಯಮದವರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದನೆ
-
ಸ್ಥಳೀಯ2 days ago
Mithun Rai-ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಮೂಡುಬಿದಿರೆ ಬಿಜೆಪಿ ಶಾಸಕರ ಪ್ರಾಮಾಣಿಕ ಪ್ರಯತ್ನ – ಮಿಥುನ್ ರೈ ಶಾಕಿಂಗ್ ಹೇಳಿಕೆ
-
ಬಿಗ್ ನ್ಯೂಸ್23 hours ago
ಕಟೀಲ್ ಆಶೀರ್ವಾದ ಪಡೆದ ಪದ್ಮರಾಜ್ : ಹರಸಿದ ಸಂಸದರು..!
-
ಅಪರಾಧ2 days ago
Bantwal-ಬಂಟ್ವಾಳ : ಬಾಲಕಿಯೊಂದಿಗೆ ಅನುಚಿತ ವರ್ತನೆ – ಯುವಕನ ವಿರುದ್ಧ ಪ್ರಕರಣ ದಾಖಲು
-
ಮಂಗಳೂರು2 days ago
Brijesh Chowta-ಕಾಂಗ್ರೆಸಿಗೆ ಮತ ನೀಡಿದರೆ ಎಸ್ಡಿಪಿಐ ಕೈ ಬಲಪಡಿಸಿದಂತೆ ; ಶಕ್ತಿನಗರ ಕಾಲ್ನಡಿಗೆ ರೋಡ್ ಶೋದಲ್ಲಿ ಕ್ಯಾ. ಬ್ರಿಜೇಶ್ ಚೌಟ
-
ಅಂತರ ರಾಜ್ಯ2 days ago
BJP leader-ನರೇಂದ್ರ ಮೋದಿ ಮುಸ್ಲಿಂಮರ ವಿರುದ್ಧ ನೀಡಿದ್ದ ಹೇಳಿಕೆಯನ್ನು ಖಂಡಿಸಿದ ಬಿಜೆಪಿ ಮುಖಂಡ ಪಕ್ಷದಿಂದ ವಜಾ
-
ಬಿಗ್ ನ್ಯೂಸ್20 hours ago
ಮಧ್ಯಾಹ್ನ 1 ಗಂಟೆಯವರೆಗೆ ದಕ್ಷಿಣ ಕನ್ನಡದಲ್ಲಾದ ಮತದಾನವೆಷ್ಟು ಗೊತ್ತೇ..?