ಬಿಗ್ ನ್ಯೂಸ್
Breaking : ಜ್ಯೂ.ಕಾಲೇಜಿನಲ್ಲಿ ಹೊಡೆದಾಟ ಪ್ರಕರಣ Update : ಅಪ್ರಾಪ್ತರ ಕೌನ್ಸಿಲಿಂಗ್ ಕರೆಸಿದ್ದೇವೆ – ಪೊಲೀಸರು | ಅರೋಪಿತರಲ್ಲ ನಮ್ಮ ವಿದ್ಯಾರ್ಥಿಗಳನ್ನು ಬಿಡಿ – ಹಿಂಜಾವೇ ಠಾಣೆ ಮುಂದೆ ಧರಣಿ | ಡಿವೈಎಸ್ಪಿ ಮತ್ತು ಕಾರ್ಯಕರ್ತರ ಮಾತಿನ ನಡುವೆ ಚಕಮಕಿ | ಕೊನೆಗೂ ಅಂತ್ಯ ಕಂಡ ಪ್ರತಿಭಟನೆ – Video ನೋಡಿ
ಪುತ್ತೂರು: ಕೊಂಬೆಟ್ಟು ಜ್ಯೂನಿಯರ್ ಕಾಲೇಜ್ ವಿದ್ಯಾರ್ಥಿಗಳ ಹೊಡೆದಾಟ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಹಿಂದು ಧರ್ಮದ ವಿದ್ಯಾರ್ಥಿಗಳನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆ ತರಲಾಗಿದೆ ಎಂದು ಆರೋಪಿಸಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ನ .26 ರಂದು ಸಂಜೆ ನಡೆದಿದೆ.
ಈ ವೇಳೆ ಪುತ್ತೂರು ಡಿವೈಎಸ್ಪಿ ಗಾನಾ ಪಿ ಹಾಗೂ ಹಿಂಜಾವೇ ಮುಖಂಡ ಅಜೀತ್ ರೈ ಹೊಸಮನೆ ಮತ್ತು ಇತರ ಮುಖಂಡರ ಮಧ್ಯೆ ಮಾತಿನ ಚಕಮಕಿ ನಡೆಯಿತು. ವಾಗ್ವಾದವನ್ನು ವಿಡಿಯೋದಲ್ಲಿ ನೋಡಿ :
ಬಿಜೆಪಿ ಪುತ್ತೂರು ನಗರ ಅಧ್ಯಕ್ಷ ಪಿಜಿ. ಜಗನ್ನಿವಾಸ ರಾವ್ ಕೂಡ ಹಿಂಜಾವೇ ಕಾರ್ಯಕರ್ತರನ್ನು ಸಮಧಾನಿಸಲು ಪ್ರಯತ್ನಿಸಿದರು. ಆದರೆ ಅವರ ಸಮಾಜಾಯಿಷಿಗೂ ಕೂಡ ಒಪ್ಪದ ಕಾರ್ಯಕರ್ತರು ಠಾಣೆಗೆ ಮುತ್ತಿಗೆ ಹಾಕಿದ ಮುಸ್ಲಿಂ ಪರ ಸಂಘಟನೆಗಳ ಕಾರ್ಯಕರ್ತರನ್ನು ಇನ್ನೂ ಯಾಕೇ ಬಂಧಿಸಿಲ್ಲ ಎಂದು ಪ್ರಶ್ನಿಸಿದರು. ಈ ವೇಳೆ ಅವರು ಮುಸ್ಲಿಂ ಪರ ಸಂಘಟನೆಗಳ ಕಾರ್ಯಕರ್ತರ ವಿರುದ್ದ ಹೆಸರು ನೀಡಿ ದೂರು ಕೊಟ್ಟಿಲ್ಲ , ಹಾಗಾಗಿ ಅವರ ವಿರುದ್ದ ಕಾನೂನು ಕ್ರಮ ಕೈಗೊಂಡಿಲ್ಲ ಎಂದು ತಿಳಿಸಿದ್ದರು. ಸಿಸಿಟಿವಿ , ವಿಡಿಯೋ ನೋಡಿ ದೂರು ನೀಡಬೇಕಿತ್ತು ಎಂದು ಕಾರ್ಯಕರ್ತರು ಮರು ಉತ್ತರಿಸಿದ್ದಾರೆ . ( ವಿಡಿಯೋ ನೋಡಿ)
ಮಹಿಳಾ ಠಾಣೆಯಲ್ಲಿ ಆಪ್ತ ಸಮಾಲೋಚನೆ:
ಹೊಡೆದಾಡಿಕೊಂಡ ವಿದ್ಯಾರ್ಥಿಗಳು ಅಪ್ರಾಪ್ತರಾದ ಹಿನ್ನಲೆಯಲ್ಲಿ ಅವರನ್ನು ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುವುದು ಸಮಂಜಸವಲ್ಲವೆಂದು ಮಹಿಳಾ ಪೊಲೀಸ್ ಠಾಣೆಯಲ್ಲಿರುವ ಅಪ್ರಾಪ್ತರ ಕೌನ್ಸಿಲಿಂಗ್ ವಿಭಾಗಕ್ಕೆ ನಾಲ್ವರು ಹಿಂದು ಮತ್ತು ಇಬ್ಬರು ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳನ್ನು ಘಟನೆಯ ಮಾಹಿತಿ ಪಡೆಯಲು ಪೊಲೀಸರು ಕರೆಸಿದ್ದಾರೆ ಎಂದು ತಿಳಿದು ಬಂದಿದೆ. ಈ ವಿಚಾರವೇ ಈ ಕ್ಷಿಪ್ರ ಬೆಳವಣಿಗೆಗೆ ಕಾರಣವಾಗಿದೆ
ಪೊಲೀಸರು ವಿದ್ಯಾರ್ಥಿಗಳನ್ನು ಕರೆಸಿದ್ದಾರೆ ಎನ್ನುವ ವಿಚಾರ ಸುದ್ದಿಯಾಗುತ್ತಲೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಅಪರಾಧ ಎಸಗದ ಹಿಂದು ವಿದ್ಯಾರ್ಥಿಗಳನ್ನು ನೀವು ಠಾಣೆಗೆ ಕರೆದೊಯ್ಯುವುದು ತಪ್ಪು. ಅವರನ್ನು ಬಿಡಬೇಕೆಂದು ಠಾಣೆಯ ಮುಂದೆ ಜಮಾಯಿಸಿ ಒತ್ತಾಯಿಸಿದರು.
ಸದ್ಯ ಹಿಂದೂ ಜಾಗರಣೆ ಕಾರ್ಯಕರ್ತರು ಠಾಣೆ ಮುಂಭಾಗ ದರಣಿ ಕೂತಿದ್ದು , ಬಿಜೆಪಿ ಹಾಗೂ ಹಿಂಜಾವೇ ಮುಖಂಡರು ಠಾಣೆಯ ಒಳಗಡೆ ಮಾತುಕತೆ ನಡೆಸುತ್ತಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ಹಿಂಜಾವೇ ಮುಖಂಡರು ಹಾಗೂ ಡಿವೈಎಸ್ ಪಿ ಮಧ್ಯೆ ನಡೆದ ಮಾತುಕತೆ ಫಲಪ್ರದವಾಗಿದ್ದು , ಸಂಘಟನೆಯ ಮುಖಂಡರನ್ನು ಮನವೊಲಿಸುವಲ್ಲಿ ಡಿವೈಎಸ್ ಪಿ ಸಫಲರಾಗಿದ್ದಾರೆ.
ಮಾತುಕತೆ ನಡೆಸಿ ಹೊರ ಬಂದ ಹಿಂಜಾವೇ ಮುಖಂಡ ಅಜೀತ್ ರೈ ಹೊಸಮನೆ ” ಇನ್ನು ಮುಂದೆ ಕಾಲೇಜು ವಿಚಾರವಾಗಿ ಯಾವುದೇ ಹೊರಗಿನ ಸಂಘಟನೆ ಹಸ್ತಕ್ಷೇಪ ನಡೆಸದಂತೆ ನೋಡಿಕೊಳ್ಳುವುದಾಗಿ ಡಿವೈಎಸ್ ಪಿಯವರು ಭರವಸೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಪ್ರತಿಭಟನೆಯನ್ನು ಕೈ ಬಿಡುವುದಾಗಿ ತಿಳಿಸಿದರು
ಹೊಡೆದಾಟಕ್ಕೆ ಸಂಬಂಧಿಸಿ ಮುಸ್ಲಿಂ ಸಮುದಾಯದ ಇಬ್ಬರನ್ನು ಠಾಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.
ಸಾಮಾಜಿಕ ಮಾಧ್ಯಮ
Hasana sex tape : ಚುನಾವಣೆ ಹೊಸ್ತಿಲಲ್ಲಿ ಹಾಸನ ಅಭ್ಯರ್ಥಿಯ ರಾಸಲೀಲೆಯ ಪೆನ್ ಡ್ರೈವ್ ಸೌಂಡ್ ! ಅಸಲಿಯ / ನಕಲಿಯ ತೀವ್ರ ಚರ್ಚೆ
ಹಾಸನ ಲೋಕಸಭಾ ಕ್ಷೇತ್ರದ ರಾಜಕೀಯ ಪಕ್ಷವೊಂದರ ಅಭ್ಯರ್ಥಿಯೊರು ಭಾಗಿಯಾಗಿದ್ದಾರೆ ಎನ್ನಲಾದ ನೂರಾರು ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ವೊಂದು ಇದೆ ಎಂಬ ಸುದ್ದಿ ಕ್ಷೇತ್ರದಾದ್ಯಂತ ಚುನಾವಣೆಯಲ್ಲಿ ಭಾರಿ ಸಂಚಲನ ಉಂಟು ಮಾಡಿದೆ. ಕೆಲ ಅಶ್ಲೀಲ ವಿಡಿಯೋ ಹಾಗೂ ಫೋಟೊಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇವು ಆ ಪೆನ್ ಡ್ರೈವ್ ಒಳಗಿನಿಂದ ಸೋರಿಕೆ ಮಾಡಲಾದ ಕ್ಲಿಪಿಂಗ್ ಗಳು ಎಂದು ಹೇಳಲಾಗುತ್ತಿದೆ.
ಚುನಾವಣೆ ಹೊಸ್ತಿಲಲ್ಲಿ , 3 ದಿನಗಳ ಹಿಂದೆಯಷ್ಟೆ ಈ ಪೆನ್ ಡ್ರೈವ್ ಚರ್ಚೆ ಮುನ್ನಲೆಗೆ ಬಂದಿದೆ. ಈ ವಿಡಿಯೋ ತುಣುಕುಗಳಲ್ಲಿ ಕೆಲವು ಸಂಘಟನೆಗಳಿಗೆ ಸೇರಿದ ಮಹಿಳೆಯರು, ಅಭ್ಯರ್ಥಿಯ ಪಕ್ಷದ ಮುಖಂಡರ ಪತ್ನಿಯರು ಇದ್ದಾರೆ. ಮನೆ ಕೆಲಸದ ಮಹಿಳೆಯರೂ ಇದ್ದಾರೆ ಎಂಬ ಚರ್ಚೆ ಬಿರುಸಿನಿಂದ ನಡೆದಿದೆ. ತನ್ನಲ್ಲಿ ಕೆಲಸ ಕೇಳಿ ಬಂದ ಯುವತಿಯರು ಹಾಗೂ ಮಹಿಳೆಯರನ್ನು ಆ ವ್ಯಕ್ತಿ ವಿಕೃತವಾಗಿ ಬಳಸಿಕೊಂಡಿದ್ದಾನೆ ಎಂಬ ಆರೋಪಗಳು ಕೇಳಿ ಬರುತ್ತಿವೆ.
ಆದರೇ ರಾಜಕಾರಣಿಯ ಬೆಂಬಲಿಗರು ಈ ಆರೋಪಗಳನ್ನು ನಿರಾಕರಿಸಿದ್ದು. ಅತ್ಯಾಧುನಿಕ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಈ ವಿಡಿಯೋಗಳನ್ನು ಎಂದು ಅಭ್ಯರ್ಥಿಯ ಬೆಂಬಲಿಗರು ಪೊಲೀಸ್ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದಾರೆ.
ಚುನಾವಣೆಯ ಪ್ರಚಾರದ ಭರಾಟೆ ಆರಂಭವಾಗಿ ಇಷ್ಟು ದಿನಗಳ ಬಳಿಕ ಇದೀಗ ಕೊನೆಯ ಹಂತದಲ್ಲಿ ಈ ರಾಸಲೀಲೆಯ ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಬಗ್ಗೆ ಚರ್ಚೆ ನಡೆಯುತ್ತಿರುವುದು ಕುತೂಹಲ ಮೂಡಿದ್ದು, ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದಾರೆ.
ಈ ಪೆನ್ಡ್ರೈನಲ್ಲಿ ಸುಮಾರು ಸಾವಿರಾರು ವಿಡಿಯೋಗಳಿವೆ ಎನ್ನಲಾಗುತ್ತಿದೆ. ಇದರಲ್ಲಿರುವ ಎನ್ನಲಾದ ಅಭ್ಯರ್ಥಿ ತನ್ನ ಬಳಿ ಸಹಾಯ ಕೇಳಿಕೊಂಡು ಬರುವ ಮಹಿಳೆಯರನ್ನು ತನ್ನ ಲೈಂಗಿಕ ತೃಷೆಗೆ ಬಳಸಿಕೊಳ್ಳುತ್ತಿದ್ದ. ಆ ಲೈಂಗಿಕ ಚಟುವಟಿಕೆಯನ್ನು ತಾನೇವಿಡಿಯೋ ಮಾಡಿಟ್ಟುಕೊಳ್ಳುತ್ತಿದ್ದ. ಈಗಾಗಲೇ ಕ್ಷೇತ್ರದ ಹಲವರು ಹಲವರು ಈ ಈ ವಿಡಿಯೋಗಳನ್ನು ನೋಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅದರ ತುಣುಕುಗಳು ಹರಿದಾಡುತ್ತಿವೆ.
ಈ ಹಿಂದೆ ಹಾಸನದ ವಕೀಲ ದೇವರಾಜೇಗೌಡ ಎಂಬುವವರು ಅಭ್ಯರ್ಥಿಯ ಹಲವು ಅಶ್ಲೀಲ ವಿಡಿ ಯೋಗಳು ತಮ್ಮ ಬಳಿ ಇವೆ ಎಂದು ಹೇಳಿಕೆ ನೀಡಿದ್ದರು. ಆದರೆ, ಇದೀಗ ಈ ವಿಡಿಯೋಗಳನ್ನು ತಾವು ಬಹಿರಂಗ ಗೊಳಿಸಿಲ್ಲ ಎಂದು ಸ್ಪಷ್ಟನೆಯನ್ನೂ ನೀಡಿದ್ದಾರೆ.
ಬಿಗ್ ನ್ಯೂಸ್
NOTAForSoujanyaCase : ಸೌಜನ್ಯ ಪ್ರಕರಣ : ಟ್ವಿಟರ್ ಟ್ರೆಂಡಿಂಗಲ್ಲಿ 3ನೇ ಸ್ಥಾನ ಪಡೆದ ನೋಟಾ ಅಭಿಯಾನ
ಮಂಗಳೂರು: 2012ರ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಇದೀಗ ಬಾರಿ ಸದ್ದು ಮಾಡುತ್ತಿದೆ.
ಸೌಜನ್ಯ ಪರ ಹೋರಾಟಗಾರರು ಎ.26ರಂದು ಜರಗುವ ಲೋಕಸಭಾ ಚುನಾವಣೆಯಲ್ಲಿ ನೋಟಾ ಮತದಾನದ ಅಭಿಯಾನ ಕೈಗೊಂಡಿದ್ದಾರೆ.
ಟ್ವಿಟರ್ (ಎಕ್ಸ್) ನಲ್ಲಿ #NOTAForSoujanyaCase ಎಂಬ ಟ್ರೆಂಡಿಂಗ್ 3ನೇ ಸ್ಥಾನ ಪಡೆದಿದೆ.
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ನೋಟಾ ಅಭಿಯಾನದ ಪರ ಪ್ರಚಾರ ಕಾರ್ಯವನ್ನು ಹೋರಾಟಗಾರರು ನಡೆಸುತ್ತಿದ್ದಾರೆ.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನೋಟಾ ಪರಿಣಾಮ ಯಾವಾ ರೀತಿ ಪಲಿತಾಂಶದ ಮೇಲೆ ಪರಿಣಾಮ ಬೀರಬಹುದೆಂಬ ಅಂಕಿಅಂಶ ಇನ್ನೂ ಕೂಡ ರಾಜಕೀಯ ಪಂಡಿತರಿಗೆ ಅಂದಾಜಿಸಲು ಸಾಧ್ಯವಾಗಿಲ್ಲ.
ಬಿಗ್ ನ್ಯೂಸ್
ಪದ್ಮರಾಜ್ ಆರ್ ಪೂಜಾರಿ ಬಿಲ್ಲವನಲ್ಲ – ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ – ಜಿಲ್ಲಾ ಕಾಂಗ್ರೆಸ್ ನಿಂದ ಪೊಲೀಸ್ ಕಮೀಷನರ್ ಗೆ ದೂರು
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಯವರ ಜಾತಿಯನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸುತ್ತಿದ್ದು ಇದರ ವಿರುದ್ದ , ಜಿಲ್ಲಾ ಕಾಂಗ್ರೆಸ್ ಮಂಗಳೂರು ಪೊಲೀಸ್ ಕಮೀಷನರ್ ಗೆ ದೂರು ನೀಡಿದೆ.
ಗಣೇಶ್ ಶೆಟ್ಟಿ ಎಂಬವರು ಯುವನಾಯಕ ಬ್ರಿಜೇಶ್ ಚೌಟ ಫೇಸ್ ಬುಕ್ ಪೇಜಿನಲ್ಲಿ ಹಾಗು ಡಾಕ್ಟರ್ಸ್ ಲೀವ್ ಸ್ಟೇಸ್ಟಸ್ ಗ್ರೂಫಿನಲ್ಲಿ ಸಂತೋಷ್ ಕುಮಾರ್ ಎಂಬಾತ ಅಪಪ್ರಚಾರ ನಡೆಸಿದ್ದಾನೆಂದು ದೂರಿನಲ್ಲಿ ಆರೋಪಿಸಲಾಗಿದೆ.
ಪದ್ಮರಾಜ್ ಆರ್ ಪೂಜಾರಿಯವರು ಬಿಲ್ಲವ ಸಮುದಾಯಕ್ಕೆ ಸೇರಿದವರಲ್ಲ. ಅವರು ಹಿಂದೂ ಯುವಕನ ಕೊಲೆ ಕೇಸಿನಲ್ಲಿ ಕೊಲೆ ಆರೋಪಿ ಪಿ ಎಫ್ ಐ ಕಾರ್ಯಕರ್ತನ ಪರ ವಕಾಲತ್ತು ವಹಿಸಿದ್ದಾರೆ ಇತ್ಯಾದಿ ಸುಳ್ಳು ಸುದ್ದಿಗಳನ್ನು ಒಳಗೊಂಡ ಪೋಸ್ಟ್ ವೊಂದನ್ನು ವಿರೋದಿಗಳು ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಹಂಚುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಆರೋಪಿಸಿದೆ.
ಈ ಹಿಂದೆ ಜನಾರ್ಧನ ಪೂಜಾರಿಯನ್ನು ಅನುಸರಿಸಿದ ಅಪಪ್ರಚಾರದ ತಂತ್ರವನ್ನೆ ಅವರ ಶಿಷ್ಯ ಪದ್ಮರಾಜ್ ವಿರುದ್ದವು ಅನುಸರಿಸುತ್ತಿದ್ದು, ಮತದಾರರು ಇದನ್ನು ಸೂಕ್ಷ್ಮವಾಗಿ ಗಮನಿಸಿ ಮುಂಬರುವ ಚುನಾವಣೆಯಲ್ಲಿ ಮತದಾನ ಮಾಡಬೇಕೆಂದು ಅದು ವಿನಂತಿಸಿದೆ.
-
ದಕ್ಷಿಣ ಕನ್ನಡ2 days ago
ವಿಟ್ಲ : ದುರಸ್ತಿಗೆ ಬಾವಿಗಿಳಿದ ಇಬ್ಬರು ಅಮ್ಲಜನಕ ಕೊರತೆಯಿಂದ ಮೃತ್ಯು
-
ಬಿಗ್ ನ್ಯೂಸ್23 hours ago
NOTAForSoujanyaCase : ಸೌಜನ್ಯ ಪ್ರಕರಣ : ಟ್ವಿಟರ್ ಟ್ರೆಂಡಿಂಗಲ್ಲಿ 3ನೇ ಸ್ಥಾನ ಪಡೆದ ನೋಟಾ ಅಭಿಯಾನ
-
ನಿಧನ ವಾರ್ತೆ1 day ago
Run over-ತಂದೆಯಿಂದಲೇ ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣ
-
ದಕ್ಷಿಣ ಕನ್ನಡ8 hours ago
Student harrased in bus ಉಪ್ಪಿನಂಗಡಿ: ಸ್ಲೀಪರ್ ಕೋಚ್ ಬಸ್ನಲ್ಲಿ ವಿದ್ಯಾರ್ಥಿನಿಗೆ ಜತೆ ಸಹ ಪ್ರಯಾಣಿಕನಿಂದ ಕಿರುಕುಳ – ಯುವತಿ ವ್ಯಗ್ರಗೊಳ್ಳುತ್ತಾಳೆ ಕಿಟಕಿಯಿಂದ ಹಾರಿ ಆರೋಪಿ ಪರಾರಿ – ಮುಂದೇನಾಯಿತು ?
-
ಸಾಮಾಜಿಕ ಮಾಧ್ಯಮ8 hours ago
Hasana sex tape : ಚುನಾವಣೆ ಹೊಸ್ತಿಲಲ್ಲಿ ಹಾಸನ ಅಭ್ಯರ್ಥಿಯ ರಾಸಲೀಲೆಯ ಪೆನ್ ಡ್ರೈವ್ ಸೌಂಡ್ ! ಅಸಲಿಯ / ನಕಲಿಯ ತೀವ್ರ ಚರ್ಚೆ
-
ಅಪರಾಧ1 day ago
Online acquaintance-ಆನ್ ಲೈನ್ ಪರಿಚಿತ ಗೆಳೆಯ ಮಹಿಳೆಯ ಜೀವಾಂತ್ಯಗೊಳಿಸಿದ
-
ದಕ್ಷಿಣ ಕನ್ನಡ1 day ago
ಬೆಲೆಯೆರಿಕೆ ಗಗನಕ್ಕೆರಿದ ಸಂದರ್ಭ ಸಿದ್ದರಾಮಯ್ಯ ಸರಕಾರ ಗ್ಯಾರಂಟಿ ಮೂಲಕ ಮಹಿಳೆಯರ ನೆರವಿಗೆ ನಿಂತಿದೆ : ಅನಿತಾ ಹೇಮನಾಥ ಶೆಟ್ಟಿ
-
Uncategorized2 days ago
ಮಠಂತಬೆಟ್ಟು ಗುಲಾಬಿ ಅನಂತ ರೈ ನಿಧನ