ಬಿಗ್ ನ್ಯೂಸ್
ಪೆರ್ಡೂರು ಮೇಳಕ್ಕೆ ಜನ್ಸಾಲೆ ಬದಲು ಧಾರೇಶ್ವರ – ಪರ ವಿರೋಧ ಚರ್ಚೆ ತಾರಕಕ್ಕೆ | ́ನನ್ನನ್ನು ನಾನು ಮಾರಿಕೊಳ್ಳಲು ತಯಾರಿಲ್ಲʼ : ಜನ್ಸಾಲೆ |ಪಟ್ಲರ ನೆನಪಿಸದ ಘಟನೆ

ಕುಂದಾಪುರ, ನ. 23: ಬಡಗುತಿಟ್ಟಿನ ಪ್ರಖ್ಯಾತ ಭಾಗವತ ಜನ್ಸಾಲೆ ರಾಘವೇಂದ್ರ ಆಚಾರ್ಯ ತಾನು ಹಲವು ವರ್ಷಗಳಿಂದ ಯಕ್ಷಗಾನ ಕೃಷಿ ಮಾಡಿದ ಪೆರ್ಡೂರು ಮೇಳದ ತಿರುಗಾಟಕ್ಕೆ ತಿಲಾಂಜಲಿ ಹಾಡಿದ್ದಾರೆ. ಪೆರ್ಡೂರು ಮೇಳದ ಪ್ರಧಾನ ಭಾಗವತರಾಗಿದ್ದ ಅವರು ಈ ಸಾಲಿನಿಂದ ಆ ಮೇಳದ ಭಾಗವಾಗಿರುವುದಿಲ್ಲ.
ಈ ವರ್ಷದ ತಿರುಗಾಟಕ್ಕೆ ತಯಾರಿ ನಡೆಸಿರುವ ಪೆರ್ಡೂರು ಮೇಳವೂ ಕೆಲವೊಂದು ಮುಮ್ಮೇಳ ಕಲಾವಿದರ ಬದಲಾವಣೆ ನಡೆಸಿತ್ತು. ಆದರೆ, ‘ತಿರುಗಾಟ ಪ್ರಾರಂಭಕ್ಕೆ ಕೆಲವೇ ದಿನ ಇದೆ ಎನ್ನುವಾಗ ಕಳೆದ 9 ವರ್ಷಗಳಿಂದ ಮೇಳದ ಪ್ರಧಾನ ಭಾಗವತರಾಗಿದ್ದ ಜನ್ಸಾಲೆ ರಾಘವೇಂದ್ರ ಆಚಾರ್ಯ ಅವರು ಮೇಳದಿಂದ ನಿರ್ಗಮಿಸಿದ್ದು ಎಲ್ಲರ ಅಚ್ಚರಿಗೆ ಕಾರಣವಾಗಿದೆ
ಜನ್ಸಾಲೆ ಸ್ಥಾನಕ್ಕೆ ಪೆರ್ಡೂರು ಅನಂತಪದ್ಮನಾಭ ಯಕ್ಷಗಾನ ಮಂಡಳಿಯೂ ಹಲವು ವರ್ಷಗಳ ಹಿಂದೆ ಇದೇ ಮೇಳದ ನೊಗ ಹೊತ್ತಿದ್ದ ಮತ್ತೊರ್ವ ಹಿರಿಯ ಹಾಗೂ ಪ್ರಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರರವರನ್ನು ತಂದಿದೆ. 9 ವರ್ಷಗಳ ತರುವಾಯ ಮತ್ತೆ ಅವರು ಈ ವರ್ಷದ ತಿರುಗಾಟದ ಮೂಲಕ ಪೆರ್ಡೂರು ಮೇಳದ ಪ್ರಧಾನ ಭಾಗವತರ ನೆಲೆಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.
9 ವರ್ಷಗಳ ಹಿಂದೆ ಧಾರೇಶ್ವರರು ಬಡಗುತಿಟ್ಟಿನ ಪ್ರಸಿದ್ದ ಮೇಳಗಳಲ್ಲಿ ಒಂದಾದ ಪೆರ್ಡೂರು ಮೇಳದ ಸಾರಥ್ಯವಹಿಸಿಕೊಂಡಿದ್ದರು. ಎರಡೂವರೆ ದಶಕಕ್ಕೂ ಅಧಿಕ ಕಾಲ ಅವರು ಈ ಮೇಳದಲ್ಲಿ ಯಕ್ಷ ಕೃಷಿ ಮಾಡಿದ್ದಾರೆ. ಶಿವಾನಿ-ಭವಾನಿ, ನಾಗವಲ್ಲಿ, ದಾಮಿನಿ-ಭಾಮಿನಿ, ಸಾವನಿ-ಪಾವನಿ, ಹೀಗೆ ಅನೇಕ ಯಶಸ್ವಿ ಸಾಮಾಜಿಕ ಹಾಗೂ ಪೌರಾಣಿಕ ಪ್ರಸಂಗಗಳು ಇವರ ದಕ್ಷ ನಿರ್ದೇಶನ ಹಾಗೂ ಪ್ರಧಾನ ಭಾಗವತಿಕೆಯಲಿ ಮೂಡಿಬಂದು ಜನಪ್ರಿಯ ಕಲಾ ಪ್ರಸಂಗಗಳು ಎನಿಸಿಕೊಂಡಿದ್ದವು. 9 ವರ್ಷಗಳ ಹಿಂದೆ ಪೆರ್ಡೂರು ಮೇಳದಿಂದ ನಿರ್ಗಮಿಸಿದ ಇವರು ಕೇವಲ ಅತಿಥಿ ಕಲಾವಿದರಾಗಿ ಹಾಗೂ ಧಾರೇಶ್ವರ ಯಕ್ಷಬಳಗದಲ್ಲಿ ಮಾತ್ರ ಭಾಗವಹಿಸುತ್ತಿದ್ದರು.

64 ಹರೆಯದ ಧಾರೇಶ್ವರರು ಯಕ್ಷಗಾನದ ಸಾಂಪ್ರದಾಯಿಕ ರಾಗಗಳೊಂದಿಗೆ ಹೊಸ ರಾಗಗಳನ್ನು ಪರಿಚಯಿಸಿದ ಸ್ವರ ಸಂಯೋಜಕ. ಪೆರ್ಡೂರು ಮೇಳವೂ ಪೌರಣಿಕ ಪ್ರಸಂಗಕ್ಕಿಂತಲೂ ಅಧಿಕ ಸಂಖ್ಯೆಯಲ್ಲಿ ಸಾಮಾಜಿಕ ಪ್ರಸಂಗಳನ್ನು ಆಡಿಸುವ ಮೇಳ. ಧಾರೇಶ್ವರರು ಈ ಎರಡು ಮಾದರಿಯ ಪ್ರಸಂಗದಲ್ಲೂ ನಿಷ್ಣಾತರು.
ನ. 30ರಿಂದ ಮೇಳ ಈ ಸಾಲಿನ ತಿರುಗಾಟ ಆರಂಭಿಸಲಿದ್ದು ಪ್ರೊ. ಪವನ್ ಕಿರಣ್ಕರೆ ಅವರ ‘ಕೃಷ್ಣಕಾದಂಬಿನಿ’ ಪ್ರಸಂಗ ಈ ವರ್ಷದ ಕಥಾನಕವಾಗಿ ಪ್ರದರ್ಶನವಾಗಲಿದೆ. ಮತ್ತೆ ಮೇಳದ ಸಾರಥ್ಯವಹಿಸುವದನ್ನುಖಚಿತಪಡಿಸರುವ ಧಾರೇಶ್ವರರು ““ಪೆರ್ಡೂರು ಬಿಟ್ಟ ಬಳಿಕ ಯಾವುದೇ ಮೇಳದಲ್ಲಿ ತಿರುಗಾಟ ಮಾಡಿರಲಿಲ್ಲ. ಈಗ ಕರುಣಾಕರ ಶೆಟ್ಟಿ ಅವರು ಮತ್ತೆ ಮೇಳಕ್ಕೆ ಸೇರುವಂತೆ ಆಹ್ವಾನಿಸಿದ್ದಾರೆ” ಎಂದಿದ್ದಾರೆ.
ಏನಿದು ಬೆಳವಣಿಗೆ ?
ಜನ್ಸಾಲೆ ಹಾಗೂ ಪೆರ್ಡೂರು ಮೇಳದ ಯಜಮಾನರ ನಡುವೆ ಕಳೆದೆರಡು ವರ್ಷಗಳಿಂದ ಶೀತಲ ಸಮರ ನಡೆಯುತ್ತಿರುವ ಬಗ್ಗೆ ಅಲ್ಲಲ್ಲಿ ವದಂತಿಗಳು ಹುಟ್ಟುತಿದ್ದವು. ಕೆಲವು ತಿಂಗಳ ಹಿಂದೆ ಇಂತಹ ಸುದ್ದಿ ಜಾಲತಾಣದಲ್ಲಿ ಪ್ರಸಾರವಾದ ಬಳಿಕ ಜನ್ಸಾಲೆಯವರೇ ಸ್ಪಷ್ಟನೆ ನೀಡಿ ಮೇಳದಲ್ಲಿ ಮುಂದುವರಿಯುವ ಬಗ್ಗೆ ತಿಳಿಸಿದ್ದರು.
ಆ ಬಳಿಕ ಮೇಳದ ನೂತನ ಪ್ರಸಂಗ ‘ಕೃಷ್ಣಕಾದಂಬಿನಿʼಯ ಕರಪತ್ರಗಳಲ್ಲಿ ಜನ್ಸಾಲೆಯವರ ಭಾವಚಿತ್ರ ಹಾಗೂ ಹೆಸರು ನಮೂದಿಸಲಾಗಿತ್ತು. ಅದರೇ ಇದೀಗ ನಡೆದಿರುವ ಅಚ್ಚರಿಯ ಬೆಳವಣಿಗೆಯಲ್ಲಿ ಈ ಪ್ರಸಂಗದ ಕರಪತ್ರದಲ್ಲಿ ಧಾರೇಶ್ವರ ಅವರ ಭಾವಚಿತ್ರ ಹಾಗೂ ಹೆಸರನ್ನು ನಮೂದಿಸಲಾಗಿದೆ.
ರಾಘವೇಂದ್ರ ಆಚಾರ್ಯ ಅವರು ಮುನಿಸಿಕೊಂಡು ಮೇಳ ಬಿಟ್ಟಿರುವುದೆ ಈ ಬೆಳವಣಿಗೆಗೆ ಕಾರಣ ಎನ್ನಲಾಗುತ್ತಿದೆ. ಮೇಳವೂ ವಿಧಿಸಿರುವ ನೂತನ ಕಟ್ಟುಪಾಡುಗಳನ್ನು ದಿಕ್ಕರಿಸಿ ಜನ್ಸಾಲೆಯವರು ಈ ನಿರ್ಧಾರಕ್ಕೆ ಬಂದಿದ್ದಾರೆ . ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು “ಹಗಲು ಹೊತ್ತಿನಲ್ಲಿ ಕೂಡ ಗಾನವೈಭವ, ತಾಳಮದ್ದಳೆಯಂತಹ ಕಾರ್ಯಕ್ರಮಗಳಿಗೆ ತೆರಳಲು ನಿರ್ಬಂಧ ವಿಧಿಸಲಾಗಿದೆ. ನನ್ನನ್ನು ನಾನು ಮಾರಿಕೊಳ್ಳಲು ತಯಾರಿಲ್ಲ. ಆದ್ದರಿಂದ ಪೆರ್ಡೂರು ಮೇಳದ ತಿರುಗಾಟಕ್ಕೆ ವಿದಾಯ ಹೇಳಿದ್ದೇನೆ ಎಂದಿದ್ದಾರೆ.

ಇನ್ನೂ ಈ ಬೆಳವಣಿಗೆಗಳ ಬಗ್ಗೆ ಪೆರ್ಡೂರು ಮೇಳದ ಯಜಮಾನರಾದ ವೈ. ಕರುಣಾಕರ ಶೆಟ್ಟಿಯವರು ಪ್ರತಿಕ್ರಿಯಿಸಿದ್ದು “ ಮೇಳದ ವ್ಯವಸ್ಥೆಗಳಿಗೆ ಜನ್ಸಾಲೆ ಅವರು ಒಪ್ಪದೇ ಇರುವುದರಿಂದ ಬದಲಾವಣೆ ಅನಿವಾರ್ಯವಾಯಿತು. ಧಾರೇಶ್ವರ ಅವರು ಮೇಳದಲ್ಲಿ ಮುಂದುವರಿಯಲಿದ್ದಾರೆ. ಪ್ರದರ್ಶನ ಪೂರ್ವ ತಯಾರಿಗಳು ಅವರ ನಿರ್ದೇಶನದಲ್ಲಿ ಆರಂಭವಾಗಿವೆ ಎಂದಿದ್ದಾರೆ
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವಮೇಳದ ಹಿರಿಯ ಕಲಾವಿದರಾದ ವಿದ್ಯಾಧರ ರಾವ್ ಜಲವಳ್ಳಿ ಹಾಗೂ ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪರವರು “ ತಿರುಗಾಟದ ಅವಧಿಯಲ್ಲಿ ಬೇರೆ ಖಾಸಗಿ ಪ್ರದರ್ಶನಗಳಿಗೆ ಹೋಗುವುದಿಲ್ಲ ಎನ್ನುವ ತೀರ್ಮಾನಕ್ಕೆ ಕಲಾವಿದರು ಹಾಗೂ ಯಜಮಾನರ ನಡುವೆ ನಡೆದ ಸಭೆಯಲ್ಲಿ ನಾವೆಲ್ಲ ಬಂದಿದ್ದೇವು ಎಂದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆ
ಜನ್ಸಾಲೆಯವರು ಯಕ್ಷಗಾನದ ಸ್ಟಾರ್ ಭಾಗವತರಾಗಿರುವುದರಿಂದ ಪೆರ್ಡೂರು ಮೇಳದ ಈ ಬೆಳವಣಿಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ, ಒಂದಷ್ಟು ಮಂದಿ ಜನ್ಸಾಲೆ ಪರ ಬ್ಯಾಟಿಂಗ್ ಮಾಡಿದರೆ ಉಳಿದವರು ಮೇಳದ ಯಜಮಾನರ ಪರ ವಾದ ಮಂಡಿಸುತ್ತಿದ್ದಾರೆ.
ಅಸಂಖ್ಯಾತ ಅಭಿಮಾನಿಗಳನ್ನು ಅದರಲ್ಲೂ ವಿಶೇಷವಾಗಿ ಯುವ ಯಕ್ಷಗಾನ ಅಭಿಮಾನಿಗಳ ನೆಚ್ಚಿನ ಭಾಗವತರಾಗಿರುವ ಜನ್ಸಾಲೆ ಮೇಳದ ಯಶಸ್ಸಿಗೆ ಕಾರಣರಾಗಿದ್ದರು. ಇವರ ನಿರ್ಗಮನದಿಂದ ಮೇಳದ ಅಕರ್ಷಣೆಯಲ್ಲಿ ಕುಂಠಿತವಾಗಲಿದೆ ಎನ್ನುವ ವಾದ ಕೆಲವರದು. ಕಟೀಲು ಮೇಳದಿಂದ ತೆಂಕುತಿಟ್ಟಿನ ಪ್ರಸಿದ್ದ ಬಾಗವತರಾದ ಸತೀಶ ಶೆಟ್ಟಿ ಪಟ್ಲ ರವರ ನಿರ್ಗಮನವೂ ಇದೇ ರೀತಿಯಾಗಿತ್ತು ನೆನಪಿಸಿಕೊಂಡಿರುವ ಕೆಲವರು ಮೇಳದ ಕಲಾವಿದರೂ ಮೇಳಕ್ಕಿಂತ ಹೆಚ್ಚಿನ ಗೌರವವನ್ನು ಪಡೆಯುವುದು ಮೇಳ ನಡೆಸುವವರಿಗೆ ರುಚಿಸುವುದಿಲ್ಲ ಎಂದು ಆರೋಪಿಸಿದ್ದಾರೆ.

ಪ್ರಸ್ತುತ ಸನ್ನಿವೇಶದಲ್ಲಿ ಮೇಳ ನಡೆಸುವುದು ಸುಲಭದ ಕೆಲಸವಲ್ಲ. ಅದನ್ನು ಕಲೆಯ ಮೇಲಿನ ಪ್ರೀತಿಯಿಂದ ನಡೆಸಲಾಗುತ್ತಿದೆಯೆ ಹೊರತು ಅರ್ಥಿಕ ಲಾಭದ ಉದ್ದೇಶದಿಂದ ಅಲ್ಲ . ಹಾಗಾಗಿ ಕಲಾವಿದರೂ ಮೇಳದ ಯಜಮಾನರು ರೂಪಿಸಿವ ನಿಯಮಗಳಿಗೆ ಬದ್ದರಾಗಿರಬೇಕು . ಯಾವೂದೋ ಒಬ್ಬ ಕಲಾವಿದನಿಗಾಗಿ ಮೇಳದ ನಿಯಮಗಳನ್ನು ಬದಲಿಸುವುದು ಸರಿಯಲ್ಲ ಎನ್ನುವ ವಾದವನ್ನು ಕೆಲವರು ಮಾಡುತ್ತಿದ್ದಾರೆ .
ಜನ್ಸಾಲೆ ಮುಂದೇನು ?
9 ವರ್ಷದಿಂದ ಪೆರ್ಡೂರು ಮೇಳದಲ್ಲಿ ಮಾಡಿರುವ ಕೆಲಸದಲ್ಲಿ ತೃಪ್ತಿ ಇದೆ. ಬೇರೆ ಮೇಳಗಳಿಂದ ಕರೆ ಬಂದಿದ್ದರೂ, ಈಗಾಗಲೇ ಕಲಾವಿದರ ಆಯ್ಕೆ ನಡೆದಿರುವುದರಿಂದ, ನನ್ನಿಂದಾಗಿ ಬೇರೆಯವರಿಗೆ ತೊಂದರೆ ಆಗಬಾರದು ಎನ್ನುವುದಕ್ಕಾಗಿ ಈ ವರ್ಷ ತಿರುಗಾಟ ಮಾಡುವುದಿಲ್ಲ. ಆದರೆ ಯಾವುದೇ ಪ್ರದರ್ಶನಕ್ಕೆ ಪ್ರೀತಿಯಿಂದ ಕರೆ ಬಂದರೂ ಅತಿಥಿಯಾಗಿ ಭಾಗವತಿಕೆಗೆ ಹೋಗುತ್ತೇನೆ’ ಎಂದು ಜನ್ಸಾಲೆ ರಾಘವೇಂದ್ರ ಆಚಾರ್ಯ ಪ್ರತಿಕ್ರಿಯಿಸಿದರು.
ಸುಳ್ಯ
Kukke Shri Subrahmanya Temple ದಕ್ಷಿಣ ಭಾರತದ ಪ್ರಸಿದ್ದ ನಾಗಕ್ಷೇತ್ರದಲ್ಲಿ ನಾಳೆ (ಡಿ 9) ಮೂಲ ಮೃತಿಕಾ ಪ್ರಸಾದ ವಿತರಣೆ – ಇಲ್ಲಿದೆ ವರ್ಷಕ್ಕೊಮ್ಮೆ ಮಾತ್ರ ಹುತ್ತದಿಂದ ತೆಗೆಯುವ ಈ ಪ್ರಸಾದದ ಮಹತ್ವ

Kukke Shri Subrahmanya Temple ಡಿಸೆಂಬರ್ 06; ದಕ್ಷಿಣ ಭಾರತದ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ವಾರಾಂತ್ಯದಲ್ಲಿ ದರ್ಶನ ಮತ್ತು ವಿವಿಧ ಸೇವೆಗಳು ಅರ್ಧ ದಿನದ ಕಾಲ ಲಭ್ಯವಿರುವುದಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಹೇಳಿದೆ.
ದೇವಳದಲ್ಲಿ 2023-24ನೇ ಸಾಲಿನ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಪೂರಕವಾಗಿ ಡಿ.9ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಪವಿತ್ರ ಕಾರ್ಯ ಇರಲಿದೆ. ಈ ಹಿನ್ನಲೆಯಲ್ಲಿ ಆ ದಿನ ಭಕ್ತಾದಿಗಳಿಗೆ ಬೆಳಗ್ಗಿನಿಂದ ಮಧ್ಯಾಹ್ನ 2 ಗಂಟೆಯ ತನಕ ದೇವರ ದರುಶನ ಹಾಗೂ ಸೇವಾದಿಗಳನ್ನು ನೆರವೇರಿಸಲು ಅವಕಾಶ ಇರುವುದಿಲ್ಲ. 2 ಗಂಟೆಯ ನಂತರ ದೇವರ ದರ್ಶನಕ್ಕೆ ಹಾಗೂ ಆಯ್ದ ಸೇವೆಗಳನ್ನು ನೆರವೇರಿಸಲು ಅವಕಾಶವಿದೆ
ಕುಕ್ಕೆ ಸುಬ್ರಮಣ್ಯದಲ್ಲಿ “ಮೂಲಮೃತಿಕಾ” ಪ್ರಸಾದಕ್ಕೆ ಹೆಚ್ಚಿನ ಮಹತ್ವವಿದೆ. ಮೂಲಸ್ಥಾನವಾದ ಕುಕ್ಕೆ ಸುಬ್ರಮಣ್ಯ ದೇವಳದ ಗರ್ಭಗುಡಿಯಿಂದ ತೆಗೆಯುವ ಕ್ಷೇತ್ರದ ಅತ್ಯಂತ ಪವಿತ್ರ ಪ್ರಸಾದ. ಯಾವುದೇ ದೇವಾಲಯದಲ್ಲಿ ಸಹ ಈ ಮಾದರಿ ಪ್ರಸಾದ ಸಿಗುವುದಿಲ್ಲ. ವರ್ಷಕ್ಕೆ ಒಂದು ಬಾರಿ ಮಾತ್ರ ಈ ಪ್ರಸಾದ ತೆಗೆಯಲಾಗುತ್ತದೆ.
ಕ್ಷೇತ್ರದ ಮೂಲಸ್ಥಾನವಾದ ಗರ್ಭಗುಡಿಯಿಂದ ಈ ಮೂಲಮೃತಿಕಾ ಪ್ರಸಾದವನ್ನು ತೆಗೆದು ಭಕ್ತರಿಗೆ ನೀಡಲಾಗುತ್ತದೆ. ಈ ಪ್ರಸಾದವು ರೋಗ ನಿರೋಧಕ ಶಕ್ತಿ ಹೊಂದಿದೆ ಎಂಬುದು ಭಕ್ತರ ನಂಬಿಕೆಯಾಗಿದೆ. ಈ ಮೃತ್ತಿಕೆ ಪ್ರಸಾದ ಸಂತಾನಕಾರಕ, ಚರ್ಮ ರೋಗಗಳ ಪರಿಹಾರಕ್ಕೆ ದಿವ್ಯ ಔಷಧ ಎಂಬುದು ಭಕ್ತರ ನಂಬಿಕೆ. ಮೃತ್ತಿಕಾ ಪ್ರಸಾದವನ್ನು ಶುಭ ಕಾರ್ಯಗಳ ಒಳಿತಿಗೂ, ವ್ಯಾಧಿಗಳ ನಿವಾರಣೆಗೂ ಭಕ್ತರು ಬಳಸುತ್ತಾರೆ.
ಸಾವಿರಾರು ಭಕ್ತರು ಮೂಲಮೃತಿಕಾ ಪ್ರಸಾದವನ್ನು ತೆಗೆದುಕೊಂಡು ಹೋಗಲು ಕುಕ್ಕೆ ಸುಬ್ರಮಣ್ಯ ಕ್ಷೇತ್ರಕ್ಕೆ ಆಗಮಿಸುತ್ತಾರೆ. ಶುಭ ಕಾರ್ಯಗಳ ಸಂದರ್ಭದಲ್ಲಿ, ರೋಗಗಳ ನಿವಾರಣೆಗೆ ಸಹ ಈ ಪ್ರಸಾದವನ್ನು ಬಳಕೆ ಮಾಡುತ್ತಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಕ್ಷೇತ್ರ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಕರ್ನಾಟಕ ರಾಜ್ಯದ ಸುಬ್ರಹ್ಮಣ್ಯಂ ಗ್ರಾಮದಲ್ಲಿ ಬರುತ್ತದೆ. ಪ್ರಕೃತಿಯ ಸೌಂದರ್ಯದಲ್ಲಿ ನೆಲೆಸಿರುವ ಈ ಭವ್ಯವಾದ ದೇವಾಲಯವು ಗ್ರಾಮದ ಹೃದಯಭಾಗದಲ್ಲಿದೆ. ಪ್ರಕೃತಿ ನದಿಗಳು, ಕಾಡುಗಳು ಮತ್ತು ಪರ್ವತಗಳಿಂದ ಸುತ್ತುವರೆದಿರುವ ಈ ದೇವಾಲಯವು ತನ್ನ ಅನನ್ಯ ಸೌಂದರ್ಯವನ್ನು ಬಹಿರಂಗಪಡಿಸುತ್ತದೆ .ಪ್ರತಿನಿತ್ಯ ನೂರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ವಾರಾಂತ್ಯ, ಸರ್ಕಾರಿ ರಜೆ ದಿನಗಳಲ್ಲಿ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಾರೆ.
ಬಿಗ್ ನ್ಯೂಸ್
Bride refuses Marriage in hall ತಾಳಿ ಕಟ್ಟುವ ವೇಳೆ ವರನ ಕೈಗೆ ಅಡ್ಡ ಹಿಡಿದು ಸಿನಿಮೀಯ ಶೈಲಿಯಲ್ಲಿ ಮದುವೆ ನಿರಾಕರಿಸಿದ ವಧು

Bride refuses Marriage in hall ಚಿತ್ರದುರ್ಗ: ನಿಗದಿಯಾಗಿದ ಮದುವೆಗಳು ಮುರಿದು ಬೀಳುವುದು ಸಹಜ . ಆದರೇ ಮದುವೆ ಮಟಂಪದಲ್ಲಿ ಇನ್ನೇನು ತಾಳಿ ಕಟ್ಟಬೇಕು ಅನ್ನುವಾಗ ಮದುವೆಗಳು ಮುರಿದು ಬೀಳುವುದು ಸಾಮಾನ್ಯವಾಗಿ ಸಿನಿಮಾಗಳಲ್ಲಿ ಮಾತ್ರ. ಆದರೇ ಇಂತಹದೊಮದು ಸಿನಿಮೀಯ ಘಟನೆ ಚಿತ್ರದುರ್ಗಾದಿಂದ ವರದಿಯಾಗಿದೆ. ಈ ಘಟನೆ ನೋಡಿ ಮದುವೆ ಬಂದವರು ಹೌಹಾರಿದ್ದಾರೆ.
ಇನ್ನೇನು ವರ ವಧುವಿನ ಕುತ್ತಿಗೆಗೆ ತಾಳಿ ಕಟ್ಟಬೇಕು ಎನ್ನುವಾಗ ವಧು ತೆಗೆದುಕೊಂಡ ಈ ನಿರ್ಧಾರದಿಂದ ಮದುವೆ ಮನೆಯಲ್ಲಿ ಸೇರಿದ್ದ ಜನರಿಗೆ ಎಲ್ಲರಿಗೂ ಒಂದು ರೀತಿಯ ಶಾಕ್ ನೀಡಿದಂತೆ ಆಗಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ (Hosadurga Taluku) ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ತಾಳಿ ಕಟ್ಟಿಸಿಕೊಳ್ಳಲು ವಧು ವಿವಾಹವಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಮದುವೆ ಕ್ಯಾನ್ಸಲ್ ಆಗಿದೆ. ವರ ತಾಳಿ ಕಟ್ಟುವಾಗ ವಧು ತಾಳಿಗೆ ಕೈ ಅಡ್ಡ ಹಿಡಿದು ತಡೆದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.
ವಧುವಿಗೆ ಮದುವೆಗೆ ಇಷ್ಟವಿರಲಿಲ್ಲ .ಮನೆಯವರ ಒತ್ತಾಯಕ್ಕೆ ಮಣಿದು ಆಕೆ ವಿವಾಹಕ್ಕೆ ಸಮ್ಮತಿ ಸೂಚಿಸಿದ್ದಾಳೆ ಅದರೆ ಮುಹೂರ್ತದ ವೇಳೆ ಮನ ಬದಲಾಯಿಸಿದ ವಧು ತಾಳಿ ಕಟ್ಟುವ ವೇಳೆ ಕಯ ಅಡ್ಡ ಹಿಡಿದು ತನ್ನ ಅಸಮ್ಮತಿ ಸೂಚಿಸಿದ್ದಾಳೆ ಎನ್ನಲಾಗಿದೆ. ಕೊನೆ ಕ್ಷಣದಲ್ಲಿ ಕೈ ಕೊಟ್ಟ ವಧುವಿನ ಬಗ್ಗೆ ವರನ ಮನೆಯವರಿಗೆ ಸಿಕ್ಕಾಪಟ್ಟೆ ಕೋಪ ಬಂದಿದೆ.
ಹುಡುಗಿ ಮದುವೆಗೊಪ್ಪದಿರುವದನ್ನು ಗಮನಿಸಿದ ಎರಡು ಕಡೆಯ ಸಂಬಂಧಿಗಳು ವಧುವಿನ ಮನವೊಲಿಸಲು ಯತ್ನಿಸಿದ್ದಾರೆ. ಆದರೇ ಗಟ್ಟಿ ಮನಸ್ಸು ಮಾಡಿದ ವಧು ಮದುವೆಯಾಗಲು ನಿರಾಕರಿಸಿದ್ದಾಳೆ. ಹೀಗಾಗಿ ಮದುವೆಗೆ ಆಗಮಿಸಿದ ಜನರು, ಸಂಬಂಧಿಗಳು ವಧುಗೆ ಹಿಡಿಶಾಪ ಹಾಕಿದ್ದಾರೆ. ವರನ ಕನಸು ನುಚ್ಚು ನೂರು ಮಾಡಿದಳು. ಮೊದಲೇ ತಿಳಿಸಿದ್ರೆ ಸಮಸ್ಯೆ ಎದುರಾಗ್ತಿರಲಿಲ್ಲ ಅಂತ ಹಿಡಿಶಾಪ ಹಾಕಿದ್ದಾರೆ.
ಮದುವೆ ನಿರಾಕರಣೆಗೆ ಈವರೆಗೆ ಕಾರಣ ತಿಳಿದುಬಂದಿಲ್ಲ. ಆದರೆ ಕುಟುಂಬಸ್ಥರ ಒತ್ತಾಯದ ಮೇರೆಗೆ ಮದುವೆಗೆ ಯುವತಿ ಸಮ್ಮತಿಸಿದ್ದು, ಆಕೆ ತಾಳಿಕಟ್ಟುವ ವೇಳೆ ಧೈರ್ಯ ಮಾಡಿ ವಿವಾಹ ನಿರಾಕರಿಸಿದ್ದಾಳೆಂಬ ಮಾತುಗಳು ಕೇಳಿಬಂದಿವೆ. ಸದ್ಯ ಪ್ರಕರಣ ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ
ರಾಜ್ಯ
ಭೂತ ಕೋಲ ಹೆಸರಿನಲ್ಲಿ ಟ್ರಾವೆಲ್ ಏಜನ್ಸಿಯಿಂದ ಟೂರ್ ಪ್ಯಾಕೇಜ್ : ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆ : ಹಲವರ ವಿರೋಧ – ಕೆಲವರ ಸಮರ್ಥನೆ | ದೈವಾರಾಧನೆ ಟೂರ್ ಪ್ಯಾಕೇಜ್ ಭಾಗವಾಗುವುದು ತಪ್ಪೇ? ಸರಿಯೇ?

ಮಂಗಳೂರು ಡಿಸೆಂಬರ್ 08: ದೈವಾರಾಧನೆ ದಕ್ಷಿಣ ಕನ್ನಡ ಉಡುಪಿ ಹಾಗೂ ಕೇರಳದ ಕಾಸರಗೋಡು ಜಿಲ್ಲೆಯ ಜನರ ಬದುಕಿನಲ್ಲಿ ಹಾಸು ಹೊಕ್ಕಿದ್ದು ಇದನ್ನು ಇಲ್ಲಿ ತಲೆ ತಲಾಂತರದಿಂದ ಶ್ರದ್ಧೆ, ಭಯ ಭಕ್ತಿಯಿಂದ ಆರಾಧಿಸಲಾಗುತ್ತದೆ. ನಂಬಿದವನ ಕೈಯನ್ನು ದೈವ ಬಿಡದು ಎನ್ನುವುದು ಇಲ್ಲಿನ ದೈವ ಭಕ್ತರು ಅನತಿ ಕಾಲದಿಂದ ನಂಬಿಕೊಂಡು ಬಂದಿರುವ ನುಡಿ. ಕೇವಲ 3 ಜಿಲ್ಲೆಯಲ್ಲಷ್ಟೆ ಸೀಮಿತವಾಗಿದ್ದ ಈ ಆಚರಣೆ, ವಿಶಿಷ್ಟ ಸಂಸ್ಕೃತಿ ಕನ್ನಡದ ಬ್ಲಾಕ್ ಬ್ಲಾಸ್ಟರ್ ಮೂವಿ ಕಾಂತಾರ ಸಿನಿಮಾದಿಂದ ನಾಡಿನ ಉದ್ದಗಲಕ್ಕೂ ಪರಿಚಯವಾಯಿತು . ಆದರೇ ಈಗ ಇದೇ ಈ ಆರಾಧನೆಗೆ ಮುಳುವಾದಂತೆ ಕಾಣುತ್ತಿದೆ.
ಕಾಂತಾರ ಸಿನಿಮಾ ವೀಕ್ಷಿಸಿದವರಿಗೆ ದೈವದ ಬಗ್ಗೆ ಕುತೂಹಲ ಅದನ್ನು ವೀಕ್ಷಿಸುವ ಹಂಬಲ ಹೆಚ್ಚಾಗಿದೆ. ಬಹುತೇಕರಿಗೆ ದೈವರಾಧನೆಯ ಮಹತ್ವ, ಅದರ ಹಿಂದೆ ಅಡಕವಾಗಿರುವ ದೈವಿಕ ಭಾವ, ದೊಡ್ಡ ಒಂದು ಜನ ಸಮೂಹ ಅದನ್ನು ತುಂಬು ಶ್ರದ್ದೆ ಮತ್ತು ಭಕ್ತಿಯಿಂದ ಆರಾಧಿಸಕೊಂಡು ಬರುತ್ತಿರುವ ಬಗ್ಗೆ ಗೊತ್ತಿಲ್ಲ. ಹೀಗಾಗಿ ಬಹುತೇಕರಿಗೆ ಇದೊಂದು ಪ್ರೇಕ್ಷಣಿಯ ವಿಚಾರ ಎನಿಸಿದೆ.
ಪ್ಯಾಕೇಜ್ ನಲ್ಲಿ ಏನಿದೆ?
ಇದನ್ನೆ ಬಂಡವಾಳ ಮಾಡಿಕೊಂಡಿರುವ ಟ್ರಾವೆಲ್ ಏಜನ್ಸಿಯೊಂದು ಭೂತ ಕೋಲ ಹೆಸರಿನಲ್ಲಿ ಟ್ರಿಪ್ ಪ್ಯಾಕೇಜ್ ಆಫರ್ ನೀಡಿದೆ. ದೈವಾರಾಧನೆ ಅಥವಾ ಭೂತ ಕೋಲ ಹೇಗೆ ನಡೆಯುತ್ತದೆ..? ದೈವ ನರ್ತಕರು ಹೇಗೆ ಸಿಂಗಾರಗೊಳ್ಳುತ್ತಾರೆ? ಎನ್ನುವ ಕುತೂಹಲ ಇರುವವರಿಗೆ ಭೂತ ಕೋಲವನ್ನು ತೋರಿಸುವುದು ಈ ಪ್ಯಾಕೇಜ್ ನ ಉದ್ದೇಶ . ‘ಭೂತ ಕೋಲ’ A night with ancient spirits ಎಂದು ಈ ಟೂರು ಪ್ಯಾಕೇಜ್ಗೆ ಏಜೆನ್ಸಿ ಹೆಸರಿಟ್ಟಿದೆ. ಕರಾವಳಿಯ ಕಲೆ, ಸಂಸ್ಕೃತಿ ವೀಕ್ಷಣೆಗೆ ಈ ಪ್ಯಾಕೇಜ್ ಎಂದು ಏಜೆನ್ಸಿ ಹೇಳಿಕೊಂಡಿದೆ. ಅದರಲ್ಲಿ ದೈವಾರಾಧನೆ ಜೊತೆ ಪ್ರವಾಸಿತಾಣಗಳನ್ನು ತೋರಿಸುವುದಾಗಿ ಪೋಸ್ಟ್ ಹಾಕಲಾಗಿದ್ದು, ಪ್ರತಿ ವ್ಯಕ್ತಿಗೆ 2,899ರೂ. ಟಿಕೆಟ್ ದರ ವಿಧಿಸಿದೆ
2,899 ರೂಪಾಯಿ ಕೊಟ್ಟರೆ ಈ ಟ್ರಿಪ್ ಪ್ಯಾಕೆಜ್ ನಲ್ಲಿ ಕಂಬಳ, ಭೂತಕೋಲ, ಟ್ರೆಕ್ಕಿಂಗ್ ಸೌಲಭ್ಯ ನೀಡುವುದಾಗಿ ಪೋಸ್ಟರ್ ಮಾಡಿದ್ದಾರೆ. ಈ ಟ್ರಾವೆಲ್ ಆಫರ್ ಪೋಸ್ಟರ್ ವೈರಲ್ ಆಗುತ್ತಿದ್ದಂತೆ ತುಳುನಾಡಿನ ನಂಬಿಕೆಯ ದೈವಾರಾಧನೆ ಹೆಸರಲ್ಲಿ ಹೊಸ ದಂಧೆ ಹುಟ್ಟಿಕೊಂಡಿದೆ ಎಂದು ತುಳುನಾಡಿನ ದೈವಾರಾಧಕರು ಸಿಡಿದು ದೇವರ ಹೆಸರಿನಲ್ಲಿ ಇಂತಹ ವ್ಯವಹಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ನಮ್ಮ ನಂಬಿಕೆಯ ಹೆಸರಿನಲ್ಲಿ ಅವರು ಬ್ಯುಸಿನೆಸ್ ಮಾಡುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ದೈವ ಕೋಲ, ದೈವಾರಾಧನೆ, ಭೂತಾರಾಧನೆ ಇದು ನಮ್ಮ ನಂಬಿಕೆ. ಧಾರ್ಮಿಕ ಆಚರಣೆ. ಇದು ಯಾವುದೇ ಸಾಂಸ್ಕೃತಿಕ ಚಟುವಟಿಕೆ ಅಲ್ಲ. ಪ್ರವಾಸಿಗರು ದಂಡು ಬಂದು ನೋಡುವ ಉತ್ಸವ ಅಲ್ಲ. ಎಂದಿಗೂ ಇದನ್ನು ಬ್ಯುಸಿನೆಸ್ ಮಾಡಲು ಅವಕಾಶ ನೀಡಲ್ಲ ಎಂದು ತುಳುನಾಡಿನ ದೈವಾರಾಧಕರು ಟ್ರಾವೆಲ್ ಏಜೆನ್ಸಿ ವಿರುದ್ಧ ಕಿಡಿಕಾರಿದ್ದಾರೆ.

ಪೋಸ್ಟರ್ ಡಿಲಿಟ್
ಇನ್ನು ದೈವ ಕೋಲದ ಹೆಸರಲ್ಲಿ ಟೂರ್ ಪ್ಯಾಕೇಜ್ ಆಫರ್ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ. ಸಂಬಂಧಿಸಿದ ಟ್ರಾವೆಲ್ ಏಜೆನ್ಸಿ ತಮ್ಮ ಸಾಮಾಜಿಕ ಜಾಲತಾಣದಿಂದ ಈ ಪೋಸ್ಟರ್ ಅನ್ನು ಡಿಲೀಟ್ ಮಾಡಲಾಗಿದೆ.
ಪ್ಯಾಕೇಜ್ ಸಮರ್ಥಕರು ಏನೂ ಹೇಳುತ್ತಾರೆ ?
ಆದರೇ ಇದೆ ವೇಳೆ ಈ ಟೂರ್ ಪ್ಯಾಕೇಜ್ ಬೆಂಬಲಕ್ಕೂ ಹಲವರು ನಿಂತಿದ್ದಾರೆ. ದೇಶದ ಪ್ರಸಿದ್ದ ದೇಗುಲವಾದ ತಿರುಪತಿ ತಿರುಮಲ ದೇವಸ್ಥಾನಕ್ಕೂ ಟೂರ್ ಪ್ಯಾಕೇಜ್ ಇದೆ . ಇದೆ ರೀತಿ ದೇಶದ ಬಹುತೇಕ ಎಲ್ಲ ದೇವಸ್ಥಾನಗಳ ಬೇಟಿಗೂ ಹೋಗುವವರಿಗೆ ವಿವಿಧ ಏಜೆನ್ಸಿಗಳು ಟೂರ್ ಪ್ಯಾಕೇಜ್ ಘೋಷಿಸಿವೆ. ಅಲ್ಲಿಗೆ ಬರುವ ಯಾತ್ರಾರ್ಥಿಗಳು ದೇವರ ದರುಶನ ಪಾಡಿ ತಮ್ಮ ಇಷ್ಟಾರ್ಥ ಈಡೇರಿಸುವಂತೆ ಪ್ರಾರ್ಥಿಸಿ ತೆರಳುತ್ತಾರೆ. ಇದೆ ವ್ಯವಸ್ಥೆ ದೈವಾರಾಧನೆ ಟೂರ್ ಪ್ಯಾಕೇಜ್ ನವರು ಕಲ್ಪಿಸಿದರೇ ಅದರಲ್ಲಿ ತಪ್ಪೇನಿದೆ ? ಎನ್ನುವುದು ಕೆಲವರ ವಾದ. ದೈವರಾಧನೆ ವೀಕ್ಷಣೆಗೆಂದು ಬರುವವರು ಭೂತ ಕೋಲವನ್ನು ನೋಡಿ ಪ್ರಾರ್ಥನೆ ಸಲ್ಲಿಸಿ ಹೋಗುವುದಿದ್ದರೇ ಅದಕ್ಕೆ ಅಡ್ಡಿ ಪಡಿಸುವುದು ಸರಿಯೇ ಎನ್ನುವುದು ಅವರ ವಾದ
ಇನ್ನು ದೈವರಾಧನೆಯ ಹೆಸರಿನಲ್ಲಿ ಅವರು ದುಡ್ಡು ಮಾಡುತ್ತಾರೆ ಎನ್ನುವ ವಾದ ವಿರೋಧ ವ್ಯಕ್ತಪಡಿಸುವ ಗುಂಪಿನದು. ಆದರೇ ಅದೇ ಯಾತ್ರಾರ್ಥಿಗಳು ತಮ್ಮದೇ ವಾಹನದಲ್ಲಿ ಅಥಾವ ಸಾರ್ವಜನಿಕ ವಾಹನದಲ್ಲಿ ಬಂದು ಭೂತಕೋಲ ವೀಕ್ಷಿಸಿದರೆ ಆಗ ಕೂಡ ಹಣ ಖರ್ಚು ಆಗುವುದಿಲ್ಲವೇ ? ಬಹಳಷ್ಟು ಜನರಿಗೆ ಭೂತ ಕೋಲ ನೋಡಲು ಹೇಗೆ ಬರಬೇಕು ಎನ್ನುವ ಸ್ಪಷ್ಟ ಮಾಹಿತಿಯಿಲ್ಲ . ಅಂತಹವರಿಗೆ ಟೂರು ಏಜೆನ್ಸಿಯವರು ಮಾರ್ಗದರ್ಶಿ ಯಾಕಾಗಬಾರದು ಎನ್ನುವ ಪ್ರಶ್ನೆಯನ್ನು ಹಲವರು ಕೇಳುತ್ತಿದ್ದಾರೆ.
ಕೊರಗಜ್ಜ ದೈವದ ಕಾರಣೀಕತೆ ನಾಡಿನುದ್ದಕ್ಕೂ ಪಸರಿಸಿದ ಬಳಿಕ ಹೊರ ಜಿಲ್ಲೆಗಳಿಂದ ಬಹಳಷ್ಟು ಭಕ್ತರು ದೈವದ ಮೂಲಸ್ಥಾನವನ್ನು ಹುಡುಕಿಕೊಂಡು ಬರುತ್ತಿದ್ದಾರೆ. ಆದರೇ ಇವರ ದಾರಿ ತಪ್ಪಿಸುವ ಕೆಲಸವನ್ನು ಬಹಳಷ್ಟು ಜನ ಮಾಡುತ್ತಿದ್ದು ಬೇರೆಲ್ಲೊ ಕೊರಗಜ್ಜನ ಆರಾಧನೆ ಮಾಡುವಲ್ಲಿಗೆ ಕರೆದುಕೊಂಡು ಹೋಗಿ ಇದೇ ಮೂಲಸ್ಥಾನ ಎಂದು ನಂಬಿಸಿ ವಂಚಿಸುತ್ತಿರುವ ಹಣ ಪೀಕಿಸುತ್ತಿರುವ ಹಲವು ಉದಾಹರಣೆಗಳು ನಮ್ಮ ಮುಂದಿದೆ. ಹೀಗೆ ಭೂತ ಕೋಲ ವೀಕ್ಷಣೆಗೆ ಬರುವವರಿಗೆ ಟೂರು ಏಜೆನ್ಸಿಯವರು ಭೂತ ಕೋಲವನ್ನು ತೋರಿಸುತ್ತೇನೆ ಈ ಮೂಲಕ ಇಲ್ಲಿನ ಸಂಸ್ಕೃತಿಯನ್ನು ಹೊರ ಜಿಲ್ಲೆಯವರಿಗೆ ಪರಿಚಯಿಸುತ್ತೇನೆ ಎಂದರೆ ಅದು ತಪ್ಪಾಗುತ್ತದೆಯೇ ಎನ್ನುವುದು ಪರ ಇರುವವರ ವಾದ
ಬಹುತೇಕ ಪ್ರಸಿದ್ದ ಯಾತ್ರ ಕ್ಷೇತ್ರಗಳಲ್ಲಿ ವಿಐಪಿ ದರ್ಶನಕ್ಕೆ ಇಂತಿಷ್ಟು ಹಣ ಪಡೆದು ಶೀಘ್ರ ದೇವರ ದರುಶನಕ್ಕೆ ಅವಕಾಶ ಕಲ್ಪಿಸುವ ಪರಿಪಾಠವಿದೆ. ಇದನ್ನಾದರೂ ಒಂದು ರೀತಿಯಲ್ಲಿ ಹಣ ಮಾಡುವ ವ್ಯವಸ್ಥೆ ಎನ್ನಬಹುದು. ಇಲ್ಲಿ ಅಂತಾಹ ಯಾವುದೇ ವ್ಯವಸ್ಥೆಯನ್ನು ಟೂರ್ ಪ್ಯಾಕೇಜ್ ನವರು ಘೋಷಿಸಿಲ್ಲ.. ಹೀಗಿರುವಾಗ ಏಜೆನ್ಸಿಯವರು ಸಂಸ್ಕೃತಿಯನ್ನು ಹಾಳು ಮಾಡುತ್ತಾರೆ ಎಂದು ದೂರುವುದರಲ್ಲಿ ಅರ್ಥವಿಲ್ಲ ಎಮಬ ವಾದವನ್ನು ಅವರು ಮುಂದಿಡುತ್ತಾರೆ.
ಇನ್ನು ಭೂತಕೋಲ ಟೂರ್ ಪ್ಯಾಕೇಜ್ ನೊಟ್ಟಿಗೆ ಬೇರೆ ಪ್ರೇಕ್ಷಣಿಯ ಸ್ಥಳಗಳ ಸಂದರ್ಶನಕ್ಕೂ ಅವಕಾಶ ಕಲ್ಪಿಸಿದ್ದಾರೆ ಇದರಿಂದ ಸಂಸ್ಕೃತಿಗೆ ಅಪಚಾರವಾಗುತ್ತಾದೆ ಎನ್ನುವವರು ಇಗಲೂ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಕಟೀಲು ದೇಗುಲಕ್ಕೆ ಬರುವವರು ಬಳಿಕ ಬೀಚ್ ನಲ್ಲಿ ಮೋಜು ಮಸ್ತಿ ಮಾಡಿ ಹೋಗುವುದಿಲ್ಲವೇ ? ಎಂದು ಅವರು ಪ್ರಶ್ನಿಸುತ್ತಾರೆ
ಇನ್ನು ಟೂರ್ ಪ್ಯಾಕೇಜ್ ಮಾರ್ಕೇಟಿಂಗ್ ಗೆ ಏಜೆನ್ಸಿಯವರು ಬಳಸಿದ ಪೋಸ್ಟರ್ ಸಂಸ್ಕೃತಿಯನ್ನು ಅಣಕ ಮಾಡುವಂತಿದೆ. ಹೀಗಾಗಿ ಆತನ ಉದ್ದೇಶದ ಬಗ್ಗೆ ನಮಗೆ ಸಂಶಯವಿದೆ ಎಂಬ ವಾದವನ್ನು ಹಲವರು ಮುಂದಿಡುತ್ತಿದ್ದಾರೆ. ಆದರೇ ಇದೆ ಒಂದು ಕಾರಣಕ್ಕೆ ಇಡಿ ಟೂರ್ ಪ್ಯಾಕೇಜನ್ನು ದೂರುವುದು ಎಷ್ಟು ಸರಿ ? ಬಹುತೇಕ ದೇವಸ್ಥಾನ ಸಂದರ್ಶನದ ಟೂರ್ ಪ್ಯಾಕೇಜ್ ಗಳ ಪೋಸ್ಟರ್ ಗಳಲ್ಲೂ ಈ ಸಮಸ್ಯೆಯಿದೆ ಎನ್ನುವುದು ಪರ ಇರುವವರ ವಾದ
ದೈವಾರಧಾನೆಗೆ ಎಲ್ಲೆಯ ಮಿತಿ ಇರಬಹುದು ಆದರೇ ಅದರ ಭಕ್ತರಿಗೆ ಎಲ್ಲೆಯಿಲ್ಲ. ಹೀಗಾಗಿ ಯಾವುದೇ ಭಾಗದವರು ಬಂದು ಇಲ್ಲಿಯ ಸಂಸ್ಕೃತಿ, ಆರಾಧಾನ ಪದ್ದತಿಗೆ ಚ್ಯುತಿಯಾಗದಂತೆ ನಡೆದುಕೊಂಡರೆ ಅವರಿಗೆ ಅಡ್ಡಿಪಡಿಸುವುದು ಸರಿಯಾದ ಕ್ರಮವಲ್ಲ. ಟೂರ್ ಪ್ಯಾಕೇಜ್ ಆರಂಭಕ್ಕೂ ಮೊದಲೇ ಮೊಸರಲ್ಲಿ ಕಲ್ಲು ಹುಡುಕುವುದು ಸರಿಯಲ್ಲ. ಪ್ಯಾಕೇಜ್ ಆರಂಭಗೊಂಡ ಬಳಿಕ ಒಂದೊಮ್ಮೆ ಅದರಲ್ಲಿ ದೋಷ ಕಂಡು ಬಂದರೇ ಆಗ ಅದನ್ನು ವಿರೋಧಿಸುವುದು ಸರಿ ಎನ್ನುತ್ತದೆ ಸಮರ್ಥಕರ ವರ್ಗ
-
ದಕ್ಷಿಣ ಕನ್ನಡ2 days ago
ಪುತ್ತೂರು : ಕುಡಿದು ಟೈಟಾಗಿದ್ದ ಚಾಲಕ ವಿವೇಕಾನಂದ ವಿದ್ಯಾ ಸಂಸ್ಥೆಯ ಬಸ್ಸನ್ನು ಯದ್ವಾತದ್ವಾ ಚಲಾಯಿಸಿ ಸರಣಿ ಅಪಘಾತ – ಮಾಜಿ ಶಾಸಕಿಯ ಪುತ್ರನ ಕಾರು ಸೇರಿ 3 ವಾಹನಕ್ಕೆ ಢಿಕ್ಕಿ – ಪಾನಮತ್ತ ಚಲಾಯಿಸುತ್ತಿದ್ದ ಬಸ್ಸಿನಲ್ಲಿದ್ದರು ವಿದ್ಯಾರ್ಥಿಗಳು..̆
-
ದಕ್ಷಿಣ ಕನ್ನಡ2 days ago
ವಿಟ್ಲ : ಅಡಿಕೆ ಮರ ಮುರಿದು ಬಿದ್ದು ಮಹಿಳೆ ಸಾವು
-
ಸುಳ್ಯ1 day ago
College student rape case ಪುತ್ತೂರು : ಕಾಲೇಜ್ ವಿದ್ಯಾರ್ಥಿನಿಯ ಅಪಹರಿಸಿ ಅತ್ಯಾಚಾರ ಪ್ರಕರಣ – ಬಂಧಿತ ಆರೊಪಿಗೆ 2 ತಿಂಗಳ ಬಳಿಕ ಜಾಮೀನು
-
ರಾಜಕೀಯ2 days ago
CM Siddaramaiah: ಐಸಿಸ್ ಉಗ್ರ ಸಂಘಟನೆಯ ಬೆಂಬಲಿಗನ ಜತೆ ಹುಬ್ಬಳಿಯಲ್ಲಿ ವೇದಿಕೆ ಹಂಚಿಕೊಂಡ ಸಿ. ಎಂ.ಸಿದ್ದರಾಮಯ್ಯ : ಚಿತ್ರ ಸಹಿತ ಯತ್ನಾಳ್ ಗಂಭೀರ ಆರೋಪ – ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
-
ಉದ್ಯೋಗ1 day ago
Job Alert: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ – ಸದ್ಯದಲ್ಲೆ ಸಾರಿಗೆ ಇಲಾಖೆಗೆ 9 ಸಾವಿರ ಸಿಬ್ಬಂದಿಗಳ ನೇಮಕ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
-
Uncategorized2 days ago
loan write off ದೇಶದ ಎಲ್ಲಾ ವಾಣಿಜ್ಯ ಬ್ಯಾಂಕುಗಳು ಕಳೆದ 5 ವರ್ಷಗಳಲ್ಲಿ 10.57 ಲಕ್ಷ ಕೋಟಿ ರೂ. ರೈಟ್-ಆಫ್….
-
ಪುತ್ತೂರು1 day ago
Puthila Parivara | ಪುತ್ತೂರು ನಗರಸಭೆ 2 ವಾರ್ಡ್ ಮರುಮತದಾನ – ಬಿಜೆಪಿ ಕಾಂಗ್ರೇಸ್ ನಡುವೆ ಕಾರ್ಯಕರ್ತರ ಒತ್ತಾಯದಂತೆ ಪುತ್ತಿಲ ಪರಿವಾರ ಮತ್ತೊಂದು ಚುನಾವಣೆ ಎದುರಿಸುವುದು ಬಹುತೇಕ ಫಿಕ್ಸ್ : ವಿಧಾನಸಭಾ ಚುನಾವಣೆಯಲ್ಲಿ ಈ ವಾರ್ಡ್ ಗಳಲ್ಲಿ ಯಾರಿಗೆ ಎಷ್ಟು ಮತದಾನವಾಗಿತ್ತು ಗೊತ್ತೇ.?
-
ಜೀವನಶೈಲಿ1 day ago
2024 Maruti swift Car: ಮಾರುತಿ ಸುಜುಕಿ ಕಂಪನಿಯಿಂದ ಸಿಹಿಸುದ್ದಿ: ಹೊಸ ಎಂಜಿನ್ ಮಹಿಮೆ – 40 ಕಿ. ಮೀ ಮೈಲೇಜ್ ಕೊಡುವ ಹೊಸ ಸ್ವಿಫ್ಟ್ ಬಿಡುಗಡೆ ಕ್ಷಣಗಣನೆ – ಬೆಲೆ ಎಷ್ಟಿದೆ ಗೊತ್ತೆ?