ಬೆಳ್ತಂಗಡಿ, ನ 27 : ಮಟ್ಕಾ ಅಡ್ಡೆಗೆ ದಾಳಿ ನಡೆಸಿ ಓರ್ವನನ್ನು ಬಂಧಿಸಿದ ಘಟನೆ ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ಎಂಬಲ್ಲಿ ನಡೆದಿದೆ. ದಾಳಿ ವೇಳೆ ಅಂಗಡಿ ಮಾಲಕ ವಿಶ್ವನಾಥ್ ಮತ್ತು ಏಜೆಂಟ್ ಶ್ರೀಧರ್ ಎಂಬವರನ್ನು ಬಂಧಿಸಿದ್ದು, ಯೋಗೀಶ್ ಎಂಬಾತ ಪರಾರಿಯಾಗಿದ್ದಾನೆ.
ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ಜಂಕ್ಷನ್ ನಲ್ಲಿರುವ ವಿಶ್ವನಾಥ್ ಮಾಲಕತ್ವದ ಅಂಗಡಿಯೊಳಗೆ ಹಲವು ಸಮಯಗಳಿಂದ ಅಕ್ರಮವಾಗಿ ಮಟ್ಕಾ ಅಡ್ಡೆ ನಡೆಯುತ್ತಿತ್ತು.
ಈ ಬಗ್ಗೆ ವ್ಯಾಪಾಕ ದೂರು ಬಂದ ಹಿನ್ನಲೆಯಲ್ಲಿ ಬಂಟ್ವಾಳ ಎಎಸ್ಪಿ ಹಿಮಾಂಶು ರಾಜಪೂತ್ ಮತ್ತು ತಂಡ ಇಂದು ಸಂಜೆ ವೇಳೆ ದಾಳಿ ಮಾಡಿದ್ದಾರೆ.
ದಾಳಿಯಲ್ಲಿ 4,500/- ಹಣ, ಮೂರು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ಪ್ರಕರಣವನ್ನು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಪರಾರಿಯಾದ ಯೋಗೀಶ್ ನ ಪತ್ತೆಗಾಗಿ ಬಲೆ ಬೀಸಲಾಗಿದೆ.
