Connect with us

ಬಿಗ್ ನ್ಯೂಸ್

ಉಪ್ಪಿನಂಗಡಿ : ಓವರ್ ಟೆಕ್ ಮಾಡುವ ಭರದಲ್ಲಿ ಅಟೋ ರಿಕ್ಷಾಕ್ಕೆ ಗುದ್ದಿದ ಲಾರಿ | ವಿದ್ಯಾರ್ಥಿ ಮೃತ್ಯು – ಮೂವರಿಗೆ ಗಂಭೀರ ಗಾಯ

Ad Widget

Ad Widget

ಉಪ್ಪಿನಂಗಡಿ: ನ 29 : ಲಾರಿ ಹಾಗೂ ಅಟೋ ರಿಕ್ಷಾದ ಮಧ್ಯೆ ನಡೆದ ಅಪಘಾತದಲ್ಲಿ ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯೋರ್ವ  ಮೃತಪಟ್ಟು,  ಅಟೋ ರಿಕ್ಷಾ ಚಾಲಕ ಸಹಿತ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಬಳಿಯ ಮಠ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.

Ad Widget

Ad Widget

Ad Widget

Ad Widget

ಹಿರ್ತಡ್ಕ ನಿವಾಸಿ ದಿ. ಅಶ್ರಫ್ ಎಂಬವರ ಪುತ್ರ, ಹಿರ್ತಡ್ಕ ಸರಕಾರಿ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಅಲ್ತಾಫ್ (12) ಮೃತ ಬಾಲಕ.  ರಿಕ್ಷಾದಲ್ಲಿದ್ದ ಈತನ ತಾಯಿ ಖತೀಜಮ್ಮ,  ಅಣ್ಣ ಆಶಿಕ್ ಮತ್ತು ಅಟೋ ರಿಕ್ಷಾ ಚಾಲಕ ಹಿರ್ತಡ್ಕ ನಿವಾಸಿ ಸಿದ್ದೀಕ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು,  ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Ad Widget

Ad Widget

ಮೃತ ಅಲ್ತಾಫ್‍ನ ತಾಯಿ ಮಂಗಳೂರಿನ ಬೆಂಗರೆ ನಿವಾಸಿಯಾಗಿದ್ದು,  ತನ್ನ ಮಕ್ಕಳೊಂದಿಗೆ ತವರು ಮನೆಗೆ ಹೋಗಿದ್ದವರು ಇಂದು ಬಸ್ಸಿನಲ್ಲಿ ಉಪ್ಪಿನಂಗಡಿಗೆ ಬಂದು, ಬಳಿಕ ಅಟೋ ರಿಕ್ಷಾದಲ್ಲಿ ಹಿರ್ತಡ್ಕಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದೆ.  

Ad Widget

ಹಾಸನ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಲಾರಿ ಮಠ ಮಸೀದಿಯ ಬಳಿಯ ತಿರುವಿನಲ್ಲಿ ವಾಹನವೊಂದನ್ನು ಹಿಂದಿಕ್ಕುವ ಭರದಲ್ಲಿ ಅತೀ ವೇಗದಿಂದ ಬಂದು ಅಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ. ಘಟನೆಯಿಂದ ಅಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.

Ad Widget

Ad Widget

 ಮಾಹಿತಿ ತಿಳಿಯುತ್ತಲೇ,  ಘಟನಾ ಸ್ಥಳಕ್ಕೆ ಧಾವಿಸಿದ  ಪುತ್ತೂರು ಡಿವೈಎಸ್ಪಿ ಗಾನಾ ಪಿ. ಕುಮಾರ್ ,  ಸಂಚಾರಿ ಸಬ್ ಇನ್ಸ್ ಪೆಕ್ಟರ್ ರಾಮ ನಾಯ್ಕ್ ಮತ್ತು ಸಿಬ್ಬಂದಿ  ಪರಿಶೀಲನೆ ನಡೆಸಿ  ಪ್ರಕರಣ ದಾಖಲಿಸಿದ್ದಾರೆ.

Continue Reading
Click to comment

Leave a Reply

ರಾಜಕೀಯ

Harish Poonja Moved Privilege motion ತನ್ನ ಮೇಲೆ ಎಫ್‌ ಐ ಆರ್‌ ದಾಖಲಿಸಿದ ಅರಣ್ಯ ಅಧಿಕಾರಿಗಳ ವಿರುದ್ದ ಸದನದಲ್ಲಿ ಹಕ್ಕು ಚ್ಯುತಿ ಮಂಡಿಸಿದ ಹರೀಶ್‌ ಪೂಂಜಾ – ಏನಿದು ಪ್ರಕರಣ ? ಮುಂದೇನಾಯಿತು?

Ad Widget

Ad Widget

ಬೆಳಗಾವಿ: ತನ್ನ  ಮೇಲೆ ಎಫ್‌ಐಆರ್‌ ಹಾಕಿದ ಅರಣ್ಯಾಧಿಕಾರಿಗಳ ಮೇಲೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ (Belthangady MLA Harish Poonja) ಅವರು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ (Belagavi Winter Session) ಹಕ್ಕು ಚ್ಯುತಿ ಮಂಡಿಸಿದ್ದಾರೆ. ಇದನ್ನು ಸ್ಪೀಕರ್‌ ಯು.ಟಿ. ಖಾದರ್‌  ಅವರು ಹಕ್ಕು ಬಾಧ್ಯತಾ ಸಲಹಾ ಸಮಿತಿಗೆ ವರ್ಗಾಯಿಸಿದ್ದಾರೆ.

Ad Widget

Ad Widget

Ad Widget

Ad Widget

   2 ತಿಂಗಳ ಹಿಂದೆ  ಬೆಳ್ತಂಗಡಿಯ ಕಳೆಂಜ ಗ್ರಾಮದ ಅಮ್ಮಿನಡ್ಕದಲ್ಲಿ ರೈತರೊಬ್ಬರ  ಮನೆಯನ್ನು  ಕಿತ್ತು ಹಾಕಲು ಮುಂದಾದಾಗ  ಅರಣ್ಯ ಅಧಿಕಾರಿಗಳ ಕ್ರಮವನ್ನು  ಶಾಸಕ ಹರೀಶ್‌ ಪೂಂಜಾ   ರೈತರ ಪರ ನಿಂತಿದ್ದರು. ಈ ವೇಳೆ  ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೂಂಜಾ ಮದ್ಯೆ ಮಾತಿನ ಚಕಮಕಿ ನಡೆದಿತ್ತು.ಇದನ್ನೆ ಮುಂದಿಟ್ಟು ಅರಣ್ಯ ಅಧಿಕಾರಿಗಳು ಪುಂಜಾ ವಿರುದ್ದ   ಎಫ್‌ಐಆರ್ ದಾಖಲಿಸಿದ್ದರು.

Ad Widget

Ad Widget

Ad Widget

ಈ ಎಫೈ ಆರ್‌ ವಿರುದ್ದ  ಆಕ್ರೋಶ  ಹೊರಹಾಕಿರುವ ಹರೀಶ್‌ ಬೆಳಗಾವಿ ಅಧಿವೇಶನದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ  ತಮ್ಮ ಹಕ್ಕಿಗೆ ಚ್ಯುತಿ ತರಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೇ  ಎಫ್‌ಐಆರ್‌ ದಾಖಲು ಮಾಡಿದ ಅಧಿಕಾರಿಗಳ ವಿರುದ್ಧ ಹಕ್ಕು ಚ್ಯುತಿ ಮಂಡಿಸಿದ್ದಾರೆ.   

Ad Widget

ವಿಧಾನಸಭಾ  ಕಲಾಪದಲ್ಲಿ  ವಿರೋಧ ಪಕ್ಷದ ಸದಸ್ಯರು ಹಕ್ಕು ಚ್ಯುತಿ ಮಂಡಿಸಲು ಅವಕಾಶ ನೀಡುವಂತೆ ಕೋರಿದರು. ಇದಕ್ಕೆ ಜೆಡಿಎಸ್ ಸದಸ್ಯರು ಬೆಂಬಲ ನೀಡಿದ್ದಾರೆ . ಈ ಬಗ್ಗೆ ಸುನೀಲ್ ಕುಮಾರ್ ಮಾತನಾಡಿ ಬೆಳ್ತಂಗಡಿ ಶಾಸಕರ ಹಕ್ಕುಚ್ಯುತಿ ಮಂಡನೆ ಮಾಡಬೇಕಿದೆ. ಅರಣ್ಯ ಇಲಾಖೆಯವರು ಮನೆ ತೆರವು ಮಾಡಲು‌ ಹೋಗಿದ್ದರು. ಈ ವೇಳೆ ಶಾಸಕರಿಗೆ ಹಕ್ಕುಚ್ಯುತಿ ಆಗಿದೆ. ಸದನದಲ್ಲಿ ಮಾತನಾಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

Ad Widget

Ad Widget

ಆದರೆ, ಅವಕಾಶ ಕೊಡದಿದ್ದಕ್ಕೆ ಸದನದಲ್ಲಿ ಗದ್ದಲ ಮುಂದುವರಿದಿತ್ತು. ಈ ವೇಳೆ ವಿಪಕ್ಷ ನಾಯಕ ಆರ್. ಅಶೋಕ್ ಮಧ್ಯ ಪ್ರವೇಶ ಮಾಡಿ, ನಾನು ಬರಗಾಲ ಬಗ್ಗೆ ತಡವಾಗಿ ಚರ್ಚೆ ಮಾಡುತ್ತೇನೆ. ಈಗ ಶಾಸಕರಿಗೆ ಹಕ್ಕುಚ್ಯುತಿ ಮಂಡನೆ ಮಾಡಲು ಅವಕಾಶ ನೀಡಿ ಎಂದು ಮನವಿ ಮಾಡಿದರು

. ಆದರೆ ಈ ಮನವಿಯನ್ನು ನಿರಾಕರಿಸಿದ ಸ್ಪೀಕರ್‌ ಯು.ಟಿ. ಖಾದರ್‌, ನಾಳೆ ಬೆಳಗ್ಗೆ ಅವಕಾಶ ‌ನೀಡುತ್ತೇನೆ. ಈಗ ಬರಗಾಲ ಬಗ್ಗೆ ಚರ್ಚೆ ನಡೆಯಲಿ ಎಂದು ಮನವಿ ಮಾಡಿದರು. ಆದರೂ ಬಿಜೆಪಿ ಸದಸ್ಯರು ಪಟ್ಟು ಬಿಡದೆ ಈಗಲೇ ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು. ಶಾಸಕನ ರಕ್ಷಣೆ ನಿಮ್ಮ ಜವಾಬ್ದಾರಿಯಾಗಿದೆ. ಹಕ್ಕು ಚ್ಯುತಿ ಪಡೆದುಕೊಂಡು ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಈಗಲೇ ಹಕ್ಕುಚ್ಯುತಿ ಸಮಿತಿಗೆ ರೆಫರ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸುನೀಲ್ ಕುಮಾರ್ ರವರು ಕ್ಯಾಬಿನೆಟ್‌ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧದ ಕೇಸ್‌ ಅನ್ನು ವಾಪಸ್ ತೆಗೆದುಕೊಳ್ಳುತ್ತೀರಿ. ಹರೀಶ್ ಪೂಂಜಾ ವಿರುದ್ಧ ಕೇಸ್ ದಾಖಲು ಮಾಡಿಕೊಳ್ಳುತ್ತೀರಿ. ಇದು ಯಾವ ನ್ಯಾಯ ಎಂದು ಪ್ರಶ್ನೆ ಮಾಡಿದ್ದಾರೆ. ಬಿಜೆಪಿ ಶಾಸಕರ ಒತ್ತಡಕ್ಕೆ ಮಣಿದ ಸ್ಪೀಕರ್ ಯು.ಟಿ. ಖಾದರ್, ಹಕ್ಕುಚ್ಯುತಿ ಮಂಡನೆ ಪ್ರಸ್ತಾಪಕ್ಕೆ ಅವಕಾಶ ಮಾಡಿಕೊಟ್ಟರು. ಈ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರು ಧರಣಿ ವಾಪಸ್ ಪಡೆದುಕೊಂಡರು.

ಆದರೆ ಹಕ್ಕುಚ್ಯುತಿಗೆ ಪ್ರಸ್ತಾಪಕ್ಕೆ ಅವಕಾಶ ಕೊಟ್ಟಿದ್ದಕ್ಕೆ ಕಾಂಗ್ರೆಸ್ ಸದಸ್ಯರು ಆಕ್ಷೇಪ  ವ್ಯಕ್ತಪಡಿಸಿದರು. ಬರದ ಚರ್ಚೆ ನಡುವೆ ಹಕ್ಕುಚ್ಯುತಿ ಪ್ರಸ್ತಾಪಕ್ಕೆ ಅವಕಾಶ‌ ಏಕೆ ಎಂದು ಪ್ರಶ್ನೆ ಮಾಡಿದರು. ಶಾಸಕ ಬೇಳೂರು ಗೋಪಾಲಕೃಷ್ಣ, ಶಿವಲಿಂಗೇಗೌಡ ಆಕ್ಷೇಪ ವ್ಯಕ್ತಪಡಿಸಿದರು.

 ಈ ವೇಳೆ ಶಾಸಕರ ಹಕ್ಕಿಗೆ ಚ್ಯುತಿ ಮಾಡಲು ಬಿಜೆಪಿ ಮುಂದಾದಾಗ ಅರಣ್ಯ ಅಧಿಕಾರಿಗಳ ಪರವಾಗಿ ಈಶ್ವರ್ ಖಂಡ್ರೆ ನಿಂತುಕೊಂಡರು. ಇದರಿಂದ ಬಿಜೆಪಿ ಶಾಸಕರು ಕೆರಳಿ ಕೆಂಡವಾದರು. “ಇದು ಅಧಿಕಾರಿಗಳ ರಾಜ್ಯವೇ?  ಒಬ್ಬ ಶಾಸಕನ ಬಳಿ ಡಿಎಫ್‌ಒ ಮುಚ್ಚಳಿಕೆ ಬರಿಸಿಕೊಳ್ಳುತ್ತಾನೆ ಎಂದರೆ ಈ ವಿಧಾನಸಭೆ, ಶಾಸಕರು ಯಾಕೆ ಇರಬೇಕು? ಇದು ಅಧಿಕಾರಿಗಳ ರಾಜ್ಯವೇ?” ಎಂದು ಆರ್‌. ಅಶೋಕ್‌ ಆಕ್ರೋಶ ಹೊರಹಾಕಿದರು

ಈ ವಿಚಾರದ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ :ಮಾನವ – ಕಾಡು ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದೆ. ನಗರಕ್ಕೆ ಕಾಡು ಪ್ರಾಣಿಗಳು ಬರುತ್ತಿವೆ. ಇದಕ್ಕೆ ಯಾರು ಹೊಣೆ? ಅರಣ್ಯ ಅತಿಕ್ರಮಣವಾದರೆ ಈ ಸಮಸ್ಯೆ ಸೃಷ್ಟಿಯಾಗುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಅತಿಕ್ರಮಣ ಸಮರ್ಥನೆ ಮಾಡಿದರೆ ಅರಣ್ಯ ನಾಶವಾಗುತ್ತದೆ ಎಂದು ಹೇಳಿದರು.

ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಆರ್.‌ ಅಶೋಕ್  ಅರಣ್ಯ ರಕ್ಷಣೆ ಮಾಡುವುದರ ಪರವಾಗಿ ನಾವೂ ಇದ್ದೇವೆ. ಮಾನವ ಕಾಡು ಪ್ರಾಣಿ ಸಂಘರ್ಷ ಸಾಮಾನ್ಯವಾಗಿದೆ. ಅರಣ್ಯ ಒತ್ತುವರಿ ಜಮೀನು ರೈತರಿಗೆ ಕೊಡಬೇಕು ಎಂದು ಸಾಕಷ್ಟು ಹೋರಾಟ ನಡೆದಿದೆ. ಸಂಗಮೇಶ್ ವಿರುದ್ಧ ಹಕ್ಕುಚ್ಯುತಿ ಆಗಿದೆ ಎಂದು ಆರೋಪ ಬಂದಿತ್ತು. ನಾವು ಕೂಡಲೇ ಹಕ್ಕು ಬಾಧ್ಯತಾ ಸಮಿತಿಗೆ ನೀಡಿದ್ದೇವೆ. ಅಧಿಕಾರಿಗಳನ್ನು ಕೇಳುವವರು ಹೇಳುವವರು ಯಾರೂ ಇಲ್ಲದಂತಾಗಿದೆ. ಶಾಸಕರ ಮೇಲೆ ಎಫ್ಐಆರ್ ಹಾಕುತ್ತಾರೆ ಎಂದರೆ ಏನು ಅರ್ಥ ಬರುತ್ತದೆ? ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಹಾಗೂ ಕೇಸ್ ವಾಪಸ್ ಪಡೆಯಿರಿ ಎಂದು ಆಗ್ರಹಿಸಿದರು.

ಬಳಿಕ ಸ್ಪೀಕರ್‌ ಯು.ಟಿ. ಖಾದರ್‌, ಹಕ್ಕು ಬಾಧ್ಯತಾ ಸಲಹಾ ಸಮಿತಿಗೆ ನಿರ್ಣಯವನ್ನು ರವಾನಿಸಿದ್ದಾರೆ.

Continue Reading

ಬಿಗ್ ನ್ಯೂಸ್

ಹುತಾತ್ಮ ಯೋಧ ಕ್ಯಾ.ಪ್ರಾಂಜಲ್ ಕುಟುಂಬಕ್ಕೆ ಚೆಕ್ ವಿತರಣೆ : ಮೊತ್ತ ತಾಯಿ-ಪತ್ನಿಗೆ ಸಮಪಾಲು ಮಾಡಿದ ಸರ್ಕಾರ

Ad Widget

Ad Widget

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದಂತೆ ಹುತಾತ್ಮ ಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಚೆಕ್ ಅನ್ನು ಅವರ ಕುಟುಂಬದ ಸದಸ್ಯರಿಗೆ ತಲಾ 25 ಲಕ್ಷದಂತೆ ವಿಭಾಗ ಮಾಡಿ ನೀಡಿದರು. 25 ಲಕ್ಷ ತಾಯಿಗೆ ಹಾಗೂ 25 ಲಕ್ಷ ಪತ್ನಿ ಹೆಸರಿಗೆ ನೀಡಿದರು.

Ad Widget

Ad Widget

Ad Widget

Ad Widget

ಜಿಲ್ಲಾಧಿಕಾರಿ ದಯಾನಂದ್ ಅವರು ಚೆಕ್ ವಿತರಿಸಿದರು.ಈ ಸಂದರ್ಭದಲ್ಲಿ ಸೈನಿಕ‌ ಕಲ್ಯಾಣ ನಿರ್ದೇಶಕರಾದ ಶಶಿಧರ್ ಅವರು ಉಪಸ್ಥಿತರಿದ್ದರು. ಜಮ್ಮು ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ನಡೆದ ಎನ್ಕೌಂಟರ್ ಸಂದರ್ಭ ಮಂಗಳೂರಿನಲ್ಲಿ ವಿದ್ಯಾಭ್ಯಾಸ ಪೂರೈಸಿದ ಎಂ.ಆರ್.ಪಿ.ಎಲ್ ನಿವೃತ್ತ ಎಂಡಿ ಪುತ್ರ ವೆಂಕಟೇಶ್ ಪುತ್ರ ಕ್ಯಾ.ಪ್ರಾಂಜಲ್ ಹುತಾತ್ಮರಾಗಿದ್ದರು.

Ad Widget

Ad Widget

Ad Widget

ನಿನ್ನೆಯಷ್ಟೇ ಚೆಕ್ ವಿಷಯದಲ್ಲಿ ಟ್ರೋಲ್ ಗೆ ಒಳಗಾದ ಸಿದ್ದರಾಮಯ್ಯನವರು ಇಂದೇ ಚೆಕ್ ವಿತರಿಸುವ ವ್ಯವಸ್ಥೆ ಮಾಡಿದ್ದರು.

Ad Widget

ಪ್ರಾಣವನ್ನು ಪಣಕ್ಕೆ ಇಟ್ಟು ದೇಶ ಕಾಯುವ ಯೋಧರ ಬಗ್ಗೆ ನಮಗೆ ಅಪಾರವಾದ ಗೌರವ-ಅಭಿಮಾನ ಇದೆ, ಅಷ್ಟೇ ಗೌರವ ಮತ್ತು ಕಾಳಜಿ ಯೋಧರ ಕುಟುಂಬ ವರ್ಗದ ಬಗ್ಗೆಯೂ ಇದೆ.ಯೋಧರ ಸಾವು – ನೋವು ಮುಂದಿಟ್ಟುಕೊಂಡು ರಾಜಕಾರಣ ಮಾಡುವವರು ನಾವಲ್ಲ.

Ad Widget

Ad Widget

ಕೆಲವರು ರಾಜಕೀಯ ದುರುದ್ದೇಶದಿಂದ ಸುಳ್ಳು ಸುದ್ದಿ ಸೃಷ್ಟಿಸಿ ಅಪಪ್ರಚಾರ ಮಾಡುವದರಲ್ಲಿಯೇ ವಿಕೃತ ಆನಂದ ಪಡುತ್ತಿದ್ದಾರೆ. ಅಂತಹವರಿಗೆ ದೇವರು ಸದ್ಬುದ್ಧಿ ನೀಡಲಿ ಎಂದಷ್ಟೇ ಹಾರೈಸಬಲ್ಲೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದರು.

Continue Reading

ಸಾಮಾಜಿಕ ಮಾಧ್ಯಮ

Dasara Elephant Arjun Dies ಅರ್ಜುನ ಸಾವಿನ ಸುತ್ತ ಹಲವು ಅನುಮಾನ – ಮಾವುತರೊಂದಿಗೆ ಮಾತನಾಡಿದ ಕಾವಾಡಿಗರ ವಿಡಿಯೋ ವೈರಲ್ –  ಅದರಲ್ಲಿದೆ ಗುಂಡೇಟಿನ ವಿಚಾರ

Ad Widget

Ad Widget

 ಹಾಸನ: ನಾಡಿಗೆ ಬಂದ ಕಾಡಾನೆಗಳ  ಪಂಡಾಟವನ್ನು ಹತ್ತಿಕ್ಕಲು ನಡೆಸುವ ಕಾರ್ಯಚರಣೆಯಲ್ಲಿ ಸದಾ ಮುಂದಿರುತ್ತಿದ್ದ ಸಾಕಾನೆ ಅರ್ಜುನ ನಿನ್ನೆ ಹೋರಾಡುತ್ತಲೇ ಜೀವ ಕಳೆದುಕೊಂಡಿದ್ದಾನೆ . ಆದರೇ ಆತನ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಅರ್ಜುನ ಮೃತಪಟ್ಟ ಕಾರ್ಯಚರಣೆಯಲ್ಲಿ ಪಾಲ್ಗೊಂಡ  ಮಾವುತರೊಬ್ಬರು ನೀಡಿದ ಹೇಳಿಕೆ ಈ ಅನುಮಾನಗಳ ಸೃಷ್ಟಿಗೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ನಾಡ ಹಬ್ಬ ಮೈಸೂರು ದಸಾರ ಸಂದರ್ಭ ತನ್ನ ಭುಜದ ಮೇಲೆ ನಾಡ ದೇವಿ ಚಾಮುಂಡೇಶ್ವರಿಯ ಅಂಬಾರಿಯನ್ನು ಹೊತ್ತ ಅರ್ಜುನ ಸಾವಿಗೆ ಗುಂಡೇಟು ಕಾರಣ ಎಂಬ ಅನುಮಾನವನ್ನು ಆ ಮಾವುತ ವ್ಯಕ್ತಪಡಿಸಿರುವ ಆಡಿಯೋ ವೊಂದು ಇದೀಗ ಸಾಮಾಜಿ ಜಾಲತಾಣದಲ್ಲಿ ವೈರಲ್‌ ಆಗಿದೆ.

Ad Widget

Ad Widget

Ad Widget

ಅರಣ್ಯ ಇಲಾಖೆ ನೀಡಿರುವ ಅಧಿಕೃತ ಹೇಳಿಕೆ ಪ್ರಕಾರ, ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಅರ್ಜುನನಿಗೆ ಒಂಟಿ ಸಲಗವೊಂದು ಕಿಬ್ಬೊಟ್ಟೆಗೆ ತಿವಿದಿದೆ. ಈ ಗಾಯದಿಂದಾಗಿ ಅರ್ಜುನ ಅಸುನೀಗಿದ್ದಾನೆ. ಆದರೇ ವೈರಲ್‌ ಆಡಿಯೋದ ಪ್ರಕಾರ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ ಮಾಡಿದಾಗ ತಪ್ಪಿಸಿಕೊಳ್ಳಲು ಅರಣ್ಯ ಇಲಾಖೆ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಗುಂಡು ಹಾರಿಸಿದಾಗ ಅದು ಅರ್ಜುನನ ಕಾಲಿಗೆ ತಗುಲಿದೆ ಕಾಲಿಗೆ ಗುಂಡು ಬಿದ್ದ ನಂತರ ಅರ್ಜುನನಿಗೆ ನಡೆದಾಡಲು ಆಗಲಿಲ್ಲ. ಇದೇ ವೇಳೆ ಕಾಡಾನೆ ದಾಳಿ ಮಾಡಿದ್ದರಿಂದ ಸಾವಾಗಿದೆ. ಸ್ಥಳೀಯರೊಬ್ಬರು ಮಾವುತರೊಂದಿಗೆ ಮಾತನಾಡಿದ ಕಾವಾಡಿಗರ ವಿಡಿಯೋ ವೈರಲ್ ಆಗಿದೆ

Ad Widget

 ವೈರಲ್‌ ವಿಡಿಯೋದಲ್ಲಿ ಏನಿದೆ

Ad Widget

Ad Widget

ಅರ್ಜುನ ಆನೆ ಮೊದಲ‌ ಬಾರಿಗೆ ಕಾಡಾನೆ ಮೇಲೆ ದಾಳಿ ಮಾಡಿತು. ಆಗ ಅರಣ್ಯ ಇಲಾಖೆ ಸಿಬ್ಬಂದಿ ಕೋವಿನಿಂದ ಗುಂಡು ಹಾರಿಸಿದರು. ಅದು ಅರ್ಜುನನ ಕಾಲಿಗೆ ತಗುಲಿತು. ಅರ್ಜುನ ಶಕ್ತಿ ಕಳೆದುಕೊಂಡ. ನಾವು ಆನೆ ಮೇಲಿಂದ ಇಳಿದು ಓಡಿದೆವು. ಗುಂಡು ಬಿದ್ದ ನಂತರ ಅರ್ಜುನನಿಗೆ ನಡೆದಾಡಲು ಆಗಲಿಲ್ಲ. ಇದೇ ವೇಳೆ ಕಾಡಾನೆ ಸಾಕಾನೆ ಅರ್ಜುನನ ಮೇಲೆ ಹಠಾತ್ ದಾಳಿ ಮಾಡಿತು ಎಂದು ಸ್ಥಳೀಯರೊಬ್ಬರು ಮಾವುತರೊಂದಿಗೆ ಮಾತನಾಡಿದ ಕಾವಾಡಿಗರ ವಿಡಿಯೋ ವೈರಲ್ ಆಗಿದ್ದು, ಅರ್ಜುನನ ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕಿದೆ.

ಮದದಲ್ಲಿರುವ ಕಾಡಾನೆ ಹುಚ್ಚನಂತೆ ಆಡುತ್ತದೆ ಎಂಬ ಮಾಹಿತಿ ಗೊತ್ತಿದ್ದರೂ ಅರಣ್ಯ ಇಲಾಖೆ ಸಿಬ್ಬಂದಿ ತಪ್ಪು ನಿರ್ಧಾರ ಮಾಡಿದ್ದಾರೆ ಎಂಬ ಬಗ್ಗೆ ತಜ್ಞರು ಟೀಕೆ ಮಾಡಿದ್ದಾರೆ.

Continue Reading

Trending

error: Content is protected !!