ಬಿಗ್ ನ್ಯೂಸ್
ಉಪ್ಪಿನಂಗಡಿ : ಓವರ್ ಟೆಕ್ ಮಾಡುವ ಭರದಲ್ಲಿ ಅಟೋ ರಿಕ್ಷಾಕ್ಕೆ ಗುದ್ದಿದ ಲಾರಿ | ವಿದ್ಯಾರ್ಥಿ ಮೃತ್ಯು – ಮೂವರಿಗೆ ಗಂಭೀರ ಗಾಯ
ಉಪ್ಪಿನಂಗಡಿ: ನ 29 : ಲಾರಿ ಹಾಗೂ ಅಟೋ ರಿಕ್ಷಾದ ಮಧ್ಯೆ ನಡೆದ ಅಪಘಾತದಲ್ಲಿ ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟು, ಅಟೋ ರಿಕ್ಷಾ ಚಾಲಕ ಸಹಿತ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಬಳಿಯ ಮಠ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.
ಹಿರ್ತಡ್ಕ ನಿವಾಸಿ ದಿ. ಅಶ್ರಫ್ ಎಂಬವರ ಪುತ್ರ, ಹಿರ್ತಡ್ಕ ಸರಕಾರಿ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಅಲ್ತಾಫ್ (12) ಮೃತ ಬಾಲಕ. ರಿಕ್ಷಾದಲ್ಲಿದ್ದ ಈತನ ತಾಯಿ ಖತೀಜಮ್ಮ, ಅಣ್ಣ ಆಶಿಕ್ ಮತ್ತು ಅಟೋ ರಿಕ್ಷಾ ಚಾಲಕ ಹಿರ್ತಡ್ಕ ನಿವಾಸಿ ಸಿದ್ದೀಕ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ಅಲ್ತಾಫ್ನ ತಾಯಿ ಮಂಗಳೂರಿನ ಬೆಂಗರೆ ನಿವಾಸಿಯಾಗಿದ್ದು, ತನ್ನ ಮಕ್ಕಳೊಂದಿಗೆ ತವರು ಮನೆಗೆ ಹೋಗಿದ್ದವರು ಇಂದು ಬಸ್ಸಿನಲ್ಲಿ ಉಪ್ಪಿನಂಗಡಿಗೆ ಬಂದು, ಬಳಿಕ ಅಟೋ ರಿಕ್ಷಾದಲ್ಲಿ ಹಿರ್ತಡ್ಕಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದೆ.
ಹಾಸನ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಲಾರಿ ಮಠ ಮಸೀದಿಯ ಬಳಿಯ ತಿರುವಿನಲ್ಲಿ ವಾಹನವೊಂದನ್ನು ಹಿಂದಿಕ್ಕುವ ಭರದಲ್ಲಿ ಅತೀ ವೇಗದಿಂದ ಬಂದು ಅಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ. ಘಟನೆಯಿಂದ ಅಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.
ಮಾಹಿತಿ ತಿಳಿಯುತ್ತಲೇ, ಘಟನಾ ಸ್ಥಳಕ್ಕೆ ಧಾವಿಸಿದ ಪುತ್ತೂರು ಡಿವೈಎಸ್ಪಿ ಗಾನಾ ಪಿ. ಕುಮಾರ್ , ಸಂಚಾರಿ ಸಬ್ ಇನ್ಸ್ ಪೆಕ್ಟರ್ ರಾಮ ನಾಯ್ಕ್ ಮತ್ತು ಸಿಬ್ಬಂದಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಬಿಗ್ ನ್ಯೂಸ್
ಮಧ್ಯಾಹ್ನ 1 ಗಂಟೆಯವರೆಗೆ ದಕ್ಷಿಣ ಕನ್ನಡದಲ್ಲಾದ ಮತದಾನವೆಷ್ಟು ಗೊತ್ತೇ..?
ಮಂಗಳೂರು : ಲೋಕಸಭಾ ಚುನಾವಣೆಗೆ ಬಿಸಿಲಿನ ಧಗೆಯ ನಡುವೆಯೂ ಬಿರುಸಿನ ಮತದಾನ ನಡೆಯುತ್ತಿದೆ.
ಮಧ್ಯಾಹ್ನ 1 ಗಂಟೆಯವರೆಗೆ 48.1% ಮತ ಪೋಲಿಂಗ್ ಆಗಿದೆ.
ಯಾವ್ಯಾವ ತಾಲೂಕಿನಲ್ಲಿ ಎಷ್ಟೆಷ್ಟು ಮತ
ಬೆಳ್ತಂಗಡಿ 50.01
ಮೂಡುಬಿದರೆ 45.1
ಮಂಗಳೂರು ಉತ್ತರ 46.88
ಮಂಗಳೂರು ದಕ್ಷಿಣ 41.62
ಮಂಗಳೂರು ಉಳ್ಳಾಲ 47.83
ಬಂಟ್ವಾಳ 50.13
ಪುತ್ತೂರು 51.01
ಸುಳ್ಯ 53.31ನಲ್ಲಿ ಇಷ್ಟು ಶೇಕಡಾ ಮತದಾನವಾಗಿದೆ.
ಜಿದ್ದಾಜಿದ್ದಿನ ಕಣವಾಗಿ ಈ ಬಾರಿ ದಕ್ಷಿಣ ಕನ್ನಡ ಕ್ಷೇತ್ರವಿದೆ. ಬಿಜೆಪಿಯಿಂದ ಕ್ಯಾ.ಬ್ರಿಜೇಶ್ ಚೌಟ, ಕಾಂಗ್ರೇಸ್ನಿಂದ ಪದ್ಮರಾಜ್ ಪೂಜಾರಿ ಹಾಗೂ ಸೌಜನ್ಯ ಪರ ನೋಟಾ ಅಭಿಯಾನ ಸದ್ದು ಮಾಡುತ್ತಿದ್ದೆ.
ಬಿಗ್ ನ್ಯೂಸ್
ಕಟೀಲ್ ಆಶೀರ್ವಾದ ಪಡೆದ ಪದ್ಮರಾಜ್ : ಹರಸಿದ ಸಂಸದರು..!
ಮಂಗಳೂರು : ಮಂಗಳೂರಿನ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರು ಸಂಸದ ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದರು.
ಮಂಗಳೂರು ಲೇಡಿಹಿಲ್ ಅಲೋಶಿಯಸ್ ಶಾಲೆಗೆ ಮತದಾನಕ್ಕೆ ಬಂದಿದ್ದ ನಳೀನ್ ಕುಮಾರ್ ಕಟೀಲ್ ರ ಆಶೀರ್ವಾದ ಪಡೆದರು.
ಕಟೀಲ್ ಎದುರಾದಾಗ ಕಾಲು ಹಿಡಿಯಲು ಪದ್ಮರಾಜ್ ಬಗ್ಗಿದರು. ತಡೆದ ಕಟೀಲ್ ಆತ್ಮೀಯವಾಗಿ ಹರಸಿದರು. ಕಟೀಲ್ ಹಾಗೂ ಪದ್ಮರಾಜ್ ಈ ಹಿಂದಿನಿಂದಲೂ ಆತ್ಮೀಯರಾಗಿದ್ದಾರೆ.
ಟಿಕೇಟ್ ಕೈತಪ್ಪಿದ ನಂತರ ಕಟೀಲ್ ಕೇರಳ ಉಸ್ತುವಾರಿಯಾಗಿದ್ದಾರೆ.
ಬಿಗ್ ನ್ಯೂಸ್
ಕುಟುಂಬ ಸಮೇತ ಮತ ಚಲಾಯಿಸಲು ಪದ್ಮರಾಜ್ ಬಂದಾಗ ಬಿಜೆಪಿ ಕಾರ್ಯಕರ್ತನಿಂದ ಗೂಂಡಾಗಿರಿ – ಪೊಲೀಸ್ ಅಧಿಕಾರಿಯನ್ನು ತಳ್ಳಾಡಿ ಪುಂಡಾಟ : ಮಾಧ್ಯಮದವರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದನೆ
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಮತದಾನ ಮಾಡಲು ಬಂದಾಗ ಬಿಜೆಪಿ ಕಾರ್ಯಕರ್ತರೋರ್ವರು ದಾಂದಲೆ ಎಬ್ಬಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಪದ್ಮರಾಜ್ ಪೂಜಾರಿಯವರು ತಮ್ಮ ಪತ್ನಿ ಪುತ್ರಿ ಹಾಗೂ ಕುಟುಂಬ ಸಮೇತರಾಗಿ ನಗರದ ಕಂಕನಾಡಿ ಕಪಿತಾನಿಯೋ ಶಾಲಾ ಮತಗಟ್ಟೆ 108ಕ್ಕೆ ಬಂದಿದ್ದರು.
ಪದ್ಮರಾಜ್ ಆಗಮಿಸಿದಾಗ ಜನ ಸೇರಿದ್ದನ್ನು ಕಂಡು ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಸಂದೀಪ್ ಎಕ್ಕೂರು ಎಂಬಾತ ಗುಂಡಾಗಿರಿ ನಡೆಸಿದ ಘಟನೆ ನಡೆದಿದೆ.
ಪೊಲೀಸ್ ಅಧಿಕಾರಿಯನ್ನ ತಳ್ಳಾಡಿ ಪುಂಡಾಟ ಮೆರೆದ ಈತ ಪೊಲೀಸ್ ಅಧಿಕಾರಿಯೊಂದಿಗೆ ವಾಗ್ವಾದ ನಡೆಸಿ ಚಿತ್ರೀಕರಣ ಮಾಡಿದ ಮಾಧ್ಯಮದವರ ಮೇಲೂ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ.
ಕೊನೆಗೆ ಪೊಲೀಸ್ ಅಧಿಕಾರಿ ಗದರಿಸಿದ್ದಕ್ಕೆ ತೆಪ್ಪಗಾಗಿ ಸ್ಥಳದಿಂದ ಜಾಗ ಖಾಲಿ ಮಾಡಿಸಿದರು.
-
ಸಾಮಾಜಿಕ ಮಾಧ್ಯಮ2 days ago
Hasana sex tape : ಚುನಾವಣೆ ಹೊಸ್ತಿಲಲ್ಲಿ ಹಾಸನ ಅಭ್ಯರ್ಥಿಯ ರಾಸಲೀಲೆಯ ಪೆನ್ ಡ್ರೈವ್ ಸೌಂಡ್ ! ಅಸಲಿಯ / ನಕಲಿಯ ತೀವ್ರ ಚರ್ಚೆ
-
ಬಿಗ್ ನ್ಯೂಸ್23 hours ago
Hasana Sex Tape: ಹಾಸನ ಸಂಸದ ಪ್ರಜ್ವಲ್ ರೇವಣ್ಣರವರದೆಂದು ಬಿಂಬಿಸಿ ಕೊಳಕು, ಮಾರ್ಫ್ ಮಾಡಿದ ವೀಡಿಯೊಗಳು ಆನ್ಲೈನ್ನಲ್ಲಿ ವ್ಯಾಪಕವಾಗಿ ಪ್ರಸಾರ : ಚುನಾವಣಾ ಏಜೆಂಟ್ ರಿಂದ ಠಾಣೆಗೆ ದೂರು
-
ಬಿಗ್ ನ್ಯೂಸ್22 hours ago
ಕುಟುಂಬ ಸಮೇತ ಮತ ಚಲಾಯಿಸಲು ಪದ್ಮರಾಜ್ ಬಂದಾಗ ಬಿಜೆಪಿ ಕಾರ್ಯಕರ್ತನಿಂದ ಗೂಂಡಾಗಿರಿ – ಪೊಲೀಸ್ ಅಧಿಕಾರಿಯನ್ನು ತಳ್ಳಾಡಿ ಪುಂಡಾಟ : ಮಾಧ್ಯಮದವರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದನೆ
-
ದಕ್ಷಿಣ ಕನ್ನಡ2 days ago
Student harrased in bus ಉಪ್ಪಿನಂಗಡಿ: ಸ್ಲೀಪರ್ ಕೋಚ್ ಬಸ್ನಲ್ಲಿ ವಿದ್ಯಾರ್ಥಿನಿಗೆ ಜತೆ ಸಹ ಪ್ರಯಾಣಿಕನಿಂದ ಕಿರುಕುಳ – ಯುವತಿ ವ್ಯಗ್ರಗೊಳ್ಳುತ್ತಾಳೆ ಕಿಟಕಿಯಿಂದ ಹಾರಿ ಆರೋಪಿ ಪರಾರಿ – ಮುಂದೇನಾಯಿತು ?
-
ನಿಧನ ವಾರ್ತೆ2 days ago
Bhagavata Subramanya Dhareshwara-ಹಾಡು ನಿಲ್ಲಿಸಿದ ಬಡಗುತಿಟ್ಟಿನ ಗಾನ ಕೋಗಿಲೆ – ಯಕ್ಷಗಾನದ ಹಿರಿಯ ಭಾಗವತ ಸುಬ್ರಮಣ್ಯ ಧಾರೇಶ್ವರ ಇನ್ನಿಲ್ಲ
-
ಸ್ಥಳೀಯ2 days ago
Mithun Rai-ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಮೂಡುಬಿದಿರೆ ಬಿಜೆಪಿ ಶಾಸಕರ ಪ್ರಾಮಾಣಿಕ ಪ್ರಯತ್ನ – ಮಿಥುನ್ ರೈ ಶಾಕಿಂಗ್ ಹೇಳಿಕೆ
-
ಮಂಗಳೂರು2 days ago
Janardhana Poojary-ಹಿಂದುತ್ವದ ಅಮಲಿನಲ್ಲಿ ಹಿಂದುಳಿದ ವರ್ಗದ ಯುವಕರು ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಮೇಲ್ವರ್ಗದವರು ಅಧಿಕಾರ ನಡೆಸುತ್ತಿದ್ದಾರೆ- ಇದಕ್ಕೆಲ್ಲ ತಿಲಾಂಜಲಿ ನೀಡುವ ಕೆಲಸ ಪದ್ಮರಾಜ್ ಆರ್ ಪೂಜಾರಿಯನ್ನು ಗೆಲ್ಲಿಸುವ ಮೂಲಕ ಆಗಬೇಕಿದೆ :ಜನಾರ್ದನ ಪೂಜಾರಿ
-
ರಾಜಕೀಯ2 days ago
Belthangady-ಬೆಳ್ತಂಗಡಿ : ಸಿಗದ ಮೂಲಭೂತ ಸೌಕರ್ಯ – ನೋಟಾಗೆ ಮತ ಚಲಾಯಿಸಲು ಮಲೆಕುಡಿಯ ಸಮುದಾಯದ ನಿರ್ಧಾರ