Ad Widget

ಖ್ಯಾತ ದೈವಾರಾಧಕ, ಮಧ್ಯಸ್ಥ ಪುತ್ತೂರಿನ ಭರತ್ ಭಂಡಾರಿ ಇನ್ನಿಲ್ಲ

IMG-20211129-WA0002
Ad Widget

Ad Widget

Ad Widget

ಪುತ್ತೂರು: ಪುತ್ತೂರಿನ ಬನ್ನೂರು ನಿವಾಸಿ ದೈವಗಳ ಮಧ್ಯಸ್ಥ ಭರತ್ ಭಂಡಾರಿ(31) ಅಲ್ಪ ಕಾಲದ ಅನಾರೋಗ್ಯ ಸಮಸ್ಯೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

Ad Widget

Ad Widget

Ad Widget

Ad Widget

ಮೊದಲಿಗೆ ಜ್ವರ ಕಾಣಿಸಿಕೊಂಡು ಬಳಿಕ ಅದು ಜಾಂಡಿಸ್ ಹಂತ ತಲುಪಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಾಗಿದ್ದರು.

Ad Widget

Ad Widget

Ad Widget

Ad Widget

ಜಾಂಡಿಸ್ ಖಾಯಿಲೆ ತೀವ್ರಗೊಂಡು ಅವರ ಪಿತ್ತಕೋಶ (ಲೀವರ್) ಸಂಪೂರ್ಣ ಕೆಟ್ಟು ಹೋಗಿತ್ತು. ಇದರಿಂದ ಸುಮಾರು 120 kg ತೂಕದ ದೃಢ ಶರೀರದ ಭರತ್ ಅವರು 40 kgಗೆ ಇಳಿದು ಕೃಶರಾಗಿದ್ದರು. ದೇಹ ಸ್ಥಿತಿ ಕ್ಷಿಣವಾಗುತ್ತಿದ್ದು ಲೀವರ್ ಮರು ಜೋಡಣೆ ಮಾಡಬೇಕು ಎಂದು ವೈದ್ಯರು ತಿಳಿಸಿದ್ದರು ಎನ್ನಲಾಗಿದೆ. ಅದಕ್ಕಾಗಿ ಅವರ ಅಭಿಮಾನಿಗಳು ಹಿತೈಷಿಗಳು ಚಿಕಿತ್ಸೆಯ ವೆಚ್ಚಕ್ಕಾಗಿ ಹಣ ಸಂಗ್ರಹ ಮಾಡಲು ಮನ ಮಾಡಿದ್ದರು. ಆದರೆ ವಿಧಿಯ ಮುಂದೆ ಯಾವುದೂ ಇಲ್ಲ ಎನ್ನುವಂತೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ಯಾತ್ರೆ ಮುಗಿಸಿದ್ದಾರೆ.

ಮೃತರ ತಂದೆ ಗಂಗಾಧರ ಭಂಡಾರಿ ಯಕ್ಷಗಾನ ಕಲಾವಿದರಾಗಿದ್ದರು. ಮೃತರು ತಂದೆ ಗಂಗಾಧರ ಭಂಡಾರಿ, ತಾಯಿ ಪುಷ್ಪ, ಸಹೋದರಿ ಅಕ್ಷತಾ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Ad Widget

Ad Widget
Ad Widget

Leave a Reply

Recent Posts

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಘೋಷಿಸಿರುವ 4 ಗ್ಯಾರಂಟಿ ಯೋಜನೆಗಳಿಗೆ ಸಿಗುತ್ತಿರುವ ಸ್ಪಂದನೆಯಿಂದ ಕಂಗೆಟ್ಟಿರುವ ಬಿಜೆಪಿ, ಉರಿ ನಂಜೇಗೌಡರಂತಹ ಕಾಲ್ಪನಿಕ ವಿಚಾರಗಳ ಮೂಲಕ ಜನರ ದಾರಿ ತಪ್ಪಿಸಲು ಯತ್ನಿಸುತ್ತಿದೆ : ಅಮಳ ರಾಮಚಂದ್ರ  

error: Content is protected !!
%d bloggers like this: