ಅಪರಾಧ
ಕಛೇರಿಯ ಮಹಿಳಾ ಸಿಬಂದಿಗಳಿಗೆ ಲೈಂಗಿಕ ಕಿರುಕುಳ ನೀಡಿದ ವೈದ್ಯಾಧಿಕಾರಿ ರತ್ನಾಕರ್ ಗೆ ಜಾಮೀನು
ಮಂಗಳೂರು :ನ 29 : ಕಛೇರಿಯಲ್ಲಿ ಗುತ್ತಿಗೆ ಅಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರಿಗೆ ಹಾಗೂ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಡಿ ಬಂಧಿತನಾಗಿದ್ದ ದ.ಕ ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಹಾಗೂ ಆಯುಷ್ಮಾನ್ ನೋಡಲ್ ಆಫಿಸರ್ ಡಾ ರತ್ನಾಕರ್ ಗೆ ಜಾಮೀನು ದೊರೆತಿದೆ.
ಮೂರು ದಿನಗಳ ಹಿಂದೆ ವೈದ್ಯಾಧಿಕಾರಿಯ ಅಸಭ್ಯ ವರ್ತನೆಯ ಫೋಟೋ ಹಾಗೂ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಕಿರುಕುಳಕ್ಕೆ ಒಳಗಾದ ಸಂತ್ರಸ್ತೆಯರು ದೂರು ನೀಡಲು ಮುಂದೆ ಬಾರದ ಹಿನ್ನಲೆಯಲ್ಲಿ ಮಹಿಳಾ ಸಂಘಟನೆಯ ಸದಸ್ಯೆಯೊಬ್ಬರು ಪಾಂಡೇಶ್ವರ ಠಾಣೆಯಲ್ಲಿ ದೂರು ನೀಡಿದ್ದರು
ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು ಶನಿವಾರದಂದು ಆತನನ್ನು ಬಂಧಿಸಿ ನ್ಯಾಯಾಲಾಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಲಯವೂ ಆರೋಪಿಗೆ ನ್ಯಾಯಾಲಾಯವೂ ಎರಡು ದಿನಗಳ ಪೊಲೀಸ್ ಕಸ್ಟಡಿ ವಿಧಿಸಿತ್ತು. ಎರಡು ದಿನಗಳ ಬಳಿಕ ಪೊಲೀಸ್ ಕಸ್ಟಡಿ ಸೋಮವಾರ ಮುಗಿದದ್ದರಿಂದ ಮತ್ತೊಮ್ಮೆ ಇಂದು ಡಾ. ರತ್ನಾಕರನನ್ನು ಮೂರನೇ ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ಹಾಜಾರುಪಡಿಸಲಾಯಿತು.
ಈ ವೇಳೆ ಆರೋಪಿಯೂ ಜಾಮೀನು ಅರ್ಜಿ ಸಲ್ಲಿಸಿದ್ದು, ಅದನ್ನು ವಿಚಾರಣೆಗೆ ಎತ್ತಿಕೊಂಡ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿದೆ.
ರತ್ನಾಕರ ಕಛೇರಿಯ ಸಿಬಂದಿಗಳ ಜತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ವಿಚಾರವೂ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ಬಂದಿದ್ದು, ಇಲಾಖಾ ವಿಚಾರಣೆ ನಡೆಸಿದ ಅದು , ಆರೋಪ ಮೇಲ್ನೋಟಕ್ಕೆ ಕಂಡು ಬಂದ ಹಿನ್ನಲೆಯಲ್ಲಿ ನವೆಂಬರ್ 8 ರಂದು ಆತನನ್ನು ಅಮಾನತು ಮಾಡಿ ಆದೇಶ ಹೊರಡಿಸಿತ್ತು.
ಅಪರಾಧ
Bantwal-ಬಂಟ್ವಾಳ : ಬಾಲಕಿಯೊಂದಿಗೆ ಅನುಚಿತ ವರ್ತನೆ – ಯುವಕನ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ: ಪೊಳಲಿಯಲ್ಲಿ ಬಾಲಕಿಯನ್ನು ಅಪ್ಪಿ ಹಿಡಿದು ಅನುಚಿತವಾಗಿ ವರ್ತಿಸಿದ ಘಟನೆಯು ಎ. 24ರಂದು ನಡೆದಿದ್ದು, ಆರೋಪಿಯ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಡಕಬೈಲು ನಿವಾಸಿ ಅಮೀನ್ ಯಾನೆ ಮೊಹಮ್ಮದ್ ಅಮೀನ್ ಪ್ರಕರಣ ಆರೋಪಿಯಾಗಿದ್ದು, ಆತ ಬಾಲಕಿಯ ಹಿಂದಿನಿಂದ ಬಂದು ಜೋರಾಗಿ ಎದೆ ಭಾಗವನ್ನು ಅಪ್ಪಿ, ಕೈಯನ್ನು ಬಲವಾಗಿ ಹಿಡಿದು ತಿರುಗಿ ನೋಡಲು ಕೂಡ ಅವಕಾಶ ನೀಡದೆ ನಿನ್ನ ಮೊಬೈಲ್ ನಂಬರ್ ಕೊಡಬೇಕು, ಇಲ್ಲದಿದ್ದರೇ ನಿನ್ನನ್ನು ರೇಪ್ ಮಾಡದೇ ಬಿಡುವುದಿಲ್ಲ, ನೀನು ನನಗೆ ಬೇಕು ಎಂದು ಹೇಳಿದಾಗ ನೊಂದ ಬಾಲಕಿಯು ಬೊಬ್ಬೆ ಹಾಕಿದ್ದಾಳೆ.
ಈ ವೇಳೆ ಸಂಬಂಧಿಕನೋರ್ವ ಬರುವುದನ್ನು ನೋಡಿ ಆರೋಪಿಯು ಸ್ಕೂಟರ್ನಲ್ಲಿ ಪರಾರಿಯಾಗಿದ್ದಾನೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ತನಿಖೆ ನಡೆಸುತ್ತಿದ್ದಾರೆ.
ಅಪರಾಧ
Online acquaintance-ಆನ್ ಲೈನ್ ಪರಿಚಿತ ಗೆಳೆಯ ಮಹಿಳೆಯ ಜೀವಾಂತ್ಯಗೊಳಿಸಿದ
ಬೆಂಗಳೂರು: ಕೊಡಿಗೇಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಎಂ. ಶೋಭಾ (48) ಕೊಲೆ ಪ್ರಕರಣದ ಆರೋಪಿ ನವೀನ್ ಗೌಡ (28) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ನವೀನ್ ಗೌಡ, ನಗರದ ಸಾಫ್ಟ್ವೇರ್ ಕಂಪನಿಯೊಂದರ ಉದ್ಯೋಗಿ. ಕೊಡಿಗೇಹಳ್ಳಿ ಬಳಿಯ ಗಣೇಶ ನಗರದ ಶೋಭಾ ಅವರನ್ನು ಏ. 18ರಂದು ಕೊಲೆ ಮಾಡಿ ಪರಾರಿಯಾಗಿದ್ದ.
ಶೋಭಾ ಮಗಳು ನೀಡಿದ್ದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಸೆರೆ ಹಿಡಿಯಲಾಗಿದೆ’ ಎಂದು ಪೊಲೀಸರು ಹೇಳಿದರು. ಶೋಭಾ ಅವರು ವಾಹನ ಚಾಲನಾ ತರಬೇತಿ ಶಾಲೆ ನಡೆಸುತ್ತಿದ್ದರು. ಎರಡನೇ ಮಗಳ ಜೊತೆ ನೆಲೆಸಿದ್ದರು. ಅವರ ಪತಿ ಹಾಗೂ ಮೊದಲ ಮಗಳು ಪ್ರತ್ಯೇಕವಾಗಿ ವಾಸವಿದ್ದರು. ಏ. 18ರಂದು ಬೆಳಿಗ್ಗೆ ಎರಡನೇ ಮಗಳು ತಮ್ಮ ಪತಿ ಮನೆಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಮನೆಗೆ ಬಂದಿದ್ದ ನವೀನ್ ಗೌಡ, ಶೋಭಾ ಅವರನ್ನು ಕತ್ತು ಹಿಸುಕಿ ಕೊಂದಿದ್ದನೆಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದರು.
ಸಾಮಾಜಿಕ ಮಾಧ್ಯಮದಿಂದ ಪರಿಚಯ: ‘ಶೋಭಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಖಾತೆ ಹೊಂದಿದ್ದರು. ಅದೇ ಖಾತೆಗೆ ಆರೋಪಿ ನವೀನ್ ರಿಕ್ವೆಸ್ಟ್ ಕಳುಹಿಸಿದ್ದ. ಅದನ್ನು ಶೋಭಾ ಸ್ವೀಕರಿಸಿದ್ದರು. ನಂತರ, ಇಬ್ಬರೂ ಪರಸ್ಪರ ಚಾಟಿಂಗ್ ಮಾಡಲಾರಂಭಿಸಿದ್ದರು ಎಂದು ಪೊಲೀಸರು ಹೇಳಿದರು.
ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡಿದ್ದ ಇಬ್ಬರೂ ಮಾತುಕತೆ ಆರಂಭಿಸಿದ್ದರು. ಇಬ್ಬರ ನಡುವೆ ಸಲುಗೆಯೂ ಬೆಳೆದಿತ್ತು ಎಂಬ ಮಾಹಿತಿ ಇದೆ. ಭೇಟಿಯಾಗುವುದಾಗಿ ಹೇಳಿದ್ದ ನವೀನ್, ಕೆಲ ದಿನಗಳ ಹಿಂದೆಯಷ್ಟೇ ಶೋಭಾ ಅವರ ಮನೆಗೆ ಬಂದು ಹೋಗಿದ್ದ. ಏ. 18ರಂದು ಎರಡನೇ ಬಾರಿ ಮನೆಗೆ ಬಂದಿದ್ದ ನವೀನ್ ಹಾಗೂ ಶೋಭಾ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ’ ಎಂದು ತಿಳಿಸಿದರು.
ಕೊಲೆ ನಂತರ ಆರೋಪಿ ನವೀನ್, ಶೋಭಾ ಅವರ ಕಾರಿನಲ್ಲಿಯೇ ಸ್ಥಳದಿಂದ ಪರಾರಿಯಾಗಿದ್ದ. ಸಲುಗೆ ಕಾರಣಕ್ಕೆ ಈ ಕೊಲೆ ನಡೆದಿರುವ ಮಾಹಿತಿ ಇದೆ’ ಎಂದು ಪೊಲೀಸರು ಹೇಳಿದರು.
ಅಪರಾಧ
Everest fish curry-ಎವರೆಸ್ಟ್ ಫಿಶ್ಕರಿ ಮಸಾಲಾದಲ್ಲಿ ಎಥಿಲಿನ್ ಆಕ್ಸೆಡ್ ಪತ್ತೆ
ಸಿಂಗಾಪುರ: ಭಾರತದ ಜನಪ್ರಿಯ ಉತ್ಪನ್ನ `ಎವರೆಸ್ಟ್ ಫಿಶ್ಕರಿ ಮಸಾಲಾ’ದಲ್ಲಿ ಅನುಮತಿಸಿರುವುದಕ್ಕಿಂತ ಅಧಿಕ ಮಟ್ಟದ ಎಥಿಲಿನ್ ಆಕ್ಸೆಡ್ ರಾಸಾಯನಿಕವಿದೆ ಎಂಬ ಕಾರಣಕ್ಕೆ ಈ ಮಸಾಲಾ ಉತ್ಪನ್ನವನ್ನು ಮಾರುಕಟ್ಟೆಯಿಂದ ಹಿಂಪಡೆಯುವಂತೆ ಸಿಂಗಾಪುರ ಆದೇಶಿಸಿದೆ.
ಎಥಿಲೀನ್ ಆಕ್ಸೆಡ್ ಅನ್ನು ಆಹಾರದಲ್ಲಿ ಬಳಸಲು ಅನುಮತಿಸಲಾಗಿಲ್ಲ ಮತ್ತು ಬ್ಯಾಕ್ಟಿರಿಯಾಗಳ ಮಾಲಿನ್ಯವನ್ನು ತಡೆಗಟ್ಟಲು ಕೃಷಿ ಉತ್ಪನ್ನಗಳ ಧೂಮೀಕರಣ(ಕೀಟನಿಯಂತ್ರಣದ ಒಂದು ವಿಧಾನ)ಕ್ಕೆ ಮಾತ್ರ ಬಳಸಲಾಗುತ್ತದೆ ಎಂದು ಸಿಂಗಾಪುರ ಫುಡ್ ಏಜೆನ್ಸಿಯ ಹೇಳಿಕೆ ತಿಳಿಸಿದ್ದು ಎವರೆಸ್ಟ್ ಫಿಶ್ಕರಿ ಮಸಾಲಾವನ್ನು ಆಮದು ಮಾಡಿಕೊಳ್ಳುವ ಎಸ್ಪಿ ಮುತ್ತಯ್ಯ ಆ್ಯಂಡ್ ಸನ್ಸ್ ಪ್ರೈ.ಲಿ. ಸಂಸ್ಥೆಗೆ ಸಿಂಗಾಪುರ ಮಾರುಕಟ್ಟೆಯಿಂದ ಉತ್ಪನ್ನವನ್ನು ತಕ್ಷಣ ವಾಪಾಸು ಪಡೆಯುವಂತೆ ಸೂಚಿಸಿದೆ.
-
ಸಾಮಾಜಿಕ ಮಾಧ್ಯಮ2 days ago
Hasana sex tape : ಚುನಾವಣೆ ಹೊಸ್ತಿಲಲ್ಲಿ ಹಾಸನ ಅಭ್ಯರ್ಥಿಯ ರಾಸಲೀಲೆಯ ಪೆನ್ ಡ್ರೈವ್ ಸೌಂಡ್ ! ಅಸಲಿಯ / ನಕಲಿಯ ತೀವ್ರ ಚರ್ಚೆ
-
ಬಿಗ್ ನ್ಯೂಸ್19 hours ago
Hasana Sex Tape: ಹಾಸನ ಸಂಸದ ಪ್ರಜ್ವಲ್ ರೇವಣ್ಣರವರದೆಂದು ಬಿಂಬಿಸಿ ಕೊಳಕು, ಮಾರ್ಫ್ ಮಾಡಿದ ವೀಡಿಯೊಗಳು ಆನ್ಲೈನ್ನಲ್ಲಿ ವ್ಯಾಪಕವಾಗಿ ಪ್ರಸಾರ : ಚುನಾವಣಾ ಏಜೆಂಟ್ ರಿಂದ ಠಾಣೆಗೆ ದೂರು
-
ದಕ್ಷಿಣ ಕನ್ನಡ2 days ago
Student harrased in bus ಉಪ್ಪಿನಂಗಡಿ: ಸ್ಲೀಪರ್ ಕೋಚ್ ಬಸ್ನಲ್ಲಿ ವಿದ್ಯಾರ್ಥಿನಿಗೆ ಜತೆ ಸಹ ಪ್ರಯಾಣಿಕನಿಂದ ಕಿರುಕುಳ – ಯುವತಿ ವ್ಯಗ್ರಗೊಳ್ಳುತ್ತಾಳೆ ಕಿಟಕಿಯಿಂದ ಹಾರಿ ಆರೋಪಿ ಪರಾರಿ – ಮುಂದೇನಾಯಿತು ?
-
ಬಿಗ್ ನ್ಯೂಸ್18 hours ago
ಕುಟುಂಬ ಸಮೇತ ಮತ ಚಲಾಯಿಸಲು ಪದ್ಮರಾಜ್ ಬಂದಾಗ ಬಿಜೆಪಿ ಕಾರ್ಯಕರ್ತನಿಂದ ಗೂಂಡಾಗಿರಿ – ಪೊಲೀಸ್ ಅಧಿಕಾರಿಯನ್ನು ತಳ್ಳಾಡಿ ಪುಂಡಾಟ : ಮಾಧ್ಯಮದವರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದನೆ
-
ನಿಧನ ವಾರ್ತೆ2 days ago
Bhagavata Subramanya Dhareshwara-ಹಾಡು ನಿಲ್ಲಿಸಿದ ಬಡಗುತಿಟ್ಟಿನ ಗಾನ ಕೋಗಿಲೆ – ಯಕ್ಷಗಾನದ ಹಿರಿಯ ಭಾಗವತ ಸುಬ್ರಮಣ್ಯ ಧಾರೇಶ್ವರ ಇನ್ನಿಲ್ಲ
-
ಸ್ಥಳೀಯ2 days ago
Mithun Rai-ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಮೂಡುಬಿದಿರೆ ಬಿಜೆಪಿ ಶಾಸಕರ ಪ್ರಾಮಾಣಿಕ ಪ್ರಯತ್ನ – ಮಿಥುನ್ ರೈ ಶಾಕಿಂಗ್ ಹೇಳಿಕೆ
-
ಮಂಗಳೂರು2 days ago
Janardhana Poojary-ಹಿಂದುತ್ವದ ಅಮಲಿನಲ್ಲಿ ಹಿಂದುಳಿದ ವರ್ಗದ ಯುವಕರು ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಮೇಲ್ವರ್ಗದವರು ಅಧಿಕಾರ ನಡೆಸುತ್ತಿದ್ದಾರೆ- ಇದಕ್ಕೆಲ್ಲ ತಿಲಾಂಜಲಿ ನೀಡುವ ಕೆಲಸ ಪದ್ಮರಾಜ್ ಆರ್ ಪೂಜಾರಿಯನ್ನು ಗೆಲ್ಲಿಸುವ ಮೂಲಕ ಆಗಬೇಕಿದೆ :ಜನಾರ್ದನ ಪೂಜಾರಿ
-
ಅಪರಾಧ1 day ago
Bantwal-ಬಂಟ್ವಾಳ : ಬಾಲಕಿಯೊಂದಿಗೆ ಅನುಚಿತ ವರ್ತನೆ – ಯುವಕನ ವಿರುದ್ಧ ಪ್ರಕರಣ ದಾಖಲು