ಮಂಗಳೂರು : ನ 30 : ಯುವಕನಿಗೆ ತಂಡವೊಂದು ಮಾರಾಕಾಯುದ್ದಗಳಿಂದ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ರವಿವಾರ ತಡ ರಾತ್ರಿ ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಳೆಯ ಕೊಲೆಯೊಂದರ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನ ವಿರುದ್ದ ದಾಳಿ ನಡೆದಿದ್ದೂ ಆತನ ಗ್ಯಾಂಗಿನ ವಿರುದ್ದ ತಂಡದ ರೌಡಿಗಳು ಈ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದೆ
ಅಳಕೆ ಗ್ಯಾಂಗ್ಗೆ ಸೇರಿದ ಶ್ರವಣ್ ಗ್ಯಾಂಗ್ ವಾರ್ನಿಂದ ಗಂಭೀರವಾಗಿ ಗಾಯಗೊಂಡ ಯುವಕ. ಸುಮಾರು 8 ಮಂದಿಯ ತಂಡವೊಂದು ಈ ದುಷ್ಕೃತ್ಯ ಎಸಗಿದೆ. ಗಾಯಾಳು ಪರಿಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
2020ರಲ್ಲಿ ಬರ್ಕೆಯಲ್ಲಿ ನಡೆದ ಇಂದ್ರಜಿತ್ ಎಂಬಾತನನ್ನು ಹತ್ಯೆ ಮಾಡಲಾಗಿತ್ತು. ಇಂದ್ರಜಿತ್ನನ್ನು ತಲವಾರ್ ಜಗ್ಗ ಗ್ಯಾಂಗ್ (ಬೋಳೂರು ಗ್ಯಾಂಗ್) ಕೊಲೆಗೈದಿತ್ತು. ಅದೇ ದ್ವೇಷದಿಂದ ಶ್ರವಣ್ನ ಕೊಲೆಯತ್ನ ಮಾಡಲಾಗಿದ್ದು, ಪೊಲೀಸರು ಆರೋಪಿಗಳ ವಿರುದ್ದ ಸೆ.307ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದೀಗ ಆಸ್ಪತ್ರೆಯಲ್ಲಿ ಚಿಕಿತಸೆ ಪಡೆಯುತ್ತಿರುವ ಶ್ರವಣ್ ಇಂದ್ರಜೀತ್ ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಸಹೋದರ. ಈ ಕೊಲೆಯತ್ನ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರಂಭದಲ್ಲಿ ಇದೊಂದು ಕೊಲೆಯತ್ನ ಎಂದು ಭಾವಿಸಲಾಗಿತ್ತು. ಆದರೆ ತನಿಖೆಯ ವೇಳೆ ಇದು ಇಂದ್ರಜಿತ್ ಕೊಲೆಗೆ ಪ್ರತೀಕಾರವಾಗಿ ನಡೆದ ಗ್ಯಾಂಗ್ ವಾರ್ ಎಂಬುದು ಬಯಲಾಗಿದೆ̤