ಬಿಗ್ ನ್ಯೂಸ್
ಮಂಗಳೂರು: ಹೆತ್ತ ತಾಯಿಯ ಮೇಲೆ ಹಲ್ಲೆ ನಡೆಸಿ ದೋಸೆ ಕಾವಲಿಯಿಂದ ತಲೆಗೆ ಚಚ್ಚಿ ಕೊಲ್ಲುತ್ತೇನೆಂದು ಬೆದರಿಕೆಯೊಡ್ಡಿದ ಪಾಪಿ ಮಗ ಅಂದರ್
ಮಂಗಳೂರು, ಡಿ.1: ಕೇಳಿದಾಗ ಹಣ ನೀಡಲಿಲ್ಲ ವೆಂದು ಹೆತ್ತ ತಾಯಿಗೆ ಹಲ್ಲೆ ಮಾಡಿದ ಪಾಪಿ ಮಗನನ್ನು ಮಂಗಳೂರಿನ ಕದ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದ್ವಿಚಕ್ರ ವಾಹನ ತೆಗೆಯಲು ಹಣ ನೀಡಲಿಲ್ಲ ಎಂದು ಯುವಕನೊಬ್ಬ ಮಂಗಳವಾರ ತನ್ನ ವಯೊವೃದ್ದ ತಾಯಿಗೆ ಹಲ್ಲೆ ನಡೆಸಿದ ಬಗ್ಗೆ ವರದಿಯಾಗಿತ್ತು.
ಬಂಧಿತ ಆರೋಪಿಯನ್ನು ಕದ್ರಿ ಹಿಲ್ನ ಪದವು ಸ್ಕೂಲ್ ಸಮೀಪದ ನಿವಾಸಿ ರೋಶನ್ ರೋಚ್ ಎಂದು ಗುರುತಿಸಲಾಗಿದೆ. ಈತ ಕದ್ರಿ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದು ನಗರದಲ್ಲಿ ಪುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ.
ಮಂಗಳವಾರ ಬೆಳಗ್ಗೆ ಸುಮಾರು 8 ಗಂಟೆಗೆ ತನ್ನ 66ರ ಹರೆಯದ ತಾಯಿ ಐರಿನ್ ಪ್ಯಾಟ್ರಿಕ್ ರೋಚ್ ಎಂಬವರ ಬಳಿ ಆರೋಪಿಯು ಸ್ಕೂಟರ್ ತೆಗೆಯಲು 75 ಸಾವಿರ ರೂ. ಕೊಡಬೇಕು ಎಂದು ಒತ್ತಾಯಿಸಿದ. ಆದರೆ ಐರಿನ್ ಅವರು ಹಣ ಕೊಡಲು ನಿರಾಕರಿಸಿದಾಗ ಆರೋಪಿಯು ತಾಯಿಯ ಕೆನ್ನೆಗೆ ಹೊಡೆದಿರುವುದಾಗಿ ಆರೋಪಿಸಲಾಗಿದೆ.
ಮಗನ ಹಲ್ಲೆಯಿಂದ ಭಯಭೀತರಾದ ತಾಯಿ ಐರಿನ್ ತಪ್ಪಿಸಿಕೊಂಡು ಹೋಗುವಾಗ ಆರೋಪಿಯು ತಡೆದು ನಿಲ್ಲಿಸಿ ಅವಾಚ್ಯ ಶಬ್ದದಿಂದ ಬೈದು ದೋಸೆ ಕಾವಲಿನಿಂದ ತಲೆಗೆ ಚಚ್ಚಿ ಕೊಲ್ಲದೆ ಬಿಡುವುದಿಲ್ಲ ಎಂದು ಬೆದರಿಸಿದ್ದಾನೆ ಎನ್ನಲಾಗಿದೆ.
ಈ ದೂರಿನ ಅನ್ವಯ ಕದ್ರಿ ಪೊಲೀಸರು ಪ್ರಕರಣ ದಾಖಲಿಸಿ ರೋಶನ್ ರೋಚ್ ನನ್ನು ಬಂಧಿಸಿದ್ದಾರೆ.
ಸಾಮಾಜಿಕ ಮಾಧ್ಯಮ
Hasana sex tape : ಚುನಾವಣೆ ಹೊಸ್ತಿಲಲ್ಲಿ ಹಾಸನ ಅಭ್ಯರ್ಥಿಯ ರಾಸಲೀಲೆಯ ಪೆನ್ ಡ್ರೈವ್ ಸೌಂಡ್ ! ಅಸಲಿಯ / ನಕಲಿಯ ತೀವ್ರ ಚರ್ಚೆ
ಹಾಸನ ಲೋಕಸಭಾ ಕ್ಷೇತ್ರದ ರಾಜಕೀಯ ಪಕ್ಷವೊಂದರ ಅಭ್ಯರ್ಥಿಯೊರು ಭಾಗಿಯಾಗಿದ್ದಾರೆ ಎನ್ನಲಾದ ನೂರಾರು ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ವೊಂದು ಇದೆ ಎಂಬ ಸುದ್ದಿ ಕ್ಷೇತ್ರದಾದ್ಯಂತ ಚುನಾವಣೆಯಲ್ಲಿ ಭಾರಿ ಸಂಚಲನ ಉಂಟು ಮಾಡಿದೆ. ಕೆಲ ಅಶ್ಲೀಲ ವಿಡಿಯೋ ಹಾಗೂ ಫೋಟೊಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇವು ಆ ಪೆನ್ ಡ್ರೈವ್ ಒಳಗಿನಿಂದ ಸೋರಿಕೆ ಮಾಡಲಾದ ಕ್ಲಿಪಿಂಗ್ ಗಳು ಎಂದು ಹೇಳಲಾಗುತ್ತಿದೆ.
ಚುನಾವಣೆ ಹೊಸ್ತಿಲಲ್ಲಿ , 3 ದಿನಗಳ ಹಿಂದೆಯಷ್ಟೆ ಈ ಪೆನ್ ಡ್ರೈವ್ ಚರ್ಚೆ ಮುನ್ನಲೆಗೆ ಬಂದಿದೆ. ಈ ವಿಡಿಯೋ ತುಣುಕುಗಳಲ್ಲಿ ಕೆಲವು ಸಂಘಟನೆಗಳಿಗೆ ಸೇರಿದ ಮಹಿಳೆಯರು, ಅಭ್ಯರ್ಥಿಯ ಪಕ್ಷದ ಮುಖಂಡರ ಪತ್ನಿಯರು ಇದ್ದಾರೆ. ಮನೆ ಕೆಲಸದ ಮಹಿಳೆಯರೂ ಇದ್ದಾರೆ ಎಂಬ ಚರ್ಚೆ ಬಿರುಸಿನಿಂದ ನಡೆದಿದೆ. ತನ್ನಲ್ಲಿ ಕೆಲಸ ಕೇಳಿ ಬಂದ ಯುವತಿಯರು ಹಾಗೂ ಮಹಿಳೆಯರನ್ನು ಆ ವ್ಯಕ್ತಿ ವಿಕೃತವಾಗಿ ಬಳಸಿಕೊಂಡಿದ್ದಾನೆ ಎಂಬ ಆರೋಪಗಳು ಕೇಳಿ ಬರುತ್ತಿವೆ.
ಆದರೇ ರಾಜಕಾರಣಿಯ ಬೆಂಬಲಿಗರು ಈ ಆರೋಪಗಳನ್ನು ನಿರಾಕರಿಸಿದ್ದು. ಅತ್ಯಾಧುನಿಕ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಈ ವಿಡಿಯೋಗಳನ್ನು ಎಂದು ಅಭ್ಯರ್ಥಿಯ ಬೆಂಬಲಿಗರು ಪೊಲೀಸ್ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದಾರೆ.
ಚುನಾವಣೆಯ ಪ್ರಚಾರದ ಭರಾಟೆ ಆರಂಭವಾಗಿ ಇಷ್ಟು ದಿನಗಳ ಬಳಿಕ ಇದೀಗ ಕೊನೆಯ ಹಂತದಲ್ಲಿ ಈ ರಾಸಲೀಲೆಯ ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಬಗ್ಗೆ ಚರ್ಚೆ ನಡೆಯುತ್ತಿರುವುದು ಕುತೂಹಲ ಮೂಡಿದ್ದು, ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದಾರೆ.
ಈ ಪೆನ್ಡ್ರೈನಲ್ಲಿ ಸುಮಾರು ಸಾವಿರಾರು ವಿಡಿಯೋಗಳಿವೆ ಎನ್ನಲಾಗುತ್ತಿದೆ. ಇದರಲ್ಲಿರುವ ಎನ್ನಲಾದ ಅಭ್ಯರ್ಥಿ ತನ್ನ ಬಳಿ ಸಹಾಯ ಕೇಳಿಕೊಂಡು ಬರುವ ಮಹಿಳೆಯರನ್ನು ತನ್ನ ಲೈಂಗಿಕ ತೃಷೆಗೆ ಬಳಸಿಕೊಳ್ಳುತ್ತಿದ್ದ. ಆ ಲೈಂಗಿಕ ಚಟುವಟಿಕೆಯನ್ನು ತಾನೇವಿಡಿಯೋ ಮಾಡಿಟ್ಟುಕೊಳ್ಳುತ್ತಿದ್ದ. ಈಗಾಗಲೇ ಕ್ಷೇತ್ರದ ಹಲವರು ಹಲವರು ಈ ಈ ವಿಡಿಯೋಗಳನ್ನು ನೋಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅದರ ತುಣುಕುಗಳು ಹರಿದಾಡುತ್ತಿವೆ.
ಈ ಹಿಂದೆ ಹಾಸನದ ವಕೀಲ ದೇವರಾಜೇಗೌಡ ಎಂಬುವವರು ಅಭ್ಯರ್ಥಿಯ ಹಲವು ಅಶ್ಲೀಲ ವಿಡಿ ಯೋಗಳು ತಮ್ಮ ಬಳಿ ಇವೆ ಎಂದು ಹೇಳಿಕೆ ನೀಡಿದ್ದರು. ಆದರೆ, ಇದೀಗ ಈ ವಿಡಿಯೋಗಳನ್ನು ತಾವು ಬಹಿರಂಗ ಗೊಳಿಸಿಲ್ಲ ಎಂದು ಸ್ಪಷ್ಟನೆಯನ್ನೂ ನೀಡಿದ್ದಾರೆ.
ಬಿಗ್ ನ್ಯೂಸ್
NOTAForSoujanyaCase : ಸೌಜನ್ಯ ಪ್ರಕರಣ : ಟ್ವಿಟರ್ ಟ್ರೆಂಡಿಂಗಲ್ಲಿ 3ನೇ ಸ್ಥಾನ ಪಡೆದ ನೋಟಾ ಅಭಿಯಾನ
ಮಂಗಳೂರು: 2012ರ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಇದೀಗ ಬಾರಿ ಸದ್ದು ಮಾಡುತ್ತಿದೆ.
ಸೌಜನ್ಯ ಪರ ಹೋರಾಟಗಾರರು ಎ.26ರಂದು ಜರಗುವ ಲೋಕಸಭಾ ಚುನಾವಣೆಯಲ್ಲಿ ನೋಟಾ ಮತದಾನದ ಅಭಿಯಾನ ಕೈಗೊಂಡಿದ್ದಾರೆ.
ಟ್ವಿಟರ್ (ಎಕ್ಸ್) ನಲ್ಲಿ #NOTAForSoujanyaCase ಎಂಬ ಟ್ರೆಂಡಿಂಗ್ 3ನೇ ಸ್ಥಾನ ಪಡೆದಿದೆ.
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ನೋಟಾ ಅಭಿಯಾನದ ಪರ ಪ್ರಚಾರ ಕಾರ್ಯವನ್ನು ಹೋರಾಟಗಾರರು ನಡೆಸುತ್ತಿದ್ದಾರೆ.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನೋಟಾ ಪರಿಣಾಮ ಯಾವಾ ರೀತಿ ಪಲಿತಾಂಶದ ಮೇಲೆ ಪರಿಣಾಮ ಬೀರಬಹುದೆಂಬ ಅಂಕಿಅಂಶ ಇನ್ನೂ ಕೂಡ ರಾಜಕೀಯ ಪಂಡಿತರಿಗೆ ಅಂದಾಜಿಸಲು ಸಾಧ್ಯವಾಗಿಲ್ಲ.
ಬಿಗ್ ನ್ಯೂಸ್
ಪದ್ಮರಾಜ್ ಆರ್ ಪೂಜಾರಿ ಬಿಲ್ಲವನಲ್ಲ – ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ – ಜಿಲ್ಲಾ ಕಾಂಗ್ರೆಸ್ ನಿಂದ ಪೊಲೀಸ್ ಕಮೀಷನರ್ ಗೆ ದೂರು
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಯವರ ಜಾತಿಯನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸುತ್ತಿದ್ದು ಇದರ ವಿರುದ್ದ , ಜಿಲ್ಲಾ ಕಾಂಗ್ರೆಸ್ ಮಂಗಳೂರು ಪೊಲೀಸ್ ಕಮೀಷನರ್ ಗೆ ದೂರು ನೀಡಿದೆ.
ಗಣೇಶ್ ಶೆಟ್ಟಿ ಎಂಬವರು ಯುವನಾಯಕ ಬ್ರಿಜೇಶ್ ಚೌಟ ಫೇಸ್ ಬುಕ್ ಪೇಜಿನಲ್ಲಿ ಹಾಗು ಡಾಕ್ಟರ್ಸ್ ಲೀವ್ ಸ್ಟೇಸ್ಟಸ್ ಗ್ರೂಫಿನಲ್ಲಿ ಸಂತೋಷ್ ಕುಮಾರ್ ಎಂಬಾತ ಅಪಪ್ರಚಾರ ನಡೆಸಿದ್ದಾನೆಂದು ದೂರಿನಲ್ಲಿ ಆರೋಪಿಸಲಾಗಿದೆ.
ಪದ್ಮರಾಜ್ ಆರ್ ಪೂಜಾರಿಯವರು ಬಿಲ್ಲವ ಸಮುದಾಯಕ್ಕೆ ಸೇರಿದವರಲ್ಲ. ಅವರು ಹಿಂದೂ ಯುವಕನ ಕೊಲೆ ಕೇಸಿನಲ್ಲಿ ಕೊಲೆ ಆರೋಪಿ ಪಿ ಎಫ್ ಐ ಕಾರ್ಯಕರ್ತನ ಪರ ವಕಾಲತ್ತು ವಹಿಸಿದ್ದಾರೆ ಇತ್ಯಾದಿ ಸುಳ್ಳು ಸುದ್ದಿಗಳನ್ನು ಒಳಗೊಂಡ ಪೋಸ್ಟ್ ವೊಂದನ್ನು ವಿರೋದಿಗಳು ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಹಂಚುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಆರೋಪಿಸಿದೆ.
ಈ ಹಿಂದೆ ಜನಾರ್ಧನ ಪೂಜಾರಿಯನ್ನು ಅನುಸರಿಸಿದ ಅಪಪ್ರಚಾರದ ತಂತ್ರವನ್ನೆ ಅವರ ಶಿಷ್ಯ ಪದ್ಮರಾಜ್ ವಿರುದ್ದವು ಅನುಸರಿಸುತ್ತಿದ್ದು, ಮತದಾರರು ಇದನ್ನು ಸೂಕ್ಷ್ಮವಾಗಿ ಗಮನಿಸಿ ಮುಂಬರುವ ಚುನಾವಣೆಯಲ್ಲಿ ಮತದಾನ ಮಾಡಬೇಕೆಂದು ಅದು ವಿನಂತಿಸಿದೆ.
-
ಪುತ್ತೂರು2 days ago
ಅರುಣ್ ಪುತ್ತಿಲ ಮನೆ ಬಳಿ ಅಣ್ಣಾಮಲೈಗೆ ಅದ್ದೂರಿ ಸ್ವಾಗತ
-
ದಕ್ಷಿಣ ಕನ್ನಡ2 days ago
ವಿಟ್ಲ : ದುರಸ್ತಿಗೆ ಬಾವಿಗಿಳಿದ ಇಬ್ಬರು ಅಮ್ಲಜನಕ ಕೊರತೆಯಿಂದ ಮೃತ್ಯು
-
ಅಪರಾಧ2 days ago
Everest fish curry-ಎವರೆಸ್ಟ್ ಫಿಶ್ಕರಿ ಮಸಾಲಾದಲ್ಲಿ ಎಥಿಲಿನ್ ಆಕ್ಸೆಡ್ ಪತ್ತೆ
-
ನಿಧನ ವಾರ್ತೆ1 day ago
Run over-ತಂದೆಯಿಂದಲೇ ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣ
-
ಬಿಗ್ ನ್ಯೂಸ್18 hours ago
NOTAForSoujanyaCase : ಸೌಜನ್ಯ ಪ್ರಕರಣ : ಟ್ವಿಟರ್ ಟ್ರೆಂಡಿಂಗಲ್ಲಿ 3ನೇ ಸ್ಥಾನ ಪಡೆದ ನೋಟಾ ಅಭಿಯಾನ
-
ಮಂಗಳೂರು2 days ago
Heat wave-ರಾಜ್ಯದಲ್ಲಿ ಇನ್ನೂ ಐದು ದಿನ ಉಷ್ಣ ಮಾರುತ ದಾಳಿ; ಕರಾವಳಿಯಲ್ಲಿ ಮುಂದುವರಿದ ಪ್ರಖರ ಬಿಸಿಲು
-
ದಕ್ಷಿಣ ಕನ್ನಡ1 day ago
ಬೆಲೆಯೆರಿಕೆ ಗಗನಕ್ಕೆರಿದ ಸಂದರ್ಭ ಸಿದ್ದರಾಮಯ್ಯ ಸರಕಾರ ಗ್ಯಾರಂಟಿ ಮೂಲಕ ಮಹಿಳೆಯರ ನೆರವಿಗೆ ನಿಂತಿದೆ : ಅನಿತಾ ಹೇಮನಾಥ ಶೆಟ್ಟಿ
-
Uncategorized2 days ago
ಮಠಂತಬೆಟ್ಟು ಗುಲಾಬಿ ಅನಂತ ರೈ ನಿಧನ