Connect with us

Uncategorized

‘ಮುಸ್ಲಿಮರನ್ನು ರಾಜ್ಯದಲ್ಲಿ ದ್ವೇಷದಿಂದ ಕಾಣಲಾಗುತ್ತಿದೆ’ ಎಂದು ಮುಖ್ಯಮಂತ್ರಿಗೆ ಪತ್ರ ಬರೆದ ದಕ್ಷಿಣ ಕನ್ನಡದ ಬಿಜೆಪಿ ನಾಯಕ..! ಸುಳ್ಯದ ಪ್ರಕರಣ ಉಲ್ಲೇಖ

Ad Widget

Ad Widget

Ad Widget

Ad Widget Ad Widget

ಬೆಂಗಳೂರು: ರಾಜ್ಯದಲ್ಲಿ ಮುಸ್ಲಿಮರನ್ನು ಅಗೌರವದಿಂದ ಕಾಣುವ ಜತೆಗೆ ಅವರಿಗೆ ಕಿರುಕುಳ ನೀಡಿ ಬೆದರಿಕೆ ಹಾಕಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಮತ್ತು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ಪತ್ರದಲ್ಲಿ ದೂರಿದ್ದಾರೆ.

Ad Widget

Ad Widget

Ad Widget

Ad Widget

Ad Widget

ಮುಸ್ಲಿಮರಿಗೆ ಖಬರಸ್ತಾನಕ್ಕೆ ಭೂಮಿ ಪಡೆಯುವುದೂ ಕಷ್ಟಕರವಾಗಿ ಪರಿಣಮಿಸಿದೆ ಎಂದು ಅವರು ವಿವರಿಸಿದ್ದಾರೆ. ಸುಳ್ಯ ತಾಲೂಕು ಸಂಪಾಜೆಯ ಗೂನಡ್ಕ ಗ್ರಾಮಪಂಚಾಯ್ತಿಯಲ್ಲಿ 20 ಗುಂಟೆ ಭೂಮಿಯನ್ನು ಬದ್ರಿಯಾ ಜುಮಾ ಮಸೀದಿಗೆ ಮಂಜೂರು ಮಾಡಿರುವ ನಿದರ್ಶನವನ್ನು ಅವರು ಉಲ್ಲೇಖಿಸಿದ್ದಾರೆ. ಕಂದಾಯ ಇಲಾಖೆ ಈ ಭೂಮಿಯನ್ನು ಮಸೀದಿಗೆ ಕೊಟ್ಟಿದ್ದರೂ ಅರಣ್ಯ ಇಲಾಖೆ ಅಲ್ಲಿರುವ ಮರಗಳನ್ನು ಕಡಿಯಲು ಅನುಮತಿ ಕೊಟ್ಟಿದೆ ಎಂದು ಅವರು ಹೇಳಿದ್ದಾರೆ.

Ad Widget

Ad Widget

“ನಮ್ಮ ಪಕ್ಷ ಹಾಗೂ ನಮ್ಮ ಸರ್ಕಾರ ಮುಸ್ಲಿಮರನ್ನು ಕಡೆಗಣಿಸುತ್ತಿದೆ ಮತ್ತು ಕೀಳಾಗಿ ಕಾಣುತ್ತಿದೆ ಎನ್ನುವುದಕ್ಕೆ ಇದು ಪುರಾವೆ ಎನಿಸದಿದ್ದರೆ, ಮುಸ್ಲಿಂ ಸಮುದಾಯವನ್ನು ತೀವ್ರ ಸಂಕಷ್ಟಕ್ಕೆ ತಳ್ಳುವ ಮೂಲಕ ನಿರ್ಲಕ್ಷಿಸುತ್ತಿರುವುದಕ್ಕೆ ಮತ್ತು ದ್ವೇಷದಿಂದ ಕಾಣುತ್ತಿರುವುದಕ್ಕೆ ನಿದರ್ಶನವಾಗಿ ಏನನ್ನು ನೀಡಲು ಸಾಧ್ಯ” ಎಂದು ಅವರು ಪ್ರಶ್ನಿಸಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

Ad Widget

Ad Widget

ವಕ್ಫ್ ಮಂಡಳಿಯ ಕಾರ್ಯವೈಖರಿಯ ವಿಚಾರದಲ್ಲಿ ಕೂಡಾ ಮಾಣಿಪ್ಪಾಡಿ, ಸರ್ಕಾರವನ್ನು ತರಾಟೆಗೆ ತೆಗದುಕೊಂಡಿದ್ದಾರೆ. “ಸರ್ಕಾರದ ಅನುದಾನವನ್ನು ಮತ್ತು ವಕ್ಫ್ ಆಸ್ತಿಗಳನ್ನು ಕಬಳಿಸಿದ ಆರೋಪ ಎದುರಿಸುತ್ತಿರುವ ಅಧಿಕಾರಿಗಳನ್ನು ಬೆಂಬಲಿಸುವ ಮೂಲಕ ಸರ್ಕಾರ ನಮ್ಮ ಸಮೃದ್ಧ ವಕ್ಫ್ ಮಂಡಳಿಯನ್ನು ಬಡತನಕ್ಕೆ ತಳ್ಳುತ್ತಿದೆ. ಇವರು ಖಚಿತವಾಗಿ ಮಂಡಳಿಯನ್ನು ಮತ್ತು ಸಂಪತ್ತನ್ನು ಲೂಟಿ ಮಾಡುತ್ತಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಸಬ್ಕಾ ಸಾಥ್ ಸಬ್ಕಾ ವಿಕಾಸ್ ತತ್ವವನ್ನು ರಾಜ್ಯ ಅನುಸರಿಸದಿರುವುದು ಖೇದಕರ ಎಂದು ಅವರು ಹೇಳಿದ್ದಾರೆ.

Ad Widget

Ad Widget

ಕರ್ನಾಟಕದ ಎಲ್ಲೆಡೆ ಮುಸ್ಲಿಮರು ಸಂಕಷ್ಟ ಅನುಭವಿಸುತ್ತಿದ್ದಾರೆ ಎನ್ನುವುದು ನಿಜಕ್ಕೂ ನೋವಿನ ಸಂಗತಿ ಎಂದಿದ್ದಾರೆ ಎಂದು ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.

ಸುರತ್ಕಲ್ ಹಿಂದೂ ಸಮಾಜೋತ್ಸವದಲ್ಲಿ ಬಾಲ ವಾಗ್ಮಿ ಕು|ಹಾರಿಕ ಮಂಜುನಾಥ್ ದಿಕ್ಸೂಚಿ ಭಾಷಣExclusive Video

Click to comment

Leave a Reply

Uncategorized

ಅಂಬಿಕಾ ವಿದ್ಯಾಲಯದಲ್ಲಿ ದಶಾಂಬಿಕೋತ್ಸವ ಸಮಾರೋಪ ಹಾಗೂ ಗುರುವಂದನಾ ಕಾರ್ಯಕ್ರಮ -ದೇಶ ಮತ್ತು ಧರ್ಮಕ್ಕಾಗಿ ಜೀವನ ಮುಡಿಪಾಗಿರಲಿ : ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು

Ad Widget

Ad Widget

Ad Widget

Ad Widget Ad Widget


ಪುತ್ತೂರು: ದೇಶ ಮತ್ತು ಧರ್ಮಕ್ಕಾಗಿ ನಾವು ನಮ್ಮ ಜೀವನ ನಡೆಸಬೇಕು. ದೇಶವನ್ನು ಬಿಟ್ಟು ಧರ್ಮವಾಗಲೀ, ಧರ್ಮವನ್ನು ಬಿಟ್ಟು ದೇಶವಾಗಲೀ ಇರುವುದಕ್ಕೆ ಸಾಧ್ಯವಿಲ್ಲ. ಅತ್ಯಂತ ಉತ್ಕೃಷ್ಟ ದೇಶ ಹಾಗೂ ಧರ್ಮದಲ್ಲಿ ನಾವು ಜನಿಸಿದ್ದೇವೆ ಎಂಬುದೇ ಹೆಮ್ಮೆ. ಹಾಗಾಗಿ ದೇಶ ಹಾಗೂ ಧರ್ಮ ಎರಡನ್ನೂ ಚೆನ್ನಾಗಿ ಇಟ್ಟುಕೊಂಡಾಗ ಮಾತ್ರ ನಮ್ಮ ಜನ್ಮ ಸಾರ್ಥಕಗೊಳ್ಳುತ್ತದೆ. ಮನುಷ್ಯ ಜನ್ಮ ಎನ್ನುವುದು ನಮಗೆ ದೊರಕುವ ಸುವರ್ಣಾವಕಾಶ. ಇದನ್ನು ವ್ಯರ್ಥ ಮಾಡಬಾರದು ಎಂದು ಶೃಂಗೇರಿಯ ಶ್ರೀ ಶಾರದಾ ಪೀಠಾಧೀಶ್ವರ ಶ್ರೀ ವಿಧುಶೇಖರ ಭಾರತಿ ಸನ್ನಿಧಾನಂಗಳವರು ಹೇಳಿದರು.

Ad Widget

Ad Widget

Ad Widget

Ad Widget

Ad Widget

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಹತ್ತನೆಯ ವರ್ಷಾಚರಣೆ ದಶಾಂಬಿಕೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಗುರುವಾರ ಆಶಿರ್ವಚನ ನೀಡಿದರು.

Ad Widget

Ad Widget

ನಮ್ಮಲ್ಲಿನ ನ್ಯೂನತೆಗಳನ್ನು ಯಾರಾದರೂ ಗುರುತಿಸಿದಲ್ಲಿ ಖೇದಪಡಬಾರದು. ಬದಲಾಗಿ ನಮ್ಮ ಮಿತಿಗಳನ್ನು ಮೀರಿ ನಿಲ್ಲುವ ಬಗೆಗೆ ಯೋಚಿಸಬೇಕು. ನಮ್ಮಲ್ಲಿನ ಕೆಟ್ಟ ಗುಣಗಳನ್ನು ಒಪ್ಪಿಕೊಳ್ಳುವ, ಅದನ್ನು ತಿದ್ದಿಕೊಳ್ಳುವ ಮನಃಸ್ಥಿತಿ ನಮ್ಮದಾಗಬೇಕು. ಹಾಗಾಗಿ ಪ್ರತಿಯೊಬ್ಬನೂ, ಪ್ರತಿದಿನವೂ ಆತ್ಮಾವಲೋಕನ ಮಾಡಿಕೊಳ್ಳಬೇಕು. ಬದಲಾಗಿ ನಮ್ಮ ಕೊರತೆಗಳನ್ನು ಮತ್ತೊಬ್ಬರು ಹೇಳಿದಾಗ ಅವಮಾನವೆಂದೆಣಿಸಿ ಸಿಟ್ಟಿಗೊಳಗಾದರೆ ನಮ್ಮ ವ್ಯಕ್ತಿತ್ವ ಸೌಂದರ್ಯ ಪಡೆದುಕೊಳ್ಳುವುದಿಲ್ಲ ಎಂದರು.

Ad Widget

Ad Widget

ಮನುಷ್ಯ ಜೀವನದಲ್ಲಿ ಅತ್ಯಂತ ಮುಖ್ಯವಾದದ್ದು ಜ್ಞಾನ ಸಂಪಾದನೆ. ಜ್ಞಾನಪೂರ್ವಕವಾಗಿ ಮಾಡುವ ಕಾರ್ಯಗಳೆಲ್ಲವೂ ಸಫಲವಾಗುತ್ತವೆ. ಮನುಷ್ಯನಿಗೆ ಬುದ್ಧಿ ಇದೆ ಎಂಬುದು ಹೌದಾದರೂ ಆ ಬುದ್ಧಿಗಳಲ್ಲಿ ವೈವಿಧ್ಯ ಕಾಣಬಹುದು. ಬುದ್ಧಿ, ಮತಿ, ಸ್ಮೃತಿ, ಪ್ರಜ್ಞಾ ಎಂಬುದು ಬುದ್ಧಿಯ ನಾನಾಮುಖಗಳು. ಇವೆಲ್ಲದರ ಆರ್ಜನೆಗೆ ವಿದ್ಯೆ ಅಗತ್ಯ. ದೇಹ, ಮನಸ್ಸಿನ ಆರೋಗ್ಯವಷ್ಟೇ ಅಲ್ಲ, ಮಾತಿನ ಆರೋಗ್ಯವೂ ಮನುಷ್ಯನಿಗೆ ಅತ್ಯಂತ ಅನಿವಾರ್ಯ. ನಮ್ಮಲ್ಲಿನ ಒಳ್ಳೆಯ ಗುಣಗಳನ್ನು ಉಳಿಸಿಕೊಂಡು ದುರ್ಗುಣಗಳನ್ನು ದೂರೀಕರಿಸಬೇಕು ಎಂದರು.

Ad Widget

Ad Widget

ಬುದ್ಧಿ ಹಾಗೂ ಮನಸ್ಸು ಸರಿಯಾಗಿದ್ದರೆ ವ್ಯಕ್ತಿಯೊಬ್ಬ ಒಳ್ಳೆಯದನ್ನೇ ಗುರುತಿಸುತ್ತಾನೆ. ಕೆಟ್ಟದ್ದರೆಡೆಗೆ ಗಮನ ಹರಿಸುವುದೇ ಇಲ್ಲ. ಆದರೆ ಎಲ್ಲೆಡೆಯಲ್ಲೂ ಒಳ್ಳೆಯದನ್ನು ಮಾತ್ರ ಗುರುತಿಸಿ ಕೆಟ್ಟದ್ದರೆಡೆಗೆ ಬುದ್ಧಿಪೂರ್ವಕವಾಗಿ ನಿರ್ಲಕ್ಷ್ಯವಹಿಸಬೇಕಾದರೆ ಅತ್ಯುತ್ತಮ ಮನಸ್ಸು ವ್ಯಕ್ತಿಯದ್ದಾಗಿರಬೇಕು. ಆದ್ದರಿಂದ ಎಲ್ಲದಕ್ಕೂ ಮೂಲ ನಮ್ಮ ಮನಸ್ಸೇ ಆಗಿದೆ. ಅಂತೆಯೇ ಶರೀರವೆಂಬ ರಥಕ್ಕೆ ಬುದ್ಧಿಯೇ ಸಾರಥಿ. ಹಾಗಾಗಿ ಬುದ್ಧಿ ನಮ್ಮ ಹತೋಟಿಯಲ್ಲಿರಬೇಕು, ಆ ಬುದ್ಧಿಗೆ ಸರಿಯಾದ ಸಂಸ್ಕಾರ ಬೇಕು. ಈ ವಿಚಾರಗಳನ್ನು ಉಪನಿಷತ್ ನಮಗೆ ಬೋಧಿಸುತ್ತದೆ ಎಂದರು

ಈ ಸಂದರ್ಭದಲ್ಲಿ ಗುರುವಂದನಾ ಸಮಿತಿ ಹಾಗೂ ದಶಾಂಬಿಕೋತ್ಸವ ಸಮಿತಿಯ ವತಿಯಿಂದ ಪ್ರತ್ಯೇಕವಾಗಿ ಶ್ರೀ ವಿಧುಶೇಖರ ಭಾರತಿ ಸನ್ನಿಧಾನಂಗಳವರಿಗೆ ಫಲಸಮರ್ಪಣೆ, ಸ್ಮರಣಿಕೆ ಹಾಗು ಬಿನ್ನವತ್ತಳೆ ಸಮರ್ಪಿಸಿ, ಅಭಿವಂದಿಸಲಾಯಿತು. ದಶಾಂಬಿಕೋತ್ಸವ ಪ್ರಯುಕ್ತ ರೂಪುಗೊಳಿಸಲಾದ ಸ್ಮರಣ ಸಂಚಿಕೆ ‘ಭೂಮಿಕಾ’ವನ್ನು ಜಗದ್ಗುರುಗಳು ಅನಾವರಣಗೊಳಿಸಿ ಹರಸಿದರು. ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಆರಂಭದಿಂದಲೂ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಮಾಲತಿ ಶೆಟ್ಟಿ, ಅಂಬಿಕಾ ಪದವಿಪೂರ್ವ ವಿದ್ಯಾಲಯದ ಆರಂಭದಿಂದಲೂ ಉಪನ್ಯಾಸಕರಾಗಿರುವ ಪ್ರದೀಪ್ ಕೆ.ವೈ, ದಿನೇಶ್ ಕುಮಾರ್, ಶೈನಿ, ಪುಷ್ಪಲತಾ, ಜಯಂತಿ ಹಾಗೂ ಸಂಸ್ಥೆಯ ಉದ್ಯೋಗಿ ರವಿಚಂದ್ರ ಅವರನ್ನು ಆಡಳಿತ ಮಂಡಳಿ ವತಿಯಿಂದ ಗುರುಗಳ ಸಮ್ಮುಖದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.

ದಶಾಂಬಿಕೋತ್ಸವ ಸಮಿತಿಯ ಅಧ್ಯಕ್ಷ ಮಹೇಶ್ ಕಜೆ ಹತ್ತನೆಯ ವರ್ಷದ ನೆಲೆಯಲ್ಲಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾದ ವಿವಿಧ ಕಾರ್ಯಕ್ರಮಗಳ ಬಗೆಗೆ ಬೆಳಕು ಚೆಲ್ಲಿದರು. ದಶಾಂಬಿಕೋತ್ಸವದ ನೆಲೆಯಲ್ಲಿ ಹೆತ್ತವರೆಲ್ಲರೂ ಸೇರಿ ಸಂಸ್ಥೆಗಾಗಿ ಒಟ್ಟು ಸೇರಿಸಿದ ದತ್ತಿನಿಧಿಯನ್ನು ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಅವರಿಗೆ ಹಸ್ತಾಂತರಿಸಲಾಯಿತು.

ಅಂಬಿಕಾ ವಿದ್ಯಾಲಯ ಬೆಳೆದು ಬಂದ ಹಾದಿ, ಶೃಂಗೇರಿ ಜಗದ್ಗುರುಗಳ ಕೃಪಾಶೀರ್ವಾದಗಳ ಬಗೆಗೆ ಅಂಬಿಕಾ ವಿದ್ಯಾಲಯದ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ವಿಸ್ತರಿಸಿ ಹೇಳಿದರು. ಅಂತೆಯೇ ಸಂಸ್ಥೆಯ ಕುರಿತಾಗಿ ಸಿದ್ಧಪಡಿಸಲಾದ ವೀಡಿಯೋ ಚಿತ್ರಿಕೆಯನ್ನು ಪ್ರದರ್ಶಿಸಲಾಯಿತು.

ಅಂಬಿಕಾ ಮಹಾವಿದ್ಯಾಲಯದ ತತ್ತ÷್ವಶಾಸ್ತç ವಿಭಾಗದ ಮುಖ್ಯಸ್ಥ ವಿದ್ವಾನ್ ತೇಜಶಂಕರ ಸೋಮಯಾಜಿ ಅಭಿವಂದನಾ ನುಡಿಗಳನ್ನಾಡಿ, ಬಿನ್ನವತ್ತಳೆ ವಾಚಿಸಿದರು. ಗುರುವಂದನಾ ಸಮಿತಿ ಅಧ್ಯಕ್ಷ ಶಶಾಂಕ್ ಕೊಟೇಚಾ ಸ್ವಾಗತಿಸಿದರು. ಕಾರ್ಯದರ್ಶಿ ಬಿ. ಐತ್ತಪ್ಪ ನಾಯ್ಕ್ ವಂದಿಸಿದರು. ಉಪನ್ಯಾಸಕ ಆದರ್ಶ ಗೋಖಲೆ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿ ಶ್ರೀಕೃಷ್ಣ ನಟ್ಟೋಜ ಶಂಖನಾದಗೈದರು. ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳು ಶಂಕರಾಚಾರ್ಯ ವಿರಚಿತ ಪ್ರಾತಃಸ್ಮರಾಮಿ ಶ್ಲೋಕವನ್ನು ಪ್ರಸ್ತುತಪಡಿಸಿದರು.

ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಂದ ವೇದಘೋಷ ನಡೆಯಿತು. ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾರ್ಥಿಗಳು ಪ್ರಾರ್ಥಿಸಿದರು.
ಸಭಾಕಾರ್ಯಕ್ರಮದ ಬಳಿಕ ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳು ಹಾಗೂ ಅಂಬಿಕಾ ಮಹಾವಿದ್ಯಾಲಯದ ವತಿಯಿಂದ ಜಗದ್ಗುರುಗಳಿಗೆ ಫಲಸಮರ್ಪಣೆ ನಡೆಯಿತು. ಬಳಿಕ ಸಮಾಜದ ವಿವಿಧ ಸಮುದಾಯಗಳ ವತಿಯಿಂದ ಫಲಸಮರ್ಪಣೆ ವಸ್ತç ಸಮರ್ಪಣೆ ನಡೆಯಿತು. ಸಭಾಕಾರ್ಯಕ್ರಮದ ಪೂರ್ವದಲ್ಲಿ ಜಗದ್ಗುರುಗಳಿಗೆ ಪೂರ್ಣಕುಂಭ ಸ್ವಾಗತ ಕೋರಲಾಯಿತು.


ಸರಸ್ವತೀ ಹೋಮ: ಗುರುವಾರ ಬೆಳಗ್ಗೆ 6 ಗಂಟೆಯಿಂದ ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ಸರಸ್ವತೀ ಹೋಮವನ್ನು ವೇ.ಮೂ.ಪರಕ್ಕಜೆ ಅನಂತನಾರಾಯಣ ಭಟ್ಟರ ನೇತೃತ್ವದಲ್ಲಿ ನಡೆಸಲಾಯಿತು. ಪೂರ್ಣಾಹುತಿಯ ಸಂದರ್ಭದಲ್ಲಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ದಿವ್ಯಸಾನ್ನಿಧ್ಯವನ್ನೊದಗಿಸಿ ಹರಸಿದರು.

ಜಗದ್ಗುರುಗಳ ಆಗಮನ ಹಾಗೂ ಶ್ರೀ ಚಂದ್ರಮೌಳೀಶ್ವರ ಪೂಜೆ:

ಬುಧವಾರ ಇಳಿಸಂಜೆ ಸುಮಾರು 7.15ರ ಹೊತ್ತಿಗೆ ಪೋಳ್ಯದ ಬಳಿ ಜಗದ್ಗುರುಗಳಿಗೆ ಶ್ರೀಕೃಷ್ಣ ನಟ್ಟೋಜ ಅವರು ಫಲಸಮರ್ಪಿಸಿ ಬರಮಾಡಿಕೊಂಡರು. ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದ ಬಳಿ ಪೂರ್ಣಕುಂಭ ಸ್ವಾಗತ ಹಾಗೂ ಫಲ ಸಮರ್ಪಣೆ ನಡೆಯಿತು. ತದನಂತರ ಜಗದ್ಗುರುಗಳಿಂದ ಶ್ರೀ ಚಂದ್ರಮೌಳೀಶ್ವರ ಪೂಜೆ ನೆರವೇರಿತು. ಈ ಎಲ್ಲಾ ಸಂದರ್ಭಗಳಲ್ಲೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಆಡಳಿತ ಮಂಡಳಿ ಸದಸ್ಯರು, ವಿವಿಧ ಅಂಬಿಕಾ ವಿದ್ಯಾಸಂಸ್ಥೆಗಳ ಪ್ರಾಚಾರ್ಯರು, ಬೋಧಕ-ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು, ಗುರುವಂದನಾ ಸಮಿತಿ ಸಲಹೆಗಾರರಾದ ಎನ್.ಕೆ.ಜಗನ್ನಿವಾಸ ರಾವ್, ಮುಳಿಯ ಕೇಶವ ಪ್ರಸಾದ್, ಅಧ್ಯಕ್ಷ ಶಶಾಂಕ್ ಕೊಟೇಚಾ, ಪ್ರಧಾನ ಕಾರ್ಯದರ್ಶಿ ಐತ್ತಪ್ಪ ನಾಯ್ಕ್, ಖಜಾಂಜಿ ಸತೀಶ್ ರಾವ್, ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಬೋರ್ಕರ್ ದಶಾಂಬಿಕೋತ್ಸವ ಸಮಿತಿ ಅಧ್ಯಕ್ಷ ಮಹೇಶ್ ಕಜೆ, ಎರಡೂ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಸಮಿತಿ ಪದಾಧಿಕಾರಿಗಳು, ಅಂಬಿಕಾ ವಿದ್ಯಾಲಯದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಸೀಮಾನಾಗರಾಜ್, ಸಂಸ್ಥೆಯ ಪ್ರಾಂಶುಪಾಲೆ ಮಾಲತಿ ಡಿ ಮತ್ತಿತರರು ಹಾಜರಿದ್ದರು.

ಶ್ರೀರಾಮ ಜನ್ಮಭೂಮಿಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಸಂದರ್ಭದಲ್ಲಿ ಶೃಂಗೇರಿ ಜಗದ್ಗುರುಗಳ ಸೂಚನೆಯಂತೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿAದ ಸುಮಾರು 75 ಲಕ್ಷದಷ್ಟು ರಾಮ ತಾರಕ ಜಪ ಮಹಾಯಜ್ಞವನ್ನು ಕೈಗೊಳ್ಳಲಾಗಿತ್ತು. ಸಂಸ್ಥೆಯ ವಿದ್ಯಾರ್ಥಿಗಳು ನೂರಾರು ದಿನಗಳ ಕಾಲ ಶ್ರೀ ರಾಮ ಜಯರಾಮ ಜಯಜಯರಾಮ ಮಂತ್ರವನ್ನು ಪಠಿಸಿದ್ದರು. ಈ ನೆಲೆಯಲ್ಲಿ ಜಗದ್ಗುರು ಶ್ರೀ ವಿಧುಶೇಖರ ಭಾರತಿ ಸನ್ನಿಧಾನಂಗಳವರಿಗೆ ಅಂಬಿಕಾ ವಿದ್ಯಾಲಯದ ದಶಮಾನೋತ್ಸವದ ಪ್ರಯುಕ್ತ ಶ್ರೀರಾಮ ಮಂದಿರದ ಸ್ವರ್ಣ ಮಾದರಿಯನ್ನು ಸಮರ್ಪಿಸಲಾಯಿತು.

Continue Reading

Uncategorized

ಮಠಂತಬೆಟ್ಟು ಗುಲಾಬಿ ಅನಂತ ರೈ  ನಿಧನ

Ad Widget

Ad Widget

Ad Widget

Ad Widget Ad Widget

 ಕೋಡಿಂಬಾಡಿ ಮಠಂತಬೆಟ್ಟು  ಗುಲಾಬಿ ಅನಂತ ರೈ(88) ಯವರು ವಯೋಸಹಜ,ಅಲ್ಪಕಾಲದ ಅಸೌಖ್ಯದಿಂದಾಗಿ ಇಂದು (ಏ 23 ರಂದು ) ನಿಧನರಾದರು.    ಇವರು ಮಠಂತಬೆಟ್ಟು  ದೀ. ಪಟೇಲ್ ಅನಂತ ರೈಯವರ ಧರ್ಮಪತ್ನಿ.

Ad Widget

Ad Widget

Ad Widget

Ad Widget

Ad Widget

 ಮೃತರು ಹಲವು ದಶಕಗಳ ಹಿಂದೆ  ಕೋಡಿಂಬಾಡಿ ಪಂಚಾಯತ್ ಪ್ರತಿನಿಧಿಯಾಗಿದ್ದರು,ಕೋಡಿಂಬಾಡಿ ವನಿತಾ ಸಮಾಜದ ಸ್ಥಾಪಕ ಸದಸ್ಯರಾಗಿದ್ದು,ಧಾರ್ಮಿಕ, ಶೈಕ್ಷಣಿಕ, ಸಾರ್ವಜನಿಕ ಕ್ಷೇತ್ರದಲ್ಲಿ ಜನಾನುರಾಗಿಯಾಗಿದ್ದರು.  

Ad Widget

Ad Widget

ದಕ್ಷಿಣ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾದ ಮುರಳೀಧರ ರೈ ಮಠಂತಬೆಟ್ಟು, ಪುತ್ತೂರು ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯರಾದ ನಿರಂಜನ ರೈ ಮಠಂತಬೆಟ್ಟು,ಮತ್ತು ಕೃಷಿಕರಾದ ರಾಜಮಣಿ ರೈ ಯೆಂಬ ಮೂರು ಗಂಡು ಮಕ್ಕಳು, ಎರಡು ಹೆಣ್ಣು ಮಕ್ಕಳು ಹಾಗೂ ಅಳಿಯ, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿರುವರು.
ನಾಳೆ (ಏ 24 ರಂದು) ಸ್ವಗೃಹ ಮಠಂತಬೆಟ್ಟು ಮನೆಯಲ್ಲಿ ಅಂತ್ಯ ಸಂಸ್ಕಾರ ವಿಧಿವಿಧಾನ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.

Ad Widget

Ad Widget
Continue Reading

Uncategorized

ಸಂತೋ಼ಷ  ವೈವಿಧ್ಯಮಯ ಮಿನುಗುವ ಚಿನ್ನದ ಹಬ್ಬ- ಮುಳಿಯ ಚಿನ್ನೋತ್ಸವಕ್ಕೆ ಚಾಲನೆ – ಹೊಸ ವಿನ್ಯಾಸಗಳನ್ನು ಅನಾವರಣ

Ad Widget

Ad Widget

Ad Widget

Ad Widget Ad Widget

ಪುತ್ತೂರು: 24 ವರ್ಷಗಳ ಹಿಂದೆ ವಜ್ರರತ್ನಗಳ ಪ್ರದರ್ಶನ ಹಬ್ಬದ ಮೂಲಕ ಗ್ರಾಹಕರಿಗೆ ಹತ್ತಿರವಾದ ಪ್ರಸಿದ್ದ ಚಿನ್ನಾಭರಣ ಮಳಿಗೆ ಪುತ್ತೂರಿನ ಮುಳಿಯ ಜ್ಯುವೆಲ್ಸ್ ನಲ್ಲಿ ಪ್ರತಿ ವರ್ಷ ಮುಳಿಯ ಚಿನ್ನೋತ್ಸವ  ಆಯೋಜಿಸಲಾಗಿದ್ದು, ಈ ಬಾರಿಯ ಚಿನ್ನದ ಹಬ್ಬ ” ಮುಳಿಯ ಚಿನ್ನೋತ್ಸವ” ಕ್ಕೆ ಎ.22 ರಂದು ಚಾಲನೆ ನೀಡಲಾಯಿತು.

Ad Widget

Ad Widget

Ad Widget

Ad Widget

Ad Widget

ಮೇ 20ರ ತನಕ ನಡೆಯುವ ಈ ಚಿನ್ನೋತ್ಸವವನ್ನು ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್‌ ನ  ಪ್ರೊ. ಡಾ. ಸೌಮ್ಯ ಅವರು ಉದ್ಘಾಟಿಸಿ ಚಾಲನೆ ನೀಡಿದರು. ಬಳಿಕ ಚಿನ್ನಾಭರಣದ ಹೊಸ ವಿನ್ಯಾಸಗಳನ್ನು ಅನಾವರಣಗೊಳಿಸಿದರು.

Ad Widget

Ad Widget

ಆಭರಣದಲ್ಲಿ ಹೊಸ ವಿನ್ಯಾಸದ ಆಕಾಂಕ್ಷೆಯನ್ನು ಮುಳಿಯ ಪೂರೈಸುತ್ತಿದೆ:

Ad Widget

Ad Widget

ಮುಳಿಯ ಚಿನ್ನೋತ್ಸವವನ್ನು ಉದ್ಘಾಟಿಸಿದ ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ ಇದರ ಪ್ರೊ. ಡಾ. ಸೌಮ್ಯ ಅವರು ಮಾತನಾಡಿ ನನ್ನ ಸುಮಾರು 30 ವರ್ಷದ ಅನುಭವದಲ್ಲಿ ಮುಳಿಯ ಜ್ಯುವೆಲ್ಸ್ನೊಂದಿಗೆ ಉತ್ತಮ ಸಂಬಂಧವಿದೆ. ಯಾಕೆಂದರೆ ನಮ್ಮ ಕುಟುಂಬ ಸಮೇತ ಇಲ್ಲಿನ ಗ್ರಾಹಕರಾಗಿದ್ದೇವೆ. ಇದಕ್ಕೆ ಕಾರಣ ಮುಳಿಯ ನಂಬಿಕೆಯನ್ನು ಉಳಿಸಿಕೊಂಡಿದೆ. ಇದರೊಂದಿಗೆ ಪ್ರತಿಯೊಬ್ಬರಿಗೂ ನನ್ನ ಆಭರಣ ಇತರರಿಗಿಂತ ಭಿನ್ನ ಹೊಸತನ ಹೊಸ ಶೈಲಿಯಲ್ಲಿರಬೇಕೆಂಬ ಆಸೆ ಇರುತ್ತದೆ. ಅದಕ್ಕೆ ತಕ್ಕಂತೆ ಮುಳಿಯ ಜ್ಯುವೆಲ್ಸ್ ಆ ಹೊಸತನದ ಆಕಾಂಕ್ಷೆಯನ್ನು ಪೂರೈಸುತ್ತಿದೆ ಎಂದ ಅವರು ಇದರ ಜೊತೆಗೆ ಸಿಬ್ಬಂದಿಗಳ ನಗುಮೊಗದ ಸೇವೆ ನಾವು ಚಿನ್ನಾಭರಣ ನೋಡಲು ಬಂದವರು ಖರೀದಿಸುವಷ್ಟರ ಮಟ್ಟಿಗೆ ಹೋಗುತ್ತೇವೆ ಎಂದರು.

Ad Widget

Ad Widget

ಚಿನ್ನೋತ್ಸವದಿಂದ ಗ್ರಾಹಕರಿಗೆ ಹೆಚ್ಚಿನ ಆಯ್ಕೆ ಲಭ್ಯ:

ಮುಳಿಯ ಜ್ಯುವೆಲ್ಸ್‌ʼನ  ಆಡಳಿತ ನಿರ್ದೇಶಕ ಕೃಷ್ಣನಾರಾಯಣ ಮುಳಿಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ “ ಉತ್ಸವಗಳನ್ನು ಪುತ್ತೂರಿಗೆ ಪರಿಚಯಿಸಿದ್ದು ಮುಳಿಯದ ವಿಶೇಷತೆ. ಹಿಂದೆ ಗ್ರಾಹಕರು ಹೊಸ  ಶೈಲಿಯ ಚಿನ್ನಾಭರಣ ನೋಡುವ ಆಸೆ ಇದ್ದರೂ ಅದನ್ನು ನೋಡಲು ಬರುತ್ತಿರಲಿಲ್ಲ. ಯಾಕೆಂದರೆ ಅಲ್ಲಿಗೆ ಹೋದರೆ ಏನಾದರೂ ಒಂದು ತೆಗೆದು ಕೊಳ್ಳಬೇಕಾದಿತು ಎಂಬ ಮನೋಭಾವನೆ ಇತ್ತು. ಈ ಕುರಿತು ಅರಿತ ಮುಳಿಯ ಸಂಸ್ಥೆ 2000 ಇಸವಿಯಲ್ಲಿ ಪ್ರಥಮವಾಗಿ ವಜ್ರೋತ್ಸವ ಎಂಬ ಪ್ರದರ್ಶನವನ್ನು ಮುಳಿಯದಲ್ಲಿ  ಆರಂಭಿಸಲಾಯಿತು. ಈ ಪ್ರದರ್ಶನ ಚಿನ್ನದಾಭರಣ ನೋಡುವ ಗ್ರಾಹಕರಿಗೆ ಅನುಕೂಲವಾಯಿತು” ಎಂದರು.  

ಇದೀಗ ಅದನ್ನು ಪ್ರತಿ ವರ್ಷ ಎರಡು ಬಾರಿ ಆಚರಿಸುತ್ತಾ ಬಂದಿದ್ದೇವೆ. ಈ ಚಿನ್ನೋತ್ಸವದಲ್ಲಿ ಗ್ರಾಹಕರಿಗೆ ಹೆಚ್ಚಿನ ಆಯ್ಕೆ ಸಿಗುತ್ತಿದೆ. ಸೇವೆಗಳು ಉತ್ತಮವಾಗಿರುತ್ತದೆ. ಪ್ರತಿಭಾರಿ ಹೊಸತನವನ್ನು ಪರಿಚಯಿಸುವುದು ನಮ್ಮ ವಿಶೇಷ. ಅದನ್ನು ಈ ಭಾರಿಯೂ ಮಾಡಿದ್ದೇವೆ.  ಈ ಭಾರಿಯೂ 4 ವಿಶೇಷ ಹೊಸ ಶೈಲಿ ಆಭರಣವನ್ನು ಗ್ರಾಹಕರಿಗೆ ಪರಿಚಯ ಮಾಡಲಿದ್ದೇವೆ. ಹಾಗಾಗಿ ಗ್ರಾಹಕರು ಈ ಚಿನ್ನೋತ್ಸವದ ಪ್ರಯೋಜವನ್ನು ಪಡೆಯುವಂತೆ ವಿನಂತಿಸಿದರು.

ಮುಳಿಯ ಸಂಸ್ಥೆಯ ನಿರ್ದೇಶಕಿ ಅಶ್ವಿನಿ ಕೃಷ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸೌಮ್ಯ ಅತಿಥಿಯನ್ನು ಗೌರವಿಸಿದರು. ಕು.ಪೂಜಿತಾ ಪ್ರಾರ್ಥಿಸಿದರು. ಸಹಪ್ರಭಂದಕ ಯತೀಶ್ ಸ್ವಾಗತಿಸಿದರು. ಪ್ಲೋರ್ ಮೆನೆಜರ್ ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು. ಆನಂದ ಕುಲಾಲ್ ವಂದಿಸಿದರು. ಪ್ರಬಂಧಕ ರಾಘವೇಂದ್ರ ಪಾಟೀಲ್, ಪ್ರೊಡಕ್ಟ್ ಮೆನೇಜರ್ ಪ್ರಶಾಂತ್, ಮಾರುಕಟ್ಟೆ ಪ್ರಬಂಧಕ ಸಂಜೀವ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಸಿಬ್ಬಂದಿ ಮಹೇಂದ್ರ ಸಹಕರಿಸಿದರು.

Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading