ಅಪರಾಧ
Sex Racket exposed : ತಂದೆ ಮಗ ಮತ್ತು ಸೊಸೆ ಸೇರಿ ನಡೆಸುತ್ತಿದ್ದರು ದೇಹ ವ್ಯಾಪಾರ – ಮುಂಬೈ, ಪುಣೆಯಿಂದ ಕರೆಸಿ Online ಮೂಲಕ ದಂಧೆ
(ಜಬಲ್ಪುರ : MP Jabalpur ) ಮಧ್ಯಪ್ರದೇಶದ ಜಬಲ್ಪುರ ಸಮೀಪದ ಜಸುಜಾ ನಗರದ ಬಳಿಯ ವೇಶ್ಯಾಗೃಹಕ್ಕೆ ಸ್ಥಳೀಯ ಪೊಲೀಸರ ತಂಡ ಅ 16 ರಂದು ದಾಳಿ ನಡೆಸಿದ್ದು 10 ಜನರನ್ನು ಬಂಧಿಸಿದ್ದಾರೆ. ಆದರೇ ಈ ದಾಳಿಯ ವೇಳೆ ಆಘಾತಕಾರಿ ವಿಚಾರವೊಂದು ಹೊರ ಬಿದ್ದಿದೆ. ತಂದೆ, ಮಗ ಮತ್ತು ಸೊಸೆ ಸೇರಿ ಈ ವೇಶ್ಯಾವಾಟಿಕೆ(Prostitution) ವ್ಯವಹಾರ ನಡೆಸುತ್ತಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ.
ಈ ವೇಶ್ಯಾಗೃಹಕ್ಕೆ (brothel) ಮುಂಬೈ ಮತ್ತು ನಾಗ್ಪುರದಿಂದ ಯುವತಿಯರನ್ನು ಕರೆಸಲಾಗುತಿತ್ತು. ಸೊಸೆ ಈ ದಂಧೆಯ ಕಿಂಗ್ ಪಿನ್ ಆಗಿದ್ದಳು. ಆಕೆ ಆನ್ಲೈನ್ ಮೂಲಕ ಗ್ರಾಹಕರನ್ನು ಸೆಳೆಯುತ್ತಿದ್ದಳು. ಅತ್ಯಂತ ಗುಪ್ತವಾಗಿ ಯಾರಿಗೂ ಗೊತ್ತಾಗದಂತೆ ನಡೆಯುತ್ತಿದ ಈ ಚಟುವಟಿಕೆ ಸ್ಥಳೀಯ ಸಂಜೀವಿನಿ ಠಾಣೆ ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿತು. ಹೀಗಾಗಿ ಪೊಲೀಸ್ ಇನ್ಸ್ಪೆಕ್ಟರ್ ಗ್ರಾಹಕನ ಸೋಗಿನಲ್ಲಿ ತೆರಳಿ ಈ ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ.
ಮೊದಲಿಗೆ ಆ ಇನ್ಸ್ ಪೆಕ್ಟರ್ ಅನ್ ಲೈನ್ ಮೂಲಕ ಸೊಸೆಯನ್ನು ಸಂಪರ್ಕಿಸಿದ್ದಾರೆ. ವ್ಯವಹಾರ ಕುದುರಿದ ಬಳಿಕ ಆ ಮಹಿಳೆ ವೇಶ್ಯಾಗೃಹದ ವಿಳಾಸ ನೀಡಿದ್ದಾಳೆ. ಅದರಂತೆ ಅವರು ವೇಶ್ಯಾಗೃಹಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಆರೋಪಿಗಳಾದ , ಕೃಷ್ಣ ಕುಮಾರ್ ದುಬೆ (ತಂದೆ) , ಸುನಿಲ್ ಕುಮಾರ್ ದುಬೆ ( ಮಗ) ಹಾಗೂ ಸೊಸೆ ಮತ್ತು ಇತರ ಮೂವರು ಹಾಸಿಗೆಯಲ್ಲಿ ಕುಳಿತಿದ್ದರು. ಅಲ್ಲಿ ಯುವತಿಯರನ್ನು ಪ್ರದರ್ಶಿಸಿದ ಪಿಂಪ್ ಗಳು ಪ್ರತಿ ಯುವತಿಯ ರೇಟ್ ತಿಳಿಸಿದ್ದಾರೆ. ಈ ವೇಳೆ ಓರ್ವ ಯುವತಿಯನ್ನು ಪೊಲೀಸ್ ಅಧಿಕಾರಿ ಸೆಲೆಕ್ಟ್ ಮಾಡಿದ್ದು ರೂ 2000 ರೂಪಾಯಿ ನೀಡುವಂತೆ ಆರೋಪಿಗಳು ತಿಳಿಸಿದ್ದಾರೆ. ಅದರಂತೆ ಪೊಲೀಸ್ ಇನ್ಸ್ ಪೆಕ್ಟರ್ ಮೊದಲೇ ಸಹಿ ಹಾಕಿ ತಂದಿದ್ದ 2000 ರೂಪಾಯಿಯನ್ನು ಪಾವತಿಸಿದ್ದಾರೆ.
ಬಳಿಕ ಯುವತಿಯ ಜತೆ ಅವರು ಕೋಣೆಗೆ ಹೋಗಿದ್ದು, ಅಲ್ಲಿ ಇನ್ನಿಬ್ಬರು ಯುವಕರು ಹಾಗೂ ಯುವತಿಯರು ಆಕ್ಷೇಪಾರ್ಹ ಭಂಗಿಯಲ್ಲಿ ಮಂಚದಲ್ಲಿದ್ದರು . ಕೂಡಲೇ ಪೊಲೀಸ್ ಅಧಿಕಾರಿ ತಮ್ಮ ತಂಡಕ್ಕೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಹೊರಗಡೆ ಅಡಗಿ ಕೂತಿದ್ದ ಪೊಲೀಸರ ತಂಡ ಮಿಂಚಿನ ದಾಳಿ ನಡೆಸಿದೆ. ಆಕ್ಷೇಪಾರ್ಹ ಭಂಗಿಯಲ್ಲಿದ್ದ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ
ಅಲ್ಲಿದ್ದ ಇಬ್ಬರು ಯುವತಿಯರು ಮುಂಬೈ ಮತ್ತು ನಾಗ್ಪುರದ ನಿವಾಸಿಗಳಾಗಿದ್ದರು. ಅವರನ್ನು ದೇಹ ವ್ಯಾಪಾರದ ಉದ್ದೇಶದಿಂದ ಮಹಾರಾಷ್ಟ್ರದಿಂದ ಜಬಲ್ಪುರಕ್ಕೆ ಕರೆಸಲಾಗಿತು. ಶೋಧ ನಡೆಸಿದಾಗ, ಆರೋಪಿಗಳ ಬಳಿ 2,000 ರೂ.ಗಳಿರುವುದು ಪತ್ತೆಯಾಗಿದೆ, ಅದರಲ್ಲಿ ತಲಾ 500 ರೂ.ಗಳ ನಾಲ್ಕು ಸಹಿ ಮಾಡಿದ ನೋಟುಗಳಿದ್ದವು. ಸೊಸೆಯ ಬಳಿ ಮೊಬೈಲ್ ಫೋನ್ ಪತ್ತೆಯಾಗಿದೆ. ವಿಚಾರಣೆ ವೇಳೆ , “ಅನೇಕ ಗ್ರಾಹಕರು ಆನ್ಲೈನ್ನಲ್ಲಿ ಹಣ ಪಾವತಿಸುತ್ತಿದ್ದರು” ಎಂದು ಸೊಸೆ ಬಾಯ್ಬಿಟ್ಟಿದ್ದಾಳೆ.
Whatsapp: ಡಿಲಿಟ್ ಆದ ಮೇಸಜ್ ರಿಕವರಿ ಮಾಡಲು ಬಿಡುಗಡೆಗೊಳಿಸುತ್ತಿದೆ ಹೊಸ ಫೀಚರ್ – ಇಲ್ಲಿದೆ ಅದರ ಮಾಹಿತಿ
ಸೊಸೆಯ ಮೊಬೈಲ್ ಫೋನ್ ಜಪ್ತಿ ಮಾಡಲಾಗಿದೆ. ಆನ್ಲೈನ್ ಪಾವತಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಎಲ್ಲ ಆರೋಪಿಗಳ ವಿರುದ್ಧ ಅನೈತಿಕ ವೇಶ್ಯಾವಾಟಿಕೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. ಇದೀಗ ಆನ್ಲೈನ್ ಮೂಲಕ ಹಣವನ್ನು ಪಾವತಿ ಮಾಡಿದವರು ಪೇಚಿಗೆ ಸಿಲುಕಿದ್ದಾರೆ.
ಅಪರಾಧ
Bomb threat-ಇಮೇಲ್ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶ ರವಾನೆ
ಕೆಲ ತಿಂಗಳುಗಳ ಹಿಂದೆಯಷ್ಟೆ ಬೆಂಗಳೂರಿನ ಶಾಲೆಗಳಿಗೆ ಇಮೇಲ್ ರೂಪದಲ್ಲಿ ಬಾಂಬ್ ಬೆದರಿಕೆ ಬಂದಿತ್ತು. ಇದೀಗ ಲೋಕಸಭಾ ಚುನಾವಣೆಯ ಮಧ್ಯದಲ್ಲಿ ಇಮೇಲ್ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ಈ ಬಾಂಬ್ ಬೆದರಿಕೆ ಮೇಲ್ ಏ 29 ರಂದು ಬಂದಿದೆ ಎಂದು ಮೂಲಗಳಿದೆ ತಿಳಿದು ಬಂದಿದೆ . ಆದರೇ ವಾರದ ಬಳಿಕ ಈ ಮಾಹಿತಿ ಬಹಿರಂಗವಾಗಿದೆ. ಬಜ್ಪೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
“ವಿಮಾನ ನಿಲ್ದಾಣದಲ್ಲಿ ಸ್ಫೋಟಕಗಳನ್ನು ಇರಿಸಲಾಗಿದೆ. ಎಲ್ಲಾ ಮೂರು ವಿಮಾನಗಳಲ್ಲಿ ಬಾಂಬ್ಗಳನ್ನು ಅಳವಡಿಸಲಾಗಿದೆ.” ಕೆಲವೇ ಗಂಟೆಗಳಲ್ಲಿ ದೊಡ್ಡ ರಕ್ತಪಾತವಾಗುತ್ತದೆ. “ಭಯೋತ್ಪಾದಕರ ತುರ್ತು ಸಂಖ್ಯೆ 111 ಈ ಕೃತ್ಯದ ಹಿಂದೆ ಇದೆ” ಎಂದು ಮೇಲ್ ನಲ್ಲಿ ಬರೆಯಲಾಗಿತ್ತು
ಅಪರಾಧ
Daughter-in-law-ಅತ್ತೆಯನ್ನು ಕೊಂದು ಸಹಜ ಸಾವು ಎಂಬಂತೆ ಬಿಂಬಿಸಿದ ಸೊಸೆ – 15 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ
ಮಡಿಕೇರಿ: ಸೊಸೆಯೊಬ್ಬಳು ಅತ್ತೆಯನ್ನು ಕೊಲೆಗೈದು ಬಳಿಕ ಸಹಜ ಸಾವು ಎಂದು ಬಿಂಬಿಸಿದ್ದ ಆರೋಪದಡಿ ಆಕೆಯನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಡಿಕೇರಿ ತಾಲೂಕಿನ ಮರಗೋಡಿನ ನಿವಾಸಿ ಪೂವಮ್ಮ (73) ಅವರನ್ನು ಕೊಲೆಗೈದ ಸೊಸೆ ಬಿಂದು (26) ಬಂಧಿತ ಆರೋಪಿ.
ಘಟನೆ ಹಿನ್ನೆಲೆ:
ಮರಗೋಡಿನಲ್ಲಿ ವೃತ್ತಿಯಲ್ಲಿ ಶಿಕ್ಷಕರಾಗಿರುವ ಪತಿ ಪ್ರಸನ್ನ, ಒಂದು ವರ್ಷದ ಪುತ್ರಿ ಹಾಗೂ ಅತ್ತೆ ಪೂವಮ್ಮ ಜೊತೆಗೆ ಬಿಂದು ವಾಸವಾಗಿದ್ದು. ಅತ್ತೆ-ಸೊಸೆ ನಡುವೆ ಹಲವು ವರ್ಷಗಳಿಂದ ಮನಸ್ತಾಪ ಇತ್ತು. ಇಬ್ಬರ ನಡುವೆ ಕಲಹವೂ ಆಗಾಗ್ಗೆ ನಡೆಯುತ್ತಿತ್ತು ಎನ್ನಲಾಗಿದೆ. ಏ.15 ರಂದು ಪತಿ ಮೌಲ್ಯಮಾಪನ ಕರ್ತವ್ಯಕ್ಕಾಗಿ ಮಡಿಕೇರಿಗೆ ತೆರಳಿದ್ದ ಸಂದರ್ಭ ಪೂವಮ್ಮ ಕುಸಿದು ಬಿದ್ದಿರುವುದಾಗಿ ಪತಿ ಪ್ರಸನ್ನ ಅವರಿಗೆ ಬೆಳಗ್ಗೆ ಬಿಂದು ಕರೆ ಮಾಡಿ ತಿಳಿಸಿದ್ದಾಳೆ. ಅವರು ಬಂದು ನೋಡುವಷ್ಟರಲ್ಲಿ ಮೃತಪಟ್ಟಿರುವುದು ದೃಢಪಟ್ಟಿದೆ. ನಂತರ ಮೃತ ಪೂವಮ್ಮ ಅವರನ್ನು ಅಗ್ನಿಸ್ಪರ್ಶದ ಮೂಲಕ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗಿದೆ. ಪೂವಮ್ಮ ಹೃದ್ರೋಗ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆ ಆ ಕ್ಷಣದಲ್ಲಿ ಸಾವಿನ ಕುರಿತು ಹೆಚ್ಚಿನ ಅನುಮಾನವೂ ಕುಟುಂಬಸ್ಥರಲ್ಲಿ ಮೂಡಿರಲಿಲ್ಲ. ಅಂತ್ಯಸಂಸ್ಕಾರದ ಬಳಿಕ ಗ್ರಾಮದಲ್ಲಿ ಸಾವಿನ ಕುರಿತು ಊಹಾಪೋಹಗಳು ಕೇಳಿ ಬರುತ್ತಿದ್ದವು.
ದಿನಕಳೆದಂತೆ ಪೂವಮ್ಮ ಸಾವಿನ ಬಗ್ಗೆ ಕುಟುಂಬಸ್ಥರಿಗೆ ತೀವ್ರ ಅನುಮಾನ ಮೂಡಿದೆ. ಅದರಲ್ಲೂ ಪತಿ ಪ್ರಸನ್ನ ಅವರಿಗೆ ಘಟನೆ ನಡೆದ ಸ್ಥಳ, ದಿಂಬಿನ ಕವರ್, ಬಟ್ಟೆಯ ಮೇಲೆ ರಕ್ತದ ಕಲೆ, ಮುಖದಲ್ಲಿ ಕೆಲವೊಂದು ಪರಚಿದ ಕಲೆಗಳು ಗಮನಿಸಿ ಸಂಶಯ ಮತ್ತಷ್ಟು ಹೆಚ್ಚಾಗಿದೆ. ಇದರೊಂದಿಗೆ ಬಿಂದು ನಡವಳಿಕೆಯಲ್ಲಿನ ಬದಲಾವಣೆಯೂ ಹೆಚ್ಚಿನ ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ. ಆದರೆ, ಘಟನೆ ನಡೆದ ದಿನದಂದು ಪೊಲೀಸರಿಗೆ ಈ ಬಗ್ಗೆ ಯಾರೂ ಮಾಹಿತಿ ನೀಡಿರುವುದಿಲ್ಲ.
ತಲೆಯ ಹಿಂಭಾಗಕ್ಕೆ ಮೊಬೈಲ್ನಿಂದ ಹಲ್ಲೆ:
ಅತ್ತೆಗೆ ಬೆಳಗ್ಗಿನ ಉಪಾಹಾರ ಮಾಡಲು ಬರುವಂತೆ ಬಿಂದು ಕರೆದಿದ್ದಾಳೆ. ಈ ಸಂದರ್ಭ ತಿಂಡಿ ಮಾಡಲು ನಿರಾಕರಿಸಿದ ಹಿನ್ನೆಲೆ ವಾಗ್ವಾದ ಉಂಟಾಗಿದೆ. ಈ ಸಂದರ್ಭ ಕೋಪಗೊಂಡ ಬಿಂದು ಕೈಯಲ್ಲಿದ್ದ ಮೊಬೈಲ್ನಿಂದ ತಲೆಯ ಹಿಂಭಾಗಕ್ಕೆ ಹಲ್ಲೆಗೈದಿದ್ದಾಳೆ. ಹಾಸಿಗೆ ಮೇಲೆ ಕುಸಿದು ಬಿದ್ದ ಪೂವಮ್ಮ ಅವರನ್ನು ನೋಡದೆ ಹಾಗೆಯೇ ತೆರಳಿದ್ದಾಳೆ. ತೀವ್ರ ರಕ್ತಸ್ರಾವವಾದ ಪರಿಣಾಮ ಪೂವಮ್ಮ ಕೊನೆಯುಸಿರೆಳೆದಿದ್ದಾರೆ. ನಂತರ ಸಾವಿನ ವಿಚಾರ ತಿಳಿದ ಬಿಂದು ಮನೆಯಲ್ಲಿ ಹರಿದಿದ್ದ ರಕ್ತವನ್ನು ಶುಚಿಮಾಡಿದ್ದಲ್ಲದೆ, ಹಾಸಿಗೆ ಮೇಲಿದ್ದ ಬೆಡ್ಶೀಟ್ ಸೇರಿದಂತೆ ಕೆಲ ಬಟ್ಟೆಯನ್ನು ಒಗೆಯಲು ಶೇಖರಿಸಿಡುವ ಬಾಸ್ಕೆಟ್ಗೆ ಹಾಕಿ ನೆಲಕ್ಕೆ ಹಾಸಿದ್ದ ಮ್ಯಾಟ್ನ್ನು ಬದಲಾಯಿಸಿ ಆಕೆ ಧರಿಸಿದ್ದ ಬಟ್ಟೆಯನ್ನೂ ಬದಲಾಯಿಸಿಕೊಂಡು ಪ್ರಕರಣವನ್ನು ಮರೆಮಾಚುವ ಯತ್ನಕ್ಕೆ ಮುಂದಾಗಿದ್ದಳು ಎಂದು ಪತಿ ಪ್ರಸನ್ನ ದೂರಿನಲ್ಲಿ ಉಲ್ಲೇಖಿಸಿ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ಪೊಲೀಸರು ವಿಚಾರಣೆ ನಡೆಸಿದ ಸಂದರ್ಭ ತಪ್ಪೊಪ್ಪಿಕೊಂಡಿರುವ ಬಿಂದು ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇದೀಗ ಆರೋಪಿತೆ ಮಡಿಕೇರಿ ಬಂಧಿಖಾನೆಯಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾಳೆ.
ಅಪರಾಧ
Suspension order-ಪುತ್ತೂರು ಎಪಿಎಂಸಿಯ ಸಹಾಯಕ ಕಾರ್ಯದರ್ಶಿ ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ದೊರೆತು ಕರ್ತವ್ಯಕ್ಕೆ ತೊಡಗಿದ ಬೆನ್ನಲ್ಲೇ ಅಮಾನತು ಆದೇಶ
ಪುತ್ತೂರು ಎಪಿಎಂಸಿಯ ಸಹಾಯಕ ಕಾರ್ಯದರ್ಶಿಯಾಗಿದ್ದ ರಾಮಚಂದ್ರ ಅವರನ್ನು, ಕರ್ನಾಟಕ ಕೃಷಿ ಮಾರಾಟ ಇಲಾಖೆ ನಿರ್ದೇಶಕ ಎಂ.ಗಂಗಾಧರ ಸ್ವಾಮಿ ಅವರು ಸೇವೆಯಿಂದ ಅಮಾನತುಗೊಳಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ. ಗುರುವಾರ ಬೆಳಿಗ್ಗೆ ವರ್ಗಾವಣೆ ವಿರುದ್ಧ ಕೆಎಟಿಯಿಂದ ತಡೆಯಾಜ್ಞೆ ತಂದು ಕರ್ತವ್ಯಕ್ಕೆ ಹಾಜರಾಗಿದ್ದ ರಾಮಚಂದ್ರ ಅವರಿಗೆ ಮಧ್ಯಾಹ್ನ ವೇಳೆ ಅಮಾನತು ಆದೇಶ ನೀಡಲಾಗಿದೆ.
‘ರಾಮಚಂದ್ರ ಅವರು ತರಕಾರಿ ವಾಹನಗಳ ಒಳಪ್ರವೇಶವನ್ನು ನಿರಾಕರಿಸುತ್ತಿದ್ದು, ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ತರಕಾರಿ ವ್ಯಾಪಾರಸ್ಥರಿಗೆ ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ. ನಿಗದಿತ ಸಮಯಕ್ಕೆ ಸರಿಯಾಗಿ ಪರವಾನಗಿ ನೀಡದೆ ಇರುವುದರಿಂದ ವ್ಯಾಪಾರದಲ್ಲಿ ನಷ್ಟ ಆಗಿದೆ’ ಎಂದು ಎಪಿಎಂಸಿ ಪ್ರಾಂಗಣದ ತರಕಾರಿ ವ್ಯಾಪಾರಸ್ಥರು ಜ. 4ರಂದು ಕೃಷಿ ಮಾರಾಟ ಇಲಾಖೆ ನಿರ್ದೇಶಕರಿಗೆ ದೂರು ಸಲ್ಲಿಸಿದ್ದರು.
ಈ ದೂರಿನ ತನಿಖೆಗಾಗಿ ಅಧಿಕಾರಿಗಳ ತಂಡ ರಚಿಸಲಾಗಿತ್ತು. ಈ ಮಧ್ಯೆ ರಾಮಚಂದ್ರ ಅವರನ್ನು ಜ.16ರಿಂದ 2 ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ಕಡ್ಡಾಯ ರಜೆ ಮೇಲೆ ತೆರಳುವಂತೆ ಕೃಷಿ ಮಾರಾಟ ಇಲಾಖೆ ನಿರ್ದೇಶಕರು ಆದೇಶ ಮಾಡಿದ್ದರು. ಈ ನಡುವೆ ರಾಮಚಂದ್ರ ಅವರ ವಿರುದ್ಧದ ದೂರಿನ ಕುರಿತು ಇಲಾಖಾ ವಿಚಾರಣೆ ನಡೆಸಲು ಆಡಳಿತಾತ್ಮಕ ದೃಷ್ಟಿಯಿಂದ ಅವರನ್ನು ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಖಾಲಿ ಇದ್ದ ಹಿರಿಯ ಮಾರುಕಟ್ಟೆ ಮೇಲ್ವಿಚಾರಕ ಹುದ್ದೆಗೆ ವರ್ಗಾಯಿಸಿ ಕೃಷಿ ಮಾರಾಟ ಇಲಾಖೆ ಆದೇಶ ಮಾಡಿತ್ತು. ರಾಮಚಂದ್ರ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಕೇಂದ್ರ ಕಚೇರಿಗೆ ವರದಿ ಸಲ್ಲಿಸಲು ಪುತ್ತೂರು ಎಪಿಎಂಸಿ ಸಮಿತಿ ಕಾರ್ಯದರ್ಶಿಗೆ ಸೂಚಿಸಲಾಗಿತ್ತು.
ರಾಮಚಂದ್ರ ಅವರು ರಾಯಚೂರಿನಲ್ಲಿ ಕರ್ತವ್ಯಗೆ ಹಾಜರಾಗದೆ ವರ್ಗಾವಣೆ ಆದೇಶದ ವಿರುದ್ಧ ಕರ್ನಾಟಕ ಆಡಳಿತಾತ್ಮಕ ನ್ಯಾಯಾಲಯಕ್ಕೆ (ಕೆಎಟಿಗೆ) ದೂರು ಸಲ್ಲಿಸಿದ್ದರು. ಕೆಎಟಿ ಅವರ ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದರಿಂದ ಗುರುವಾರ ಬೆಳಿಗ್ಗೆ ಅವರು ಎಪಿಎಂಸಿ ಸಹಾಯಕ ಕಾರ್ಯದರ್ಶಿ ಕರ್ತವ್ಯಕ್ಕೆ ಹಾಜರಾಗಿದ್ದು, ಮಧ್ಯಾಹ್ನ 12 ಗಂಟೆ ವೇಳೆಗೆ ಅಮಾನತು ಆದೇಶ ಬಂದಿದೆ.
-
ಉದ್ಯೋಗ16 hours ago
Puttur’s ‘Bindu’-ಆಂಧ್ರಕ್ಕೆ ತಲುಪಿದ ಪುತ್ತೂರಿನ ‘ಬಿಂದು’ : ಮೂರನೇ ಉತ್ಪಾದನಾ ಘಟಕದ ಶಂಕುಸ್ಥಾಪನೆ
-
ರಾಜ್ಯ23 hours ago
Heavy rainfall-ನಾಳೆಯಿಂದ 4 ದಿನ ರಾಜ್ಯದ ಹಲವೆಡೆ ಬಿರುಸಾಗಿ ಮಳೆಯಾಗುವ ಸಾಧ್ಯತೆ; ಪ್ರವಾಹ ಎದುರಿಸಲು ಸಜ್ಜಾಗುವಂತೆ ಸೂಚನೆ
-
ಉಡುಪಿ17 hours ago
Kapu: Pili Kola-ಕಾಪು : ಪಿಲಿ ಕೋಲ – ನಗರ ಪ್ರದಕ್ಷಿಣೆ ವೇಳೆ ಓರ್ವನ ಸ್ಪರ್ಶಿಸಿ ದೈವಸ್ಥಾನಕ್ಕೆ ಓಡಿ ಬಂದ ದೈವ..!
-
ಮಂಗಳೂರು2 days ago
ವಿಟ್ಲ: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮಗು ಸಹಿತ ಮೂವರಿಗೆ ಗಾಯ
-
ಬಿಗ್ ನ್ಯೂಸ್20 hours ago
Heat Wave | ಕರ್ನಾಟಕ ಕರಾವಳಿಯಲ್ಲಿ ಬಿಸಿಗಾಳಿ – ಆರೆಂಜ್ ಎಲರ್ಟ್ ಘೋಷಣೆ
-
ಮಂಗಳೂರು19 hours ago
Panolibail-ಪಣೋಲಿಬೈಲ್ನಲ್ಲಿ 23 ಸಾವಿರಕ್ಕೂ ಅಧಿಕ ಕೋಲ ಸೇವೆ ಬುಕ್ಕಿಂಗ್; ಪೂರ್ಣಗೊಳ್ಳಬೇಕಾದರೆ ಕನಿಷ್ಠ ಎಷ್ಟು ವರ್ಷ ಬೇಕು ಗೊತ್ತೇ ?
-
ಬಿಗ್ ನ್ಯೂಸ್11 hours ago
Anantkumar Hegde | ಚುನಾವಣೆಗೆ ಕೆಲವೇ ಗಂಟೆಗಳಿರುವಾಗ ಮಹತ್ವದ ಬೆಳವಣಿಗೆ : ಬಿಜೆಪಿಗೆ ಓಟ್ ಹಾಕಿ ಎಂದು ತನ್ನ ಫೋಟೋ ಬಳಸಿ ಫೋಸ್ಟ್ ಮಾಡಿದ್ದರ ವಿರುದ್ದ ಫೈರ್ ಬ್ರ್ಯಾಂಡ್ ನಾಯಕ , ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಹೆಗ್ಗಡೆಯಿಂದ ದೂರು ದಾಖಲು
-
ಸ್ಥಳೀಯ22 hours ago
Marriage cancelled-ಸ್ವೀಟ್ ನೀಡಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ರದ್ದುಗೊಂಡ ಮದುವೆ