ಅಪರಾಧ
ಹಿಂದೂ ಕಾರ್ಯಕರ್ತನಿಗೆ ಜೀವಬೆದರಿಕೆ ಒಡ್ಡಿದ ಪ್ರವೀಣ್ ನೆಟ್ಟಾರ್ ಕೊಲೆ ಆರೋಪಿಯ ತಮ್ಮ ಸಫ್ರಿದ್ ಬಂಧನ | ಏನಿದು ಪ್ರಕರಣ – ಇಲ್ಲಿದೆ ವಿವರ
ಬೆಳ್ಳಾರೆ ಸೆ 11 : ಹಿಂದೂ ಕಾರ್ಯಕರ್ತರಿಗೆ ಜೀವ ಬೆದರಿಕೆ ಒಡ್ಡಿದ ಆರೋಪದ ಮೇರೆಗೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ (Praveen Nettar ) ಕೊಲೆ ಪ್ರಕರಣದ ಆರೋಪಿಯ ಸಹೋದರನನ್ನು ಬೆಳ್ಳಾರೆ ಠಾಣೆ ಪೊಲೀಸರು ಸೆ. 11 ರಂದು ಬೆಳ್ಳಂಬೆಳಗ್ಗೆ ಬಂಧಿಸಿರುವುದಾಗಿ ವರದಿಯಾಗಿದೆ. ಆದರೇ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ (Dakshina kannada ) ಇವರೆಗೆ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ. ಆದರೇ ಪೊಲೀಸ್ ಮೂಲಗಳು ಬಂಧನವನ್ನು ಖಚಿತಪಡಿಸಿವೆ.
ಬೆಳ್ಳಾರೆ ನಿವಾಸಿ, ಇಬ್ರಾಹಿಂ ಎಂಬವರ ಪುತ್ರ ಸಫ್ರಿದ್ ಬಂಧಿತ ಆರೋಪಿ .ಈತ ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಶಫೀಕ್ ಸಹೋದರ. ಈತನ ತಂದೆ ದಿ. ಪ್ರವೀಣ್ ಅಂಗಡಿಯಲ್ಲಿ ಕೋಳಿ ಕ್ಲಿನಿಂಗ್ ಕೆಲಸ ಮಾಡುತ್ತಿದ್ದು, ಹತ್ಯೆಗಿಂತ 3 ತಿಂಗಳು ಮೊದಲಷ್ಟೇ ಕೆಲಸ ಬಿಟ್ಟಿದ್ದರು. ಆರೋಪಿ ಸಫ್ರಿದ್ ಎಸ್ಡಿಪಿಐ ಪಕ್ಷದ ಸಕ್ರಿಯ ಕಾರ್ಯಕರ್ತ ಎಂದು ಸ್ಥಳೀಯರು ನಿಖರ ನ್ಯೂಸಿಗೆ ತಿಳಿಸಿದ್ದಾರೆ.
ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತ, ಬೆಳ್ಳಾರೆಯ “ದೇವಿ ಲೈಟ್ಸ್ ಲಾಡ್ಜಿಂಗ್ ” ನ ಮ್ಯಾನೇಜರ್ ಪ್ರಶಾಂತ್ ರೈ ನಿನ್ನೆ ಸಂಜೆ ಸಫ್ರಿದ್ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕೊಲೆ ಬೆದರಿಕೆ ಒಡ್ಡಿರುವ ಬಗ್ಗೆ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದರು. ಪ್ರಕರಣದ ಮಾಹಿತಿ ಬಹಿರಂಗವಾಗುತ್ತಲೇ ಸ್ವತ: ಗೃಹ ಸಚಿವರೇ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ತಿಳಿಸಿ ಆರೋಪಿಯನ್ನು ಶೀಘ್ರ ಬಂದಿಸುವಂತೆ ಸೂಚಿಸಿದ್ದರು ಎಂದು ಮೂಲಗಳು ತಿಳಿಸಿವೆ.
AAI Recruitment : ಎಎಐ ನೇಮಕಾತಿಗೆ ಅರ್ಜಿ ಆಹ್ವಾನ : sslc , Puc, Diploma Degee ವಿದ್ಯಾರ್ಹತೆ
ನಿನ್ನೆ ರಾತ್ರಿ ಆರೋಪಿ ಬಂಟ್ವಾಳ ತಾಲೂಕಿನ ಬಿಸಿ ರೋಡ್ ಎಂಬಲ್ಲಿ ಬಚ್ಚಿಟ್ಟು ಕೊಂಡಿದ್ದಾನೆ ಎಂಬ ಮಾಹಿತಿ ಹರಡಿತ್ತು. ಇಂದು ಮುಂಜಾನೆ ಮಿಂಚಿನ ಕಾರ್ಯಚರಣೆ ನಡೆಸಿದ ಜಿಲ್ಲಾ ಪೊಲೀಸರು ಆರೋಪಿಯನ್ನು ಆತ ಬಚ್ಚಿಟ್ಟುಕೊಂಡಲ್ಲಿಂದ ದಸ್ತಗಿರಿ ಮಾಡಿದ್ದಾರೆ.
ಏನಿದು ಪ್ರಕರಣ :
ಶನಿವಾರ ಬೆಳಿಗ್ಗೆ ಪ್ರಶಾಂತ್ ರೈವರ ಮೊಬೈಲ್ʼಗೆ ಆರೋಪಿ ಕರೆ ಮಾಡಿದ್ದಾನೆ. ಕರೆ ಸ್ವೀಕರಿಸಿದ ಪ್ರಶಾಂತ್ ಅವರ ಬಳಿ ಅಪರಿಚಿತನಂತೆ ಮಾತನಾಡಿ, ಆ ನಂಬರ್ ಯಾರದ್ದು ಅನ್ನುವ ರೀತಿ ವಿಚಾರಿಸಿದ್ದಾನೆ. ಈ ವೇಳೆ ಪ್ರಶಾಂತ್ ಆರೋಪಿಯ ಗುರುತು ಹಿಡಿದು, ತಾನು ಆತನಿಗೆ ಬಾಡಿಗೆ ಮನೆ ಮಾಡಿ ಕೊಟ್ಟಿರುವ ವಿಚಾರ ತಿಳಿಸಿದ್ದಾರೆ. ಈ ವೇಳೆ ಆರೊಪಿಯು ಪ್ರಶಾಂತರ ಬಳಿ ನೀವು ನನ್ನ ಆತ್ಮೀಯರಲ್ಲಿ ನನ್ನ ಬಗ್ಗೆ ಇಲ್ಲ ಸಲ್ಲದ್ದು ಹೇಳಿದ್ದೀರಿ ಎಂದು ಆರೋಪಿಸಿದ್ದು, ಇದನ್ನು ನಿರಾಕರಿಸಿದ ಪ್ರಶಾಂತ್ ಹಾಗೇ ಹೇಳಿದ ವ್ಯಕ್ತಿಯನ್ನು ತೋರಿಸುವಂತೆ ಹೇಳಿದ್ದಾರೆ. ಈ ವೇಳೆ ಅವರಿಬ್ಬರ ಮಾತಿನ ಚಕಮಕಿಯಾಗಿದೆ ಎಂದು ಮೂಲಗಳು ಇವರಿಬ್ಬರು ಆಡಿದ್ದಾರೆ ಎನ್ನಲಾದ ಪೋನ್ ಸಂಭಾಷನೆಯ ಆಡಿಯೋವನ್ನು ಉಲ್ಲೇಖಿಸಿ ನಿಖರ ನ್ಯೂಸಿಗೆ ತಿಳಿಸಿದ್ದಾರೆ.
Whatsapp ನಲ್ಲಿ ಹಳೆ ಮೆಸೇಜ್ ಗಳನ್ನು ಹುಡುಕಲು ಹೊಸ ಫೀಚರ್ – ಏನಿದು ? ಇಲ್ಲಿದೆ ವಿವರ
ಪ್ರಶಾಂತ್ ರೈ ಗೆ ಕೊಲೆ ಬೆದರಿಕೆ ಹಾಕಿರುವ ಮಾಹಿತಿ ಬಹಿರಂಗವಾಗುತ್ತಲೇ ನಿನ್ನೆ ಇಳಿಸಂಜೆ ಬೆಳ್ಳಾರೆ ಪೋಲಿಸ್ ಠಾಣೆ ಮುಂಭಾಗ ದೊಡ್ಡ ಸಂಖ್ಯೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದರು. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಹಿಂದೂ ಸಂಘಟನೆಯ ಮುಖಂಡರು ಕೊಲೆ ಬೆದರಿಕೆ ಹಾಕಿರುವ ಸಫ್ರಿದ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಆತನನ್ನು 24 ಗಂಟೆಯೊಳಗೆ ಬಂಧಿಸಬೇಕು. ಇಲ್ಲದಿದ್ದರೆ ಬೆಳ್ಳಾರೆ ಬಂದ್ ಗೆ ಕರೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.
ಅಪರಾಧ
Bomb threat-ಇಮೇಲ್ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶ ರವಾನೆ
ಕೆಲ ತಿಂಗಳುಗಳ ಹಿಂದೆಯಷ್ಟೆ ಬೆಂಗಳೂರಿನ ಶಾಲೆಗಳಿಗೆ ಇಮೇಲ್ ರೂಪದಲ್ಲಿ ಬಾಂಬ್ ಬೆದರಿಕೆ ಬಂದಿತ್ತು. ಇದೀಗ ಲೋಕಸಭಾ ಚುನಾವಣೆಯ ಮಧ್ಯದಲ್ಲಿ ಇಮೇಲ್ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ಈ ಬಾಂಬ್ ಬೆದರಿಕೆ ಮೇಲ್ ಏ 29 ರಂದು ಬಂದಿದೆ ಎಂದು ಮೂಲಗಳಿದೆ ತಿಳಿದು ಬಂದಿದೆ . ಆದರೇ ವಾರದ ಬಳಿಕ ಈ ಮಾಹಿತಿ ಬಹಿರಂಗವಾಗಿದೆ. ಬಜ್ಪೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
“ವಿಮಾನ ನಿಲ್ದಾಣದಲ್ಲಿ ಸ್ಫೋಟಕಗಳನ್ನು ಇರಿಸಲಾಗಿದೆ. ಎಲ್ಲಾ ಮೂರು ವಿಮಾನಗಳಲ್ಲಿ ಬಾಂಬ್ಗಳನ್ನು ಅಳವಡಿಸಲಾಗಿದೆ.” ಕೆಲವೇ ಗಂಟೆಗಳಲ್ಲಿ ದೊಡ್ಡ ರಕ್ತಪಾತವಾಗುತ್ತದೆ. “ಭಯೋತ್ಪಾದಕರ ತುರ್ತು ಸಂಖ್ಯೆ 111 ಈ ಕೃತ್ಯದ ಹಿಂದೆ ಇದೆ” ಎಂದು ಮೇಲ್ ನಲ್ಲಿ ಬರೆಯಲಾಗಿತ್ತು
ಅಪರಾಧ
Daughter-in-law-ಅತ್ತೆಯನ್ನು ಕೊಂದು ಸಹಜ ಸಾವು ಎಂಬಂತೆ ಬಿಂಬಿಸಿದ ಸೊಸೆ – 15 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ
ಮಡಿಕೇರಿ: ಸೊಸೆಯೊಬ್ಬಳು ಅತ್ತೆಯನ್ನು ಕೊಲೆಗೈದು ಬಳಿಕ ಸಹಜ ಸಾವು ಎಂದು ಬಿಂಬಿಸಿದ್ದ ಆರೋಪದಡಿ ಆಕೆಯನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಡಿಕೇರಿ ತಾಲೂಕಿನ ಮರಗೋಡಿನ ನಿವಾಸಿ ಪೂವಮ್ಮ (73) ಅವರನ್ನು ಕೊಲೆಗೈದ ಸೊಸೆ ಬಿಂದು (26) ಬಂಧಿತ ಆರೋಪಿ.
ಘಟನೆ ಹಿನ್ನೆಲೆ:
ಮರಗೋಡಿನಲ್ಲಿ ವೃತ್ತಿಯಲ್ಲಿ ಶಿಕ್ಷಕರಾಗಿರುವ ಪತಿ ಪ್ರಸನ್ನ, ಒಂದು ವರ್ಷದ ಪುತ್ರಿ ಹಾಗೂ ಅತ್ತೆ ಪೂವಮ್ಮ ಜೊತೆಗೆ ಬಿಂದು ವಾಸವಾಗಿದ್ದು. ಅತ್ತೆ-ಸೊಸೆ ನಡುವೆ ಹಲವು ವರ್ಷಗಳಿಂದ ಮನಸ್ತಾಪ ಇತ್ತು. ಇಬ್ಬರ ನಡುವೆ ಕಲಹವೂ ಆಗಾಗ್ಗೆ ನಡೆಯುತ್ತಿತ್ತು ಎನ್ನಲಾಗಿದೆ. ಏ.15 ರಂದು ಪತಿ ಮೌಲ್ಯಮಾಪನ ಕರ್ತವ್ಯಕ್ಕಾಗಿ ಮಡಿಕೇರಿಗೆ ತೆರಳಿದ್ದ ಸಂದರ್ಭ ಪೂವಮ್ಮ ಕುಸಿದು ಬಿದ್ದಿರುವುದಾಗಿ ಪತಿ ಪ್ರಸನ್ನ ಅವರಿಗೆ ಬೆಳಗ್ಗೆ ಬಿಂದು ಕರೆ ಮಾಡಿ ತಿಳಿಸಿದ್ದಾಳೆ. ಅವರು ಬಂದು ನೋಡುವಷ್ಟರಲ್ಲಿ ಮೃತಪಟ್ಟಿರುವುದು ದೃಢಪಟ್ಟಿದೆ. ನಂತರ ಮೃತ ಪೂವಮ್ಮ ಅವರನ್ನು ಅಗ್ನಿಸ್ಪರ್ಶದ ಮೂಲಕ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗಿದೆ. ಪೂವಮ್ಮ ಹೃದ್ರೋಗ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆ ಆ ಕ್ಷಣದಲ್ಲಿ ಸಾವಿನ ಕುರಿತು ಹೆಚ್ಚಿನ ಅನುಮಾನವೂ ಕುಟುಂಬಸ್ಥರಲ್ಲಿ ಮೂಡಿರಲಿಲ್ಲ. ಅಂತ್ಯಸಂಸ್ಕಾರದ ಬಳಿಕ ಗ್ರಾಮದಲ್ಲಿ ಸಾವಿನ ಕುರಿತು ಊಹಾಪೋಹಗಳು ಕೇಳಿ ಬರುತ್ತಿದ್ದವು.
ದಿನಕಳೆದಂತೆ ಪೂವಮ್ಮ ಸಾವಿನ ಬಗ್ಗೆ ಕುಟುಂಬಸ್ಥರಿಗೆ ತೀವ್ರ ಅನುಮಾನ ಮೂಡಿದೆ. ಅದರಲ್ಲೂ ಪತಿ ಪ್ರಸನ್ನ ಅವರಿಗೆ ಘಟನೆ ನಡೆದ ಸ್ಥಳ, ದಿಂಬಿನ ಕವರ್, ಬಟ್ಟೆಯ ಮೇಲೆ ರಕ್ತದ ಕಲೆ, ಮುಖದಲ್ಲಿ ಕೆಲವೊಂದು ಪರಚಿದ ಕಲೆಗಳು ಗಮನಿಸಿ ಸಂಶಯ ಮತ್ತಷ್ಟು ಹೆಚ್ಚಾಗಿದೆ. ಇದರೊಂದಿಗೆ ಬಿಂದು ನಡವಳಿಕೆಯಲ್ಲಿನ ಬದಲಾವಣೆಯೂ ಹೆಚ್ಚಿನ ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ. ಆದರೆ, ಘಟನೆ ನಡೆದ ದಿನದಂದು ಪೊಲೀಸರಿಗೆ ಈ ಬಗ್ಗೆ ಯಾರೂ ಮಾಹಿತಿ ನೀಡಿರುವುದಿಲ್ಲ.
ತಲೆಯ ಹಿಂಭಾಗಕ್ಕೆ ಮೊಬೈಲ್ನಿಂದ ಹಲ್ಲೆ:
ಅತ್ತೆಗೆ ಬೆಳಗ್ಗಿನ ಉಪಾಹಾರ ಮಾಡಲು ಬರುವಂತೆ ಬಿಂದು ಕರೆದಿದ್ದಾಳೆ. ಈ ಸಂದರ್ಭ ತಿಂಡಿ ಮಾಡಲು ನಿರಾಕರಿಸಿದ ಹಿನ್ನೆಲೆ ವಾಗ್ವಾದ ಉಂಟಾಗಿದೆ. ಈ ಸಂದರ್ಭ ಕೋಪಗೊಂಡ ಬಿಂದು ಕೈಯಲ್ಲಿದ್ದ ಮೊಬೈಲ್ನಿಂದ ತಲೆಯ ಹಿಂಭಾಗಕ್ಕೆ ಹಲ್ಲೆಗೈದಿದ್ದಾಳೆ. ಹಾಸಿಗೆ ಮೇಲೆ ಕುಸಿದು ಬಿದ್ದ ಪೂವಮ್ಮ ಅವರನ್ನು ನೋಡದೆ ಹಾಗೆಯೇ ತೆರಳಿದ್ದಾಳೆ. ತೀವ್ರ ರಕ್ತಸ್ರಾವವಾದ ಪರಿಣಾಮ ಪೂವಮ್ಮ ಕೊನೆಯುಸಿರೆಳೆದಿದ್ದಾರೆ. ನಂತರ ಸಾವಿನ ವಿಚಾರ ತಿಳಿದ ಬಿಂದು ಮನೆಯಲ್ಲಿ ಹರಿದಿದ್ದ ರಕ್ತವನ್ನು ಶುಚಿಮಾಡಿದ್ದಲ್ಲದೆ, ಹಾಸಿಗೆ ಮೇಲಿದ್ದ ಬೆಡ್ಶೀಟ್ ಸೇರಿದಂತೆ ಕೆಲ ಬಟ್ಟೆಯನ್ನು ಒಗೆಯಲು ಶೇಖರಿಸಿಡುವ ಬಾಸ್ಕೆಟ್ಗೆ ಹಾಕಿ ನೆಲಕ್ಕೆ ಹಾಸಿದ್ದ ಮ್ಯಾಟ್ನ್ನು ಬದಲಾಯಿಸಿ ಆಕೆ ಧರಿಸಿದ್ದ ಬಟ್ಟೆಯನ್ನೂ ಬದಲಾಯಿಸಿಕೊಂಡು ಪ್ರಕರಣವನ್ನು ಮರೆಮಾಚುವ ಯತ್ನಕ್ಕೆ ಮುಂದಾಗಿದ್ದಳು ಎಂದು ಪತಿ ಪ್ರಸನ್ನ ದೂರಿನಲ್ಲಿ ಉಲ್ಲೇಖಿಸಿ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ಪೊಲೀಸರು ವಿಚಾರಣೆ ನಡೆಸಿದ ಸಂದರ್ಭ ತಪ್ಪೊಪ್ಪಿಕೊಂಡಿರುವ ಬಿಂದು ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇದೀಗ ಆರೋಪಿತೆ ಮಡಿಕೇರಿ ಬಂಧಿಖಾನೆಯಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾಳೆ.
ಅಪರಾಧ
Suspension order-ಪುತ್ತೂರು ಎಪಿಎಂಸಿಯ ಸಹಾಯಕ ಕಾರ್ಯದರ್ಶಿ ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ದೊರೆತು ಕರ್ತವ್ಯಕ್ಕೆ ತೊಡಗಿದ ಬೆನ್ನಲ್ಲೇ ಅಮಾನತು ಆದೇಶ
ಪುತ್ತೂರು ಎಪಿಎಂಸಿಯ ಸಹಾಯಕ ಕಾರ್ಯದರ್ಶಿಯಾಗಿದ್ದ ರಾಮಚಂದ್ರ ಅವರನ್ನು, ಕರ್ನಾಟಕ ಕೃಷಿ ಮಾರಾಟ ಇಲಾಖೆ ನಿರ್ದೇಶಕ ಎಂ.ಗಂಗಾಧರ ಸ್ವಾಮಿ ಅವರು ಸೇವೆಯಿಂದ ಅಮಾನತುಗೊಳಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ. ಗುರುವಾರ ಬೆಳಿಗ್ಗೆ ವರ್ಗಾವಣೆ ವಿರುದ್ಧ ಕೆಎಟಿಯಿಂದ ತಡೆಯಾಜ್ಞೆ ತಂದು ಕರ್ತವ್ಯಕ್ಕೆ ಹಾಜರಾಗಿದ್ದ ರಾಮಚಂದ್ರ ಅವರಿಗೆ ಮಧ್ಯಾಹ್ನ ವೇಳೆ ಅಮಾನತು ಆದೇಶ ನೀಡಲಾಗಿದೆ.
‘ರಾಮಚಂದ್ರ ಅವರು ತರಕಾರಿ ವಾಹನಗಳ ಒಳಪ್ರವೇಶವನ್ನು ನಿರಾಕರಿಸುತ್ತಿದ್ದು, ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ತರಕಾರಿ ವ್ಯಾಪಾರಸ್ಥರಿಗೆ ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ. ನಿಗದಿತ ಸಮಯಕ್ಕೆ ಸರಿಯಾಗಿ ಪರವಾನಗಿ ನೀಡದೆ ಇರುವುದರಿಂದ ವ್ಯಾಪಾರದಲ್ಲಿ ನಷ್ಟ ಆಗಿದೆ’ ಎಂದು ಎಪಿಎಂಸಿ ಪ್ರಾಂಗಣದ ತರಕಾರಿ ವ್ಯಾಪಾರಸ್ಥರು ಜ. 4ರಂದು ಕೃಷಿ ಮಾರಾಟ ಇಲಾಖೆ ನಿರ್ದೇಶಕರಿಗೆ ದೂರು ಸಲ್ಲಿಸಿದ್ದರು.
ಈ ದೂರಿನ ತನಿಖೆಗಾಗಿ ಅಧಿಕಾರಿಗಳ ತಂಡ ರಚಿಸಲಾಗಿತ್ತು. ಈ ಮಧ್ಯೆ ರಾಮಚಂದ್ರ ಅವರನ್ನು ಜ.16ರಿಂದ 2 ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ಕಡ್ಡಾಯ ರಜೆ ಮೇಲೆ ತೆರಳುವಂತೆ ಕೃಷಿ ಮಾರಾಟ ಇಲಾಖೆ ನಿರ್ದೇಶಕರು ಆದೇಶ ಮಾಡಿದ್ದರು. ಈ ನಡುವೆ ರಾಮಚಂದ್ರ ಅವರ ವಿರುದ್ಧದ ದೂರಿನ ಕುರಿತು ಇಲಾಖಾ ವಿಚಾರಣೆ ನಡೆಸಲು ಆಡಳಿತಾತ್ಮಕ ದೃಷ್ಟಿಯಿಂದ ಅವರನ್ನು ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಖಾಲಿ ಇದ್ದ ಹಿರಿಯ ಮಾರುಕಟ್ಟೆ ಮೇಲ್ವಿಚಾರಕ ಹುದ್ದೆಗೆ ವರ್ಗಾಯಿಸಿ ಕೃಷಿ ಮಾರಾಟ ಇಲಾಖೆ ಆದೇಶ ಮಾಡಿತ್ತು. ರಾಮಚಂದ್ರ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಕೇಂದ್ರ ಕಚೇರಿಗೆ ವರದಿ ಸಲ್ಲಿಸಲು ಪುತ್ತೂರು ಎಪಿಎಂಸಿ ಸಮಿತಿ ಕಾರ್ಯದರ್ಶಿಗೆ ಸೂಚಿಸಲಾಗಿತ್ತು.
ರಾಮಚಂದ್ರ ಅವರು ರಾಯಚೂರಿನಲ್ಲಿ ಕರ್ತವ್ಯಗೆ ಹಾಜರಾಗದೆ ವರ್ಗಾವಣೆ ಆದೇಶದ ವಿರುದ್ಧ ಕರ್ನಾಟಕ ಆಡಳಿತಾತ್ಮಕ ನ್ಯಾಯಾಲಯಕ್ಕೆ (ಕೆಎಟಿಗೆ) ದೂರು ಸಲ್ಲಿಸಿದ್ದರು. ಕೆಎಟಿ ಅವರ ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದರಿಂದ ಗುರುವಾರ ಬೆಳಿಗ್ಗೆ ಅವರು ಎಪಿಎಂಸಿ ಸಹಾಯಕ ಕಾರ್ಯದರ್ಶಿ ಕರ್ತವ್ಯಕ್ಕೆ ಹಾಜರಾಗಿದ್ದು, ಮಧ್ಯಾಹ್ನ 12 ಗಂಟೆ ವೇಳೆಗೆ ಅಮಾನತು ಆದೇಶ ಬಂದಿದೆ.
-
ದಕ್ಷಿಣ ಕನ್ನಡ2 days ago
woman bathing Video graphed: ಮದುವೆ ಮನೆಯಲ್ಲಿ ಬಾತ್ ರೂಂನಲ್ಲಿ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ ಆರೋಪ – ವಿಚಾರಿಸಲು ಮನೆಗೆ ಹೋದಗ ಚೂರಿ ಪ್ರದರ್ಶಿಸಿ ಹಲ್ಲೆ – ಕಡಬ ಠಾಣೆಯಲ್ಲಿ ಪ್ರಕರಣ ದಾಖಲು
-
ಉದ್ಯೋಗ16 hours ago
Puttur’s ‘Bindu’-ಆಂಧ್ರಕ್ಕೆ ತಲುಪಿದ ಪುತ್ತೂರಿನ ‘ಬಿಂದು’ : ಮೂರನೇ ಉತ್ಪಾದನಾ ಘಟಕದ ಶಂಕುಸ್ಥಾಪನೆ
-
ರಾಜ್ಯ23 hours ago
Heavy rainfall-ನಾಳೆಯಿಂದ 4 ದಿನ ರಾಜ್ಯದ ಹಲವೆಡೆ ಬಿರುಸಾಗಿ ಮಳೆಯಾಗುವ ಸಾಧ್ಯತೆ; ಪ್ರವಾಹ ಎದುರಿಸಲು ಸಜ್ಜಾಗುವಂತೆ ಸೂಚನೆ
-
ಉಡುಪಿ17 hours ago
Kapu: Pili Kola-ಕಾಪು : ಪಿಲಿ ಕೋಲ – ನಗರ ಪ್ರದಕ್ಷಿಣೆ ವೇಳೆ ಓರ್ವನ ಸ್ಪರ್ಶಿಸಿ ದೈವಸ್ಥಾನಕ್ಕೆ ಓಡಿ ಬಂದ ದೈವ..!
-
ಮಂಗಳೂರು2 days ago
ವಿಟ್ಲ: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮಗು ಸಹಿತ ಮೂವರಿಗೆ ಗಾಯ
-
ಬಿಗ್ ನ್ಯೂಸ್20 hours ago
Heat Wave | ಕರ್ನಾಟಕ ಕರಾವಳಿಯಲ್ಲಿ ಬಿಸಿಗಾಳಿ – ಆರೆಂಜ್ ಎಲರ್ಟ್ ಘೋಷಣೆ
-
ಸ್ಥಳೀಯ21 hours ago
Marriage cancelled-ಸ್ವೀಟ್ ನೀಡಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ರದ್ದುಗೊಂಡ ಮದುವೆ
-
ಬಿಗ್ ನ್ಯೂಸ್11 hours ago
Anantkumar Hegde | ಚುನಾವಣೆಗೆ ಕೆಲವೇ ಗಂಟೆಗಳಿರುವಾಗ ಮಹತ್ವದ ಬೆಳವಣಿಗೆ : ಬಿಜೆಪಿಗೆ ಓಟ್ ಹಾಕಿ ಎಂದು ತನ್ನ ಫೋಟೋ ಬಳಸಿ ಫೋಸ್ಟ್ ಮಾಡಿದ್ದರ ವಿರುದ್ದ ಫೈರ್ ಬ್ರ್ಯಾಂಡ್ ನಾಯಕ , ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಹೆಗ್ಗಡೆಯಿಂದ ದೂರು ದಾಖಲು