Connect with us

ಮಂಗಳೂರು

Communal Riot | ಬುದ್ದಿವಂತರ ಜಿಲ್ಲೆ ದ.ಕ ಕ್ಕೆ ಕೋಮುಗಲಾಭೆಯಲ್ಲಿ ದ್ವಿತೀಯ ಸ್ಥಾನ, ಉಡುಪಿಗೆ ರೌಡಿಸಂನಲ್ಲಿ ಪ್ರಥಮ..!

Ad Widget

Ad Widget

Ad Widget

Ad Widget

ವಿದ್ಯಾಭ್ಯಾಸದ ರಿಸಲ್ಟ್ ನಂತೆ ಈ ಸಲ ಕೋಮು ಮತ್ತು ರೌಡಿಸಂ ರಿಸಲ್ಟ್ ಹೊರ ಬಿದ್ದಿದೆ. ಬುದ್ದಿವಂತರ ಜಿಲ್ಲೆ ಹಾಗೂ ದೇವಸ್ಥಾನದ ಬೀಡು ಎಂದೇ ಖ್ಯಾತವಾದ ದಕ್ಷಿಣ ಕನ್ನಡಕ್ಕೆ ಕೋಮುಗಲಾಭೆಯ (Communal Riot) ಮಸಿ ಬಳಿದುಕೊಂಡಿರೆ, ಉಡುಪಿ ರೌಡಿಸಂನ ಹಣೆಪಟ್ಟಿ ಕಟ್ಟಿಕೊಂಡಿದೆ . ಇವೆರಡು ಕರಾವಳಿ ಜಿಲ್ಲೆಗಳ ಒಟ್ಟು ಅಭಿವೃದ್ದಿಗೆ ಭಾರಿ ಹೊಡೆತ ಕೊಡಲಿದೆ.

Ad Widget

Ad Widget

Ad Widget

ಇತ್ತಿಚೆಗೆ ಕೆಲವೇ ದಿನಗಳ ಅಂತರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಮತೀಯ ಆಧಾರಿತ ಕೊಲೆಗಳು ನಡೆದಿದ್ದವು. ಜಿಲ್ಲೆಯ ಬೆಳ್ಳಾರೆಯಲ್ಲಿ ಮಸೂದ್ ಕೊಲೆ ಪ್ರಕರಣ ಹಾಗೂ ಅದರ ಬೆನ್ನಲ್ಲೇ ನಡೆದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮತ್ತು ಮಂಗಳೂರಿನ ಫಾಝಿಲ್‌ ಕೊಲೆ ಪ್ರಕರಣ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಇದಕ್ಕೂ ಮುನ್ನ ಶಿವಮೊಗ್ಗದಲ್ಲಿ ನಡೆದ ಹರ್ಷ ಕೊಲೆ ಪ್ರಕರಣವೂ ರಾಜ್ಯಾದ್ಯಂತ ಭಾರೀ ಸದ್ದು ಗದ್ದಲಕ್ಕೆ ಕಾರಣವಾಗಿತ್ತು.

vAd Widget

Ad Widget

ರಾಜಕೀಯವಾಗಿಯೂ ಈ ಘಟನೆಗಳು ಕಾಂಗ್ರೆಸ್-ಬಿಜೆಪಿ ನಡುವಿನ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿತ್ತು. ಕುತೂಹಲಕಾರಿ ಅಂಶವೆಂದರೆ ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ನಡೆದ ಕೋಮು ಸಂಘರ್ಷಗಳಲ್ಲಿ ರಾಜ್ಯದಲ್ಲಿ ನಡೆದ ಕೋಮುಗಲಭೆಗಳಂತಹ ಪ್ರಕರಣಗಳಲ್ಲಿ ಮಲೆನಾಡಿನ ಶಿವಮೊಗ್ಗ ಮುಂದಿದ್ದರೆ ಬುದ್ಧಿವಂತರ ಜಿಲ್ಲೆ ಎಂದು ಕರೆಯಲ್ಪಡುವ ದಕ್ಷಿಣ ಕನ್ನಡ 2 ನೇ ಸ್ಥಾನದಲ್ಲಿದೆ.

Ad Widget

Ad Widget

ರಾಜ್ಯ ಸರ್ಕಾರದ ಅಂಕಿ ಅಂಶಗಳ ಪ್ರಕಾರ ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ನಡೆದ ಕೋಮು ಗಲಭೆ ಆಧಾರಿತ 242 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ಶಿವಮೊಗ್ಗದ ಜಿಲ್ಲೆಯಲ್ಲಿ 57 ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 46 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಮತೀಯ ಗಲಭೆಗಳಲ್ಲಿ ಈ ಎರಡು ಜಿಲ್ಲೆಗಳು ಅಗ್ರಸ್ಥಾನವನ್ನು ಪಡೆದುಕೊಂಡಿವೆ. ಉಳಿದಂತೆ ಬಾಗಲಕೋಟೆಯಲ್ಲಿ 26, ದಾವಣಗೆರೆ 18, ಹಾವೇರಿ 18 ಪ್ರಕರಣಗಳ ದಾಖಲಾದರೆ ಕಲಬುರಗಿ, ರಾಮನಗರ, ಮಂಡ್ಯ, ಉತ್ತರ ಕನ್ನಡ, ಕೊಪ್ಪಳ ಜಿಲ್ಲೆಗಳು ಮತೀಯ ಪ್ರಕರಣಗಳಿಂದ ದೂರ ಉಳಿದಿವೆ.

Ad Widget

Ad Widget

Ad Widget

ಮತ್ತೊಂದೆಡೆಯಲ್ಲಿ ರೌಡಿಸಂನಲ್ಲಿ ಉಡುಪಿ, ಕೋಲಾರ ಅಗ್ರಸ್ಥಾನ ಪಡೆದಿದ್ದು, ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ರೌಡಿಸಂ ಆಧಾರಿತ ಪ್ರಕರಣಗಳು ದಾಖಲಾಗಿವೆ. ಉಡುಪಿ ಜಿಲ್ಲೆಯಲ್ಲಿ ಕಳೆದ ಐದು ವರ್ಷದಲ್ಲಿ 431 ಪ್ರಕರಣಗಳು ದಾಖಲಾದರೆ, ಕೋಲಾರದಲ್ಲಿ165, ದಕ್ಷಿಣ ಕನ್ನಡ 152 ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರ 60, ಕಲಬುರಗಿ 97,ಶಿವಮೊಗ್ಗದಲ್ಲಿ 156 ಪ್ರಕರಣಳು ದಾಖಲುಗೊಂಡಿವೆ.

ಕೋಮುಗಲಭೆಗಳಿಂದ ಪೊಲೀಸರ ಮೇಲೆ ಹಲ್ಲೆ ನಡೆದ ಪ್ರಕರಣಗಳು ಈಗೀವೆ. 2017 ರಲ್ಲಿ 27 ಪ್ರಕರಣ, 2018 – 15, 2019 – 36, 2020 -23, 2021 – 20 2022- 20 ಪ್ರಕರಣಗಳು ದಾಖಲಾಗಿವೆ. ಪೊಲೀಸ್ ಅಧಿಕಾರಿಗಳು 107, ಸಬ್ ಇನ್ಸ್ ಸ್ಪೆಕ್ಟರ್‌ – 49 ಹೆಡ್ ಕಾನ್ಸ್‌ಟೇಬಲ್- 96 ಹಾಗೂ ಕಾನ್ಸ್ ಟೇಬಲ್ 128 ಮಂದಿ ದೈಹಿಕವಾಗಿ ಹಲ್ಲೆಗೊಳಗಾಗಿದ್ದಾರೆ. ಪೊಲೀಸರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರಗೆ 3489 ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರಗಿಸಲಾಗಿದೆ. ಈ ಪೈಕಿ ಉತ್ತರ ಕನ್ನಡ ಜಿಲ್ಲೆಯಲ್ಲಿ 802, ದಾವಣಗೆರೆಯಲ್ಲಿ 465, ಮಂಗಳೂರಿನಲ್ಲಿ 501 ಹಾಗೂ ಬೆಂಗಳೂರು ನಗರದಲ್ಲಿ 493 ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

Click to comment

Leave a Reply

ಅಪರಾಧ

Mangaluru-ಮಂಗಳೂರು : ಮೆಡಿಕಲ್ ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೋ ಚಿತ್ರಿಕರಣ

Ad Widget

Ad Widget

Ad Widget

Ad Widget

ಮಂಗಳೂರು: ಇಲ್ಲಿನ ವೈದ್ಯಕೀಯ ಕಾಲೇಜೊಂದರಲ್ಲಿ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೋ ಚಿತ್ರೀಕರಿಸುತ್ತಿದ್ದುದು ಪತ್ತೆಯಾಗಿದೆ. ಈ ಕೃತ್ಯವನ್ನು 17 ವರ್ಷದ ಬಾಲಕನೊಬ್ಬ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

Ad Widget

ವಿಡಿಯೊ ಚಿತ್ರೀಕರಿಸಿರುವ, ಕಾನೂನು ಸಂಘರ್ಷಕ್ಕೆ ಸಿಲುಕಿದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲನ್ಯಾಯ ಮಂಡಳಿ ಮುಂದೆ ಆತನನ್ನು ಹಾಜರುಪಡಿಸಿ ಮುಂದಿನ‌ ಕ್ರಮ ಕೈಗೊಂಡಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

vAd Widget

Ad Widget

ಯಾರೂ ಇಲ್ಲದ ಸಂದರ್ಭದಲ್ಲಿ ವೈದ್ಯಕೀಯ ಕಾಲೇಜಿನ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ರಿಂಗಾಗುತ್ತಿತ್ತು. ಶೌಚಾಲಯವನ್ನು ಭದ್ರತಾ ಸಿಬ್ಬಂದಿ ಪರಿಶೀಲಿಸಿದಾಗ ಮೊಬೈಲ್ ಪತ್ತೆಯಾಗಿತ್ತು. ಬಾಲಕ ರೋಗಿಯ ಸೋಗಿನಲ್ಲಿ ವೈದ್ಯಕೀಯ ಕಾಲೇಜಿನ ಒಳಗೆ ಬಂದು ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ. ಮೊಬೈಲನ್ನು ವಶಕ್ಕೆ ಪಡೆದುಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ನಗರ ಉತ್ತರ ಠಾಣೆಯಲ್ಲಿ ಮಹಿಳೆಯ ನಗ್ನ ಚಿತ್ರ ಸೆರೆ ಕುರಿತು ಪ್ರಕರಣ ದಾಖಲಾಗಿದೆ. ಪೊಲೀಸರು ಪತ್ತೆಯಾದ ಮೊಬೈಲ್ ಬಳಸಿ ಶೌಚಾಲಯಕ್ಕೆ ಹೋಗಿದ್ದ ಮಹಿಳೆಯರ ವಿಡಿಯೋ ಚಿತ್ರೀಕರಿಸಲಾಗಿತ್ತೇ ಎಂಬ ವಿವರವನ್ನು ಬಹಿರಂಗಪಡಿಸಿಲ್ಲ

Ad Widget

Ad Widget

Ad Widget
Continue Reading

ಮಂಗಳೂರು

Luxury ship-ಮಂಗಳೂರಿಗೆ ಬಂದ 8ನೇ ಬೃಹತ್ ಐಷಾರಾಮಿ ಹಡಗು

Ad Widget

Ad Widget

Ad Widget

Ad Widget

ಪಣಂಬೂರು ಮೇ 5: ಈ ವರ್ಷದ 8ನೇ ಐಷಾರಾಮಿ ಕ್ರೂಸ್ ‘ಎಂಎಸ್ ಇನ್‌ಸೈನಿಯಾ’ ನವಮಂಗಳೂರು ಬಂದರಿಗೆ ರವಿವಾರ ಆಗಮಿಸಿತು. ನವಮಂಗಳೂರು ಬಂದರು ಪ್ರಾಧಿಕಾರ(ಎನ್‌ಎಂಪಿಎ) ದ ವತಿಯಿಂದ ಭರತನಾಟ್ಯ, ಯಕ್ಷಗಾನ ಸಹಿತ ಭಾರತೀಯ, ಕರ್ನಾಟಕದ ಸಾಂಸ್ಕೃತಿಕ ವೈಭವವನ್ನು ವಿದೇಶೀ ಪ್ರವಾಸಿಗರಿಗೆ ಪರಿಚಯಿಸಿ ಅವರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು.

Ad Widget

Ad Widget

Ad Widget

ನಾರ್ವೇಜಿಯನ್ ಕ್ರೂಸ್ ಲೈನರ್ 509 ಪ್ರಯಾಣಿಕರು ಮತ್ತು 407 ಸಿಬಂದಿ ಒಳಗೊಂಡಿದೆ. ಎನ್‌ ಎಂಪಿಎಯಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಕ್ಷಿಪ್ರ ಕ್ಲಿಯರಿಂಗ್ ವ್ಯವಸ್ಥೆ ಸೌಲಭ್ಯ ಅಳವಡಿಸಲಾಗಿದೆ.

vAd Widget

Ad Widget

ಕಾರ್ಕಳ ಗೋಮಟೇಶ್ವರ ಬೆಟ್ಟ ಮೂಡಬಿದಿರೆಯ ಸಾವಿರ ಕಂಬಗಳ ಬಸದಿ, ಸೋನ್ಸ್ ಫಾರ್ಮ್, ಗೋಡಂಬಿ ಕಾರ್ಖಾನೆ, ಗೋಕರ್ಣನಾಥ ದೇವಸ್ಥಾನ, ಸೈಂಟ್ ಅಲೋಶಿಯಸ್ ಚಾಪೆಲ್, ಸ್ಥಳೀಯ ಮಾರುಕಟ್ಟೆ ಮತ್ತು ಸಾಂಪ್ರದಾಯಿಕ ಮನೆಗಳಂತಹ ವಿವಿಧ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡಿದರು.

Ad Widget

Ad Widget
Continue Reading

ಮಂಗಳೂರು

Panolibail-ಪಣೋಲಿಬೈಲ್ನಲ್ಲಿ 23 ಸಾವಿರಕ್ಕೂ ಅಧಿಕ ಕೋಲ ಸೇವೆ ಬುಕ್ಕಿಂಗ್; ಪೂರ್ಣಗೊಳ್ಳಬೇಕಾದರೆ ಕನಿಷ್ಠ ಎಷ್ಟು ವರ್ಷ  ಬೇಕು ಗೊತ್ತೇ ?

Ad Widget

Ad Widget

Ad Widget

Ad Widget

ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನ ಕಾರಣಿಕ ಕ್ಷೇತ್ರವಾಗಿದ್ದು, ದೈವಗಳನ್ನು ನಂಬುವ ಭಕ್ತರು ಅಪಾರ ಸಂಖ್ಯೆಯಲ್ಲಿದ್ದಾರೆ. ಯಾವುದಾದರೂ ಸಂದರ್ಭದಲ್ಲಿ ಪಣೋಲಿಬೈಲು ದೈವಕ್ಕೆ ಹರಕೆ ಹೇಳಿಕೊಳ್ಳುವುದುಂಟು. ಅದನ್ನು ಈಡೇರಿಸಲು ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸುತ್ತಾರೆ.

Ad Widget

Ad Widget

Ad Widget

ಇಲ್ಲಿ ಅಗೇಲು ಸೇವೆ (ಕೋಳಿ, ಕುಚ್ಚಲಕ್ಕಿ, ಬಾಳೆ, ತೆಂಗಿನಕಾಯಿ, ಕೇಪುಳ ಹೂ ಒಪ್ಪಿಸುವುದು) ಹಾಗೂ ಕೋಲ ಸೇವೆ ಪ್ರಸಿದ್ಧ. ಕೋಲ ಸೇವೆಗಾಗಿ ಭಕ್ತರು ಬುಕ್ ಮಾಡುವುದುಂಟು. ಹೀಗೆ 23 ಸಾವಿರ ಸೇವೆಗಳು ಈ ಸನ್ನಿಧಿಯಲ್ಲಿ ಬುಕ್ ಆಗಿವೆ. ದಿನವೊಂದಕ್ಕೆ 4, ವಾರದಲ್ಲಿ 5 (ಕೆಲವು ದಿನ, ತಿಂಗಳು ಇರುವುದಿಲ್ಲ) ಸೇರಿ ಒಟ್ಟು 600ರಿಂದ 700 ಕೋಲ ಸೇವೆಗಳು ಇಲ್ಲಿ ನಡೆಯುತ್ತವೆ ಎಂದು ಲೆಕ್ಕ ಹಾಕಿದರೆ, ಇವತ್ತು ಬುಕ್ ಮಾಡಿದವರಿಗೆ 35 ವರ್ಷಗಳ ನಂತರ ಇಲ್ಲಿ ಸೇವೆ ಮಾಡಿಸಲು ಅವಕಾಶ ದೊರೆಯುತ್ತದೆ. ಈ ಹಿನ್ನೆಲೆಯಲ್ಲಿ ಇಲ್ಲಿ ಈಗ ಕೋಲಸೇವೆಯಲ್ಲಿ 4ರ ಬದಲಿಗೆ 8 ಮಂದಿಗೆ ಸೇವೆ ಸಂದಾಯಕ್ಕೆ ಅವಕಾಶ ಕಲ್ಪಿಸಲಾಗಿದೆ.

vAd Widget

Ad Widget

23 ಸಾವಿರಕ್ಕೂ ಅಧಿಕ ಕೋಲ ಸೇವೆ ಬುಕ್ಕಿಂಗ್ :
ಪಣೋಲಿಬೈಲಿಗೆ ತುಳುನಾಡ ಜಿಲ್ಲೆಗಳಷ್ಟೇ ಅಲ್ಲ, ಹೊರಗಿನಿಂದಲೂ ಆಗಮಿಸುವ ಭಕ್ತರು ಅಗೇಲು, ಕೋಲ ಸೇವೆ ನಡೆಸುತ್ತಾರೆ. ವಿಶೇಷ ಹರಕೆ ರೂಪದಲ್ಲಿ ಕೋಲ ಸೇವೆಯನ್ನು ನೀಡುತ್ತಾರೆ. ಇದುವರೆಗೆ 23 ಸಾವಿರಕ್ಕೂ ಅಧಿಕ ಕೋಲ ಸೇವೆಗಳ ಬುಕ್ ಆಗಿದೆ. ಕ್ಷೇತ್ರದಲ್ಲಿ ಅಗೇಲು ಮತ್ತು ಕೋಲ ಸೇವೆಗಳು ವಿಶೇಷವಾಗಿದೆ. ವಾರದ ಮೂರು ದಿನಗಳು ಅಗೇಲು ಹಾಗೂ ವಾರದ 5 ದಿನಗಳ ಕೋಲ ಸೇವೆ ಸಂದಾಯವಾಗುತ್ತದೆ. ಬೆಳಗ್ಗೆ ನಿಗದಿತ ಸಮಯದೊಳಗೆ ಬಂದವರಿಗೆ ಎಷ್ಟು ಬೇಕಾದರೂ ಅಗೇಲು ಸೇವೆ ನೀಡುವುದಕ್ಕೆ ಅವಕಾಶವಿದೆ. ದಿನವೊಂದಕ್ಕೆ ಕೋಲ ಸೇವೆ ನೀಡುವುದಕ್ಕೆ ಕೇವಲ ನಾಲ್ವರಿಗೆ ಮಾತ್ರ ಅವಕಾಶವಿತ್ತು. ಕೋಲ ಸೇವೆಗಳ ಬುಕ್ಕಿಂಗ್ ಹೆಚ್ಚಾಗುತ್ತಿದ್ದು, ಅದು ಪೂರ್ಣಗೊಳ್ಳಬೇಕಾದರೆ ಕನಿಷ್ಠ 35 ವರ್ಷ ಬೇಕಾಗುತ್ತದೆ ಎಂದು ಅಂದಾಜಿಸಲಾಗುತ್ತಿದೆ.

Ad Widget

Ad Widget

ಸುದೀರ್ಘ ವರ್ಷಕ್ಕೆ ಬುಕ್ಕಿಂಗ್ ಮಾಡಿದವರಿಗೆ ಶೀಘ್ರ ಸೇವೆ :
ಕೋಲಸೇವೆಯಲ್ಲಿ 4ರ ಬದಲಿಗೆ 8 ಮಂದಿಗೆ ಸೇವೆ ಸಂದಾಯಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ಈ ವ್ಯವಸ್ಥೆ ಮೇ 3ರಂದು ಆರಂಭಗೊಂಡಿದ್ದು, ಇದು ವಾರದಲ್ಲಿ 5 ದಿನ ಇರುತ್ತದೆ. ಇದರಿಂದ ಸುದೀರ್ಘ ವರ್ಷಕ್ಕೆ ಬುಕ್ಕಿಂಗ್ ಮಾಡಿದವರಿಗೆ ಶೀಘ್ರ ಸೇವೆ ಸಂದಾಯವಾಗುವ ವ್ಯವಸ್ಥೆ ಕಲ್ಪಿಸಿದಂತಾಗುತ್ತದೆ. ಇದುವರೆಗೆ ವರ್ಷಕ್ಕೆ 600ರಿಂದ 700 ಮಂದಿಗೆ ಮಾತ್ರ ಕೋಲ ಸೇವೆಗೆ ಅವಕಾಶ ಸಿಗುತ್ತಿತ್ತು. ಬುಕಿಂಗ್ ಸಂಖ್ಯೆ ವರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಭಕ್ತರಿಗೆ ಶೀಘ್ರ ಸೇವೆಗೆ ಅವಕಾಶ ನೀಡುವ ದೃಷ್ಟಿಯಿಂದ ದೈವದ ಬಳಿ ಹರಕೆ ಮಾಡಿ, ಮಾಗಣೆಯ ದೈವದ ಅಪ್ಪಣೆ ಪಡೆದು, ದಿನಕ್ಕೆ ನಾಲ್ಕು ಕೋಲ ಸೇವೆ ನೀಡಿದರೂ ಪ್ರತಿ ಕೋಲದಲ್ಲಿ ಇಬ್ಬರಿಗೆ ಪ್ರಸಾದದಂತೆ 8 ಮಂದಿಗೆ ಪ್ರಸಾದ ನೀಡುವುದಕ್ಕೆ ನಿರ್ಧರಿಸಲಾಯಿತು. ಹೀಗಾಗಿ ಮುಂದಿನ ದಿನಗಳಲ್ಲಿ ಕೋಲ ಸೇವೆ ನೀಡಲು ಬುಕಿಂಗ್ ಮಾಡುವವರಿಗೆ ಅನುಕೂಲವಾಗಲಿದೆ. ಪ್ರತಿದಿನ ನಡೆಯುತ್ತಿದ್ದ ಕೋಲ ಸೇವೆಯಲ್ಲಿ 4ರ ಬದಲಿಗೆ 8 ಮಂದಿಗೆ ಸೇವೆ ಸಂದಾಯಕ್ಕೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಸೇವೆ ಮಾಡಿಸುವವರಿಗೂ ಅನುಕೂಲವಾಗಿದೆ.

Ad Widget

Ad Widget

Ad Widget

ಕ್ಷೇತ್ರ ಪಣೋಲಿಬೈಲ್ ಎಲ್ಲಿದೆ
ಮಂಗಳೂರಿನಿಂದ ಬಿಸಿ ರೋಡಿಗೆ ಹೆದ್ದಾರಿಯಲ್ಲಿ ಬಂದು ಮುಂದಕ್ಕೆ ಸಾಗಿದಾಗ ಮೇಲ್ಕಾರ್‌ನಿಂದ ಬಲಭಾಗಕ್ಕೆ ಕೊಣಾಜೆ ಮಾರ್ಗದಲ್ಲಿ ಸಾಗುವ ಸಂದರ್ಭ ಮಾರ್ನಬೈಲ್ ನಲ್ಲಿ ಎಡಭಾಗಕ್ಕೆ ತಿರುಗಿ ಸುಮಾರು 4 ಕಿಮೀ ದೂರದಲ್ಲಿ ಸಾಗಿದರೆ, ಪಣೋಲಿಬೈಲ್ ಕ್ಷೇತ್ರ ಕಾಣಲು ಸಿಗುತ್ತದೆ. ಇಲ್ಲಿ ಕಲ್ಲುರ್ಟಿ ಕಲ್ಕುಡರು ನೆಲೆಯಾಗಿದ್ದಾರೆ.

ಕೋಲ ಯಾವಾಗೆಲ್ಲ ಇರುತ್ತದೆ
ಸೋಮವಾರ ಹಾಗೂ ಶನಿವಾರ ಹೊರತುಪಡಿಸಿ ವಾರದಲ್ಲಿ 5 ದಿನ ಕೋಲ ಸೇವೆಗೆ ಅವಕಾಶವಿದೆ. ಆಟಿ ತಿಂಗಳು, ಅಮಾವಾಸ್ಯೆ, ಷಷ್ಠಿ, ಸಜಿಪಮಾಗಣೆಯ ಜಾತ್ರೆ, ಉತ್ಸವಾದಿಗಳ ಸಂದರ್ಭ ಕೋಲ ಸೇವೆ ಇರುವುದಿಲ್ಲ.

ಪಣೋಲಿಬೈಲ್ ಕಲ್ಲುರ್ಟಿ ಕ್ಷೇತ್ರ ತುಳುನಾಡಿನ ಅತ್ಯಂತ ಶ್ರೀಮಂತ ಕ್ಷೇತ್ರ. ವಾರಕ್ಕೆ ಐದು ದಿವಸ ಇಪ್ಪತ್ತು ಹರಕೆಯ ಕೋಲ ಅದೇ ರೀತಿ ವಾರದ ಮೂರು ದಿನ ನಾಲ್ಕು ಸಾವಿರಕ್ಕೂ ಹೆಚ್ಚು ಅಗೆಲು ಸೇವೆ ಹರಕೆಯನ್ನು ಪಡೆಯುತ್ತಿರುವ ಕ್ಷೇತ್ರವಿದು. ಮದುವೆ, ವಿದ್ಯೆ, ಕಷ್ಟಕಾರ್ಪಣ್ಯ, ಕಳ್ಳತನ ಉದ್ಯೋಗಕ್ಕೆ ಅಲ್ಲದೆ ಶರೀರದಲ್ಲಿರುವ ಪ್ರೇತಾತ್ಮ ಇನ್ನಿತ್ತರ ದುಷ್ಟಶಕ್ತಿಗಳನ್ನು ಕೋಲದಲ್ಲಿ ವಿಮೋಚನೆಗೊಳಿಸುತ್ತಾರೆ. ಈ ಜಾಗದಲ್ಲಿ ಪಟ್ಟ ಹರಕೆ ಹೇಳುತ್ತಾ ಜನರು ಕಷ್ಟ ಕಳೆಯುತ್ತಾ ಇರುವ ಶ್ರೀ ಕ್ಷೇತ್ರ ಪಣೋಲಿಬೈಲು.

ಇಲ್ಲಿಗೆ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಸುಬ್ರಹ್ಮಣ್ಯ, ನೆಲ್ಯಾಡಿ, ಮಡಿಕೇರಿ, ಮಂಗಳೂರು, ಮಂಜೇಶ್ವರ, ಕಾಸರಗೋಡು, ಉಡುಪಿ, ಕುಂದಾಪುರ, ಕಾರ್ಕಳ, ಮೂಡಬಿದ್ರೆ, ಕೊಡಗು ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಬರುತ್ತಾರೆ. ಇತರ ಪ್ರದೇಶಗಳಿಂದಲೂ ಗಮನಾರ್ಹ ಪ್ರಮಾಣದ ಭಕ್ತರು ನಡೆದುಕೊಳ್ಳುತ್ತಾರೆ. ಹರಕೆ ಕಾಣಿಕೆ, ಅಗೇಲು ಕೋಲ ಬೆಳ್ಳಿ ಬಂಗಾರದ ಸೇವೆಯನ್ನು ಕೊಡುತ್ತಿದ್ದಾರೆ. ಆಸ್ತಿ ವಿಚಾರ ತಕರಾರು, ಕೋರ್ಟ್ ವಿಚಾರ ಇನ್ನಿತರ ಕಷ್ಟ ಕಾರ್ಪಣ್ಯದಲ್ಲಿದ್ದವರು ಈ ಕ್ಷೇತ್ರಕ್ಕೆ ಬಂದು ದೈವದ ಮುಂದೆ ತಮ್ಮ ಕಷ್ಟ ತೋಡಿಕೊಂಡು ಹರಕೆಯನ್ನು ಹೇಳಿಕೊಳ್ಳುತ್ತಾರೆ. ಸತ್ಯ, ಧರ್ಮ, ನ್ಯಾಯವನ್ನು ಎತ್ತಿ ಹಿಡಿಯುವ ಈ ದೈವವು ಎಲ್ಲಾ ಮೂಲೆಗಳಂದಲೂ ಭಕ್ತರನ್ನು ಸೆಳೆದುಕೊಳ್ಳುತ್ತಿದೆ.

Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading