ಸುಳ್ಯ
PFI Ban : ಪಿಎಫ್ಐ ಬ್ಯಾನ್ ಹಿನ್ನಲೆ ; ದಕ್ಷಿಣ ಕನ್ನಡದ ಎಲ್ಲಾ ಕಚೇರಿಗಳನ್ನು ಯಾವುದೇ ಕ್ಷಣದಲ್ಲಿ ಸೀಜ್
ಮಂಗಳೂರು, ಸೆ 28 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಜೆ ವೇಳೆಗೆ ಎಲ್ಲಾ PFI ಕಚೇರಿಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈಗಾಗಲೇ PFI ನೀಷೇಧದ ಆದೇಶ ಪ್ರತಿ ಜಿಲ್ಲಾಡಳಿತ ಕಚೇರಿ ತಲುಪಿದೆ. ಇಂದು ಬೆಳ್ಳಂಬೆಳಗ್ಗೆ ಕೇಂದ್ರ ಸರ್ಕಾರವು PFI ಸೇರಿದಂತೆ ಅದರ 8 ಅಂಗಸಂಸ್ಥೆಗಳನ್ನು ನಿಷೇಧ ಹೇರಿ ಆದೇಶ ಹೊರಡಿಸಿತ್ತು.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ PFI ಕಚೇರಿಗಳನ್ನು ಯಾವುದೇ ಕ್ಷಣದಲ್ಲಾದರೂ ಬೀಗ ಜಡಿಯುವ ಸಾಧ್ಯತೆಯಿದೆ. ಈಗಾಗಲೇ ದೇಶದಲ್ಲಿ PFI ಕಚೇರಿಗಳಿಗೆ ಬೀಗ ಜಡಿಯಲು ಆರಂಭಿಸಿದೆ. ಮುಂಬೈನಲ್ಲಿ ಕಚೇರಿಯನ್ನು ಸೀಜ್ ಮಾಡಿ ಅದರ ನಾಮಫಲಕಗಳನ್ನು ತೆರವುಗೊಳಿಸಲಾಗಿದೆ. ಅಲ್ಲದೆ ಆ ಸಂಘಟನೆಯ ವೆಬ್ ಸೈಟ್ ಬ್ಲಾಕ್ ಆಗಿದ್ದು, ಎಲ್ಲಾ ಕಾರ್ಯಚಟುವಟಿಕೆಗಳು ಸ್ಥಗಿತವಾಗಿದೆ.
ಕಳೆದ ವಾರ ದೇಶಾದ್ಯಂತ NIAಯು ದಾಳಿ ನಡೆಸಿತ್ತು. PFI ವಿರುದ್ಧ ಹಲವು ದಾಖಲೆಗಳನ್ನು ಸಂಗ್ರಹಿಸಿತ್ತು. ಆ ಸಂಘಟನೆಯ ಹಲವರನ್ನು ಬಂಧಿಸಿದ್ದರು. ಉಳಿದ ಮುಖಂಡರ ಚಲವಲನಗಳ ಮೇಲೆ ತೀವ್ರ ನಿಗಾ ಇಡಲಾಗಿದೆ.
ಸುಳ್ಯ
Kadaba-ಕಡಬ: ಆಸ್ಪತ್ರೆಯಿಂದಲೇ ಆಂಬ್ಯುಲೆನ್ಸ್ನಲ್ಲಿ ತೆರಳಿ ಸಿಇಟಿ ಬರೆದ ಆ್ಯಸಿಡ್ ದಾಳಿ ಸಂತ್ರಸ್ತೆ
ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಸ್ಪತ್ರೆಯಿಂದಲೇ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಬರೆದಿದ್ದಾರೆ.
ಮಾ. 4ರಂದು ಕಾಲೇಜಿನಲ್ಲಿ ಗಣಿತ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಜಿನ್ ಎಂಬಾತ ಆ್ಯಸಿಡ್ ಎರಚಿದ ಕಾರಣ ಮೂವರು ವಿದ್ಯಾರ್ಥಿನಿಯರಿಗೆ ಸುಟ್ಟಗಾಯಗಳಾಗಿತ್ತು. ಇಬ್ಬರು ವಿದ್ಯಾರ್ಥಿನಿಯರು 12% ಮತ್ತು 10% ಸುಟ್ಟಗಾಯಗಳನ್ನು – ಅನುಭವಿಸಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಖ್ಯ ಸಂತ್ರಸ್ತೆ 17 ವರ್ಷದ ಯುವತಿಗೆ ಸುಮಾರು 20% ಸುಟ್ಟಗಾಯಗಳಾಗಿತ್ತು. ಈಕೆ ಇನ್ನೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಕೆ ತನ್ನ ತಾಯಿಯೊಂದಿಗೆ ಐಸೋಲೇಶನ್ ವಾಡ್೯ನಲ್ಲಿ ಇದ್ದುಕೊಂಡೇ ಸಿಂಟಿಗೆ ತಯಾರಿ ನಡೆಸುತ್ತಿದ್ದರು.
ಸಿಇಟಿಗಾಗಿ ಈಜೆ ಮತ್ತು ಸಂತ್ರಸ್ತ ಇತರ ಇಬ್ಬರು ಸಹಪಾಠಿಗಳಿಗೆ ಪುತ್ತೂರಿನಲ್ಲಿ ಪರೀಕ್ಷಾ ಕೇಂದ್ರ ನಿಗದಿಯಾಗಿತ್ತು. 6 ಆದರೆ ಚಿಕಿತ್ಸೆ ವೇಳೆ ದೂರದ ಪ್ರಯಾಣ ಮಾಡದಂತೆ ಬಾಲಕಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಸಲಹೆ ನೀಡಿದ್ದ ಕಾರಣ ದ.ಕ ಜಿಲ್ಲಾ ಪದವಿ ಪೂರ್ವ ಇಲಾಖೆಯ ಉಪನಿರ್ದೆಶಕರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಸ್. ರಮ್ಯಾ ಅವರ ಗಮನಕ್ಕೆ ತಂದಿದ್ದರು. ಹೀಗಾಗಿ ಮಂಗಳೂರಿನ ಆಸ್ಪತ್ರೆಯಿಂದ ಸುಮಾರು ಒಂದು ಕಿ.ಮೀ ದೂರದಲ್ಲಿರುವ ಪದವಿಪೂರ್ವ ಕಾಲೇಜುನಲ್ಲಿ ಈಕೆಗೆ ಸಿಐಟಿ ಬರೆಯಲು ರಮ್ಯಾ ಅವರು ಅನುಮತಿ ನೀಡಿದ್ದರು.
ಅದರಂತೆ ವಿದ್ಯಾರ್ಥಿನಿ ಸಿಐಟಿ ಕೇಂದ್ರಕ್ಕೆ ತನ್ನ ತಾಯಿಯೊಂದಿಗೆ ಅಂಬ್ಯುಲೆನ್ಸ್ನಲ್ಲಿ ಬಂದಿದ್ದು ಆಕೆಗೆ ಪ್ರತ್ಯೇಕ ತರಗತಿಯನ್ನು ನೀಡಲಾಗಿತ್ತು. ಅಲ್ಲಿ ಮೊದಲ ದಿನ ಜೀವಶಾಸ್ತ್ರ ಪರೀಕ್ಷೆ ಬರೆದು ಬಳಿಕ ಮಧ್ಯಾಹ್ನ 12.15ಕ್ಕೆ ಆಸ್ಪತ್ರೆಗೆ ಮರಳಿ 2.30ಕ್ಕೆ ವಾಪಸ್ ಬಂದು ಗಣಿತ ಪತ್ರಿಕೆ ಬರೆದಿದ್ದಾರೆ. ಏ. 19ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯದ ಪರೀಕ್ಷೆಗಳನ್ನು ಬರೆದಿದ್ದಾರೆ.
ಆ್ಯಸಿಡ್ ದಾಳಿಯಿಂದ ಸಂತ್ರಸ್ತರಾಗಿರುವ ಮೂವರು ವಿದ್ಯಾರ್ಥಿನಿಯರೂ ಎಪ್ರಿಲ್ 29ರಂದು ಪ್ರಾರಂಭವಾಗುವ ಪಿಯುಸಿ ಮರು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ. ವೈದ್ಯರ ಸಲಹೆಯಂತೆ ಇಲಾಖೆಯು ಮರು ಪರಿಕ್ಷೆಗೆ ಹಾಜರಾಗಲು ಅನುಕೂಲವಾಗುವಂತೆ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ಪದವಿ ಪೂರ್ವ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ. ಮಾಹಿತಿ ನೀಡಿದ್ದಾರೆ.
ಸುಳ್ಯ
Padmaraj R. Poojary-ಅಪಪ್ರಚಾರಕ್ಕೆ ಕಿವಿಗೊಡಬೇಡಿ; ಪ್ರೀತಿಯಿಂದಲೇ ಚುನಾವಣೆ ಎದುರಿಸೋಣ; ಸಂಪಾಜೆಯ ಕಲ್ಲುಗುಂಡಿಯಲ್ಲಿ ನಡೆದ ಕಾರ್ನರ್ ಮೀಟಿಂಗಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ
ಸುಳ್ಯ: ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವು ಸ್ಪಷ್ಟವಾಗಿದೆ. ಹಾಗಾಗಿ ವಿರೋಧಿಗಳ ಅಪಪ್ರಚಾರವೂ ಹೆಚ್ಚಾಗುತ್ತಿದೆ. ಮನೆಮನೆಗಳಿಗೆ ತೆರಳಿ ಆಣೆ – ಪ್ರಮಾಣ ಮಾಡಿಸುವ ಕೆಲಸಕ್ಕೂ ಮುಂದಾಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಇದಕ್ಕೆ ತಲೆಕೆಡಿಸಿಕೊಳ್ಳದೇ, ಪ್ರೀತಿಯಿಂದ ಚುನಾವಣೆಯನ್ನು ಎದುರಿಸಲು ಸಿದ್ಧರಾಗಿ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಸಂಪಾಜೆಯಿಂದ ಕಲ್ಲುಗುಂಡಿವರೆಗೆ ರೋಡ್ ಶೋ ಬಳಿಕ ನಡೆದ ಕಾರ್ನರ್ ಮೀಟಿಂಗ್ ನಲ್ಲಿ ಮಾತನಾಡಿದರು.
ಪ್ರಜಾಪ್ರಭುತ್ವದ ದೊಡ್ಡ ಹಬ್ಬವಾದ ಚುನಾವಣೆಯನ್ನು ಎದುರಿಸಲು ಸಿದ್ಧರಾಗಿ. ಅಭಿವೃದ್ಧಿಯ ವಿಚಾರವಾಗಿ ನಾವು ಚುನಾವಣೆಯನ್ನು ಎದುರಿಸಬೇಕಾಗಿದೆ ಎಂದರು.
ಬಿಜೆಪಿ ಸಂಸದರಿದ್ದ ಕಳೆದ ಮೂವತ್ಮೂರು ವರ್ಷಗಳಲ್ಲಿ ಜಿಲ್ಲೆ ಅಭಿವೃದ್ಧಿ ಶೂನ್ಯವಾಗಿದೆ. ಕಾಂಗ್ರೆಸ್ ಸಂಸದರಿದ್ದಾಗ ಆಗಿದ್ದ ಅಭಿವೃದ್ಧಿ, ಜಿಲ್ಲೆಗೆ ಬಂದಿದ್ದ ಯೋಜನೆಗಳು ಜಿಲ್ಲೆಯನ್ನು ಮಾದರಿಯಾಗಿ ರೂಪಿಸಿತ್ತು. ಮುಂದೆಯೂ ಜಿಲ್ಲೆ ದೇಶದಲ್ಲೇ ಮಾದರಿಯಾಗಿ ರೂಪುಗೊಳ್ಳಲು ಕಾಂಗ್ರೆಸನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಇಂದು ಅಭಿವೃದ್ಧಿಯ ವಿಚಾರವಾಗಿ ಚರ್ಚೆ ಆಗಬೇಕಾಗಿದೆ. ಕಾಂಗ್ರೆಸ್ ಸರಕಾರ ನುಡಿದಂತೆ ನಡೆದಿದೆ ಹಾಗೂ ನುಡಿದಂತೆ ನಡೆಯಲಿದ್ದೇವೆ. ಈಗಾಗಲೇ ಗ್ಯಾರೆಂಟಿ ಯೋಜನೆ ನೀಡಿ, ಅನುಷ್ಠಾನ ಮಾಡಲಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಇನ್ನು ಹಲವು ಗ್ಯಾರೆಂಟಿ ಯೋಜನೆಗಳು ಸಿಗಲಿವೆ ಎಂದರು.
ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ ಮಾತನಾಡಿ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಅತ್ಯುತ್ತಮ ಅಭ್ಯರ್ಥಿಯಾಗಿ ಪದ್ಮರಾಜ್ ಆರ್. ಪೂಜಾರಿ ಇದ್ದಾರೆ. ನಮ್ಮ ಉತ್ತಮ ಭವಿಷ್ಯಕ್ಕಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ ಎಂದರು.
ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ, ಗೇರುನಿಗಮದ ಅಧ್ಯಕ್ಷೆ ಮಮತ ಗಟ್ಟಿ, ಗ್ರಾ.ಪಂ. ಅಧ್ಯಕ್ಷೆ ಸುಮತಿ ಶಕ್ತಿವೇಲು, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಕಾಂಗ್ರೆಸ್ ಮುಖಂಡರಾದ ಜಿ. ಕೃಷ್ಣಪ್ಪ, ಟಿ.ಎಂ. ಶಹೀದ್, ವೆಂಕಪ್ಪ ಗೌಡ, ನಿತ್ಯಾನಂದ ಮುಂಡೋಡಿ, ಎಂ.ಎಸ್. ಮಹಮ್ಮದ್, ಜಿ.ಕೆ. ಹಮೀದ್, ಎಸ್.ಕೆ. ಹನೀಫ್, ಅಬೂಸಾಲಿ ಗೂನಡ್ಕ, ಕಿರಣ್ ಬುಡ್ಲೆಗುತ್ತು, ಮಹಮದ್ ಕುಂಞಿ ಗೂನಡ್ಕ, ಗೀತಾ ಕೋಲ್ಚಾರ್ , ಕೆ.ಪಿ. ಜಾನಿ ಕಲ್ಲುಗುಂಡಿ, ವಸಂತ ಪೆಲ್ತಡ್ಕ, ಎ.ಕೆ. ಇಬ್ರಾಹಿಂ, ಶೌವಾದ್ ಗೂನಡ್ಕ, ಯಮುನ ಬಿ.ಎಸ್., ಸುಂದರಿ ಮುಂಡಡ್ಕ, ಕಾಂತಿ ಬಿ.ಎಸ್., ಲೂಕಾಸ್ ಟಿ., ಲಿಸ್ಸಿ ಮೊನಾಲಿಸಾ, ರಾಜು ನೆಲ್ಲಿಕುಮೇರಿ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ವಹೀದಾ ಇಸ್ಮಾಯಿಲ್, ಡಿಸಿಸಿ ಉಪಾಧ್ಯಕ್ಷೆ ರಾಜೀವಿ ಆರ್. ರೈ, ಡಿಸಿಸಿ ಸದಸ್ಯೆ ಜೂಲಿಯಾನಾ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ತೋಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಭೇಟಿ:
ರೋಡ್ ಶೋ, ಕಾರ್ನರ್ ಸಭೆಯ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ತೋಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.
ಸುಳ್ಯ
Kadaba-ಕಡಬ : ಕುಮಾರಧಾರ ನದಿಯಲ್ಲಿ ಮೊಸಳೆ ಮೃತಪಡಲು ಪ್ಲಾಸ್ಟಿಕ್ ಸೇವನೆ ಯೇ ಕಾರಣ – ನದಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಪರಿಸರ ಪ್ರೇಮಿಗಳ ಕಿಡಿ
ಕಡಬ ಸಮೀಪದ ಪುಳಿಕುಕ್ಕು ಬಳಿ ಕುಮಾರಧಾರ ನದಿಯಲ್ಲಿ ಮೃತಪಟ್ಟ ಮೊಸಳೆಯ ಸಾವಿಗೆ ಪ್ಲಾಸ್ಟಿಕ್ ಸೇವನೆ ಮಾಡಿರುವುದೇ ಕಾರಣ ಎನ್ನುವುದು ಮೊಸಳೆಯ ಮೃತದೇಹದ ಮರಣೋತ್ತರ ಪರೀಕ್ಷೆಯ ವೇಳೆ ದೃಢಪಟ್ಟಿದೆ. ಮರಣೋತ್ತರ ಪರೀಕ್ಷೆ ವೇಳೆ ಮೃತ ಮೊಸಳೆಯ ಹೊಟ್ಟೆಯಲ್ಲಿ 1 ಕೆ.ಜಿ.ಗೂ ಅಧಿಕ ಪ್ಲಾಸ್ಟಿಕ್ ಹಾಗೂ ಮತ್ತಿತರ ತ್ಯಾಜ್ಯ ಪತ್ತೆಯಾಗಿದೆ.
ಕಡಬ-ಪಂಜ ಸಂಪರ್ಕ ರಸ್ತೆಯ ಪಂಜ ವಲಯ ಅರಣ್ಯ ವ್ಯಾಪ್ತಿಯ ಪುಳಿಕುಕ್ಕು ಸೇತುವೆ ಕೆಳಭಾಗದ ಕುಮಾರಧಾರ ನದಿಯಲ್ಲಿ ಮೊಸಳೆ ಮೃತದೇಹ ಪತ್ತೆಯಾಗಿತ್ತು.. ಅರಣ್ಯ ಇಲಾಖೆಯ ಏನೆಕಲ್ಲು ನರ್ಸರಿ ಪ್ರದೇಶದಲ್ಲಿ ಮೊಸಳೆಯ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕಡಬ ತಾಲೂಕು ಪಶು ವೈದ್ಯಾಧಿಕಾರಿ ಡಾ.ಅಜಿತ್ ನಡೆಸಿದರು.
ಮರಣೋತ್ತರ ಪರೀಕ್ಷೆ ವೇಳೆ ಮೊಸಳೆಯ ಹೊಟ್ಟೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ದ ಕೋಳಿ ತ್ಯಾಜ್ಯ, ಮಕ್ಕಳಿಗೆ ಬಳಸುವ ಪ್ಯಾಡ್ ಪತ್ತೆಯಾಗಿತ್ತು. . ಈ ತ್ಯಾಜ್ಯ ಮೊಸಳೆಯ ಹೊಟ್ಟೆಯಲ್ಲಿ ಜೀರ್ಣಗೊಳ್ಳದೆ ಅಸೌಖ್ಯಗೊಂಡು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಇದೊಂದು ಹೆಣ್ಣು ಮೊಸಳೆಯಾಗಿದ್ದು ನಾಲ್ಕು ವರ್ಷ ವಯಸ್ಸಿನದ್ದು ಎಂದು ಅಂದಾಜಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಏನೆಕಲ್ಲಿನ ನರ್ಸರಿ ಪ್ರದೇಶದಲ್ಲಿ ಮೊಸಳೆ ಕಳೆಬರಹದ ಅಂತ್ಯ ಕ್ರಿಯೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಅರಣ್ಯ ಉಪವಿಭಾಗ ಎಸಿಎಫ್ ಪ್ರವೀಣ್ ಕುಮಾರ್ ಶೆಟ್ಟಿ, ಪಂಜ ವಲಯ ಅರಣ್ಯಾಕಾರಿ ಗಿರೀಶ್, ಉಪ ವಲಯಾರಣ್ಯಾಕಾರಿಗಳಾದ ಸುಬ್ರಹ್ಮಣ್ಯ, ಅಜಿತ್ ಮತ್ತಿತರರು ಭಾಘವಹಿಸಿದ್ದರು.
ಕೆಲವು ಕಿಡಿಗೇಡಿಗಳು ಕೋಳಿ ತ್ಯಾಜ್ಯ, ದನ ಕಡಿದು ಮಾಂಸ ಮಾಡಿರುವುದರ ತ್ಯಾಜ್ಯಗಳನ್ನು ನೇರವಾಗಿ ನದಿಗೆ ಎಸೆಯುತ್ತಾರೆ. ಗೋ ಕಳ್ಳರು ರಾತ್ರಿ ಹೊತ್ತು ಯಾರೂ ಇಲ್ಲದ ವೇಳೆ ನದಿಗೆ ತ್ಯಾಜ್ಯ ಎಸೆದರೆ, ಕೋಳಿ ತ್ಯಾಜ್ಯ ಎಸೆಯುವವರು ರಾತ್ರಿ ತಮ್ಮ ಅಂಗಡಿ ಬಂದ್ ಮಾಡಿದ ಬಳಿಕ ಜನಸಂದಣೀ ಇಲ್ಲದಿದ್ದ ಸಮಯ ಗಮನಿಸಿ ನದಿಗೆ ಅಥವಾ ತೋಡಿಗೆ ಎಸೆದು ಬರುತ್ತಾರೆ. ಇದರಿಂದ ನೀರು ಕಲುಷಿತಗೊಂಡು, ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿಗೂ ತತ್ವಾರ ಉಂಟಾಗಿದೆ. ಇನ್ನು ಇದನ್ನು ಸೇವಿಸುವ ಜಲಚರಗಳು ಸಾವನ್ನಪ್ಪುತ್ತಿವೆ. ಇದರ ವಿರುದ್ದ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ
-
ಬೆಂಗಳೂರು2 days ago
Viral Video: ಮಹಿಳಾ ಪದಾಧಿಕಾರಿಯೊಂದಿಗಿನ ಕಾಂಗ್ರೆಸ್ ಶಾಸಕನದು ಎನ್ನಲಾದ ವಾಟ್ಸ್ ಆಪ್ ಕಾಲ್ ವಿಡಿಯೋ ವೈರಲ್
-
ದಕ್ಷಿಣ ಕನ್ನಡ2 days ago
Communal Hatred Murder: ವಿಟ್ಲದ ಹಲ್ಲೆಗೆ ಪ್ರತಿಕಾರವಾಗಿ ಬಂಟ್ವಾಳದಲ್ಲಿ ಕೋಮು ದ್ವೇಷದಿಂದ ಹತ್ಯೆ : ನಾಲ್ವರಿಗೆ ಜೀವಾವಧಿ ಶಿಕ್ಷೆ
-
ದಕ್ಷಿಣ ಕನ್ನಡ19 hours ago
Heart attack : ಚೌಕಿಯಲ್ಲಿ ವೇಷ ಕಳಚುತ್ತಿದ್ದಾಗ ಹೃದಯಘಾತಕ್ಕೆ ಬಲಿಯಾದ ಹಿರಿಯ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು
-
ದಕ್ಷಿಣ ಕನ್ನಡ2 days ago
Woman Missing: ಉಪ್ಪಿನಂಗಡಿ : ತಾಯಿ ಮತ್ತು ಒಂದು ವರ್ಷದ ಮಗು ನಾಪತ್ತೆ – ಪತ್ತೆಯಾದಲ್ಲಿ ತಿಳಿಸುವಂತೆ ಮನವಿ
-
ಕ್ರೈಂ2 days ago
Prajwal Revanna Sex Scandal: ತಕ್ಷಣ ತನಿಖೆಗೆ ಹಾಜರಾಗಿ : ಪ್ರಜ್ವಲ್ ರೇವಣ್ಣ ಹಾಗೂ ಎಚ್ ಡಿ ರೇವಣ್ಣ ಮನೆಗೆ ನೋಟಿಸ್ ಅಂಟಿಸಿದ SIT
-
ರಾಷ್ಟ್ರೀಯ2 days ago
RBI Guidelines on Penal Interest : ಸಾಲಕ್ಕೆ ಹೆಚ್ಚುವರಿ ಬಡ್ಡಿ ಬೇಡ – ಬ್ಯಾಂಕ್ಗಳ ಆಟಾಟೋಪಕ್ಕೆ ಆರ್ಬಿಐನಿಂದ ಮೂಗುದಾರ; ಬ್ಯಾಂಕುಗಳಿಗೆ RBI ನೀಡಿದ ಖಡಕ್ ಸೂಚನೆಯೇನು ?
-
ಅಂತರ ರಾಜ್ಯ17 hours ago
Hindu marriage-ಶಾಸ್ತ್ರೋಕ್ತ ಆಚರಣೆಯಿಲ್ಲದೇ ನಡೆದ ಹಿಂದೂ ಮದುವೆಗಳು ಅಸಿಂಧು – ಸುಪ್ರೀಂ ಕೋರ್ಟ್
-
ಅಂತರ ರಾಜ್ಯ16 hours ago
Health Ministry-ಕೋವಿಡ್ ವ್ಯಾಕ್ಸಿನೇಷನ್ ಪ್ರಮಾಣಪತ್ರದಿಂದ ಮೋದಿ ಅವರ ಫೋಟೋ ತೆಗೆದು ಹಾಕಿದ ಆರೋಗ್ಯ ಇಲಾಖೆ – ಅಸ್ಟ್ರಾಜೆನೆಕಾ ಸಂಸ್ಥೆಯ ವರದಿಗೆ ತಳುಕು ಹಾಕಿ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ