Ad Widget

ಉಜಿರೆ : ನಿಂತಿದ್ದ ಬೊಲೋರೊಗೆ ಕೆಎಸ್‌ ಅರ್‌ ಟಿಸಿ ಬಸ್ಸು ಢಿಕ್ಕಿ – ಒರ್ವ ಮೃತ್ಯು – 7 ಮಂದಿ ಗಂಭೀರ

WhatsApp Image 2022-11-24 at 08.41.14
Ad Widget

Ad Widget

Ad Widget

ಬೆಳ್ತಂಗಡಿ; ಬಸ್ ಮತ್ತು  ಬೊಲೋರೊ ಮಧ್ಯೆ ಸಂಭವಿಸಿದ  ಭೀಕರ ಅಪಘಾತದಲ್ಲಿ  ಓರ್ವ ಮೃತಪಟ್ಟು  ಏಳು ಮಂದಿ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳದ ಕುದ್ರಾಯ ಎಂಬಲ್ಲಿ ನ 24 ರಂದು ನಡೆದಿದೆ. ಮಂಡ್ಯ ಜಿಲ್ಲೆಯ ಚೆನ್ನಸಾಂದ್ರ ನಿವಾಸಿ ಮಾಹದೇವ(63) ಅಪಘಾತದಲ್ಲಿ ಮೃತಪಟ್ಟವರು.

Ad Widget

Ad Widget

Ad Widget

Ad Widget

ಅಪಘಾತದಲ್ಲಿ ಐವರು ಮಹಿಳೆಯರು ಮಗು ಸೇರಿ ಏಳು ಮಂದಿಗೆ ಗಂಭೀರ ಗಾಯವಾಗಿದ್ದು,ಇವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರು ಹಾಗೂ ಮೃತಪಟ್ಟವರು ಒಂದೇ ಕುಟುಂಬದ ಸದಸ್ಯರು. ಧರ್ಮಸ್ಥಳದಲ್ಲಿ ದೀಪೋತ್ಸವದ ಹಿನ್ನೆಲೆ ಮಂಡ್ಯ ಜಿಲ್ಲೆಯಿಂದ  ಒಂದೇ ಕುಟುಂಬದ ಹತ್ತು ಮಂದಿ ಬೊಲೋರೊ ವಾಹನದಲ್ಲಿ  ಆಗಮಿಸಿದ್ದರು

Ad Widget

Ad Widget

Ad Widget

Ad Widget

ಕುದ್ರಾಯ ಎಂಬಲ್ಲಿ ಬೊಲೋರೊ ವಾಹನವನ್ನು  ರಸ್ತೆಯ ಬಲಕ್ಕೆ ನಿಲ್ಲಿಸಿ ಇಳಿದು ಅಂಗಡಿಗೆ ಹೋಗುತ್ತಿದ್ದ ವೇಳೆ ಧರ್ಮಸ್ಥಳ ಡಿಪೋದಿಂದ ಮೈಸೂರಿಗೆ ತೆರಳುತ್ತಿದ್ದ ksrtc ಬಸ್ ನಿಂತಿದ್ದವರಿಗೆ ಹಾಗೂ ಬೊಲೋರೊ ವಾಹನಕ್ಕೆ ಢಿಕ್ಕಿ ಹೊಡೆದಿದೆ.ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

Ad Widget

Leave a Reply

Recent Posts

Belthangady | ಕುತಂತ್ರಿ ಬುದ್ದಿ ಬಿಟ್ಟು ಚುನಾವಣೆಯನ್ನು ಚುನಾವಣೆಯ ರೀತಿ ಎದುರಿಸಿ – ಜನಾರ್ಧನ ಪೂಜಾರಿಗೆ ಹಿಂದೂ ವಿರೋಧಿಯೆಂದು ಅಪಪ್ರಚಾರ ಮಾಡಿದ ತಂಡವೇ ಬೆಳ್ತಂಗಡಿಯ ರಕ್ಷಿತ್ ಶಿವರಾಂ ಗೂ ಮಾಡುತ್ತಿದೆ : ಖಡಕ್ ಎಚ್ಚರಿಕೆ ಕೊಟ್ಟ ‘ನಮ ಬಿಲ್ಲವೆರ್’

error: Content is protected !!
%d bloggers like this: