ನಿಧನ ವಾರ್ತೆ
ಉಡುಪಿ : ರೋಸ್ ಸಮಾರಂಭದಲ್ಲಿ ಕುಸಿದು ಬಿದ್ದ ಯುವತಿ ಚಿಕಿತ್ಸೆ ಫಲಿಸದೆ ಮೃತ್ಯು – ಆತಂಕಕ್ಕೆ ಕಾರಣವಾಗುತ್ತಿರುವ ಯುವ ಸಮುದಾಯದ ದಿಢೀರ್ ಸಾವು

ಉಡುಪಿ : ನ 24 : ರೋಸ್ ಸಮಾರಂಭದಲ್ಲಿ (ಕ್ರೈಸ್ತರ ಮದುವೆಯ ಮುನ್ನ ದಿನ ನಡೆಯುವ ಕಾರ್ಯಕ್ರಮ) ಸಂಬಂದಿಕರ ಜತೆ ಸಂಭ್ರಮಿಸುತ್ತಿದ್ದ ಯುವತಿಯೊಬ್ಬಳು ರಕ್ತದೊತ್ತಡ ಕಡಿಮೆಯಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಕೊಳಲಗಿರಿ ಹಾವಂಜೆಯಲ್ಲಿ ನಡೆದಿದೆ.
ಮೃತ ಯುವತಿಯನ್ನು ಹಾವಂಜೆ ನಿವಾಸಿ ಜೋಸ್ನಾ ಲೂಯಿಸ್ ಎಂದು ಗುರುತಿಸಲಾಗಿದೆ. ಇವರು ನಿನ್ನೆ ರಾತ್ರಿ ಕೊಳಲಗಿರಿ ಹಾವಂಜೆಯ ಸಂಬಂಧಿಕರ ಮನೆಯಲ್ಲಿ ನಡೆದ ರೋಸ್ ಸಮಾರಂಭಕ್ಕೆ ತೆರಳಿದ್ದರು.
ಜ್ಯೋತ್ಸ್ನಾ ಅವರು ಬುಧವಾರ ರಾತ್ರಿ ಕೊಳಲಗಿರಿ ಹಾವಂಜೆಯ ತನ್ನ ಸಂಬಂಧಿಕರ ಮದುವೆ ಮನೆಗೆ ಬಂದಿದ್ದರು. ರಾತ್ರಿ 8.30ರ ಹೊತ್ತಿಗೆ ಇತರರೆಲ್ಲ ಪಾನೀಯಗಳನ್ನು ಸೇವಿಸುತ್ತಾ, ನೃತ್ಯ ಮಾಡುತ್ತಾ ಖುಷಿಪಡುತ್ತಿದ್ದರು. ಇದನ್ನೆಲ್ಲ ನೋಡುತ್ತಾ ಕುರ್ಚಿಯಲ್ಲಿ ಕುಳಿತಿದ್ದ ಜ್ಯೋತ್ಸ್ನಾ ಅಲ್ಲೇ ಕುಸಿದುಬಿದ್ದರು.
ಸಂಬಂಧಿಕರು ತಕ್ಷಣ ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆಗೆ ಫಲ ಸಿಗಲಿಲ್ಲ. ಅವರು ಗುರುವಾರ ಬೆಳಗ್ಗೆ ನಿಧನರಾದರು.
ಕಳೆದ ಹಲವು ತಿಂಗಳುಗಳಿಂದ ಯುವ ಸಮುದಾಯ ಹಾಗೂ ಮಧ್ಯ ವಯಸ್ಕ ಸಮುದಾಯ ದಿಢೀರ್ ಕುಸಿತಗೊಂಡು ಮೃತಪಡುತ್ತಿರುವ ಘಟನೆಗಳು ವರದಿಯಾಗುತ್ತಿರುವದು ಆತಂಕಕ್ಕೆ ಕಾರಣವಾಗಿದೆ. ಕರಾವಳಿ ಕರ್ನಾಟಕ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯಲ್ಲೂ ಈ ರೀತಿಯ ಹಲವು ಘಟನೆಗಳು ಜರುಗಿವೆ. ಈ ಭಾಗದ ಹಿರಿಯ ಪತ್ರಕರ್ತ ರಾಜರಾಮ್ ತಲ್ಲೂರು ಈ ಬಗ್ಗೆ ICMR ಗೆ ಹಲವು ತಿಂಗಳುಗಳ ಹಿಂದೆ ಪತ್ರ ಕೂಡ ಬರೆದಿದ್ದರು . ಆದರೆ ಇದಕ್ಕೆ ಉತ್ತರ ಬಂದಿರಲಿಲ್ಲ.
ನಿಧನ ವಾರ್ತೆ
sit ups as punishment: ಒಡಿಶಾದಲ್ಲಿ ವಿದ್ಯಾರ್ಥಿಗೆ ಶಿಕ್ಷಕ ಬಸ್ಕಿ ತೆಗೆಸಿದ್ದರಿಂದ ಬಾಲಕ ಸಾವು

ತರಗತಿ ಸಮಯದಲ್ಲಿ ಆಟವಾಡಿರುವುದಕ್ಕೆ ಶಿಕ್ಷಕರೊಬ್ಬರು ಬಸ್ಕಿ ತೆಗೆಸಿದ್ದರಿಂದ ಶಿಕ್ಷೆಗೆ ಒಳಗಾದ ನಾಲ್ಕನೇ ತರಗತಿ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಜಾಜ್ಪುರ ಜಿಲ್ಲೆಯ ಸರಕಾರಿ ಶಾಲೆಯಲ್ಲಿ ಮಂಗಳವಾರ ಸಂಭವಿಸಿದೆ.
ಒರಾಲಿಯಲ್ಲಿರುವ ಸೂರ್ಯ ನಾರಾಯಣ ನೋಡಲ್ ಹಿರಿಯ ಪ್ರಾಥಮಿಕ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿಯಾಗಿರುವ ರುದ್ರ ನಾರಾಯಣ ಸೇಥಿ ತರಗತಿ ಅವಧಿಯಲ್ಲಿ ನಾಲ್ವರು ಸಹಪಾಠಿಗಳೊಂದಿಗೆ ಮೈದಾನದಲ್ಲಿ ಆಟವಾಡುತ್ತಿದ್ದ. ಇದನ್ನು ನೋಡಿದ ಶಿಕ್ಷಕರೊಬ್ಬರು ರುದ್ರ ನಾರಾಯಣ ಸೇಥಿಗೆ ಬಸ್ಕಿ ತೆಗೆಯುವ ಶಿಕ್ಷೆ ನೀಡಿದ್ದರು.
ಈ ಸಂದರ್ಭ ರುದ್ರ ನಾರಾಯಣ ಸೇಥಿ ಕುಸಿದು ಬಿದ್ದಿದ್ದಾನೆ. ಕೂಡಲೇ ರಸೂಲ್ಪುರ ಬ್ಲಾಕ್ನ ಒರಾಲಿ ಗ್ರಾಮದ ಸಮೀಪದ ನಿವಾಸಿಯಾಗಿರುವ ಆತನ ಹೆತ್ತವರಿಗೆ ಮಾಹಿತಿ ನೀಡಲಾಗಿತ್ತು. ಅನಂತರ ಬಾಲಕನ ಹೆತ್ತವರು ಹಾಗೂ ಶಿಕ್ಷಕರು ಬಾಲಕನನ್ನು ಸಮೀಪದ ಸಮುದಾಯ ಕೇಂದ್ರಕ್ಕೆ, ಅಲ್ಲಿಂದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಅಂತಿಮವಾಗಿ ಕತಕ್ನಲ್ಲಿರುವ ಎಸ್ಸಿಬಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ಕೊಡೊಯ್ದರು. ಆದರೆ, ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ಮಂಗಳವಾರ ರಾತ್ರಿ ಪ್ರಕಟಿಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ರಸೂಲ್ಪುರ ಬ್ಲಾಕ್ ಶಿಕ್ಷಣಾಧಿಕಾರಿ (ಬಿಇಒ) ನಿಲಾಂಬರ ಮಿಶ್ರಾ, ತಾನು ಇದುವರೆಗೆ ಯಾವುದೇ ಔಪಚಾರಿಕ ದೂರು ಸ್ವೀಕರಿಸಿಲ್ಲ. ಔಪಚಾರಿಕ ದೂರು ಸ್ವೀಕರಿಸಿದರೆ, ತನಿಖೆ ಆರಂಭಿಸುತ್ತೇನೆ ಹಾಗೂ ತಪ್ಪೆಸಗಿದವರ ವಿರುದ್ಧ ಅಗತ್ಯದ ಕ್ರಮಗಳನ್ನು ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ರಸೂಲ್ಪುರ ಬ್ಲಾಕ್ನ ಉಪ ಶಿಕ್ಷಣಾಧಿಕಾರಿ ಪ್ರವಾಂಜನ್ ಪಾಟಿ ಶಾಲೆಗೆ ಭೇಟಿ ನೀಡಿದ್ದಾರೆ ಹಾಗೂ ಘಟನೆಯ ಕುರಿತು ತನಿಖೆ ಆರಂಭಿಸಿದ್ದಾರೆ.
ನಿಧನ ವಾರ್ತೆ
Heart Attack | ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾರ್ಕಳದ ಪತ್ರಕರ್ತ ಶೇಖರ್ ಅಜೆಕಾರು ಹೃದಯಾಘಾತದಿಂದ ನಿಧನ

ಕಾರ್ಕಳ : ಹಿರಿಯ ಪತ್ರಕರ್ತ, ಸಾಹಿತಿ ಶೇಖರ್ ಅಜೆಕಾರು (54) ಅವರು ಅ. 31ರಂದು ಹೃದಯಾಘಾತದಿಂದ (Heart Attack) ನಿಧನ ಹೊಂದಿದ್ದಾರೆ. ಮಂಗಳವಾರ ಬೆಳಿಗ್ಗೆ ಕಾರ್ಕಳ ಅಜೆಕಾರಿನ ತನ್ನ ಮನೆಯಲ್ಲಿ ಕುಸಿದು ಬಿದ್ದ ಶೇಖರ್ ಅವರನ್ನು ತಕ್ಷಣ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿಯಾದ್ರೂ ಆ ವೇಳೆಗಾಗಲೇ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು.
ಬೆಳದಿಂಗಳ ಸಾಹಿತ್ಯ ಸಮ್ಮೇಳನ, ಕವಿಗೋಷ್ಟಿಯಂಥ ವಿಭಿನ್ನ ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಗಮನ ಸೆಳೆದಿದ್ದ ಶೇಖರ ಅಜೆಕಾರು ಮುಂಬಯಿಯಲ್ಲಿ ಪತ್ರಿಕೋದ್ಯಮ ಪ್ರಾರಂಭಿಸಿದವರು. ಮುಂಬಯಿಯ ಕರ್ನಾಟಕ ಮಲ್ಲ ಪತ್ರಿಕೆಯಲ್ಲಿ ಉಪಸಂಪಾದಕರಾಗಿದ್ದ ಅವರು ಬಳಿಕ ಮಂಗಳೂರಿನ ಜನವಾಹಿನಿಗೆ ಸೇರಿದ್ದರು.
ಅನಂತರ ಕನ್ನಡ ಪ್ರಭ ಸಹಿತ ಕೆಲವು ಪತ್ರಿಕೆಗಳಿಗೆ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ಇತ್ತೇಚೆಗಿನ ಕೆಲವು ವರ್ಷಗಳಿಂದ ಪತ್ರಿಕೋದ್ಯಮ ಬಿಟ್ಟು ಪೂರ್ಣವಾಗಿ ಸಾಹಿತ್ಯ ಮತ್ತು ಸಂಘಟನೆಯ ಕೆಲಸಗಳಲ್ಲಿ ತೊಡಗಿದ್ದರು.
ಗ್ರಾಮೀಣ ಭಾಗದ ಹಲವಾರು ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿದ್ದ ಶೇಖರ್ ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಷ್ಟ್ರೀಯ ಬಸವಶ್ರೀ ಅವಾರ್ಡ್ 2018, ಕೃಷಿ ಬಂಧು 2019, ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪ್ರಶಸ್ತಿ 2019, ವಿಶ್ವ ದರ್ಶನ ಸಾಹಿತ್ಯ ಪ್ರಶಸ್ತಿ 2019, ಶಿಖಾ ಭಾರತ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ನಿಧನ ವಾರ್ತೆ
ಪುತ್ತೂರು ವಿವೇಕಾನಂದ ಕಾಲೇಜಿನ ಪ್ರಥಮ ವಿದ್ಯಾರ್ಥಿ ಸಂಘದ ಅಧ್ಯಕ್ಷ, 2 ಬಾರಿ ಕಾಂಗ್ರೇಸಿನ ಅಭ್ಯರ್ಥಿಯಾಗಿದ್ದ ಮಹಾಲಿಂಗೇಶ್ವರ ದೇವಸ್ಥಾನದ ಧ್ವಜಸ್ತಂಭ ಹಾಗೂ ರಾಜಗೋಪುರದ ರುವಾರಿ ನೆಲ್ಲಿಕಟ್ಟೆ ಸುಧಾಕರ ಶೆಟ್ಟಿ ಇನ್ನಿಲ್ಲ

ಇತಿಹಾಸ ಪ್ರಸಿದ್ಧ ಕಿಲ್ಲೆ ಮೈದಾನದ ದೇವತಾ ಸಮಿತಿ ಗಣೇಶೋತ್ಸವ ಅಧ್ಯಕ್ಷರಾದ ಹಿರಿಯ ಕಾಂಗ್ರೇಸ್ ಮುಖಂಡರಾದ ಎನ್ ಸುಧಾಕರ್ ಶೆಟ್ಟಿ ಸೆ.10ರಂದು ನಿಧನರಾದರು.
ಸುಧಾಕರ್ ಶೆಟ್ಟಿಯವರು 2016ರಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ದೇವಸ್ಥಾನದ ಧ್ವಜಸ್ತಂಭ ಹಾಗೂ ರಾಜಗೋಪುರದ ಸಮರ್ಪಣೆಯ ರುವಾರಿಯಾಗಿದ್ದರು.
ನೆಲ್ಲಿಕಟ್ಟೆ ಸುಧಾಕರ ಶೆಟ್ಟಿಯವರು ದೇವತಾ ಸಮಿತಿಯ ಅಧ್ಯಕ್ಷರಾಗಿ ಕಳೆದ 40 ವರ್ಷಗಳಿಂದ ಕಿಲ್ಲೆ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದ ರೂವಾರಿಯಾಗಿದ್ದಾರೆ. ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶ ಸಮಿತಿಯ ಉಪಾಧ್ಯಕ್ಷರಾಗಿ, ಬ್ರಹ್ಮರಥ ಸರ್ಮಪಣಾ ಸ್ವಾಗತ ಸಮಿತಿಯ ಅಧ್ಯಕ್ಷರಾಗಿದ್ದರು.
ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಸಂಚಾಲಕರಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. 10 ವರ್ಷಗಳ ಕಾಲ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಪುತ್ತೂರು ವಿವೇಕಾನಂದ ಕಾಲೇಜಿನ ಪ್ರಥಮ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿದ್ದರು.
1999ಯಲ್ಲಿ ಮತ್ತು 2004 ರಲ್ಲಿ ಪುತ್ತೂರು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. 1999ರಲ್ಲಿ ಬಿಜೆಪಿಯ ಡಿವಿ ಸದಾನಂದ ಗೌಡರು 62306 ಓಟ್ ಪಡೆದರೆ ಸುಧಾಕರ್ ಶೆಟ್ಟಿಯವರು 55013 ಓಟು ಪಡೆದಿದ್ದರು.
2004ರಲ್ಲಿ ಬಿಜೆಪಿಯ ಶಕುಂತಲ ಶೆಟ್ಟಿ 65119 ಓಟ್ ಪಡೆದರೆ 54007 ಓಟ್ ಪಡೆದು ಸೋಲನನ್ನುಭವಿಸಿದ್ದರು. ವಿದ್ಯಾರ್ಥಿ ದಿಸೆಯಿಂದಲೂ ಸಾಮಾಜಿಕ ಧಾರ್ಮಿಕ ರಾಜಕೀಯ, ಕ್ರೀಡಾ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಇವರು ನಗರದ ನೆಲ್ಲಿಕಟ್ಟೆಯ ನಿವಾಸಿಯಾಗಿದ್ದು ಸುಧಾಣ್ಣ ಎಂದೇ ಪುತ್ತೂರಿನ ಜನತೆ ಕರೆಯುತ್ತಾರೆ.
-
ದಕ್ಷಿಣ ಕನ್ನಡ2 days ago
ಪುತ್ತೂರು : ಕುಡಿದು ಟೈಟಾಗಿದ್ದ ಚಾಲಕ ವಿವೇಕಾನಂದ ವಿದ್ಯಾ ಸಂಸ್ಥೆಯ ಬಸ್ಸನ್ನು ಯದ್ವಾತದ್ವಾ ಚಲಾಯಿಸಿ ಸರಣಿ ಅಪಘಾತ – ಮಾಜಿ ಶಾಸಕಿಯ ಪುತ್ರನ ಕಾರು ಸೇರಿ 3 ವಾಹನಕ್ಕೆ ಢಿಕ್ಕಿ – ಪಾನಮತ್ತ ಚಲಾಯಿಸುತ್ತಿದ್ದ ಬಸ್ಸಿನಲ್ಲಿದ್ದರು ವಿದ್ಯಾರ್ಥಿಗಳು..̆
-
ದಕ್ಷಿಣ ಕನ್ನಡ2 days ago
ವಿಟ್ಲ : ಅಡಿಕೆ ಮರ ಮುರಿದು ಬಿದ್ದು ಮಹಿಳೆ ಸಾವು
-
ಸುಳ್ಯ1 day ago
College student rape case ಪುತ್ತೂರು : ಕಾಲೇಜ್ ವಿದ್ಯಾರ್ಥಿನಿಯ ಅಪಹರಿಸಿ ಅತ್ಯಾಚಾರ ಪ್ರಕರಣ – ಬಂಧಿತ ಆರೊಪಿಗೆ 2 ತಿಂಗಳ ಬಳಿಕ ಜಾಮೀನು
-
ರಾಜಕೀಯ2 days ago
CM Siddaramaiah: ಐಸಿಸ್ ಉಗ್ರ ಸಂಘಟನೆಯ ಬೆಂಬಲಿಗನ ಜತೆ ಹುಬ್ಬಳಿಯಲ್ಲಿ ವೇದಿಕೆ ಹಂಚಿಕೊಂಡ ಸಿ. ಎಂ.ಸಿದ್ದರಾಮಯ್ಯ : ಚಿತ್ರ ಸಹಿತ ಯತ್ನಾಳ್ ಗಂಭೀರ ಆರೋಪ – ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
-
ಉದ್ಯೋಗ1 day ago
Job Alert: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ – ಸದ್ಯದಲ್ಲೆ ಸಾರಿಗೆ ಇಲಾಖೆಗೆ 9 ಸಾವಿರ ಸಿಬ್ಬಂದಿಗಳ ನೇಮಕ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
-
Uncategorized2 days ago
loan write off ದೇಶದ ಎಲ್ಲಾ ವಾಣಿಜ್ಯ ಬ್ಯಾಂಕುಗಳು ಕಳೆದ 5 ವರ್ಷಗಳಲ್ಲಿ 10.57 ಲಕ್ಷ ಕೋಟಿ ರೂ. ರೈಟ್-ಆಫ್….
-
ಪುತ್ತೂರು1 day ago
Puthila Parivara | ಪುತ್ತೂರು ನಗರಸಭೆ 2 ವಾರ್ಡ್ ಮರುಮತದಾನ – ಬಿಜೆಪಿ ಕಾಂಗ್ರೇಸ್ ನಡುವೆ ಕಾರ್ಯಕರ್ತರ ಒತ್ತಾಯದಂತೆ ಪುತ್ತಿಲ ಪರಿವಾರ ಮತ್ತೊಂದು ಚುನಾವಣೆ ಎದುರಿಸುವುದು ಬಹುತೇಕ ಫಿಕ್ಸ್ : ವಿಧಾನಸಭಾ ಚುನಾವಣೆಯಲ್ಲಿ ಈ ವಾರ್ಡ್ ಗಳಲ್ಲಿ ಯಾರಿಗೆ ಎಷ್ಟು ಮತದಾನವಾಗಿತ್ತು ಗೊತ್ತೇ.?
-
ಅಪರಾಧ21 hours ago
Dowry Harasment: ʼಪ್ರತಿಯೊಬ್ಬರಿಗೂ ಹಣ ಬೇಕು ಮತ್ತು ಹಣ ಎಲ್ಲಕ್ಕಿಂತ ಪರಮೊಚ್ಚʼ ಡೆತ್ ನೋಟ್ ಬರೆದಿಟ್ಟು ವರದಕ್ಷಿಣೆ ಕಿರುಕುಳಕ್ಕೆ ಒಳಗಾದ ಯುವ ವೈದ್ಯೆ ಆತ್ಮಹತ್ಯೆ – ಅಷ್ಟಕ್ಕೂ ವರನ ಮನೆಯವರು ಇಟ್ಟ ಡಿಮ್ಯಾಂಡ್ ಎಷ್ಟು ಗೊತ್ತೆ ?