Connect with us

ಮಂಗಳೂರು

Congress Ticket: 2 ಲಕ್ಷ ರೂ ಕಟ್ಟಿದ್ದ ಆಕಾಂಕ್ಷಿಗಳ ಜತೆಗೆ ಅರ್ಜಿ ಸಲ್ಲಿಸದವರಿಗೂ ಟಿಕೆಟ್ : ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ | ಪುತ್ತೂರಿನಲ್ಲೂ ತೆರೆದಿಟ್ಟದೆ ಹೊಸ ಸಾಧ್ಯತೆ

Ad Widget

Ad Widget

ಕಾರವಾರ: ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು ಕಾಂಗ್ರೆಸ್‌ ಪಕ್ಷ ಭರ್ಜರಿ ತಯಾರಿಯಲ್ಲಿ ತೊಡಗಿದೆ. ಈ ಬಾರಿ ಹೊಸ ಪ್ರಯತ್ನಕ್ಕೆ  ಕೈ ಹಾಕಿರುವ ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿಗಳ ಬಳಿ ಅರ್ಜಿ ಹಾಕಿಸಿಕೊಂಡಿದೆ. ಇರುವ 224 ಕ್ಷೇತ್ರಕ್ಕೆ 1200 ಮಿಕ್ಕಿ ಆಕಾಂಕ್ಷಿಗಳು ಅರ್ಜಿ ಗುಜರಾಯಿಸಿದ್ದಾರೆ. ಅರ್ಜಿ ಹಾಕಿದವರಿಗೆ ಮಾತ್ರ ಟಿಕೆಟ್ ನೀಡಲಾಗುತ್ತದೆ ಎನ್ನುವ ನಿರೀಕ್ಷೆ ಆಕಾಂಕ್ಷಿಗಳಾದಾಗಿತ್ತು.  ಆದರೇ  ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದಲ್ಲಿ ನಡೆದ ಸಭೆಯೊಂದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ನೀಡಿದ ಹೇಳಿಕೆ ಆಕಾಂಕ್ಷಿಗಳಿಗೆ ಶಾಕ್‌ ಉಂಟು ಮಾಡಿದೆ.

Ad Widget

Ad Widget

Ad Widget

Ad Widget

ಪಕ್ಷದ ಟಿಕೆಟ್‌ ನಿಂದ ಚುನಾವಣೆಗೆ ಸ್ಪರ್ಧಿಸಲು ಬಯಸುವವರು ಎರಡು ಲಕ್ಷ ರೂ. ಡಿಡಿ ಹಾಗೂ ಅರ್ಜಿ ಶುಲ್ಕ 5 ಸಾವಿರ ರೂಪಾಯಿಯೊಂದಿಗೆ ಅರ್ಜಿ ಸಲ್ಲಿಸಲು ಕಾಂಗ್ರೆಸ್ ಸೂಚಿಸಿತ್ತು. ಅರ್ಜಿ ಸಲ್ಲಿಕೆಗೆ ನವೆಂಬರ್ 21 ಕೊನೆಯ ದಿನವಾಗಿತ್ತು. ರಾಜ್ಯದ 224 ಕ್ಷೇತ್ರಕ್ಕೆ ಸುಮಾರು 1200ಕ್ಕೂ ಅಧಿಕ ಜನರು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದರು .

Ad Widget

Ad Widget

Ad Widget

ಆದರೆ, ಎರಡು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದಲ್ಲಿ ನಡೆದ ಜನಜಾಗೃತಿ ಸಮಾವೇಶದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, “ ಅರ್ಜಿ ಸಲ್ಲಿಸದವರಿಗೂ ಟಿಕೆಟ್ ಕೊಡುವ ಬಗ್ಗೆ ವರಿಷ್ಠರ ಜೊತೆ ಚರ್ಚೆ ನಡೆಸಲಾಗುವುದು ಎಂದಿದ್ದಾರೆ.

Ad Widget

ಪಕ್ಷಕ್ಕೆ ಇನ್ನು ಹಲವರು ಸೇರಲಿದ್ದಾರೆ. ಹಾವೇರಿಯಲ್ಲಿ ಬಣಗಾರ್ ಕಾಂಗ್ರೆಸ್ ಸೇರಿದ್ದಾರೆ. ಇದಲ್ಲದೇ ಮುಂಡಗೋಡಿನಲ್ಲಿ ವಿಎಸ್ ಪಾಟೀಲ್ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ. ಶೀಘ್ರದಲ್ಲೇ ಯಾರ್ಯಾರು ಕಾಂಗ್ರೆಸ್ ಸೇರಲಿದ್ದಾರೆ ತಿಳಿಯಲಿದೆ ಎಂದಿದ್ದಾರೆ. ಅರ್ಜಿ ಹಾಕಿದವರೆಲ್ಲರಿಗೂ ಸದ್ಯ ಕ್ಷೇತ್ರದಲ್ಲಿ ಸಂಘಟನೆ ಮಾಡಲು ಸೂಚನೆ ನೀಡಲಾಗಿದೆ. ಈ ಬಾರಿ ಟಿಕೆಟ್‌ಗಾಗಿ ನೂಕು ನುಗ್ಗಲಿರುವುದರಿಂದ ಅಭ್ಯರ್ಥಿಗಳನ್ನ ಶೀಘ್ರವೇ ಘೋಷಣೆ ಮಾಡುವ ಬಗ್ಗೆ ಸಹ ಚರ್ಚೆ ನಡೆಯುತ್ತಿದೆ ಎಂದು ಶಿವಕುಮಾರ್ ಹೇಳಿದ್ದರು.

Ad Widget

Ad Widget

  ಅರ್ಜಿ ಎಷ್ಟೇ ಆಕಾಂಕ್ಷಿಗಳು ಸಲ್ಲಿಸಿದ್ದರೂ ಕ್ಷೇತ್ರದಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೇ ಟಿಕೆಟ್ ನೀಡಬೆಕೇಂಬ  ಮಾತುಕತೆ ಕಾಂಗ್ರೆಸ್‌ನಲ್ಲಾಗಿದೆಯಂತೆ. ಎಲ್ಲಾ ಕ್ಷೇತ್ರಗಳಲ್ಲೂ ಸಮೀಕ್ಷೆ ನಡೆಸಿ, ಜನರ ಒಲವು ಯಾರ ಕಡೆ ಇದೆಯೋ ಅವರಿಗೇ ಈ ಬಾರಿ ಕಾಂಗ್ರೆಸ್ ಟಿಕೆಟ್ ನೀಡಲಿದೆ  ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

 ಎರಡು ಲಕ್ಷ ರೂ.ಗಳ ಡಿಡಿ ಕೊಟ್ಟು ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದವರಲ್ಲಿ ಯಾರನ್ನೂ ಆಯ್ಕೆ ಮಾಡದೆ, ಹೊರಗಿನಿಂದ ಬಂದವರಿಗೆ ಟಿಕೆಟ್ ಘೋಷಿಸಿದರೆ ಕಾಂಗ್ರೆಸ್‌ನಲ್ಲಿ ಚುನಾವಣೆಯ ಸಂದರ್ಭದಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಳ್ಳುವ ಸಾಧ್ಯತೆಯೂ  ಇದೆ. ಇತ್ತ ಟಿಕೆಟ್ ಕೂಡ ಸಿಗದೆ, ಅತ್ತ ಕಟ್ಟಿದ ಎರಡು ಲಕ್ಷವೂ ವಾಪಸ್ಸು ಸಿಗದೆ ಆಕಾಂಕ್ಷಿಗಳು ಸಂಘಟನೆ ಬಲಪಡಿಸುವ ಕಾರ್ಯದಲ್ಲಿ ಸುಮ್ಮನಾಗುತ್ತಾರೆನ್ನಲಾಗುವುದಿಲ್ಲ. ಹೀಗಾಗಿ ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ಇದನ್ನೆಲ್ಲ ಹೇಗೆ ಸರಿದೂಗಿಸಿಕೊಳ್ಳುತ್ತದೆ ಎಂಬುದನ್ನ ಕಾದುನೋಡಬೇಕಿದೆ.

ಪ್ರಭಾವಿ ನಾಯಕರುಗಳ ಸೇರ್ಪಡೆ!

ಸದ್ಯ ಮುಂಡಗೋಡ ಕ್ಷೇತ್ರದಲ್ಲಿ ಒಬ್ಬರೇ ಆಕಾಂಕ್ಷಿ ಟಿಕೆಟ್‌ಗಾಗಿ ಅರ್ಜಿ ಹಾಕಿದ್ದು, ಮಾಜಿ ಶಾಸಕ ವಿಎಸ್ ಪಾಟೀಲ್ ಕಾಂಗ್ರೆಸ್ ಸೇರ್ಪಡೆ ನಂತರ ಮತ್ತೊರ್ಮೆ ಅರ್ಜಿ ಹಾಕಿಸಿಕೊಂಡು ಟಿಕೆಟ್ ಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇದಲ್ಲದೇ ಜಿಲ್ಲೆಯ ಕರಾವಳಿ ಭಾಗದಲ್ಲಿ ಇಬ್ಬರು ಪ್ರಭಾವಿ ಮುಖಂಡರುಗಳು ಕಾಂಗ್ರೆಸ್ ಸೇರಲು ತಯಾರಿ ನಡೆಸುತ್ತಿದ್ದು, ಈಗಾಗಲೇ ನಾಯಕರುಗಳ ಜೊತೆ ಸಹ ಚರ್ಚೆ ನಡೆಸಿದ್ದಾರೆನ್ನಲಾಗಿದೆ. ಹೀಗಾಗಿ ಒಂದೊಮ್ಮೆ ಹೈಕಮಾಂಡ್ ಸಮ್ಮತಿ ನೀಡಿದರೆ ಟಿಕೆಟ್ ನಲ್ಲಿ ಬದಲಾವಣೆಗಳಾಗುವ ಸಾಧ್ಯತೆ ಸಹ ಇದೆ ಎನ್ನಲಾಗಿದೆ.

ಪುತ್ತೂರು :

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಈಗಾಗಲೇ 13 ಮಂದಿ ಪಕ್ಷದ ಟಿಕೆಟ್‌ ಗಾಗಿ ಆರ್ಜಿ ಸಲ್ಲಿಸಿದ್ದಾರೆ. ಆದರೇ ಇದರ ಜತೆಗೆ ಪುತ್ತೂರು ಕ್ಷೇತ್ರ ವ್ಯಾಪ್ತಿಯಲ್ಲಿ  ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಜನಮಾನಸದಲ್ಲಿ ದೊಡ್ಡ  ಹೆಸರನ್ನು ಗಳಿಸಿರುವ ವ್ಯಕ್ತಿಯೊಬ್ಬರು ಕಾಂಗ್ರಸ್‌ ಟಿಕೆಟ್‌ ನಿಂದ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ ಎನ್ನುವ ಮಾತುಗಳು ಈಗ ಕೇವಲ ಗಾಳಿ ಮಾತಾಗಿ ಉಳಿದಿಲ್ಲ . ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ  ಅವರು ರಾಜ್ಯ ಕಾಂಗ್ರೆಸ್‌ ಹೈಕಮಾಂಡ್‌ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ.  ಇದೀಗ ಡಿಕೆ ಶಿವಕುಮಾರ್‌ ಅವರ ಹೇಳಿಕೆಯಿಂದ ಅವರ ಅಭಿಮಾನಿಗಳಿಗೆ ಆನೆ ಬಲ ಬಂದಂತಾಗಿದೆ

Continue Reading
Click to comment

Leave a Reply

ಅಪರಾಧ

Mother and Son died ಮಂಗಳೂರು : ಹಸೂಗೂಸನ್ನು ಟಬ್‌ʼನ ನೀರಿನಲ್ಲಿ ಮುಳುಗಿಸಿ ತಾನೂ ಜೀವ ಕಳೆದುಕೊಂಡ ನವ ವಿವಾಹಿತೆ

Ad Widget

Ad Widget

ಮಂಗಳೂರು: ಹೆರಿಗೆ ಬಳಿಕ ಸಾಮಾನ್ಯವಾಗಿ ಬಾಣಂತಿಯರನ್ನು/ ಮಹಿಳೆಯರನ್ನು  ಕಾಡುವ  ಮಾನಸಿಕ ಖಿನ್ನತೆಗೆ (Mental disorder) ತುತ್ತಾಗಿದ್ದ ಮಹಿಳೆಯೊಬ್ಬರು ತನ್ನ ನಾಲ್ಕೂವರೆ  ತಿಂಗಳ ಹಸುಗೂಸನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದ ಗುಜ್ಜರಕೆರೆ ಎಂಬಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಗುಜ್ಜರಕೆರೆಯ ವಸತಿ ಸಮುಚ್ಚಯವೊಂದರಲ್ಲಿ ವಾಸಿಸುತ್ತಿದ್ದ  ಫಾತಿಮಾ ರುಕಿಯಾ (23) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.  ನಾಲ್ಕೂವರೆ ತಿಂಗಳ ಗಂಡು ಮಗು  ಅಬ್ದುಲ್ಲಾ ಹೂದ್ ಮೃತ ಹಸುಳೆ.  ಈ ದುರಂತದ ಬಗ್ಗೆ   ಮೃತ ಮಹಿಳೆಯ ತಾಯಿ ದೂರು ನೀಡಿದ್ದು, ನಗರದ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

ಫಾತಿಮಾ ರುಕಿಯಾರವರ ವಿವಾಹ ಸುಮಾರು  ಒಂದೂವರೆ ವರ್ಷದ ಹಿಂದೆ   ಮುಹಮ್ಮದ್ ಉನೈಸ್ ಎಂಬವರ ಜತೆ ಜರುಗಿತ್ತು. ಜುಲೈ 7ರಂದು ಗಂಡು ಮಗುವಿಗೆ (ಅಬ್ದುಲ್ಲಾ ಹೂದ್ ) ಜನ್ಮ ನೀಡಿದ್ದರು.ಇದಾದ ಬಳಿ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಫಾತಿಮಾರವರಿಗೆ ಮಂಗಳೂರಿನ   ಅರೋಗ್ಯ ಕ್ಲಿನಿಕ್ ನಲ್ಲಿ ಮಾನಸಿಕ ವೈದ್ಯರಾದ ಡಾ. ಸುಪ್ರಿಯಾ ರವರಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. .

Ad Widget

ಫಾತಿಮಾರವರು  ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತನ್ನ ತಾಯಿ ಬಳಿ ಆಗಾಗ ಹೇಳಿಕೊಳ್ಳುತ್ತಿದ್ದರು . ಡಿ 2 ರಂದು ಬೆಳಿಗ್ಗೆ 11.30ರಿಂದ ಸಂಜೆ 3.30ರ ನಡುವೆ    ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟ್ ನ ಫ್ಲಾಟ್ ನಂಬರ್ 507 ರ ಬೆಡ್ ರೂಮ್ ನ ಗ್ಯಾಲರಿಯಲ್ಲಿ ಫಾತಿಮಾ ರುಕಿಯಾರವರು  ಪ್ಲಾಸ್ಟಿಕ್ ಟಬ್ ನಲ್ಲಿ ನೀರು ತುಂಬಿಸಿ 4 1/2 ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ.

Ad Widget

Ad Widget

Bitter Gourd health benefits: ಹಾಗಲಕಾಯಿ ನಾಲಿಗೆಗೆ ಕಹಿ – ಉದರಕ್ಕೆ ಸಿಹಿ… ಇಲ್ಲಿದೆ ಅದರ ಆರೋಗ್ಯ ಪ್ರಯೋಜನಗಳು

ಬಳಿಕ ಕೊಠಡಿಯ ಕಿಟಕಿಯ ಕಬ್ಬಿಣದ ಸರಳಿಗೆ ಸೀರೆಯನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಫಾತಿಮಾ ರುಕಿಯಾ ತಾಯಿ  ಖತಿಜಾತುಲ್ ಕುಬ್ರ ರವರು ಠಾಣೆಗೆ ದೂರು ನೀಡಿದ್ದಾರೆ.

Continue Reading

ಮಂಗಳೂರು

Boy assaulted at school: ದ.ಕ ಜಿಲ್ಲೆಯಲ್ಲೊಂದು ರಾಕ್ಷಸಿ ಕೃತ್ಯ : ಸೈಕಲ್ ಮಾರಾಟ ಮಾಡಿದನೆಂದು ಆರೋಪಿಸಿ ಬಾಲಕನಿಗೆ ಶಾಲೆಯಲ್ಲಿ ದೊಣ್ಣೆಯಿಂದ ಹೊಡೆದ SDMC ಅಧ್ಯಕ್ಷ – ಹಲ್ಲೆಗೆ ಶಿಕ್ಷಕರಿಬ್ಬರ ಪ್ರೋತ್ಸಾಹ  

Ad Widget

Ad Widget

ಪುಂಜಾಲಕಟ್ಟೆ ಡಿ. 1: ಶಾಲಾ  ಬಾಲಕನೋರ್ವ ಸೈಕಲ್‌ ಮಾರಾಟ ಮಾಡಿರುವುದಾಗಿ ಆರೋಪಿಸಿ ಶಾಲಾ ಎಸ್‌ ಡಿ ಎಂಸಿ ಅಧ್ಯಕ್ಷ ಅಧ್ಯಕ್ಷ  ಶಾಲೆಯಲ್ಲಿ  ಬಾಲಕನಿಗೆ ಹಲ್ಲೆಗೈದಿದ್ದು, ಬಾಲಕ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿನ 30ರಂದು ಸಂಭವಿಸಿದೆ.

Ad Widget

Ad Widget

Ad Widget

Ad Widget

ಬಾಲಕ ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಬಾಲನ್ಯಾಯ ಕಾಯ್ದೆ ಅಡಿಯಲ್ಲಿ ಹಲ್ಲೆ ಮಾಡಿದಾತನ ವಿರುದ್ದ  ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬಳ್ಳಮಂಜ ಮಚ್ಚಿನದ ಹಿರಿಯ ಪ್ರಾಥಮಿಕ ಶಾಲೆ ಎಸ್.ಡಿ.ಎಂ.ಸಿ ಸಮಿತಿ ಅಧ್ಯಕ್ಷ ಪರಮೇಶ್ ಹಾಗೂ ಶಾಲೆಯ ಮುಖ್ಯ ಶಿಕ್ಷಕಿ ಪ್ರಮೀಳಾ ಹಾಗೂ ಶಿಕ್ಷಕ ರಮೇಶ್ ಪ್ರಕರಣದ ಆರೋಪಿಗಳು

Ad Widget

Ad Widget

Ad Widget

ಪುಂಜಾಲಕಟ್ಟೆ ಪೊಲೀಸ್ ಠಾಣಾ  ವ್ಯಾಪ್ತಿಯ  ಪ್ರಾಥಮಿಕ  ಶಾಲೆಯೊಂದರ ವಿದ್ಯಾರ್ಥಿ ಸಂತ್ರಸ್ತ ಬಾಲಕ.  8ನೇ ತರಗತಿಯ ಅಪ್ರಾಪ್ತ ಬಾಲಕ ಸೈಕಲ್ ಅನ್ನು ಇನ್ನೊಬ್ಬ ವಿದ್ಯಾರ್ಥಿಗೆ ಮಾರಾಟ ಮಾಡಿದ್ದ ಎನ್ನಲಾಗಿದ್ದು, ಈ ವಿಚಾರವಾಗಿ ನ.28ರಂದು ಬಾಲಕನನ್ನು ಶಿಕ್ಷಕರ ಕೊಠಡಿಗೆ ಕರೆಸಿದ ಆರೋಪಿ ಪರಮೇಶ್ ವಿದ್ಯಾರ್ಥಿಯ ತಾಯಿಯ ಎದುರಲ್ಲಿಯೇ ಆತನ ಮೇಲೆ ಕೋಲಿನಿಂದ ಹಾಗೂ ಕೈಯಿಂದ ಹಲ್ಲೆ ನಡೆಸಿದ್ದಾನೆ. ಬಾಲಕನ ಎದೆಗೂ ಗುದ್ದಿದ್ದಾನೆ ಎನ್ನಲಾಗಿದೆ. ಕೋಲಿನಿಂದ ನಡೆಸಿದ ಹಲ್ಲೆಯಿಂದ‌ ಬಾಲಕನ ಕಾಲಿನಲ್ಲಿ ಗಾಯವಾಗಿದೆ. ಹಲ್ಲೆ ನಡೆಸಿದ ಬಳಿಕ ಇದನ್ನು ಯಾರಿಗೂ ತಿಳಿಸಿದರೇ ಸೈಕಲ್ ಕಳ್ಳತನ ಮಾಡಿರುವುದಾಗಿ ಕೇಸ್ ಮಾಡಿಸುತ್ತೇನೆ ಎಂದು ಬೆದರಿಕೆಯನ್ನೂ ಪರಮೇಶ್ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.   ಈ ವೇಳೆ ಶಾಲಾ ಶಿಕ್ಷಕರಾದ ಪ್ರಮೀಳಾ ಮತ್ತು ರಮೇಶ್ ಅವರು ಬಾಲಕನಿಗೆ ಹೊಡೆಯಲು ಪ್ರೇರೇಪಿಸಿದ್ದರು ಎಂದು ಆರೋಪಿಸಲಾಗಿದೆ

Ad Widget

  Gold price hike ಜೆಟ್ ವೇಗದಲ್ಲಿ ಏರಿದ ಚಿನ್ನದ ಬೆಲೆ- ಇಳಿಯುವ ಸಾಧ್ಯತೆ ಇದೆಯಾ?

Ad Widget

Ad Widget

ಹಲ್ಲೆ ನಡೆಸಿದ ಬಳಿಕ ಈ  ವಿಚಾರವನ್ನು ಯಾರಿಗಾದರೂ ಹೇಳಿದರೆ ಸೈಕಲ್ ಕದ್ದು ಮಾರಾಟ ಮಾಡಿದ ಬಗ್ಗೆ ಕೇಸು ಹಾಕುವುದಾಗಿ ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ.  ಶಾಲೆಯಲ್ಲಿ ನಡೆದ ಹಲ್ಲೆಯಿಂದ ನ. 30ರಂದು ಬೆಳಗ್ಗೆ ಬಾಲಕನಿಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  

ಎಸ್.ಡಿ.ಎಂ.ಸಿ ಸಮಿತಿ ಅಧ್ಯಕ್ಷ ಪರಮೇಶ್ ಹಾಗೂ ಶಾಲೆಯ ಮುಖ್ಯ ಶಿಕ್ಷಕಿ ಪ್ರಮೀಳಾ ಹಾಗೂ ಶಿಕ್ಷಕ ರಮೇಶ್ ವಿರುದ್ಧ ಪೂಂಜಾಲಕಟ್ಟೆ ಠಾಣೆಯಲ್ಲಿ ಕಲಂ 323, 324,506,114 ಹಾಗೂ ಬಾಲನ್ಯಾಯ ಕಾಯಿದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಬಾಲಕನಿಂದ ಮಾಹಿತಿ ಪಡೆದಿದ್ದಾರೆ.

New Simcard Rules :ಸಿಮ್‌ ಕಾರ್ಡ್‌ ಖರೀದಿಗೆ ಕೇಂದ್ರ ಸರಕಾರ ಜಾರಿಗೆ ತಂದಿದೆ ಕಠಿಣ ನಿಯಮಗಳು – ಬೇಕಾಬಿಟ್ಟಿ ಅಕ್ಟಿವೇಶನ್‌ ಗೆ ಕಡಿವಾಣ – ಇಲ್ಲಿದೆ ಕಂಪ್ಲಿಟ್‌ ಡಿಟೈಲ್‌

Continue Reading

ಮಂಗಳೂರು

Arrecanut: ಕಳ್ಳ ಮಾರ್ಗದಲ್ಲಿ ಮಂಗಳೂರು ಮಾರುಕಟ್ಟೆಗೆ ಬರುತ್ತಿದೆ ವಿದೇಶಿ ‘ಹುರಿದ ಅಡಿಕೆ – ಧಾರಣೆ ಕುಸಿತದ ಹಿಂದಿದೆ ಇದರ ಕರಾಮತ್ತು

Ad Widget

Ad Widget

ಮಂಗಳೂರು: ಹುರಿದ ಅಡಿಕೆ ರೂಪದಲ್ಲಿ ಕಸ್ಟಮ್ಸ್ ಸುಂಕ ತಪ್ಪಿಸಿಕೊಂಡು ಅವ್ಯಾಹತವಾಗಿ ವಿದೇಶ ಅಡಿಕೆ ಭಾರತಕ್ಕೆ ಬರುತ್ತಿರುವುದು ರಾಜ್ಯದ ಅಡಿಕೆ ವಹಿವಾಟು ಸಂಸ್ಥೆಗಳು ಹಾಗೂ ಬೆಳೆಗಾರರ ನಿದ್ದೆಗೆಡಿಸಿದೆ.

Ad Widget

Ad Widget

Ad Widget

Ad Widget

‘ತಿಂಗಳ ಈಚೆಗೆ ಸುಮಾರು 20 ಕಂಟೇನರ್ ಅಡಿಕೆ ವಿದೇಶದಿಂದ ಭಾರತಕ್ಕೆ ಬಂದಿದೆ, ಪ್ರತಿ ಕಂಟೇನರ್‌ನಲ್ಲಿ 20ರಿಂದ 24 ಟನ್ ಅಡಿಕೆ ಇರಬಹುದೆಂದು ಅಂದಾಜಿಸಲಾಗಿದೆ. ಇವುಗಳಲ್ಲಿ ಬಹುಪಾಲು ಹುರಿದ ಅಡಿಕೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ. ಕಸ್ಟಮ್ಸ್ ಇಲಾಖೆಯವರು ಹೇಳುವಂತೆ ಹುರಿದ ಅಡಿಕೆಗೆ ಕನಿಷ್ಠ ಆಮದು ಸುಂಕ ಅನ್ವಯವಾಗುವುದಿಲ್ಲ. ಹೀಗಾಗಿ, ಆಮದುದಾರರು ಇದರ ಲಾಭ ಪಡೆದುಕೊಳ್ಳುತ್ತಿರುವ ಸಾಧ್ಯತೆ ಇದೆ’ ಎನ್ನುತ್ತಾರೆ ಮಾರುಕಟ್ಟೆ ತಜ್ಞರೊಬ್ಬರು.

Ad Widget

Ad Widget

Ad Widget

ವಿದೇಶದಿಂದ ಬಂದಿರುವ ಅಡಿಕೆಯ ಮಾದರಿಗಳ ಮೇಲೆ ಮಂಗಳೂರಿನ ಸಂಶೋಧನಾ ಸಂಸ್ಥೆಯೊಂದು ಅಧ್ಯಯನ ನಡೆಸಿದೆ. ಸ್ಥಳೀಯ ರೈತರು ತಯಾರಿಸುವ ಕೆಂಪಡಿಕೆಗೆ ಹೋಲುವ ಇವು ಸ್ವಲ್ಪ ಕಂದುಬಣ್ಣದಲ್ಲಿದ್ದು, ನೈಜ ಅಡಿಕೆಗಿಂತ ಭಿನ್ನವಾಗಿವೆ. ಅಡಿಕೆ ಗುಣಮಟ್ಟ ನಿಗದಿಪಡಿಸಿದ (ಬಿಐಎಸ್‌- ಬ್ಯುರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್‌) ಮಾನದಂಡಕ್ಕೆ ಅನುಗುಣವಾಗಿಲ್ಲ. ಅಲ್ಲದೆ, ಇವು ತುಸು ಹೊಗೆಯ ವಾಸನೆ ಹೊಂದಿವೆ. ಇದು ಇಂಡೊನೇಷ್ಯಾ ಅಡಿಕೆ ಆಗಿರುವ ಸಾಧ್ಯತೆ ಇದ್ದು, ಮೇಲ್ನೋಟಕ್ಕೆ ಸ್ಥಳೀಯ ಅಡಿಕೆಯನ್ನು ಹೋಲುತ್ತದೆ. ಆದರೆ, ಕಳಪೆ ಗುಣಮಟ್ಟದ ಈ ಅಡಿಕೆಗಳಲ್ಲಿ ಶೇ 33ರಷ್ಟು ಸೋಂಕು ತಗುಲಿದಂತಿವೆ ಎಂದು ಆ ವರದಿಯಲ್ಲಿ ತಿಳಿಸಲಾಗಿದೆ’ ಎಂದು ಅವರು ವಿವರಿಸಿದರು.

Ad Widget

‘ವಿದೇಶಿ ಅಡಿಕೆ ಅವ್ಯಾಹತವಾಗಿ ದೇಸಿ ಮಾರುಕಟ್ಟೆಗೆ ಬರುತ್ತಿದ್ದು, ಕೆಲವು ಪ್ರಕರಣಗಳು ಮಾತ್ರ ಪತ್ತೆಯಾಗುತ್ತಿವೆ. ತೆರಿಗೆರಹಿತ ವಸ್ತುಗಳ ಹೆಸರಿನಲ್ಲಿ, ಒಣಹಣ್ಣುಗಳ ಹೆಸರಿನಲ್ಲಿ ವಿಮಾನಗಳ ಮೂಲಕವೂ ಅಡಿಕೆ ಬರುತ್ತಿದೆ. ಇಂಡೊನೇಷ್ಯಾ ಅಡಿಕೆಯು ಶ್ರೀಲಂಕಾ ಗಡಿ ಮೂಲಕ ಭಾರತಕ್ಕೆ ಬರುತ್ತದೆ. ಬೇರೆ ದೇಶಗಳಿಂದ ಅಡಿಕೆ ನುಸುಳುತ್ತಿದ್ದು, ವಾರದ ಈಚೆಗೆ ತಮಿಳುನಾಡಿನ ಬಂದರಿಗೆ ಬಂದ ವಿದೇಶಿ ಅಡಿಕೆಯನ್ನು ಕಸ್ಟಮ್ಸ್ ಇಲಾಖೆ ವಶಪಡಿಸಿಡಿಕೊಂಡಿದೆ’ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಹೇಳಿದ್ದಾರೆ.

Ad Widget

Ad Widget

‘ಸ್ಥಳೀಯ ಮಾರುಕಟ್ಟೆಗಳಲ್ಲಿ ಈಗಾಗಲೇ ವಿದೇಶ ಅಡಿಕೆ ಸಮಸ್ಯೆ ಸೃಷ್ಟಿಸಿದೆ. ಶಿರಸಿ, ಸಿದ್ದಾಪುರ, ಯಲ್ಲಾಪುರ, ಸಾಗರ, ಶಿವಮೊಗ್ಗ ಭಾಗಗಳಲ್ಲಿ ಕೆಂಪಡಿಕೆ ಹೆಚ್ಚು ತಯಾರಾಗುತ್ತದೆ. ಕೆಂಪಡಿಕೆಯೊಂದಿಗೆ ಕಳಪೆ ಗುಣಮಟ್ಟದ ಹುರಿ ಅಡಿಕೆ ಮಿಶ್ರಣ ಮಾಡಿ ಕಾಳದಂಧೆಕೋರರು ಮಾರಾಟಕ್ಕಿಳಿದರೆ, ನಮ್ಮ ಅಡಿಕೆ ದರವೂ ಕುಸಿಯುವ ಅಪಾಯ ಇದೆ. ಕ್ವಿಂಟಲ್‌ವೊಂದಕ್ಕೆ ಗರಿಷ್ಠ ₹52ಸಾವಿರದವರೆಗೆ ಇದ್ದ ಕೆಂಪಡಿಕೆ ದರ ಈಗ ₹45ಸಾವಿರಕ್ಕೆ ಕುಸಿದಿದೆ. ಹೀಗಾಗಿ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಯೋಗದಲ್ಲಿ ತೆರಳಿ ಕೇಂದ್ರ ಸರ್ಕಾರದ ಪ್ರಮುಖರನ್ನು ಸದ್ಯದಲ್ಲಿ ಭೇಟಿ ಮಾಡಲಾಗುವುದು’ ಎಂದು ಅಡಿಕೆ ವಹಿವಾಟು ಸಹಕಾರಿ ಸಂಸ್ಥೆಯಾಗಿರುವ ಶಿರಸಿ ಟಿಎಸ್‌ಎಸ್‌ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಹೇಳಿದ್ದಾರೆ.

ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ಕುಮಾರ್ ಕೊಡ್ಗಿ ಹೇಳಿಕೆ:

ನೆಲ ಜಲ ವಾಯು ಮಾರ್ಗಗಳ ಮೂಲಕ ವಿದೇಶದ ಕಳಪೆ ಅಡಿಕೆ ಭಾರತಕ್ಕೆ ಬರುತ್ತಿದೆ. ಗಡಿ ಪ್ರದೇಶದಿಂದ ವಿಮಾನಗಳ ಮೂಲಕ ಬರುವ ಅಡಿಕೆಯನ್ನು ಇಂಫಾಲ್ ದಿಮಾಪುರ್ ಕೊಲ್ಕತ್ತಾ ಮತ್ತು ಅಗರ್ತಲಾ ವಿಮಾನ ನಿಲ್ದಾಣಗಳ ಲೋಡಿಂಗ್ ಪಾಯಿಂಟ್‌ಗೆ ಕಳುಹಿಸಲಾಗುತ್ತದೆ. ಬೆಂಗಳೂರು ಹೈದರಾಬಾದ್ ನಾಗ್ಪುರ ಮತ್ತು ಅಹಮದಾಬಾದ್‌ನಲ್ಲಿ ಕಾರ್ಗೊ ಏಜೆಂಟರಿಗೆ ಈ ಅಡಿಕೆ ತಲುಪುತ್ತದೆ. ಆಹಾರ ವಸ್ತುಗಳ ಹೆಸರಿನಲ್ಲಿ ಬಂದರುಗಳ ಮೂಲಕವೂ ಅಡಿಕೆ ಬರುತ್ತಿದೆ. ಪ್ರತಿದಿನ 10 ಟನ್‌ಗಳಷ್ಟು ಸರಕು ಭಾರತಕ್ಕೆ ಪ್ರವೇಶಿಸುತ್ತಿದೆ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಪ್ರಧಾನಿಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ವಿನಂತಿಸಲಾಗಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ಕುಮಾರ್ ಕೊಡ್ಗಿ ತಿಳಿಸಿದರು.

Continue Reading

Trending

error: Content is protected !!