ರಾಜ್ಯ
BL Santhosh | ತೆಲಂಗಾಣ ಶಾಸಕರ ಖರೀದಿ ಯತ್ನ – ಎಸ್ಐಟಿ ಬಿ.ಎಲ್.ಸಂತೋಷ್ ಗೆ ನೀಡಿದ್ದ ನೋಟಿಸ್ ಗೆ ಹೈಕೋರ್ಟ್ ತಡೆಯಾಜ್ಞೆ

ಹೈದರಾಬಾದ್: ತೆಲಂಗಾಣದ ಬಿಆರ್ಎಸ್ ಶಾಸಕರ ಖರೀದಿಗೆ ಯತ್ನಿಸಲಾಗಿತ್ತೆಂಬ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ(ಎಸ್ಐಟಿ) ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ (BL Santhosh)ಅವರಿಗೆ ನೀಡಿದ್ದ ನೋಟಿಸ್ಗೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.
ಭಾರತ ರಾಷ್ಟ್ರ ಸಮಿತಿ (ಈ ಹಿಂದಿನ ತೆಲಂಗಾಣ ರಾಷ್ಟ್ರ ಸಮಿತಿ) ಪಕ್ಷದ ಶಾಸಕರ ಖರೀದಿಗೆ ಯತ್ನಿಸಲಾಗಿತ್ತೆಂಬ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬಿ.ಎಲ್. ಸಂತೋಷ್ ಅವರಿಗೆ ಎಸ್ಐಟಿ ಗುರುವಾರ ಎರಡನೇ ನೋಟಿಸ್ ಜಾರಿ ಮಾಡಿತ್ತು. ಈ ನೋಟಿಸ್ ಸಂಬಂಧ ಬಿ. ಎಲ್. ಸಂತೋಷ್ ಪರ ವಕೀಲರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಮೊದಲೇ ನಿರ್ಧರಿಸಲಾದ ಕೆಲ ಸಭೆಗಳ ಕಾರಣದಿಂದ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿಲ್ಲ. ಎಸ್ಐಟಿ ಅಧಿಕಾರಿಗಳು ಮತ್ತು ತೆಲಂಗಾಣ ಸರ್ಕಾರ ದುರುದ್ದೇಶದಿಂದಲೇ ಕಕ್ಷಿದಾರರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಂತೋಷ್ ಪರ ವಕೀಲರು ನ್ಯಾಯಪೀಠದ ಗಮನಕ್ಕೆ ತಂದರು. ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಯಾವ ಆಧಾರದ ಮೇಲೆ ಸಮನ್ಸ್ ನೀಡಲಾಗಿದೆ ಎಂಬುದನ್ನು ತಿಳಿಸದ ಕಾರಣ ನೋಟಿಸ್ ರದ್ದುಗೊಳಿಸುವಂತೆ ಬಿ.ಎಲ್. ಸಂತೋಷ್ ಪರ ವಕೀಲರು ಮನವಿ ಮಾಡಿದ ನಂತರ ನ್ಯಾಯಾಲಯ ಎಸ್ಐಟಿ ನೋಟಿಸ್ಗೆ ತಡೆಯಾಜ್ಞೆ ನೀಡಿದೆ.
ಅಗತ್ಯ ವಿಚಾರಗಳ ಕೊರತೆಯನ್ನು ಉಲ್ಲೇಖೀಸಿ ನ್ಯಾಯಾಲಯವು ನೋಟಿಸ್ಗೆ ತಡೆಯಾಜ್ಞೆ ನೀಡಿತು. ಸೆಕ್ಷನ್ 51-ಎ ಅಡಿಯಲ್ಲಿ ನೋಟಿಸ್ಗೆ ಯಾವ ಸಾಕ್ಷ್ಯ ಅಥವಾ ಅನುಮಾನ ಅಥವಾ ಯಾವ ಆಧಾರದ ಮೇಲೆ ವ್ಯಕ್ತಿಯನ್ನು ಕರೆಸಲಾಗುತ್ತಿದೆ ಎಂಬುದನ್ನು ತಿಳಿಸಬೇಕು ಎಂದು ಮಧ್ಯಂತರ ಆದೇಶದಲ್ಲಿ ನ್ಯಾಯಾಲಯ ಎಸ್ಐಟಿಗೆ ಸೂಚನೆ ನೀಡಿ, ವಿಚಾರಣೆಯನ್ನು ಡಿ.5 ಮುಂದೂಡಿದೆ.
ಪ್ರಕರಣವನ್ನು ತ್ವರಿತ ವಿಚಾರಣೆ ನಡೆಸಬೇಕೆಂದು ಬಿ.ಎಲ್. ಸಂತೋಷ್ ಪರ ಹಿರಿಯ ವಕೀಲ ಪ್ರಕಾಶ್ ರೆಡ್ಡಿ ಅವರು ಮೇಲ್ಮನವಿ ಸಲ್ಲಿಸಿದ್ದರು.
ರಾಜಕೀಯ
Harish Poonja Moved Privilege motion ತನ್ನ ಮೇಲೆ ಎಫ್ ಐ ಆರ್ ದಾಖಲಿಸಿದ ಅರಣ್ಯ ಅಧಿಕಾರಿಗಳ ವಿರುದ್ದ ಸದನದಲ್ಲಿ ಹಕ್ಕು ಚ್ಯುತಿ ಮಂಡಿಸಿದ ಹರೀಶ್ ಪೂಂಜಾ – ಏನಿದು ಪ್ರಕರಣ ? ಮುಂದೇನಾಯಿತು?

ಬೆಳಗಾವಿ: ತನ್ನ ಮೇಲೆ ಎಫ್ಐಆರ್ ಹಾಕಿದ ಅರಣ್ಯಾಧಿಕಾರಿಗಳ ಮೇಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ (Belthangady MLA Harish Poonja) ಅವರು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ (Belagavi Winter Session) ಹಕ್ಕು ಚ್ಯುತಿ ಮಂಡಿಸಿದ್ದಾರೆ. ಇದನ್ನು ಸ್ಪೀಕರ್ ಯು.ಟಿ. ಖಾದರ್ ಅವರು ಹಕ್ಕು ಬಾಧ್ಯತಾ ಸಲಹಾ ಸಮಿತಿಗೆ ವರ್ಗಾಯಿಸಿದ್ದಾರೆ.
2 ತಿಂಗಳ ಹಿಂದೆ ಬೆಳ್ತಂಗಡಿಯ ಕಳೆಂಜ ಗ್ರಾಮದ ಅಮ್ಮಿನಡ್ಕದಲ್ಲಿ ರೈತರೊಬ್ಬರ ಮನೆಯನ್ನು ಕಿತ್ತು ಹಾಕಲು ಮುಂದಾದಾಗ ಅರಣ್ಯ ಅಧಿಕಾರಿಗಳ ಕ್ರಮವನ್ನು ಶಾಸಕ ಹರೀಶ್ ಪೂಂಜಾ ರೈತರ ಪರ ನಿಂತಿದ್ದರು. ಈ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೂಂಜಾ ಮದ್ಯೆ ಮಾತಿನ ಚಕಮಕಿ ನಡೆದಿತ್ತು.ಇದನ್ನೆ ಮುಂದಿಟ್ಟು ಅರಣ್ಯ ಅಧಿಕಾರಿಗಳು ಪುಂಜಾ ವಿರುದ್ದ ಎಫ್ಐಆರ್ ದಾಖಲಿಸಿದ್ದರು.
ಈ ಎಫೈ ಆರ್ ವಿರುದ್ದ ಆಕ್ರೋಶ ಹೊರಹಾಕಿರುವ ಹರೀಶ್ ಬೆಳಗಾವಿ ಅಧಿವೇಶನದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ತಮ್ಮ ಹಕ್ಕಿಗೆ ಚ್ಯುತಿ ತರಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಎಫ್ಐಆರ್ ದಾಖಲು ಮಾಡಿದ ಅಧಿಕಾರಿಗಳ ವಿರುದ್ಧ ಹಕ್ಕು ಚ್ಯುತಿ ಮಂಡಿಸಿದ್ದಾರೆ.
ವಿಧಾನಸಭಾ ಕಲಾಪದಲ್ಲಿ ವಿರೋಧ ಪಕ್ಷದ ಸದಸ್ಯರು ಹಕ್ಕು ಚ್ಯುತಿ ಮಂಡಿಸಲು ಅವಕಾಶ ನೀಡುವಂತೆ ಕೋರಿದರು. ಇದಕ್ಕೆ ಜೆಡಿಎಸ್ ಸದಸ್ಯರು ಬೆಂಬಲ ನೀಡಿದ್ದಾರೆ . ಈ ಬಗ್ಗೆ ಸುನೀಲ್ ಕುಮಾರ್ ಮಾತನಾಡಿ ಬೆಳ್ತಂಗಡಿ ಶಾಸಕರ ಹಕ್ಕುಚ್ಯುತಿ ಮಂಡನೆ ಮಾಡಬೇಕಿದೆ. ಅರಣ್ಯ ಇಲಾಖೆಯವರು ಮನೆ ತೆರವು ಮಾಡಲು ಹೋಗಿದ್ದರು. ಈ ವೇಳೆ ಶಾಸಕರಿಗೆ ಹಕ್ಕುಚ್ಯುತಿ ಆಗಿದೆ. ಸದನದಲ್ಲಿ ಮಾತನಾಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಆದರೆ, ಅವಕಾಶ ಕೊಡದಿದ್ದಕ್ಕೆ ಸದನದಲ್ಲಿ ಗದ್ದಲ ಮುಂದುವರಿದಿತ್ತು. ಈ ವೇಳೆ ವಿಪಕ್ಷ ನಾಯಕ ಆರ್. ಅಶೋಕ್ ಮಧ್ಯ ಪ್ರವೇಶ ಮಾಡಿ, ನಾನು ಬರಗಾಲ ಬಗ್ಗೆ ತಡವಾಗಿ ಚರ್ಚೆ ಮಾಡುತ್ತೇನೆ. ಈಗ ಶಾಸಕರಿಗೆ ಹಕ್ಕುಚ್ಯುತಿ ಮಂಡನೆ ಮಾಡಲು ಅವಕಾಶ ನೀಡಿ ಎಂದು ಮನವಿ ಮಾಡಿದರು
. ಆದರೆ ಈ ಮನವಿಯನ್ನು ನಿರಾಕರಿಸಿದ ಸ್ಪೀಕರ್ ಯು.ಟಿ. ಖಾದರ್, ನಾಳೆ ಬೆಳಗ್ಗೆ ಅವಕಾಶ ನೀಡುತ್ತೇನೆ. ಈಗ ಬರಗಾಲ ಬಗ್ಗೆ ಚರ್ಚೆ ನಡೆಯಲಿ ಎಂದು ಮನವಿ ಮಾಡಿದರು. ಆದರೂ ಬಿಜೆಪಿ ಸದಸ್ಯರು ಪಟ್ಟು ಬಿಡದೆ ಈಗಲೇ ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು. ಶಾಸಕನ ರಕ್ಷಣೆ ನಿಮ್ಮ ಜವಾಬ್ದಾರಿಯಾಗಿದೆ. ಹಕ್ಕು ಚ್ಯುತಿ ಪಡೆದುಕೊಂಡು ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಈಗಲೇ ಹಕ್ಕುಚ್ಯುತಿ ಸಮಿತಿಗೆ ರೆಫರ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಸುನೀಲ್ ಕುಮಾರ್ ರವರು ಕ್ಯಾಬಿನೆಟ್ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧದ ಕೇಸ್ ಅನ್ನು ವಾಪಸ್ ತೆಗೆದುಕೊಳ್ಳುತ್ತೀರಿ. ಹರೀಶ್ ಪೂಂಜಾ ವಿರುದ್ಧ ಕೇಸ್ ದಾಖಲು ಮಾಡಿಕೊಳ್ಳುತ್ತೀರಿ. ಇದು ಯಾವ ನ್ಯಾಯ ಎಂದು ಪ್ರಶ್ನೆ ಮಾಡಿದ್ದಾರೆ. ಬಿಜೆಪಿ ಶಾಸಕರ ಒತ್ತಡಕ್ಕೆ ಮಣಿದ ಸ್ಪೀಕರ್ ಯು.ಟಿ. ಖಾದರ್, ಹಕ್ಕುಚ್ಯುತಿ ಮಂಡನೆ ಪ್ರಸ್ತಾಪಕ್ಕೆ ಅವಕಾಶ ಮಾಡಿಕೊಟ್ಟರು. ಈ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರು ಧರಣಿ ವಾಪಸ್ ಪಡೆದುಕೊಂಡರು.
ಆದರೆ ಹಕ್ಕುಚ್ಯುತಿಗೆ ಪ್ರಸ್ತಾಪಕ್ಕೆ ಅವಕಾಶ ಕೊಟ್ಟಿದ್ದಕ್ಕೆ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಬರದ ಚರ್ಚೆ ನಡುವೆ ಹಕ್ಕುಚ್ಯುತಿ ಪ್ರಸ್ತಾಪಕ್ಕೆ ಅವಕಾಶ ಏಕೆ ಎಂದು ಪ್ರಶ್ನೆ ಮಾಡಿದರು. ಶಾಸಕ ಬೇಳೂರು ಗೋಪಾಲಕೃಷ್ಣ, ಶಿವಲಿಂಗೇಗೌಡ ಆಕ್ಷೇಪ ವ್ಯಕ್ತಪಡಿಸಿದರು.
ಈ ವೇಳೆ ಶಾಸಕರ ಹಕ್ಕಿಗೆ ಚ್ಯುತಿ ಮಾಡಲು ಬಿಜೆಪಿ ಮುಂದಾದಾಗ ಅರಣ್ಯ ಅಧಿಕಾರಿಗಳ ಪರವಾಗಿ ಈಶ್ವರ್ ಖಂಡ್ರೆ ನಿಂತುಕೊಂಡರು. ಇದರಿಂದ ಬಿಜೆಪಿ ಶಾಸಕರು ಕೆರಳಿ ಕೆಂಡವಾದರು. “ಇದು ಅಧಿಕಾರಿಗಳ ರಾಜ್ಯವೇ? ಒಬ್ಬ ಶಾಸಕನ ಬಳಿ ಡಿಎಫ್ಒ ಮುಚ್ಚಳಿಕೆ ಬರಿಸಿಕೊಳ್ಳುತ್ತಾನೆ ಎಂದರೆ ಈ ವಿಧಾನಸಭೆ, ಶಾಸಕರು ಯಾಕೆ ಇರಬೇಕು? ಇದು ಅಧಿಕಾರಿಗಳ ರಾಜ್ಯವೇ?” ಎಂದು ಆರ್. ಅಶೋಕ್ ಆಕ್ರೋಶ ಹೊರಹಾಕಿದರು
ಈ ವಿಚಾರದ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ :ಮಾನವ – ಕಾಡು ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದೆ. ನಗರಕ್ಕೆ ಕಾಡು ಪ್ರಾಣಿಗಳು ಬರುತ್ತಿವೆ. ಇದಕ್ಕೆ ಯಾರು ಹೊಣೆ? ಅರಣ್ಯ ಅತಿಕ್ರಮಣವಾದರೆ ಈ ಸಮಸ್ಯೆ ಸೃಷ್ಟಿಯಾಗುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಅತಿಕ್ರಮಣ ಸಮರ್ಥನೆ ಮಾಡಿದರೆ ಅರಣ್ಯ ನಾಶವಾಗುತ್ತದೆ ಎಂದು ಹೇಳಿದರು.
ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಆರ್. ಅಶೋಕ್ ಅರಣ್ಯ ರಕ್ಷಣೆ ಮಾಡುವುದರ ಪರವಾಗಿ ನಾವೂ ಇದ್ದೇವೆ. ಮಾನವ ಕಾಡು ಪ್ರಾಣಿ ಸಂಘರ್ಷ ಸಾಮಾನ್ಯವಾಗಿದೆ. ಅರಣ್ಯ ಒತ್ತುವರಿ ಜಮೀನು ರೈತರಿಗೆ ಕೊಡಬೇಕು ಎಂದು ಸಾಕಷ್ಟು ಹೋರಾಟ ನಡೆದಿದೆ. ಸಂಗಮೇಶ್ ವಿರುದ್ಧ ಹಕ್ಕುಚ್ಯುತಿ ಆಗಿದೆ ಎಂದು ಆರೋಪ ಬಂದಿತ್ತು. ನಾವು ಕೂಡಲೇ ಹಕ್ಕು ಬಾಧ್ಯತಾ ಸಮಿತಿಗೆ ನೀಡಿದ್ದೇವೆ. ಅಧಿಕಾರಿಗಳನ್ನು ಕೇಳುವವರು ಹೇಳುವವರು ಯಾರೂ ಇಲ್ಲದಂತಾಗಿದೆ. ಶಾಸಕರ ಮೇಲೆ ಎಫ್ಐಆರ್ ಹಾಕುತ್ತಾರೆ ಎಂದರೆ ಏನು ಅರ್ಥ ಬರುತ್ತದೆ? ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಹಾಗೂ ಕೇಸ್ ವಾಪಸ್ ಪಡೆಯಿರಿ ಎಂದು ಆಗ್ರಹಿಸಿದರು.
ಬಳಿಕ ಸ್ಪೀಕರ್ ಯು.ಟಿ. ಖಾದರ್, ಹಕ್ಕು ಬಾಧ್ಯತಾ ಸಲಹಾ ಸಮಿತಿಗೆ ನಿರ್ಣಯವನ್ನು ರವಾನಿಸಿದ್ದಾರೆ.
ಕ್ರೈಂ
Acid Attack ಚಿಕ್ಕಮಗಳೂರು: ನೆರೆಮನೆಯ ನಾಯಿ ಬೊಗಳಿದ್ದೇ ತಪ್ಪಾಯ್ತಾ? ಮಾಲೀಕನ ಮೇಲೆ ಆಸಿಡ್ ದಾಳಿ

ಚಿಕ್ಕಮಗಳೂರು: ನಾಯಿ ಬೊಗಳಿದೆ ಎಂಬ ಕ್ಷುಲ್ಲಕ ಕಾರಣಕ್ಕೆ ನಾಯಿಯ ಮಾಲೀಕನ ಮೇಲೆ ಆಸಿಡ್ ದಾಳಿ ಮಾಡಿದ ಘಟನೆ ಎನ್.ಆರ್.ಪುರ ತಾಲೂಕಿನ ಕುರಗುಂದ ಗ್ರಾಮದಲ್ಲಿ ನಡೆದಿದೆ. ಆಸಿಡ್ ದಾಳಿಗೊಳಗಾದ ವ್ಯಕ್ತಿಯನ್ನು ಕುರಗುಂದ ನಿವಾಸಿ ಸುಂದರ್ ರಾಜ್ ಎಂದು ಗುರುತಿಸಲಾಗಿದೆ.
ತಾನು ಸಾಕುತ್ತಿರುವ ನಾಯಿ ಬೊಗಳಿದ್ದಕ್ಕೆ ಯಜಮಾನ ಸುಂದರ್ ನಾಯಿಗೆ ಬೈಯ್ಯುತ್ತಿದ್ದ. ಆದರೆ ಜೇಮ್ಸ್ ಎನ್ನುವ ವ್ಯಕ್ತಿ ತನಗೆ ಬೈಯುತ್ತಿದ್ದಾನೆ ಎಂದು ಅಪಾರ್ಥ ಮಾಡಿಕೊಂಡು ನೆರೆಮನೆಯ ನಿವಾಸಿ ಸುಂದರ್ ರಾಜ್ ಮೇಲೆ ಆಸಿಡ್ ಎರಚಿದ್ದಾನೆ ಎಂದು ತಿಳಿದು ಬಂದಿದೆ.
ಸದ್ಯ ಗಾಯಾಳು ಸುಂದರ್ ರಾಜ್ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Winter Health ಚಳಿಗಾಲದಲ್ಲಿ ಪ್ರತಿದಿನ ತುಪ್ಪ ಸೇವಿಸುವುದು ತಪ್ಪಾ ?
ಆಸಿಡ್ ದಾಳಿಯಿಂದಾಗಿ ಸುಂದರ್ ರಾಜ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಎಡಗಣ್ಣಿನ ಪದರ ಬದಲಿಸುವಂತೆ ವೈದ್ಯರು ಸೂಚಿಸಿದ್ದಾರೆ. ನಾಯಿ ಹೆಸರಿನಲ್ಲಿ ತನಗೆ ಬಯ್ಯುತ್ತಿರುವುದಾಗಿ ಜೇಮ್ಸ್ ಆರೋಪಿಸಿದ್ದು, ಈತನ ವಿರುದ್ಧ ಎನ್.ಆರ್. ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ರೀಡೆ
Bomb Threat ಪ್ರಿಯಕರ ಕೊಟ್ಟ ಐಡಿಯಾ ನಂಬಿ ಗಂಡನ ಜೈಲಿಗೆ ಕಳುಹಿಸಲು ಆತನ ಮೊಬೈಲ್ʼನಿಂದ ಹೆಂಡತಿ ಕಳುಹಿಸಿದಳು ಬೆದರಿಕೆ ಮೆಸೇಜ್ – ಆದರೇ ಮುಂದೇನಾಯಿತು ?

ಬೆಂಗಳೂರು : Bangalore: Bomb Threat ಪತಿ ಹಾಗೂ ಪತ್ನಿ ನಡುವೆ ಮತ್ತೊಬ್ಬ ಎಂಟ್ರಿ ಕೊಟ್ಟ ಬಳಿಕ ಉಂಟಾದ ಮನಸ್ತಾಪ ಬಾಂಬ್ ಬೆದರಿಕೆ ಹಾಕುವಷ್ಟರ ಮಟ್ಟಿಗೆ ಬೆಳೆದಿದೆ. ಪ್ರಿಯಕರನ ಮಾತು ಕೇಳಿ ಗಂಡನನ್ನು ಕೇಸಿನಲ್ಲಿ ಫಿಟ್ ಮಾಡಲು ಹೋಗಿ ಸ್ವತ: ಪತ್ನಿಯೇ ಜೈಲು ಸೇರಿದ ಘಟನೆ ಬೆಂಗಳುರಿನ ಹೊರ ವಲಯ ಆನೇಕಲ್ನಲ್ಲಿ ಬೆಳಿಕಗೆ ಬಂದಿದೆ
ಆನೇಕಲ್ನ ಮಾರುತಿ ಬಡಾವಣೆಯಲ್ಲಿ ಉತ್ತರ ಕರ್ನಾಟಕ (Uttara Karnataka) ಮೂಲದ ಕಿರಣ್ ಮತ್ತು ವಿದ್ಯಾರಾಣಿ ದಂಪತಿ ವಾಸವಿದ್ದರು. ಇತ್ತೀಚೆಗಿನ ದಿನಗಳಲ್ಲಿ ಒಳ್ಳೊಳ್ಳೆ ಸಂಸಾರಕ್ಕೆ ಹುಳಿ ಹಿಂಡುತ್ತಿರುವ ಸೋಷಿಯಲ್ ಮೀಡಿಯಾ ಇಲ್ಲೂ ಕೂಡ ತನ್ನ ಆಟ ಆಡಿದೆ. ವಿದ್ಯಾರಾಣಿಗೆ ಸೋಷಿಯಲ್ ಮೀಡಿಯಾ ಬಳಸುವ ಖಯಾಲಿ. ಅದರಲ್ಲಿ ಅವರಿಗೆ ರಾಮ್ ಪ್ರಸಾದ್ ಎಂಬಾತ ಗಂಟು ಬಿದ್ದಿದ್ದಾನೆ. ಇಬ್ಬರ ಮಧ್ಯೆ ಫೋನ್ ನಲ್ಲಿ ಸರಸ ಸಲ್ಲಾಪ ಶುರುವಾಗಿದೆ . ನಿತ್ಯ ನಿರಂತರ ಚ್ಯಾಟಿಂಗ್ ನಲ್ಲಿ ತೊಡಗಿಸಿಕೊಂಡಿದ್ದಾರೆ
ಸ್ವಲ್ಪ ದಿನದಲ್ಲೆ ಇದು ವಿದ್ಯಾಳ ಗಂಡ ಕಿರಣ್ ಗೆ ಗೊತ್ತಾಗಿದೆ. ಸಿಟ್ಟುಗೊಂಡ ಆತ ವಿದ್ಯಾಳ ಫೊನನ್ನು ತೆಗೆದು ಎಸೆದಿದ್ದಾನೆ ಅದು ಹುಡಿ ಹುಡಿಯಾಗಿದೆ. ಗಂಡ ಅತ್ತ ಕೆಲಸಕ್ಕೆ ಹೋಗುತ್ತಲೇ ವಿದ್ಯಾ ಇನ್ನೊಂದು ಫೊನ್ ಮೂಲಕ ಪ್ರಿಯಕರನನ್ನು ಸಂಪರ್ಕಿಸಿ ಗಂಡ ಮೊಬೈಲ್ ಒಡೆದು ಹಾಕಿದ ವಿಷಯ ತಿಳಿಸಿದ್ದಾಳೆ.
ತಕ್ಷಣ ತನ್ನ ಪ್ರಿಯತಮೆಯ ಗಂಡನಿಗೆ ಬುದ್ದಿ ಕಳುಹಿಸಲು ಜತೆಗೆ ಆತನನ್ನು ಜೈಲಿಗೆ ಕಳುಹಿಸಲು ರಾಮ್ ಪ್ರಸಾದ್ ಮಾಸ್ಟರ್ ಪ್ಲ್ಯಾನ್ ಹೆಣೆದಿದ್ದಾನೆ. ಅದರಂತೆ ಡಿಸೆಂಬರ್ 5ರಂದು RDX ಬಾಂಬ್ ಹಾಕುವುದಾಗಿ ಬೆದರಿಕೆ ಹಾಕುವ ಮೆಸೇಜ್ ವೊಂದನ್ನು ಬರೆದು ವಿದ್ಯಾಳ ಮೊಬೈಲ್ ಗೆ ಫಾರ್ವಾರ್ಡ್ ಮಾಡಿದ್ದಾನೆ. ಇದನ್ನು ಗಂಡನ ಮೊಬೈಲ್ ಗೆ ಫಾರ್ವಾಡ್ ಮಾಡುವಂತೆ ತಿಳಿಸಿದ ಆತ ಬಳಿಕ ಅದನ್ನು ಗಂಡನ ನಂಬರ್ನಿಂದ ಪೊಲೀಸ್ ಅಧಿಕಾರಿಗಳಿಗೆ ಸೆಂಡ್ ಮಾಡುವಂತೆ ತಿಳಿಸಿದ್ದ.
Winter Health ಚಳಿಗಾಲದಲ್ಲಿ ಪ್ರತಿದಿನ ತುಪ್ಪ ಸೇವಿಸುವುದು ತಪ್ಪಾ ?
ಪ್ರಿಯಕರನ ಮಾತನ್ನು ನಂಬಿದ ವಿದ್ಯಾರಾಣಿ ಖುದ್ದು ಪೊಲೀಸ್ ಮತ್ತು ಕೇಂದ್ರ ತನಿಖಾ ಸಂಸ್ಥೆಗೆ ಕಳುಹಿಸಿದ್ದಳು. ಬಳಿಕ ಗಂಡನ ಮೊಬೈಲ್ನಿಂದ ಮೆಸೇಜ್ ಡಿಲೀಟ್ ಮಾಡಿದ್ದಳು. ಇತ್ತ ಮೆಸೇಜ್ ಬಂದಿದ್ದ ನಂಬರ್ ನ ಮೂಲ ಹುಡುಕಿ ಹೊರಟಿದ್ದ ತನಿಖಾ ಸಂಸ್ಥೆಗಳು, ಮನೆಗೆ ಬಂದು ಇಬ್ಬರನ್ನು ವಿಚಾರಣೆಗೊಳಪಡಿಸಿದಾಗ ಸತ್ಯ ಬಯಲಿಗೆ ಬಂದಿದೆ. ಈ ಸಂಬಂಧ ಆನೇಕಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
-
ಅಪರಾಧ9 hours ago
ವಿಟ್ಲ : 80 ಪ್ರಕರಣಗಳ ಸರದಾರ ʼಇತ್ತೆ ಬರ್ಪೆ ಅಬೂಬ್ಬಕರ್ʼ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು – ಅಷ್ಟಕ್ಕೂ ಈತ ಸಿಕ್ಕಿ ಬಿದ್ದದ್ದು ಹೇಗೆ ಗೊತ್ತಾ? ಇತ್ತೆ ಬರ್ಪೆ ಹೆಸರಿನ ಹಿಂದಿದೆ ಇಂಟ್ರೆಸ್ಟಿಂಗ್ ಕಹಾನಿ
-
ಬಿಗ್ ನ್ಯೂಸ್14 hours ago
ಹುತಾತ್ಮ ಯೋಧ ಕ್ಯಾ.ಪ್ರಾಂಜಲ್ ಕುಟುಂಬಕ್ಕೆ ಚೆಕ್ ವಿತರಣೆ : ಮೊತ್ತ ತಾಯಿ-ಪತ್ನಿಗೆ ಸಮಪಾಲು ಮಾಡಿದ ಸರ್ಕಾರ
-
ಕ್ರೀಡೆ13 hours ago
Bomb Threat ಪ್ರಿಯಕರ ಕೊಟ್ಟ ಐಡಿಯಾ ನಂಬಿ ಗಂಡನ ಜೈಲಿಗೆ ಕಳುಹಿಸಲು ಆತನ ಮೊಬೈಲ್ʼನಿಂದ ಹೆಂಡತಿ ಕಳುಹಿಸಿದಳು ಬೆದರಿಕೆ ಮೆಸೇಜ್ – ಆದರೇ ಮುಂದೇನಾಯಿತು ?
-
ಕ್ರೀಡೆ10 hours ago
Jay shah: ಜಯ್ ಶಾಗೆ ಸ್ಪೋರ್ಟ್ಸ್ ಬ್ಯುಸಿನೆಸ್ ಲೀಡರ್ ಆಫ್ ದಿ ಇಯರ್ ಪ್ರಶಸ್ತಿಯ ಗರಿ – ಬಿಸಿಸಿಐ ಕಾರ್ಯದರ್ಶಿಗೆ ಈ ಗೌರವ ಸಿಕ್ಕಿದ್ದು ಯಾಕೆ ಗೊತ್ತೆ ?
-
ರಾಜಕೀಯ11 hours ago
Harish Poonja Moved Privilege motion ತನ್ನ ಮೇಲೆ ಎಫ್ ಐ ಆರ್ ದಾಖಲಿಸಿದ ಅರಣ್ಯ ಅಧಿಕಾರಿಗಳ ವಿರುದ್ದ ಸದನದಲ್ಲಿ ಹಕ್ಕು ಚ್ಯುತಿ ಮಂಡಿಸಿದ ಹರೀಶ್ ಪೂಂಜಾ – ಏನಿದು ಪ್ರಕರಣ ? ಮುಂದೇನಾಯಿತು?
-
ಸಾಮಾಜಿಕ ಮಾಧ್ಯಮ18 hours ago
Dasara Elephant Arjun Dies ಅರ್ಜುನ ಸಾವಿನ ಸುತ್ತ ಹಲವು ಅನುಮಾನ – ಮಾವುತರೊಂದಿಗೆ ಮಾತನಾಡಿದ ಕಾವಾಡಿಗರ ವಿಡಿಯೋ ವೈರಲ್ – ಅದರಲ್ಲಿದೆ ಗುಂಡೇಟಿನ ವಿಚಾರ
-
ಸಿನೆಮಾ1 day ago
Animal Box Office collection ರಣ್ ಬೀರ್ – ರಶ್ಮಿಕಾ ಜೋಡಿ ಕಮಾಲ್ : ಅನಿಮಲ್ ಬಾಕ್ಸ್ ಆಫೀಸ್ನಲ್ಲಿ ಮಾಡಿದ ಕಲೆಕ್ಷನ್ ಎಷ್ಟು ಗೊತ್ತಾ?
-
ಚಿನ್ನ-ಬೆಳ್ಳಿ ದರ19 hours ago
Gold Rate Hike:ಆಭರಣ ಪ್ರಿಯರಿಗೆ ಶಾಕಿಂಗ್ ಸುದ್ದಿ : ಭಾರತದ ಮಾರುಕಟ್ಟೆಯಲ್ಲಿ ಚಿನ್ನದ ದರ ಸಾರ್ವಕಾಲಿಕ ಜಿಗಿತ – ಮುಂದಿನ ದಿನಗಳಲ್ಲಿ ರೇಟ್ ಹೇಗಿರಲಿದೆ?