Connect with us

ರಾಜಕೀಯ

ರಾಜ್ಯದಲ್ಲಿ 10 ಪ್ರತ್ಯೇಕ ಮುಸ್ಲಿಮ್ ಹೆಣ್ಣು ಮಕ್ಕಳ ಕಾಲೇಜು ನಿರ್ಮಾಣಕ್ಕೆ ಅನುಮೋದನೆ – ಸಿಎಂ ಶಂಕು ಸ್ಥಾಪನೆ | ಬಿಜೆಪಿ ಸರ್ಕಾರದ ದ್ವಿಮುಖ ನೀತಿ – ಹಿಂದೂ ಸಂಘಟನೆ ಆಕ್ರೋಶ

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ ಮುಸ್ಲಿಂ ಹೆಣ್ಣಕ್ಕಳಿಗಾಗಿಯೇ ಪ್ರತ್ಯೇಕ  10 ಕಾಲೇಜುಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ವಿಧಾನ ಸಭೆ ಚುನಾವಣೆಗೂ ಮೊದಲು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈ ಯೋಜನೆಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ ಎಂದು ತಿಳಿದು ಬಂದಿದೆ.

Ad Widget

Ad Widget

Ad Widget

Ad Widget

3 ತಿಂಗಳ ಹಿಂದೆ  ರಾಜ್ಯ ವಕ್ಫ್ ಬೋರ್ಡ್ ಮುಸ್ಲಿಂ ಹೆಣ್ಣುಮಕ್ಕಳಿಗಾಗಿಯೇ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸುವ ನಿರ್ಣಯ ಕೈಗೊಳ್ಳಲಾಗಿತ್ತು. ಒಂದೂವರೆ ತಿಂಗಳ ಹಿಂದೆ ಸರ್ಕಾರದಿಂದ ಇದಕ್ಕೆ ಅನುಮೋದನೆಯೂ ಸಿಕ್ಕಿತ್ತು. ಪ್ರತಿ ಕಾಲೇಜಿಗೆ 2.5 ಕೋಟಿ ರೂ. ಅನುದಾನವನ್ನೂ ಮೀಸಲಿರಿಸಲಾಗಿದೆ. ವಕ್ಸ್ಬೋರ್ಡ್ಗೆ ರಾಜ್ಯ ಸರ್ಕಾರ ನೀಡುವ ಅನುದಾನದಲ್ಲಿ ವೆಚ್ಚವನ್ನು ಭರಿಸಲು ನಿರ್ಧರಿಸಲಾಗಿದೆ.

Ad Widget

Ad Widget

Ad Widget

  ಮುಸ್ಲಿಂ ಬಾಹುಳ್ಯ ಹೆಚ್ಚಿರುವ ಕಲಬುರಗಿ, ಯಾದಗರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ 10 ಸರ್ಕಾರಿ ಕಾಲೇಜುಗಳನ್ನು ತೆರೆಯಲಾಗುತ್ತದೆ.  

Ad Widget

ಉಡುಪಿಯಿಂದ ಕಾಲೇಜೊಂದರಲ್ಲಿ  ಆರಂಭವಾದ ಹಿಜಾಬ್ ವಿವಾದ  ಬಳಿಕ ರಾಜ್ಯ ಹಾಗೂ ದೇಶದ್ಯಾಂತ ವಿಸ್ತಾರಗೊಂಡಿತ್ತು.  . ಹಿಜಾಬ್ ವಿರುದ್ಧ ಸ್ವತಃ ಬಿಜೆಪಿ ಶಾಸಕರು, ಸಚಿವರೇ ತಿರುಗಿ ನಿಂತಿದ್ದರು. ಬಿಜೆಪಿ ಪರ ಸಂಘಟನೆಗಳು ಈ ವಿಚಾರವನ್ನು ದೊಡ್ಡ ವಿವಾದವಾಗಿ ಮಾರ್ಪಡಿಸಲು ಯಶಸ್ವಿಯಾಗಿತ್ತು. ವಿವಾದವೂ ಹೈಕೋರ್ಟು ಮೆಟ್ಟಿಲು ಕೂಡ ಏರಿತ್ತು.  ಕೋರ್ಟ್ ನಲ್ಲಿ ಹಿಜಾಬ್ ಪರ ಹೋರಾಟ ಮಾಡಿದ ವಿದ್ಯಾರ್ಥಿನಿಯರಿಗೆ ಸೋಲಾದಾಗ ಇದು ನಮಗೆ ಸಿಕ್ಕ ಗೆಲುವು ಎಂದು ಬಿಜೆಪಿ ನಾಯಕರು ಹೇಳಿಕೊಂಡಿದ್ದರು. ಬಳಿಕ ವಿದ್ಯಾರ್ಥಿನಿಯರು ಸುಪ್ರಿಂ ಕೋರ್ಟು ಮೊರೆ ಹೋಗಿದ್ದು , ಅಲ್ಲಿ ಇಬ್ಬರು ನ್ಯಾಯಾದೀಶರು ಭಿನ್ನ ತೀರ್ಪು ನೀಡಿದ ಕಾರಣ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಲಾಗಿದೆ

Ad Widget

Ad Widget

ಏತನ್ಮಧ್ಯೆ  ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಕಣ್ಣೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಕಲಬುರಗಿ, ಯಾದಗರಿ, ರಾಯಚೂರು, ಉಡುಪಿ ಜಿಲ್ಲೆ ಸೇರಿದಂತೆ 10 ಕಡೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳ ಕಾಲೇಜು ಸ್ಥಾಪಿಸಲು ಮುಂದಾಗಿದ್ದು, ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದೆ ಅನ್ನೋ ಮಾತುಗಳು ಕೇಳಿ ಬಂದಿದೆ.

ವಿರೋಧ :

 ಬಿಜೆಪಿ ಹಿಂದುತ್ವದ ಆಧಾರದಲ್ಲಿ ಓಟು ಪಡೆದುಕೊಂಡು ಈಗ ಜಾತ್ಯತೀತ ಮುಖವಾಡ ಹಾಕಿಕೊಂಡಿರುವುದು ನಿಷ್ಠಾವಂತ ಹಿಂದೂ ಕಾರ್ಯಕರ್ತರಿಗೆ ಮಾಡುತ್ತಿರುವ ದೊಡ್ಡ ಮೋಸ, ಆರಂಭದಿಂದಲೂ ಹಿಂದುತ್ವವಾದ ವನ್ನೇ ಹೇಳಿಕೊಂಡು ಬಂದು ಈಗ ಮುಸ್ಲಿಮರ ಪರ ಕೆಲಸ ಮಾಡುತ್ತಿದ್ದಾರೆ ಎಂದಾದರೆ ಬಿಜೆಪಿ ಸರ್ಕಾರವು ದ್ವಿಮುಖ ನೀತಿ ಅಳವಡಿಸಿಕೊಂಡಿರುವುದು ಸ್ಪಷ್ಟ. ಇಂತಹ ಪಕ್ಷ ಮತ್ತು ಅದರ ನಾಯಕರು ಭವಿಷ್ಯತ್ತಿನಲ್ಲಿ ಹಿಂದೂ ಧರ್ಮಕ್ಕೆ ಮಾರಕ ಎಂದು ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ

Click to comment

Leave a Reply

ರಾಜಕೀಯ

ಗಂಭೀರ ಸ್ವರೂಪ ಪಡೆದುಕೊಂಡ ಐಸಿಸಿ ನಂಟಿನ ಮೌಲ್ವಿ ಹಾಶ್ಮಿ ಜೊತೆ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ ಎನ್ನುವ ಯತ್ನಾಳ್ ಆರೋಪ : ‘ಜೀ’ ಗಳ ಬಲದಲ್ಲಿ ಮೋದಿಯನ್ನೇ ಪೇಚಿಗೆ ಸಿಲುಕಿಸಿದ ಯತ್ನಾಳ್..! ಆರೋಪ ಹೊತ್ತ ಮೌಲ್ವಿ ಜೊತೆಗಿನ ಮೋದಿ ಪೋಟೋ ಬಿಡುಗಡೆ ಮಾಡಿದ ಸಿದ್ದರಾಮಯ್ಯ

Ad Widget

Ad Widget

ಮೌಲ್ವಿ ತನ್ವೀರ್ ಹಾಶ್ಮಿ ಐಸಿಸಿ ನಂಟು ಹಾಗೂ ಸಿದ್ದರಾಮಯ್ಯರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎನ್ನುವ ಯತ್ನಾಳ್ ಆರೋಪ ದಿನೇ ದಿನೇ ಗಂಭೀರ ಸ್ವರೂಪ ಪಡೆಯುತ್ತಿದೆ. ಇದೀಗ ಹಾಶ್ಮಿಯೊಂದಿಗೆ ನರೇಂದ್ರ ಮೋದಿ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಖುದ್ದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Ad Widget

Ad Widget

Ad Widget

Ad Widget

ಸಿದ್ದರಾಮಯ್ಯ ಮಾಧ್ಯಮ ಪ್ರಕಟನೆ ಹೊರಡಿಸಿ, ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಪೋಟೊವನ್ನು ಹಿಡ್ಕೊಂಡು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನನ್ನ ವಿರುದ್ದ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ನರೇಂದ್ರ ಮೋದಿ ಅವರು ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ.

Ad Widget

Ad Widget

Ad Widget

ಮೌಲ್ವಿ ಹಾಶ್ಮಿ ಅವರ ಜೊತೆಗೆ ಇತರ ಬಿಜೆಪಿ ನಾಯಕರು ಮಾತ್ರವಲ್ಲ ಸಾಕ್ಷಾತ್ ನರೇಂದ್ರ ಮೋದಿ ಅವರೂ ಸಂಬಂಧ ಹೊಂದಿರುವುದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿರುವ ಪೋಟೊಗಳು ಸ್ಪಷ್ಟವಾಗಿ ಹೇಳುತ್ತಿವೆ. ದೀರ್ಘಕಾಲದಿಂದ ಹಾಶ್ಮಿ ಅವರಿಗೆ ಅತ್ಯಂತ ಆತ್ಮೀಯರಾಗಿರುವ ಮತ್ತು ಊರಿನಲ್ಲಿ ತನ್ನ ನೆರೆಹೊರೆಯಾಗಿರುವ ಯತ್ನಾಳ್ ಅವರಿಗೆ ಇದು ತಿಳಿದಿರಲಿಲ್ಲ ಎನ್ನುವುದನ್ನು ನಂಬಲು ಸಾಧ್ಯವೇ? ಎಂದಿದ್ದಾರೆ.

Ad Widget

ರಾಜ್ಯ ಬಿಜೆಪಿ ಅಧ್ಯಕ್ಷತೆ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನ ತಪ್ಪಿಹೋಗಿರುವುದರಿಂದ ಯತ್ನಾಳ್ ಅವರು ಕೆರಳಿ ಕೆಂಡವಾಗಿದ್ದಾರೆ. ಇದಕ್ಕೆ ಕಾರಣಕರ್ತರಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ಧ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದಲೇ ಮೌಲ್ವಿ ತನ್ವೀರ್ ಹಾಶ್ಮಿ ಜೊತೆಗಿನ ನನ್ನ ಪೋಟೋವನ್ನು ತೋರಿಸಿ ಆರೋಪ ಮಾಡಿದ್ದಾರೆ. ಈ ಆರೋಪದ ನಂತರ ಮೌಲ್ವಿ ಅವರ ಜೊತೆಗಿನ ಪ್ರಧಾನಿ ನರೇಂದ್ರ ಮೋದಿ ಅವರ ಸಂಬಂಧದ ವಿವರವೂ ಹೊರಬರಲಿದೆ ಎನ್ನುವುದು ಅವರಿಗೆ ಖಂಡಿತ ಗೊತ್ತಿತ್ತು ಎಂದಿದ್ದಾರೆ.

Ad Widget

Ad Widget

ಅವೆಲ್ಲವೂ ಬಯಲಾಗಿ ಪ್ರಧಾನಿ ಮತ್ತು ಬಿಜೆಪಿ ನಾಯಕರು ಮುಜುಗರಕ್ಕೀಡಾಗಲಿ ಎನ್ನುವ ದುರುದ್ದೇಶದಿಂದ ನನ್ನ ವಿರುದ್ಧ ಆರೋಪ ಮಾಡುವ ಆಟ ಆಡಿದ್ದಾರೆ.ಮೌಲ್ವಿ ಹಾಶ್ಮಿ ಅವರ ಜೊತೆಗಿನ ನನ್ನ ಸ್ನೇಹ ಸಂಬಂಧವನ್ನು ನಾನು ಬಹಿರಂಗವಾಗಿಯೇ ಒಪ್ಪಿಕೊಂಡಿದ್ದೇನೆ. ಹಾಶ್ಮಿಯವರೂ ಕೂಡಾ ಅವರ ಮೇಲಿನ ಆರೋಪದ ತನಿಖೆಯನ್ನು ಕೇಂದ್ರ ಸರ್ಕಾರವೇ ನಡೆಸಲಿ ಎಂದು ಸವಾಲು ಹಾಕಿದ್ದಾರೆ.

ಈಗ ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯಿಸಲೇ ಬೇಕಾಗುತ್ತದೆ. ಮೌಲಿ ತನ್ವೀರ್ ಹಾಶ್ಮಿ ಅವರಿಗೆ ನಿಜವಾಗಿ ಐಸಿಎಸ್ ಜೊತೆ ಸಂಬಂಧ ಇದ್ದರೆ ಆ ಬಗ್ಗೆ ತನಿಖೆಗೆ ಪ್ರಧಾನಿಯವರು ತಕ್ಷಣ ಆದೇಶ ನೀಡಬೇಕು ಮತ್ತು ಹಾಶ್ಮಿ ಮತ್ತು ತನ್ನ ಸಂಬಂಧದ ವಿವರವನ್ನು ದೇಶದ ಮುಂದಿಡಬೇಕು. ಇದು ಎರಡೂ ಮಾಡದೆ ಇದ್ದರೆ ಇಂತಹ ಸುಳ್ಳು ಆರೋಪ ಮಾಡುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮವನ್ನಾದರೂ ಕೈಗೊಳ್ಳಬೇಕು.ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ರೀತಿಯ ಆರೋಪಗಳನ್ನು ಮಾಡುವುದು ಇದೇ ಮೊದಲ ಸಲವೇನಲ್ಲ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಮಕ್ಕಳ ವಿರುದ್ಧ ಪುಂಖಾನುಪುಂಖವಾಗಿ ಆರೋಪ ಮಾಡಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಬೇಕಾದರೆ ಪಕ್ಷದ ಹೈಕಮಾಂಡಿಗೆ ಎರಡು ಸಾವಿರ ಕೋಟಿ ರೂಪಾಯಿ ಕೊಡಬೇಕಾಗುತ್ತದೆ ಎನ್ನುವ ಗಂಭೀರ ಆರೋಪವನ್ನೂ ಅವರು ಮಾಡಿದ್ದಾರೆ. ಈ ರೀತಿ ಬಹಿರಂಗವಾಗಿ ತಮ್ಮ ಪಕ್ಷದ ಉನ್ನತ ನಾಯಕರ ವಿರುದ್ಧವೇ ಆರೋಪ ಮಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಾಯಿಬಲದ ಹಿಂದೆ ಇರುವ ಶಕ್ತಿ ಯಾವುದು?

ಬಿಜೆಪಿಯಲ್ಲಿರುವ ಯಾವ ‘ಜೀ’’ ಗಳ ಬಲದಿಂದ ಇಂತಹ ಸ್ವಪಕ್ಷೀಯರ ವಿರುದ್ಧ ಇಂತಹ ಮಾನಹಾನಿಕರ ಆರೋಪ ಮಾಡಿಯೂ ಅವರೂ ಬಚಾವಾಗುತ್ತಿದ್ದಾರೆ ಎನ್ನುವುದು ಕೂಡಾ ಬಯಲಾಗಬೇಕಾಗಿದೆ. ಇಂದಿನ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಸುದ್ದಿಯ ಪ್ರಕಾರ ಮೌಲ್ವಿ ತನ್ವೀರ್ ಹಾಶ್ಮಿ ಕುಟುಂಬದ ಜೊತೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ವ್ಯಾಪಾರಿ ಸಂಬಂಧ ಕೂಡಾ ಇದೆ ಎನ್ನುವುದು ಬಯಲಾಗಿದೆ.

ಯತ್ನಾಳ್ ಅವರ ಆರೋಪದಂತೆ ತನ್ವೀರ್ ಹಾಶ್ಮಿ ಅವರಿಗೆ ಐಸಿಸ್ ಜೊತೆ ಸಂಬಂಧ ಇರುವುದಾಗಿದ್ದರೆ ಅವರ ಜೊತೆಗೆ ವ್ಯವಹಾರದ ಪಾಲುದಾರರಾಗಿರುವ ಯತ್ನಾಳ್ ಅವರಿಗೆ ಅದು ಗೊತ್ತಿರಲಿಲ್ಲವೇ? ಗೊತ್ತಿದ್ದೂ ಸುಮ್ಮನಿರಲು ಕಾರಣವೇನು? ಇಷ್ಟು ಸಮಯದ ನಂತರ ಇಂತಹ ಆರೋಪ ಮಾಡಲು ಕಾರಣಗಳೇನು ಎನ್ನುವುದನ್ನು ಕೂಡಾ ಕೇಂದ್ರ ಸರ್ಕಾರ ತನಿಖೆ ನಡೆಸಬೇಕು ಎಂದರು.

Continue Reading

ರಾಜಕೀಯ

Karnataka BJP | ಪ್ರತಿಪಕ್ಷ ನಾಯಕ ಅಶೋಕ್ ವಿರುದ್ದ ಬಹಿರಂಗ ಆಕ್ರೋಶ ವ್ಯಕ್ತಪಡಿಸಿ ‘ಅಡ್ಜಸ್ಟ್ ಮೆಂಟ್ ಗಿರಾಕಿ’ ಎಂದ ಬಿಜೆಪಿ ಶಾಸಕರು

Ad Widget

Ad Widget

ಸುವರ್ಣವಿಧಾನಸೌಧ : ಬೆಳಗಾವಿ ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್‌ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ನೀಡಿದ ಉತ್ತರ ವಿರೋಧಿಸಿ ನಡೆಸಿದ ಸಭಾತ್ಯಾಗ ಪ್ರತಿಪಕ್ಷ ಬಿಜೆಪಿಯಲ್ಲಿಯೇ ಗೊಂದಲ, ಅಸಮಾಧಾನಕ್ಕೆ ಕಾರಣವಾಗಿದ್ದು, ಪ್ರತಿಪಕ್ಷ ನಾಯಕ ಆರ್‌.ಅಶೋಕ್ (Karnataka BJP) ವಿರುದ್ಧವೇ ಸ್ವಪಕ್ಷೀಯರು ಬಹಿರಂಗವಾಗಿ ಬೇಸರ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು.

Ad Widget

Ad Widget

Ad Widget

Ad Widget

ಪೃಥ್ವಿಸಿಂಗ್‌ ಮತ್ತು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಬೆಳಗಾವಿ ಬಿಜೆಪಿ ಮುಖಂಡ ಅಭಿಜಿತ್ ಜವಳ್ಕರ್ ಪ್ರಕರಣ ಸಂಬಂಧ ಧರಣಿ ನಡೆಸಲು ಬಿ.ವೈ.ವಿಜಯೇಂದ್ರ ಮತ್ತಿತರ ಸದಸ್ಯರು ತೀರ್ಮಾನಿಸಿದ್ದರು. ಅಷ್ಟರಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಏಕಾಏಕಿ ಸಭಾತ್ಯಾಗ ಎಂದು ಪ್ರಕಟಿಸಿ ಸದನದಿಂದ ಹೊರ ನಡೆದರು. ಪರಿಣಾಮ ಪಕ್ಷದವರಲ್ಲಿಯೇ ಗೊಂದಲ ಉಂಟಾಯಿತು. ನಂತರ ಅನಿವಾರ್ಯವಾಗಿ ವಿಜಯೇಂದ್ರ ಮತ್ತಿತರರು ಸಹ ಸದನದಿಂದ ಹೊರ ನಡೆದರು.

Ad Widget

Ad Widget

Ad Widget

ಈ ನಡುವೆ, ಶಾಸಕರಾದ ಎಸ್‌.ಆರ್‌.ವಿಶ್ವನಾಥ್‌ ಮತ್ತು ಅಭಯ್ ಪಾಟೀಲ್‌ ಇಬ್ಬರು ಅಶೋಕ್‌ ನಡೆಗೆ ಕಿಡಿಕಾರಿದರು. ಎಸ್‌.ಆರ್‌.ವಿಶ್ವನಾಥ್‌ ಅವರಂತೂ ಅಶೋಕ್‌ ಅವರನ್ನು ‘ಅಡ್ಜಸ್ಟ್‌ಮೆಂಟ್‌ ಗಿರಾಕಿ’ ಎಂದು ಬೈಯ್ದುಕೊಂಡು, ಸದನಕ್ಕೆ ಆಗಮಿಸುವುದೇ ಇಲ್ಲ ಎಂದು ಕೋಪದಿಂದ ತೆರಳಿದರು. ಅಭಯ್‌ ಪಾಟೀಲ್‌, ಧರಣಿ ನಡೆಸುವ ಬದಲು ಸಭಾತ್ಯಾಗ ಮಾಡುವ ತೀರ್ಮಾನ ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

Ad Widget


ಸರ್ಕಾರದ ಉತ್ತರವನ್ನು ವಿರೋಧಿಸಿ ಧರಣಿ ಅಥವಾ ಸಭಾತ್ಯಾಗ ನಡೆಸುವ ಕುರಿತು ಸದನದಲ್ಲಿಯೇ ವಿಜಯೇಂದ್ರ, ಸುರೇಶ್‌ ಕುಮಾರ್‌, ಸುನೀಲ್‌ ಕುಮಾರ್‌ ಅವರು ಅಶೋಕ್‌ ಬಳಿ ಬಂದು ಚರ್ಚಿಸಿದರು. ಅಶೋಕ್‌ ಬಳಿಕ ಚರ್ಚಿಸಿದ ನಂತರ ಮತ್ತೊಮ್ಮೆ ಎಸ್‌.ಆರ್‌.ವಿಶ್ವನಾಥ್‌, ಬಸನಗೌಡ ಪಾಟೀಲ್‌ ಯತ್ನಾಳ್‌ ಸೇರಿದಂತೆ ಇತರೆ ನಾಯಕರು ಮಾತುಕತೆ ನಡೆಸಿದರು. ಆದರೆ, ಈ ವೇಳೆ ಅಶೋಕ್‌ ಬಳಿ ಯಾರೂ ಮಾತುಕತೆ ನಡೆಸಲಿಲ್ಲ. ಇದು ಪಕ್ಷದ ಸದಸ್ಯರಲ್ಲಿಯೇ ಒಮ್ಮತ ಮೂಡಲು ಸಾಧ್ಯವಾಗಲಿಲ್ಲ. ಪರಿಣಾಮ ಅಶೋಕ್‌ ಅವರು ಏಕಾಏಕಿ ಸಭಾತ್ಯಾಗ ಘೋಷಣೆ ಮಾಡಿದ್ದು ಇತರೆ ನಾಯಕರಲ್ಲಿ ಆಶ್ಚರ್ಯವನ್ನುಂಟು ಮಾಡಿತು.

Ad Widget

Ad Widget

ಸದನದಿಂದ ಹೊರಗೆ ಬರುತ್ತಿದ್ದಂತೆ ಮೊಗಸಾಲೆಯಲ್ಲಿ ಹಲವು ನಾಯಕರು ಅಶೋಕ್‌ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು. ಕೋಪದಿಂದಲೇ ಹೊರಬಂದ ಎಸ್‌.ಆರ್‌.ವಿಶ್ವನಾಥ್‌, ಧರಣಿ ಮಾಡಬೇಕಲ್ಲವೇ. ಧರಣಿ ಮಾಡುವ ಕುರಿತು ಮಾತುಕತೆ ನಡೆಸಲಾಗಿತ್ತು ಎಂದು ಕಿಡಿಕಾರಿದರು. ಆದರೆ ತಮ್ಮ ತೀರ್ಮಾನವನ್ನು ಸಮರ್ಥಿಸಿಕೊಂಡ ಅಶೋಕ್‌, ಸಭಾತ್ಯಾಗಕ್ಕೆ ತೀರ್ಮಾನ ಮಾಡಿದ್ದೇವೆ ಎಂದರು. ಆಗಲೂ ವಿಶ್ವನಾಥ್‌ ಆಕ್ರೋಶ ವ್ಯಕ್ತಪಡಿಸಿದರು.

ಇನ್ನು, ಅಭಯಪಾಟೀಲ್‌ ಸಹ ಕೋಪಗೊಂಡು, ಬಾವಿಗಿಳಿದು ಧರಣಿ ಮಾಡಬೇಕು ಎಂದುಕೊಂಡಿದ್ದೆವು. ಆದರೆ ಸಭಾತ್ಯಾಗ ಮಾಡಲಾಯಿತು. ಇನ್ನು ಮುಂದೆ ಶಾಸಕಾಂಗ ಸಭೆಗೆ ಬರುವುದಿಲ್ಲ. ಇವರಿಂದ ನಾನು ರಾಜಕೀಯಕ್ಕೆ ಬಂದಿಲ್ಲ. ರಾಜಕಾರಣ ಮಾಡುವುದು ನನಗೆ ಗೊತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅಭಯ್‌ ಪಾಟೀಲ್‌ ಅವರನ್ನು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಮಾಧಾನ ಮಾಡಲು ಪ್ರಯತ್ನಿಸಿದರು. ‘ನಾನು ನಿನ್ನೊಂದಿಗೆ ಇದ್ದೇನೆ. ನಾನು ನಿನ್ನ ಜತೆ ಇದ್ದೇನೆ ಬಾ’ ಎಂದರು.

ಆದರೂ ಅಭಯ್‌ ಪಾಟೀಲ್‌, ನನಗೆ ಈ ರಾಜಕಾರಣವೇ ಬೇಕಿಲ್ಲ ಎಂದು ಹೇಳಿ ಕೋಪದಲ್ಲಿಯೇ ಅಲ್ಲಿಂದ ತೆರಳಿದರು.

Continue Reading

ಉದ್ಯೋಗ

Job Alert:  ನಿರುದ್ಯೋಗಿಗಳಿಗೆ ಗುಡ್‌ ನ್ಯೂಸ್‌ –  ಸದ್ಯದಲ್ಲೆ  ಸಾರಿಗೆ ಇಲಾಖೆಗೆ  9 ಸಾವಿರ  ಸಿಬ್ಬಂದಿಗಳ ನೇಮಕ  : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ  

Ad Widget

Ad Widget

ಬೆಳಗಾವಿ:ನಾನು ಸಾರಿಗೆ ಸಚಿವರಾಗಿದ್ದಾಗ ಸಾರಿಗೆ ಸಿಬ್ಬಂದಿಗಳ ನೇಮಕಾತಿ ನಡೆದಿತ್ತು.ಅಲ್ಲಿಂದ ಇಲ್ಲಿಯವರೆಗೆ ನೇಮಕಾತಿ ನಡೆದಿಲ್ಲ. ಕಳೆದ 7ವರ್ಷಗಳಿಂದ 13,888 ಸಿಬ್ಬಂದಿ ನಿವೃತ್ತಿಯಾಗಿದ್ದಾರೆ. ಈಗ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವಂತ  9,000  ಸಿಬ್ಬಂದಿಗಳ ನೇಮಕ ಮತ್ತು 5500 ಹೊಸಬಸ್ ಖರೀದಿ ಮಾಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್ನಲ್ಲಿ ನಡೆದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು  ಶಕ್ತಿ ಯೋಜನೆ ಜಾರಿಯಾದ ಮೇಲೆ ಮೇಲೆ ಜನರು ಹೆಚ್ಚು ಓಡಾಡುತ್ತಿದ್ದಾರೆ. ಮೊದಲು 85 ಲಕ್ಷ ಜನರು ಓಡಾಡುತ್ತಿದ್ದರು. ಈಗ 1 ಕೋಟಿ ಜನರು ಓಡಾಟ ಮಾಡುತ್ತಿದ್ದಾರೆ. ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಮಹಿಳೆಯರ ಓಡಾಟ ಕೂಡ ಹೆಚ್ಚಾಗಿದೆ ಎಂದರು.

Ad Widget

Ad Widget

Ad Widget

ಇದಕ್ಕೆಲ್ಲಾ ಪ್ರಮುಖ ಕಾರಣ ಕಳೆದ ನಾಲ್ಕು ವರ್ಷದಲ್ಲಿ ಒಂದೇ ಒಂದು ಬಸ್  ಖರೀದಿ ಮಾಡಿಲ್ಲ. ಹೊಸ ಬಸ್ ತಗೊಂಡು ಹಳೆಯ ಬಸ್ಸುಗಳನ್ನು ಸ್ಕ್ರ್ಯಾಪ್‌ ಮಾಡಬೇಕು. ಹೀಗೆ ಆಗಿದ್ದರೆ ಏನು ಸಮಸ್ಯೆ ಆಗುತ್ತಿರಲಿಲ್ಲ ಎಂದರು.

Ad Widget

Baryl Vanneihsangi: ಸೋಷಿಯಲ್‌ ಮೀಡಿಯಾ ಸ್ಟಾರ್‌ ಈಗ ಮಿಜೋರಾಂ ರಾಜ್ಯದ ಕಿರಿಯ ಮಹಿಳಾ ಶಾಸಕಿ – ಬೆರಿಲ್ ವನ್ನೈಹಸಂಗಿ ಬಗ್ಗೆ ನಿಮಗೆಷ್ಟು ಗೊತ್ತು?

Ad Widget

Ad Widget

ಬೆಳಗಾವಿ ಸಾರಿಗೆ ವಿಭಾಗಕ್ಕೆ ಬಿಎಂಟಿಸಿ ಹಳೆ ಬಸ್ ಬಿಟ್ಟಿರುವುದಕ್ಕೆ ಇಲ್ಲಿ ಬಸ್ ಇಲ್ಲ ಎಂಬ ಕಾರಣಕ್ಕೆ ತೆಗೆದುಕೊಂಡಿದ್ದಾರೆ. ಮತ್ತೆ ಆ ಬಸ್ಸುಗಳನ್ನು ವಾಪಸ್‌ ಕಳುಹಿಸಿದ್ದಾರೆ. ಸತತವಾಗಿ ನಾಲ್ಕು ವರ್ಷ ಬಸ್ ಖರೀದಿ ಮಾಡಿಲ್ಲ, ಏಳು ವರ್ಷಗಳಿಂದ ನೇಮಕಾತಿ ಮಾಡಿಲ್ಲ, ಹೀಗಾಗಿ ಸಮಸ್ಯೆ ಆಗುತ್ತಿದೆ. ಹಾಗಾಗಿ 5500 ಹೊಸ ಬಸ್ ಖರೀದಿ ಮಾಡುತ್ತಿದ್ದು, 9 ಸಾವಿರ ಸಿಬ್ಬಂದಿ ನೇಮಕಾತಿ ಮಾಡಲಿದ್ದೇವೆ ಎಂದು ತಿಳಿಸಿದರು.

KFD Recruitment 2023: ಅರಣ್ಯ ಇಲಾಖೆಯಿಂದ ಫಾರೆಸ್ಟ್ ಗಾರ್ಡ್ 540 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು

 ಬೆಳಗಾವಿ, ಬಾಗಲಕೋಟೆ, ಗದಗ, ಹುಬ್ಬಳ್ಳಿ ಧಾರವಾಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಅತಿಹೆಚ್ಚು ಬಸ್ ನಿಲ್ದಾಣವನ್ನು 2013ರಿಂದ 2017ರವರೆಗೆ ನಾನು ಸಾರಿಗೆ ಸಚಿವ ಇದ್ದಾಗ ಈ ಭಾಗಕ್ಕೆ ಹಲವು ಬಸ್ಸು ಕೊಟ್ಟಿದ್ದೇನೆ. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣಕ್ಕೆ ಎರಡು ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ಹಾಕಲು ಸೂಚನೆ ನೀಡಿದ್ದೇನೆ. ಬೆಳಗಾವಿ ನಗರಕ್ಕೆ 100 ಹೊಸ ಬಸ್ ಖರೀದಿ ಮಾಡುತ್ತೇನೆ. ಮೂರು ತಿಂಗಳಲ್ಲಿ ಅವಧಿಯಲ್ಲಿ ಈ ಹೊಸ ಬಸ್ ಗಳು ಬರುತ್ತವೆ ಎಂದು ಹೇಳಿದ್ದಾರೆ.

Southeastern Railway Recruitment 2023 ಸೌತ್ ಈಸ್ಟರ್ನ್ ರೈಲ್ವೇಸ್ ವಿಭಾಗದಲ್ಲಿ ಭರ್ಜರಿ ಉದ್ಯೋಗವಕಾಶ: ಅಪ್ರೆಂಟಿಸ್ ಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Continue Reading

Trending

error: Content is protected !!