ಉದ್ಯೋಗ
UiDAI Recruitment 2022 : ಡಿಗ್ರಿ ಪೂರ್ತಿಗೊಳಿಸಿದವರಿಗೆ ಅಧಾರ್ ಕಾರ್ಡ್ ನಲ್ಲಿ ಉದ್ಯೋಗ – ಇಲ್ಲಿದೆ ಅರ್ಜಿ ಸಲ್ಲಿಸುವ ವಿವರ

IUIDAI Recruitment 2022: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(Unique Identification Authority of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಅಹ್ವಾನಿಸಲಾಗಿದ್ದು ಅಸಿಸ್ಟೆಂಟ್ ಟೆಕ್ನಿಕಲ್ ಆಫೀಸರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳು ಅದರಲ್ಲಿ ಸೇರಿವೆ. ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಜನವರಿ 08, 2023ರೊಳಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಯ ಕುರಿತು ಮಾಹಿತಿ,
ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ : ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ
ಹುದ್ದೆಯ ಹೆಸರು : ಅಸಿಸ್ಟೆಂಟ್ ಟೆಕ್ನಿಕಲ್ ಆಫೀಸರ್, ಡೆಪ್ಯುಟಿ ಡೈರೆಕ್ಟರ್
ಒಟ್ಟು ಹುದ್ದೆ :10
ವೇತನ: ನಿಯಮಾನುಸಾರ
ಉದ್ಯೋಗದ ಸ್ಥಳ : ಬೆಂಗಳೂರು
ಹುದ್ದೆಯ ಮಾಹಿತಿ:
ಡೆಪ್ಯುಟಿ ಡೈರೆಕ್ಟರ್ -2
ಟೆಕ್ನಿಕಲ್ ಆಫೀಸರ್- 3
ಅಸಿಸ್ಟೆಂಟ್ ಟೆಕ್ನಿಕಲ್ ಆಫೀಸರ್- 5
ವಿದ್ಯಾರ್ಹತೆ ಏನಿರಬೇಕು?
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಜಿನಿಯರಿಂಗ್/ ಟೆಕ್ನಾಲಜಿಯಲ್ಲಿ ಪದವಿ ಪೂರ್ಣಗೊಳಿಸಿರಬೇಕು. ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯೋಮಿತಿ ಎಷ್ಟಿರಬೇಕು?
ಅಭ್ಯರ್ಥಿಗಳ ಗರಿಷ್ಠ ವಯಸ್ಸು ಜನವರಿ 8, 2023ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು.
ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತೆ?
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಪೋಸ್ಟ್ ಮುಖಾಂತರ ಕಳುಹಿಸಬೇಕು.
ನಿರ್ದೇಶಕರು (HR),
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)
ಆಧಾರ್ ಕಾಂಪ್ಲೆಕ್ಸ್
NTI ಲೇಔಟ್,
ಟಾಟಾ ನಗರ
ಕೊಡಿಗೇಹಳ್ಳಿ
ಟೆಕ್ನಾಲಜಿ ಸೆಂಟರ್
ಬೆಂಗಳೂರು- 560092
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/11/2022
ಆರ್ಜಿ ಸಲ್ಲಿಸಲು ಕೊನೆ ದಿನ: 08/01/2023
ಉದ್ಯೋಗ
Colse Road Side Nonveg Hotel: ರಸ್ತೆ ಬದಿಯಿರುವ ನಾನ್ ವೆಜ್ ಹೋಟೆಲ್ಗಳನ್ನು ಮುಚ್ಚಿ : ಚುನಾವಣೆಯಲ್ಲಿ ಗೆಲ್ಲುತ್ತಲೇ ನೂತನ ಬಿಜೆಪಿ ಶಾಸಕನ ಆದೇಶ

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 115 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಆಡಳಿತ ಚುಕ್ಕಾಣಿ ಹಿಡಿದಿದೆ. ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಸೋಲನ್ನು ಕಂಡಿದೆ.
ತಾನು ಚುನಾವಣೆಯಲ್ಲಿ ಗೆದ್ದ ಬೆನ್ನಲೆ , ಜೈಪುರದ ಹವಾ ಮಹಾಲ್ ಕ್ಷೇತ್ರದ ಬಿಜೆಪಿ ಶಾಸಕ ಬಾಲಮುಕುಂದ್ ಆಚಾರ್ಯ ತಮ್ಮ ಕ್ಷೇತ್ರದ ರಸ್ತೆಯ ಬದಿಗಳಲ್ಲಿರುವ ನಾನ್ ವೆಜ್ ಹೋಟೆಲ್ಗಳನ್ನು ಮುಚ್ಚುವಂತೆ ಆದೇಶ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ
ವೈರಲ್ ಆಗಿರುವ ಈ ವಿಡಿಯೋದಲ್ಲಿ ಬಿಜೆಪಿ ಶಾಸಕ ಬಾಲಮುಕುಂದ್ ಆಚಾರ್ಯ ಅಧಿಕಾರಿಯೊಬ್ಬರಿಗೆ ಕರೆ ಮಾಡಿ, ರಸ್ತೆ ಬದಿಯಲ್ಲಿರುವ ನಾನ್ ವೆಜ್ ಹೋಟೆಲ್ಗಳನ್ನು ಸಂಜೆ ಒಳಗೆ ಮುಚ್ಚಿಸುವಂತೆ ಸೂಚನೆ ನೀಡಿದ್ದಾರೆ.
ನಾನ್ ವೆಜ್ ಅನ್ನು ರಸ್ತೆಯಲ್ಲಿ ಬಹಿರಂಗವಾಗಿ ಮಾರಾಟ ಮಾಡಬಹುದೇ? ಹೌದೋ ಅಥವಾ ಇಲ್ಲವೋ ಉತ್ತರಿಸಿ. ಹಾಗಾದ್ರೆ ನೀವು ಇದನ್ನು ಬೆಂಬಲಿಸುತ್ತೀರಿ. ಕೂಡಲೇ ರಸ್ತೆ ಬದಿಯ ಎಲ್ಲ ಮಾಂಸಾಹಾರಿ ಅಂಗಡಿಗಳನ್ನು ಮುಚ್ಚಬೇಕು. ಸಂಜೆ ನಿಮ್ಮಿಂದ ವರದಿ ತರಿಸಿಕೊಳ್ಳುತ್ತೇನೆ. ಅಧಿಕಾರಿ ಯಾರೆಂಬುದನ್ನು ಸಹ ನಾನು ನೋಡುವುದಿಲ್ಲ ಎಂದು ಬಾಲಮುಕುಂದ್ ಆಚಾರ್ಯ ಎಚ್ಚರಿಕೆ ನೀಡಿದ್ದಾರೆ.
ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರತಿಕ್ರಿಯೆ:
ಈ ಬಗ್ಗೆ ಪ್ರತಿಕ್ರಿಯಿಸಿದ ಅಸಾದುದ್ದೀನ್ ಓವೈಸಿ ಈ ಆದೇಶ ಸರಿಯಲ್ಲ ,ನಾನ್ವೆಜ್ ತಡೆಯಲು ಯಾರಿಂದಲೂ ಸಾಧ್ಯವಿಲ್ಲ, ಯಾರಾದರೂ ಮಾಂಸಾಹಾರಿ ಆಹಾರದ ಮಳಿಗೆ ಸ್ಥಾಪಿಸಲು ಬಯಸಿದರೆ ಅದನ್ನು ತಡೆಯುವುದು ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ಶಾಸಕ ಬಾಲಮುಕುಂದ್ ಆಚಾರ್ಯ ರವರು ರಾಜಸ್ಥಾನದ ಹವಾ ಮಹಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನ ಆರ್ಆರ್ ತಿವಾರಿ ಅವರನ್ನು 600 ಮತಗಳಿಂದ ಸೋಲಿಸುವ ಮೂಲಕ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದರೆ, ಕಾಂಗ್ರೆಸ್ 69 ಸ್ಥಾನಗಳನ್ನು ಗಳಿಸುವ ಮೂಲಕ ಎರಡನೇ ಸ್ಥಾನಕ್ಕೆ ಕುಸಿಯಿತು
ಉದ್ಯೋಗ
Southeastern Railway Recruitment 2023 ಸೌತ್ ಈಸ್ಟರ್ನ್ ರೈಲ್ವೇಸ್ ವಿಭಾಗದಲ್ಲಿ ಭರ್ಜರಿ ಉದ್ಯೋಗವಕಾಶ: ಅಪ್ರೆಂಟಿಸ್ ಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು: ಸೌತ್ ಈಸ್ಟರ್ನ್ ರೈಲ್ವೇಸ್ ವಿಭಾಗದಲ್ಲಿ (ಆಗ್ನೇಯ ರೈಲ್ವೆ-ಎಸ್ಇಆರ್) ಖಾಲಿ ಇರುವ ಸ್ಥಾನ ಭರ್ತಿ ಮಾಡಿಕೊಳ್ಳಲು ಶೀಘ್ರವೇ ನೇಮಕಾತಿ ನಡೆಯಲಿದೆ.ರೈಲ್ವೆ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ಕಾರ್ಯನಿರ್ವಹಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯೋಮಿತಿ, ಅಭ್ಯರ್ಥಿ ಆಯ್ಕೆ ಬಗ್ಗೆ ವಿವರವನ್ನು ಈ ಕೆಳಗಿನಂತೆ ನೀಡಲಾಗಿದೆ.
ಹುದ್ದೆಗಳ ವಿವರ:
*ಸಿಗ್ನಲ್ – ಟೆಲಿಕಾಂ 87
*ಟ್ರ್ಯಾಕ್ ಮೆಷಿನ್ ವರ್ಕ್ಶಾಪ್ 120
*ವರ್ಕ್ಶಾಪ್ 360
*ಕ್ಯಾರೇಜ್ – ವ್ಯಾಗನ್ ಡಿಪ್ಪೊ 121
*ಸೀನಿಯರ್ ಡಿಇಇ 90
*ಇಂಜಿನಿಯರಿಂಗ್ ವರ್ಕ್ಶಾಪ್ 100
*ಎಲೆಕ್ಟ್ರಿಕ್ ಲೋಕೊ ಶೇಡ್ 72
*ಎಸ್ಎಸ್ಇ 28
*ಡೀಸೆಲ್ ಲೋಕೊ ಶೆಡ್ 50
*ಟಿಆರ್ಡಿ ಡಿಪ್ಪೊ 40
ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ : https://iroams.com/RRCSER23/applicationIndex ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಬಳಿಕ ಭರ್ತಿ ಮಾಡಿದ ಅರ್ಜಿಯನ್ನು ಇದೇ ವೆಬ್ಸೈಟ್ನಲ್ಲಿ ಸಲ್ಲಿಸಬಹುದು.
ಅರ್ಹತೆಗಳು
ವಿದ್ಯಾರ್ಹತೆ : ಶೆ.50 ಅಂಕಗಳೊಂದಿಗೆ 10ನೇ ಹಾಗೂ 12ನೇ ತರಗತಿ ತೇರ್ಗಡೆಯಾದವರು ಸಹಿತ ಐಟಿಐ ಕಲಿತವರು ಅರ್ಜಿ ಸಲ್ಲಿಸಲು ಅರ್ಹರು.
ವಯೋಮಿತಿ: 2024ರ ಜನವರಿ ವೇಳೆ ಎಲ್ಲ ಅಭ್ಯರ್ಥಿಗಳು ಕನಿಷ್ಠ 15 ವರ್ಷ ಮೇಲ್ಪಟ್ಟಿರಬೇಕು. ಗರಿಷ್ಠ 24 ವರ್ಷ ವಯೋಮತಿ ನಿಗದಿಪಡಿಸಲಾಗಿದ್ದು, ನಿಯಮಾನುಸಾರ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.
ಶುಲ್ಕ ಪಾವತಿ:
ಸಾಮಾನ್ಯ ಅಭ್ಯರ್ಥಿಯು 100 ರೂ. ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು. ಎಸ್ಸಿ, ಎಸ್ಟಿ, ಇತರ ವರ್ಗದ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅಭ್ಯರ್ಥಿ ಆಯ್ಕೆ
ಅಭ್ಯರ್ಥಿಯ ಆಯ್ಕೆಯು 10ನೇ ತರಗತಿ, ಐಟಿಐಯಲ್ಲಿ ಪಡೆದ ಅಂಕಗಳ ಆಧಾರಿಸಿ ಮೆರಿಟ್ ಪಟ್ಟಿ ತಯಾರಿಸಲಾಗುತ್ತದೆ. ಈ ಮೂಲಕ ಅಭ್ಯರ್ಥಿಯ ಆಯ್ಕೆ ಆಗಲಿದೆ.
ಪ್ರಮುಖ ಮಾಹಿತಿಗಳು
- ಅರ್ಜಿ ಸಲ್ಲಿಕೆ ವೇಳೆ ಗುರುತಿನ ಪುರಾವೆ, ವಿದ್ಯಾರ್ಹತೆ ಪುರಾವೆ ಹಾಗೂ ಆರೋಗ್ಯ ಪ್ರಮಾಣ ಪತ್ರಗಳ ನಕಲು ಪ್ರತಿಗಳನ್ನು ಕಡ್ಡಾಯ ಸಲ್ಲಿಸಬೇಕು.
- ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸ್ಟೈಪೆಂಡ್ ನೀಡಲಾಗುತ್ತದೆ.
- ಆಯ್ಕೆ ಅಥವಾ ನೇಮಕಾತಿ ಕುರಿತು ಅಭ್ಯರ್ಥಿಯ ಮೊಬೈಲ್ ಸಂಖ್ಯೆ ಅಥವಾ ಇ-ಮೇಲ್ಗೆ ಸಂದೇಶವನ್ನು ಇಲಾಖೆ ರವಾನಿಸಲಿದೆ.
*ಅರ್ಜಿ ಸಲ್ಲಿಸಲು ಅಂತಿಮ ದಿನ:28.12.2023
ಉದ್ಯೋಗ
KFD Recruitment 2023: ಅರಣ್ಯ ಇಲಾಖೆಯಿಂದ ಫಾರೆಸ್ಟ್ ಗಾರ್ಡ್ 540 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 540 ಫಾರೆಸ್ಟ್ ಗಾರ್ಡ್ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ , ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಡಿಸೆಂಬರ್ 01 ರಿಂದ ಅರ್ಜಿ ಸ್ವೀಕಾರ ಆರಂಭವಾಗಲಿದೆ. ಡಿಸೆಂಬರ್ 30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ.
ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ ಇತರೆ ಮಾಹಿತಿಗಳನ್ನು ಕೆಳಗಿನಂತೆ ತಿಳಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಒಮ್ಮೆ ಅಧಿಸೂಚನೆಯನ್ನು ಓದಿ ನಂತರ ಅರ್ಜಿ ಸಲ್ಲಿಸಿ
ನೇಮಕಾತಿ ಪ್ರಾಧಿಕಾರ : ಕರ್ನಾಟಕ ಅರಣ್ಯ ಇಲಾಖೆ
ಹುದ್ದೆ ಹೆಸರು : ಅರಣ್ಯ ರಕ್ಷಕರು (ಗಸ್ತು ಅರಣ್ಯ ಪಾಲಕರು)
ಒಟ್ಟು ಹುದ್ದೆಗಳ ಸಂಖ್ಯೆ : 540
ಅರ್ಜಿ ಸಲ್ಲಿಸಲು ಭೇಟಿ ನೀಡಬೇಕಾದ ವೆಬ್ಸೈಟ್ ವಿಳಾಸ : https://kfdrecruitment.i/
ಅರಣ್ಯ ರಕ್ಷಕರ ಹುದ್ದೆಗೆ ಶೈಕ್ಷಣಿಕ ಅರ್ಹತೆ:
ಅಧಿಸೂಚನೆಯ ದಿನಾಂಕದೊಳಗೆ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಪಾಸ್ ಮಾಡಿರಬೇಕು. ಅರ್ಜಿ ಸಲ್ಲಿಕೆ ವೇಳೆ ಆನ್ಲೈನ್ನಲ್ಲಿ ಅಂಕಪಟ್ಟಿಗಳ ಅಪ್ಲೋಡ್ ಮಾಡಬೇಕಿರುತ್ತದೆ.
*ಅರಣ್ಯ ರಕ್ಷಕರ ಹುದ್ದೆಗೆ ವಯಸ್ಸಿನ ಅರ್ಹತೆ
ಅಧಿಸೂಚನೆಯ ದಿನಾಂಕಕ್ಕೆ ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರಬೇಕು. ಗರಿಷ್ಠ ವಯೋಮಿತಿ SC / ST / CAT-1 ಅಭ್ಯರ್ಥಿಗಳಿಗೆ 32 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 30 ವರ್ಷ, ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 27 ವರ್ಷ ನಿಗದಿಪಡಿಸಲಾಗಿದೆ.
*ಅರಣ್ಯ ರಕ್ಷಕರ ಹುದ್ದೆಗೆ ನೇಮಕಾತಿ ಪ್ರಕ್ರಿಯೆ :
ಅರಣ್ಯ ರಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಿದವರ ವಿದ್ಯಾರ್ಹತೆ ಅಂಕಗಳ ಆಧಾರದಲ್ಲಿ ಮೀಸಲಾತಿಗೆ ಅನುಗುಣವಾಗಿ ಮತ್ತು ವೃತ್ತವಾರು ಹುದ್ದೆಗಳಿಗೆ ಅನುಗುಣವಾಗಿ 1:20 ಅನುಪಾತದಲ್ಲಿ ದೇಹದಾರ್ಢ್ಯತೆ, ದೈಹಿಕ ತಾಳ್ವಿಕೆ ಮತ್ತು ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆಗಳಿಗೆ ಅರ್ಹತಾ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ನಿಗದಿಪಡಿಸಿದ ದಿನಾಂಕದಂದು ಈ ಪರೀಕ್ಷೆಗಳಿಗೆ ಪ್ರವೇಶ ಪತ್ರದೊಂದಿಗೆ ಹಾಜರಾಗಬೇಕು. ಈ ಮಾರ್ಗದಲ್ಲಿ ಆಯ್ಕೆ ಪ್ರಕ್ರಿಯೆಗಳು ಇರುತ್ತವೆ.
ಅರಣ್ಯ ರಕ್ಷಕರ ಹುದ್ದೆಗೆ ವೇತನ ಶ್ರೇಣಿ
ಅರಣ್ಯ ರಕ್ಷಕ ಹುದ್ದೆಗಳಿಗೆ ವೇತನ ಶ್ರೇಣಿ ರೂ.18,600 – 32,600 ವರೆಗೆ ನೀಡಲಾಗುತ್ತದೆ. ಅಲ್ಲದೇ ಪಿಂಚಣಿ ಸೌಲಭ್ಯ, ವಿಶೇಷ ಭತ್ಯೆಗಳನ್ನು ನೀಡಲಾಗುತ್ತದೆ.
*ಉದ್ಯೋಗ ಸ್ಥಳ
ಸ್ಥಳ :ಕರ್ನಾಟಕ ರಾಜ್ಯದಾದ್ಯಂತ
ಅಂಚೆ ಸಂಖ್ಯೆ 560003
ದೇಶ : ಭಾರತ
ನೋಟಿಫಿಕೇಶನ್ ಲಿಂಕ್ : https://drive.google.com/file/d/18xJYi71AOzsy-MrbJe_El_ybZqDYdHFH/view\
ಅರ್ಜಿ ಸಲ್ಲಿಸುವ ಲಿಂಕ್ : https://kfdrecruitment.in/
-
ಅಪರಾಧ10 hours ago
ವಿಟ್ಲ : 80 ಪ್ರಕರಣಗಳ ಸರದಾರ ʼಇತ್ತೆ ಬರ್ಪೆ ಅಬೂಬ್ಬಕರ್ʼ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು – ಅಷ್ಟಕ್ಕೂ ಈತ ಸಿಕ್ಕಿ ಬಿದ್ದದ್ದು ಹೇಗೆ ಗೊತ್ತಾ? ಇತ್ತೆ ಬರ್ಪೆ ಹೆಸರಿನ ಹಿಂದಿದೆ ಇಂಟ್ರೆಸ್ಟಿಂಗ್ ಕಹಾನಿ
-
ಬಿಗ್ ನ್ಯೂಸ್14 hours ago
ಹುತಾತ್ಮ ಯೋಧ ಕ್ಯಾ.ಪ್ರಾಂಜಲ್ ಕುಟುಂಬಕ್ಕೆ ಚೆಕ್ ವಿತರಣೆ : ಮೊತ್ತ ತಾಯಿ-ಪತ್ನಿಗೆ ಸಮಪಾಲು ಮಾಡಿದ ಸರ್ಕಾರ
-
ಕ್ರೀಡೆ13 hours ago
Bomb Threat ಪ್ರಿಯಕರ ಕೊಟ್ಟ ಐಡಿಯಾ ನಂಬಿ ಗಂಡನ ಜೈಲಿಗೆ ಕಳುಹಿಸಲು ಆತನ ಮೊಬೈಲ್ʼನಿಂದ ಹೆಂಡತಿ ಕಳುಹಿಸಿದಳು ಬೆದರಿಕೆ ಮೆಸೇಜ್ – ಆದರೇ ಮುಂದೇನಾಯಿತು ?
-
ಕ್ರೀಡೆ11 hours ago
Jay shah: ಜಯ್ ಶಾಗೆ ಸ್ಪೋರ್ಟ್ಸ್ ಬ್ಯುಸಿನೆಸ್ ಲೀಡರ್ ಆಫ್ ದಿ ಇಯರ್ ಪ್ರಶಸ್ತಿಯ ಗರಿ – ಬಿಸಿಸಿಐ ಕಾರ್ಯದರ್ಶಿಗೆ ಈ ಗೌರವ ಸಿಕ್ಕಿದ್ದು ಯಾಕೆ ಗೊತ್ತೆ ?
-
ರಾಜಕೀಯ11 hours ago
Harish Poonja Moved Privilege motion ತನ್ನ ಮೇಲೆ ಎಫ್ ಐ ಆರ್ ದಾಖಲಿಸಿದ ಅರಣ್ಯ ಅಧಿಕಾರಿಗಳ ವಿರುದ್ದ ಸದನದಲ್ಲಿ ಹಕ್ಕು ಚ್ಯುತಿ ಮಂಡಿಸಿದ ಹರೀಶ್ ಪೂಂಜಾ – ಏನಿದು ಪ್ರಕರಣ ? ಮುಂದೇನಾಯಿತು?
-
ಸಾಮಾಜಿಕ ಮಾಧ್ಯಮ18 hours ago
Dasara Elephant Arjun Dies ಅರ್ಜುನ ಸಾವಿನ ಸುತ್ತ ಹಲವು ಅನುಮಾನ – ಮಾವುತರೊಂದಿಗೆ ಮಾತನಾಡಿದ ಕಾವಾಡಿಗರ ವಿಡಿಯೋ ವೈರಲ್ – ಅದರಲ್ಲಿದೆ ಗುಂಡೇಟಿನ ವಿಚಾರ
-
ಸಿನೆಮಾ1 day ago
Animal Box Office collection ರಣ್ ಬೀರ್ – ರಶ್ಮಿಕಾ ಜೋಡಿ ಕಮಾಲ್ : ಅನಿಮಲ್ ಬಾಕ್ಸ್ ಆಫೀಸ್ನಲ್ಲಿ ಮಾಡಿದ ಕಲೆಕ್ಷನ್ ಎಷ್ಟು ಗೊತ್ತಾ?
-
ಚಿನ್ನ-ಬೆಳ್ಳಿ ದರ20 hours ago
Gold Rate Hike:ಆಭರಣ ಪ್ರಿಯರಿಗೆ ಶಾಕಿಂಗ್ ಸುದ್ದಿ : ಭಾರತದ ಮಾರುಕಟ್ಟೆಯಲ್ಲಿ ಚಿನ್ನದ ದರ ಸಾರ್ವಕಾಲಿಕ ಜಿಗಿತ – ಮುಂದಿನ ದಿನಗಳಲ್ಲಿ ರೇಟ್ ಹೇಗಿರಲಿದೆ?