ಉಪ್ಪಿನಂಗಡಿ : ಎಟಿಎಂಗೆ ಹಣ ಸಾಗಿಸುವ ವಾಹನ ಹಾಗೂ ಅಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ಆಟೋ ಚಾಲಕರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಬಳಿಯ ನೆಕ್ಕಿಲಾಡಿ ಬಳಿ ನಡೆದಿದೆ. ಉಪ್ಪಿನಂಗಡಿಯ ಸುಭಾಶ್ ನಗರ ನಿವಾಸಿ, ವಾಸು ಪೂಜಾರಿ (50ವರ್ಷ) ಮೃತ ರಿಕ್ಷಾ ಚಾಲಕ
ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಎಟಿಎಂ ವಾಹನ ಹಾಗೂ ಉಪ್ಪಿನಂಗಡಿ ಕಡೆಗೆ ಅಟೋ ರಿಕ್ಷಾ ತೆರಳುತ್ತಿತ್ತು. ಘಟನೆಯಲ್ಲಿ ಅಟೋ ರಿಕ್ಷಾವು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮೃತರು ಇಬ್ಬರು ಹೆಣ್ಣು ಮಕ್ಕಳು, ಮತ್ತು ಒಬ್ಬ ಮಗನನ್ನು ಅಗಲಿದ್ದಾರೆ.

