Connect with us

ರಾಷ್ಟ್ರೀಯ

Ravish Kumar | NDTV ರಾಜಿನಾಮೆ ನೀಡಿದ ಬೆನ್ನಲ್ಲೇ ರವೀಶ್ ಕುಮಾರ್ ಯೂಟ್ಯೂಬ್ ಚಾನೆಲ್ ಚಂದಾದಾರರ ಸಂಖ್ಯೆ 16 ಲಕ್ಷಕ್ಕೆ ಏರಿಕೆ

Ad Widget

Ad Widget

ಹೊಸದಿಲ್ಲಿ: ರವೀಶ್ ಕುಮಾರ್ (Ravish Kumar) NDTV ಗೆ  ರಾಜೀನಾಮೆ ನೀಡಿದ ಒಂದು ದಿನದ ಬೆನ್ನಲ್ಲೇ, ಅವರ ಅಧಿಕೃತ ಯೂಟ್ಯೂಬ್ ಚಾನೆಲ್ 16 ಲಕ್ಷಕ್ಕೂ ಅಧಿಕ ಚಂದಾದಾರರನ್ನು ಗಳಿಸಿಕೊಂಡಿದ್ದು, 20 ಲಕ್ಷ ಗಡಿಯನ್ನು ತಲುಪಲು ಕೆಲವೇ ಸಂಖ್ಯೆಗಳು ಬಾಕಿ ಇವೆ. 

Ad Widget

Ad Widget

Ad Widget

Ad Widget

ರಾಜೀನಾಮೆ ನೀಡಿದ ನಂತರ ತಮ್ಮ ಅಭಿಮಾನಿಗಳು ಮತ್ತು ವೀಕ್ಷಕರೊಂದಿಗೆ ಹಂಚಿಕೊಂಡ ಭಾವನಾತ್ಮಕ ಸಂದೇಶವನ್ನು ಗುರುವಾರ ಬೆಳಿಗ್ಗೆ ರವೀಶ್ ಪೋಸ್ಟ್ ಮಾಡಿದ್ದರು. ರವೀಶ್ ಅವರು ವೀಡಿಯೊ ಪೋಸ್ಟ್‌ ಮಾಡಿ 24 ಗಂಟೆಗಳು ದಾಟುವ ವೇಳೆಗಾಗಲೇ ಸುಮಾರು 39 ಲಕ್ಷ ವೀಕ್ಷಣೆಯನ್ನು ಪಡೆದುಕೊಂಡಿದೆ. ಅವರ ಟ್ವಿಟರ್ ಖಾತೆಯಲ್ಲೂ ಕೂಡ ಫಾಲೋವರ್ ಸಂಖ್ಯೆ ಏರಿಕೆ ಆಗಿ 2.3 ಮಿಲಿಯನ್ ತಲುಪಿದೆ.

Ad Widget

Ad Widget

Ad Widget

ರವೀಶ್ ಕುಮಾರ್ NDTVಯಲ್ಲಿ ನಡೆಸಿಕೊಡುವ ಪ್ರೈಮ್ ಟೈಂ ಬಾರಿ ಯಶಸ್ಸು ಕಂಡಿತ್ತು. NDTV ಗೆ ರಾಜೀನಾಮೆ ನೀಡುವ ಮೊದಲು ರವೀಶ್ ಕುಮಾರ್ ಅವರ ಯೂಟ್ಯೂಬ್ ಚಾನೆಲ್ ಕೇವಲ ಅರ್ಧ ಮಿಲಿಯನ್ ಚಂದಾದಾರರನ್ನು ಹೊಂದಿತ್ತು. ಶುಕ್ರವಾರ  ಸುಮಾರು 1 ಮಿಲಿಯನ್ (10 ಲಕ್ಷ) ಗೂ ಅಧಿಕ ಚಂದಾದಾರರು ಹೊಸದಾಗಿ ಸೇರಿಕೊಂಡಿದ್ದು, ಇದೀಗ ಒಟ್ಟು ಚಂದಾದಾರ ಸಂಖ್ಯೆ 16 ಲಕ್ಷ ದಾಟಿದೆ.

Ad Widget

ಈ ವರದಿಯನ್ನು ಮಾಡುವ ಸಮಯದಲ್ಲಿ, ಚಾನಲ್ 1.62 ಮಿಲಿಯನ್ ಚಂದಾದಾರರನ್ನು ಹೊಂದಿ, ಒಟ್ಟು 99 ಲಕ್ಷ ವೀಕ್ಷಕರು ಇವರ ಚಾನೆಲ್ ವೀಕ್ಷಿಸಿದ್ದಾರೆ.

Ad Widget

Ad Widget

https://youtube.com/@ravishkumar.official

ಹಿರಿಯ ಪತ್ರಕರ್ತರಾದ ರಾಧಿಕಾ ರಾಯ್ ಮತ್ತು ಪ್ರಣಯ್ ರಾಯ್ ಒಡೆತನದ ಆರ್‌ಆರ್‌ಪಿಆರ್ ಹೋಲ್ಡಿಂಗ್ ಕಂಪೆನಿಯು,  ಸೋಮವಾರ ತನ್ನ ಈಕ್ವಿಟಿ ಬಂಡವಾಳದ 99.5 % ಅದಾನಿ ಗ್ರೂಪ್ ಒಡೆತನದ ವಿಶ್ವಪ್ರಧಾನ್ ಕಮರ್ಷಿಯಲ್ ಪ್ರೈವೇಟ್ ಲಿಮಿಟೆಡ್‌ಗೆ (ವಿಸಿಪಿಎಲ್) ವರ್ಗಾಯಿಸುವ ಮೂಲಕ ಎನ್ ಡಿ ಟಿ ವಿ ಮೇಲೆ ಪೂರ್ಣ ಸ್ವಾಧೀನ ಪಡೆಯುವ ಅದಾನಿ ಸಮೂಹದ ಪ್ರಯತ್ನಕ್ಕೆ ಜಯ ಸಿಕ್ಕಿದೆ. 

Continue Reading
Click to comment

Leave a Reply

ಆರೋಗ್ಯ

Heart Attack deaths Increased in India ಕಳೆದೊಂದು ವರ್ಷದಲ್ಲಿ ದೇಶದಲ್ಲಿ ಹೃದಯಾಘಾತದ ಸಂಖ್ಯೆಯಲ್ಲಿ ಭಾರೀ ಏರಿಕೆ – ಇಲ್ಲಿದೆ ಎನ್​ಸಿಆರ್​ಬಿ ವರದಿ ವಿವರ; Heart attack ಹೆಚ್ಚಳದ ಹಿಂದಿದೆ ಈ ಕಾರಣ

Ad Widget

Ad Widget

Heart Attack deaths Increased in India ನವದೆಹಲಿ: ಕೊರೊನಾ ಬಾಧಿಸಿದ (Corona panadamic)  ಕಳೆದ  3 ವರ್ಷಗಳ ಅವಧಿಯಲ್ಲಿ ಭಾರತದಲ್ಲಿ ಹೃದಯಾಘಾತ (Heart Attack) ಪ್ರಕರಣಗಳಲ್ಲಿ  ಭಾರಿ ಹೆಚ್ಚಳ ಕಂಡು ಬಂದಿದೆ. ಅದರಲ್ಲೂ 2022ನೇ ಸಾಲಿನಲ್ಲಿ  ಹೃದಯಾಘಾತವಾಗಿ ಸಾಯುವವರ ಸಂಖ್ಯೆಯಲ್ಲಿ ಈ ಹಿಂದಿನ ವರ್ಷಗಳಿಗೆ ಹೋಲಿಸಿದಾಗ 12.5% ಏರಿಕೆಯಾಗಿದೆ. ನ್ಯಾಷನಲ್​ ಕ್ರೈಂ ರೆಕಾರ್ಡ್​ ಬ್ಯೂರೋ (National Crime Record Bureau) (ಎನ್​ಸಿಆರ್​ಬಿ)​ ದೇಶದಲ್ಲಿ ಹೆಚ್ಚಳ ವಾಗುತ್ತಿರುವ ಹೃದಯಘಾತ ಸಂಬಂದಿ ಸಾವಿನ ಅಂಕಿ ಅಂಶಗಳನ್ನು ( Heart Attack death percentage) ಬಿಡುಗಡೆ (ncrb report on Heart Attack) ಮಾಡಿದೆ. ಈ ವರದಿಯ ಬಳಿಕ  ಸಾಂಕ್ರಾಮಿಕ ರೋಗಕ್ಕೂ ಹೃದಯಘಾತಕ್ಕೂ ಸಂಬಂಧವಿದೆ ಈ ಬಗ್ಗೆ ವಿಸ್ತ್ರತ ತನಿಖೆ ನಡೆಯಬೇಕು ಎಂದು ತಜ್ಙರು ಆಗ್ರಹಿಸುತ್ತಿದ್ದಾರೆ

Ad Widget

Ad Widget

Ad Widget

Ad Widget

ಎನ್​ಸಿಆರ್​ಬಿ​  ವರದಿ ಪ್ರಕಾರ 2022ರಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಶೇ. 12.5% ಹೆಚ್ಚಳವಾಗಿದೆ. 2022ರಲ್ಲಿ  32,457 ವ್ಯಕ್ತಿಗಳು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.   2021ರಲ್ಲಿ ದಾಖಲಾದ ಹೃದಯಾಘಾತಕ್ಕೆ ಸಂಬಂಧಿಸಿದ ಸಾವುಗಳ ಸಂಖ್ಯೆ  28,413. ಈ ಅಂಕಿ ಅಂಶ ಕಳೆದ ಒಂದು ವರ್ಷಗಳ ಅವಧಿಯಲ್ಲಿ ಹೃದಯಘಾತದಿಂದ ಆಗುವ ಸಾವಿನ ಪ್ರಮಾಣದಲ್ಲಿ  ಗಮನಾರ್ಹ ಏರಿಕೆಯಾಗಿರುವುದನ್ನು ಸೂಚಿಸುತ್ತದೆ. 2020ರಲ್ಲಿ 28579 ಮಂದಿ ಹಾರ್ಟ್‌ ಅಟ್ಯಾಕ್‌ (Heart attack ) ನಿಂದ ಮೃತಪಟ್ಟಿದ್ದಾರೆ.

Ad Widget

Ad Widget

Ad Widget

ಹಠಾತ್ ಸಾವಿನ ಪ್ರಮಾಣದಲ್ಲೂ ಏರಿಕೆ

Ad Widget

ಹಠಾತ್ ಸಾವುಗಳ (sudden death) ಒಟ್ಟಾರೆ ಸಂಖ್ಯೆಯಲ್ಲೂ ದೇಶದಲ್ಲಿ ಗಮನಾರ್ಹ ಏರಿಕೆ ಕಾಣಿಸಿದೆ.  ಇದರ ಪ್ರಕಾರ 2022ರಲ್ಲಿ 56,450 ಮಂದಿ ಹಠಾತ್​ ಸಾವಿಗೀಡಾಗಿದ್ದಾರೆ. 2021ರ 50,739 ಸಂಖ್ಯೆಗೆ ಹೋಲಿಸಿದರೆ, ಶೇ. 10.1% ಹೆಚ್ಚಳ  ಕಂಡು ಬಂದಿದೆ.  ಹಿಂಸಾಚಾರವನ್ನು ಹೊರತುಪಡಿಸಿ ಯಾವುದೇ ಕಾರಣದಿಂದ (ಉದಾಹರಣೆಗೆ, ಹೃದಯಾಘಾತ, ಮಿದುಳಿನ ರಕ್ತಸ್ರಾವ, ಇತ್ಯಾದಿ) ತತ್‌ಕ್ಷಣದ ಅಥವಾ ನಿಮಿಷಗಳಲ್ಲಿ ಸಂಭವಿಸುವ ಅನಿರೀಕ್ಷಿತ ಸಾವನ್ನು ಎನ್‌ಸಿಆರ್‌ಬಿ ಹಠಾತ್ ಮರಣದ ಪಟ್ಟಿಯಲ್ಲಿ ಸೇರಿಸಲಾಗುತ್ತದೆ.

Ad Widget

Ad Widget

ತಜ್ಞರು ಏನೂ ಹೇಳುತ್ತಾರೆ

 ಹೃದಯದ ಆರೋಗ್ಯದ ಮೇಲೆ ಇದ್ದಕ್ಕಿದಂತೆ ಆಗಾಧ ಪರಿಣಾಮ ಬೀರುತ್ತಿರುವುದರ  ಹಿಂದೆ ಸಾಂಕ್ರಮಿಕ ರೋಗದ ಬಳಿಕ ಉದ್ಭವಿಸಿದ ಪರಿಣಾಮಗಳು ಕಾರಣ ಎಂಬ ಅಭಿಪ್ರಾಯ ವೈದಕೀಯ ಲೋಕದಿಂದ ಕೇಳಿ ಬರುತ್ತಿದೆ. ವೈದಕೀಯ ಜಗತ್ತಿನ ಒಂದು ವರ್ಗದ ಪ್ರಕಾರ ಕೊರೊನಾ ಬಾಧಿಸಿದ ಸಂದರ್ಭ ಹಾಗೂ ಕೊರೊನೋತ್ತರ ಕಾಲದಲ್ಲಿ ಉಂಟಾದ ಆರ್ಥಿಕ ಹಾಗೂ ಮಾನಸಿಕ ಒತ್ತಡವು ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರಬಹುದೆಂಬ ಅಭಿಪ್ರಾಯ ಕೇಳಿ ಬಂದಿದೆ. ಇನ್ನೊಂದು ವರ್ಗದ ಪ್ರಕಾರ ಕೊರೊನಾ ಲಸಿಕೆಯ ಪರಿಣಾಮವು ಇದಾಗಿರಬಹುದು.  ಹೀಗಾಗಿ  ಈ ಸಾವಿನ ಹೆಚ್ಚಳದ ಹಿಂದಿರುವ ಕಾರಣಗಳನ್ನು ಪತ್ತೆ ಹಚ್ಚುವ ಕಾರ್ಯ ಸರಕಾರ ಮಾಡಬೇಕು . ಇದರ ಜತೆಗೆ  ಹೆಚ್ಚಿನ ಜಾಗೃತಿ, ತಡೆಗಟ್ಟುವ ಕ್ರಮಗಳು ಮತ್ತು ನಿಯಮಿತ ಆರೋಗ್ಯ ತಪಾಸಣೆಗಳ ಅಗತ್ಯವನ್ನು ತಜ್ಞರು ಒತ್ತಿಹೇಳಿದ್ದಾರೆ.

ಜೀವನ ಶೈಲಿ ಬದಲಾಯಿಸಿ

ಹಠಾತ್ ಹೃದಯಾಘಾತದ ಸಾವುಗಳು ಹೆಚ್ಚಳವಾಗಲು  ಬದಲಾದ  ಜೀವನ ಶೈಲಿಯು ಒಂದು ಕಾರಣ. ದೈಹಿಕ ವ್ಯಾಯಮವಿಲ್ಲದ ಉದ್ಯೋಗಗಳು ಹೆಚ್ಚಾಗಿರುವುದು ಒಂದು ಪ್ರಮುಖ ಕಾರಣ ಎನ್ನಲಾಗುತ್ತಿದೆ . ಹೀಗಾಗಿ  ನಿಯಮಿತವಾಗಿ ವ್ಯಾಯಾಮ ಮಾಡುವುದು, ಆಲ್ಕೊಹಾಲ್ ಸೇವನೆ ಮತ್ತು ಧೂಮಪಾನವನ್ನು ಕಡಿಮೆ ಮಾಡುವುದು ಮತ್ತು ಪೌಷ್ಟಿಕಾಂಶದ ಆಹಾರವನ್ನು ಸೇವಿಸುವುದು ಮುಖ್ಯವಾಗಿದೆ.

Continue Reading

ರಾಷ್ಟ್ರೀಯ

IAF Plane Crash ತೆಲಂಗಾಣ: ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನದಿಂದ ಇಬ್ಬರು ಪೈಲೆಟ್ಗಳ ಸಾವು

Ad Widget

Ad Widget

ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ವಾಯುಪಡೆಯ ತರಬೇತಿ ವಿಮಾನ ಪತನಗೊಂಡಿದೆ. ಈ ದುರ್ಘಟನೆಯಲ್ಲಿ ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದ್ದಾರೆ.ಘಟನೆಯ ಬಗ್ಗೆ ಭಾರತೀಯ ವಾಯುಪಡೆ ಮಾಹಿತಿ ನೀಡಿದ್ದು ಬೆಳಗ್ಗೆ 8.55ಕ್ಕೆ ಈ ಅವಘಡ ಸಂಭವಿಸಿದೆ. ಇಂದು ಬೆಳಗ್ಗೆ ಪಿಸಿ 7 ಎಂಕೆ II ವಿಮಾನವು ವಾಡಿಕೆಯ ತರಬೇತಿ ವೇಳೆ ಅಪಘಾತಕ್ಕೀಡಾಗಿದೆ ಎಂದು ವಾಯುಪಡೆ ತಿಳಿಸಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲೆಟ್ ಗಳು ಗಂಭೀರವಾಗಿ ಗಾಯಗೊಂಡಿದ್ದು, ನಂತರ ಮೃತಪಟ್ಟಿದ್ದಾರೆ.

Ad Widget

Ad Widget

Ad Widget

Ad Widget

ದಿಂಡುಗಲ್‌ನ ಏರ್ ಫೋರ್ಸ್ ಅಕಾಡೆಮಿ ತರಬೇತಿ ವೇಳೆ ಈ ಅವಘಡ ಸಂಭವಿಸಿದೆ. ಸತ್ತವರಲ್ಲಿ ಒಬ್ಬ ಇನ್ಸ್ಟ್ರಕ್ಟರ್ ಮತ್ತು ಕೆಡೆಟ್ ಸೇರಿದ್ದಾರೆ. ಪೊಲೀಸರ ಪ್ರಕಾರ, ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ. ವಿಮಾನದಲ್ಲಿ ಇಬ್ಬರು ಭಾರತೀಯ ವಾಯುಪಡೆ ಅಧಿಕಾರಿಗಳು ಇದ್ದರು. ಈ ಅಪಘಾತ ಸಂಭವಿಸಿದಾಗ ವಿಮಾನ ತೂಪ್ರಾನ್ ಪ್ರದೇಶದಲ್ಲಿತ್ತು. ಏರ್ ಫೋರ್ಸ್ ಅಕಾಡೆಮಿ ದುಂಡಿಗಲ್‌ನಿಂದ ವಿಮಾನ ಟೇಕಾಫ್ ಆಗಿತ್ತು.

Ad Widget

Ad Widget

Ad Widget

ಗುಡ್ಡಗಾಡು ಪ್ರದೇಶದಲ್ಲಿ ವಾಯುಪಡೆ ವಿಮಾನ ಪತನವಾಗುತ್ತಲೇ ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿದ್ದಾರೆ. ಬಳಿಕ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಗಿದೆ

Ad Widget

ಘಟನೆ ಸಂಬಂಧ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪೈಲಟ್‌ಗಳ ಸಾವಿಗೆ ಸಂತಾಪ ಸೂಚಿಸಿದ್ದಾರೆ
ಇಬ್ಬರು ಪೈಲಟ್‌ಗಳು ಪ್ರಾಣ ಕಳೆದುಕೊಂಡಿರುವುದು ಬೇಸರ ತಂದಿದೆ ಎಂದಿದ್ದಾರೆ.

Ad Widget

Ad Widget
Continue Reading

ಅಪರಾಧ

Shabarimala ಶಬರಿಮಲೆ ಅಯ್ಯಪ್ಪ ಭಕ್ತರ ವೇಷ ಧರಿಸಿ ಕಾರಿನಲ್ಲಿ ಕೋಟ್ಯಂತರ ಮೌಲ್ಯದ ಅಂಬರ್ ಗ್ರೀಸ್ ಸಾಗಾಟ; ಮೂವರ ಬಂಧನ

Ad Widget

Ad Widget

ಗುರುವಾಯೂರು: ಶಬರಿಮಲೆ ಅಯ್ಯಪ್ಪ ಭಕ್ತರ  ಸೋಗಿನಲ್ಲಿ  ಕಾರಿನಲ್ಲಿ ಪ್ರಯಾಣಿಸುತ್ತ  ಕೋಟ್ಯಂತರ ಮೌಲ್ಯದ ತಿಮಿಂಗಿಲದ ವಿಸರ್ಜನೆ ಅಂಬರ್ ಗ್ರೀಸ್ ಅಕ್ರಮ ಸಾಗಾಟಕ್ಕೆ ಯತ್ನಿಸಿದ ಮೂವರನ್ನು ಬಂಧಿಸಲಾಗಿದೆ.  ಕೊಯಿಲಾಂಡಿ ಮರಕ್ಕಾಟ್ಟುಪೊಯಿಲ್‌ ನ ಬಾಜಿನ್ (31), ಕೊಯಿಲಾಂಡಿ ವಟ್ಟಕಂಡಿಯ ರಾಹುಲ್ (26), ಕೋಝಿಕ್ಕ್ಕೋಡ್ ಅರಿಕ್ಕುಳಂ‌ ರಾಮಪಾಟ್ಕಂಡಿಯ ಅರುಣ್ ದಾಸ್ (30)  (30)  ಬಂಧಿತರು. ಈ ಮೂವರು ಆಯ್ಯಪ್ಪ ವರತಧಾರಿಗಳಂತೆ ವೇಷ ಧರಿಸಿದ್ದರು.

Ad Widget

Ad Widget

Ad Widget

Ad Widget

ಆರೋಪಿಗಳನ್ನು  ತ್ರಿಶೂರ್ ನಗರ ಪೊಲೀಸ್ ಕಮಿಷನರ್ ನೇತೃತ್ವದ ಶ್ಯಾಡೋ ಪೊಲೀಸ್ ಜಿಲ್ಲಾ ಮಾದಕ ದ್ರವ್ಯ ನಿಗ್ರಹ ದಳ ಮತ್ತು ಗುರುವಾಯೂರ್ ದೇಗುಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ.1972ರ ವನ್ಯಜೀವಿ ಸಂರಕ್ಷಣೆ ಕಾಯಿದೆಯಡಿ ದೇಶದಲ್ಲಿ ತಿಮಿಂಗಿಲದ ವಿಸರ್ಜನೆ ಹೊಂದಿರುವುದು ಸಾಗಿಸುವುದು   ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಅಂಬರ್ ಗ್ರೀಸ್  ಖರೀದಿಸಲು ಬಂದ ಮಧ್ಯವರ್ತಿಗಳ ಸೋಗಿನಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Ad Widget

Ad Widget

Ad Widget

ಇವರು ಅಯ್ಯಪ್ಪ ವೃತಧಾರಿಗಳು ಬಳಸುವ ಕಪ್ಪು ವಸ್ತ್ರ ಧರಿಸಿದ್ದು, ಮೈಯೆಲ್ಲ ಆಯ್ಯಪ್ಪ ಭಕ್ತರಂತೆ ವಿಭೂತಿ ಬಳಿದುಕೊಂಡಿದ್ದರು. ಪೊಲೀಸರ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಅವರು ಈ ರೀತಿ ನಾಟಕವಾಡಿದರು ಎಂದು ಆರೋಪಿಗಳು ಪೊಲೀಸ್‌ ವಿಚಾರಣೆಯ ವೇಳೆ ಬಾಯ್ಬಿಟ್ಟಿದ್ದಾರೆ.

Ad Widget
Ad Widget

Ad Widget

ಆರೋಪಿಗಳು ಪ್ರಯಾಣಿಸುತ್ತಿದ್ದ ಕಾರಿನಿಂದ ಐದು ಕೆಜಿ ಅಂಬರ್ ಗ್ರೀಸ್ ಮತ್ತು ಐಷಾರಾಮಿ ಕಾರನ್ನು ವಶಪಡಿಸಲಾಗಿದೆ. ಗುರುವಾಯೂರು ದೇಗುಲ‌ ಠಾಣೆಯ  ಪೊಲೀಸರು ದಾಖಲಿಸಿಕೊಂಡ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ.

ಗುರುವಾಯೂರು ಎಸಿಪಿ ಕೆ.ಜಿ.ಸುರೇಶ್, ದೇಗುಲ ಠಾಣೆಯ ಎಚ್ ಒಸಿ. ಪ್ರೇಮಾನಂದ ಕೃಷ್ಣನ್, ಎಸ್ಐ ವಿ.ಪಿ.ಅಶ್ರಫ್, ಸೀನಿಯರ್ ಸಿಪಿಒ ಎನ್.ರಜಿತ್, ಶ್ಯಾಡೋ  ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಎನ್.ಜಿ. ಸುವ್ರತಕುಮಾರ್, ಸಿಪಿಒಗಳಾದ ಪಿ.ಎಂ. ರಫಿ, ಎಂ.ಎಸ್. ಲಿಗೇಶ್, ಎಸ್. ಶರತ್, ಸಿಂಪ್ಸನ್ ಮತ್ತು ಪ್ರದೀಪ್ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

Continue Reading

Trending

error: Content is protected !!