Connect with us

ಸ್ಥಳೀಯ

ಸುಬ್ರಹ್ಮಣ್ಯ: ಜಾತ್ರೆ ಸಂತೆಯಲ್ಲಿ ಸ್ಟಾಲ್ ಇಟ್ಟವನ ಬಳಿ ಹಣಕ್ಕೆ ಪೀಡಿಸಿ ಪೊಲೀಸ್ ಸಿಬಂದಿಯಿಂದ ಹಲ್ಲೆ – ʼದೂರು ನೀಡಿ ದಿನ ಕಳೆದರೂ ಪ್ರಕರಣ ದಾಖಲಿಸಿಲ್ಲ – ಕ್ರಮ ಕೈಗೊಳ್ಳದಿದ್ದರೆ ಠಾಣೆಗೆ ಮುತ್ತಿಗೆʼ : ಹಿಂಜಾವೇ ಎಚ್ಚರಿಕೆ

Ad Widget

Ad Widget

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದ ಚಂಪಾ ಷಷ್ಟಿಯ ಸಂದರ್ಭ ಅಲ್ಲಿ ಸಂತೆ ವ್ಯಾಪಾರ ಮಾಡುತ್ತಿದ್ದ ಯುವಕನಿಗೆ ಅಲ್ಲಿನ ಸ್ಥಳೀಯ ಠಾಣೆಯ ಪೋಲೀಸ ಸಿಬಂದಿಯೊಬ್ಬರು ಹಣಕ್ಕಾಗಿ ಬೇಡಿಕೆಯಿಟ್ಟು ಹಲ್ಲೆ ನಡೆಸಿದ್ದಾರೆಂದು ಕಡಬದ ಯುವಕನೋರ್ವ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ಡಿ.1 ರಂದು ನಡೆದಿತ್ತು. ಕುಟ್ರುಪ್ಪಾಡಿ ಗ್ರಾಮದ ಭೀಮಗುಂಡಿ ನಿವಾಸಿ ಶಶಿಕುಮಾರ್ ಹಲ್ಲೆಯ ಆರೋಪ ಮಾಡುತ್ತಿರುವ ವ್ಯಾಪಾರಿ . ಸುಬ್ರಹ್ಮಣ್ಯ ಠಾಣೆಯ ಸಿಬಂದಿ ಭೀಮನ ಗೌಡ ಹಲ್ಲೆ ಮಾಡಿರುವುದಾಗಿ ಅವರು ಆರೋಪಿಸಿದ್ದಾರೆ.

Ad Widget

Ad Widget

Ad Widget

Ad Widget

ದೂರು :

Ad Widget

Ad Widget

Ad Widget

ಘಟನೆಯ ಬಗ್ಗೆ ಶಶಿಕಿರಣ್ ಪೊಲೀಸರಿಗೆ ದೂರು ನೀಡಿರುವುದಾಗಿ ಹೇಳಿದರೇ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಯಾವುದೇ ದೂರು ಬಂದಿಲ್ಲ ಎಂದು ಡಿ 1 ರಂದು ಸಂಜೆ 7 ಗಂಟೆ ಸುಮಾರಿಗೆ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆದರೇ ಶಶಿಕಿರಣ್ ಪೊಲೀಸರಿಗೆ ದೂರಿನ ಪ್ರತಿಯನ್ನು ಡಿ ೧ ರಂದು ಬೆಳಿಗ್ಗೆ 8.30 ರ ಸುಮಾರಿಗೆ ಮೇಯ್ಲ್ ಮಾಡಿದ್ದಾರೆಂದು ತೋರಿಸುವ ಸ್ಕ್ರೀನ್ ಶಾಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅಲ್ಲದೆ, ದೂರಿನ ಪ್ರತಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೂ ಡಿ 1 ರಂದು ಸಂಜೆ 6.45 ರ ಸುಮಾರಿಗೆ ಫಾರ್ವಾರ್ಡ್ ಮಾಡಿದ್ದಾರೆಂದು ತೋರಿಸುವ ಸ್ಕ್ರೀನ್ ಶಾಟ್ ಗಳು ಲಭಿಸಿವೆ. ಈ ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆ ಇನ್ನೂ FIR ದಾಖಲಿಸಿಲ್ಲ ಹಾಗೂ ಸಿಬಂದಿಯ ವಿರುದ್ದ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಹೇಳಲಾಗುತ್ತಿದೆ.

Ad Widget

ಇಂದು ತನ್ನ ಕಾರ್ಯಕರ್ತ ಶಶಿಕಿರಣ್ ಅವರ ಆರೋಗ್ಯ ವಿಚಾರಿಸಲು ಹಿಂದೂ ಜಾಗರಣ ವೇದಿಕೆಯ ಪುತ್ತೂರು ಪ್ರಾಂತ ಸಮಿತಿಯ ಮುಖಂಡರುಗಳು ಕಡಬಕ್ಕೆ ಆಗಮಿಸಿದ್ದರು . ಈ ವೇಳೆ ಅವರು “ ಯುವಕ ಆಸ್ಪತ್ರೆಗೆ ದಾಖಲಾಗಿ ದಿನ ಕಳೆದರೂ ಯಾವುದೇ ಪ್ರಕರಣ ದಾಖಲಾಗಿಲ್ಲ.ಯಾವುದೇ ಕ್ರಮ ಜರುಗಿಸದೆ ಇದ್ದಲ್ಲಿ ಸುಳ್ಯ,ಪುತ್ತೂರು,ಕಡಬ ಭಾಗದ ಹಿಂದೂ ಕಾರ್ಯಕರ್ತರನ್ನು ಸೇರಿಸಿ ಸುಬ್ರಹ್ಮಣ್ಯ ಠಾಣೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

Ad Widget

Ad Widget

ಯುವಕನನ್ನು ಪೋಲಿಸ್ ವಸತಿ ಗೃಹಕ್ಕೆ ಕರೆದೊಯ್ದು ಹಲ್ಲೆ ಮಾಡಿರುವ ಘಟನೆ ಬಗ್ಗೆ ಇದುವರೆಗೆ ಯಾವುದೇ ಕ್ರಮ ಜರುಗಿಸಿಲ್ಲ, ಪೊಲೀಸ್ ಇಲಾಖೆಯ ಬಗ್ಗೆ ನಂಬಿಕೆ ಇದ್ದು ದೌರ್ಜನ್ಯವೆಸಗಿದ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಬೇಕು ಎಂದು ಹಿಂದೂ ಜಾಗರಣ ವೇದಿಕೆಯ ಪ್ರಾಂತ ಸಮಿತಿ ಸದಸ್ಯ ಚಿನ್ಮಯ್ ಈಶ್ವರಮಂಗಲ ಆಗ್ರಹಿಸಿದರು.

ನಿಯೋಗದಲ್ಲಿ ಜಿಲ್ಲಾ ಸಂಚಾಲಕ ನರಸಿಂಹ ಶೆಟ್ಟಿ ಮಾಣಿ, ಜಿಲ್ಲಾ ಸಮಿತಿ ಸದಸ್ಯರಾದ ಅವಿನಾಶ್ ಪುರುಷರಕಟ್ಟೆ, ಸುಳ್ಯ ತಾಲೂಕು ಸಂಚಾಲಕ ಮಹೇಶ್ ಉಗ್ರಾಣಿಮನೆ,ಸಹ ಸಂಚಾಲಕ ನಿಕೇಶ್ ಉಬರಡ್ಕ, ಜೀವನ್ ಸುಳ್ಯ,ಕಡಬ ತಾಲೂಕು ಸಮಿತಿಯ ಮಲ್ಲೇಶ್ ಆಲಂಕಾರು,ಜಿನಿತ್ ಮರ್ದಾಳ ಮುಂತಾದವರು ಉಪಸ್ಥಿತರಿದ್ದರು.

ಶಶಿಕಿರಣ್ ನೀಡಿದ ದೂರಿನಲ್ಲಿ ಏನಿದೆ ?

ಚಂಪಾಷಷ್ಠಿಯಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜ್ಯೂಸ್ ಐಸ್ ಕ್ರೀಂ ವ್ಯಾಪಾರ ಮಾಡುತ್ತಿದೆ. ಪಂಚಮಿಯಂದು ರಾತ್ರಿ 12 ಗಂಟೆ ಸುಮಾರಿಗೆ ಸ್ಟಾಲಿಗೆ ಬಂದ ಪೋಲಿಸ್ ಸಿಬ್ಬಂದಿ ಬೀಮಣ್ಣ ಗೌಡ ಎಂಬವರು ಹಣ ನೀಡುವಂತೆ ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಪೋಲಿಸ್ ಸಿಬ್ಬಂದಿಗೆ ಹೆದರಿ 1000 ನೀಡಿದ್ದೇನೆ. ಈ ಹಣ ಸಾಕಾಗುವುದಿಲ್ಲ. 5000 ನೀಡುವಂತೆ ಪೋಲಿಸ್ ಸಿಬ್ಬಂದಿ ಬೆದರಿಸಿದ್ದಾರೆ. ಕೊಡಲು ನಿರಾಕರಿಸಿದಾಗ , ಅಂಗಡಿಯಲ್ಲಿರುವ ಸಾಮಾಗ್ರಿಗಳನ್ನು ಹಾಗೂ ನನ್ನನ್ನೂ ಪೊಲೀಸ್ ಸಿಬಂದಿಯ ಕ್ವಾಟರ್ಸ್ ಗೆ ತೆಗೆದುಕೊಂಡು ಹೋಗಿದ್ದಾರೆ. ಅಲ್ಲಿ 35 ಕೆಜಿಯ ಸಾಮಾಗ್ರಿಯನ್ನು ಸುಮಾರು ಮುಕ್ಕಾಲು ಗಂಟೆ ತಲೆಯಲ್ಲಿ ಹೊತ್ತುಕೊಳ್ಳುವಂತೆ ಮಾಡಿ ಚಿತ್ರ ಹಿಂಸೆ ನೀಡಿದ್ದಾರೆ. ಅಲ್ಲದೇ ಮೊಬೈಲ್ ಹಾಗೂ ಹಣವನ್ನು ಕಿತ್ತುಕೊಂಡು ಕ್ರಿಮಿನಲ್ ಕೇಸ್ ಹಾಕುವ ಬೆದರಿಕೆಯೊಡ್ಡಿದ್ದಾರೆಂದು ದೂರಿನಲ್ಲಿ ವಿವರಿಸಲಾಗಿದೆ.

ಸ್ಥಳ ಬಾಡಿಗೆ ನೀಡದೆ ವಂಚಿಸಲು ಯತ್ನಿಸಿದ್ದು, ಕೇಳಲು ಹೋದಾಗ ಹತ್ತಿರದಲ್ಲೇ ಇದ್ದರೂ ನಾನು ಸುಳ್ಯದಲ್ಲಿ ಇದ್ದೇನೆ ಎಂದು ಸುಳ್ಳು ಹೇಳುತ್ತಿದ್ದ. ಜ್ಯೂಸ್ ಅಂಗಡಿ ಹೆಸರಿನಲ್ಲಿ ಕಲರ್ ಚಾಯಿಸ್ ಎಂಬ ಗ್ಯಾಂಬ್ಲಿಂಗ್ ಮಾದರಿ ವ್ಯಾಪಾರ ಮಾಡುತಿದ್ದರು. ಇದಕ್ಕೆ ಬುದ್ಧಿವಾದ ಹೇಳಿದ್ದೆ ಅಷ್ಟೆ. ಅಂಗಡಿಯ ಕೆಲಸದ ಹುಡುಗರ ಕೈಗೆ ನಾನೇ 200 ರೂ ಕೊಟ್ಟಿದ್ದೆ. ಅವರ ಆರೋಪ ಸುಳ್ಳು ಎಂದು ಪೊಲೀಸ್ ಸಿಬಂದಿ ಭೀಮನ ಗೌಡ ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.

Click to comment

Leave a Reply

ಸುಳ್ಯ

Kukke Shri Subrahmanya Temple ದಕ್ಷಿಣ  ಭಾರತದ ಪ್ರಸಿದ್ದ ನಾಗಕ್ಷೇತ್ರದಲ್ಲಿ ನಾಳೆ (ಡಿ 9) ಮೂಲ ಮೃತಿಕಾ  ಪ್ರಸಾದ ವಿತರಣೆ – ಇಲ್ಲಿದೆ  ವರ್ಷಕ್ಕೊಮ್ಮೆ ಮಾತ್ರ ಹುತ್ತದಿಂದ ತೆಗೆಯುವ ಈ  ಪ್ರಸಾದದ ಮಹತ್ವ  

Ad Widget

Ad Widget

Kukke Shri Subrahmanya Temple ಡಿಸೆಂಬರ್ 06;  ದಕ್ಷಿಣ ಭಾರತದ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ   ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ವಾರಾಂತ್ಯದಲ್ಲಿ  ದರ್ಶನ ಮತ್ತು ವಿವಿಧ ಸೇವೆಗಳು ಅರ್ಧ ದಿನದ ಕಾಲ ಲಭ್ಯವಿರುವುದಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಹೇಳಿದೆ.  

Ad Widget

Ad Widget

Ad Widget

Ad Widget

ದೇವಳದಲ್ಲಿ 2023-24ನೇ ಸಾಲಿನ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಪೂರಕವಾಗಿ ಡಿ.9ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಪವಿತ್ರ ಕಾರ್ಯ ಇರಲಿದೆ. ಈ ಹಿನ್ನಲೆಯಲ್ಲಿ ಆ ದಿನ ಭಕ್ತಾದಿಗಳಿಗೆ ಬೆಳಗ್ಗಿನಿಂದ ಮಧ್ಯಾಹ್ನ 2 ಗಂಟೆಯ ತನಕ ದೇವರ ದರುಶನ ಹಾಗೂ ಸೇವಾದಿಗಳನ್ನು ನೆರವೇರಿಸಲು ಅವಕಾಶ ಇರುವುದಿಲ್ಲ. 2 ಗಂಟೆಯ ನಂತರ ದೇವರ ದರ್ಶನಕ್ಕೆ ಹಾಗೂ ಆಯ್ದ ಸೇವೆಗಳನ್ನು ನೆರವೇರಿಸಲು ಅವಕಾಶವಿದೆ

Ad Widget

Ad Widget

Ad Widget

ಕುಕ್ಕೆ ಸುಬ್ರಮಣ್ಯದಲ್ಲಿ “ಮೂಲಮೃತಿಕಾ” ಪ್ರಸಾದಕ್ಕೆ ಹೆಚ್ಚಿನ ಮಹತ್ವವಿದೆ. ಮೂಲಸ್ಥಾನವಾದ ಕುಕ್ಕೆ ಸುಬ್ರಮಣ್ಯ ದೇವಳದ ಗರ್ಭಗುಡಿಯಿಂದ ತೆಗೆಯುವ ಕ್ಷೇತ್ರದ ಅತ್ಯಂತ ಪವಿತ್ರ ಪ್ರಸಾದ. ಯಾವುದೇ ದೇವಾಲಯದಲ್ಲಿ ಸಹ ಈ ಮಾದರಿ ಪ್ರಸಾದ ಸಿಗುವುದಿಲ್ಲ. ವರ್ಷಕ್ಕೆ ಒಂದು ಬಾರಿ ಮಾತ್ರ ಈ ಪ್ರಸಾದ ತೆಗೆಯಲಾಗುತ್ತದೆ.

Ad Widget

ಕ್ಷೇತ್ರದ ಮೂಲಸ್ಥಾನವಾದ ಗರ್ಭಗುಡಿಯಿಂದ ಈ ಮೂಲಮೃತಿಕಾ ಪ್ರಸಾದವನ್ನು ತೆಗೆದು ಭಕ್ತರಿಗೆ ನೀಡಲಾಗುತ್ತದೆ. ಈ ಪ್ರಸಾದವು ರೋಗ ನಿರೋಧಕ ಶಕ್ತಿ ಹೊಂದಿದೆ ಎಂಬುದು ಭಕ್ತರ ನಂಬಿಕೆಯಾಗಿದೆ.  ಈ ಮೃತ್ತಿಕೆ ಪ್ರಸಾದ ಸಂತಾನಕಾರಕ, ಚರ್ಮ ರೋಗಗಳ ಪರಿಹಾರಕ್ಕೆ ದಿವ್ಯ ಔಷಧ ಎಂಬುದು ಭಕ್ತರ ನಂಬಿಕೆ. ಮೃತ್ತಿಕಾ ಪ್ರಸಾದವನ್ನು ಶುಭ ಕಾರ್ಯಗಳ ಒಳಿತಿಗೂ, ವ್ಯಾಧಿಗಳ ನಿವಾರಣೆಗೂ ಭಕ್ತರು ಬಳಸುತ್ತಾರೆ.

Ad Widget

Ad Widget

ಸಾವಿರಾರು ಭಕ್ತರು ಮೂಲಮೃತಿಕಾ ಪ್ರಸಾದವನ್ನು ತೆಗೆದುಕೊಂಡು ಹೋಗಲು ಕುಕ್ಕೆ ಸುಬ್ರಮಣ್ಯ ಕ್ಷೇತ್ರಕ್ಕೆ ಆಗಮಿಸುತ್ತಾರೆ. ಶುಭ ಕಾರ್ಯಗಳ ಸಂದರ್ಭದಲ್ಲಿ, ರೋಗಗಳ ನಿವಾರಣೆಗೆ ಸಹ ಈ ಪ್ರಸಾದವನ್ನು ಬಳಕೆ ಮಾಡುತ್ತಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಕ್ಷೇತ್ರ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಕರ್ನಾಟಕ ರಾಜ್ಯದ ಸುಬ್ರಹ್ಮಣ್ಯಂ ಗ್ರಾಮದಲ್ಲಿ ಬರುತ್ತದೆ. ಪ್ರಕೃತಿಯ ಸೌಂದರ್ಯದಲ್ಲಿ ನೆಲೆಸಿರುವ ಈ ಭವ್ಯವಾದ  ದೇವಾಲಯವು ಗ್ರಾಮದ ಹೃದಯಭಾಗದಲ್ಲಿದೆ. ಪ್ರಕೃತಿ ನದಿಗಳು, ಕಾಡುಗಳು ಮತ್ತು ಪರ್ವತಗಳಿಂದ ಸುತ್ತುವರೆದಿರುವ ಈ ದೇವಾಲಯವು ತನ್ನ ಅನನ್ಯ ಸೌಂದರ್ಯವನ್ನು ಬಹಿರಂಗಪಡಿಸುತ್ತದೆ .ಪ್ರತಿನಿತ್ಯ ನೂರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ವಾರಾಂತ್ಯ, ಸರ್ಕಾರಿ ರಜೆ ದಿನಗಳಲ್ಲಿ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಾರೆ.

Continue Reading

ಮಂಗಳೂರು

Interfaith Marriage ಮಂಗಳೂರು :  ಭಿನ್ನಕೋಮಿನ ಜೋಡಿ ವಿವಾಹ?

Ad Widget

Ad Widget

ಸುರತ್ಕಲ್, ಡಿ. 7: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಭಿನ್ನ ಕೋಮಿನ ಜೋಡಿಯೊಂದು ನಾಪತ್ತೆಯಾಗಿದ್ದು, ಅವರಿಬ್ಬರು ವಿವಾಹವಾಗಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಈ ಎರಡು ಕುಟುಮಬದ ಮೂಲಗಳಿಂದ ಈ ಬಗ್ಗೆ ಯಾವುದೇ ಖಚಿತತೆ ದೊರಕಿಲ್ಲ

Ad Widget

Ad Widget

Ad Widget

Ad Widget

ಸುರತ್ಕಲ್‌   7ನೇ ಬ್ಲಾಕ್ ಕಾಟಿಪಳ್ಳದ ಯುವಕ ಪ್ರಶಾಂತ್ ಭಂಡಾರಿ (31) ಹಾಗೂ 3ನೇ ಬ್ಲಾಕ್ ಆಶ್ರಯ ಕಾಲನಿಯನಿವಾಸಿ ಆಯೇಷಾ (19) ಡಿ. 1ರಂದು ನಾಪತ್ತೆಯಾಗಿದ್ದರು ಎನ್ನಲಾಗಿದೆ. , ಇದೀಗ ಅವರು ವಿವಾಹವಾಗಿದ್ದಾರೆ ಎನ್ನುವ ಫೋಟೋವನ್ನು  ಅವರಿಬ್ಬರ ಆಪ್ತರು  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ.

Ad Widget

Ad Widget

Ad Widget

 ಆಯೇಷಾ ತನ್ನ ಹೆಸರನ್ನು ಅಕ್ಷತಾ ಎಂದು ಬದಲಾಯಿಸಿಕೊಂಡಿದ್ದಾರೆ ಎಂದು ಕೂಡ ವೈರಲ್‌ ಮೆಸೇಜ್‌ ನಲ್ಲಿ ಹೇಳಲಾಗಿದೆ. ಯುವತಿ ನಾಪತ್ತೆಯಾದ ಬಗ್ಗೆ   ಆಯೇಷಾ ತಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Ad Widget

ಯುವತಿ ಕುಟುಂಬ ಮೂಲತಃ ಕಾರವಾರದ ಮುಂಡಗೋಡದವರಾಗಿದ್ದು, ಈಕೆಯ ತಂದೆ ಸ್ಥಳೀಯವಾಗಿ ಉದ್ಯೋಗದಲ್ಲಿದ್ದಾರೆ. ಅವರ ಪತ್ತೆಗಾಗಿ ಪೊಲೀಸರು ಕಾರ್ಯೋನ್ಮುಖರಾಗಿದ್ದಾರೆ.

Ad Widget

Ad Widget

Continue Reading

ದಕ್ಷಿಣ ಕನ್ನಡ

ಧರ್ಮಸ್ಥಳದಲ್ಲಿ ಜನಜಾಗೃತಿವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ.

Ad Widget

Ad Widget

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ರಾಷ್ಟçಪಿತ ಮಹಾತ್ಮಾ ಗಾಂಧೀಜಿಯವರು ಕನಸು ಕಂಡ ಗ್ರಾಮರಾಜ್ಯದ ಮೂಲಕ ರಾಮರಾಜ್ಯ ಸ್ಥಾಪನೆಯ ಕಲ್ಪನೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಾಕಾರಗೊಳಿಸಿದ್ದಾರೆ ಎಂದು ಕಲ್ಬುರ್ಗಿ ಜಿಲ್ಲೆಯ ಮಳೇಂದ್ರ ಸಂಸ್ಥಾನ ಹಿರೇಮಠದ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

Ad Widget

Ad Widget

Ad Widget

Ad Widget

ಅವರು ಗುರುವಾರ ಧರ್ಮಸ್ಥಳದಲ್ಲಿ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವದಲ್ಲಿ ಆಶೀರ್ವಚನ ನೀಡಿದರು.

Ad Widget

Ad Widget

Ad Widget

ತಮ್ಮ ಆಚಾರ-ವಿಚಾರದಲ್ಲಿ ಹಾಗೂ ಬಹುಮುಖಿ ಸಮಾಜಸೇವಾ ಕಾರ್ಯಗಳಲ್ಲಿ ಅವರು ಗಾಂಧೀಜಿಯವರ ತತ್ವ, ಸಿದ್ಧಾಂತಗಳನ್ನು ಅನುಷ್ಠಾನಗೊಳಿಸಿದ್ದಾರೆ. ಅವರ ಹಿತ-ಮಿತ ಮಾತು ಮತ್ತು  ಕೃತಿಯಲ್ಲಿ ಸರ್ವರ ಸೇವಾ ಕಾಳಜಿ ಇದೆ. ಪ್ರಾಚೀನ ದೇಗುಲಗಳ ಜೀರ್ಣೋದ್ಧಾರ, ಕೆರೆಗಳಿಗೆ ಕಾಯಕಲ್ಪ, ಪ್ರಕೃತಿ-ಪರಿಸರ ಸಂರಕ್ಷಣೆ, ಮದ್ಯವರ್ಜನ ಶಿಬಿರಗಳ ಮೂಲಕ ವ್ಯಸನಮುಕ್ತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಮೊದಲಾದ ಜನಸೇವಾಕಾರ್ಯಗಳಿಂದ ಅವರು ನಡೆದಾಡುವ ದೇವರೆಂದೇ ಗೌರವಿಸಲ್ಪಡುತ್ತಾರೆ.

Ad Widget

ಧರ್ಮಸ್ಥಳದ ಇತಿಹಾಸದಲ್ಲಿ ಅವರ ಸೇವಾವಧಿ ಸುವರ್ಣಯುಗವಾಗಿದೆ. ಅವರ ಸರಳ ವ್ಯಕ್ತಿತ್ವ, ನಡೆ-ನುಡಿ, ಆದರ್ಶ ಹಾಗೂ ಅನುಕರಣೀಯವಾಗಿದ್ದು, ಪೂಜ್ಯರಿಗೆ ಎಲ್ಲಾ ವೀರಶೈವ ಮಠಗಳ ಪೂರ್ಣ ಬೆಂಬಲ, ಸಹಕಾರವಿದೆ ಎಂದು ಸ್ವಾಮೀಜಿ ಹೇಳಿದರು.

Ad Widget

Ad Widget

ಗುಳೇದಗುಡ್ಡದಮಠದ ಒಪ್ಪಂತೇಶ್ವರ ಸ್ವಾಮೀಜಿ ಶುಭ ಹಾರೈಸಿದರು.

ಸಮಾರಂಭವನ್ನು ಉದ್ಘಾಟಿಸಿದ ಹೇಮಾವತಿ ಹೆಗ್ಗಡೆಯವರು, ಲಕ್ಷದೀಪೋತ್ಸವದ ಶುಭಾವಸರದಲ್ಲಿ ಸಾವಿರಾರು ಮಂದಿ ವ್ಯಸನಮುಕ್ತರಾಗಿ ಸಾರ್ಥಕ ಜೀವನ ನಡೆಸಲು ದೃಢಸಂಕಲ್ಪ ಮಾಡಿರುವುದು ಶ್ರೀ ಸ್ವಾಮಿಗೆ ಅರ್ಪಿಸುವ ದೊಡ್ಡ ಸೇವೆ ಆಗಿದೆ. ದುಶ್ಚಟಗಳಿಗೆ ಬಲಿಯಾದರೆ ಮಾನಹಾನಿ, ಧನಹಾನಿ ಹಾಗೂ ಪ್ರಾಣಹಾನಿಯೊಂದಿಗೆ ಸರ್ವಸ್ವವೂ ನಾಶವಾಗುತ್ತದೆ.. ವ್ಯಸನಮುಕ್ತರು ಇನ್ನಾದರೂ ಉತ್ತಮ ಜೀವನ ನಡೆಸಬೇಕು ಎಂದು ಅವರು ಶುಭ ಹಾರೈಸಿದರು.

ವ್ಯಸನಮುಕ್ತರ ಪರವಾಗಿ, ಮೈಸೂರು ಜಿಲ್ಲೆಯ ಬನ್ನೂರು ಚಂದನ್ ಮತ್ತು ಬೆಳಗಾವಿಯ ಶೈಲಾ ಜಗದೀಶ್ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಶ್ರದ್ಧಾಅಮಿತ್ ಸಾಧಕರನ್ನು ಗೌರವಿಸಿದರು.

ವ್ಯಸನಮುಕ್ತರಾಗಿ ಸಾರ್ಥಕ ಜೀವನ  ನಡೆಸಲು ಸಹಕರಿಸಿದವರಿಗೆ ಜಾಗೃತಿಅಣ್ಣ ಮತ್ತು ಜಾಗೃತಿಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಮನೆ ಮತ್ತು ಮನಸ್ಸು ಪರಿಶುದ್ಧವಾಗಿದ್ದರೆ ಸುಖ-ಶಾಂತಿ, ನೆಮ್ಮದಿಯ ಜೀವನ ಸಾಧ್ಯವಾಗುತ್ತದೆ.
ಮದ್ಯವ್ಯಸನಿಗಳನ್ನು ವ್ಯಸನಮುಕ್ತರಾಗಿ ಸಾರ್ಥಕ ಜೀವನ ನಡೆಸಲು ಪ್ರೇರೇಪಿಸುವುದು ಅತ್ಯಂತ ಪವಿತ್ರ ಹಾಗೂ ಪುಣ್ಯದ ಕಾರ್ಯವಾಗಿದೆ. ಮಾನಸಿಕ ಪರಿವರ್ತನೆ ಮತ್ತು ದೃಢಸಂಕಲ್ಪದಿAದ ಮಾತ್ರ ಇಂತಹ ಕಾರ್ಯಸಾಧ್ಯವಾಗುತ್ತದೆ. ಈ ದಿಸೆಯಲ್ಲಿ ಜನಜಾಗೃತಿವೇದಿಕೆ ಮತ್ತು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ ಸೇವೆ ಶ್ಲಾಘನೀಯವಾಗಿದೆ ಎಂದು ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಎಚ್. ಮಂಜುನಾಥ್, ಸತೀಶ್ ಹೊನ್ನವಳ್ಳಿ, ರಾಮಸ್ವಾಮಿ, ರಾಜಣ್ಣ ಕೊರವಿ ಉಪಸ್ಥಿತರಿದ್ದರು.
ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ಪಾÊಸ್ ಸ್ವಾಗತಿಸಿದರು. ಅನಿಲ್ ಕುಮಾರ್ ಧನ್ಯವಾದವಿತ್ತರು.
ಯೋಜನಾಧಿಕಾರಿಗಳಾದ ಮೋಹನ್ ಕೆ., ಮತ್ತು ಗಣೇಶ್ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

Continue Reading

Trending

error: Content is protected !!